Breaking News

ರಾಜ್ಯ

ಮಾನವೀಯತೆಯ ಮೂಲಕ ಅಂತ್ಯ ಸಂಸ್ಕಾರ ಮಾಡುವ ರಬಕವಿಯ ಮುಸ್ಲಿಂ ಯುವಕರು

ಬನಹಟ್ಟಿ : ಮಹಾಮಾರಿ ಕೋವಿಡ್‌ನಿಂದಾಗಿ ಪ್ರತಿ ನಿತ್ಯ ಸಾವಿನ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ಶವ ಸಂಸ್ಕಾರ ಮಾಡಲು ಹಿಂದೇಟು ಹಾಕುತ್ತಿರುವ ಹಿನ್ನೆಲೆ, ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿಯ ಮುಸ್ಲಿಂ ಯುವಕರು ಜಾತ್ಯತೀತ ಭಾವನೆಯಿಂದ ಅಂತ್ಯ ಸಂಸ್ಕಾರ ಮಾಡುವ ಮೂಲಕ ಮಾನವೀಯತೆ ಮೆರೆಯುತ್ತಿದ್ದಾರೆ. ರಬಕವಿಯ ಅಂಜುಮನ್ ಇಸ್ಲಾಂ ಮುಸ್ಲಿಂ ಜಮಾತನ ಮುಖಂಡರ ಚಿಂತನೆ ಮೂಲಕ ಯುವಕರ ತಂಡ ರಚನೆ ಮಾಡಿ, ಅಂತ್ಯಸಂಸ್ಕಾರ ಮಾಡಲು ಸಜ್ಜಾಗಿದ್ದಾರೆ. ಯಾವುದೇ ಜಾತಿ ಭೇದ ನೋಡದೆ, ಅವರ …

Read More »

ಬ್ಲಾಕ್ ಫಂಗಲ್ ಪೀಡಿತ ಯುವಕನ ಚಿಕಿತ್ಸೆಗೆ ಸಹಾಯ ಹಸ್ತ ಚಾಚಿದ ಡಿಸಿಎಂ ಸವದಿ

ಚಿಕ್ಕೋಡಿ:ರಾಜ್ಯಾದ್ಯಂತ ಕೊವಿಡ್ ಎರಡನೆಯ ಅಲೆಯ ನಡುವೆಯೆ ಕೊವಿಡ್ ಚಿಕಿತ್ಸೆ ಪಡೆದು ಗುಣಮುಖರಾದವರನ್ನು ಭಾಧಿಸುತ್ತಿರುವ ಕಪ್ಪು ಶಿಲಿಂಧ್ರ (ಬ್ಲಾಕ್ ಫಂಗಲ್ ಇಂಪೆಕ್ಷನ್) ರೋಗ ಹಲವರಲ್ಲಿ ಕಂಡು ಬರುತ್ತಿದೆ.ಆರಂಭದಲ್ಲಿ ಗಲ್ಲ,ಮೂಗು,ಕಣ್ಣಿನ ರೆಪ್ಪೆಯ ಮೇಲ್ಭಾಗದಲ್ಲಿ ಬಾವು ಕಾಣಿಸಿಕೊಂಡು ನಂತರದಲ್ಲಿ ದೇಹದ ಒಳಭಾಗಕ್ಕೆ ಹರಡಿ ಜೀವಕ್ಕೆ ಎರವಾಗುತ್ತಿರುವ ಈ ಕಾಯಿಲೆ ಕೋವಿಡ್ ಚಿಕಿತ್ಸೆ ಪಡೆದವರಲ್ಲಿ ಕಂಡುಬರುತ್ತಿರುವದು ತೀವ್ರ ತಲೆನೋವಾಗಿ ಪರಿಣಮಿಸಿದೆ. ಚಿಕಿತ್ಸೆಗೆ ಬಳಕೆ ಆಗುವ ಔಷಧಿಗಳ ಅಡ್ಡಪರಿಣಾಮ ಎಂದು ಹೇಳುತ್ತಿದ್ದರೂ ಕೂಡ ಕೋವಿಡ್ ಗಿಂತ ಮುಂದುವರೆದ …

