Breaking News

ರಾಜ್ಯ

ಗ್ರಾಮ ಪಂಚಾಯತ ಮಟ್ಟದಲ್ಲಿ ಕೋವಿಡ್ ಕೇರ್ ಸೆಂಟರ್ ಗಳನ್ನು ಪ್ರಾರಂಭಿಸಲಾಗುವುದು : ಜಿಲ್ಲಾಧಿಕಾರಿ ಎಂ ಜಿ ಹಿರೇಮಠ 

ಮಾಂಜರಿ  – ಕೊರೋನಾ ಪಾಸಿಟಿವ್ ಧೃಢಪಟ್ಟ ವ್ಯಕ್ತಿಗಳು ಹೋಂ ಕ್ವಾರೆಂಟಿನಾಗಿರುವುದರಿಂದ ಮನೆಯ ಜನರಿಗೆಲ್ಲಾ ಸೋಂಕು ಹರಡುವ ಲಕ್ಷಣಗಳು ಗೋಚರಿಸುವುದರಿಂದ ಇದನ್ನು ತೆಡಗಟ್ಟುವ ಉದ್ದೇಶದಿಂದ ಗ್ರಾಮ ಪಂಚಾಯತ ಮಟ್ಟದಲ್ಲಿ ಕೋವಿಡ್ ಕೇರ್ ಸೆಂಟರ್ ಗಳನ್ನು ಪ್ರಾರಂಭಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಂ ಜಿ ಹಿರೇಮಠ  ತಿಳಿಸಿದರು. ಚಿಕ್ಕೋಡಿ ತಾಲೂಕಿನ ಸುಕ್ಷೇತ್ರ ಯಡೂರ ಗ್ರಾಮದಲ್ಲಿ ಶ್ರೀಶೈಲ ಜಗದ್ಗುರುಗಳಾದ ಡಾಕ್ಟರ್ ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು, ಹುಕ್ಕೇರಿಯ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮೀಜಿ ಗಳ ಆಶೀರ್ವಾದ ಪಡೆದು ಯಡೂರು …

Read More »

ಬೆಳಗಾವಿ ಜಿಲ್ಲೆಯಲ್ಲಿ 3 ದಿನ ಸಂಪೂರ್ಣ ಲಾಕ್ ಡೌನ್:ಜಿಲ್ಲಾಧಿಕಾರಿ

ಬೆಳಗಾವಿ – ಬೆಳಗಾವಿ ಜಿಲ್ಲೆಯಲ್ಲಿ 3 ದಿನ ಸಂಪೂರ್ಣ ಲಾಕ್ ಡೌನ್ ಘೋಷಿಸಿ ಜಿಲ್ಲಾಧಿಕಾರಿಗಳು ಇಂದು ಹೊಸ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮೇ 22, 23 ಹಾಗೂ 24ರಂದು ಜಿಲ್ಲೆಯಲ್ಲಿ ಸಂಪೂರ್ಣ ಲಾಕ್ ಡೌನ್ ಘೋಷಿಸಿ ಆದೇಶ ಹೊರಡಿಸಲಾಗಿದೆ. 22ರ ಬೆಳಗ್ಗೆ 6 ಗಂಟೆಯಿಂದ 24ರ ಬೆಳಗ್ಗೆ 6 ಗಂಟೆಯವರೆಗೂ ಲಾಕ್ ಡೌನ್ ಇರಲಿದೆ. ಇದು ಈಗಾಗಲೆ ಜಾರಿಯಲ್ಲಿರುವ ಲಾಕ್ …

Read More »

ಸಿಎಂ ಬಿಎಸ್‌ವೈ ಸುದ್ದಿಗೋಷ್ಠಿ: ಲಾಕ್​ಡೌನ್ ವಿಸ್ತರಣೆ ಜೊತೆಗೆ ಪರಿಹಾರದ ಪ್ಯಾಕೇಜ್ ಘೋಷಣೆ ಸಾಧ್ಯತೆ

