Breaking News

ರಾಜ್ಯ

ಕೊರೊನಾ ಸೋಂಕಿಗೆ ಆಯುರ್ವೇದ ಔಷಧ : ವೈದ್ಯನ ಮನೆ ಮುಂದೆ ಮುಗಿಬಿದ್ದ ಜನರು

ಹೈದರಾಬಾದ್: ಕೊರೊನಾ ಸೋಂಕಿಗೆ ವೈದ್ಯರೊಬ್ಬರು ಆಯುರ್ವೇದ ಔಷಧವೊಂದನ್ನು ಕಂಡುಹಿಡಿದಿದ್ದು, ಔಷಧಕ್ಕಾಗಿ ಜನರು ವೈದ್ಯನ ಮನೆ ಮುಂದೆ ಮುಗಿಬಿದ್ದ ಘಟನೆ ಆಂಧ್ರಪ್ರದೇಶದ ನೆಲ್ಲೂರು ಜಿಲ್ಲೆಯಲ್ಲಿ ನಡೆದಿದೆ. ಆಯುರ್ವೇದ ವೈದ್ಯ ಆನಂದಯ್ಯ ಎಂಬುವವರು ಕೊರೊನಾ ಸೋಂಕಿಗೆ ಔಷಧವನ್ನು ಕಂಡು ಹಿಡಿದಿದ್ದು, ಸೋಂಕಿತರ ಚಿಕಿತ್ಸೆಗಾಗಿ ಈ ಔಷಧ ನೀಡುತ್ತಿದ್ದಾರೆ. ಇನ್ನು ಔಷಧಿಗಾಗಿ ಜನರು ಆಗಮಿಸುತ್ತಿದ್ದು, ಸ್ಥಳದಲ್ಲಿ 10 ಸಾವಿರಕ್ಕೂ ಅಧಿಕ ಜನರು ಕಿಲೋಮೀಟರ್ ಗಟ್ಟಲೇ ಉದ್ದ ಸರತಿ ಸಾಲಿನಲ್ಲಿ ನಿಂತಿದ್ದು, ಈ ವಿಡಿಯೋ ಸಾಮಾಜಿಕ …

Read More »

ಡಾಕ್ಟರ್ ಆದ ಫಾರ್ಮಸಿಸ್ಟ್‍ಗೆ ಖಾಕಿ ಟ್ರಿಟ್ಮೆಂಟ್ !

ಚಿತ್ರದುರ್ಗ :ಸರ್ಕಾರಿ ಆಸ್ಪತ್ರೆಯಲ್ಲಿ ಫಾರ್ಮ್ ಸಿಸ್ಟ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ವ್ಯಕ್ತಿಯೊಬ್ಬ ನಡೆಸುತಿದ್ದ ಖಾಸಗಿ ಕ್ಲಿನಿಕ್ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಗ್ರಾಮದಲ್ಲಿ ಖಾಸಗಿ ಕ್ಲಿನಿಕ್ ನಡೆಸುತ್ತಿದ್ದ ವಿವೇಕಾನಂದನನ್ನು ಬಂಧಿಸಲಾಗಿದೆ. ಖಚಿತ ಮಾಹಿತಿ ಮೇರೆಗೆ ಅಧಿಕಾರಿಗಳ ತಂಡ ಶುಕ್ರವಾರ ತಡರಾತ್ರಿ ದಾಳಿ ನಡೆಸಿದೆ. ದಾಳಿ ವೇಳೆ ಸಾವಿರಾರು ರೂ. ಮೌಲ್ಯದ ಔಷಧಿಗಳು ಹಾಗೂ ನಗದು ವಶಪಡಿಸಿಕೊಂಡಿದ್ದಾರೆ. ಹಿರಿಯೂರಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಫಾರ್ಮಾಸಿಸ್ಟ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ …

Read More »