Read More »

ಸಾಯೋರು ಎಲ್ಲಾದರೂ ಸಾಯಲಿ’ : ಶಾಸಕ ಚಂದ್ರಪ್ಪ

ಚಿತ್ರದುರ್ಗ : ತಾಲೂಕು ಆಸ್ಪತ್ರೆಯಲ್ಲಿ ಆಕ್ಸಿಜನ್ ಬೆಡ್ ನಿರ್ಮಾಣದ ವಿಚಾರವಾಗಿ ಹೊಳಲ್ಕೆರೆ ಬಿಜೆಪಿ‌ ಶಾಸಕ ಹಾಗೂ ಸಾರಿಗೆ ನಿಗಮ‌ ಅಧ್ಯಕ್ಷ ಎಂ.ಚಂದ್ರಪ್ಪ ಅವರು ಡಿಹೆಚ್‌ಓ ಡಾ.ಪಾಲಾಕ್ಷ ಜೊತೆ ಮಾತಾಡುತ್ತಿರುವ ವಿಡಿಯೋವೊಂದು ವೈರಲ್ ಆಗಿದ್ದು, ಇದರಲ್ಲಿ ಶಾಸಕರು, ‘ನಾನು ಇಲ್ಲಿ ಆಸ್ಪತ್ರೆ‌ ಮಾಡೋದಿಲ್ಲ‌, ಅದು ನನಗೆ ಅವಶ್ಯಕತೆ ಇಲ್ಲ, ಸಾಯೋರು ಎಲ್ಲಾದರೂ ಸಾಯಲಿ’ ಎಂದು ನುಡಿದಿದ್ದಾರೆ. ಹೊಳಲ್ಕೆರೆ ಪಟ್ಟಣದ ಪ್ರವಾಸಿ ಮಂದಿರ ಬಳಿ ಶಾಸಕರು ಹಾಗೂ ಡಿಎಚ್‌ಒ ನಡುವೆ ಈ ವಾಗ್ವಾದ …

Read More »

ಕ್ಷಮೆ ಕೇಳಲಿ ಎಂದ ರೋಹಿಣಿ ಸಿಂಧೂರಿಗೆ ಪ್ರಶ್ನೆಗಳ ಸುರಿಮಳೆಗೈದ ಶಾಸಕ ಸಾರಾ ಮಹೇಶ್!

ಮೈಸೂರು: ಚಾಮರಾಜನಗರ ಆಕ್ಸಿಜನ್​ ದುರಂತ ನಡೆದಾಗ ನನ್ನ ವಿರುದ್ಧ ಆರೋಪ ಮಾಡಿದವರು ಕ್ಷಮೆ ಕೇಳಲಿ ಎಂಬ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹೇಳಿಕೆಗೆ ಮಾಜಿ ಸಚಿವ ಸಾ.ರಾ. ಮಹೇಶ್ ಪ್ರಶ್ನೆಗಳ ಸುರಿಮಳೆಗೈದಿದ್ದಾರೆ. ​ ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಸಾ.ರಾ. ಮಹೇಶ್​, ಒಬ್ಬ ಕನ್ನಡಿಗ ದಲಿತ ಡಿಸಿಯನ್ನು ಕೇವಲ 28 ದಿನಕ್ಕೆ ವರ್ಗಾವಣೆ ಮಾಡಿಸಿದ್ದು ಸುಳ್ಳಾ? ಎಂದು ಪ್ರಶ್ನೆಯನ್ನು ಆರಂಭಿಸಿದರು. ಪ್ರಶ್ನೆಗಳ ಸವಾಲನ್ನು ಮುಂದುವರಿಸಿದ ಸಾ.ರಾ.ಮಹೇಶ್​, ಹಾಸನದ ಪ್ರಕರಣದಲ್ಲಿ ತಕ್ಷಣ ನಿಮ್ಮ ಪರ …