ಬೆಂಗಳೂರು, ಮೇ 19: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮೇ 19ರಂದು ಬೆಳಗ್ಗೆ 11.30ಕ್ಕೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಚಿವ ಸಂಪುಟದ ಹಿರಿಯ ಸಹದ್ಯೋಗಿಗಳೊಂದಿಗೆ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ರಾಜ್ಯದಲ್ಲಿ ಮೇ 24ರವರೆಗೆ ಜಾರಿಯಲ್ಲಿರುವ ಲಾಕ್‍ಡೌನ್ ಅನ್ನು ವಿಸ್ತರಣೆ ಮಾಡುವುದು ಹಾಗೂ ಆರ್ಥಿಕವಾಗಿ ದುರ್ಬಲವಾಗಿರುವ ವರ್ಗಗಳಿಗೆ ಪರಿಹಾರದ ಪ್ಯಾಕೇಜ್ ಘೋಷಣೆ ಮಾಡುವ ಸಾಧ್ಯತೆಗಳಿವೆ. ಗ್ರಾಮೀಣ ಪ್ರದೇಶದಲ್ಲಿ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಮೇ 24ರ ಬೆಳಗ್ಗೆ 6 ಗಂಟೆಯವರೆಗೆ ಜಾರಿಯಲ್ಲಿರುವ …

Read More »

ಬೆಂಗಳೂರಿನಲ್ಲಿ ರೆಮ್‌ಡೆಸಿವಿರ್‌ ನ ಖಾಲಿ ಬಾಟಲಿಯಲ್ಲಿ ಗ್ಲುಕೋಸ್ ತುಂಬಿಸಿ ಮಾರಾಟ ಮಾಡುತ್ತಿದ್ದ ಓರ್ವ ವೈದ್ಯ ಸಹಿತ ವಾರ್ಡ್‍ಬಾಯ್ ಬಂಧನ

ಬೆಂಗಳೂರು – ನಗರದಲ್ಲಿ ನಕಲಿ ರೆಮ್‌ಡೆಸಿವಿರ್‌ ಚುಚ್ಚುಮದ್ದನ್ನು ಮಾರಾಟ ಮಾಡಿದ ಖಾಸಗಿ ಆಸ್ಪತ್ರೆಯ ವೈದ್ಯ. ಡಾ.ಸಾಗರ ಮತ್ತು ವಾರ್ಡ್‍ಬಾಯ್ ಕೃಷ್ಣ ಇವರನ್ನು ಪೊಲೀಸರು ಬಂಧಿಸಿದ್ದಾರೆ. ಇವರಿಬ್ಬರು ‘ರೋಹಿತ್’ ಎಂಬ ಹೆಸರಿನಲ್ಲಿ ಸರಕಾರದಿಂದ ರೆಮ್‌ಡೆಸಿವಿರ್‌ ಚುಚ್ಚುಮದ್ದನ್ನು ತರಿಸುತ್ತಿದ್ದರು ಮತ್ತು ಅವುಗಳಲ್ಲಿ ಅರ್ಧವನ್ನು ರೋಗಿಗಳಿಗಾಗಿ ಬಳಸಲಾಗುತ್ತಿತ್ತು ಮತ್ತು ಉಳಿದವುಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದರು. ಅಷ್ಟೇ ಅಲ್ಲ, ಅವರು ಖಾಲಿ ರೆಮ್‌ಡೆಸಿವಿರ್‌ ಬಾಟಲಿಗಳಲ್ಲಿ ಗ್ಲೂಕೋಸ್ ಅನ್ನು ತುಂಬಿಸಿ ೨೦,೦೦೦ ರೂಪಾಯಿಗೂ ಹೆಚ್ಚು ದರದಲ್ಲಿ ಮಾರಾಟ …

Read More »

ಪ್ರಧಾನಿ ನರೇಂದ್ರ ಮೋದಿಯವರು ಪುಕ್ಕಟೆ ಉಪದೇಶ ನೀಡುವ ಬದಲಿಗೆ ಕೊರೊನಾದಿಂದ ತತ್ತರಿಸುತ್ತಿರುವ ರಾಜ್ಯದ ನೆರವಿಗೆ ಧಾವಿಸಿ

