Breaking News

ರಾಜ್ಯ

ಅಂತ್ಯಕ್ರಿಯೆಗೆ ಕೆಲವೇ ನಿಮಿಷವಿರುವಾಗ ಎದ್ದು ನಿಂತ ಕೋವಿಡ್ ಪೀಡಿತ ಮಹಿಳೆ

ಸಾಂದರ್ಭಿಕ ಚಿತ್ರ

ಹೊಸದಿಲ್ಲಿ: ಒಂದು ವಿಲಕ್ಷಣ ಘಟನೆಯೊಂದರಲ್ಲಿ ಬಾರಾಮತಿಯ ಮುಧಲೆ ಗ್ರಾಮದ, 76 ವರ್ಷದ ಮಹಿಳೆ ಕೋವಿಡ್ ನಿಂದ ಮೃತಪಟ್ಟಿದ್ದಾಳೆಂದು ನಂಬಿ ಕುಟುಂಬದವರು ಅಂತ್ಯಕ್ರಿಯೆಗೆ ತಯಾರಿ ನಡೆಸುತ್ತಿದ್ದಾಗ ಮಹಿಳೆ ಎದ್ದುನಿಂತಿರುವ ಒಂದು ವಿಲಕ್ಷಣ ಘಟನೆಯೊಂದು ವರದಿಯಾಗಿದೆ. ಮಹಿಳೆಯನ್ನು ಶಕುಂತಲಾ ಗಾಯಕ್ವಾಡ್ ಎಂದು ಗುರುತಿಸಲಾಗಿದೆ. ಮಹಿಳೆ ಕೆಲವು ದಿನಗಳ ಹಿಂದೆ ಕೋವಿಡ್ -19 ಸೋಂಕಿಗೆ ತುತ್ತಾಗಿದ್ದರು. ಮನೆಯಲ್ಲಿ ಪ್ರತ್ಯೇಕವಾಗಿದ್ದರು. ಆದರೆ ವೃದ್ಧಾಪ್ಯದಿಂದಾಗಿ ಆಕೆಯ ಸ್ಥಿತಿ ಹದಗೆಟ್ಟಿತು, ಹೀಗಾಗಿ ಕುಟುಂಬದವರು ಮಹಿಳೆಯನ್ನು ಬಾರಾಮತಿಯ ಆಸ್ಪತ್ರೆಗೆ ಸ್ಥಳಾಂತರಿಸಲು …

Read More »

ಹೊಸ ಗಂಡ ತಂದೇ ಬಿಟ್ಟ ಗಂಡಾಂತರ: 23 ವರ್ಷ ಯುವಕನ ಮೇಲಿನ ಮೋಹಕ್ಕೆ 6 ವರ್ಷದ ಮಗನೇ ಬಲಿಯಾದ!

ನೆಲಮಂಗಲ: ಕೇವಲ ಮೋಹ, ಕಾಮದ ಹಿಂದೆ ಹೋದರೆ ಸಂಬಂಧಗಳೆಲ್ಲಾ ಹೇಗೆ ಮಣ್ಣಾಗುತ್ತವೆ ಅನ್ನೋದಕ್ಕೆ ಈ ಪ್ರಕರಣವೇ ಸಾಕ್ಷಿ. ಆತನದ್ದು ತಂದೆಯಾಗುವ ವಯಸ್ಸೇ ಅಲ್ಲ ಅಂತದ್ದರಲ್ಲಿ 6 ವರ್ಷ ಬಾಲಕನಿಗೆ ಮಲತಂದೆಯಾಗಿದ್ದ. ಬಾಲಕನ ತಾಯಿಯ ಮೇಲಿನ ಮೋಹ 23 ವರ್ಷಕ್ಕೆ ಮಲತಂದೆಯನ್ನಾಗಿ ಮಾಡಿತ್ತು. ಕೇವಲ ತಾಯಿಯೊಂದಿಗಿನ ಸಂಬಂಧ ಬಯಸ್ಸಿದ್ದ 23 ವರ್ಷ ಯುವಕನಿಗೆ ತಂದೆಯಾಗುವುದು ಬೇಕಾಗಿಯೇ ಇರಲಿಲ್ಲ. 6 ವರ್ಷ ಹುಡುಗನ ಆಟ-ತುಂಟಾಟಗಳಿಗೆ ಮಲತಂದೆ ಎನಿಸಿಕೊಂಡವನು ಅಡಿಗಡಿಗೂ ಸಿಡಿಸಿಡಿ ಎನ್ನುತ್ತಿದ್ದ. ಕೊನೆಗೆ …