Read More »

ಕೆಸರಿನಲ್ಲಿ ಸಿಲುಕಿ ಒದ್ದಾಡುತ್ತಿದ್ದ ಆನೆಯನ್ನು ರಕ್ಷಿಸಿದ ಅರಣ್ಯ ಇಲಾಖೆ ಸಿಬ್ಬಂದಿ

ಚಾಮರಾಜನಗರ: ಇಲ್ಲಿನ ಬಂಡೀಪುರ ಹುಲಿ ರಕ್ಷಿತಾರಣ್ಯದ ಮೊಳೆಯೂರು ವಲಯದ ಮೀನಕಟ್ಟೆಯ ಅರಣ್ಯದಲ್ಲಿ ಕೆಸರಿನಲ್ಲಿ ಸಿಲುಕಿ ಒದ್ದಾಡುತ್ತಿದ್ದ ಹೆಣ್ಣಾನೆಯೊಂದನ್ನು ಅರಣ್ಯ ಇಲಾಖೆಯ ಸಿಬ್ಬಂದಿ ಶನಿವಾರ ರಕ್ಷಿಸುವಲ್ಲಿ ಯಶಸ್ವಿ ಆಗಿದ್ದಾರೆ. ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆಗೆ ಕೆರೆಯಲ್ಲಿ ಕೆಸರು ಉಂಟಾಗಿತ್ತು. ಕೆರೆಗೆ ನೀರು ಕುಡಿಯು ಬಂದಿದ್ದ ಕಾಡಾನೆಯೊಂದು ಕೆಸರಿನಲ್ಲಿ ಸಿಲುಕಿ ಮೇಲೇಳಲಾಗದೇ ಗಂಟೆಗಟ್ಟಲೆ ಕಷ್ಟ ಪಡುತಿತ್ತು. ಇದನ್ನು ಗಮನಿಸಿದ ಅರಣ್ಯ ಇಲಾಖೆ ಸಿಬ್ಬಂದಿಗಳು ಜೆಸಿಬಿ ಯೊಂದಿಗೆ ತೆರಳಿ ಆನೆಗೆ ತೊಂದರೆ ಆಗದಂತೆ …

Read More »

ವಾಹನಗಳ ಮಾಲೀಕರಿಗೆ ಗುಡ್ ನ್ಯೂಸ್: ಲಾಕ್ಡೌನ್ ಕಾರಣ ಉಚಿತ ಸರ್ವಿಸ್, ವಾರಂಟಿ ಅವಧಿ ವಿಸ್ತರಣೆ

ನವದೆಹಲಿ: ಕೊರೋನಾ ಸೋಂಕು ತಡೆಗೆ ಅನೇಕ ರಾಜ್ಯಗಳಲ್ಲಿ ಲಾಕ್ ಡೌನ್ ಸೇರಿದಂತೆ ಕಠಿಣ ನಿರ್ಬಂಧಗಳನ್ನು ಜಾರಿಗೊಳಿಸಿರುವ ಕಾರಣ ವಾಹನಗಳ ವಾರಂಟಿ ಮತ್ತು ಉಚಿತ ಸೇವಾ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. ಪ್ರಮುಖ ವಾಹನ ತಯಾರಿಕಾ ಕಂಪನಿಗಳ ಉಚಿತ ಸೇವೆ ಮತ್ತು ವಾರಂಟಿ ಅವಧಿ ವಿಸ್ತರಣೆ ಮಾಡಲಾಗಿದ್ದು, ಮಾರುತಿ ಸುಜುಕಿ ಇಂಡಿಯಾ ಉಚಿತ ಸೇವೆ ಮತ್ತು ವಾರಂಟಿ ಅವಧಿಯನ್ನು ಜೂನ್ 30 ರವರೆಗೆ ವಿಸ್ತರಣೆ ಮಾಡಲಾಗಿದೆ. 2021 ರ ಮಾರ್ಚ್ 15 ರಿಂದ …

