ಬೆಳಗಾವಿ-ಕೊರೊನಾ ಸೊಂಕಿನಿಂದ ಮೃತಪಟ್ಟ ವ್ಯಕ್ತಿ ಶವ ಪಡೆಯುವ ವಿಚಾರಕ್ಕೆ ಸಮಂಧಿಸಿದಂತೆ ಬೆಳಗಾವಿ ಜಿಲ್ಲಾ ಆಸ್ಪತ್ರೆ ಎದುರು ಮೃತ ವ್ಯೆಕ್ತಿಯ ಸಮಂಧಿಕರು ಹಾಗು ವೈದ್ಯಕೀಯ ಸಿಬ್ಬಂಧಿ ನಡುವೆ ಗಲಾಟೆ ನಡೆದಿದೆ. ಬೆಳಗಾವಿ ಬಿಮ್ಸ್ ಆಸ್ಪತ್ರೆ ಮುಂಭಾಗ ಬಿಮ್ಸ್ ಸಿಬ್ಬಂದ್ಧಿ- ಸಂಬಂಧಿಗಳ ನಡುವೆ ಒಂದು ಘಂಟೆಗೂ ಹೆಚ್ವು ಕಾಲ ಗಲಾಟೆ,ಗದ್ದಲ,ಮುಂದುವರೆದಿತ್ತು.ಕೊರೊನಾದಿಂದ ಸುರೇಶ ಮೇತ್ರಿ(51) ಕೊರೊನಾದಿಂದ ಸಾವನೊಪ್ಪದ್ದು ಮೃತದೇಹ ಹಸ್ತಾಂತರ ಮಾಡುವ ವಿಚಾರದಲ್ಲಿ ಈ ಗಲಾಟೆ ನಡೆದಿದೆ. ಕಾಕತಿ ಗ್ರಾಮದ ಅಂಬೇಡ್ಕರ್ ಗಲ್ಲಿ ನಿವಾಸಿ …
Read More »2 ರಾಜ್ಯಗಳು 12 ನೇ ತರಗತಿ ಪರೀಕ್ಷೆಗಳನ್ನು ರದ್ದು!!!
ನವದೆಹಲಿ: ದೇಶದಲ್ಲಿ ಕೋವಿಡ್ -19 ಬಿಕ್ಕಟ್ಟಿನ ಮಧ್ಯೆ ಈವರೆಗೆ 12 ರಾಜ್ಯಗಳು ತಮ್ಮ 12 ನೇ ತರಗತಿ ಪರೀಕ್ಷೆಗಳನ್ನು ರದ್ದುಗೊಳಿಸಿವೆ. ಅದರಲ್ಲಿ ಉತ್ತರ ಪ್ರದೇಶ, ಮಧ್ಯಪ್ರದೇಶ, ಹರಿಯಾಣ, ಉತ್ತರಾಖಂಡ, ಮಹಾರಾಷ್ಟ್ರ, ರಾಜಸ್ಥಾನ, ಗುಜರಾತ್, ಒಡಿಶಾ, ತಮಿಳುನಾಡು, ಹಿಮಾಚಲ ಪ್ರದೇಶ, ಗೋವಾ ಮತ್ತು ಕರ್ನಾಟಕ ಸೇರಿವೆ. ಇನ್ನು, ಕೇರಳ ಮತ್ತು ಬಿಹಾರದಲ್ಲಿ ಈಗಾಗಲೇ 12 ನೇ ತರಗತಿ ರಾಜ್ಯ ಮಂಡಳಿ ಪರೀಕ್ಷೆಗಳನ್ನು ನಡೆಸಲಾಗಿದೆ. 12 ನೇ ತರಗತಿ ರಾಜ್ಯ ಮಂಡಳಿ ಪರೀಕ್ಷೆಗಳನ್ನು …
Read More »ರೈತರ ಬಿಡುಗಡೆಗೆ ಆಗ್ರಹಿಸಿ ಪೊಲೀಸ್ ಠಾಣೆ ಮುಂದೆ ಟಿಕಾಯತ್, ಯಾದವ್ ಧರಣಿ
ಟೊಹಾನಾ, ಹರಿಯಾಣ: ಬಂಧಿತ ಇಬ್ಬರು ರೈತರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ರೈತ ಮುಖಂಡರಾದ ರಾಕೇಶ್ ಟಿಕಾಯತ್, ಗುರ್ನಾಮ್ ಸಿಂಗ್ ಚದೂನಿ ಹಾಗೂ ಸಂಯುಕ್ತ ಕಿಸಾನ್ ಮೋರ್ಚಾ ಮುಖಂಡ ಯೋಗೇಂದ್ರ ಯಾದವ್ ಅವರು ಫತೇಹಾಬಾದ್ನ ಸದರ್ ಪೊಲೀಸ್ ಠಾಣೆ ಮುಂದೆ ಶನಿವಾರ ರಾತ್ರಿ ಧರಣಿ ನಡೆಸಿದರು. ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತ ಸಂಘಟನೆಗಳು ಪಂಜಾಬ್ ಹಾಗೂ ಹರಿಯಾಣದ ವಿವಿಧೆಡೆ ಶನಿವಾರ ಪ್ರತಿಭಟನೆ ಹಮ್ಮಿಕೊಂಡಿದ್ದವು. ಈ ವೇಳೆ ಫತೇಹಾಬಾದ್ನಲ್ಲಿರುವ ಜೆಜೆಪಿ ಶಾಸಕ …
Read More »ಗೋವಾದಲ್ಲಿ ಜೂನ್ 14 ರವರೆಗೆ ವಿ ಲಾಕ್ ಡೌನ್ ವಿಸ್ತರಿಸಲಾಗಿದೆ
ಗೋವಾ : ಕೊರೋನಾ ಹರಡುವಿಕೆಯನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ಗೋವಾದಲ್ಲಿ ವಿಧಿಸಿದ್ದ ಕರ್ಥ್ಯವನ್ನು ಜೂನ್ 14 ರವರೆಗೆ ವಿಸ್ತರಿಸಲಾಗಿದೆ. ಈ ಮೊದಲಿನ ನಿರ್ಧಾರದಂತೆ ಜೂ .7 ಕ್ಕೆ ಕರ್ಪ್ಯೂ ಕೊನೆಗೊಳ್ಳಬೇಕಿತ್ತು . ಗೋವಾ ಮುಖ್ಯಮಂತ್ರಿ ಡಾ . ಪ್ರಮೋದ್ ಸಾವಂತ್ ಈ ಮಾಹಿತಿ ನೀಡಿದ್ದಾರೆ . ಜೂನ್ 14 ರ ಬೆಳಗ್ಗೆ 7 ಗಂಟೆಯವರೆಗೆ ಕರ್ಪ್ಯೂ ಮುಂದುವರಿಸಲಾಗುವುದು ಎಂದು ತಿಳಿಸಿದ್ದಾರೆ . ಇನ್ನು ಅಗತ್ಯವಸ್ತುಗಳ ಖರೀದಿಗೆ ಪ್ರತಿದಿನ ಬೆಳಗ್ಗೆ 7 ರಿಂದ …
Read More »ಹೈಕಮಾಂಡ್ ಸೂಚಿಸಿದ ತಕ್ಷಣ ರಾಜೀನಾಮೆ ನೀಡುತ್ತೇನೆ ಎಂಬ ಸಿಎಂ ಹೇಳಿಕೆ ಅಚ್ಚರಿ ಮೂಡಿಸಿದೆ.
ಬೆಂಗಳೂರು: ನಾಯಕತ್ವ ಬದಲಾವಣೆ ಚರ್ಚೆ ಬೆನ್ನಲ್ಲೇ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಸಂಚಲನಕ್ಕೆ ಕಾರಣವಾಗಿದೆ. ಹೈಕಮಾಂಡ್ ಸೂಚಿಸಿದ ತಕ್ಷಣ ರಾಜೀನಾಮೆ ನೀಡುತ್ತೇನೆ ಎಂಬ ಸಿಎಂ ಹೇಳಿಕೆ ಅಚ್ಚರಿ ಮೂಡಿಸಿದೆ. ವಿಧಾನಸೌಧದಲ್ಲಿ ಮಾತನಾಡಿದ ಸಿಎಂ, ಬಿಜೆಪಿ ಹೈಕಮಾಂಡ್ ನನ್ನ ಮೇಲೆ ವಿಶ್ವಾಸವಿಟ್ಟಿದೆ. ಎಲ್ಲಿಯವರೆಗೆ ಅಧಿಕಾರದಲ್ಲಿರಲು ಹೇಳುತ್ತಾರೋ ಅಲ್ಲಿಯವರೆಗೂ ನಾನು ಅಧಿಕಾರದಲ್ಲಿ ಮುಂದುವರೆಯುತ್ತೇನೆ. ಹೈಕಮಾಂಡ್ ರಾಜೀನಾಮೆ ನೀಡುವಂತೆ ನನಗೆ ಸೂಚಿಸಿದರೆ ತಕ್ಷಣ ರಾಜೀನಾಮೆ ನೀಡುತ್ತೇನೆ ಎಂದು ಹೇಳಿದ್ದಾರೆ. ನಾನು ಯಾವುದೇ ಗೊಂದಲದಲ್ಲಿ …