Read More »

ಕೊರೋನಾ ಕರುಣಾಜನಕ ಘಟನೆ: ದಂಪತಿ ಸಾವು, 5 ದಿನದ ಹೆಣ್ಣುಮಗು ಅನಾಥ

ಮಂಡ್ಯ: ಕೊರೋನಾ ಸೋಂಕು ತಗುಲಿದ್ದರಿಂದ ದಂಪತಿ ಸಾವನ್ನಪ್ಪಿದ್ದು, 5 ದಿನದ ಹೆಣ್ಣುಮಗು ಅನಾಥವಾಗಿದೆ. ನಾಗಮಂಗಲ ತಾಲೂಕಿನ ದೊಡ್ಡೇನಹಳ್ಳಿಯಲ್ಲಿ ಘಟನೆ ನಡೆದಿದೆ. 45 ವರ್ಷದ ನಂಜುಂಡೇಗೌಡ ಮತ್ತು 31 ವರ್ಷದ ಮಮತಾ ದಂಪತಿ ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಇದರಿಂದಾಗಿ ದಂಪತಿಯ 5 ದಿನದ ಹೆಣ್ಣುಮಗು ಅನಾಥವಾಗಿದೆ. ಫೈನಾನ್ಸ್ ವ್ಯವಹಾರ ಮಾಡಿಕೊಂಡಿದ್ದ ನಂಜುಂಡೇಗೌಡ ಕೊರೋನಾ ಸೋಂಕು ತಗುಲಿದ್ದರಿಂದ ಏಪ್ರಿಲ್ 30 ರಂದು ಮೃತಪಟ್ಟಿದ್ದರು. ಗರ್ಭಿಣಿಯಾಗಿದ್ದ ಅವರ ಪತ್ನಿ ಮಮತಾ ಅವರಿಗೂ ಕೊರೊನಾ ಸೋಂಕು …

Read More »

ಯಾದಗಿರಿ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಕನ್ನಡ ಪ್ರಾಧ್ಯಾಪಕ ಕೋವಿಡ್‌ಗೆ ಬಲಿ

ಕಲಬುರ್ಗಿ: ಕಲಬುರ್ಗಿಯ ಕರುಣೇಶ್ವರ ನಗರದ ನಿವಾಸಿ, ಯಾದಗಿರಿಯ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಕನ್ನಡ ಪ್ರಾಧ್ಯಾಪಕ ಡಾ.ಬುದ್ಧೇಶ್ ಶಂಕರ ಸಿಂಗೆ (53) ಅವರು ಸೊಲ್ಲಾಪುರದ ಆಸ್ಪತ್ರೆಯಲ್ಲಿ ಗುರುವಾರ ನಿಧನರಾದರು. ಕೊರೊನಾ ಸೋಂಕಿನಿಂದ ಬಳಲಿದ್ದ ಅವರು ಚಿಕಿತ್ಸೆಯ ನಂತರ ಗುಣಮುಖರಾಗಿ ಮರಳಿದ್ದರು. ಆದರೆ, ಕೆಲವೇ ದಿನಗಳಲ್ಲಿ ಮತ್ತೆ ಅವರಿಗೆ ಬಹು ಅಂಗಾಂಗ ವೈಫಲ್ಯ ಕಂಡುಬಂದಿದ್ದರಿಂದ ಸೊಲ್ಲಾಪುರದ ವೈದ್ಯರು ಕಪ್ಪುಶಿಲೀಂದ್ರ (ಬ್ಲ್ಯಾಕ್‌ ಫಂಗಸ್‌) ಸೋಂಕು ಇರಬಹುದು ಎಂದು ಶಂಕಿಸಿದ್ದರು.ಅವರಿಗೆ ಪತ್ನಿ, ಪುತ್ರ, ಪುತ್ರಿ ಇದ್ದಾರೆ. …

Read More »

ಮಾರಕ ಕೊರೋನಾಕ್ಕೆ ಬಲಿಯಾದ ಮತ್ತೊಬ್ಬ ಹಿರಿಯ ಪತ್ರಕರ್ತ ಲಕ್ಷ್ಮೀ ನಾರಾಯಣ.