Read More »

ಕೊರೋನಾ ಸಂತ್ರಸ್ತೆಯ ಮೇಲೆ ಆಯಂಬುಲೆನ್ಸ್ ಸಹಾಯಕನಿಂದ ಲೈಂಗಿಕ ದೌರ್ಜನ್ಯ

ಕೊಚ್ಚಿ : ಕೊರೋನಾ ಸೋಂಕಿಗೆ ತುತ್ತಾಗಿ ಅತ್ಯಂತ ಗಂಭೀರ ಸ್ಥಿತಿಯಲ್ಲಿದ್ದ ರೋಗಿಯ ಮೇಲೆ ಆಯಂಬುಲೆನ್ಸ್ ಸಹಾಯಕನೊಬ್ಬ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಕೇರಳದ ಮಲ್ಲಪ್ಪುರಂ ಜಿಲ್ಲೆಯಲ್ಲಿ ನಡೆದಿದೆ. ಏಪ್ರಿಲ್ 27 ರಂದು ಈ ಘಟನೆ ನಡೆದಿದ್ದು, ಕೊರೋನಾ ಸೋಂಕಿಗೆ ತುತ್ತಾಗಿದ್ದ ರೋಗಿ ಚೇತರಿಸಿಕೊಂಡ ಬಳಿಕ ವೈದ್ಯರಿಗೆ ಈ ಸಂಬಂಧ ಮಾಹಿತಿ ನೀಡಿದ್ದಾರೆ . ಪ್ರಕರಣ ದಾಖಲಾದ ನಂತರ ಆರೋಪಿಯನ್ನು ಬಂಧಿಸಲಾಗಿದ್ದು, ತನಿಖೆ ಮುಂದುವರೆದಿದೆ. ಕಳೆದ ವರ್ಷ ಕೂಡ ಕೇರಳದ ಇದೇ …

Read More »

ಮೋದಿ ವಿರುದ್ದ ಅಪಪ್ರಚಾರದ ಪೋಸ್ಟರ್‌ ; ೧೫ ಜನರ ಬಂಧನ

ನವದೆಹಲಿ: ಲಸಿಕೆಯನ್ನು ತಯಾರಿಸುವ ಪೂರ್ವದಲ್ಲಿ ಮಾಡಿಕೊಂಡಿರುವ ಒಪ್ಪಂದದ ಪ್ರಕಾರ ಕೆಲವು ದೇಶಗಳಿಗೆ ಭಾರತವು ಇದಾಗಲೇ ಲಸಿಕೆಯನ್ನು ರಫ್ತು ಮಾಡಿದೆ. ಈ ಕುರಿತು ಕೇಂದ್ರ ಸರ್ಕಾರ ಇದಾಗಲೇ ಹಲವಾರು ಬಾರಿ ಸ್ಪಷ್ಟನೆಯನ್ನೂ ನೀಡಿದೆ. ಇದರ ಹೊರತಾಗಿಯೂ ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿಯವರ ವರ್ಚಸ್ಸಿಗೆ ಧಕ್ಕೆ ಬರಲು ಉದ್ದೇಶಪೂರ್ವಕವಾಗಿ ಅವರ ವಿರುದ್ಧ ಪೋಸ್ಟರ್‌ ಹಂಚಿಕೆ ಕಾರ್ಯ ನಿರಾತಂಕವಾಗಿ ನಡೆದಿದೆ. ಕೋವಿಡ್‌ ಲಸಿಕೆಯನ್ನು ವಿದೇಶಕ್ಕೆ ನೀಡಿರುವುದನ್ನು ವಿರೋಧಿಸಿ ಪ್ರಧಾನಿ ವಿರುದ್ಧ ಮಾಡಿರುವ …

