ದಾವಣಗೆರೆ: ಕೊರೊನಾ ಅಟ್ಟಹಾಸ ನಿಯಂತ್ರಿಸಲು ರಾಜ್ಯದಲ್ಲಿ ಮೇ 24ರ ಬಳಿಕವೂ ಲಾಕ್ ಡೌನ್ ಮುಂದುವರೆಯುವುದು ಬಹುತೇಕ ಖಚಿತವಾಗಿದೆ. ಈ ಕುರಿತು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟಪಡಿಸಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿದ ಆರೋಗ್ಯ ಸಚಿವರು, ರಾಜ್ಯದಲ್ಲಿ ಲಾಕ್ ಡೌನ್ ವಿಸ್ತರಣೆ ಬಗ್ಗೆ ಬಹುತೇಕ ಸಚಿವರು ಒಲವು ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪನವರ ಇಚ್ಛೆ ಕೂಡ ಅದೇ ಆಗಿದೆ. ಮೇ 22 ಅಥವಾ 23ರಂದು ಲಾಕ್ ಡೌನ್ ನಿರ್ಧಾರ ಪ್ರಕಟವಾಗಲಿದೆ ಎಂದರು. ಗ್ರಾಮೀಣ ಪ್ರದೇಶಕ್ಕೂ …
Read More »ರಾಜ್ಯದಲ್ಲಿ ಲಾಕ್ ಡೌನ್ ವಿಸ್ತರಣೆ ಬಹುತೇಕ ಖಚಿತ..?
ಬೆಂಗಳೂರು: ರಾಜ್ಯದಲ್ಲಿ ಲಾಕ್ ಡೌನ್ ವಿಸ್ತರಣೆ ಬಹುತೇಕ ಖಚಿತವಾಗಿದ್ದು, ಮೇ 24ರ ಬಳಿಕ ಕರ್ನಾಟಕದಲ್ಲಿ ಕಠಿಣ ಲಾಕ್ ಡೌನ್ ಜಾರಿಗೆ ಬರಲಿದೆ ಎಂದು ತಿಳಿದುಬಂದಿದೆ. ರಾಜ್ಯದ ಭವಿಷ್ಯದ ಹಿತ ದೃಷ್ಟಿಯಿಂದ ಮುಂದಿನ 15 ದಿನಗಳ ಕಾಲ ರಾಜ್ಯದಲ್ಲಿ ಲಾಕ್ ಡೌನ್ ಜಾರಿ ಮಾಡಬೇಕು ಎಂದು ವಿಪತ್ತು ನಿರ್ವಹಣಾ ಅಧಿಕಾರಿಗಳ ತಂಡ ರಾಜ್ಯ ಸರ್ಕಾರವನ್ನು ಒತ್ತಾಯಿಸಿದೆ. ಮುಖ್ಯಕಾರ್ಯದರ್ಶಿ ರವಿಕುಮಾರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ರಾಜ್ಯದಲ್ಲಿನ ಕೊರೊನಾ ಸ್ಥಿತಿಗತಿ, ಲಾಕ್ ಡೌನ್ ವಿಸ್ತರಣೆ …
Read More »ಕೊರೊನಾ ಎರಡನೇ ಅಲೆ ಹೆಚ್ಚಳಕ್ಕೆ ಧಾರ್ಮಿಕ ಕಾರ್ಯಕ್ರಮಗಳು, ವಲಸೆ ಕಾರಣ: ಐಸಿಎಂಆರ್
