ಹೊಸದಿಲ್ಲಿ: ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಹಾಗೂ ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾ ಭಾಗಿಯಾಗಲಿದೆ. ಇದಕ್ಕಾಗಿ ಈಗಾಗಲೇ ತಂಡವನ್ನು ಆಯ್ಕೆ ಮಾಡಲಾಗಿದ್ದು, ಜೂನ್ 2ರಂದು ಕ್ರಿಕೆಟಿಗರು ಇಂಗ್ಲೆಂಡಿಗೆ ವಿಮಾನವೇರಲಿದ್ದಾರೆ. ಆದರೆ ಇದಕ್ಕೂ ಮುನ್ನ ಬಿಸಿಸಿಐ ಎಲ್ಲ ಆಟಗಾರರಿಗೂ ಖಡಕ್ ಸೂಚನೆಯೊಂದನ್ನು ರವಾನಿಸಿದೆ. ಈ ಪ್ರವಾಸಕ್ಕೂ ಮುನ್ನ ಎಲ್ಲ ಆಟಗಾರರು ಮುಂಬಯಿಗೆ ಆಗಮಿಸಿದ ಬಳಿಕ 14 ದಿನಗಳ ಕ್ವಾರಂಟೈನ್ಗೆ ಒಳಗಾಗಬೇಕಿದೆ. ಬಳಿಕ ಆಟಗಾರರಿಗೆ ಎರಡು ಬಾರಿ …
Read More »ನಾಲಾಯಕ್ ಇಡು ಫೋನ್ ದೊಡ್ಡ ಕಿಸಾಮತಿ ಮಾಡ್ತಿ : ಸಿದ್ದು ಸವದಿ
ಬಾಗಲಕೋಟೆ: ಕೊರೊನಾದಿಂದ ಸಹೋದರನನ್ನು ಕಳೆದುಕೊಂಡ ವ್ಯಕ್ತಿ ಶಾಸಕರಿಗೆ ಕರೆ ಮಾಡಿ ಆಕ್ಸಿಜನ್ ವ್ಯವಸ್ಥೆ ಮಾಡಬೇಕು, ಸರ್ಕಾರಿ ಆಸ್ಪತ್ರೆಯ ಮುಂದೆ ಕೂರಬೇಕು ಹೇಳಿದ್ದಕ್ಕೆ ನಾಲಾಯಕ್ ಇಡು ಫೋನ್ ಎಂದು ತೆರದಾಳ ಶಾಸಕ ಸಿದ್ದು ಸವದಿ ಉದ್ದಟತನದ ಮಾತುಗಳನ್ನಾಡಿದ್ದಾರೆ. ಸಂಜಯ್ ದೊಂಡಿಬಾಗ ಗಾಯಕವಾಡ(41) ಕೊರೊನಾ ದಿಂದ ಶನಿವಾರ ಸಾವನ್ನಪ್ಪಿದ್ದಾರೆ. ಇವರು ರಬಕವಿಬನಹಟ್ಟಿ ತಾಲ್ಲೂಕಿನ ಆಸಂಗಿ ಗ್ರಾಮದ ನಿವಾಸಿಯಾಗಿದ್ದಾರೆ. ಆಕ್ಸಿಜನ್ ಸಿಗದೇ ಸಂಜಯ್ ಸಾವನ್ನಪಿದ್ದಾರೆಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಸಂಜಯ್ ಅವರನ್ನು ಉಳಿಸಿಕೊಳ್ಳಲು ಕುಟುಂಬದವರು ಬಾಗಲಕೋಟೆ …
Read More »ಕೊರೊನಾ ಸೋಂಕಿತೆ ಶವವನ್ನ ನಡುಬೀದಿಯಲ್ಲಿ ಬಿಟ್ಟ ಆರೋಗ್ಯ ಸಿಬ್ಬಂದಿ..!
