Breaking News

ರಾಜ್ಯ

ಸಂಬಳ ಕೊಡದ್ದಕ್ಕೆ ಪೊಲೀಸರ ವೇಷದಲ್ಲಿ ಮಾಲೀಕನನ್ನೇ ದೋಚಿದರು!

ಸಂಬಳ ಕೊಡದೇ ಸತಾಯಿಸುತ್ತಿದ್ದ ಮಾಲೀಕನನ್ನು ಕೆಲಸಗಾರರು ಪೊಲೀಸರ ಮಾರುವೇಷದಲ್ಲಿ ದರೋಡೆ ಬೆಂಗಳೂರಿನ ಕೆಂಗೇರಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ಶರತ್ ಶೆಟ್ಟಿ, ಪೂರ್ವಿಕ್ ರಾಜ್, ಮೋಹನ್ ಕುಮಾರ್, ತಪಸ್ ರಾಯ್ ಬಂಧಿತರು. ಕೊಮ್ಮಘಟ್ಟ ಬಳಿ ಪೊಲೀಸರ ಮಾರುವೇಷದಲ್ಲಿ ಮಾಲೀಕನನ್ನು ದೋಚಲು ಸಂಚು ರೂಪಿಸಿದ ಕೆಲಸಗಾರರು, ರಸ್ತೆ ಮಧ್ಯದಲ್ಲಿ ಅಡ್ಡಗಟ್ಟಿ, ನಾವು ಪೊಲೀಸರು ಲಾಕ್ ಡೌನಲ್ಲಿ ಯಾಕೆ ಓಡಾಡ್ತಿರಿ ಎಂದು ಆವಾಜ್ ಹಾಕಿದ್ದಾರೆ. ವಾಹನ ತಪಾಸಣೆ ಮಾಡುವವರ ರೀತಿ ಬಂದು ಬೈಕ್ ಹಾಗೂ …

Read More »

ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಭೆಟಿಯಾದ ಬಿ.ವೈ. ವಿಜಯೇಂದ್ರ; ಯೋಗೇಶ್ವರ್ ಗೆ ‘ಪಂಚ್’ ನೀಡಿದ ಸಿಎಂ ಪುತ್ರ.!

ನವದೆಹಲಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಬೆನ್ನಲ್ಲೇ ದಿಢೀರ್ ದೆಹಲಿಗೆ ತೆರಳಿರುವ ರಾಜ್ಯ ಬಿಜೆಪಿ ಘಟಕದ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಇದೀಗ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರನ್ನು ಭೇಟಿಯಾಗಿ ಮಹತ್ವದ ಚರ್ಚೆ ನಡೆಸಿದ್ದಾರೆ. ದೆಹಲಿಯ ಖಾಸಗಿ ಹೋಟೆಲ್ ನಲ್ಲಿ ಬಿ.ವೈ.ವಿಜಯೇಂದ್ರ, ಅರುಣ್ ಸಿಂಗ್ ಅವರನ್ನು ಭೇಟಿಯಾಗಿದ್ದು, ರಾಜ್ಯ ರಾಜಕಾರಣದ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಅರುಣ್ ಸಿಂಗ್ ಸಂಪೂರ್ಣ ಮಾಹಿತಿ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ಅಲ್ಲದೇ ಅರುಣ್ ಸಿಂಗ್ ಭೇಟಿ ಬಳಿಕ ಬಿಜೆಪಿ …

Read More »

ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ಗ್ರಾಮೀಣ ಪೊಲೀಸ್ ಕಾರ್ಯಾಚರಣೆಯಲ್ಲಿ ಭಾರಿ ಪ್ರಮಾಣದ ಖೋಟಾ ನೋಟುಗಳ ವಶ