ಶಿವಮೊಗ್ಗ: ಜಿಲ್ಲೆಯಲ್ಲಿ ಕಪ್ಪು ಶಿಲೀಂಧ್ರ ಸೋಂಕಿನಿಂದ ಒಬ್ಬರು ಸಾವು

ಶಿವಮೊಗ್ಗ: ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ 11 ಜನರಿಗೆ ಕಪ್ಪು ಶಿಲೀಂಧ್ರ ಕಾಯಿಲೆ ಇರುವುದು ದೃಢಪಟ್ಟಿದ್ದು, ಒಬ್ಬರು ಮೃತಪಟ್ಟಿದ್ದಾರೆ. ಮೃತ ವ್ಯಕ್ತಿ ಶಿವಮೊಗ್ಗ ತಾಲೂಕಿನವರು. ಇದೇ ಕಾಯಿಲೆಯಿಂದ ಬಳಲುತ್ತಿರುವ ಮತ್ತೊಬ್ಬರ ಸ್ಥಿತಿ ಗಂಭೀರವಾಗಿದೆ. ಆದರೆ, ಕಪ್ಪು ಶಿಲೀಂಧ್ರ ಕಾಯಿಲೆಯಿಂದಲೇ ಮೃತಪಟ್ಟಿರುವುದನ್ನು ಆಸ್ಪತ್ರೆ ಆಡಳಿತ ಮಂಡಳಿ ದೃಢಪಡಿಸಿಲ್ಲ. ಕಪ್ಪು ಶಿಲೀಂಧ್ರ ರೋಗಿಗಳ ಚಿಕಿತ್ಸೆಗಾಗಿ ಮೆಗ್ಗಾನ್‌ ಆಸ್ಪತ್ರೆಯ ಇಎನ್‌ಟಿ ವಿಭಾಗದ ಮುಖ್ಯಸ್ಥ ಡಾ.ಗಂಗಾಧರ್ ನೇತೃತ್ವದಲ್ಲಿ ಏಳು ತಜ್ಞ ವೈದ್ಯರನ್ನು ಒಳಗೊಂಡ ತಂಡ ರಚಿಸಲಾಗಿದೆ. …

Read More »

ಧಾರವಾಡ: ಸುಮಾರು 15 ಸಾವಿರ ಮೃತದೇಹಗಳ ವಿಧಿ ವಿಧಾನ ಮಾಡಿದ್ದ ಮುಸ್ತಾಕ್ ಅಹ್ಮದ್ ನಿಧನ

ಧಾರವಾಡ: ಧಾರವಾಡ ತಾಲೂಕು ಬ್ರಾಹ್ಮಣ ಸಭಾ ಕೊಡುಗೆಯಾಗಿ ನೀಡಿದ್ದ ಅಂಬ್ಯುಲೆನ್ಸ್ ಮೂಲಕ ಕಳೆದ 21 ವರ್ಷಗಳಲ್ಲಿ ಸುಮಾರು 15 ಸಾವಿರ ಮೃತದೇಹಗಳನ್ನು ಸಾಗಿಸಿ ಅವುಗಳ ಅಂತಿಮ ವಿಧಿ ವಿಧಾನ ಮಾಡಿದ್ದ ಮುಸ್ತಾಕ್ ಅಹ್ಮದ್ ಖಾತ್ರಿ ಅವರು ಇತ್ತೀಚೆಗೆ ನಿಧನರಾಗಿದ್ದಾರೆ. ಧಾರವಾಡ ತಾಲೂಕು ಬ್ರಾಹ್ಮಣ ಸಭಾ ಮುಸ್ತಾಕ್ ಅಹ್ಮದ್ ಖಾತ್ರಿಗೆ ‘ಮರಳಿ ಮಣ್ಣಿಗೆ’ ಎಂಬ ಅಂಬ್ಯುಲೆನ್ಸ್ ಒಂದನ್ನು ಕೊಡುಗೆಯಾಗಿ ನೀಡಿತ್ತು. ಕಳೆದ 21 ವರ್ಷಗಳಿಂದ ಈ ಅಂಬ್ಯುಲೆನ್ಸ್ ಚಾಲಕನಾಗಿ ಕೆಲಸ ಮಾಡುತ್ತಿದ್ದ …

Read More »

ಬಿಟಿಪಿಎಸ್‌ನ 60 ಸಿಬ್ಬಂದಿಗೆ ಕೋವಿಡ್‌!

