Breaking News

ರಾಜ್ಯ

ಬಿಜೆಪಿ ಸರ್ಕಾರದ ಡಬಲ್ ಇಂಜಿನ್ ನಿಂತುಹೋಗಿದೆ – KPCC ಅಧ್ಯಕ್ಷ ಡಿ.ಕೆ. ಶಿವಕುಮಾರ್

ಬೆಂಗಳೂರು : ‘ಕರ್ನಾಟಕದ ಏಳಿಗೆಗೆ ರಾಜ್ಯ ಹಾಗೂ ಕೇಂದ್ರದ ಬಿಜೆಪಿ ಸರ್ಕಾರಗಳು ಡಬಲ್ ಇಂಜಿನ್ ರೀತಿ ಕೆಲಸ ಮಾಡುತ್ತವೆ ಎಂದು ಹೇಳಿದ್ದರು. ಆದರೆ ಕೋವಿಡ್ ನಿರ್ವಹಣೆ, ಆಕ್ಸಿಜನ್, ಲಸಿಕೆ ಪೂರೈಕೆ ವಿಚಾರದಲ್ಲಿ ಈ ಡಬಲ್ ಇಂಜಿನ್ ಗಳು ಕೆಟ್ಟು ನಿಂತಿವೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ವಾಗ್ದಾಳಿ ನಡೆಸಿದ್ದಾರೆ. ಸದಾಶಿವನಗರ ನಿವಾಸದಲ್ಲಿ ಗುರುವಾರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು ‘ಚಾಮರಾಜನಗರದಲ್ಲಿ 24 ಜನರ ಸಾವಿಗೆ ಸರ್ಕಾರವೇ ಹೊಣೆ ಎಂದು …

Read More »

ಬಂಗಾಳ: 11 ದಿನದಲ್ಲೇ ಶಾಸಕತ್ವ ತ್ಯಜಿಸಿದ ಬಿಜೆಪಿ ಸಂಸದರು!

ಕೊಲ್ಕತ್ತಾ: ಬಂಗಾಳ ವಿಧಾನಸಭೆಯಲ್ಲಿ ಬಿಜೆಪಿ ಸದಸ್ಯಬಲ 77ರಿಂದ 75ಕ್ಕೆ ಇಳಿದಿದೆ. ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದ ಬಿಜೆಪಿಯ ಇಬ್ಬರು ಸಂಸದರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಪಕ್ಷದ ಹೈಕಮಾಂಡ್ ಆದೇಶದಂತೆ ಸ್ಪೀಕರ್ಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ . ಬಿಜೆಪಿಯ ಕ್ರಮವನ್ನು ಲೋಕಸಭೆಯಲ್ಲಿ ಸ್ಥಾನ ಭದ್ರಪಡಿಸಿಕೊಳ್ಳುವ ಕ್ರಮ ಇದಾಗಿದೆ ಎಂದು ತೃಣಮೂಲ ಕಾಂಗ್ರೆಸ್ ಪಕ್ಷ ಲೇವಡಿ ಮಾಡಿದೆ. ಪಶ್ಚಿಮ ಬಂಗಾಳದಲ್ಲಿ ಎಲ್ಲ ಬಿಜೆಪಿ ಶಾಸಕರಿಗೆ ಕೇಂದ್ರೀಯ ಭದ್ರತೆ ನೀಡಿರುವ ಕೇಂದ್ರ …

Read More »

ಲಸಿಕೆಗಾಗಿ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ರಾಜ್ಯಗಳು ಪರಸ್ಪರ ಕಿತ್ತಾಟಡುವಂತೆ ಮಾಡಿರುವುದು ದೇಶಕ್ಕೆ ಕೆಟ್ಟ ಹೆಸರು ತರುತ್ತಿದೆ : ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್

ನವದೆಹಲಿ: ಲಸಿಕೆಗಾಗಿ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ರಾಜ್ಯಗಳು ಪರಸ್ಪರ ಕಿತ್ತಾಟಡುವಂತೆ ಮಾಡಿರುವುದು ದೇಶಕ್ಕೆ ಕೆಟ್ಟ ಹೆಸರು ತರುತ್ತಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, “ಭಾರತದ ರಾಜ್ಯಗಳು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪರಸ್ಪರ ಸ್ಪರ್ಧಿಸುವಂತಾಗಿದೆ. ಯುಪಿ ವಿರುದ್ಧ ಮಹಾರಾಷ್ಟ್ರ, ಮಹಾರಾಷ್ಟ್ರ ವಿರುದ್ದ ಒರಿಸ್ಸಾ, ಒರಿಸ್ಸಾ ದೆಹಲಿಯ ವಿರುದ್ಧ ಹೋರಾಡುತ್ತಿದೆ” ಎಂದು ಹೇಳಿದ್ದಾರೆ. “ಭಾರತ ಎಲ್ಲಿದೆ?” ಎಂದು ಪ್ರಶ್ನಿಸಿರುವ ಅವರು, “ಈ ಎಲ್ಲ ಬೆಳವಣಿಗೆಗಳು ಭಾರತದ …