ದಾಂಡೇಲಿ – ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ಗ್ರಾಮೀಣ ಪೊಲೀಸ್ ಕಾರ್ಯಾಚರಣೆಯಲ್ಲಿ ಭಾರಿ ಪ್ರಮಾಣದ ಖೋಟಾ ನೋಟುಗಳನ್ನು ವಶಪಡಿಸಿಕೊಳ್ಳಲಾಗಿದೆ.  ಖೋಟಾನೋಟು ವ್ಯವಹಾರ ಮಾಡುತ್ತಿದ್ದ 6 ಜನರನ್ನು ಬಂಧಿಸಲಾಗಿದೆ. ಬಂಧಿತರಿಂದ 4.5 ಲಕ್ಷ ಅಸಲಿ ನೋಟು, 72 ಲಕ್ಷದ ಖೋಟಾ ನೋಟು ವಶಕ್ಕೆ ಪಡೆಲಾಗಿದೆ. ಮಹಾರಾಷ್ಟ್ರದ ಕಿರಣ ದೇಸಾಯಿ(40), ಗಿರೀಶ ಪೂಜಾರಿ(42), ಬೆಳಗಾವಿಯ ಅಮರ ನಾಯ್ಕ(30), ಸಾಗರ ಕುಣ್ಣೂರ್ಕರ್(28), ದಾಂಡೇಲಿಯ ಶಬ್ಬೀರ್ ಕುಟ್ಟಿ(45), ಶಿವಾಜಿ ಕಾಂಬ್ಳೆ(52) ಬಂಧನಕ್ಕೊಳಗಾದವರು. ಡಿಡಿಎಲ್ ವನಶ್ರೀ ಭಾಗದ …

Read More »

ಸ್ವಂತ ಖರ್ಚಿನಲ್ಲಿ ವ್ಯಾಕ್ಸಿನ್ ಕೇಂದ್ರ ನಿರ್ಮಿಸಿದ ಯಲ್ಲಾಪುರದ ಉದ್ಯಮಿ

ಕಾರವಾರ (ಜೂನ್ 2): ಕೋವಿಡ್ ಸಂಕಷ್ಟ ಕಾಲಕ್ಕೆ ಅದೆಷ್ಟೋ ಮಾನವೀಯ ವ್ಯಕ್ತಿಗಳು ಬೆಳಕಿಗೆ ಬರುತ್ತಿದ್ದಾರೆ. ವಿವಿಧ ರೂಪದಲ್ಲಿ ಬಡವರಿಗೆ ದಾರಿ ದೀಪವಾಗುತ್ತಿದ್ದಾರೆ. ಸರಕಾರ ಮಾಡಬೇಕಾದ ಕೆಲಸವನ್ನ ದಾನಿಗಳು ಮಾಡಿ ಸರಕಾರವನ್ನು ನಾಚಿಸುವಂತೆ ಮಾಡುತ್ತಿದ್ದಾರೆ. ಹೀಗೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ಉದ್ಯಮಿ ಬಾಲಕೃಷ್ಣ ನಾಯ್ಕ್ ಸ್ವಂತ ಖರ್ಚಿನಲ್ಲಿ ಕೋವಿಡ್ ವ್ಯಾಕ್ಸಿನ್ ಕೇಂದ್ರವನ್ನೇ ತೆರೆದಿದ್ದಾರೆ. ವ್ಯಾಕ್ಸಿನ್ ಪಡೆಯುವವರಿಗೆ ಉತ್ತಮ ವಾತಾವರಣ ಕಲ್ಪಿಸಿಕೊಟ್ಟಿದ್ದಾರೆ. ಹೌದು, ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಮೂಲದ ನಿವಾಸಿಯಾದ …

Read More »

ಲಾಕ್​ಡೌನ್ ಮುಗಿದ ನಂತರ ಆರಂಭವಾಗುವ ಸಾರಿಗೆ ಸೇವೆಯಲ್ಲಿ ಲಸಿಕೆ ಪಡೆದ ಸಿಬ್ಬಂದಿಗಳಿಗೆ ಆದ್ಯತೆ: ಡಿಸಿಎಂ ಲಕ್ಷ್ಮಣ ಸವದಿ