Read More »

ಕೋವಿಡ್‌ನಿಂದ ಮೃತಪಟ್ಟವರ ಕುಟುಂಬಕ್ಕೆ ಪರಿಹಾರ ಘೋಷಣೆ: 50 ಸಾವಿರ ರೂ. ವೈಯಕ್ತಿಕ ನೆರವು; ಸಚಿವ ಬಿ.ಸಿ. ಪಾಟೀಲ್

ಬೆಂಗಳೂರು: ಹಿರೇಕರೂರು ಮತಕ್ಷೇತ್ರದ ಹಿರೇಕೆರೂರು ಹಾಗೂ ರಟ್ಟಿಹಳ್ಳಿ ತಾಲೂಕಿನ ವ್ಯಾಪ್ತಿಯಲ್ಲಿ ಕೋವಿಡ್ ಎರಡನೇ ಅಲೆ ಸೋಂಕಿನಿಂದ ಮೃತಪಟ್ಟವರ ಕುಟುಂಬಕ್ಕೆ ತಲಾ 50 ಸಾವಿರ ರೂ. ಪರಿಹಾರ ಧನ ನೀಡುವುದಾಗಿ ಕೃಷಿ ಸಚಿವರಾದ ಹಿರೇಕೆರೂರು ವಿಧಾನಸಭಾ ಕ್ಷೇತ್ರದ ಶಾಸಕ ಬಿ.ಸಿ.ಪಾಟೀಲ್ ಘೋಷಿಸಿದ್ದಾರೆ. ಹಿರೇಕೆರೂರು ಮತ ಕ್ಷೇತ್ರದಲ್ಲಿ ಇಲ್ಲಿಯವರೆಗೆ ಸುಮಾರು 18 ಮಂದಿ‌ ಸೋಂಕಿನಿಂದ ಮೃತಪಟ್ಟಿದ್ದು, ಮೃತಪಟ್ಟವರ ಕುಟುಂಬದ ಸದಸ್ಯರನ್ನು ನಾಳೆ ಬಿ.ಸಿ. ಪಾಟೀಲ್ ಭೇಟಿಯಾಗಿ ಪರಿಹಾರ ಧನ ವಿತರಿಸಲಿದ್ದಾರೆ. ಇನ್ನು ಕೆಲವು …

Read More »

ಕೊರೋನಾ ತಡೆಗೆ ಮತ್ತೊಂದು ಕ್ರಮ: 17 ಜಿಲ್ಲೆಗಳ ಡಿಸಿಗಳೊಂದಿಗೆ ಪ್ರಧಾನಿ ಮೋದಿ, ಸಿಎಂ BSY ಸಂವಾದ

ಕೋವಿಡ್-19 ವಿಷಯಕ್ಕೆ ಸಂಬಂಧಿಸಿದಂತೆ ರಾಜ್ಯದ 17 ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮೇ 18 ರಂದು ಬೆಳಗ್ಗೆ 11 ಕ್ಕೆ ವಿಡಿಯೋ ಸಂವಾದ ನಡೆಸಲಿದ್ದಾರೆ. ಉತ್ತರ ಕನ್ನಡ, ಹಾಸನ, ಬಳ್ಳಾರಿ, ಮೈಸೂರು, ತುಮಕೂರು, ಕೋಲಾರ, ಕೊಡಗು, ಬೆಂಗಳೂರು ನಗರ, ಉಡುಪಿ, ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ಧಾರವಾಡ, ದಕ್ಷಿಣ ಕನ್ನಡ, ರಾಯಚೂರು, ಕಲಬುರಗಿ, ಮಂಡ್ಯ, ಚಿಕ್ಕಬಳ್ಳಾಪುರ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಪ್ರಧಾನಮಂತ್ರಿ ಹಾಗೂ ಮುಖ್ಯಮಂತ್ರಿ …

Read More »