ಕೋವಿಡ್ ಸೋಂಕಿನಿಂದ ಮೃತಪಟ್ಟ ಮಹಿಳೆಯ ಶವವನ್ನ ಆರೋಗ್ಯ ಸಿಬ್ಬಂದಿ ಮರದಡಿಯಲ್ಲೇ ಬಿಟ್ಟು ಹೋದ ಅಮಾನವೀಯ ಘಟನೆ ತುಮಕೂರು ಜಿಲ್ಲೆ ಪಾವಗಡದ ಮರಡಿಪಾಳ್ಯದಲ್ಲಿ ನಡೆದಿದೆ. ಕಳೆದ ಕೆಲ ದಿನಗಳ ಹಿಂದೆ ಕೋವಿಡ್ ಸೋಂಕಿಗೆ ಒಳಗಾಗಿದ್ದ ಮಹಿಳೆಯನ್ನ ಪಾವಗಡದ ಕ್ವಾರಂಟೈನ್ ಕೇಂದ್ರಕ್ಕೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದ ಹಿನ್ನೆಲೆ ಮಹಿಳೆ ಕ್ವಾರಂಟೈನ್ ಕೇಂದ್ರದಲ್ಲೇ ಸಾವನ್ನಪ್ಪಿದ್ದರು. ಮಹಿಳೆಯ ಮೃತದೇಹವನ್ನ ತೆಗೆದುಕೊಂಡು ಹೋಗಿ ಕೊರೊನಾ ಮಾರ್ಗಸೂಚಿಯಂತೆ ಅಂತ್ಯಕ್ರಿಯೆ ಮಾಡೋದು ಬಿಟ್ಟು ಆರೋಗ್ಯ ಸಿಬ್ಬಂದಿ ಸೋಂಕಿತೆಯ …
Read More »ಬೆಂಗಳೂರನ್ನು ಟೆರರಿಸ್ಟ್ ಎಂದು ಆರೋಪಿಸಿದ್ದು, ತೇಜಸ್ವಿ ಸೂರ್ಯ: ಡಿ.ಕೆ.ಶಿ.
ಬೆಂಗಳೂರು, ಮೇ 11- ಲಾಕ್ ಡೌನ್ ಘೋಷಣೆ ಮಾಡಿರುವ ರಾಜ್ಯ ಸರ್ಕಾರ ರೈತರು ಹಾಗೂ ಬಡ ವರ್ಗದವರ ನೆರವಿಗೆ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಒತ್ತಾಯಿಸಿದ್ದಾರೆ. ತಮ್ಮ ನಿವಾಸದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ಯಾಕೇಜ್ ಕೊಡಲು ನಾವು ನೋಟು ಮುದ್ರಿಸುವ ಯಂತ್ರ ಇಟ್ಟಿಲ್ಲ ಎಂದು ಕೆಲ ಸಚಿವರು ಹೇಳಿದ್ದಾರೆ. ಸರ್ಕಾರಕ್ಕೆ ಪ್ಯಾಕೇಜ್ ಕೊಡಲಾಗದಿದ್ದರೆ ಆಗಲ್ಲ ಎಂದು ಹೇಳಲಿ ಅದನ್ನು ಬಿಟ್ಟು ಉದ್ಧಟತನದ ಮಾತುಗಳನ್ನು …
Read More »ಹೊಸ ಎಂಆರ್ಪಿ ಸ್ಟಿಕರ್ ಅಂಟಿಸಿ ದುಬಾರಿ ಬೆಲೆಗೆ ವೈದ್ಯಕೀಯ ಉಪಕರಣ, ಔಷಧಿಗಳ ಮಾರಾಟ