ದಾವಣಗೆರೆ: ಪ್ರಧಾನಿ ನರೇಂದ್ರ ಮೋದಿಯವರು ಪುಕ್ಕಟೆ ಉಪದೇಶ ನೀಡುವ ಬದಲಿಗೆ ಕೊರೊನಾದಿಂದ ತತ್ತರಿಸುತ್ತಿರುವ ರಾಜ್ಯದ ನೆರವಿಗೆ ಧಾವಿಸಿ ಅಗತ್ಯ ಸೌಲಭ್ಯಗಳನ್ನು ಒದಗಿಸಬೇಕು ಎಂದು ಕೆಪಿಸಿಸಿ ವಕ್ತಾರ ಡಿ. ಬಸವರಾಜ್‌ ತಾಕೀತು ಮಾಡಿದ್ದಾರೆ. ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಪ್ರತಿ ನಿತ್ಯ ಸಾವಿರಾರು ಜನರು ಕೊರೊನಾ ಸೋಂಕಿಗೆ ಒಳಗಾಗುತ್ತಿದ್ದಾರೆ ಮತ್ತು ಸಾವನ್ನಪ್ಪುತ್ತಿದ್ದಾರೆ. ಮೋದಿಯವರು ಖುದ್ದು ರಾಜ್ಯಕ್ಕೆ ಭೇಟಿ ನೀಡಿ ಲಸಿಕೆ, ಆಕ್ಸಿಜನ್‌, ವೆಂಟಿಲೇಟರ್‌ ಇತರೆ ಅಗತ್ಯ ಸೌಲಭ್ಯಗಳ ಒದಗಿಸಬೇಕು. ಎಲ್ಲಿಯೋ …

Read More »

ರೈತರು, ಆಟೋ, ಟ್ಯಾಕ್ಸಿ ಚಾಲಕರು ಸೇರಿ ಸಂಕಷ್ಟಕ್ಕೆ ಒಳಗಾದವರಿಗೆ ಸಿಎಂ ಯಡಿಯೂರಪ್ಪ ಸಿಹಿ ಸುದ್ದಿ.?

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ತಡೆಗೆ ಲಾಕ್ ಡೌನ್ ಜಾರಿ ಮಾಡಿದ್ದು, ಮೇ 24ರ ನಂತರವೂ ಲಾಕ್ಡೌನ್ ಮುಂದುವರೆಯಲಿರುವ ಹಿನ್ನಲೆಯಲ್ಲಿಶ್ರಮಿಕ ವರ್ಗಕ್ಕೆ ಪ್ಯಾಕೇಜ್ ಘೋಷಣೆ ಮಾಡುವ ಸಾಧ್ಯತೆ ಇದೆ. ಕೊರೋನಾದಿಂದ ಸಂಕಷ್ಟಕ್ಕೆ ಸಿಲುಕಿದವರಿಗೆ ಮುಖ್ಯಮಂತ್ರಿ ಯಡಿಯೂರಪ್ಪ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬಹುದು. ಇಂದು ಹಿರಿಯ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಸಿಎಂ ಸಭೆ ನಡೆಸಲಿದ್ದು, ಕಳೆದ ವರ್ಷ ಘೋಷಿಸಿದಂತೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಲಿದ್ದಾರೆ ಎಂದು ಹೇಳಲಾಗಿದೆ. ಆಟೋ, ಟ್ಯಾಕ್ಸಿ ಚಾಲಕರು, …

Read More »

ರಷ್ಯಾದ ಸ್ಪುಟ್ನಿಕ್ ಕೊರೋನಾ ಲಸಿಕೆ ಇನ್ನು ಮುಂದೆ ಧಾರವಾಡದಲ್ಲೇ ತಯಾರಾಗಲಿದೆ!