ನವದೆಹಲಿ: ದೇಶದಲ್ಲಿ ಕೊರೊನಾ ಎರಡನೇ ಅಲೆ ಮಿತಿಮೀರಿ ಹಬ್ಬಲು ಧಾರ್ಮಿಕ ಕಾರ್ಯಕ್ರಮಗಳು ಮತ್ತು ವಲಸೆ ಪ್ರಮುಖ ಕಾರಣ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ(ಐಸಿಎಂಆರ್) ನೇತೃತ್ವದ ಅಧ್ಯಯನ ತಂಡವೊಂದು ವರದಿ ಮಾಡಿದೆ. ಐಸಿಎಂಆರ್ ಅಧ್ಯಯನದ ಪ್ರಕಾರ, ವಿದೇಶಿ ಪ್ರಯಾಣಿಕರು ಭಾರತಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿರುವುದು, ದೇಶದಲ್ಲಿನ ಜನರು ಆಂತರಿಕವಾಗಿ ವಲಸೆ ಹೋಗಿರುವುದು ಮತ್ತು ದೇಶದಾದ್ಯಂತ ನಡೆದ ಹಲವು ಧಾರ್ಮಿಕ ಕಾರ್ಯಕ್ರಮಗಳು ಕೊರೊನಾ ಎರಡನೇ ಅಲೆ ಹೆಚ್ಚಳಕ್ಕೆ ನೇರವಾದ ಕಾರಣ. ಮಿಂಟ್ …
Read More »ರೇಪ್ ಕೇಸ್ನಿಂದ ತೆಹಲ್ಕಾ ಮ್ಯಾಗಜಿನ್ ಸಂಸ್ಥಾಪಕ ತರುಣ್ ತೇಜ್ಪಾಲ್ ಖುಲಾಸೆ: ಗೋವಾ ನ್ಯಾಯಾಲಯ ಆದೇಶ
ಪಣಜಿ, ಮೇ 21: ಗೋವಾದ ಸೆಷನ್ಸ್ ನ್ಯಾಯಾಲಯದಿಂದ ಶುಕ್ರವಾರದಂದು ಖ್ಯಾತ ಪತ್ರಕರ್ತ, ತೆಹಲ್ಕಾ ಸಹ ಸಂಸ್ಥಾಪಕ, ಸಂಪಾದಕ ತರುಣ್ ತೇಜಪಾಲ್ ಗೆ ನೆಮ್ಮದಿಯ ಸುದ್ದಿ ಸಿಕ್ಕಿದೆ. ತಮ್ಮ ಸಂಸ್ಥೆಯ ಮಹಿಳಾ ಸಹೋದ್ಯೋಗಿ ಅಸಭ್ಯವಾಗಿ ನಡೆದುಕೊಂಡ ಘಟನೆಗೆ ಸಂಬಂಧಿಸಿದ ಪ್ರಕರಣದಿಂದ ತೇಜಪಾಲ್ ಖುಲಾಸೆಗೊಂಡಿದ್ದಾರೆ. ಗೋವಾದ ಸೆಷನ್ಸ್ ನ್ಯಾಯಾಲಯದ ಜಡ್ಜ್ ಕ್ಷಮಾ ಜೋಶಿ ಅವರು ಸಾಕ್ಷ್ಯಾಧಾರಗಳ ಕೊರತೆಯನ್ನು ಉಲ್ಲೇಖಿಸಿ, ತೇಜ್ ಪಾಲ್ ಅವರನ್ನು ಪ್ರಕರಣದಿಂದ ಖುಲಾಸೆಗೊಳಿಸಿ ಆದೇಶ ನೀಡಿದ್ದಾರೆ. ಈ ಪ್ರಕರಣ ಬೆಳಕಿಗೆ …
Read More »ಮುಂಬೈ ಬಾರ್ಜ್ ದುರಂತ- ಕ್ಯಾಪ್ಟನ್ ವಿರುದ್ಧ ಎಫ್ಐಆರ್
