Breaking News

ರಾಜ್ಯ

ನಾಸಿಕ್ ನಲ್ಲಿ ಆಕ್ಸಿಜನ್ ಸಿಲಿಂಡರ್ ಸೋರಿಕೆ : 22 ಮಂದಿ ಸಾವು

ಮಹಾರಾಷ್ಟ್ರ : ಮಹಾರಾಷ್ಟ್ರದ ನಾಸಿಕ್ ನಲ್ಲಿ ಕೋವಿಡ್ -19 ರೋಗಿಗಳಿಗೆ ಸಿವಿಕ್ ಆಸ್ಪತ್ರೆಯಲ್ಲಿ ಆಮ್ಲಜನಕದ ಪೂರೈಕೆಯಲ್ಲಿ ವ್ಯತ್ಯಾಸದಿಂದಾಗಿ 22 ರೋಗಿಗಳು ಬುಧವಾರ (ಏಪ್ರಿಲ್ 21) ಸಾವನ್ನಪ್ಪಿದ್ದಾರೆ ಎಂಬ ವರದಿಯಾಗಿದೆ.   ಜಾಕಿರ್ ಹುಸೇನ್ ಪುರಸಭೆಯ ಆಸ್ಪತ್ರೆಯಲ್ಲಿ ಆಮ್ಲಜನಕದ ಪೂರೈಕೆಯಲ್ಲಿ ವ್ಯತ್ಯಾಸದಿಂದಾಗಿ 22 ಜನರು ಸಾವನ್ನಪ್ಪಿದ್ದಾರೆ. ರೋಗಿಗಳು ವೆಂಟಿಲೇಟರ್‌ ಗಳಲ್ಲಿದ್ದರು ಮತ್ತು ಆಮ್ಲಜನಕದ ಪೂರೈಕೆಯಾಗುತ್ತಿದ್ದರೂ, ಆಮ್ಲಜನಕ ಪೂರೈಕೆ ತೊಟ್ಟಿಯಲ್ಲಿ ಸೋರಿಕೆಯ ಕಾರಣದಿಂದ ಈ ಅವಘಡ ಸಂಭವಿಸಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ …

Read More »

ಸೆಕೆಯಿಂದ ಪಾರಾಗೋಕೆ ಹೊಸ ಪ್ಲಾನ್​ ಕಂಡು ಹಿಡಿದ ಗ್ರಾಮಸ್ಥರು..!

ಬೇಸಿಗೆ ಕಾಲ ಶುರುವಾಗಿರೋದ್ರಿಂದ ಸೂರ್ಯನ ಶಾಖದಿಂದ ತಪ್ಪಿಸಿಕೊಳ್ಳೋಕೆ ಜನರು ಇನ್ನಿಲ್ಲದ ಹರಸಾಹಸ ಪಡ್ತಿದ್ದಾರೆ. ಫ್ಯಾನ್​, ಎಸಿಗಳು ಮನೆಯಲ್ಲಿ ಇರುವಾಗ, ಕಟ್ಟಡದಲ್ಲಿ ಇರುವಾಗ ಬಳಕೆ ಮಾಡಬಹುದು. ಆದರೆ ಮನೆಯಿಂದ ಹೊರಗಿದ್ದಾಗ ಸೆಖೆಯಿಂದ ಪಾರಾಗೋಕೆ ಏನು ಮಾಡೋದು..? ಎಂಬ ಯೋಚನೆ ಅನೇಕರಲ್ಲಿ ಇರಬಹುದು. ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆದ ಈ ವಿಡಿಯೋದಲ್ಲಿ ಗ್ರಾಮಸ್ಥನೊಬ್ಬ ಕತ್ತೆಯ ಸಹಾಯದಿಂದ ಸೆಕೆಯಿಂದ ಪಾರಾಗಿದ್ದಾನೆ. 54 ಸೆಕೆಂಡ್​ಗಳ ಈ ವಿಡಿಯೋದಲ್ಲಿ, ಮರುಭೂಮಿ ಪ್ರದೇಶದಲ್ಲಿ ಮಂಚದ ಮೇಲೆ ಜನರು ಕೂತಿರೋದನ್ನ …

Read More »