ಬೆಂಗಳೂರು : ಮಾರಕ ಕೊರೋನಾಕ್ಕೆ ಬಲಿಯಾದ ಮತ್ತೊಬ್ಬ ಹಿರಿಯ ಪತ್ರಕರ್ತ ಲಕ್ಷ್ಮೀ ನಾರಾಯಣ. ಖಾಸಗಿ ಸುದ್ದಿ ವಾಹಿನಿಯಲ್ಲಿ ಹಿರಿಯ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡುತ್ತಿದ್ದ ಲಕ್ಷ್ಮೀ ನಾರಾಯಣ ಅವರು ಕೊರೋನಾದಿಂದ ಮೃತಪಟ್ಟಿದ್ದಾರೆ . ಒಂದು ವಾರದ ಹಿಂದೆ ಅವರಿಗೆ ಕೊರೋನಾ ಸೋಂಕು ಕಂಡು ಬಂದಿತ್ತು . ಬಳಿಕ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು . ಇದೀಗ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ . ಲಕ್ಷ್ಮೀ ನಾರಾಯಣ ಅವರು ಈಟಿವಿ ನ್ಯೂಸ್ …

Read More »

ಒಳಿತು ಮಾಡು ಮನುಷ್ಯಾ.. ನೀ ಇರೋದು ಮೂರು ದಿವಸಾ: ಹಿಂಗೆ ನಡೆದುಕೊಳ್ಳುತ್ತಿದ್ದಾರೆ ಹುಬ್ಬಳ್ಳಿ ಪೊಲೀಸರು…!

ಹುಬ್ಬಳ್ಳಿ: ಕೊರೋನಾ ಎಂಬ ಮಹಾಮಾರಿ ಪ್ರತಿಯೊಬ್ಬರ ನೆಮ್ಮದಿಯನ್ನ ಹಾಳು ಮಾಡುವುದಲ್ಲದೇ, ಬದುಕನ್ನ ನಿರ್ಜೀವಿಯನ್ನಾಗಿ ಮಾಡುತ್ತಿರುವುದು ಎಲ್ಲರಿಗೂ ಗೊತ್ತೆಯಿದೆ. ತಾನೂ ಇರುವುದೆಷ್ಟು ದಿನ ಎಂಬುದು ಗೊತ್ತೆಯಿಲ್ಲದಿದ್ದರೂ, ಮನುಷ್ಯ ಮಾತ್ರ ಮಾನವೀಯ ಇನ್ನೂ ಮೈಗೂಡಿಸಿಕೊಳ್ಳುತ್ತಿಲ್ಲ. ಆದರೆ, ಸದಾಕಾಲ ಸಾರ್ವಜನಿಕರಿಂದ ವಿನಾಕಾರಣ ಬೈಸಿಕೊಳ್ಳುವ ಪೊಲೀಸರು ಮಾತ್ರ, ತಾವೂ ಎಷ್ಟು ಮಾನವೀಯತೆ ಹೊಂದಿದ್ದೇವ ಎಂಬುದನ್ನ ಸದ್ದಿಲ್ಲದೇ ತೋರಿಸಿಕೊಂಡು ಹೋಗುತ್ತಿದ್ದಾರೆ.. ಹುಬ್ಬಳ್ಳಿ ಪೊಲೀಸ್ ಕಮೀಷನರ್ ಲಾಬುರಾಮ್ ಅವರು ಬಂದ ನಂತರ ಪೊಲೀಸ್ ವ್ಯವಸ್ಥೆಯಲ್ಲಿ ಸಾಕಷ್ಟು ಉತ್ತಮ ಬೆಳವಣಿಗೆಗಳು …

Read More »

ಕೊರೋನಾ ಭಯ ಬೇಡ- ನಿಮ್ಮೊಂದಿಗೆ ಡಾ.ಸೀಮಾ ಸಾಧಿಕಾ ಇರ್ತಾರೆ…!

