Breaking News

ರಾಜ್ಯ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿಗೆ ಮುನ್ನಡೆ – ನಂದಿ ಗ್ರಾಮದಲ್ಲಿ ಮಮತಾಗೆ ಹಿನ್ನಡೆ

ಕೋಲ್ಕತ್ತಾ: ಇಡೀ ದೇಶವೇ ಕುತೂಹಲದಿಂದ ಗಮನಿಸುತ್ತಿರುವ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮತ್ತು ಟಿಎಂಸಿ ನಡುವೆ ಭಾರೀ ಸ್ಪರ್ಧೆ ನಡೆಯುತ್ತಿದೆ.ಎರಡು ಪಕ್ಷಗಳ ನಡುವೆ ಹಾವು ಏಣಿ ಆಟ ನಡೆಯುತ್ತಿದೆ. ಒಂದು ಚುನಾವಣಾ ಸುತ್ತು ಮುಗಿದಾಗ ಟಿಎಂಸಿ ಮುನ್ನಡೆ ಸಾಧಿಸಿದರೆ ಮತ್ತೊಂದು ಸುತ್ತಿನಲ್ಲಿ ಬಿಜೆಪಿ ಅಭ್ಯರ್ಥಿಗಳು ಮುನ್ನಡೆ ಸಾಧಿಸುತ್ತಿದ್ದಾರೆ. ವಿಶೇಷವಾಗಿ ನಂದಿ ಗ್ರಾಮದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಆರಂಭದ ಸುತ್ತಿನಲ್ಲಿ ಹಿನ್ನಡೆಯಾಗಿದ್ದು, ಸುವೇಂದು ಅಧಿಕಾರಿ ಮುನ್ನಡೆ ಸಾಧಿಸಿದ್ದಾರೆ. ಒಟ್ಟು 292 ಕ್ಷೇತ್ರಗಳ …

Read More »

ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ಸುರೇಶ್ ಅಂಗಡಿ ಪತ್ನಿ ಮಂಗಳಾ ಅಂಗಡಿ ಮತ್ತು ಕಾಂಗ್ರೆಸ್ ಸತೀಶ್ ಜಾರಕಿಹೊಳಿ ಮಧ್ಯೆ ಟಫ್ ಸ್ಪರ್ಧೆ

ಬೆಂಗಳೂರು: ಉಪಚುನಾವಣೆ ಮತ ಎಣಿಕೆ ನಡೆಯುತ್ತಿದ್ದು, ಅಂಚೆ ಮತ ಎಣಿಕೆಯಲ್ಲಿ ಬೆಳಗಾವಿ, ಮಸ್ಕಿ ಮತ್ತು ಬಸವ ಕಲ್ಯಾಣದಲ್ಲಿ ಕಾಂಗ್ರೆಸ್ ಮುನ್ನಡೆ ಗಳಿಸಿದೆ. ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ಸುರೇಶ್ ಅಂಗಡಿ ಪತ್ನಿ ಮಂಗಳಾ ಅಂಗಡಿ ಮತ್ತು ಕಾಂಗ್ರೆಸ್ ಸತೀಶ್ ಜಾರಕಿಹೊಳಿ ಮಧ್ಯೆ ಟಫ್ ಸ್ಪರ್ಧೆ ನಡೆಯುತ್ತಿದೆ. ಆಪರೇಷನ್ ಕಮಲದಿಂದ ತೆರವಾಗಿದ್ದ ಮಸ್ಕಿ ವಿಧಾನಸಭೆಗೆ ನಡೆದ ಬೈ ಎಲೆಕ್ಷನ್‍ನಲ್ಲಿ ಬಿಜೆಪಿಯ ಪ್ರತಾಪ್ ಗೌಡ ಪಾಟೀಲ ಮತ್ತು ಕಾಂಗ್ರೆಸ್‍ನ ಬಸನಗೌಡ ತುರ್ವೀಹಾಳ್ ನಡುವೆ ನೆಕ್ …

Read More »

