Breaking News

ರಾಜ್ಯ

ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ವಿರುದ್ಧ ಅಸಮಾಧಾನ ಹೊರಹಾಕಿದ ಸಿ.ಪಿ. ಯೋಗೇಶ್ವರ್

ಮುಖ್ಯಮಂತ್ರಿ ಬದಲಾವಣೆ ನನ್ನ ಉದ್ದೇಶವಲ್ಲ. ಅಷ್ಟೊಂದು ಶಕ್ತಿಯೂ ನನಗಿಲ್ಲ. ಆದರೆ ನನಗೆ ಸಚಿವ ಸ್ಥಾನ ಸಿಕ್ಕಿರುವುದು ನನ್ನ ಮಗ ಮೂಗು ತೂರಿಸುವುದು ಸರಿಯಲ್ಲ ಎಂದು ಸಚಿವ ಸಿ.ಪಿ. ಯೋಗೇಶ್ವರ್ ಪರೋಕ್ಷವಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಬೆಂಗಳೂರಿನಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬದಲಾಯಿಸುವ ಅಭಿಪ್ರಾಯ ನನಗೆ ಇಲ್ಲ. ನನ್ನ ಸಮಸ್ಯೆ ಹೇಳಿಕೊಳ್ಳಲು ದೆಹಲಿಗೆ ಹೋಗಿದ್ದೆ. ಎಲ್ಲವನ್ನೂ ಮಾಧ್ಯಮಗಳ ಮುಂದೆ ಹೇಳಕ್ಕಾಗಲ್ಲ. ಮುಂದಿನ …

Read More »

ಜನ್ಮದಿನಕ್ಕೆ ಬಟ್ಟೆ ಕೊಡಿಸಲಿಲ್ಲ ಅಂತ ನವವಿವಾಹಿತೆ ಆತ್ಮಹತ್ಯೆ: ಕೊಲೆ ಕೇಸು ದಾಖಲು!

ಹುಟ್ಟುಹಬ್ಬಕ್ಕೆ ಬಟ್ಟೆ ಕೊಡಿಸದೇ ಗಂಡ ರೇಗಾಡಿದ್ದರಿಂದ ನೊಂದ ನವ ವಿವಾಹಿತೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆ ತಾಲೂಕು ಗ್ರಾಮದಲ್ಲಿ ನಡೆದಿದೆ. ಗೌರಿಬಿದನೂರು ತಾಲ್ಲೂಕಿನ ಬೇವಿನಹಳ್ಳಿ ಗ್ರಾಮದ ರಾಜು ಅವರ ಪುತ್ರಿ ಮಮತಾ (17) ಆತ್ಮಹತ್ಯೆ ಮಾಡಿಕೊಂಡ ಯುವತಿ. ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆ ಪಟ್ಟಣದ ಯುವಕ ಮಹದೇವ ಅಲಿಯಾಸ್ ಮಣಿಕಂಠ ಮೂರು ತಿಂಗಳ ಅಪ್ರಾಪ್ತೆಯಾಗಿದ್ದ ಮಮತಾಳನ್ನು ಅಪಹರಿಸಿ ಮದುವೆಯಾಗಿದ್ದ. ಜನ್ಮದಿನವಾದ ಇಂದು ಹೊಸಬಟ್ಟೆ ಕೊಡಿಸುವಂತೆ ಗಂಡ ಮಣಿಕಂಠನಿಗೆ ಕೇಳಿದ್ದಾಳೆ. …

Read More »

ಹರಿಹರದಲ್ಲಿ ಪೊಲೀಸರಿಂದಲೇ ಅಕ್ರಮ ಮರಳು ದಂಧೆ.. ಸೂಚಿಸಿದ್ರೂ ಕ್ರಮ ಕೈಗೊಂಡಿಲ್ಲ ಎಂದು ಶಾಸನ ಎಸ್.ರಾಮಪ್ಪ ಕಿಡಿ

