Breaking News

ರಾಜ್ಯ

ವೈದ್ಯರ ವಿರುದ್ಧ ಪೋಸ್ಟ್; ಕಾಮಿಡಿಯನ್ ಸುನಿಲ್ ಪಾಲ್ ವಿರುದ್ಧ ದೂರು ದಾಖಲು

ಖ್ಯಾತ ಕಮಿಡಿಯನ್ ಸುನಿಲ್ ಪಾಲ್ ವಿರುದ್ಧ ಮುಂಬೈನ ಅಂಧೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕಾಮಿಡಿಯನ್ ಸುನಿಲ್ ಪಾಲ್ ಅವರು ಸಾಮಾಜಿಕ ಜಾಲತಾಣದಲ್ಲಿ ಪ್ರಸ್ತುತ ಕೋವಿಡ್ ಸನ್ನಿವೇಶದ ಬಗ್ಗೆ ವಿಡಿಯೋ ಮಾಡಿ ಮಾತನಾಡುತ್ತಾ ಕೊರೊನಾ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರನ್ನು ರಾಕ್ಷಸರು, ಕಳ್ಳರು ಎಂದು ಕರೆದಿದ್ದರು. ಇದೇ ಕಾರಣಕ್ಕೆ ಅವರ ವಿರುದ್ಧ ದೂರು ದಾಖಲಾಗಿದೆ. ‘ಕೋವಿಡ್ ಸನ್ನಿವೇಶದಲ್ಲಿ ವೈದ್ಯರು ರೋಗಿಗಳಿಂದ ಹಣ ಕೀಳುತ್ತಿದ್ದಾರೆ. ಬಿಳಿ ಬಟ್ಟೆ ಧರಿಸಿದ ರಾಕ್ಷಸರಂತೆ ವರ್ತಿಸುತ್ತಿದ್ದಾರೆ. …

Read More »

ಶುಕ್ರವಾರ ಸಂಜೆ 6 ಗಂಟೆಗೆ ಸಿಎಂ ನಿವಾಸ ಕಾವೇರಿಯಲ್ಲಿ ಗಂಭೀರ ಚರ್ಚೆ ರಾಜ್ಯದಲ್ಲಿ ಸಂಪೂರ್ಣ ಲಾಕ್ ಡೌನ್ ಫಿಕ್ಸ್?

ಜನತಾ ಕರ್ಫ್ಯೂ ವಿಫಲವಾಗಿದೆ ಎಂದು ಸಚಿವರು, ಆರೋಗ್ಯ ತಜ್ಞರು ಹೇಳಿಕೆಗಳ ಬೆನ್ನಲ್ಲೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಚಿವರ ಸಭೆ ಕರೆದಿದ್ದು ಲಾಕ್ ಡೌನ್ ವಿಧಿಸುವ ಬಗ್ಗೆ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ. ಶುಕ್ರವಾರ ಸಂಜೆ ಮುಖ್ಯಮಂತ್ರಿ ಬಿಎಸ್ ವೈ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಮಹತ್ವದ ಸಭೆ ಕರೆಯಲಾಗಿದ್ದು, ಸಭೆಯಲ್ಲಿ ಸಚಿವರು, ಹಿರಿಯ ಅಧಿಕಾರಿಗಳು ಭಾಗಿಯಾಗಲಿದ್ದು, ಕೋವಿಡ್ ನಿಯಂತ್ರಣ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಕಳೆದ ಎರಡು ದಿನಗಳಿಂದ ರಾಜ್ಯದಲ್ಲಿ 300ಕ್ಕೂ ಅಧಿಕ ಕೊರೊನಾ ಸಾವು …

Read More »

ಕೋವಿಡ್‌-19: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಾರಂತ್ಯದ ಕರ್ಫ್ಯೂ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶುಕ್ರವಾರ ರಾತ್ರಿ 9 ಗಂಟೆಯಿಂದ ಸೋಮವಾರ ಬೆಳಿಗ್ಗೆ 6 ಗಂಟೆಯವರೆಗೆ ವಾರಾಂತ್ಯ ಕರ್ಫ್ಯೂ ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಆದೇಶಿಸಿದ್ದಾರೆ. ಔಷಧಿ ಅಂಗಡಿಗಳು ಮತ್ತು ಆಸ್ಪತ್ರೆ ಹೊರತುಪಡಿಸಿ ಶುಕ್ರವಾರ ರಾತ್ರಿ 9 ರಿಂದ ಸೋಮವಾರ ಬೆಳಿಗ್ಗೆ 6 ರವರೆಗೆ ಎಲ್ಲ ರೀತಿಯ ಚಟುವಟಿಕೆಗಳನ್ನು ನಿರ್ಬಂಧಿಸಲಾಗಿದೆ. ಸಾರ್ವಜನಿಕರು ಈ ಸೇವೆಗಳನ್ನು ಹತ್ತಿರದ ಅಂಗಡಿಗಳಿಂದ ಮಾತ್ರ ಪಡೆಯಬೇಕು. ತುರ್ತು, ಅಗತ್ಯ ಸೇವೆಗಳು, ನಿರಂತರ ಕಾರ್ಯಾಚರಣೆ ಅಗತ್ಯವಿರುವ ಕೈಗಾರಿಕೆಗಳು, …