ಧಾರವಾಡ : ಕೊರೋನಾ ತನ್ನ ಅಟ್ಟಹಾಸ ಪ್ರದರ್ಶನ ಮಾಡುತ್ತಿರೊ ಹಿನ್ನೆಲೆ‌ ಜನರಿಗೆ ಸಂಜೀವಿನಿಯಾದದ್ದು ಕೋವಿಡ್ ಲಸಿಕೆ. ಈ ಲಸಿಕೆ ಪಡೆಯಲು ಜನರು ನಾಮುಂದು ತಾಮುಂದು ಎನ್ನುತ್ತಿದ್ದಾರೆ. ಅದರಲ್ಲಿಯೂ ರಷ್ಯಾ ಮೂಲದ ಸ್ಪುಟ್ನಿಕ್ ವ್ಯಾಕ್ಸಿನ್ ಗೆ ಎಲ್ಲಿಲ್ಲದ ಬೇಡಿಕೆ‌ ಇದೆ. ಆದ್ರೆ ಈ ಸ್ಪುಟ್ನಿಕ್ ಲಸಿಕೆ ಇನ್ನೂ ಮುಂದೆ‌ ಧಾರವಾಡದ ಕೈಗಾರಿಕೆಯೊಂದರಲ್ಲಿ ತಯಾರಾಗಲ ಸಜ್ಜಾಗಿದೆ. ಇದರಿಂದ ವಿದ್ಯಾಕಾಶಿ ಧಾರವಾಡ ಹಿರಿಮೆ ಹೆಚ್ಚುದಂತಾಗಿದೆ. ಹೌದು ಧಾರವಾಡದ ಬೇಲೂರ ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ಶಿಲ್ಪಾ ಬಯೋಲಾಜಿಕಲ್ಸ್ …

Read More »

300 ಮಂದಿಯ ಅಂತ್ಯಕ್ರಿಯೆ ನಡೆಸಿದ್ದ ಅಧಿಕಾರಿ ಕೋವಿಡ್ ನಿಂದ ಸಾವು

ಹರಿಯಾಣ : ಹರಿಯಾಣದ ಹಿಸಾರ್‌ನಲ್ಲೊಂದು ಮನಮಿಡಿಯುವ ಘಟನೆ ನಡೆದಿದೆ. ಕಳೆದ ವರ್ಷ ಕೊರೊನಾ ಶುರುವಾದಾಗಿನಿಂದ ಇಲ್ಲಿಯವರೆಗೆ 300 ಕೊರೊನಾ ಪೀಡಿತರ ಶವದಹನಕ್ಕೆ ನೆರವಾಗಿದ್ದ, ಅಂತಿಮ ಕ್ರಿಯೆಗಳನ್ನು ವಿಧಿವತ್ತಾಗಿ ನಡೆಸಿದ್ದ ಹಿಸಾರ್‌ ನಗರಪಾಲಿಕೆ ಅಧಿಕಾರಿಯೊಬ್ಬರು ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಅದೂ ಸೋಂಕಿದೆ ಎಂದು ಗೊತ್ತಾಗಿ ಎರಡೇ ದಿನಗಳಲ್ಲಿ! 43 ವರ್ಷದ ಪ್ರವೀಣಕುಮಾರ್‌; ಸೋಮವಾರ ರಾತ್ರಿ ಆಮ್ಲಜನಕ ಪ್ರಮಾಣ ತೀವ್ರ ಇಳಿಕೆಯಾಗಿದ್ದರಿಂದ ಅಸು ನೀ ಗಿ ದ್ದಾ ರೆ. ಅವರನ್ನು ಕಳೆದವರ್ಷ ಶವಸಂಸ್ಕಾರ ತಂಡದ ಮುಖ್ಯಸ್ಥರನ್ನಾಗಿ ಹಿಸಾರ್‌ ನಗರಪಾಲಿಕೆ ನೇಮಿಸಿತ್ತು. …

Read More »

ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸುತ್ತಿದ್ದ 130 ಕ್ವಿಂಟಾಲ್ ಅಕ್ಕಿ ಪೊಲೀಸರ ವಶಕ್ಕೆ