Read More »

ಐಸಿಯುಗೆ ಸ್ಥಳಾಂತರಿಸಲು ಕೇಳಿಕೊಂಡ್ರು ಜನರಲ್​ ವಾರ್ಡ್​ನಲ್ಲೇ ಚಿಕಿತ್ಸೆ: ಯುವಕ ಸಾವು

ಚಿಕ್ಕಮಗಳೂರು: ಸರಿಯಾದ ಸಮಯಕ್ಕೆ ವೆಂಟಿಲೇಟರ್​ ಸಿಗದೇ ಯುವಕನೊಬ್ಬ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ನಗರದ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ. ಮೇಘರಾಜ್(31) ಮೃತ ಯುವಕ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಮತ್ತಿಕಟ್ಟೆ ಗ್ರಾಮದ ನಿವಾಸಿ. ಅನಾರೋಗ್ಯ ಹಿನ್ನೆಲೆಯಲ್ಲಿ ಆಸ್ಪತ್ರೆಯ ಜನರಲ್ ವಾರ್ಡ್​ನಲ್ಲಿ ಯುವಕನಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಆರೋಗ್ಯ ಪರಿಸ್ಥಿತಿ ಹದಗೆಟ್ಟಿದ್ದರಿಂದ ಐಸಿಯುಗೆ ಶಿಫ್ಟ್ ಮಾಡುವಂತೆ ಯುವಕ ಕೇಳಿಕೊಂಡಿದ್ದ. ಆದರೆ, ಯುವಕನ ಮನವಿಯನ್ನು ಪುರಷ್ಕರಿಸಿದೇ ಕೊನೆಯ ಕ್ಷಣದವರೆಗೂ ಜನರಲ್ ವಾರ್ಡ್​ನಲ್ಲೇ ಯುವಕನಿಗೆ ಚಿಕಿತ್ಸೆ …

Read More »

ರೈಲ್ವೆ ಪ್ರಯಾಣಕ್ಕೆ ನಕಲಿ ‘ನೆಗಟಿವ್’ ವರದಿ; ಆರೋಪಿ ಬಂಧನ

ಬೆಂಗಳೂರು: ನಗರದಿಂದ ರೈಲಿನ ಮೂಲಕ ಹೊರ ಜಿಲ್ಲೆ ಹಾಗೂ ಹೊರ ರಾಜ್ಯಗಳಿಗೆ ಪ್ರಯಾಣಿಸುತ್ತಿದ್ದ ಜನರಿಗೆ ಕೋವಿಡ್ ನೆಗಟಿವ್ ನಕಲಿ ವರದಿ ಪ್ರಪತಿ ನೀಡುತ್ತಿದ್ದ ಆರೋಪದಡಿ ಸಂಪತ್‌ ಲಾಲ್ ಎಂಬಾತನನ್ನು ಉಪ್ಪಾರಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ‘ಅಕ್ಕಿಪೇಟೆ ಮುಖ್ಯರಸ್ತೆ ನಿವಾಸಿ ಸಂಪತ್ ಲಾಲ್, ಹಲವು ದಿನಗಳಿಂದ ಕೃತ್ಯ ಎಸಗುತ್ತಿದ್ದ. ಆ ಬಗ್ಗೆ ಮಾಹಿತಿ ಬರುತ್ತಿದ್ದಂತೆ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಸೆರೆಹಿಡಿಯಲಾಗಿದೆ. ಆತನಿಂದ 3 ನಕಲಿ ನೆಗಟಿವ್ ವರದಿ ಪ್ರತಿ ಹಾಗೂ ಮೊಬೈಲ್ …

Read More »

