ಕೊರೊನಾ ಎರಡನೇ ಅಲೆ ಹೆಚ್ಚಾಗಿದ್ದು, ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಏರಿಯಾಗುತ್ತಿದೆ. ಕೊರೊನಾ ನಿಯಂತ್ರಣಕ್ಕೆ ಈಗಾಗಲೇ ಅನೇಕ ಕಡೆ ಕರ್ಫ್ಯೂ ಜಾರಿ ಮಾಡಲಾಗಿದೆ. ಮುಂಬೈನಲ್ಲಿ ಕರ್ಫ್ಯೂ ಜಾರಿಯಾಗಿದ್ದು, ಅನೇಕ ಬಾಲಿವುಡ್ ಕಲಾವಿದರು ಮುಂಬೈ ತೊರೆದಿದ್ದಾರೆ. ಸಿನಿಮಾ ಕೆಲಸಗಳಿಗೆ ಬ್ರೇಕ್ ಬಿದ್ದ ಪರಿಣಾಮ ಸಮಯ ಕಳೆಯಲು ಸಿನಿ ತಾರೆಯರು ತಮ್ಮ ನೆಚ್ಚಿನ ಸ್ಥಳಕ್ಕೆ ಹೋಗುತ್ತಿದ್ದಾರೆ. ಇತ್ತೀಚಿಗಷ್ಟೆ ದೀಪಿಕಾ ಮತ್ತು ರಣ್ವೀರ್ ಸಿಂಗ್ ದಂಪತಿ ಮುಂಬೈ ತೊರೆದು ಬೆಂಗಳೂರಿಗೆ ಬಂದಿದ್ದಾರೆ. ಅನೇಕರು ಮುಂಬೈನಿಂದ …
Read More »ಸ್ವತಃ ಲಾಕ್ ಡೌನ್ ಹೇರಿಕೊಂಡ ಗ್ರಾಮಸ್ಥರು
ಬೀದರ್ : ಕೊರೊನಾ ಅಟ್ಟಹಾಸಕ್ಕೆ ಗಡಿ ಜಿಲ್ಲೆ ನಲುಗಿ ಹೋಗುತ್ತಿದೆ. ಈ ನಿಟ್ಟಿನಲ್ಲಿ ಸರ್ಕಾರವು ಸಾಕಷ್ಟು ರೂಲ್ಸ್ ಜಾರಿಗೊಳಿಸುತ್ತಿದೆ. ಸದ್ಯ ಗ್ರಾಮಸ್ಥರೇ ಇಲ್ಲಿ ಸ್ವಯಂ ಲಾಕ್ ಡೌನ್ ಘೋಷಿಸಿಕೊಳ್ಳುತ್ತಿದ್ದಾರೆ. ಹೌದು! ಜಿಲ್ಲೆಯಲ್ಲಿ ಪ್ರತಿ ದಿನ 400ರ ಆಸುಪಾಸಿನಲ್ಲಿ ಕೇಸ್ ಗಳು ದಾಖಲಾಗುತ್ತಿವೆ. ಇದರಿಂದ ಭಯಗೊಂಡ ಗ್ರಾಮಸ್ಥರು ಸ್ವಯಂ ಲಾಕ್ ಡೌನ್ ಹೇರಿಕೊಳ್ಳುತ್ತಿರುವ ಘಟನೆ ಬೀದರ್ ನಲ್ಲಿ ನಡೆದಿದೆ. ಗ್ರಾಮದ ಹಿರಿಯರು, ಜನಪ್ರತಿನಿಧಿಗಳು ಸೇರಿಕೊಂಡು ಮಹಾಮಾರಿಗೆ ಕಡಿವಾಣ ಹಾಕಲು ಈ ನಿರ್ಧಾರ …
Read More »ಲಾಕ್ಡೌನ್ ಮಾಡಿದ್ರೆ ಜನ ಸಾಯ್ತಾರೆ, ಸೆಕ್ಷನ್ 144 ತನ್ನಿ: ಸಿ.ಎಂ.ಇಬ್ರಾಹಿಂ