ಬಳ್ಳಾರಿ: ತಾಲೂಕಿನ ಕುಡತಿನಿ ಬಳಿಯ ಬಳ್ಳಾರಿ ಶಾಖೋತ್ಪನ್ನ ವಿದ್ಯುತ್‌ ಕೇಂದ್ರಕ್ಕೂ (ಬಿಟಿಪಿಎಸ್‌) ಮಹಾಮಾರಿ ಕೋವಿಡ್‌ ಸೋಂಕು ಆವರಿಸಿದ್ದು, ಸಿಬ್ಬಂದಿಗಳಲ್ಲಿ ಆತಂಕ ಸೃಷ್ಟಿಸಿದೆ. ಕೇಂದ್ರದಲ್ಲಿನ ಮೂರು ಘಟಕಗಳು ಈಗಾಗಲೇ ಸ್ಥಗಿತಗೊಂಡಿವೆ. ಶೇ.50ರಷ್ಟುಸಿಬ್ಬಂದಿ ಕೆಲಸ ಮಾಡಿಸಿಕೊಳ್ಳುವಂತೆ ರಾಜ್ಯ ಸರ್ಕಾರ ಸುತ್ತೋಲೆಹೊರಡಿಸಿದ್ದರೂ ಮೇಲಧಿಕಾರಿಗಳುಜಾರಿಗೊಳಿಸದಿರುವುದು ಸಿಬ್ಬಂದಿ ಆತಂಕಕ್ಕೆ ಕಾರಣವಾಗಿದೆ. ತಾಲೂಕಿನ ಬಳ್ಳಾರಿ ಶಾಖೋತ್ಪನ್ನ ವಿದ್ಯುತ್‌ ಕೇಂದ್ರದ ಸಿಬ್ಬಂದಿಗಳಲ್ಲಿ ಕೋವಿಡ್‌ ಸೋಂಕಿನ ಆತಂಕ ದಿನೇದಿನೆ ಹೆಚ್ಚುತ್ತಿದೆ. ಕೇಂದ್ರದ ವಿವಿಧ ಘಟಕಗಳಲ್ಲಿ ಕರ್ತವ್ಯನಿರ್ವಹಿಸುವ 60ಕ್ಕೂ ಹೆಚ್ಚು ಸಿಬ್ಬಂದಿಗೆ ಕೋವಿಡ್‌ …

Read More »

ಲಾಕ್‍ಡೌನ್, ಬೇಸರ ಕಳೆಯಲು ಮೀನು ಹಿಡಿಯಲು ತೆರಳಿದ ಇಬ್ಬರೂ ನೀರುಪಾಲು

ಕಾರವಾರ: ಲಾಕ್‍ಡೌನ್ ನಲ್ಲಿ ಬೇಸರ ಕಳೆಯಲೆಂದು ಮೀನು ಹಿಡಿಯಲು ತೆರಳಿದ್ದ ಇಬ್ಬರು ಯುವಕರು ನೀರುಪಾಲಾಗಿರುವ ಆಘಾತಕಾರಿ ಘಟನೆ ಅಂಕೋಲಾ ತಾಲೂಕಿನ ಬಸಾಕಲ್ ಗುಡ್ಡದ ಸಮೀಪ ನಡೆದಿದೆ. ಅಂಕೋಲಾದ ಬೆಳಾಬಂದರ್ ನಿವಾಸಿ ಸಂದೀಪ ಬೀರಪ್ಪ ನಾಯ್ಕ (30), ಚೇತನ ನಾಗೇಶ ನಾಯ್ಕ (23) ನೀರುಪಾಲಾದವರಾಗಿದ್ದು, ಸಂದೀಪ ನಾಯ್ಕ ಮೃತ ದೇಹ ಪತ್ತೆಯಾಗಿದೆ. ನಾಪತ್ತೆಯಾದ ಇನ್ನೋರ್ವನಿಗಾಗಿ ಹುಡುಕಾಟ ನಡೆಸಲಾಗುತ್ತಿದೆ. ಲಾಕ್‍ಡೌನ್ ಹಿನ್ನೆಲೆ ಮನೆಯಲ್ಲಿದ್ದು ಬೇಸರಗೊಂಡಿದ್ದ ಇಬ್ಬರು ಯುವಕರು ಮೀನು ಹಿಡಿಯಲೆಂದು ಬಸಾಕಲ್ ಸಮೀಪ …