ಕಾಳಸಂತೆಯಲ್ಲಿ ರೆಮ್‌ಡಿಸಿವಿರ್ ಮಾರಾಟ; ಐವರ ಬಂಧನ

ಮೈಸೂರು, : ರಾಜ್ಯದಲ್ಲಿ ರೆಮ್‌ಡಿಸಿವಿರ್ ಚುಚ್ಚುಮದ್ದು ಕೊರತೆ ಕೇಳಿ ಬರುತ್ತಿರುವ ಬೆನ್ನಲ್ಲೇ ಕಾಳಸಂತೆಯಲ್ಲಿ ರೆಮ್‌ಡಿಸಿವಿರ್ ಮಾರಾಟ ಮಾಡುತ್ತಿದ್ದ ಎರಡು ಜಾಲಗಳನ್ನು ಪತ್ತೆ ಮಾಡಿರುವ ಮೈಸೂರು ಸಿಸಿಬಿ ಪೊಲೀಸರು, ಐವರನ್ನು ಬಂಧಿಸಿದ್ದಾರೆ.ಮೈಸೂರಿನ ಜೆಪಿ ನಗರದ ಕಾಮಾಕ್ಷಿ ಆಸ್ಪತ್ರೆಯ ಸ್ಟಾಫ್ ನರ್ಸ್ ಜಿ.ಸುರೇಶ್ (27), ಕೆ.ಆರ್ ಆಸ್ಪತ್ರೆ ಇನ್‌ಸ್ಟಿಟ್ಯೂಟ್ ಆಫ್ ನೆಪ್ರೋ ನ್ಯೂರೋ ಸ್ಟಾಫ್ ನರ್ಸ್ ಡಿ.ಎಂ ರಾಘವೇಂದ್ರ(27), ಕೆ.ಆರ್ ಆಸ್ಪತ್ರೆ ಸ್ಟಾಫ್ ನರ್ಸ್ ಅಶೋಕ (31), ವಿಶ್ವೇಶ್ವರ ನಗರದ ಗಿರೀಶ್ ಚಂದ್ರ …

Read More »

2 ರಿಂದ 18 ವರ್ಷದ ಮಕ್ಕಳ ಮೇಲೆ ಕೋವ್ಯಾಕ್ಸೀನ್ ಕ್ಲಿನಿಕಲ್ ಪ್ರಯೋಗಕ್ಕೆ ಡಿಸಿಜಿಐ ಅನುಮೋದನೆ

ನವದೆಹಲಿ: ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (ಡಿಸಿಜಿಐ) ಗುರುವಾರ (ಮೇ 13) 2 ರಿಂದ 18 ವರ್ಷದ ಮಕ್ಕಳ ಮೇಲೆ ಭಾರತ್ ಬಯೋಟೆಕ್‌ನ ಕೊವ್ಯಾಕ್ಸೀನ್ ಪ್ರಯೋಗ ನಡೆಸಲು ಅನುಮತಿ ನೀಡಿದೆ. ಭಾರತ್ ಬಯೋಟೆಕ್ ತನ್ನ ದ್ವಿತೀಯ ಹಾಗೂ ತೃತೀಯ ಹಂತದ ಪ್ರಯೋಗಗಳನ್ನು “525 ಆರೋಗ್ಯವಂತ ಸ್ವಯಂಸೇವಕರ” ಮೇಲೆ ನಡೆಸಲಾಗುವುದು ಎಂದು ಹೇಳಿದೆ. ಪ್ರಯೋಗವು ಒಂದನೇ ದಿನ ಹಾಗೂ 28ನೇ ದಿನದಂದು ನೀಡಲಾಗುವ ಲಸಿಕೆಗಳ ಎರಡು ಡೋಸ್ ಗಳನ್ನು ಒಳಗೊಂಡಿರುತ್ತದೆ. …

Read More »

Covid-19 Vaccine:ವ್ಯಾಕ್ಸಿನ್ ಹಾಕಿಸಿಕೊಂಡ ಬಳಿಕ ಮದ್ಯ ಸೇವನೆ ಮಾಡಬಹುದೇ? ಇಲ್ಲಿದೆ ಉತ್ತರ

ನವದೆಹಲಿ: Covid-19 Vaccine – ದೇಶಾದ್ಯಂತ ಮೇ 1 ರಿಂದ 18 ವಯಸ್ಸಿಗಿಂತ ಮೇಲ್ಪಟ್ಟ ಜನರಿಗೆ ಲಸಿಕಾಕರಣ ಅಭಿಯಾನ ಆರಂಭಗೊಂಡಿದೆ. ಕೊರೊನಾ ವೈರಸ್ ನಿಂದ ರಕ್ಷಣೆ ಪಡೆಯಲು ಅಪಾರ ಸಂಖ್ಯೆಯಲ್ಲಿ ಜನರು ಲಸಿಕಾಕರಣ ಕೇಂದ್ರಕ್ಕೆ ಧಾವಿಸುತ್ತಿದ್ದಾರೆ. ಏತನ್ಮಧ್ಯೆ ಲಸಿಕಾಕರಣ ಹಾಗೂ ಮದ್ಯ ವಿಷಯ ಅತಿ ಹೆಚ್ಚು ಪ್ರಶ್ನೆಗೆ ಒಳಗಾದ ವಿಷಯವಾಗಿ ಹೊರಹೊಮ್ಮುತ್ತಿದೆ. ಕೊವಿಡ್-19 (Covid-19) ಲಸಿಕೆ ಹಾಕಿಸಿಕೊಳ್ಳುವುದರ ಅರ್ಥ No Alcohol? ಕೊವಿಡ್ -19 ಲಸಿಕೆ ಹಾಕಿಸಿಕೊಂಡ ಬಳಿಕ ಅಲ್ಕೋಹಾಲ್ …