Read More »

1 ಕೋಟಿ ಮಂದಿಗೆ ಲಸಿಕೆ! : ಲಸಿಕೆ ಪಡೆದವರಲ್ಲಿ ಸ್ತ್ರೀಯರೇ ಹೆಚ್ಚು

ಬೆಂಗಳೂರು: ರಾಜ್ಯದಲ್ಲಿ ಈವರೆಗೆ ಒಂದು ಕೋಟಿ ಡೋಸ್‌ ಕೋವಿಡ್ ಲಸಿಕೆ ವಿತರಿಸಲಾಗಿದೆ. ಅಭಿಯಾನದಲ್ಲಿ ಒಟ್ಟು 84.6 ಲಕ್ಷ ಮಂದಿ ಲಸಿಕೆ ಪಡೆದಿದ್ದು, 18.5 ಲಕ್ಷ ಮಂದಿ ಎರಡೂ ಡೋಸ್‌ ಪೂರ್ಣಗೊಳಿಸಿದ್ದಾರೆ. ಲಸಿಕೆ ಅಭಿಯಾನ ಆರಂಭವಾಗಿ 110 ದಿನಗಳಾಗಿವೆ. ಗುರುವಾರದ ಅಂತ್ಯಕ್ಕೆ ಒಟ್ಟು 84.6 ಲಕ್ಷ ಜನರಿಗೆ ಲಸಿಕೆ ಹಾಕಲಾಗಿದೆ. ಈ ಪೈಕಿ 18.5 ಲಕ್ಷ ಮಂದಿ 2ನೇ ಡೋಸ್‌ ಪೂರ್ಣಗೊಳಿಸಿದ್ದಾರೆ. ಒಟ್ಟು 1,03,01,805 ಡೋಸ್‌ ನೀಡಲಾಗಿದೆ ಎಂದು ಆರೋಗ್ಯ ಇಲಾಖೆ …

Read More »

ರಾಜ್ಯದ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್ : ಬೇಸಿಗೆ ರಜೆಯಲ್ಲಿ ಬಿಸಿಯೂಟದ ಬದಲು ಪಡಿತರ ವಿತರಣೆ!

ಬೆಂಗಳೂರು : ರಾಜ್ಯದ ಶಾಲಾ ಮಕ್ಕಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿಯೊಂದನ್ನು ನೀಡಿದ್ದು, ಶಾಲಾ ಮಕ್ಕಳಿಗೆ ಶೈಕ್ಷಣಿಕ ವರ್ಷದ ಆರಂಭದಿಂದಲೂ ಬಿಸಿಯೂಟದ ಬದಲಿಗೆ ಆಹಾರ ಧಾನ್ಯವನ್ನೇ ನೀಡಲಾಗುತ್ತಿದ್ದು, ಬೇಸಿಗೆ ರಜೆಯಲ್ಲೂ ಬಿಸಿಯೂಟದ ಬದಲು ಪಡಿತರ ನೀಡಲು ನಿರ್ಧರಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ 1 ರಿಂದ 9 ನೇ ತರಗತಿ ಮೌಲ್ಯಾಂಕನ ಪರೀಕ್ಷೆ ಇಲ್ಲದೇ ತೇರ್ಗಡೆ ಮಾಡಿ ಬೇಸಿಗೆ ರಜೆ ಪ್ರಕಟಿಸಿದೆ. …

Read More »

