Breaking News

ರಾಜ್ಯ

ಕೋವಿಡ್ 3ನೇ ಅಲೆ ಭೀತಿ: ಕರ್ನಾಟಕದಲ್ಲಿ ಮಕ್ಕಳ ಆರೈಕೆ ಕೇಂದ್ರಗಳ ಸ್ಥಾಪನೆ

ಬೆಂಗಳೂರು, ಮೇ 24: ಕರ್ನಾಟಕದಲ್ಲಿ ಇನ್ನೂ ಕೊರೊನಾ ವೈರಸ್ 2ನೇ ಅಲೆ ತಾಂಡವಾಡುತ್ತಿದೆ. ಆದರೂ ದಾಖಲೆಯ ಸಂಖ್ಯೆಯಲ್ಲಿ ಮಕ್ಕಳಿಗೆ ಕೋವಿಡ್-19 ಪಾಸಿಟಿವ್ ಕಾಣಿಸಿಕೊಳ್ಳುತ್ತಿರುವುದನ್ನು ನೋಡಿದರೆ ಆಗಲೇ ಕೋವಿಡ್ 3ನೇ ಅಲೆ ಪ್ರಾರಂಭವಾಗಿದೆಯಾ ಎಂಬ ಪ್ರಶ್ನೆ ಕಾಡುತ್ತಿದೆ. ಕೋವಿಡ್ 3ನೇ ಅಲೆಯಿಂದ ಮಕ್ಕಳನ್ನು ರಕ್ಷಿಸಲು ಸರ್ಕಾರ ಈಗಾಗಲೇ ಸಿದ್ಧತೆ ನಡೆಸುತ್ತಿದ್ದು, ಕೊರೊನಾ ಮೊದಲ ಅಲೆಗಿಂತ 2ನೇ ಅಲೆಯ ವೇಳೆ ಮಕ್ಕಳಲ್ಲಿ ಕೋವಿಡ್ ಸೋಂಕು ಪ್ರಕರಣಗಳ ಸಂಖ್ಯೆ ಎರಡು ಪಟ್ಟು ಹೆಚ್ಚಾಗಿದೆ. ಈ …

Read More »

ತುರ್ತು ಸೇವೆಗೆ ಆಂಬುಲೆನ್ಸ್‌ ವ್ಯವಸ್ಥೆ

ಕಾರಟಗಿ: ‘ಕ್ಷೇತ್ರದಲ್ಲಿ ಕೊರೊನಾ ಸೋಂಕಿತರು ಸೇರಿದಂತೆ ವಿವಿಧ ರೋಗಿಗಳಿಗೆ ತುರ್ತು ಆರೋಗ್ಯ ಸೇವೆ ಸಮರ್ಪಕವಾಗಿ ದೊರೆಯಲಿ ಎನ್ನುವ ಉದ್ದೇಶದಿಂದ ವೈಯಕ್ತಿಕ ವೆಚ್ಚದಲ್ಲಿ 2 ಆಮ್ಲಜನಕ ಸಹಿತ ಆಂಬುಲೆನ್ಸ್‌ಗಳ ವ್ಯವಸ್ಥೆ ಮಾಡಲಾಗಿದೆ. ಜನರು ಅಗತ್ಯ ಸಂದರ್ಭದಲ್ಲಿ ಪ್ರಯೋಜನಾ ಪಡೆಯಬಹುದು’ ಎಂದು ಶಾಸಕ ಬಸವರಾಜ ದಢೇಸೂಗೂರು ಹೇಳಿದರು. ಭಾನುವಾರ ತಮ್ಮ ಕಚೇರಿ ಬಳಿ ಆಂಬುಲೆನ್ಸ್‌ ಹಸ್ತಾಂತರಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಕ್ಷೇತ್ರದಲ್ಲಿ ಕೋವಿಡ್ ಹೆಚ್ಚಳವಾಗುತ್ತಿರುವುದು ಕಳವಳಕಾರಿ ಸಂಗತಿ. ಗ್ರಾಮೀಣ ಪ್ರದೇಶದ ರೋಗಿಗಳು ಚಿಕಿತ್ಸೆಗಾಗಿ …

Read More »