Read More »ದೆಹಲಿ ಮೂರು ತಿಂಗಳಲ್ಲಿ ಅತ್ಯಂತ ಕಡಿಮೆ 414 ಕೊರೋನಾ ಪ್ರಕರಣ ದಾಖಲು
ನವದೆಹಲಿ : ಕಳೆದ 24 ಗಂಟೆಗಳಲ್ಲಿ ದೆಹಲಿಯಲ್ಲಿ 414 ಹೊಸ ಸೋಂಕುಗಳು ವರದಿಯಾದ ಕಾರಣ ದೆಹಲಿಯಲ್ಲಿ ದೈನಂದಿನ ಕೋವಿಡ್-19 ಪ್ರಕರಣಗಳು ಶನಿವಾರ 500 ರ ಗಡಿಗಿಂತ ಕಡಿಮೆಯಾಗಿದೆ. ಇದು ದೆಹಲಿಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆಯನ್ನು 6731ಕ್ಕೆ ಇಳಿಸಿತು. ಧನಾತ್ಮಕತೆಯ ಪ್ರಮಾಣವು ಶೇಕಡಾ 0.53ಕ್ಕೆ ಇಳಿದರೆ, 368ಪ್ರಕರಣಗಳು ವರದಿಯಾದ ಮಾರ್ಚ್ 15ರ ನಂತರ ಶನಿವಾರ ಸೋಂಕಿನ ಸಂಖ್ಯೆ ಅತ್ಯಂತ ಕಡಿಮೆಯಾಗಿದೆ. ಮಾರ್ಚ್ 10ರಂದು ಕೊನೆಯದಾಗಿ ವರದಿಯಾದ ಅತ್ಯಂತ ಕಡಿಮೆ ಸೋಂಕಿನ ಪ್ರಮಾಣವು …
Read More »ಶಾಲಾ ಮಕ್ಕಳಿಗೆ ಪತ್ರ ಬರೆದು ಕುಶಲೋಪರಿ ವಿಚಾರಿಸಿದ ಶಿಕ್ಷಕಿ
ಚಿಕ್ಕಮಗಳೂರು, ; ಕೊರೊನಾ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳು ಬಾಗಿಲು ಹಾಕಿ ವರ್ಷಗಳೇ ಕಳೆಯುತ್ತಿದೆ. ಪ್ರಾಥಮಿಕ ಹಾಗೂ ಕಿರಿಯ ಪ್ರಾಥಮಿಕ ಶಾಲೆಗಳು ತೆರೆಯದೇ ಎರಡು ವರ್ಷಗಳು ತುಂಬುತ್ತಾ ಬರುತ್ತಿದೆ. ಮಕ್ಕಳು ಶಾಲೆ ಕಡೆ ಮುಖ ಮಾಡಿಲ್ಲ ಇದು ಮಕ್ಕಳ ಮತ್ತು ಶಿಕ್ಷಕರ ಬಾಂಧವ್ಯದ ಬೆಸುಗೆ ಕಳಚುವಂತೆ ಮಾಡಿದೆ. ಈ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನ ಶಿಕ್ಷಕಿಯೊಬ್ಬರು ಮಕ್ಕಳಿಗೆಲ್ಲ ಪತ್ರ ಬರೆಯುವ ಮೂಲಕ ತಮ್ಮ ಸಂಬಂಧವನ್ನು ಗಟ್ಟಿಗೊಳಿಸುವ ಕೆಲಸವನ್ನು ಮಾಡಿ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಚಿಕ್ಕಮಗಳೂರು ತಾಲೂಕಿನ …
Read More »ಸಿಎಂ ಬದಲಾವಣೆ : ದೆಹಲಿಯಲ್ಲಾದ ಚರ್ಚೆ ಬಗ್ಗೆ ಸಿ.ಟಿ.ರವಿ ಹೇಳಿದ್ದೇನು?