ಮರಣಮೃದಂಗ: ದೆಹಲಿ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆ, ವೈದ್ಯ ಸೇರಿದಂತೆ 8ಮಂದಿ ಸಾವು

ನವದೆಹಲಿ: ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಕೋವಿಡ್ ಮರಣಮೃದಂಗ ಮುಂದುವರಿದಿದ್ದು, ಆಕ್ಸಿಜನ್ ಕೊರತೆಯಿಂದಾಗಿ ವೈದ್ಯರೊಬ್ಬರು ಸೇರಿದಂತೆ ಎಂಟು ಮಂದಿ ಕೋವಿಡ್ ಸೋಂಕಿತರು ಸಾವನ್ನಪ್ಪಿರುವ ಘಟನೆ ದೆಹಲಿಯ ಬಾತ್ರಾ ಆಸ್ಪತ್ರೆಯಲ್ಲಿ ಶನಿವಾರ(ಮೇ 01) ನಡೆದಿದೆ ಎಂದು ವರದಿ ತಿಳಿಸಿದೆ. “ನಾವು ಇನ್ನೂ ಐದು ಮಂದಿ ಚಿಂತಾಜನಕ ಸ್ಥಿತಿಯಲ್ಲಿರುವ ರೋಗಿಗಳನ್ನು ಉಳಿಸಲು ಪ್ರಯತ್ನಿಸುತ್ತಿದ್ದೇವೆ” ಎಂದು ಡಾ.ಎಸ್ ಸಿಎಲ್ ಗುಪ್ತಾ ಅವರು ತಿಳಿಸಿರುವುದಾಗಿ ಪಿಟಿಐ ನ್ಯೂಸ್ ವರದಿ ಮಾಡಿದೆ. ಇಂದು ಸಾವನ್ನಪ್ಪಿರುವ ಎಂಟು ಮಂದಿಯಲ್ಲಿ ಒಬ್ಬರು ಬಾತ್ರಾ …

Read More »

KA 03 NB 4648 Registration ಗಾಡಿಯಲ್ಲಿ ಬಂದ ಮಹಿಳೆಯರ ಈ ಕಾರ್ಯಕ್ಕೆ ಏನೆನ್ನಬೇಕು?

ಉಳ್ಳಾಲ: ನೇತ್ರಾವತಿ ನದಿ ತೀರವನ್ನು ಮಾಲಿನ್ಯ ಮಾಡುವ ಕಾರ್ಯ ಕಳೆದ ಹಲವು ವರ್ಷಗಳಿಂದ ಎಗ್ಗಿಲ್ಲದೆ ನಡೆಯುತ್ತಿದೆ. ಅದರಲ್ಲೂ ರಾಷ್ಟ್ರೀಯ ಹೆದ್ದಾರಿ 66ರ ಆಡಂಕುದ್ರು ಬಳಿ ಇರುವ ನೇತ್ರಾವತಿ ಸೇತುವೆ ಜನರಿಗೆ ಕಸ, ತ್ಯಾಜ್ಯ ಎಸೆಯಲು ಅತ್ಯಂತ ಸುಲಭ ಜಾಗವಾಗಿತ್ತು. ನೇತ್ರಾವತಿ ಸೇತುವೆಯಲ್ಲಿ ಸರಣಿ ಆತ್ಮಹತ್ಯೆ ಬಳಿಕ ಸೇತುವೆಗೆ ಎತ್ತರದ ತಂತಿ ಬೇಲಿ ಹಾಕಿದ ಬಳಿಕ ಆತ್ಮಹತ್ಯೆ ಪ್ರಮಾಣ ಕಡಿಮೆಯಾದರೂ ಸೇತುವೆ ಮೂಲಕ ನದಿಗೆ ಕಸ ಎಸೆಯುವುದು ಮಾತ್ರ ಇನ್ನೂ ನಿಂತಿಲ್ಲ. …

Read More »