ಬೆಂಗಳೂರು, ಮೇ 11- ರಾಜ್ಯ ಸರ್ಕಾರ ಎಷ್ಟೇ ಪ್ರಯತ್ನ ಪಟ್ಟರು ಕೊರೊನಾ ಚಿಕಿತ್ಸೆ ಹಾಗೂ ಅದರ ನಿರ್ವಹಣೆಗೆ ಬಳಕೆಯಾಗುವ ಸಾಮಗ್ರಿಗಳ ದರ ಮಾರುಕಟ್ಟೆಯಲ್ಲೇ ದುಬಾರಿಯಾಗಿದ್ದು, ಜನ ಸಾಮಾನ್ಯರು ಪರಿತಪಿಸುವಂತಾಗಿದೆ. ವೈದ್ಯಕೀಯ ಕ್ಷೇತ್ರದ ವ್ಯಾಪಾರ ವಹಿವಾಟುಗಳಿ ಹಿಂದೆಂದಿಗಿಂತಲೂ ನಲವತ್ತು ಪಟ್ಟು ಹೆಚ್ಚಾಗಿದೆ. ಜೊತೆಯಲ್ಲಿ ಲಾಭಕೋರತನ ದುಪ್ಪಟ್ಟಾಗಿದೆ. ಆಕ್ಸಿಜನ್ ಮತ್ತು ಅದನ್ನು ತುಂಬುವ ಸಿಲಿಂಡರ್ ಗಳು, ಪಿಪಿಇ ಕಿಟ್, ಪಲ್ಸಾಸ್ಕೋಮೀಟರ್, ಬಿಪಿ ಆಪರೆಟರ್, ಮಧುಮೇಹ ಪರೀಕ್ಷಿರುವ ಕಿರು ಯಂತ್ರ, ರೆಮ್ ಡಿಸಿವಿರ್ ಹಾಗೂ …
Read More »ಇಂದಿರಾ ಕ್ಯಾಂಟೀನ್ನಲ್ಲಿ ಉಚಿತ ಆಹಾರ ಪೂರೈಕೆಗೆ ರಾಜ್ಯ ಸರ್ಕಾರದಿಂದ ಸೂಚನೆ
ರಾಜ್ಯದಲ್ಲಿ ಕೊರೊನಾ 2ನೇ ನಿಯಂತ್ರಣದ ಹಿನ್ನೆಲೆಯಲ್ಲಿ ಮೇ 24ರವರೆಗೂ ರಾಜ್ಯ ಸರ್ಕಾರ ಲಾಕ್ಡೌನ್ ಆದೇಶ ವಿಧಿಸಿದೆ. ಈ ಸಮಯದಲ್ಲಿ ಯಾರೂ ಉಪವಾಸದಿಂದ ಇರಬಾರದು ಎಂಬ ಕಾರಣಕ್ಕೆ ಇಂದಿರಾ ಕ್ಯಾಂಟೀನ್ನಲ್ಲಿ ಸಾರ್ವಜನಿಕರಿಗೆ ಉಚಿತ ಆಹಾರ ಒದಗಿಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕೊರೊನಾ ನಿಯಂತ್ರಣ ಮಾಡುವ ಸಲುವಾಗಿ ರಾಜ್ಯದಲ್ಲಿ ಮೇ 10ರಿಂದ ಮೇ 24ನೇ ತಾರೀಖಿನಿವರೆಗೆ ಲಾಕ್ಡೌನ್ ಆದೇಶ ಜಾರಿಯಲ್ಲಿದೆ. ಈ ಸಂದರ್ಭದಲ್ಲಿ ಆರ್ಥಿಕ ಸಂಕಷ್ಟವನ್ನ ಎದುರಿಸುವ ದಿನಗೂಲಿ ಕಾರ್ಮಿಕರು ಸೇರಿದಂತೆ …
Read More »ಕೋವಿಡ್ ಸೋಂಕಿನಿಂದ 1,952 ಉದ್ಯೋಗಿಗಳು ನಿಧನ: ಭಾರತೀಯ ರೈಲ್ವೆ ಇಲಾಖೆ