ಆಕ್ಸಿಜನ್ ಕೊರತೆ ನೀಗಿಸಲು ಟಾಟಾ ಸಹಾಯ ಹಸ್ತ ! 24 ಕ್ರಯೋಜೆನಿಕ್ ಕಂಟೇನರ್​ಗಳ ಆಮದು

ನವದೆಹಲಿ : ಭಾರತದಲ್ಲಿ ಉಂಟಾಗುತ್ತಿರುವ ಆಕ್ಸಿಜನ್ ಕೊರತೆಯನ್ನು ಕಡಿಮೆ ಮಾಡಲು ದ್ರವರೂಪದ ಆಕ್ಸಿಜನ್​​ಅನ್ನು ಸಾಗಣೆ ಮಾಡುವುದಕ್ಕಾಗಿ 24 ಕ್ರಯೋಜೆನಿಕ್ ಕಂಟೇನರ್​ಗಳನ್ನು ಆಮದು ಮಾಡುವುದಾಗಿ ಟಾಟಾ ಕಂಪೆನಿಗಳ ಗುಂಪು ಪ್ರಕಟಿಸಿದೆ. ಕರೊನಾ ವಿರುದ್ಧದ ಹೋರಾಟದಲ್ಲಿ ಇಡೀ ದೇಶ ಒಂದಾಗಿ ನಿಲ್ಲಬೇಕು ಎಂದು ನಿನ್ನೆ ಪ್ರಧಾನಿ ಮೋದಿ ಮಾಡಿದ ಮನವಿಗೆ ಸ್ಪಂದಿಸಿ, ಈ ಘೋಷಣೆ ಮಾಡಿದೆ. ನಿನ್ನೆ ರಾತ್ರಿ ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಕರೊನಾ ರೋಗಿಗಳಿಗೆ ಉಂಟಾಗುತ್ತಿರುವ ಆಕ್ಸಿಜನ್ …

Read More »

ಮಾಸ್ಕ್​​ ಇಲ್ಲ, ಸಾಮಾಜಿಕ ಅಂತರ ಇಲ್ಲ : ಬಳ್ಳಾರಿಯಲ್ಲಿ ‘ಸಚಿವ ಶ್ರೀರಾಮುಲು’ ಚುನಾವಣಾ ಪ್ರಚಾರ

ಬಳ್ಳಾರಿ : ರಾಜ್ಯದಲ್ಲಿ ಕೊರೋನಾ ಸೋಂಕಿನ 2ನೇ ಅಲೆಯ ಅಬ್ಬರಿಸುತ್ತಿದೆ. ಇಂತಹ ಸಂದರ್ಭದಲ್ಲೇ ಉಪ ಚುನಾವಣೆಯ ಬಳಿಕ, ಬಳ್ಳಾರಿ ಮಹಾನಗರ ಪಾಲಿಕೆ ಚುನಾವಣೆ ನಡೆಯುತ್ತಿದೆ. ಈ ಮಹಾನಗರ ಪಾಲಿಕೆ ಚುನಾವಣೆ ನಿಮಿತ್ತವಾಗಿ ನಗರದ 25ನೇ ವಾರ್ಡಿನಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸುತ್ತಿರುವಂತ ಸಚಿವ ಬಿ ಶ್ರೀರಾಮುಲು, ಕೊರೋನಾ ಸೋಂಕಿನ ಮಾರ್ಗಸೂಚಿ ಕ್ರಮಗಳನ್ನೇ ಗಾಳಿಗೆ ತೂರಿದ್ದಾರೆ. ಮಾಸ್ಕ್ ಇಲ್ಲದೇ, ಸಾಮಾಜಿಕ ಅಂತವನ್ನು ಕಾಯ್ದುಕೊಳ್ಳದೋ, ಚುನಾವಣಾ ಪ್ರಚಾರದಲ್ಲಿ ತೊಡಗಿರೋದು, ಸಾರ್ವಜನಿಕರ ಟೀಕೆಗೆ …

Read More »

ಹೆಚ್ಚುತ್ತಿರುವ ಸಾವಿನ ಸಂಖ್ಯೆ :ಚಟ್ಟಗಳಿಗೆ ಡಿಮ್ಯಾಂಡ್, ಜನರಲ್ಲಿ ಆತಂಕ

ಮೈಸೂರು : ಜಿಲ್ಲೆಯಲ್ಲಿ ಕೊರೊನಾ ಸೋಂಕಿತರು ಹಾಗೂ ಸಾವಿನ ಸಂಖ್ಯೆ ಹೆಚ್ಚಾಗುತ್ತಿದೆ. ಇದರ ಬೆನ್ನಲ್ಲೇ ಬಿದಿರು ಚಟ್ಟಕ್ಕೆ ಬೇಡಿಕೆ ಕೂಡ ಹೆಚ್ಚಾಗತೊಡಗಿದೆ. ನಂಜುಮಳಿಗೆ ವೃತ್ತದ ಬಳಿ ಬಿದಿರಿನಿಂದ ಗೃಹೋಪಯೋಗಿ ಸೇರಿದಂತೆ ನಾನಾ ವಸ್ತುಗಳನ್ನು ಮಾಡುತ್ತಿದ್ದ ವ್ಯಾಪಾರಿಗಳು ಇದೀಗ ಅಂತ್ಯ ಸಂಸ್ಕಾರಕ್ಕಾಗಿ ಚಟ್ಟ ತಯಾರಿಸಲು ಮುಂದಾಗಿದ್ದಾರೆ. ಪ್ರತಿದಿನ 20ಕ್ಕೂ ಹೆಚ್ಚು ಚಟ್ಟಗಳ ವ್ಯಾಪಾರ ನಡೆಯುತ್ತಿದೆ.  