ಬೆಂಗಳೂರು: ಪ್ರಯಾಣಿಕರ ಆರೋಗ್ಯದ ಹಿತದೃಷ್ಟಿಯಿಂದ ಲಾಕ್​ಡೌನ್ ಮುಗಿದ ನಂತರ ಪ್ರಾರಂಭವಾಗುವ ಸಾರಿಗೆ ಸೇವೆಗೆ ಎರಡನೇ ಸುತ್ತಿನ ಕೊವಿಡ್ ಲಸಿಕೆ ಪಡೆದಂತಹ ಚಾಲಕರು ಮತ್ತು ನಿರ್ವಾಹಕರನ್ನೇ ಬಳಸಿಕೊಳ್ಳಲು ಆದ್ಯತೆ ನೀಡಲಾಗುವುದು ಎಂದು ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವರಾದ ಲಕ್ಷ್ಮಣ ಸವದಿ ಅವರು ಸ್ಪಷ್ಟಪಡಿಸಿದರು. ಬೆಂಗಳೂರು ಮಹಾನಗರ ಸಾರಿಗೆ ನಿಗಮದ ಆಶ್ರಯದಲ್ಲಿ ಇಂದು (ಜೂನ್ 1) ಸಾರಿಗೆ ಸಿಬ್ಬಂದಿಗಳಿಗೆ ಎರಡನೆಯ ಹಂತದಲ್ಲಿ ಕೊವಿಡ್ ಲಸಿಕೆಯನ್ನು ಉಚಿತವಾಗಿ ನೀಡುವ ಆಂದೋಲನಕ್ಕೆ ಸಾರಿಗೆ ಸಚಿವರು ಹಾಗೂ …

Read More »

ಸೀಜ್ ಮಾಡಲಾದ ಸಾವಿರಾರು ವಾಹನಗಳಿಂದ ಮೈದಾನ ಫುಲ್

ಕಲಬುರಗಿ: ಕೊರೊನಾ ನಿಯಂತ್ರಿಸಲು, ರಾಜ್ಯಾದ್ಯಂತ ಲಾಕ್​​ಡೌನ್ ಜಾರಿಯಲ್ಲಿದೆ. ಅಗನತ್ಯವಾಗಿ ಹೊರಗಡೆ ಓಡಾಡದಂತೆ ಜನರಿಗೆ ಸೂಚನೆ ನೀಡಲಾಗಿದೆ. ಆದ್ರೂ ನಿಯಮ ಉಲ್ಲಂಘಿಸಿ ಸುಖಾಸುಮ್ಮನೆ ಹೊರಗಡೆ ಓಡಾಡುವ ಸಾವಿರಾರು ವಾಹನಗಳನ್ನ ಪೊಲೀಸರು ಸೀಜ್ ಮಾಡ್ತಿದ್ದಾರೆ. ಕಲಬುರಗಿಯಲ್ಲಿ ಹೀಗೆ ಜಪ್ತಿ ಮಾಡಲಾದ ವಾಹನಗಳಿಂದ ಇಡೀ ಮೈದಾನವೇ ತುಂಬಿಹೋಗಿದೆ.   ಅನಗತ್ಯವಾಗಿ ಹೊರಬಂದವರ ಬೈಕ್ ಹಾಗೂ ಕಾರ್​ಗಳನ್ನ ಸೀಜ್ ಮಾಡಿರುವ ಪೊಲೀಸರು, ಅವುಗಳನ್ನ ಡಿಎಆರ್ ಮೈದಾನದಲ್ಲಿ ಪಾರ್ಕ್‌ ಮಾಡ್ತಿದ್ದಾರೆ. ಜಪ್ತಿಯಾದ ಬೈಕ್, ಕಾರ್, ಆಟೋಗಳನ್ನ ಪ್ರತಿದಿನ …

Read More »

ಡಿಕೆಶಿ ಕಾರ್ಯಕ್ರಮದಲ್ಲಿ ನಿಯಮ ಉಲ್ಲಂಘನೆ – 10 ಸಾವಿರ ರೂಪಾಯಿ ದಂಡ..!