ಕಲಬುರಗಿ: ಕರ್ನಾಟಕ ಸರ್ಕಾರದಿಂದ ಪಡಿತರ ಕಾರ್ಡ್ ದಾರರಿಗೆ ಹಂಚಿಕೆ ಆಗಬೇಕಾಗಿದ್ದ ಅಕ್ಕಿ ಕಾಳಸಂತೆಯಲ್ಲಿ ಮಹಾರಾಷ್ಟ್ರದ ಪಾಲಾಗುತ್ತಿರುವಾಗ ಜಿಲ್ಲೆಯ ಅಫಜಲಪುರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಹಾರಾಷ್ಟ್ರದ ಉಸ್ಮಾನಾಬಾದ್ ಜಿಲ್ಲೆಯ ತುಳಜಾಪುರದ ಗುಲಾಬಚಂದ್ ರಾಠೋಡ ಎಂಬುವವರು ಈ ಅಕ್ಕಿ ಸಾಗಿಸುತ್ತಿದ್ದರು. ಅಫಜಲಪುರ ತಾಲೂಕಿನ ಬಳ್ಳೂರ್ಗಿ ಚೆಕ್ ಪೋಸ್ಟ್ ನಲ್ಲಿ ಪೊಲೀಸರ ತಪಾಸಣೆ ವೇಳೆ ಈ ಅಕ್ರಮ ಪತ್ತೆಯಾಗಿದೆ. ಅಂದಾಜು 130 ಕ್ವಿಂಟಾಲ್ ಅಕ್ಕಿ ವಶಕ್ಕೆ ಪಡೆಯಲಾಗಿದೆ. ಇದರ ಒಟ್ಟು ಮೌಲ್ಯ 2, 86,600 …

Read More »

ಬ್ಲಾಕ್​ ಫಂಗಸ್​ ಸೋಂಕಿತರ ಚಿಕಿತ್ಸೆಗೆ ಔಷಧಿ ಅಭಾವವಿದೆ: ಡಿಸಿಎಂ ಲಕ್ಷ್ಮಣ ಸವದಿ

ಡಿಸಿಗಳ ಜೊತೆ ವಿಡಿಯೋ ಸಂವಾದದ ಮೂಲಕ ಸಭೆ ನಡೆಸಿದ ಬಳಿಕ ಮಾತನಾಡಿದ ಪ್ರಧಾನಿ ಮೋದಿ ಜಿಲ್ಲಾಧಿಕಾರಿಗಳಿಗೆ ಕೊರೊನಾ ನಿಯಂತ್ರಣದ ಜವಾಬ್ದಾರಿ ನೀಡಿದ್ದಾರೆ. ಪ್ರಧಾನಿ ಮೋದಿ ಸಂವಾದದ ವಿಚಾರವಾಗಿ ರಾಯಚೂರಿನಲ್ಲಿ ಮಾತನಾಡಿದ ಡಿಸಿಎಂ ಲಕ್ಷ್ಮಣ ಸವದಿ ಪರಿಸ್ಥಿತಿ ನಿಯಂತ್ರಣದ ಬಗ್ಗೆ ಪ್ರಧಾನಿ ಮೋದಿ ನೀಡಿದ ಎಲ್ಲಾ ಸೂಚನೆ ಪಾಲಿಸುತ್ತೇವೆ ಎಂದು ಹೇಳಿದ್ರು. ಕೊರೊನಾ ನಿಯಂತ್ರಣಕ್ಕಾಗಿ ರಾಯಚೂರಿನಲ್ಲಿ ಕಠಿಣ ಲಾಕ್​ಡೌನ್​ನ್ನು ಅನಿರ್ದಿಷ್ಟ ಅವಧಿಗೆ ಮುಂದೂಡಿದ್ದೇವೆ. ಮೂರು ದಿನ ಕಠಿಣ ಲಾಕ್​ಡೌನ್​ ಹಾಗೂ ಒಂದು …

Read More »