ನವದೆಹಲಿ : ಇಂದು ದೆಹಲಿಯಲ್ಲಿ ನಡೆದ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳ ಸಭೆಯಲ್ಲಿ ರಾಜ್ಯ ರಾಜಕೀಯದ ಬಗ್ಗೆ ಚರ್ಚೆ ನಡೆದಿಲ್ಲ, ಕರೊನಾ ಮತ್ತು ಐದು ರಾಜ್ಯಗಳ ಚುನಾವಣೆ ಬಗ್ಗೆ ಮಾತ್ರ ಚರ್ಚೆಯಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ. ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ರವಿ, ಯಡಿಯೂರಪ್ಪ ಅವರನ್ನು ಸರ್ವಾನುಮತದಿಂದ ಸಿಎಂ ಆಗಿ ಆಯ್ಕೆ ಮಾಡಿದ್ದೇವೆ. ಆದರೆ ಆಗಾಗ ಸಿಎಂ ಬದಲಾವಣೆ ರೀತಿಯ ಹೇಳಿಕೆಗಳು ಬರುತ್ತಿವೆ. ಹೇಳಿಕೆ ನೀಡಿದವರ …
Read More »ಕಡಹೆಮ್ಮಿಗೆ: ಶಿಥಿಲಗೊಂಡ ನೀರಿನ ಟ್ಯಾಂಕ್; ಆತಂಕದಲ್ಲಿ ಜನರು
ಕಿಕ್ಕೇರಿ: ಹೋಬಳಿಯ ಕಡಹೆಮ್ಮಿಗೆ ಗ್ರಾಮದಲ್ಲಿನ ಕುಡಿಯುವ ನೀರಿನ ಟ್ಯಾಂಕ್ ಶಿಥಿಲಗೊಂಡಿದ್ದು, ಕುಸಿಯುವ ಹಂತ ತಲುಪಿದೆ. ಹೋಬಳಿಯ ಗಡಿಯಂಚಿನ ಗ್ರಾಮವಾದ ಆನೆಗೊಳ ಗ್ರಾ.ಪಂ ವ್ಯಾಪ್ತಿಗೆ ಈ ಗ್ರಾಮ ಸೇರಿದೆ. ಗ್ರಾಮದ ಜೊತೆಗೆ ಕಡಹೆಮ್ಮಿಗೆ ಕೊಪ್ಪಲು ಗ್ರಾಮ ಹೊಂದಿಕೊಂಡಿದೆ. ಸುಮಾರು 1,480 ಜನಸಂಖ್ಯೆ ಇದೆ. ಎರಡು ಗ್ರಾಮಗಳಿಗೆ ಈ ಟ್ಯಾಂಕಿನಿಂದ ನೀರು ಸರಬರಾಜು ಆಗುತ್ತಿದೆ. ಆದರೆ, ಶುಚಿತ್ವವೂ ಇಲ್ಲ. ಟ್ಯಾಂಕ್ನ ಪ್ಲಾಸ್ಟರಿಂಗ್ ಕಳಚಿ ಬೀಳುತ್ತಿದೆ. ಕಬ್ಬಿಣಗಳು ಹೊರಗೆ ಕಾಣಿಸುತ್ತಿದ್ದು, ತುಕ್ಕು ಹಿಡಿಯುತ್ತಿವೆ. ಕೆಲವೆಡೆ …
Read More »ಸರ್ಕಾರದ ಹಣ ನುಂಗಬೇಡಿ ಎಂದು ಸ್ಟೇಟಸ್ ಹಾಕಿದ್ದಕ್ಕೆ ಕೊಂದೇ ಬಿಟ್ರಾ?; ಗ್ರಾಮ ಪಂಚಾಯತ್ ಅಧ್ಯಕ್ಷನ ವಿರುದ್ಧ ಕೊಲೆ ಶಂಕೆ
ಉಡುಪಿ: ಸರ್ಕಾರದ ಹಣ ನುಂಗಬೇಡಿ ಎಂದು ಗ್ರಾಮಪಂಚಾಯತ್ ಅಧ್ಯಕ್ಷರೊಬ್ಬರ ವಿರುದ್ಧ ಸ್ಟೇಟಸ್ ಹಾಕಿದ್ದಕ್ಕೆ ಗ್ರಾಮಸ್ಥನನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಗ್ರಾಮಸ್ಥರೊಬ್ಬರು ಅಪಘಾತಕ್ಕೀಡಾಗಿ ಮೃತಪಟ್ಟಿದ್ದು, ಗ್ರಾಮಪಂಚಾಯತ್ ಅಧ್ಯಕ್ಷರು ಕೊಲೆ ಮಾಡಿರಬಹುದು ಎಂಬ ಅನುಮಾನವೂ ಮೂಡಿದೆ. ಕುಂದಾಪುರ ತಾಲೂಕು ಯಡಮೊಗೆ ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರಾಣೇಶ್ ಯಡಿಯಾಳ್ ವಿರುದ್ಧ ಕೊಲೆ ಶಂಕೆ ವ್ಯಕ್ತವಾಗಿದೆ. ಇವರು ಯಡಮೊಗೆ ಗ್ರಾಮದ ಉದಯ ಗಾಣಿಗ ಅವರನ್ನು ಕೊಲೆ ಮಾಡಿರಬಹುದು ಎಂದು ಹೇಳಲಾಗುತ್ತಿದೆ. ಗ್ರಾಮ ಪಂಚಾಯತ್ ಲಾಕ್ಡೌನ್ …
Read More »
Laxmi News 24×7