ದಾವಣಗೆರೆ: ಜಿಲ್ಲೆಯ ಹರಿಹರದಲ್ಲಿ ಪೊಲೀಸರಿಂದಲೇ ಅಕ್ರಮ ಮರಳು ದಂಧೆ ನಡೆಯುತ್ತಿದೆ ಎಂದು ಹರಿಹರ ಕಾಂಗ್ರೆಸ್ ಶಾಸಕ ಎಸ್.ರಾಮಪ್ಪ ಆರೋಪ ಮಾಡಿದ್ದು ಅಕ್ರಮ ಮರಳು ದಂಧೆಗೆ ಕಡಿವಾಣ ಹಾಕುವಂತೆ ಸೂಚನೆ ನೀಡಿದ್ದರು ಕ್ರಮ ಕೈಗೊಂಡಿಲ್ಲವೆಂದು ಆಕ್ರೋಶ ಹೊರ ಹಾಕಿದ್ದಾರೆ. ಕೊರೊನಾ ಲಾಕ್ಡೌನ್ ವೇಳೆ ಹರಿಹರದಲ್ಲಿ ಅಕ್ರಮ ಮರಳು ದಂಧೆ ನಡೆಯುತ್ತಿದೆ. ಇದಕ್ಕೆ ಸಾಕ್ಷಿಯಾಗಿ ರಾಜನಹಳ್ಳಿಯಲ್ಲಿ ಗ್ರಾಮಸ್ಥರು ಟಿಪ್ಪರ್ ತಡೆದು ಆಕ್ರೋಶ ಹೊರ ಹಾಕಿದ್ದರು. ಈ ವೇಳೆ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ 10 …

Read More »

ಕೋವಿಡ್​ ಸೋಂಕಿತರ ಕುಟುಂಬಸ್ಥರಿಗೆ ಸ್ಥಳೀಯರ ಕಿರುಕುಳ.. ಬೆಂಕಿ ಹಚ್ಚಿಕೊಂಡು ಸಾಯ್ತೀವಿ. ಕಣ್ಣೀರಿಟ್ಟ ಮಹಿಳೆಯರು

ಅರಕಲಗೂಡು: ಕೋವಿಡ್ ಕೇರ್ ಸೆಂಟರ್​​​​​ಗೆ ದಾಖಲಾಗಿರುವ ರೋಗಿಗಳ ಕುಟುಂಬಸ್ಥರಿಗೆ ಗ್ರಾಮಸ್ಥರು ಬೆದರಿಕೆ ಹಾಕಿದ್ದು, ಈ ಕುರಿತ ವಿಡಿಯೋ ವೈರಲ್ ಆಗಿದೆ. ತಾಲೂಕಿನ ಎಚ್.ಆರ್.ಪಿ. ವಡ್ಡರಹಳ್ಳಿ ಗ್ರಾಮದ ವಿವಿಧ ಮನೆಯ ಐವರು ಪುರುಷರಿಗೆ ಕೋವಿಡ್ ಸೋಂಕು ದೃಢವಾಗಿದ್ದ ಹಿನ್ನೆಲೆ ಅವರೆಲ್ಲ ಕೋವಿಡ್ ಸೆಂಟರ್​​ಗೆ ದಾಖಲಾಗಿದ್ದರು. ಈ ವೇಳೆ, ಗ್ರಾಮದಲ್ಲಿ ರೋಗಿಯ ಕುಟುಂಬದಲ್ಲಿರುವ ಸದಸ್ಯರಿಗೆ ಬೆದರಿಕೆ ಹಾಕುತ್ತಿದ್ದು, ಮನೆಯಿಂದ ಹೊರ ಬಾರದಂತೆ ತಾಕೀತು ಮಾಡುತ್ತಿದ್ದಾರೆ ಎಂದು ಮಹಿಳೆಯೊಬ್ಬರು ವಿಡಿಯೋದಲ್ಲಿ ಆರೋಪಿಸಿದ್ದಾರೆ. ನಮಗೆ ಅಗತ್ಯ …

Read More »

ನಾಯಕತ್ವ ಬದಲಾವಣೆ ವಿಚಾರ; ವಿರೋಧಿ ಬಣಕ್ಕೆ ಟಾಂಗ್ ಕೊಟ್ಟ ಸಿಎಂ ಯಡಿಯೂರಪ್ಪ

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ನಿಟ್ಟಿನಲ್ಲಿ ತೆರೆಮರೆಯಲ್ಲಿ ಕಸರತ್ತು ನಡೆಸುತ್ತಾ, ದೆಹಲಿಯಲ್ಲಿ ಬೀಡು ಬಿಟ್ಟಿದ್ದ ನಾಯಕರಿಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಬಿಸಿ ಮುಟ್ಟಿಸಿದ್ದಾರೆ.   ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ, ಶಾಸಕಾಂಗ ಸಭೆ ವಿಚಾರದ ಬಗ್ಗೆ ಚರ್ಚಿಸುವ ಅಗತ್ಯವಿಲ್ಲ. ನನ್ನ ಮುಂದೆ ಇರುವುದು ಕೋವಿಡ್ ನಿಯಂತ್ರಣ ಮಾತ್ರ. ಜನರ ಹಿತ ಕಾಯುವುದು ನನ್ನ ಮೊದಲ ಆದ್ಯತೆ. ಯಾರು ದೆಹಲಿಗೆ ಹೋಗಿ ಬಂದಿದ್ದಾರೋ ಅವರಿಗೆ ಅಲ್ಲಿಯೇ ಉತ್ತರ ಕೊಟ್ಟು ಕಳುಹಿಸಿದ್ದಾರೆ ಎಂದು ಹೇಳುವ …