ಬೆಂಗಳೂರು: ಕೊರೋನಾ ಸಮಯದಲ್ಲಿ ಹುಬ್ಬಳ್ಳಿ-ಧಾರವಾಡ ಸೇರಿದಂತೆ ಜಿಲ್ಲೆಯ ಬಹುತೇಕರಿಗೆ ಈಗಾಗಲೇ ಸಹಾಯ ಮಾಡುತ್ತಿರುವ ನಮ್ಮ ಮಿತ್ರ ಫೌಂಡೇಷನ್ ಸಂಸ್ಥಾಪಕಿ ಡಾ.ಸೀಮಾ ಸಾಧಿಕಾ ಅವರು, ಪ್ರತಿಯೊಂದು ಮಾಹಿತಿಯನ್ನ ನೀಡಲು ಮುಂದಾಗಿದ್ದಾರೆ.     ಕೊರೋನಾ ಸಮಯದಲ್ಲಿ ಆರೋಗ್ಯ ಏರುಪೇರಾದ ತಕ್ಷಣ ಏನು ಮಾಡಬೇಕು. ಮನೆಯಲ್ಲಿಯೇ ಹೇಗೆ ಆರೋಗ್ಯ ಸುಧಾರಿಸಿಕೊಳ್ಳಬಹುದು. ನೀವು ಯಾವ ಔಷಧ ತೆಗೆದುಕೊಳ್ಳಬಹುದೆಂಬ ಮಾಹಿತಿಯನ್ನ ನೀಡಲಿದ್ದಾರೆ. ಅವಶ್ಯಕವಿದ್ದ ಸಮಯದಲ್ಲಿ ಆಸ್ಪತ್ರೆಗಳ ಮಾಹಿತಿಯನ್ನೂ ತಮಗೆ ನೀಡಲಿದ್ದಾರೆ.     ಜ್ವರ, ಕೆಮ್ಮು …

Read More »

ಕೋವಿಡ್ ಕೇರ್ ಸೆಂಟರನ್ನು ಸಂಸದ ಜಿ.ಎಂ. ಸಿದ್ದೇಶ್ವರ ಉದ್ಘಾಟನೆ ಮಾಡಿದರು

ದಾವಣಗೆರೆ: ಕೋವಿಡ್ ಸೋಂಕಿತರಿಗಾಗಿ ದಾವಣಗೆರೆ-ಶಿರಮಗೊಂಡನಹಳ್ಳಿ ಮಾರ್ಗದಲ್ಲಿರುವ ತರಳಬಾಳು ವಿದ್ಯಾರ್ಥಿನಿಯರ ವಸತಿನಿಲಯವನ್ನು ಕೋವಿಡ್ ಕೇರ್ ಸೆಂಟರ್ ಆಗಿ ವ್ಯವಸ್ಥೆಗೊಳಿಸಲಾಗಿದ್ದು, ಶನಿವಾರ ಸಂಸದ ಜಿ.ಎಂ. ಸಿದ್ದೇಶ್ವರ ಅದಕ್ಕೆ ಚಾಲನೆ ನೀಡಿದರು. ‘ಕೋವಿಡ್ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಸೋಂಕಿತರಿಂದ ಇತರರಿಗೆ ರೋಗ ಹರಡುವುದನ್ನು ತಡೆಗಟ್ಟಲು ಜಿಲ್ಲೆಯಲ್ಲಿ ವಿವಿಧೆಡೆ ವ್ಯವಸ್ಥಿತವಾಗಿ ಕೋವಿಡ್ ಕೇರ್ ಸೆಂಟರ್‌ಗಳನ್ನು ಸ್ಥಾಪಿಸಲಾಗುತ್ತಿದೆ. ತರಳಬಾಳು ವಿದ್ಯಾರ್ಥಿನಿಯರ ವಸತಿನಿಲಯವನ್ನು ಕೋವಿಡ್ ಕೇರ್ ಸೆಂಟರ್ ಮಾಡಲು ತರಳಬಾಳು ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಅವರಿಗೆ …

Read More »

ಲಾಕ್‌ಡೌನ್‌ ಜಾರಿಗೊಳಿಸಿ ಇಷ್ಟು ದಿನಗಳಾದರೂ ರಸ್ತೆಗಳಲ್ಲಿ ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಡಬೇಕಾಗಿತ್ತು.