ಹೆಚ್ಚುತ್ತಿರುವ ಡಿಜಿಟಲ್ ವಂಚನೆಗಳು ಹಾಗೂ ಯುಪಿಐ ಹಗರಣಗಳು

ನವದೆಹಲಿ: ದೇಶದ ಪೂರ್ವ ರಾಜ್ಯಗಳು ಮಾರುಕಟ್ಟೆಗಳ ಮೂಲಕ ಹೆಚ್ಚಿನ ಮಟ್ಟದ ಡಿಜಿಟಲ್ ವಂಚನೆಗಳು ಅಥವಾ ಯುಪಿಐ ಹಗರಣಗಳಿಗೆ (ಶೇಕಡಾ 41) ಸಾಕ್ಷಿಯಾಗುತ್ತಿವೆ ಎಂದು ವರದಿಯೊಂದು ಬಹಿರಂಗಪಡಿಸಿದೆ. ಪಾವತಿ ಅಪ್ಲಿಕೇಶನ್‌ಗಳು ಮತ್ತು ಆನ್‌ಲೈನ್ ಟ್ರಸ್ಟ್‌ಚೆಕರ್ ಪ್ರಕಾರ, ಪಶ್ಚಿಮ ಬಂಗಾಳ, ಒಡಿಶಾ, ಬಿಹಾರ, ಅಸ್ಸಾಂ, ಕಾಶ್ಮೀರ, ಅರುಣಾಚಲ ಪ್ರದೇಶ, ಮೇಘಾಲಯ, ತ್ರಿಪುರ, ನಾಗಾಲ್ಯಾಂಡ್, ಮಿಜೋರಾಂ, ಮಣಿಪುರ, ಹಿಮಾಚಲ ಪ್ರದೇಶ ಮತ್ತು ಸಿಕ್ಕಿಂನಲ್ಲಿ ವಂಚನೆ ದತ್ತಾಂಶ ಒಳನೋಟಗಳು ಮತ್ತು ವಿಶ್ಲೇಷಣೆಯ ಪ್ರಾರಂಭ ಕೆವೈಸಿ, ನಕಲಿ …

Read More »

ದೆಹಲಿ ಆಸ್ಪತ್ರೆಯಲ್ಲಿಆಕ್ಸಿಜನ್ ಸಿಗದೇ ವೈದ್ಯ ಸೇರಿ 8 ಸೋಂಕಿತರು ಸಾವನ್ನಪ್ಪಿರುವ ಘಟನೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ನಡುವೆಯೇ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಕೊರತೆ ಆರಂಭವಾಗಿದ್ದು, ಸೋಂಕಿತರು ಸಾವನ್ನಪ್ಪುತ್ತಿದ್ದಾರೆ. ಆಕ್ಸಿಜನ್ ಸಿಗದೇ ವೈದ್ಯ ಸೇರಿ 8 ಸೋಂಕಿತರು ಸಾವನ್ನಪ್ಪಿರುವ ಘಟನೆ ದೆಹಲಿಯ ಆಸ್ಪತ್ರೆಯಲ್ಲಿ ನಡೆದಿದೆ. ದೆಹಲಿಯ ಬಾತ್ರಾ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. ಈಗಾಗಲೇ ದೆಹಲಿಯ ಎರಡು ಆಸ್ಪತ್ರೆಗಳಲ್ಲಿ ಸರ್ ಗಂಗಾರಾಮ್ ಆಸ್ಪತ್ರೆ ಹಾಗೂ ಜೈಪುರ ಗೋಲ್ಡನ್ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಕೊರತೆಯಾಗಿ ರೋಗಿಗಳು ಸಾವನ್ನಪ್ಪಿದ್ದರು. ಇದೀಗ ಬಾತ್ರಾ ಆಸ್ಪತ್ರೆಯಲ್ಲಿಯೂ ಆಕ್ಸಿಜನ್ ಇಲ್ಲದೇ …

Read More »