ಹುಬ್ಬಳ್ಳಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಹುಬ್ಬಳ್ಳಿಗೆ ಆಗಮಿಸಿದ ವೇಳೆ ಕೋವಿಡ್ ನಿಯಮ ಉಲ್ಲಂಘನೆ ಮಾಡಿದ ಪರಿಣಾಮ 10 ಸಾವಿರ ರೂಪಾಯಿ ದಂಡ ವಿಧಿಸಲಾಗಿದೆ. ಸಭೆಯಲ್ಲಿ ಸಾಮಾಜಿಕ ಅಂತರ ಪಾಲನೆ ಮಾಡದೇ ಇರುವುದು. ಸರಿಯಾಗಿ ಮಾಸ್ಕ್ ಧರಿಸದೇ ಇರುವುದರಿಂದ ಹುಬ್ಬಳ್ಳಿ – ಧಾರವಾಡ ಮಹಾನಗರ ಪಾಲಿಕೆ ಮಹಾನಗರ ಜಿಲ್ಲಾ ಕಾಂಗ್ರೆಸ್ ಘಟಕಕ್ಕೆ 10 ಸಾವಿರ ರೂಪಾಯಿ ದಂಡ ವಿಧಿಸಿದೆ. ಮೇ 31 ರಂದು ಸಂಜೆ ಹುಬ್ಬಳ್ಳಿಗೆ ಭೇಟಿ ನೀಡಿದ್ದ …

Read More »

ಸುರೇಶ ಅಂಗಡಿ ಜನ್ಮದಿನದ ನಿಮಿತ್ತ ಅವರ ಪತ್ನಿ, ಸಂಸದ ಮಂಗಲಾ ಅಂಗಡಿ ಬೆಳಗಾವಿಯ ವಿಶ್ವಹಿಂದೂ ಪರಿಷತ್ ಕೋವಿಡ್ ಸೆಂಟರ್ ಗೆ ತೆರಳಿ ಆರ್ಥಿಕ ನೆರವು

ಬೆಳಗಾವಿ – ಕೇಂದ್ರದ ಮಾಜಿ ಸಚಿವ ಸುರೇಶ ಅಂಗಡಿ ಜನ್ಮದಿನದ ನಿಮಿತ್ತ ಅವರ ಪತ್ನಿ, ಸಂಸದೇ ಮಂಗಲಾ ಅಂಗಡಿ ಬೆಳಗಾವಿಯ ವಿಶ್ವಹಿಂದೂ ಪರಿಷತ್ ನಡೆಸುತ್ತಿರುವ ಕೋವಿಡ್ ಸೆಂಟರ್ ಗೆ ತೆರಳಿ ಆರ್ಥಿಕ ನೆರವು ನೀಡಿದರು. ನಿಯತಿ ಫೌಂಡೇಶನ್ ಚೇರಮನ್ ಡಾ.ಸೋನಾಲಿ ಸರ್ನೋಬತ್ ಜೊತೆ ತೆರಳಿದ ಮಂಗಲಾ ಅಂಗಡಿ ವಿಶ್ವಹಿಂದೂ ಪರಿಷತ್ ಉತ್ತರ ಕರ್ನಾಟಕ ಸಹಕೋಶಾಧ್ಯಕ್ಷ ಕೃಷ್ಣ ಭಟ್ ಅವರಿಗೆ ತಮ್ಮ ಕಾಣಿಕೆಯನ್ನು ಹಸ್ತಾಂತರಿಸಿದರು. ವಿಜಯ ಜಾಧವ ಹಾಗೂ ವಿಶ್ವಹಿಂದೂ ಪರಿಷತ್ತಿನ …

Read More »