ಆಕ್ಸಿಜನ್ ಸಮಸ್ಯೆಯಿಂದ ಬೀದರ್‌ನಲ್ಲಿ ವ್ಯಕ್ತಿ ಸಾವು

ಬೀದರ್: ಖಾಸಗಿ ಆಸ್ಪತ್ರೆಯಲ್ಲಿ ಸರಿಯಾದ ಸಮಯಕ್ಕೆ ಆಕ್ಸಿಜನ್ ಸಿಗದೆ ಓರ್ವ ವ್ಯಕ್ತಿ ಸಾವನ್ನಪ್ಪಿದ ಘಟನೆ ಬೀದರ್ ನಲ್ಲಿ ನಡೆದಿದೆ. ಅಬ್ದುಲ್ ಮನ್ನಾನ್ ಸೇಠ್(63) ಆಕ್ಸಿಜನ ಸಿಗದೆ ಇಂದು ಸಾವನ್ನಪ್ಪಿದ್ದಾರೆ. ಬೀದರ್ ನಗರದ ಓಲ್ಡ್ ಸಿಟಿಯಲ್ಲಿರುವ ಬಿಬಿಎಸ್ ಆಸ್ಪತ್ರೆಯಲ್ಲಿ ತಡರಾತ್ರಿ ಆಕ್ಸಿಜನ್ ಮುಗಿದರು ಖಾಸಗಿ ಆಸ್ಪತ್ರೆಯ ಆಡಳಿತ ಮಂಡಳಿಯ ಮಹಾ ನಿರ್ಲಕ್ಷ್ಯದಿಂದಾಗಿ ಈ ಅವಘಡ ಸಂಭವಿಸಿದೆ.   ವಿಷಯ ತಿಳಿದು ಸ್ಥಳಕ್ಕೆ ಬಂದ ನಗರ ಠಾಣೆಯ ಪೊಲೀಸರು ಆಕ್ಸಿಜನ್ ವ್ಯವಸ್ಥೆಮಾಡಿ 13 …

Read More »

ರೆಮಿಡಿಸಿವರ್ ಅಕ್ರಮವಾಗಿ ಮಾರಾಟ – ಬೀದರ್‌ನಲ್ಲಿ ಇಬ್ಬರ ಬಂಧನ

ಬೀದರ್: ಕಾಳಸಂತೆಯಲ್ಲಿ ರೆಮಿಡಿಸಿವರ್ ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬೀದರ್ ಪೊಲೀಸರು ಬಂಧಿಸಿದ್ದಾರೆ. ಆರೋಗ್ಯ ಇಲಾಖೆಯಲ್ಲಿ ಕಾರ್ಯನಿರ್ವಸುತ್ತಿದ್ದ ಶೇಖ್ ಅಬ್ದುಲ್ಲಾ ಹಾಗೂ ಆರೋಗ್ಯ ಇಲಾಖೆಯ ಜೊತೆ ಸಂಪರ್ಕದಲ್ಲಿರುವ ಮಹಮ್ಮದ್ ವಾಸಿಂ ಬಂಧಿತ ಆರೋಪಿಗಳು. ಖಚಿತ ಮಾಹಿತಿ ಮೇರೆಗೆ ನಗರ ಠಾಣೆಯ ಪೊಲೀಸರು ಬೀದರ್ ನ ಓಲ್ಡ್ ಸಿಟಿಯ ಗವಾನ್ ಚೌಕ್ ಬಳಿ ದಾಳಿ ಮಾಡಿ ಇಬ್ಬರು ಆರೋಪಿಯನ್ನು ಬಂಧಿಸಿದ್ದಾರೆ. ಕಾಳಸಂತೆಯಲ್ಲಿ ರೆಮಿಡಿಸಿವರ್ ಅಕ್ರಮವಾಗಿ ಮಾರಾಟವಾಗುತ್ತಿದೆ ಎಂಬ ಮಾಹಿತಿ ಪಡೆದ …

Read More »

.ಈಶ್ವರಪ್ಪನವರೇ ತೇಜಸ್ವಿ ಸೂರ್ಯಗೆ ಎಚ್ಚರಿಕೆ ನೀಡಿದ ಜಮೀರ್ ಅಹ್ಮದ್

ಬೆಂಗಳೂರು: ಸಚಿವ ಕೆ.ಎಸ್.ಈಶ್ವರಪ್ಪನವರೇ ಮುಸಲ್ಮಾನ್, ಮುಸಲ್ಮಾನ್ ಅಂತ ಸಾಯಬೇಡಿ. ಸಂಸದ ತೇಜಸ್ವಿ ಸೂರ್ಯ ಅವರೇ ನಿಮ್ಮ ಕಣ್ಣಿಗೆ ಕೇವಲ ಮುಸಲ್ಮಾನರು ಕಾಣಿಸ್ತಾರಾ ಎಂದು ಕಾಂಗ್ರೆಸ್ ಶಾಸಕ, ಮಾಜಿ ಸಚಿವ ಜಮೀರ್ ಅಹ್ಮದ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮುಸಲ್ಮಾನರೇ ಕಾಣೋದಾ ನಿಮ್ಮ ಕಣ್ಣಿಗೆ?: ಸಂಸದ ತೇಜಸ್ವಿ ಸೂರ್ಯ ಆರೋಪಿಸಿದ್ದ 17 ಮುಸ್ಲಿಂ ಯುವಕರನ್ನ ಜೊತೆಗೆ ಕರೆದುಕೊಂಡು ಶಾಸಕ ಜಮೀರ್ ಅಹ್ಮದ್ ಸುದ್ದಿಗೋಷ್ಠಿ ನಡೆಸಿದರು. ಮಾನ್ಯ ಗ್ರೇಟ್ ಎಂಪಿಯವರು ಒಳ್ಳೆ ಕೆಲಸ ಮಾಡಿದ್ದೀರಿ. ಕಾಂಗ್ರೆಸ್ …