ಬೆಂಗಳೂರು: ಲಾಕ್ಡೌನ್ ಮಾಡಿದ್ರೆ ಜನರು ಸಾಯ್ತಾರೆ. ಅದರ ಬದಲಾಗಿ ಬೆಂಗಳೂರಿನಲ್ಲಿ ಸೆಕ್ಷನ್ 144 ಜಾರಿಗೆ ತರಬೇಕು. ಎಲ್ಲದಕ್ಕೂ ಲಾಕ್ಡೌನ್ ಪರಿಹಾರ ಅಲ್ಲ ಎಂದು ಕಾಂಗ್ರೆಸ್ ಎಂಎಲ್ಸಿ ಸಿ.ಎಂ.ಇಬ್ರಾಹಿಂ ಹೇಳಿದ್ದಾರೆ. ಸಿಎಂ, ಸಚಿವರು, ಬೆಂಗಳೂರಿನ ಶಾಸಕರ ಜೊತೆಗಿನ ಸಭೆ ಬಳಿಕ ಸಿಎಂ ಇಬ್ರಾಹಿಂ ಮಾಧ್ಯಮಗಳ ಜೊತೆ ಮಾತನಾಡಿದರು. ಸರ್ಕಾರ ಸಂಪೂರ್ಣವಾಗಿ ಗೊಂದಲದಲ್ಲಿದ್ದು, ಗಂಟು ಹಾಕಿ ಹೊಳೆಯಲ್ಲಿ ಬಿಟ್ಟಂತಾಗಿದೆ. ರಾಜ್ಯದಲ್ಲಿ ಬೆಡ್, ಆಕ್ಸಿಜನ್, ಇಂಜೆಕ್ಷನ್, ಲಸಿಕೆ ಮತ್ತು ಔಷಧಿಗಳ ಕೊರತೆ ಇದೆ. ಈ …
Read More »ಈ 6 ರಾಜ್ಯಗಳಿಂದ ಮಹಾರಾಷ್ಟ್ರಕ್ಕೆ ಪ್ರಯಾಣಿಸುವ ರೈಲ್ವೆ ಪ್ರಯಾಣಿಕರಿಗೆ ಕೋವಿಡ್-19 ನೆಗೆಟಿವ್ ರಿಪೋರ್ಟ್ ಕಡ್ಡಾಯ!
ಮುಂಬೈ: ಕೋವಿಡ್ ಹಾಟ್ ಸ್ಪಾಟ್ ಆಗಿರುವ ಮಹಾರಾಷ್ಟ್ರದಲ್ಲಿ ಸೋಂಕು ಪ್ರಸರಣ ತಡೆಯಲು ಅಲ್ಲಿನ ಸರ್ಕಾರ ಹರಸಾಹಸ ಪಡುತ್ತಿದ್ದು, ಇದೀಗ 6 ರಾಜ್ಯಗಳಿಂದ ಪ್ರಯಾಣಿಸುವ ರೈಲ್ವೆ ಪ್ರಯಾಣಿಕರಿಗೆ ಕೋವಿಡ್-19 ನೆಗೆಟಿವ್ ರಿಪೋರ್ಟ್ ಕಡ್ಡಾಯಗೊಳಿಸಿದೆ. ಹೌದು…ಕೇರಳ, ಗೋವಾ, ರಾಜಸ್ಥಾನ, ದೆಹಲಿ, ಗುಜರಾತ್ ಮತ್ತು ಉತ್ತರಾಖಂಡ ಈ ಆರು ರಾಜ್ಯಗಳಿಂದ ಮಹಾರಾಷ್ಟ್ರಕ್ಕೆ ಪ್ರಯಾಣಿಸುವ ರೈಲ್ವೆ ಪ್ರಯಾಣಿಕರು ಕಡ್ಡಾಯವಾಗಿ ಕೋವಿಡ್ ನೆಗೆಟಿವ್ ರಿಪೋರ್ಟ್ ಹೊಂದಿರಬೇಕು ಎಂದು ಮಹಾರಾಷ್ಟ್ರ ಸರ್ಕಾರ ಸೂಚಿಸಿದೆ. ಮಹಾರಾಷ್ಟ್ರದಲ್ಲಿ ಇತ್ತೀಚಿನ ದಿನಗಳಲ್ಲಿ ಕೊರೋನಾ …
Read More »ಆರೋಗ್ಯ ಕ್ಷೇತ್ರಕ್ಕೆ ₹30 ಸಾವಿರ ಕೋಟಿ ಮೀಸಲಿಡಬೇಕು : ಡಿ.ಕೆ. ಶಿವಕುಮಾರ್