ಕೊರೊನಾ ಸ್ಫೋಟ, ಮುಂದಿನ 15 ದಿನ ಎಚ್ಚರ: ಕೊಡಗು ಜಿಲ್ಲಾ ವೈದ್ಯಾಧಿಕಾರಿ ಆತಂಕ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿನ ಖಚಿತ ಪ್ರಮಾಣ ಹೆಚ್ಚಾಗಿದೆ. ಹಾಗಾಗಿ ಮುಂದಿನ 15 ದಿನ ಜನರು ಎಚ್ಚರಿಕೆಯಿಂದ ಇರಬೇಕು ಎಂದು ಕೊಡಗು ಜಿಲ್ಲಾ ವೈದ್ಯಾಧಿಕಾರಿ ಮೋಹನ್ ಕುಮಾರ್ ಆತಂಕ ವ್ಯಕ್ತಪಡಿಸಿದ್ದಾರೆ. ಕೊರೊನಾ ಸ್ಫೋಟ ಸಾಧ್ಯತೆ: ಮುಂದಿನ ಹದಿನೈದು ದಿನ ಕೊಡಗಿಗೆ ಕಂಟಕ ಎದುರು ಅಗುತ್ತದೆ. ಕೊಡಗು ಜಿಲ್ಲೆಯಲ್ಲಿರುವ ಜನಸಂಖ್ಯೆ ಸುಮಾರು ಆರೂವರೆ ಲಕ್ಷ. ಆದ್ರೆ ಬೆಂಗಳೂರಿನಿಂದ ಬಂದಿರುವ ಜನರು ಹಳ್ಳಿ ಸೇರಿಕೊಂಡಿದ್ದಾರೆ. ಆದ್ದರಿಂದ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ …

Read More »

ಆಕ್ಸಿಜನ್ ಮತ್ತು ಜೀವ ರಕ್ಷಕ ರೆಮಡಿಸಿವಿಯರ್ ಇಂಜೇಕ್ಷನಗಳನ್ನು ಕೂಡಲೇ ಪೂರೈಸಬೇಕೆಂದು ರಾಜಕೀಯ ಧುರೀಣ ಅಶೋಕ ಪೂಜಾರಿ ಯವರು ಸರಕಾರವನ್ನು ಆಗ್ರಹಿಸಿದ್ದಾರೆ.

ಗೋಕಾಕ : ನಗರದ ಸರಕಾರಿ ಆಸ್ಪತ್ರೆಯ ಹಳೆಯ ಕಟ್ಟಡವನ್ನು ಆಕ್ಸಿಜನ್ ಪೂರೈಕೆಯ ನೂರು (100)ಬೆಡ್‍ಗಳ ಕರೋನಾ ಆರೈಕೆ ಕೇಂದ್ರವನ್ನಾಗಿ ಪರಿವರ್ತಿಸುವದರ ಜೊತೆಗೆ ಎಲ್ಲ ಕರೋನಾ ಖಾಸಗಿ ಆಸ್ಪತ್ರೆಗಳಿಗೆ ಸಮರ್ಪಕ ಆಕ್ಸಿಜನ್ ಮತ್ತು ಜೀವ ರಕ್ಷಕ ರೆಮಡಿಸಿವಿಯರ್ ಇಂಜೇಕ್ಷನಗಳನ್ನು ಕೂಡಲೇ ಪೂರೈಸಬೇಕೆಂದು ರಾಜಕೀಯ ಧುರೀಣ ಅಶೋಕ ಪೂಜಾರಿ ಯವರು ಸರಕಾರವನ್ನು ಆಗ್ರಹಿಸಿದ್ದಾರೆ. ನಗರದ ‘ಜ್ಞಾನ ಮಂದಿರ’ ಆಧ್ಯಾತ್ಮ ಕೇಂದ್ರದಲ್ಲಿ ಇಂದು ಪತ್ರಿಕಾ ಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು ನಗರದ ಸರಕಾರಿ ಆಸ್ಪತ್ರೆ ಹಳೇಯ …

Read More »