Read More »

ಕರ್ನಾಟಕ ಸೇರಿ 17 ರಾಜ್ಯಗಳಿಗೆ 99871 ಕೋಟಿ ಆದಾಯ ಕೊರತೆ ಅನುದಾನ ಬಿಡುಗಡೆ ಮಾಡಿದ ಹಣಕಾಸು ಸಚಿವಾಲಯ

ನವದೆಹಲಿ:17 ರಾಜ್ಯಗಳಿಗೆ, 9 9,871 ಕೋಟಿ ಆದಾಯ ಕೊರತೆ ಅನುದಾನದ ಎರಡನೇ ಮಾಸಿಕ ಕಂತನ್ನು ಹಣಕಾಸು ಸಚಿವಾಲಯ ಗುರುವಾರ ಬಿಡುಗಡೆ ಮಾಡಿದೆ. ಎರಡನೇ ಕಂತಿನ ಬಿಡುಗಡೆಯೊಂದಿಗೆ, ಪ್ರಸಕ್ತ ಹಣಕಾಸು ವರ್ಷದ ಮೊದಲ ಎರಡು ತಿಂಗಳಲ್ಲಿ ಒಟ್ಟು, 7 19,742 ಕೋಟಿ ಮೊತ್ತವನ್ನು ರಾಜ್ಯಗಳಿಗೆ ವಿತರಣಾ ಆದಾಯ ಕೊರತೆ ಅನುದಾನವಾಗಿ ಬಿಡುಗಡೆ ಮಾಡಲಾಗಿದೆ ಎಂದು ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.ಕೇಂದ್ರವು ಸಂವಿಧಾನದ 275 ನೇ ವಿಧಿ ಅಡಿಯಲ್ಲಿ ರಾಜ್ಯಗಳಿಗೆ ವಿತರಣಾ ನಂತರದ ಆದಾಯ …

Read More »

ನಾವು ಪಂಚರ್ ಹಾಕುವವರೇ.. ನಿಮ್ಮ ಗಾಡಿನೂ ಒಂದಿನ ಪಂಚರ್ ಆಗುತ್ತದೆ’

ಬೆಂಗಳೂರು: ಬೆಡ್ ಬ್ಲಾಕಿಂಗ್ ಹಗರಣದ ಬಗ್ಗೆ ಸಂಸದ ತೇಜಸ್ವಿ ಸೂರ್ಯ ದಾಖಲೆಗಳಿಲ್ಲದೇ ಮಾತನಾಡುತ್ತಿದ್ದಾರೆ. ಯಾವುದೇ ದಾಖಲೆಗಳಿಲ್ಲದೇ ಆರೋಪಗಳನ್ನು ಮಾಡುವುದು ಸರಿಯಲ್ಲ ಎಂದು ಶಾಸಕ ಜಮೀರ್ ಅಹ್ಮದ್ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಮೀರ್ ಅಹ್ಮದ್, ಬೆಡ್ ಬ್ಲಾಕಿಂಗ್ ಹಗರಣದಲ್ಲಿ ನಿಮ್ಮದೇ ಶಾಸಕ ಸತೀಶ್ ರೆಡ್ಡಿ ಪಿಎ ಶಾಮೀಲಾಗಿದ್ದಾರೆ ಇದಕ್ಕೇನು ಉತ್ತರಿಸುತ್ತೀರಿ ತೇಜಸ್ವಿ ಸೂರ್ಯ? ತಪ್ಪುಗಳಾದಾಗ ನಿಮಗೆ ಕೇವಲ ಮುಸ್ಲಿಂಮರು ಮಾತ್ರ ಕಾಣುತ್ತಾರೆ. ನಿಮ್ಮಲ್ಲಿ ಅದೆಷ್ಟು ವಿಷ ಇಟ್ಟುಕೊಂಡಿದ್ದೀರಿ. ವಾರ್ ರೂಂ …

Read More »