Read More »

ದ್ವಿತೀಯ ಪಿಯುಸಿ ಪರೀಕ್ಷೆ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ನಡೆಸುವ ಕುರಿತಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ವರ್ಚುಯಲ್ ಸಭೆ ನಡೆಸಲಿದ್ದಾರೆ. ಶಿಕ್ಷಣ ತಜ್ಞರು, ಶಿಕ್ಷಕರು, ಶಾಲೆಗಳ ಆಡಳಿತ ಮಂಡಳಿ, ಪೋಷಕರೊಂದಿಗೆ ಸಚಿವರು ಶೀಘ್ರವೇ ಸಭೆ ನಡೆಸಲಿದ್ದು, ಸೋಂಕು ಕಡಿಮೆಯಾದ ಬಳಿಕ ಪರೀಕ್ಷೆ ನಡೆಸುವ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಪರೀಕ್ಷಾ ವಿಧಾನ ಹೇಗಿರಬೇಕು ಎಂದು ಸಚಿವರು ಅಭಿಪ್ರಾಯ ಸಂಗ್ರಹಿಸಲಿದ್ದಾರೆ. ಕಳೆದ ವರ್ಷ ಎಸ್‌ಎಸ್‌ಎಲ್ಸಿ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲಾಗಿದೆ. ಅದೇ …

Read More »

ನಾಯಕತ್ವ ಬದಲಾವಣೆ ವಿಚಾರ; ಹೈಕಮಾಂಡ್ ನಿರ್ಧಾರಕ್ಕೆ ಬದ್ಧ ಎಂದ ನಿರಾಣಿ; ಊಹಾಪೋಹ ಎಂದ ಬೊಮ್ಮಾಯಿ

ಬೆಂಗಳೂರು: ಕೊರೊನಾ ಅಟ್ಟಹಾಸದ ನಡುವೆ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಭಾರಿ ಚರ್ಚೆಗೆ ಕಾರಣವಾಗಿದೆ. ಒಬ್ಬೊಬ್ಬರು ಸಚಿವರು ಒಂದೊಂದು ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆ. ನಾಯಕತ್ವ ಬದಲಾವಣೆ ಕುರಿತು ಪ್ರತ್ಯೇಕ ಸಭೆ ಬಗ್ಗೆ ನನ್ನ ಗಮನಕ್ಕೆ ಬಂದಿಲ್ಲ ಎಂದು ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚಟುವಟಿಕೆ ನಡೆಯುತ್ತಿರುವುದು ಶೇಕಡಾ ನೂರರಷ್ಟು ನಿಜ. ಕೆಲ ಸಚಿವರೇ ಪ್ರತ್ಯೇಕ ಸಭೆಯನ್ನೂ ನಡೆಸುತ್ತಿದ್ದಾರೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೊಸ ಬಾಂಬ್ …

Read More »

ಐಸಿಎಐ ಸಿಎ ಪರೀಕ್ಷೆ ಮುಂದೂಡಿಕೆ

‌ನವದೆಹಲಿ: ಮೇ 21 ಮತ್ತು 22ರಂದು ನಡೆಯಬೇಕಿದ್ದ ಐಸಿಎಐ ಸಿಎ ಮಧ್ಯಂತರ ಮತ್ತು ಅಂತಿಮ ಪರೀಕ್ಷೆಗಳು ಜೂನ್‌ 5 ರಿಂದ ನಡೆಯಲಿವೆ ಎಂದು ಭಾರತೀಯ ಚಾರ್ಟರ್ಡ್ ಅಕೌಂಟೆಂಟ್ಸ್ ಸಂಸ್ಥೆ (ಐಸಿಎಐ) ತಿಳಿಸಿದೆ. ಆದ್ರೆ, ಪರೀಕ್ಷೆಗಳ ಸಮಯ ಸೇರಿದಂತೆ ವಿವರವಾದ ಅಧಿಸೂಚನೆಯನ್ನು ಇನ್ನೂ ಘೋಷಿಸಲಾಗಿಲ್ಲ. ‘ಕೋವಿಡ್-19 ಸಾಂಕ್ರಾಮಿಕ ರೋಗ ನಡೆಯುತ್ತಿರುವ ಹಿನ್ನೆಲೆಯಲ್ಲಿ ಮತ್ತು ವಿದ್ಯಾರ್ಥಿಗಳ ಯೋಗಕ್ಷೇಮ ಮತ್ತು ಅವರ ಕಷ್ಟಗಳನ್ನು ತಗ್ಗಿಸಲು, ಅಂತಿಮ ಮತ್ತು ಮಧ್ಯಂತರ ಚಾರ್ಟರ್ಡ್ ಅಕೌಂಟೆಂಟ್‌ಸ್ ಪರೀಕ್ಷೆಗಳನ್ನ ಮುಂದೂಡಲು …