ನವದೆಹಲಿ: 2020ರಲ್ಲಿ ಆರಂಭವಾದ ಕೋವಿಡ್ ಸೋಂಕು ಭಾರತೀಯ ರೈಲ್ವೆ ಇಲಾಖೆ ಮೇಲೆ ದುರಂತ ಪರಿಣಾಮ ಬೀರಿದ್ದು, ಕೋವಿಡ್ 19 ಸೋಂಕಿನಿಂದ 1,952 ಉದ್ಯೋಗಿಗಳನ್ನು ಕಳೆದುಕೊಂಡಿರುವುದಾಗಿ ತಿಳಿಸಿದೆ. ದೇಶದ ಅತೀ ದೊಡ್ಡ ಸಾರಿಗೆ ವ್ಯವಸ್ಥೆಯಾಗಿರುವ ರೈಲು ಸಂಚಾರ ವ್ಯವಸ್ಥೆಯಲ್ಲಿ ದಿನಂಪ್ರತಿ ಒಂದು ಸಾವಿರ ಕೋವಿಡ್ 19 ಸೋಂಕು ಪ್ರಕರಣ ವರದಿಯಾಗುತ್ತಿದೆ ಎಂದು ರೈಲ್ವೆ ಮಂಡಳಿ ಹೇಳಿದೆ. ರೈಲ್ವೆ ಕೂಡಾ ಯಾವುದೇ ರಾಜ್ಯ ಅಥವಾ ಪ್ರದೇಶಕ್ಕಿಂತ ಭಿನ್ನವಾಗಿಲ್ಲ. ಯಾಕೆಂದರೆ ನಾವು ಕೂಡಾ ಕೋವಿಡ್ …
Read More »ದಕ್ಷಿಣ ಕನ್ನಡದಲ್ಲಿ18 ರಿಂದ 44 ವರ್ಷದೊಳಗಿನವರಿಗೆ ಲಸಿಕೆ ನೀಡುವ ಕಾರ್ಯ ಆರಂಭ
ಮಂಗಳೂರು : ದ.ಕ. ಜಿಲ್ಲೆಯಲ್ಲಿ ಮಂಗಳವಾರ 18 ರಿಂದ 44 ವರ್ಷದೊಳಗಿನವರಿಗೆ ಲಸಿಕೆ ನೀಡುವ ಕಾರ್ಯ ಆರಂಭಗೊಂಡಿದೆ. ಆನ್ ಲೈನ್ ಮೂಲಕ ನೋಂದಣಿ ಮಾಡಿಕೊಂಡವರಿಗೆ ಪ್ರಥಮ ಹಂತವಾಗಿ ನಗರದ ವೆನ್ಲಾಕ್ ಆಸ್ಪತ್ರೆ ಹಾಗೂ ನಾಲ್ಕು ತಾಲ್ಲೂಕು ಆಸ್ಪತ್ರೆ ಗಳಲ್ಲಿ ಮಂಗಳವಾರ ಲಸಿಕೆ ನೀಡಲಾಗುತ್ತಿದೆ. ಮಂಗಳವಾರ ವೆನ್ಲಾಕ್ ನಲ್ಲಿ 250 ಮಂದಿ 18 ರಿಂದ 44 ವರ್ಷದವರಿಗೆ ಆನ್ ಲೈನ್ ನೋಂದಣಿ ಪಡೆದವರಿಗೆ ಲಸಿಕೆ ನೀಡಲಾಗುತ್ತಿದ್ದು ಯುವಕರು ಉತ್ಸಾಹದಿಂದ ಕೇಂದ್ರಕ್ಕೆ ಲಸಿಕೆ …
Read More »ರೋಡಿಗೆ ಇಳಿದಿರುವ ಬೈಕ್ ಸವಾರರ ಮೇಲೆ ಲಾಠಿ ಚಾರ್ಜ್ ಪೊಲೀಸರ ವರ್ತನೆಗೆ ಸಾರ್ವಜನಿಕರ ವ್ಯಾಪಕ ಆಕ್ರೋಶ