Read More »

ಮೇ 1 ರ ನಂತರ ಕೊವಿಶೀಲ್ಡ್​ ದರ ಬದಲು, ಕೇಂದ್ರಕ್ಕೆ ರೂ 150, ರಾಜ್ಯಗಳಿಗೆ ರೂ 400, ಖಾಸಗಿ ಆಸ್ಪತ್ರೆಗಳಿಗೆ ರೂ 600 ಕ್ಕೆ ಲಸಿಕೆ ಮಾರಾಟ

ಮೇ 1 ರ ನಂತರ ಲಸಿಕೆ ಪಡೆಯುವ ಯುವಕರು ಈ ಸುದ್ದಿ ಓದಬೇಕು. ಕೊವಿಶೀಲ್ಡ್​ ಲಸಿಕೆ ಮೇ 1 ರಿಂದ ದುಬಾರಿ ಆಗಲಿದೆ. ಈಗ ಕೊವಿಶೀಲ್ಡ್​ ಲಸಿಕೆ ಸರಕಾರಿ ಆಸ್ಪತ್ರೆಯಲ್ಲಿ ಉಚಿತವಾಗಿದೆ ಮತ್ತು ಖಾಸಗಿ ಆಸ್ಪತ್ರೆಯಲ್ಲಿ ಇದನ್ನು ರೂ 250 ಕ್ಕೆ ನೀಡಲಾಗುತ್ತಿದೆ. ಸೀರಂ ಇನ್ಸ್​​ಟಿಟ್ಯೂಟ್​ ಆಫ್​ ಇಂಡಿಯಾ ಉತ್ಪಾದಿಸುವ ಕೋವಿಶೀಲ್ಡ್ ಲಸಿಕೆಯನ್ನು ಇನ್ನು ಮುಂದೆ, ಅಂದರೆ ಮೇ 1 ರಿಂದ, ಮೂರು ದರಗಳಲ್ಲಿ ಮಾರಾಟ ಮಾಡಲಾಗುವುದು ಎಂದು ಸೀರಂ …

Read More »

ಆಕ್ಸಿಜನ್ ಮತ್ತು ರೆಮಿಡಿಸಿವಿರ್ ಪೂರೈಕೆಗೆ 24/7 ವಾರ್ ರೂಮ್ ಸ್ಥಾಪನೆ : ಡಾ. ಸುಧಾಕರ್

ಬೆಂಗಳೂರು : ಕೋವಿಡ್ ರೂಪಾಂತರಿ ಅಲೆ ರಾಜ್ಯದಲ್ಲಿ ನಿತ್ಯ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ನಿನ್ನೆ(ಮಂಗಳವಾರ, ಏಪ್ರಿಲ್ 20) ರಾತ್ರಿ ವೀಕೆಂಡ್ ಲಾಕ್ ಡೌನ್, ವಾರದ ಐದು ದಿನಗಳ ನೈಟ್ ಕರ್ಫ್ಯೂ ಘೋಷಣೆ ಮಾಡಿ ಕೆಲವು ಕಠಿಣ ನಿರ್ಬಂಧಗಳನ್ನು ಹೇರಿದೆ. ರಾಜ್ಯದಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಎರಡು ವಾರಗಳ ಭಾಗಶಃ ಲಾಕ್ ಡೌ ನ್ ರಾಜ್ಯದಲ್ಲಿರಲಿದೆ. ಕೋವಿಡ್ ಸೋಂಕಿನ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿರುವುದರ ಜೊತೆಗೆ ರಾಜ್ಯದಲ್ಲಿ …

Read More »