ಮುಂಬೈ, ಮೇ 21: ತೌಕ್ತೆ ಚಂಡಮಾರುತದ ಹೊಡೆತಕ್ಕೆ ಸಿಲುಕಿ ಮುಂಬೈನಿಂದ 35 ನಾಟಿಕಲ್ ಮೈಲುಗಳಷ್ಟು ದೂರದಲ್ಲಿ ಮುಳುಗಿದ್ದ ಬಾರ್ಜ್ ಪಿ -305 ರ ಕ್ಯಾಪ್ಟನ್ ವಿರುದ್ಧ ನಿರ್ಲಕ್ಷ್ಯದಿಂದ ಜನರ ಸಾವಿಗೆ ಕಾರಣದ ಆರೋಪದಲ್ಲಿ ಮುಂಬೈ ಪೊಲೀಸರು ಶುಕ್ರವಾರ ಎಫ್ಐಆರ್ ದಾಖಲಿಸಿದ್ದಾರೆ. 261 ಜನರನ್ನು ಹೊತ್ತೊಯ್ಯುತ್ತಿದ್ದ ಬಾರ್ಜ್ ಪಿ -305 ರ ಸೋಮವಾರ ತೌಕ್ತೆ ಚಂಡಮಾರುತದ ಹೊಡೆತಕ್ಕೆ ಸಿಲುಕಿ ಮುಳುಗಿತ್ತು. ಈ ಘಟನೆ ನಡೆದು ಐದು ದಿನಗಳಾಗಿದ್ದು ಈವರೆಗೆ 49 ಶವಗಳು …
Read More »ಬಾಗಲಕೋಟೆಯಿಂದ ಗದಗಕ್ಕೆ ಶವ ತಂದ ಕುಟುಂಬಸ್ಥರು, ಆದರೆ ಸೋಂಕಿತ ವೃದ್ಧನ ಶವ ಸಂಸ್ಕಾರಕ್ಕೆ ಗ್ರಾಮಸ್ಥರಿಂದ ವಿರೋಧ
ಗದಗ: ಜಿಲ್ಲೆಯುಲ್ಲಿ ಕೊರೊನಾ ಸೋಂಕಿತ ವೃದ್ಧನ ಶವ ಸಂಸ್ಕಾರಕ್ಕೆ ಗ್ರಮಸ್ಥರು ವಿರೋಧ ವ್ಯಕ್ತಪಡಿಸಿದ ಘಟನೆ ಗದಗ ಜಿಲ್ಲೆ ರೋಣ ತಾಲೂಕಿನ ಅಮರಗೋಳದಲ್ಲಿ ನಡೆದಿದೆ. ಮೂಲತಃ ಅಮರಗೋಳ ಗ್ರಾಮದ 72 ವರ್ಷದ ವೃದ್ಧ ಕೊರೊನಾಗೆ ಬಲಿಯಾಗಿದ್ದರು. ಗ್ರಮದಲ್ಲೇ ವೃದ್ಧನ ಶವ ಸಂಸ್ಕಾರ ಮಾಡಲು ಕುಟುಂಬಸ್ಥರು ಚಿಂತಿಸಿದ್ದರು. ಆದರೆ ಗ್ರಾಮದ ಜನ ಸಂಸ್ಕಾರಕ್ಕೆ ವಿರೋಧ ವ್ಯಕ್ತಪಡಿಸಿದ್ದು ಮಾತಿನ ಚಕಮಕಿ ನಡೆದಿದೆ. ಮೃತ ವೃದ್ಧ ಗದಗ ಬಿಟ್ಟು ಬಾಗಲಕೋಟೆ ಜಿಲ್ಲೆಯಲ್ಲಿ ಕೆಲಸ ಮಾಡುತ್ತಿದ್ದರು. ಕೊರೊನಾ …
Read More »ಉತ್ತರ ಕನ್ನಡ ಜಿಲ್ಲೆಯ ನಾಲ್ಕು ತಾಲೂಕುಗಳು ನಾಳೆಯಿಂದ ಸೀಲ್ಡೌನ್