ಬೆಂಗಳೂರು : ಕೊರೋನಾ ಎರಡನೇ ಅಲೆ ವ್ಯಾಪಕವಾಗುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಕ್ಷೇತ್ರಕ್ಕೆ 30 ಸಾವಿರ ಕೋಟಿ ರುಪಾಯಿ ಮೀಸಲಿಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ರಾಜ್ಯ ಸರಕಾರವನ್ನು ಆಗ್ರಹಿಸಿದ್ದಾರೆ. ರಾಜ್ಯದಲ್ಲಿ ಕೊರೋನಾ ಪರಿಸ್ಥಿತಿ ದಿನೇ ದಿನೇ ಗಂಭೀರವಾಗುತ್ತಿದೆ. ಸೋಂಕಿತರಿಗೆ ಬೆಡ್ ಗಳು ಸಿಗುತ್ತಿಲ್ಲ. ಐಸಿಯು, ರೆಮ್ ಡಿಸಿವಿಯರ್ ಲಸಿಕೆ, ಆಮ್ಲಜನಕ ಅಭಾವ ಸೃಷ್ಟಿಯಾಗಿವೆ. ಪ್ರತಿ ವಿಚಾರದಲ್ಲೂ ಪರಿಸ್ಥಿತಿ ಬಿಗಡಾಯಿಸುತ್ತಿದ್ದು, ಸರ್ಕಾರ ಕೂಡಲೇ ಅಭಿವೃದ್ಧಿ ಯೋಜನೆಗಳನ್ನು ನಿಲ್ಲಿಸಿ, ಆ …
Read More »ನಿಷ್ಠಾವಂತ ಸಿಬ್ಬಂದಿಗಳ ರಕ್ಷಣೆಗೆ ಬದ್ಧ: ಕೆಎಸ್ಆರ್ಟಿಸಿ
ಬೆಂಗಳೂರು, ಏ.19-ಕರ್ತವ್ಯಕ್ಕೆ ಹಾಜರಾಗುವ ಸಿಬ್ಬಂದಿಗಳ ಮೇಲೆ ಹಲ್ಲೆ ಹಾಗೂ ಬಸ್ಸುಗಳ ಮೇಲೆ ಕಲ್ಲು ತೂರಾಟ ನಡೆಸುವ ದುಷ್ಕರ್ಮಿಗಳು ಕಠಿಣ ಪರಿಣಾಮವನ್ನು ಎದುರಿಸಬೇಕಾಗುತ್ತದೆ ಎಂದು ಕೆಎಸ್ಆರ್ಟಿಸಿ ತಿಳಿಸಿದೆ. ಕರ್ತವ್ಯಕ್ಕೆ ಹಾಜರಾಗುವ ನಮ್ಮ ನಿಷ್ಠಾವಂತ ಸಿಬ್ಬಂದಿಗಳಿಗೆ ಸೂಕ್ತ ರಕ್ಷಣೆ ನೀಡಲಾಗುವುದುಎಂದು ಕೆಎಸ್ಆರ್ಟಿಸಿ ಅಧಿಕೃತ ಪ್ರಕಟಣೆ ತಿಳಿಸಿದೆ. ಬಸ್ಸುಗಳ ಕಾರ್ಯಾಚರಣೆಯಲ್ಲಿನ ಏರಿಕೆಯಿಂದಾಗಿ ಮುಷ್ಕರ ನಿರತರು ವಿಚಲಿತರಾಗಿದ್ದಾರೆ. ನಿಷ್ಠಾವಂತ ಸಿಬ್ಬಂದಿಗಳ ಮೇಲೆ ಹಲ್ಲೇ , ಬಸ್ಸುಗಳಿಗೆ ಕಲ್ಲು ಹೊಡೆಯುವುದನ್ನು ಹೆಚ್ಚು ಮಾಡುತ್ತಿದ್ದಾರೆ ಎಂದು ಆರೋಪಿಸಿದೆ. ಈ …
Read More »ಕೇಂದ್ರ ಸರ್ಕಾರದಿಂದ ಆರೋಗ್ಯ ಕಾರ್ಯಕರ್ತರಿಗೆ ಬಿಗ್ ಶಾಕ್ : 50 ಲಕ್ಷ ರೂ. ವಿಮೆ ಸೌಲಭ್ಯ ರದ್ದು!