ಮಾವಾ ತಯಾರಿಕೆ ಅಡ್ಡೆ ಮೇಲೆ ದಾಳಿ : ಮೂವರ ಬಂಧನ, 2.50 ಲಕ್ಷ ರೂ. ಮೌಲ್ಯದ ಸೊತ್ತು ವಶ

ವಿಜಯಪುರ : ರಾಜ್ಯದಲ್ಲಿ ನಿಷೇಧಿತವಾಗಿರುವ ತಂಬಾಕು ಉತ್ಪನ್ನವಾದ ಮಾವಾ ತಯಾರಿಕೆಯ ಅಡ್ಡೆಗಳ ಮೇಲೆ ದಾಳಿ ನಡೆಸಿರುವ ಪೊಲೀಸರು, ಮೂವರನ್ನು ಬಂಧಿಸಿ, 2.50 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ವಿಜಯಪುರ ಗ್ರಾಮೀಣ ಸಿಪಿಐ ಎಸ್.ಬಿ.ಪಾಲಭಾವಿ ಅವರು ತಿಕೋಟ ಪಟ್ಟಣದಲ್ಲಿ ಅಲ್ಲಿನ ಎಸೈ ಎಸ್.ಕೆ.ಲಂಗೋಟೆ ಅವರೊಂದಿಗೆ ಪೆಟ್ರೋಲಿಂಗ್‍ನಲ್ಲಿ ತೊಡಗಿದ್ದಾಗ ಅಕ್ರಮವಾಗಿ ಗುಟ್ಕಾ ತಯಾರಿಸುವ ಮಾಹಿತಿ ಲಭ್ಯವಾಗಿದೆ. ಖಚಿತ ಮಾಹಿತಿ ಆಧರಿಸಿ ಬಡಕಲ್ ಓಣಿ ಹಾಗೂ ಗೌಡರ ಓಣಿಗಳಲ್ಲಿ ಸ್ಥಳೀಯ ಠಾಣೆ …

Read More »

ಜೆ.ಹೆಚ್.ಪಟೇಲರು ಕೈಯಲ್ಲಿ ಮೆಟ್ಟು ಹಿಡಿದುಕೊಂಡಿದ್ದೇಕೆ ? ಎಷ್ಟರಮಟ್ಟಿಗೆ ಸರಿ?

ಬೆಂಗಳೂರು, ಸುದ್ದಿಒನ್, ಜೂ.01: ಸಮಾಜವಾದಿ ಸಿದ್ಧಾಂತವನ್ನು ತನ್ನ ಬದುಕಿನಲ್ಲಿ ಅಳವಡಿಸಿಕೊಂಡು ವಿಭಿನ್ನ, ನೇರ ನಿಷ್ಠೂರತೆ ಕಾರಣಕ್ಕೆ ರಾಜ್ಯ ರಾಜಕಾರಣದಲ್ಲಿ ವರ್ಣರಂಜಿತವಾಗಿದ್ದ ಜೆ.ಹೆಚ್.ಪಟೇಲರು ನಾಡು ಕಂಡ ಅಪರೂಪದ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆ ಪಡೆದುಕೊಂಡಿದ್ದರು. ಹೆಚ್.ಡಿ.ದೇವೇಗೌಡರು, ರಾಮಕೃಷ್ಣಹೆಗಡೆ ಅವರೊಂದಿಗೆ ಅತ್ಯಂತ ಸಲಿಗೆಯಿಂದ ಮಾತನಾಡುವ ಶಕ್ತಿ, ವ್ಯಕ್ತಿತ್ವ ಹೊಂದಿದ್ದರು. ಜೊತೆಗೆ ಹಾಸ್ಯಭರಿತ, ನೇರ, ನಿಷ್ಠೂರತೆ ಮಾತು ಹೆಚ್ಚು ಆತ್ಮೀಯರನ್ನಾಗಿಸುತ್ತಿತ್ತು. ಆದರೆ ನಾಡಿನ ಮುಖ್ಯಮಂತ್ರಿ ಸ್ಥಾನ ಅಲಂಕರಿಸಬೇಕಾದರೆ ಕೆಲ ಅರ್ಹತೆಗಳು ಅನಿವಾರ್ಯವಾಗಿ ಇರಲೇಬೇಕು. ಜೊತೆಗೆ ಕೆಲ …

Read More »