ದಲಿತ ಯುವಕನ ಮೇಲೆ ದೌರ್ಜನ್ಯ ಪ್ರಕರಣ : ಗೋಣಿಬೀಡು ಪಿಎಸ್ ಐ ಅರ್ಜುನ್ ಅಮಾನತು

ಚಿಕ್ಕಮಗಳೂರು; ಮೂಡಿಗೆರೆ ತಾಲ್ಲೂಕು ಗೋಣಿಬೀಡು ಪೋಲಿಸ್ ಠಾಣೆ ವ್ಯಾಪ್ತಿಯ ಕಿರುಗುಂದ ಪರಿಶಿಷ್ಟ ಜಾತಿ ಯುವಕನ ಮೇಲೆ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋಣಿಬೀಡು ಪೋಲಿಸ್ ಠಾಣೆ ಪಿಎಸ್ ಐ ಅರ್ಜುನ್ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ, ಸದ್ಯ ಈ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಲಾಗಿದೆ. ಕಿರಗುಂದ ಗ್ರಾಮದ ಪರಿಶಿಷ್ಟ ಜಾತಿ ಯುವಕ ಪುನೀತ್ ಎಂಬುವನನ್ನು ಮೇ 10 ರಂದು ಯಾವುದೇ ದೂರು ದಾಖಲಿಸಿಕೊಳ್ಳದೆ. ಪೋಲಿಸ್ ಠಾಣೆಗೆ ಕರೆತಂದು ವಿಚಾರಣೆ ನಡೆಸಿದ ಪಿಎಸ್ …

Read More »

ಕೊರೋನ ಇಂದ ಪಾರಾಗಲು ಪಾರಿಜಾತ ಎಲೆಯ ಕಷಾಯ ಕುಡಿಯಿರಿ: ಅವಧುತ ವಿನಯ್ ಗುರೂಜಿ

ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆ ಗೌರಿಗದ್ದೆಯ ಅವಧೂತ ವಿನಯ್ ಗುರೂಜಿ ಕೊರೋನಗೆ ಮದ್ದು ಒಂದನ್ನು ಹೇಳಿದ್ದು, ಪಾರಿಜಾತ ಎಲೆಯ ಕಷಾಯ ಮಾಡಿ ಕುಡಿಯಿರಿ ಎಂದಿದ್ದಾರೆ. ಎಲ್ಲರೂ ಪಾರಿಜಾತ ಎಲೆಯ ಕಷಾಯ ಕುಡಿಯುವಂತೆ ತಮ್ಮ ಭಕ್ತರಿಗೆ ಸಂದೇಶವನ್ನೂ ಅವರು ರವಾನಿಸಿರುವ ಇವರು, ಕಷಾಯ ತಯಾರಿಸುವ ವಿಧಾನವನ್ನೂ ತಿಳಿಸಿದ್ದಾರೆ . ಅವರು ತಿಳಿಸಿರುವ ಪ್ರಕಾರ ಐದು ಪಾರಿಜಾತದ ಎಲೆ , ಕಾಳುಮೆಣಸು , ಶುಂಠಿ , ಲಿಂಬೆಹಣ್ಣಿನ ರಸ ಹಾಕಿ ಕುದಿಸಿ ಕುಡಿದರೆ …

Read More »

ಬಳ್ಳಾರಿ: 31ರವರೆಗೂ ಸಂಪೂರ್ಣ ಲಾಕ್‌ಡೌನ್‌ ವಿಸ್ತರಣೆ: ಡಿ.ಸಿ.

ಬಳ್ಳಾರಿ: ‘ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯಾದ್ಯಂತ ಮೇ 19ರಿಂದ ಜಾರಿಯಲ್ಲಿರುವ ಸಂಪೂರ್ಣ ಲಾಕ್‌ಡೌನ್‌ ಅನ್ನು 31ರವರೆಗೂ ವಿಸ್ತರಿಸಲಾಗಿದ್ದು, 24 ಮತ್ತು 25 ರಂದು ಮಾತ್ರ ಮಧ್ಯಾಹ್ನ 12ರವರೆಗೂ ಅವಶ್ಯಕ ಸಾಮಗ್ರಿಗಳ ಖರೀದಿಗೆ ಅವಕಾಶ ನೀಡಲಾಗುವುದು’ ಎಂದು ಜಿಲ್ಲಾಧಿಕಾರಿ ಪವನ್‌ಕುಮಾರ್‌ ಮಾಲಪಾಟಿ ತಿಳಿಸಿದರು. ‘ರಾಜ್ಯ ಸರ್ಕಾರವು ಜೂನ್‌ 7ರವರೆಗೂ ಲಾಕ್‌ಡೌನ್‌ ವಿಸ್ತರಿಸಿದ್ದು, ಜಿಲ್ಲೆಗಳಲ್ಲಿ ಕಠಿಣ ನಿರ್ಬಂಧಗಳನ್ನು ವಿಧಿಸಲು ಅಧಿಕಾರ ನೀಡಿದೆ. ಸಾರ್ವಜನಿಕರ ಆರೋಗ್ಯ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಜಿಲ್ಲೆಯಲ್ಲಿ …

Read More »