ನವದೆಹಲಿ : ಕೇಂದ್ರ ಸರ್ಕಾರವು ಆರೋಗ್ಯ ಕಾರ್ಯಕರ್ತರಿಗೆ ಬಿಗ್ ಶಾಕ್ ನೀಡಿದ್ದು, ಕೊರೊನಾ ಸೋಂಕಿತರ ಆರೈಕೆ ಸಂದರ್ಭದಲ್ಲಿ ಮೃತಪಟ್ಟ ಮುಂಚೂಣಿ ಆರೋಗ್ಯ ಕಾರ್ಯಕರ್ತರಿಗೆ 50 ಲಕ್ಷ ರೂ. ವಿಮೆ ಸೌಲಭ್ಯವನ್ನು ಕೇಂದ್ರ ಸರ್ಕಾರ ಹಿಂಪಡೆದುಕೊಂಡಿದೆ. ಈ ಕುರಿತು ಎಲ್ಲಾ ರಾಜ್ಯಗಳಿಗೆ ಕೇಂದ್ರ ಆರೋಗ್ಯ ಸಚಿವಾಲಯದ ಕಾರ್ಯದರ್ಶಿ ರಾಜೇಶ್ ಭೂಷಣೆ ಪತ್ರ ಬರೆದಿದ್ದು, 2020 ರ ಮಾರ್ಚ್ 20 ರಂದು ಘೋಷಣೆಯಾಗಿದ್ದ ಕೊರೊನಾ ಸೋಂಕಿತರ ಆರೈಕೆ ಸಂದರ್ಭದಲ್ಲಿ ಮೃತಪಟ್ಟ ಮುಂಚೂಣಿ ಆರೋಗ್ಯ …
Read More »ಐಸಿಯು ಬೆಡ್ ಗಾಗಿ ಆಕ್ಸಿಜನ್ ಸಿಲಿಂಡರ್ ನೊಂದಿಗೆ ಆಟೋದಲ್ಲಿ ಆಸ್ಪತ್ರೆಗೆ ಅಲೆದಾಡಿದ ಮಹಿಳೆ
ಕಲಬುರಗಿ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರು ಹೆಚ್ಚುತ್ತಿರುವ ನಡುವೆಯೇ ಸಾಮಾನ್ಯ ರೋಗಿಗಳು ಸಹ ಚಿಕಿತ್ಸೆಗಾಗಿ ಪರದಾಡುವಂತೆ ಆಗಿದೆ. ಮಹಿಳೆಯೊಬ್ಬರು ಐಸಿಯು ಬೆಡ್ ಸಿಗದ ಕಾರಣ ಆಕ್ಸಿಜನ್ ಸಿಲಿಂಡರ್ನೊಂದಿಗೆ ಆಟೋದಲ್ಲಿ ಐದಾರು ಗಂಟೆಗಳ ಕಾಲ ಆಸ್ಪತ್ರೆಯಿಂದ ಆಸ್ಪತ್ರೆಗೆ ತಿರುಗಾಡಿದ ಮನಕಲುವ ಘಟನೆ ರವಿವಾರ ನಡೆದಿದೆ. ಇಲ್ಲಿನ ಬಸವ ನಗರದ 55 ವರ್ಷದ ಮಹಿಳೆಯೊಬ್ಬರು ಕೆಮ್ಮು ಮತ್ತು ಉಸಿರಾಟದ ಸಮಸ್ಯೆಯಿಂದ ಬೆಳಗ್ಗೆ ಅಸ್ವಸ್ಥಗೊಂಡಿದ್ದರು. ಹೀಗಾಗಿ ಖಾಸಗಿ ಆಸ್ಪತ್ರೆಯೊಂದಕ್ಕೆ ಕುಟುಂಬದವರು ಕರೆದುಕೊಂಡು ಹೋಗಿದ್ದರು. ಆಗ ಐಸಿಯು …
Read More »ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಹಾವಳಿ : 8 ಜನರನ್ನು ಬಂಧಿಸಿದ ವಿಜಯಪುರ ಪೊಲೀಸ್