Read More »

ಕೋವಿಡ್ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಚಿತ್ರಕ್ಕೆ ಛತ್ತೀಸ್‌ಗಢ ಕೊಕ್

ರಾಯಪುರ : ಕೋವಿಡ್-19 ಲಸಿಕೆ ಪ್ರಮಾಣಪತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಭಾವಚಿತ್ರ ಹಾಕಿರುವ ಬಗ್ಗೆ ವ್ಯಾಪಕ ಪ್ರಶ್ನೆಗಳು ಎದ್ದಿರುವ ಬೆನ್ನಲ್ಲೇ, ಕಾಂಗ್ರೆಸ್ ಆಡಳಿತವಿರುವ ಛತ್ತೀಸ್‌ಗಢ ಸರ್ಕಾರ 18-44 ವರ್ಷ ವಯೋಮಿತಿಯ ಲಸಿಕೆ ಹಾಕಿಕೊಂಡವರಿಗೆ ತನ್ನದೇ ಪ್ರಮಾಣಪತ್ರ ನೀಡಲು ಆರಂಭಿಸಿದೆ. ಇದರಲ್ಲಿ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರ ಭಾವಚಿತ್ರವಿದೆ. 18-44 ವಯೋಮಿತಿಯವರು ಲಸಿಕೆಗೆ ನೋಂದಾಯಿಸಿಕೊಳ್ಳಲು ರಾಜ್ಯ ಸರ್ಕಾರ ಈಗಾಗಲೇ ತನ್ನದೇ ಸಿಜಿಟೀಕಾ ಎಂಬ ಪೋರ್ಟೆಲ್ ನಿಯೋಜಿಸಿಕೊಂಡಿದ್ದು, ಲಸಿಕೆ ಹಾಕಿಕೊಂಡವರಿಗೆ ಕೇಂದ್ರ ಸರ್ಕಾರ …

Read More »

ಪ್ರಶ್ನಾತೀತ ಪ್ರಧಾನಿ ದೇಶದ ಹಿತಕ್ಕೆ ಹಾನಿ: ಕೃಷ್ಣ ಬೈರೇಗೌಡ

ಪ್ರಧಾನಿ ಪ್ರಶ್ನಾತೀತರೂ ಅಲ್ಲ, ಹಾಗೆ ಆಗಲೂಬಾರದು. ಅದರಿಂದ ಜನಹಿತ ಮತ್ತು ಪ್ರಜಾಪ್ರಭುತ್ವ ಕ್ಷೀಣಿಸುತ್ತದೆ. ಅಂಧ ಸರ್ವಾಧಿಕಾರ ಬೆಳೆಯುತ್ತದೆ. ಅದು ದೇಶಕ್ಕೆ ಹಾನಿ. ಪ್ರಧಾನಿಯನ್ನು ಅಥವಾ ಸರ್ಕಾರವನ್ನು ಪ್ರಶ್ನಿಸುವುದು ದೇಶದ ಬಗ್ಗೆ ನೈಜ ಕಾಳಜಿ ಹೊಂದಿರುವ ಭಾರತೀಯನ ಹಕ್ಕು ಹಾಗೂ ಕರ್ತವ್ಯ. ಇದರಿಂದ ದೇಶ ಮತ್ತಷ್ಟು ಬಲಿಷ್ಠ, ಸದೃಢ ಅಭಿವೃದ್ಧಿಯನ್ನು ಸಾಧಿಸಬಹುದು ನಿಜ, ‘ಪ್ರಜಾಪ್ರಭುತ್ವ ಒಂದು ಕೆಟ್ಟ ಆಡಳಿತ ವ್ಯವಸ್ಥೆ. ಆದರೆ ಅದು ಇಲ್ಲಿಯವರೆಗೂ ಕಂಡಂತಹ ಇತರ ಎಲ್ಲಾ ಆಡಳಿತ ವ್ಯವಸ್ಥೆಗಳಿಗಿಂತ …