ಗೋಕಾಕ:ರಸ್ತೆಗಿಳಿದವರ ಮೇಲೆ ಲಾಠಿ ಏಟು, ಪೊಲೀಸರ ವರ್ತನೆಗೆ ಸಾರ್ವಜನಿಕರ ವ್ಯಾಪಕ ಆಕ್ರೋಶ ಲಾಕ್ಡೌನ್ ಸಂದರ್ಭದಲ್ಲಿ ರಸ್ತೆಗಿಳಿದವರ ಮೇಲೆ ಪೊಲೀಸರು ಲಾಠಿಯಲ್ಲಿ ಹಿಗ್ಗಾಮುಗ್ಗ ಥಳಿಸುತ್ತಿರುವುದರ ವಿರುದ್ಧ ವ್ಯಾಪಕ ಆಕ್ರೋಶಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಕ್ತವಾಗುತ್ತಿವೆ. ಸಾಮಾಜಿಕ ಹೋರಾಟಗಾರರು, ಬರಹಗಾರರು ಮಾತ್ರವಲ್ಲದೆ ಸಾರ್ವಜನಿಕರು ಪೊಲೀಸರ ನಡೆಯನ್ನು ಖಂಡಿಸುತ್ತಿದ್ದಾರೆ. ಕೋವಿಡ್ ಕಠಿಣ ಸಂದರ್ಭದಲ್ಲಿ ಸಂಕಷ್ಟದಲ್ಲಿರುವ ಜನಸಾಮಾನ್ಯರನ್ನು ಅಪರಾಧಿಗಳಂತೆ ನಡೆಸಿಕೊಂಡು ಶಿಕ್ಷೆ ಕೊಡಲು ಪೊಲೀಸರಿಗೆ ಅಧಿಕಾರ ಕೊಟ್ಟಿದ್ದು ಯಾರು ಎಂದು ಪ್ರಶ್ನಿಸುತ್ತಿದ್ದಾರೆ. ‘ಪೊಲೀಸರಿಗೆ ಶಿಕ್ಷಿಸುವ …
Read More »ಮೂಗು ನೋಯುತ್ತೆ ಅಂತಾ ಮಾಸ್ಕ್ ಹಾಕಿಲ್ಲ, ನಮ್ಮನ್ನ ಬಿಟ್ಟು ದೇಶ ಲೂಟಿ ಮಾಡೋರನ್ನು ಹಿಡೀರಿ- ದಂಪತಿ ಹೈ ಡ್ರಾಮಾ
ಯಾದಗಿರಿ: ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಭಾರೀ ಪ್ರಮಾಣದಲ್ಲಿ ಹೆಚ್ಚುತ್ತಿವೆ. ಜನ ಆಕ್ಸಿಜನ್, ಬೆಡ್ ಕೊರತೆಯಿಂದ ನರೆಳಿ ಸಾಯುತ್ತಿದ್ದಾರೆ. ಇಷ್ಟಾದರೂ ಕೆಲವರು ಮಾತ್ರ ಉದ್ಧಟತನ ಮೆರೆಯುತ್ತಿದ್ದಾರೆ. ಮೂಗೂ ನೋವು ಆಗುತ್ತೆ ಎಂದು ದಂಪತಿ ಮಾಸ್ಕ್ ಹಾಕದೆ, ಸಿಟಿ ರೌಂಡ್ಸ್ ಹೊಡೆಯುತ್ತಿದ್ದು, ಪ್ರಶ್ನಿಸಿದ ಪೊಲೀಸರಿಗೆ ಅವಾಜ್ ಹಾಕಿದ್ದಾರೆ. ಸುಭಾಷ್ ವೃತ್ತದಲ್ಲಿ ಘಟನೆ ನಡೆದಿದ್ದು, ಮಾಸ್ಕ್ ಹಾಕದೇ ಮೊಪೆಡ್ನಲ್ಲಿ ನಗರ ಸುತ್ತುತ್ತಿದ್ದ ದಂಪತಿಯನ್ನು ಪ್ರಶ್ನಿಸಿದ್ದಕ್ಕೆ ಹೈ ಡ್ರಾಮಾ ಮಾಡಿ, ಉದ್ಧಟತನ ಮೆರೆದಿದ್ದಾರೆ. ಮಾಸ್ಕ್ ಹಾಕದ್ದಕ್ಕೆ …
Read More »
Laxmi News 24×7