ವಿಜಯಪುರ : ಜಿಲ್ಲೆಯ ಇಂಡಿ ಪಟ್ಟಣದಲ್ಲಿ ಐಪಿಎಲ್ ಕ್ರಿಕೆಟ್ ಪಂದ್ಯಾವಳಿ ಸಂದರ್ಭದಲ್ಲಿ ಬೆಟ್ಟಿಂಗ್ ಕೃತ್ಯದಲ್ಲಿ ತೊಡಗಿದ್ದ 8 ಜನ ಆರೋಪಿಗಳನ್ನು ಬಂಧಿಸಿರುವ ಪೊಲೀಸರು, 92 ಸಾವಿರ ರೂ. ನಗದು ಹಾಗೂ ಕೃತ್ಯಕ್ಕೆ ಬಳಸಿದ ವಸ್ತುಗಳನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಶನಿವಾರ ಸಂಜೆ ಮುಂಬೈ ಇಂಡಿಯನ್ ಹಾಗೂ ಸನ್ ರೈಸರ್ಸ್ ಹೈದ್ರಾಬಾದ್ ಮಧ್ಯೆ ನಡೆದ ಐಪಿಎಲ್ ಪಂದ್ಯದ ವೇಳೆ ಇಂಡಿ ಪಟ್ಟಣದಲ್ಲಿರುವ ರೋಹಿತ್ ಶಹಾ ಕಾಂಪ್ಲೆಕ್ ಮೇಲ್ಭಾಗದಲ್ಲಿ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದರು. …
Read More »ಬೆಣ್ಣೆ ನಗರಿಗೆ ತಟ್ಟಿದ ಕೊರೊನಾ ಬಿಸಿ : ನಾಳೆ ನಡೆಯಬೇಕಿದ್ದ ದಾವಣಗೆರೆ ವಿವಿಯ ‘ಬಿ.ಎಡ್’ ಪರೀಕ್ಷೆ ಮುಂದೂಡಿಕೆ
ದಾವಣಗೆರೆ : ಬೆಣ್ಣೆ ನಗರಿ ದಾವಣಗೆರೆಗೂ ಕೊರೊನಾ ಬಿಸಿ ತಟ್ಟಿದ್ದು, ಕೊರೊನಾ ಭೀತಿ ಹಿನ್ನೆಲೆ ನಾಳೆ ನಡೆಯಬೇಕಿದ್ದ ದಾವಣಗೆರೆ ವಿವಿಯ ‘ಬಿ.ಎಡ್’ ಪರೀಕ್ಷೆ ಮುಂದೂಡಿಕೆಯಾಗಿದೆ. ಈ ಬಗ್ಗೆ ದಾವಣಗೆರೆ ವಿಶ್ವವಿದ್ಯಾಲಯ ಪರೀಕ್ಷಾಂಗ ವಿಭಾಗದ ಕುಲಸಚಿವೆ ಡಾ ಹೆಚ್ ಎಸ್ ಅನಿತಾ ಮಾಹಿತಿ ನೀಡಿದ್ದು, ಕೊರೊನಾ ಭೀತಿ ಹಾಗೂ ಸಾರಿಗೆ ಮುಷ್ಕರದ ಹಿನ್ನೆಲೆ ನಾಳೆ ನಡೆಯಬೇಕಿದ್ದ ದಾವಣಗೆರೆ ವಿವಿಯ ‘ಬಿ.ಎಡ್’ ಪರೀಕ್ಷೆ ಮುಂದೂಡಲಾಗಿದೆ. ಅಲ್ಲದೇ ಏಪ್ರಿಲ್ 20 ರಿಂದ ಆರಂಭವಾಗಲಿರುವ ಸ್ನಾತಕೋತ್ತರ …
Read More »
Laxmi News 24×7