Read More »

ಅಬ್ಬಬ್ಬಾ..! 707 ಹುದ್ದೆಗಳಿಗೆ 4.71 ಲಕ್ಷ ಅರ್ಜಿ

ನೂರೈವತ್ತು ಕೋಟಿ ಜನಸಂಖ್ಯೆ ಇರುವ ಭಾರತದಲ್ಲಿ ಪುಟ್ಟದೊಂದು ಕೆಲಸ ಸಿಕ್ಕರೆ ಸಾಕು ಎಂದು ಹಾತೊರೆಯುವ ಕೋಟ್ಯಂತರ ಜೀವಗಳನ್ನು ನೋಡುತ್ತಲೇ ಇರುತ್ತೇವೆ. ಅತಿ ಸಣ್ಣ, ಸಣ್ಣ ಹಾಗೂ ಮಧ್ಯಮ ಉದ್ಯಮಗಳ ಸಂಪರ್ಕ ಪೋರ್ಟಲ್‌ನಲ್ಲಿ ಈ ವಾಸ್ತವದ ಕರಾಳ ರೂಪ ಕಣ್ಣಿಗೆ ರಾಚುವಂತೆ ಕಂಡಿದೆ. ಮೇ 21ರಂದು ಕಂಡಂತೆ 707 ಹುದ್ದೆಗಳಿಗೆ 4,71,922 ಮಂದಿ ಅರ್ಜಿ ಸಲ್ಲಿಸಿದ್ದಾರೆ. ಎಂಎಸ್‌ಎಂಇ ಸಂಪರ್ಕ ಪೋರ್ಟಲ್‌ಗೆ ರಾಷ್ಟ್ರಪತಿ ರಾಮನಾಥ್‌ ಕೋವಿಂದ್ ಅವರು ಜೂನ್ 2018ರಲ್ಲಿ ಚಾಲನೆ ಕೊಟ್ಟಿದ್ದರು. …

Read More »

ಮಾಸ್ಕ್ ಧರಿಸಿ ಅಂದಿದ್ದಕ್ಕೆ ಗ್ರಾ.ಪಂ ಸದಸ್ಯನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ

ಚಿಕ್ಕಬಳ್ಳಾಪುರ: ಹಳ್ಳಿಗಳಲ್ಲಿ ಕೊರೊನಾ ಶರವೇಗದ ಸ್ವರೂಪ ಪಡೆದುಕೊಳ್ಳುತ್ತಿದೆ. ಕೊರೊನಾ ತಡೆಗಟ್ಟುವ ಸಲುವಾಗಿ ಯುವಕರಿಗೆ ಮಾಸ್ಕ್ ಧರಿಸಿ ಅಂತ ಹೇಳಿದ್ದನ್ನೇ ನೆಪವಾಗಿಟ್ಟುಕೊಂಡು ರಾಜಕೀಯ ಜಿದ್ದಿಗೆ ಮಾರಕಾಸ್ತ್ರಗಳಿಂದ ಗ್ರಾಮ ಪಂಚಾಯತಿ ಸದಸ್ಯನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕು ಚೀಡಚಿಕ್ಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮ ಪಂಚಾಯತ್ ಸದಸ್ಯ ತಮ್ಮೇಗೌಡ ಹಾಗೂ ಈತನನ್ನ ರಕ್ಷಿಸಲು ಹೋದ ಮಂಜು ಶಂಕರ್ ಹಲ್ಲೆಗೊಳಗಾದವರಾಗಿದ್ದಾರೆ. ಇದೇ ಗ್ರಾಮದ ಮರಿಯಪ್ಪರ ಮಗ ಚಾಣಕ್ಯ ಗೌಡ, ಅಕ್ಷಯ್ ಗೌಡ, …

Read More »