ಬೆಂಗಳೂರು: ಕೊರೋನಾ ಸೋಂಕಿನ ನಿಯಂತ್ರಣಕ್ಕಾಗಿ ಸರ್ಕಾರ ಸೆಮಿ ಲಾಕ್‌ಡೌನ್‌ ಜಾರಿಗೊಳಿಸಿ ಇಷ್ಟು ದಿನಗಳಾದರೂ ರಸ್ತೆಗಳಲ್ಲಿ ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಡಬೇಕಾಗಿತ್ತು. ಆದರೆ ತೌಕ್ಟೆ ಚಂಡಮಾರುತ ಶನಿವಾರ ಚಿತ್ರಣವನ್ನೇ ಬದಲಿಸಿದ್ದರಿಂದ ರಾಜ್ಯದ ಏಳೆಂಟು ಜಿಲ್ಲೆಗಳಲ್ಲಿ ಜನ ರಸ್ತೆಗಿಳಿಯಲು ಮನಸ್ಸನ್ನೇ ಮಾಡಲಿಲ್ಲ. ಇನ್ನುಳಿದಂತೆ ಬಹುತೇಕ ಜಿಲ್ಲೆಗಳಲ್ಲೂ ಅಗತ್ಯ ವಸ್ತುಗಳನ್ನು ಖರೀದಿಸಿ 10 ಗಂಟೆ ವೇಳೆ ಮನೆ ಸೇರಿಕೊಂಡಿದ್ದರಿಂದ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಜನ ಸಂಚಾರ, ವಾಹನ ಸಂಚಾರ ಬಹುತೇಕ ವಿರಳವಾಗಿತ್ತು. ದಕ್ಷಿಣ ಕನ್ನಡದಲ್ಲಿ …

Read More »

ಚಂಡಮಾರುತ ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ನವದೆಹಲಿ: ಅರಬ್ಬೀ ಸಮುದ್ರದಲ್ಲಿ ವಾಯಭಾರ ಕುಸಿತದಿಂದ ಸೃಷ್ಟಿಯಾಗಿರುವ ತೌಕ್ಟೆಚಂಡಮಾರುತ, ಶನಿವಾರ ಮತ್ತಷ್ಟುಪ್ರಬಲವಾಗಿದ್ದು, ದಕ್ಷಿಣದ ಹಲವು ರಾಜ್ಯಗಳಲ್ಲಿ ಭಾರೀ ಮಳೆ ಸುರಿಸಿದೆ. ಜೊತೆಗೆ ಮುಂದಿನ 12 ಗಂಟೆಗಳಲ್ಲಿ ಚಂಡಮಾರುತ ಇನ್ನಷ್ಟುಗಂಭೀರವಾಗಲಿದೆ. ಮೇ 18ರಂದು ಗುಜರಾತ್‌ನ ಪೋರಬಂದರ್‌ ಮತ್ತು ನಲಿಯಾ ನಡುವಿನ ಕರಾವಳಿ ತೀರದ ಮೇಲೆ ಚಂಡಮಾರುತ ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಚಂಡಮಾರುತದ ಪ್ರಭಾವದಿಂದಾಗಿ ಲಕ್ವದ್ವೀಪ, ಕೇರಳದಲ್ಲಿ ಶುಕ್ರವಾರ ರಾತ್ರಿಯಿಂದಲೂ ಭಾರೀ ಮಳೆಯಾಗುತ್ತಿದೆ. ಮಳೆಯ ಜೊತೆಗೆ ಭಾರೀ …

Read More »