ಉತ್ತರಕನ್ನಡ ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ ಹೆಚ್ಚಾಗಿದ್ದು, ದಿನೇದಿನೆ ಸೋಂಕಿತರ ಸಂಖ್ಯೆ ಏರುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ನಾಲ್ಕು ತಾಲೂಕುಗಳಲ್ಲಿ ನಾಳೆ ಬೆಳಗ್ಗೆ 10 ಗಂಟೆಯಿಂದ ಸೀಲ್ಡೌನ್ ಜಾರಿ ಮಾಡಲಾಗುವುದು ಎಂದು ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್ ತಿಳಿಸಿದ್ದಾರೆ. ಉತ್ತರಕನ್ನಡದ ಸಿದ್ದಾಪುರ, ಶಿರಸಿ, ಯಲ್ಲಾಪುರ ಮತ್ತು ಮುಂಡಗೋಡು ಪಟ್ಟಣಗಳು ನಾಳೆಯಿಂದ ಮೇ 24ರ ಸಂಜೆಯವರೆಗೆ ಸೀಲ್ಡೌನ್ ಆಗಲಿವೆ. ಇನ್ನು ಉಳಿದ ಎಲ್ಲ ತಾಲೂಕುಗಳು ಶನಿವಾರ ಮತ್ತು ಭಾನುವಾರ ಮಾತ್ರ ಸೀಲ್ಡೌನ್ ಆಗಲಿವೆ …
Read More »ಬಂಗಾರಕ್ಕೆ ಕನ್ನ ಹಾಕಿದ್ದ ಡಿ.ವೈ.ಎಸ್ ಪಿ ಜಾವೇದ ಮತ್ತು ಸಹಚರರಿಗೆ ಸಿಕ್ತು ರಾತ್ರೋರಾತ್ರಿ ವರ್ಗಾವಣೆ ಶಿಕ್ಷೆ : ಇಷ್ಟೆಲ್ಲಾ ಬೇಕಿತ್ತಾ
ಗೋಕಾಕ:ಬಂಗಾರಕ್ಕೆ ಕನ್ನ ಹಾಕಿದ್ದ ಡಿ.ವೈ.ಎಸ್ ಪಿ ಜಾವೇದ ಮತ್ತು ಸಹಚರರಿಗೆ ಸಿಕ್ತು ರಾತ್ರೋರಾತ್ರಿ ವರ್ಗಾವಣೆ ಶಿಕ್ಷೆ : ಇಷ್ಟೆಲ್ಲಾ ಬೇಕಿತ್ತಾ ಸಾಬಾ ಗೋಕಾಕ ಡಿ.ವೈ.ಎಸ್.ಪಿ ಯಾಗಿ ಬಂದಿದ್ದ ವಿಜಯಪುರ ಜಿಲ್ಲೆಯ ಶೆಗುಣಶಿ ಗ್ರಾಮದ ಜಾವೇದ ಇನಾಂದಾರ ತಮ್ಮ ಸ್ವ- ಗ್ರಾಮ ದಲ್ಲಿ ತನಗಾದ ಅವಮಾನಗಳನ್ನು ಗೆದ್ದು ಡಿ.ವೈ.ಎಸ್.ಪಿ ಹುದ್ದೆಗೆ ಏರಿ ಗ್ರಾಮದ ಜನರ ಹುಬ್ಬೇರಿಸಿದರು ಇವರ ಈ ಡಿಟ್ಟ ಕ್ರಮದಿಂದ ಅವರಿಗೆ ಅವಮಾನ ಮಾಡಿದ ಗ್ರಾಮದ ಜನರಿಂದಲೇ ಸತ್ಕಾರ ಮಾಡಿಸಿಕೊಂಡು …
Read More »ಬೇಡಿಕೆ ಕುಸಿತ; ಒಣಗಿ ಬೀಳುತ್ತಿರುವ ವಿಳ್ಯಾದೆಲೆ