2 ಲಕ್ಷಕ್ಕೂ ಅಧಿಕ ಲಸಿಕೆ ತುಂಬಿದ್ದ ಟ್ರಕ್ ಪೊಲೀಸರ ವಶಕ್ಕೆ

ಭೋಪಾಲ್: ರಸ್ತೆ ಬದಿಗೆ ತುಂಬಾ ಹೊತ್ತು ನಿಂತಿದ್ದ ಟ್ರಕ್ ಅನ್ನು ಅನುಮಾನದಿಂದ ಪೊಲೀಸರು ಪರಿಶೀಲಿಸಿದಾ 2 ಲಕ್ಷಕ್ಕೂ ಅಧಿಕ ಲಸಿಕೆ ಇರುವುದು ಪತ್ತೆಯಾಗಿದೆ. ಮಧ್ಯಪ್ರದೇಶ ಕರೇಲಿ ಬಸ್‍ನಿಲ್ದಾಣದ ಬಳಿ ನರ್ಸಿಂಗ್‍ಪುರ್‍ನಲ್ಲಿ ನಿಂತಿದ್ದ ಟ್ರಕ್‍ವೊಂದನ್ನು ಪೊಲೀಸರು ತಪಾಸಣೆ ನಡಸಿದಾಗ ಅದರಲ್ಲಿ 2,40,000 ಕೊವ್ಯಾಕ್ಸಿನ್ ಲಸಿಕೆ ಇರುವುದು ಪತ್ತೆಯಾಗಿದೆ. ಟ್ರಕ್ ತುಂಬಾ ಸಮಯದಿಂದ ಒಂದೇ ಕಡೆ ನಿಂತಿತ್ತು.ಹೀಗಾಗಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಟ್ರಕ್‍ನಲ್ಲಿ ಸಿಕ್ಕ ಲಸಿಕೆ ಸರಿಸುಮಾರು 8 ಕೋಟಿ ರೂಪಾಯಿ …

Read More »

ಕೋವಿಡ್ ಮಾಹಿತಿ ಹಂಚಿಕೆ ನಿರ್ಬಂಧಕ್ಕೆ ಗರಂ: ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ತರಾಟೆ

ನವದೆಹಲಿ: ಕೋವಿಡ್ ಸಾಂಕ್ರಾಮಿಕಕ್ಕೆ ಸಂಬಂಧಿಸಿದ ಮಾಹಿತಿಯನ್ನು ನಾಗರಿಕರು ಸಾಮಾಜಿಕ ತಾಣಗಳಲ್ಲಿ ಹಂಚಿಕೊಳ್ಳುವುದನ್ನು ಯಾವುದೇ ಸರ್ಕಾರ ಹತ್ತಿಕ್ಕುವಂತಿಲ್ಲ. ಈ ವಿಷಯದಲ್ಲಿ ನಾಗರಿಕರಿಗೆ ಕಿರುಕುಳ ನೀಡಿದರೆ ಅದನ್ನು ನ್ಯಾಯಾಂಗ ನಿಂದನೆ ಎಂದೇ ಪರಿಗಣಿಸಬೇಕಾಗುತ್ತದೆ ಎಂದು ಸುಪ್ರೀಂಕೋರ್ಟ್ ಸರ್ಕಾರಗಳಿಗೆ ಖಡಕ್ ಎಚ್ಚರಿಕೆ ನೀಡಿದೆ. ಕರೊನಾ ಸಾಂಕ್ರಾಮಿಕ ಕುರಿತಂತೆ ಜನರು ತಮ್ಮ ಕುಂದು-ಕೊರತೆಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡರೆ ಅದು ತಪುಪ ಮಾಹಿತಿ ಆಗುವುದಿಲ್ಲ. ಆಕ್ಸಿಜನ್ ಅಥವಾ ಬೆಡ್ ದೊರಕಿಲ್ಲ ಎಂದು ಹೇಳುವುದು ಸುಳ್ಳು ಸಂಗತಿಯಲ್ಲ. ಜನರು …

Read More »