ವಿಜಯನಗರ; ಕೋವಿಡ್ ಕೇರ್‌ ಸೆಂಟರ್‌ಗೆ ಬರಲು ಒಪ್ಪದ ಗ್ರಾಮಸ್ಥರು

ವಿಜಯನಗರ, ಮೇ 23; ಗ್ರಾಮೀಣ ಪ್ರದೇಶದಲ್ಲಿ ಕೋವಿಡ್ ಸೋಂಕು ತಗುಲಿದ ವ್ಯಕ್ತಿಗಳು ಮನೆಯ ಆರೈಕೆಯಲ್ಲಿ ಚಿಕಿತ್ಸೆ ಪಡೆಯುವಂತಿಲ್ಲ. ಕಡ್ಡಾಯವಾಗಿ ಕೋವಿಡ್ ಕೇರ್ ಸೆಂಟರ್‌ಗೆ ದಾಖಲಾಗಬೇಕು ಎಂದು ಸರ್ಕಾರ ಹೇಳಿದೆ. ಆದರೆ ಜನರು ಇದಕ್ಕೆ ಒಪ್ಪುತ್ತಿಲ್ಲ. ಸೋಂಕಿತರನ್ನು ಕೋವಿಡ್ ಕೇರ್ ಸೆಂಟರ್‌ಗೆ ವರ್ಗಾಯಿಸಲು ಅಧಿಕಾರಿಗಳು ವಾಹನ ಸಮೇತ ಆಗಮಿಸಿದಾಗ ಅವರ ಜೊತೆ ಜನರು ವಾಗ್ವಾದ ಮಾಡಿ ವಾಪಸ್ ಕಳಿಸಿದ ಘಟನೆ ಶನಿವಾರ ವಿಜಯನಗರದಲ್ಲಿ ನಡೆದಿದೆ.   ಸಿರುಗುಪ್ಪ ತಾಲೂಕಿನ ಹಚ್ಚೋಳ್ಳಿ ಗ್ರಾಮದಲ್ಲಿ …

Read More »

ಆನ್​ಲೈನ್ ಡೇಟಿಂಗ್​ ಹೆಸರಲ್ಲಿ​ ವೇಶ್ಯಾವಾಟಿಕೆ: ಐವರು ಉಗಾಂಡ ಯುವತಿಯರ ಬಂಧನ

ಚೈತನ್ಯಪುರಿ: ಆನ್​ಲೈನ್​ ಡೇಟಿಂಗ್​ ಹೆಸರಿನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಉಗಾಂಡ ಮೂಲದ ಐವರು ಯುವತಿಯರನ್ನು ಹೈದರಾಬಾದ್​ನ ಚೈತನ್ಯಪುರಿ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಇನ್ಸ್​ಪೆಕ್ಟರ್​ ರವಿಕುಮಾರ್​, ವೇಶ್ಯಾವಾಟಿಕೆ ನಡೆಯುತ್ತಿರುವ ಬಗ್ಗೆ ಮಾಹಿತಿ ಪಡೆದು ಯುವತಿಯರನ್ನು ಬಂಧಿಸಿದ್ದೇವೆ. ಆರೋಪಿಗಳು ಲೊಕ್ಯಾಂಟೋ ಹೆಸರಿನ ಆನ್​ಲೈಟ್​ ಡೇಟಿಂಗ್​ ಆಯಪ್​ನಲ್ಲಿ ಫೋಟೋಗಳನ್ನು ಹರಿಬಿಟ್ಟು ಗ್ರಾಹಕರನ್ನು ಸೆಳೆಯುತ್ತಿದ್ದರು. ಶೋಧ ಕಾರ್ಯಾಚರಣೆ ನಡೆಸಿ ಅವರ ದಂಧೆಯನ್ನು ನಿಲ್ಲಿಸಿದ್ದೇವೆ ಎಂದು ತಿಳಿಸಿದ್ದಾರೆ. ಪೊಲೀಸರು ಗ್ರಾಹಕರ ವೇಷದಲ್ಲಿ ಆಯಪ್​ನಲ್ಲಿರುವ ನಂಬರ್​ …

Read More »