Read More »

ನಾಯಕತ್ವ ಬದಲಾವಣೆ ವಿಚಾರ; ಆಪ್ತ ಸಚಿವರ ಬಳಿ ಬೇಸರ ವ್ಯಕ್ತಪಡಿಸಿದ ಸಿಎಂ ಬಿ ಎಸ್ ವೈ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಆರ್ಭಟದ ನಡುವೆಯೇ ಮತ್ತೆ ನಾಯಕತ್ವ ಬದಲಾವಣೆ ಮಾತುಗಳು ಕೇಳಿಬರುತ್ತಿದ್ದು, ಈ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪನವರೇ ಆಪ್ತ ಸಚಿವರ ಬಳಿ ಬೇಸರ ತೋಡಿಕೊಂಡಿದ್ದಾರೆ ಎನ್ನಲಾಗಿದೆ.   ಈ ಹಿಂದೆ ಹಲವುಬಾರಿ ನಾಯಕತ್ವ ಬದಲಾವಣೆ ಬಗ್ಗೆ ಮಾತು ಕೇಳಿಬಂದರೂ ಅದಾವುದಕ್ಕೂ ಕಿವಿಗೊಡದ ಸಿಎಂ, ಈ ಬಾರಿ ಸ್ವತಃ ಬೇಸರ ವ್ಯಕ್ತಪಡಿಸಿರುವುದು ರಾಜ್ಯ ರಾಜಕಾರಣದಲ್ಲಿ ಕುತೂಹಲಕ್ಕೆ ಕಾರಣವಾಗಿದೆ. ಸಿಎಂ ಸ್ಥಾನಕ್ಕೆ ಕೆಲ ನಾಯಕರ ಹೆಸರು ಕೇಳಿಬರುತ್ತಿದೆ. ಪ್ರತಿನಿತ್ಯ ನನ್ನ ಬಳಿ …

Read More »

ಹೆರಿಗೆ ವೇಳೆ ದಾದಿಯ ಕೈಜಾರಿ ಬಿದ್ದು ನವಜಾತ ಶಿಶು ಸಾವು? ಆಸ್ಪತ್ರೆ ಬಳಿ ಮುಗಿಲುಮುಟ್ಟಿದ ಪಾಲಕರ ಆಕ್ರಂದನ

ದಾವಣಗೆರೆ: ಹೆರಿಗೆ ವೇಳೆ ದಾದಿಯ ಕೈಜಾರಿ ಬಿದ್ದು ನವಜಾತ ಶಿಶು‌ ಮೃತಪಟ್ಟಿದೆ ಎಂದು ಚನ್ನಗಿರಿ ತಾಲೂಕಿನ ದೇವರಹಳ್ಳಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ‌ ಮೃತ ಮಗುವಿನ ಸಂಬಂಧಿಕರು ಆಸ್ಪತ್ರೆ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ದೇವರಹಳ್ಳಿ ನಿವಾಸಿ ಲಕ್ಷ್ಮೀ ಮತ್ತು ತಿಮ್ಮೇಶ್ ದಂಪತಿ ಮಗು ಮೃತಪಟ್ಟಿದೆ. ಲಕ್ಷ್ಮೀಗೆ ಹೆರಿಗೆ ಮಾಡಿಸುವ ಸಂದರ್ಭದಲ್ಲಿ ವೈದರು ಇರಲಿಲ್ಲ. ದಾದಿ ಸಾಕಮ್ಮ ಎಂಬುವರೇ ಹೆರಿಗೆ ಮಾಡಿಸಿದ್ದರು. ಆದರೆ ಮಗು ಬದುಕಿಲ್ಲ. ಹೆರಿಗೆ ಮಾಡಿಸುವಾಗ ದಾದಿ ಕೈಯಿಂದ …

Read More »