Read More »

ಕೋವಿಡ್ ಲಸಿಕೆಯ ಮೊದಲ ಡೋಸ್ ತೆಗೆದುಕೊಂಡ ಎಷ್ಟು ದಿನಗಳ ನಂತರ ಎರಡನೇ ಡೋಸ್‌ ತೆಗೆದುಕೊಳ್ಳಬೇಕು?

ದೇಶದಲ್ಲಿ ಕೊರೋನಾ ಸಾಂಕ್ರಾಮಿಕದ ವಿರುದ್ಧದ ವ್ಯಾಕ್ಸಿನೇಷನ್ ಅಭಿಯಾನವು ಕಳೆದ ಒಂದೂವರೆ ತಿಂಗಳಲ್ಲಿ ವೇಗವನ್ನು ಪಡೆದುಕೊಂಡಿದೆ. ಪ್ರತಿದಿನ 20 ಲಕ್ಷಕ್ಕೂ ಹೆಚ್ಚು ಜನರಿಗೆ ಲಸಿಕೆ ನೀಡಲಾಗುತ್ತಿದೆ. ಆರೋಗ್ಯ ಸಚಿವಾಲಯದ ಪ್ರಕಾರ, ದೇಶದಲ್ಲಿ ಈವರೆಗೆ 17.52 ಮಿಲಿಯನ್ ಕೊರೋನಾ ಲಸಿಕೆಗಳನ್ನು ನೀಡಲಾಗಿದೆ. ಎರಡೂ ಲಸಿಕೆ ಪ್ರಮಾಣವನ್ನು ತೆಗೆದುಕೊಂಡ ಲಕ್ಷಾಂತರ ಜನರಿದ್ದಾರೆ. ಲಸಿಕೆಯ ಎರಡನೇ ಪ್ರಮಾಣವನ್ನು ಯಾವಾಗ ತೆಗೆದುಕೊಳ್ಳಬೇಕು ಎಂಬ ಬಗ್ಗೆ ಜನರಲ್ಲಿ ಇನ್ನೂ ಗೊಂದಲವಿದೆ. ವಿಶೇಷವಾಗಿ ಹೆಚ್ಚಿನ ವ್ಯಾಕ್ಸಿನೇಷನ್ ಕೇಂದ್ರಗಳಲ್ಲಿ ಲಭ್ಯವಿರುವ ಕೋವಿಶೀಲ್ಡ್ …

Read More »

ಗ್ರಾಹಕರಿಗೆ ಶುಭ ಸುದ್ದಿ ನೀಡಿದ ಟಾಟಾ ಮೋಟಾರ್ಸ್ !

ಮುಂಬೈ: ದೇಶದಲ್ಲಿ ಕರೋನಾ ಮಹಾಮಾರಿಯು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಹಲವಾರು ರಾಜ್ಯಗಳು ಲಾಕ್‌ಡೌನ್‌ಗಳನ್ನು ವಿಧಿಸಿವೆ. ಪ್ರಸ್ತುತ ಕೋವಿಡ್ -19 ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ದೇಶೀಯ ವಾಹನ ದೈತ್ಯ ಟಾಟಾ ಮೋಟಾರ್ಸ್ ತನ್ನ ಗ್ರಾಹಕರಿಗೆ ಶುಭ ಸುದ್ದಿಯೊಂದನ್ನು ನೀಡಿದೆ. ಟಾಟಾ ಮೋಟಾರ್ಸ್ ಪ್ರಕಟಣೆಯ ಪ್ರಕಾರ, ಏಪ್ರಿಲ್ 31, 2021 ಮತ್ತು ಮೇ 31, 2021 ರ ಅವಧಿಯವರೆಗೆ ಮುಕ್ತಾಯಗೊಳ್ಳುವ ಕಾರುಗಳ ವಾರಂಟಿ ಮತ್ತು ಉಚಿತ ಸೇವಾ ಅವಧಿಯನ್ನು ಪರಿಷ್ಕೃತವಾಗಿ 2021 ರ ಜೂನ್ …

Read More »