ಕೊರೋನಾ ಹೆಚ್ಚಳ’ದ ಎಫೆಕ್ಟ್ : ‘ಕುವೆಂಪು ವಿವಿ ಎಲ್ಲಾ ಪರೀಕ್ಷೆ’ಗಳು ಮುಂದೂಡಿಕೆ

ಶಿವಮೊಗ್ಗ : ರಾಜ್ಯದಲ್ಲಿ ಕೋವಿಡ್‌ ಪ್ರಕರಣಗಳು ಹೆಚ್ಚುತ್ತಿರುವುದರಿಂದ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿಯನ್ನು ಮಂಗಳವಾರ ಪ್ರಕಟಿಸಿದ್ದು, ಏಪ್ರಿಲ್ 21ರಿಂದ ಮೇ 04ರವರೆಗೆ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಈ ಹಿನ್ನೆಲೆ ಯಲ್ಲಿ ಏಪ್ರಿಲ್ 21ರಿಂದ ಮೇ 03ರವರೆಗೆ ನಿಗದಿಯಾಗಿರುವ ಕುವೆಂಪು ವಿಶ್ವವಿದ್ಯಾಲಯದ ಸ್ನಾತಕ ಮತ್ತು ಸ್ನಾತಕೋತ್ತರ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಕುಲಸಚಿವ ಪ್ರೊ. ಪಿ. ಕಣ್ಣನ್ ತಿಳಿಸಿದ್ದಾರೆ. ರಾಜ್ಯ ಸರ್ಕಾರದ ಮಾರ್ಗಸೂಚಿ ಹೊರಬಿದ್ದ ಬಳಿಕ ಪತ್ರಿಕಾ ಪ್ರಕಟಣೆ ನೀಡಿರುವ …

Read More »

ಬೆಳಗಾವಿ ಲೋಕಸಭಾ ಉಪಚುನಾವಣೆ ಈ ಬಾರಿ ಕಾಂಗ್ರೆಸ್ ಗೆಲುವು ನಿಶ್ಚಿತ : ಸತೀಶ್ ಜಾರಕಿಹೊಳಿ

ಬೆಳಗಾವಿ : ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಒಳ್ಳೆಯ ಕೆಲಸ ಮಾಡಿದ್ದು, ಈ ಬಾರಿ ಕಾಂಗ್ರೆಸ್ ಗೆಲುವು ನಿಶ್ಚಿತ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕಳೆದ 20 ವರ್ಷಗಳಿಂದ ಬೆಳಗಾವಿ ಲೋಕಸಭಾ ಕ್ಷೇತ್ರವನ್ನು ಕಳೆದುಕೊಂಡಿರುವ ಕಾಂಗ್ರೆಸ್ ಈ ಬಾರಿ ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ಗೆಲ್ಲುವುದು ಖಚಿತ. ಎಂಇಎಸ್ ಅಭ್ಯರ್ಥಿ ಸ್ಪರ್ಧೆ ಮಾಡಿರುವುದು ನಮಗೆ ಯಾವುದೇ ತೊಂದರೆಯಾಗಿಲ್ಲ. ನಮ್ಮ ಮತಗಳು ನಮಗೆ ಇರುತ್ತವೆ …

Read More »

ಮಹಾರಾಷ್ಟ್ರದ ಆಸ್ಪತ್ರೆವೊಂದರಲ್ಲಿ ʼಆಕ್ಸಿಜನ್ ಟ್ಯಾಂಕ್ ಸೋರಿಕೆʼ: 11 ಮಂದಿ ಸಾವು, ಆನೇಕರ ಸ್ಥಿತಿ ಗಂಭೀರ

ನಾಸಿಕ್:‌ ಮಹಾರಾಷ್ಟ್ರದ ನಾಸಿಕ್ʼನಲ್ಲಿರುವ ಡಾ. ಜಾಕಿರ್ ಹುಸೇನ್ ಎನ್ ಎಂಸಿ ಆಸ್ಪತ್ರೆಯಲ್ಲಿ ಮಂಗಳವಾರ ಆಕ್ಸಿಜನ್ ಟ್ಯಾಂಕ್ ಸೋರಿಕೆಯಾಗಿದ್ದು, 11 ಜನರು ಮೃತಪಟ್ಟಿದ್ದಾರೆ ಎಂದು ಮಹಾರಾಷ್ಟ್ರ ಆರೋಗ್ಯ ಸಚಿವ ರಾಜೇಶ್ ಟೋಪ್ ಹೇಳಿದ್ದಾರೆ. ಎಎನ್ ಐ ಟ್ವೀಟ್ ಮಾಡಿದ ವೀಡಿಯೊದಲ್ಲಿ ಅನಿಲ ಆಮ್ಲಜನಕವು ಆಸ್ಪತ್ರೆಯು ಬಳಸಬೇಕಾಗಿದ್ದ ಪ್ರದೇಶದಾದ್ಯಂತ ಹರಡುವುದನ್ನ ಕಾಣ್ಬೋದು. ಅಗ್ನಿಶಾಮಕ ದಳದ ರಕ್ಷಣಾ ತಂಡ ಸ್ಥಳದಲ್ಲಿದ್ದು, ಸುಮಾರು 171 ರೋಗಿಗಳು ಈ ಆಸ್ಪತ್ರೆಯಲ್ಲಿ ಆಮ್ಲಜನಕವನ್ನ ಹೊಂದಿದ್ದರು. #WATCH | An …

Read More »