ಕೊಲ್ಹಾರ: ವಿಳ್ಯಾದೆಲೆಗೆ ಕೊರೊನಾ ಪರಿಣಾಮ ಮಾರುಕಟ್ಟೆಯಲ್ಲಿ ಬೇಡಿಕೆ ಕುಸಿತವಾಗಿ ಧಾರಣೆಯೂ ಇಲ್ಲದಂತಾಗಿದೆ. ಎಲೆಬಳ್ಳಿ ಕೃಷಿಯನ್ನೇ ಅವಲಂಭಿಸಿರುವ ತಾಲ್ಲೂಕಿನ ನೂರಾರು ರೈತರು, ಕೃಷಿ ಕೂಲಿಕಾರ್ಮಿಕರು ಹಾಗೂ ವ್ಯಾಪಾರಿಗಳ ಬದುಕನ್ನು ಕೊರೊನಾ ಲಾಕಡೌನ್ ತೀವ್ರ ಸಂಕಷ್ಟಕ್ಕೆ ಸಿಲುಕಿಸಿದೆ. ಕೊಲ್ಹಾರ ತಾಲ್ಲೂಕಿನ ಕೂಡಗಿ, ತಳೇವಾಡ, ಕಲಗುರ್ಕಿ, ಮಸೂತಿ, ಮಲಘಾಣ, ಆಸಂಗಿ ಹಾಗೂ ಸುತ್ತಮುತ್ತಲಿನ ವಿವಿಧ ಗ್ರಾಮಗಳಲ್ಲಿ ಅಂದಾಜು 300 ಎಕರೆಯಷ್ಟು ಪ್ರದೇಶದಲ್ಲಿ ಎಳೆಬಳ್ಳಿ ಕೃಷಿ ಮಾಡಲಾಗಿದೆ. ಎಲೆಬಳ್ಳಿ ವರ್ಷಪೂರ್ತಿ ಪ್ರತಿ 15-20 ದಿನಗಳಿಗೊಮ್ಮೆ ಕಟಾವಿಗೆ …
Read More »ಕೋವಿಡ್ ಲಾಕ್ ಡೌನ್ ನಿಯಮ ಉಲ್ಲಂಘನೆ; ಸಿಎಂ ಪುತ್ರ ಬಿವೈ ವಿಜಯೇಂದ್ರ ವಿರುದ್ಧ ಎಫ್ಐಆರ್ ಗೆ ಒತ್ತಡ
ಮೈಸೂರು: ಕೋವಿಡ್ ತಡೆಯುವುದಕ್ಕಾಗಿ ಕಟ್ಟುನಿಟ್ಟಾದ ಲಾಕ್ಡೌನ್ ವಿಧಿಸಿದ್ದರು, ಈ ನಿಯಮ ಉಲ್ಲಂಘಿಸಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಪುತ್ರ ಬಿ. ವೈ. ವಿಜಯೇಂದ್ರ ನಡೆದುಕೊಂಡಿರುವ ಕಾರಣ ಅವರ ವಿರುದ್ಧ ಎಫ್ಐಆರ್ ದಾಖಲು ಮಾಡಬೇಕು ಎಂದು ಮೈಸೂರು ಜಿಲ್ಲಾ ಕಾಂಗ್ರೆಸ್ ಒತ್ತಾಯಿಸಿದೆ. ವೈ. ವಿಜಯೇಂದ್ರ ಮೇ 18ರಂದು ಕುಟುಂಬ ಸಮೇತರಾಗಿ ಶ್ರೀಕಂಠೇಶ್ವರ ದೇವಾಲಯಕ್ಕೆ ಭೇಟಿ ನೀಡಿದ್ದರು. ವಿಶೇಷ ಪೂಜೆ ಹಾಗೂ ಹೋಮ ನಡೆಸಿದ್ದರು. ಇದು ಡಿಸಾಸ್ಟರ್ ಮ್ಯಾನೇಜ್ಮೆಂಟ್ ಕಾಯ್ದೆ 2005, ಸೆಕ್ಷನ್ …
Read More »
Laxmi News 24×7