ಏಟಿಎಂ ಚಾಲಕನನ್ನು ಕೊಂದು 75 ಲಕ್ಷ ರೂ. ದೋಚಿದ್ದ ನಾಲ್ವರ ಬಂಧನ

ಬೆಂಗಳೂರು: ಎಟಿಎಂ ಕೇಂದ್ರಕ್ಕೆ ಹಣ ತುಂಬುವ ವಾಹನ ಚಾಲಕನಿಗೆ ಹಣದ ಆಮಿಷವೊಡ್ಡಿ ಹತ್ಯೆ ಮಾಡಿ ಸಕಲೇಶಪುರದ ಘಾಟ್‌ನಲ್ಲಿ ಎಸೆದು 75 ಲಕ್ಷ ರೂ. ದೋಚಿದ ನಾಲ್ವರನ್ನು ಗೋವಿಂದಪುರ ಪೊಲೀಸರು ಪ್ರಕರಣ ನಡೆದ ಮೂರು ವರ್ಷಗಳ ಬಳಿಕ ಪತ್ತೆ ಹಚ್ಚಿ ಬಂಧಿಸಿದ್ದಾರೆ. ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕಿನ ಎನ್.ಕುಮಾರ್ (23), ಮಧುಸೂದನ್ (23) ಮೈಸೂರಿನ ಕೆ.ಆರ್.ನಗರದ ಪ್ರಸನ್ನ (31) ಹಾಗೂ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಮಹೇಶ್ (22) ಬಂಧಿತರು. ಆರೋಪಿಗಳಿಂದ 3.5 …

Read More »

ಒಂದು ಸಾವಿರ ಆಮ್ಲಜನಕ ಸಾಂದ್ರಕ ಖರೀದಿ :ಸಚಿವ ಮುರುಗೇಶ್ ನಿರಾಣಿ

ರಾಮನಗರ, ಮೇ.23- ಒಂದು ಸಾವಿರ ಆಮ್ಲಜನಕ ಸಾಂದ್ರಕ ಖರೀದಿಸಲು ಯೋಜಿಸಲಾಗಿದ್ದು, ಮೊದಲು 100 ಆಮ್ಲಜನಕ ಸಾಂದ್ರಕ ಖರೀದಿಸಲಾಗಿದೆ ಅದರ ಕಾರ್ಯವೈಖರಿ ಗುಣ ಮಟ್ಟ ನೋಡಿ ಉಳಿದ ಆಮ್ಲಜನಕ ಸಾಂದ್ರಕವನ್ನು ಖರೀದಿಸಲಾಗುವುದು ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಮುರುಗೇಶ್ ನಿರಾಣಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಿಂದ ವಿಭಾಗ ಮಟ್ಟಕ್ಕೆ 2 ರಂತೆ 10 ಆಕ್ಸಿಜನ್ ಟ್ಸಾಂಕರ್, 10 ಆಕ್ಸಿಜನ್ ಜನರೇಟರ್‌ಗಳನ್ನು …

Read More »

ಇಂದಿನಿಂದ ಝೊಮ್ಯಾಟೋ ಉದ್ಯೋಗಿಗಳಿಗೆ ಕೊವೀಡ್ ಲಸಿಕೆ ವಿತರಣೆ: ಸಿಇಒ ಘೋಷಣೆ

ದೆಹಲಿ: ಕೊರೊನಾ ಸಾಂಕ್ರಾಮಿಕ ಸಂದರ್ಭದಲ್ಲೂ ಕೆಲಸ ಮಾಡಿದ ಝೊಮ್ಯಾಟೋ ಆನ್‍ಲೈನ್ ಫುಡ್ ಆರ್ಡರ್ ಕಂಪನಿಯ ಉದ್ಯೋಗಿಗಳು, ಸಿಬ್ಬಂದಿಗೆ ಉಚಿತವಾಗಿ ಕೊರೊನಾ ಲಸಿಕೆ ನೀಡಲಾಗುವುದು ಎಂದು ಸಂಸ್ಥೆಯ ಸಿಇಒ ದೀಪಿಂದರ್ ಗೋಯಲ್ ತಿಳಿಸಿದ್ದಾರೆ. ಹೀಗಾಗಿ ಜೊಮ್ಯಾಟೋದ ಸುಮಾರು 1.5 ಲಕ್ಷ ಉದ್ಯೋಗಿಗಳು ಕಂಪನಿಯ ವತಿಯಿಂದ ಉಚಿತವಾಗಿ ಕೊರೊನಾ ಲಸಿಕೆ ಪಡೆಯಲಿದ್ದಾರೆ. ರಾಷ್ಟ್ರರಾಜಧಾನಿಯಲ್ಲಿ ಈಗಾಗಲೇ ಲಸಿಕೆ ವಿತರಣೆ ನಡೆಯುತ್ತಿದ್ದು, ಸಾವಿರಕ್ಕೂ ಹೆಚ್ಚು ಮಂದಿ ವ್ಯಾಕ್ಸಿನೇಶನ್ ಮಾಡಿಸಿಕೊಂಡಿದ್ದಾರೆ. ಇಂದಿನಿಂದ ಮುಂಬೈ ಮತ್ತು ಬೆಂಗಳೂರಿನಲ್ಲಿರುವ ಝೊಮ್ಯಾಟೋ …

Read More »