Breaking News

ರಾಜ್ಯ

ಆಸ್ಪತ್ರೆಯಲ್ಲಿ ಬೆಡ್​ ಇಲ್ಲದೇ ಪರದಾಟ; ಬೇರೆಡೆಗೆ ಕರೆದೊಯ್ದು ಕಾಪಾಡುವಷ್ಟರಲ್ಲಿ ಹಾರಿ ಹೋದ ಪ್ರಾಣಪಕ್ಷಿ

ಬೆಂಗಳೂರು: ಕೊರೊನಾ ಎರಡನೇ ಅಲೆ ಆರ್ಭಟ ಹೆಚ್ಚಾಗುತ್ತಿದ್ದು, ಆಸ್ಪತ್ರೆಗಳಲ್ಲಿ ಸೋಂಕಿತರನ್ನು ದಾಖಲಿಸಲು ಬೆಡ್​ಗಳಿಲ್ಲದೇ ಜನರೆಲ್ಲ ಸಾವಿಗೀಡಾಗುತ್ತಿರುವ ಪರಿಸ್ಥಿತಿ ಎದುರಾಗಿದೆ. ಕೊರೊನಾ ಮಹಾಮಾರಿಯ ಹಾವಳಿ ಅಷ್ಟರ ಮಟ್ಟಿಗೆ ದೇಶಾದ್ಯಂತ ಆವರಿಸಿಕೊಂಡಿದೆ. ಬೆಂಗಳೂರಿನಲ್ಲಿ ಹಲವು ಸೋಂಕಿತರು ಸೂಕ್ತ ವ್ಯವಸ್ಥೆ ಇಲ್ಲದೇ ಪ್ರಾಣಾಪಾಯಕ್ಕೆ ಸಿಲುಕುತ್ತಿದ್ದು, ಪರಿಸ್ಥಿತಿ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದೆ. ನಗರದಲ್ಲಿ ಕಳೆದ 3 ದಿನಗಳ ಹಿಂದೆ ಅನಾರೋಗ್ಯಕ್ಕೀಡಾದ ವ್ಯಕ್ತಿಯ ಕುಟುಂಬಸ್ಥರು ಅವರಿಗೆ ಚಿಕಿತ್ಸೆ ಕೊಡಿಸಲು ಆಸ್ಪತ್ರೆಗಳಿಗೆ ಅಲೆದಾಡಿ ಬೆಡ್​ಗಾಗಿ ಹುಡುಕಾಟ ನಡೆಸುವಷ್ಟರಲ್ಲಿ ವ್ಯಕ್ತಿಯ …

Read More »

ಕೊರೊನಾ ವರದಿ “ನೆಗೆಟಿವ್” ಬಂದಿದ್ದಕ್ಕೆ ವೈದ್ಯರನ್ನು ಹಿಗ್ಗಾಮುಗ್ಗ ಥಳಿಸಿದ ವ್ಯಕ್ತಿ

ಮುಂಬೈ, ಏಪ್ರಿಲ್ 16: ತನ್ನ ಕೊರೊನಾ ಪರೀಕ್ಷಾ ವರದಿ ನೆಗೆಟಿವ್ ಬಂದಿದೆ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬ ವೈದ್ಯರ ಮೇಲೆ ಗಂಭೀರವಾಗಿ ಹಲ್ಲೆ ನಡೆಸಿದ ಘಟನೆ ಮಹಾರಾಷ್ಟ್ರದ ಗೋಂಡಿಯಾ ಜಿಲ್ಲೆಯಲ್ಲಿ ನಡೆದಿದೆ.   ಗೋಂಡಿಯಾದ ಆರೋಗ್ಯ ಕೇಂದ್ರದಲ್ಲಿ, ವ್ಯಕ್ತಿಯೊಬ್ಬ ಆತನ ಕುಟುಂಬದ ಮೂರು ಸದಸ್ಯರೊಂದಿಗೆ ಆರ್‌ಟಿಪಿಸಿಆರ್ ಕೊರೊನಾ ಪರೀಕ್ಷೆ ಮಾಡಿಸಿಕೊಂಡಿದ್ದ. ಪರೀಕ್ಷಾ ವರದಿಯಲ್ಲಿ ಕುಟುಂಬದ ಮೂವರದ್ದು ಪಾಸಿಟಿವ್ ಬಂದಿದ್ದು, ಈ ವ್ಯಕ್ತಿಯ ವರದಿ ಮಾತ್ರ ನೆಗೆಟಿವ್ ಬಂದಿದೆ. ಹೀಗಾಗಿ ಪರೀಕ್ಷೆಯ ವರದಿಯೇ …

Read More »

ಒಂದೇ ಬೆಡ್​ನಲ್ಲಿ ಇಬ್ಬರಿಗೆ ಚಿಕಿತ್ಸೆ, ಆಸ್ಪತ್ರೆ ಹೊರಗೆ ಹೆಣಗಳು; ಕೊರೊನಾದಿಂದ ಪರಿಸ್ಥಿತಿ ಭೀಕರ

ದೆಹಲಿ: ಹಾಸಿಗೆಗಳ ಕೊರತೆ, ಆಮ್ಲಜನಕದ ಕೊರತೆ.. ಒಂದೇ ಹಾಸಿಗೆಯಲ್ಲಿ ಆಕ್ಸಿಜನ್ ಮಾಸ್ಕ್ ಹಾಕಿಕೊಂಡು ಮಲಗಿರುವ ಇಬ್ಬರು ಕೊರೊನಾ ಸೋಂಕಿತರು. ಇದು ದೆಹಲಿಯ ಲೋಕ ನಾಯಕ ಜಯಪ್ರಕಾಶ್ ನಾರಾಯಣ ಆಸ್ಪತ್ರೆಯ ಕರುಣಾಜನಕ ಪರಿಸ್ಥಿತಿ. ಕೊವಿಡ್ ಸೋಂಕಿತರಿಗಾಗಿಯೇ ಸುಮಾರು 1500 ಹಾಸಿಗೆ ವ್ಯವಸ್ಥೆಯಿರುವ ದೆಹಲಿಯ ಸರ್ಕಾರಿ ಆಸ್ಪತ್ರೆ ಇದೀಗ ಕೊರೊನಾ ಸೋಂಕಿತರಿಂದ ತುಂಬಿ ತುಳುಕುತ್ತಿದೆ. ‘ನನಗೆ ಗೊತ್ತು, ನಮ್ಮ ಆಸ್ಪತ್ರೆಯಲ್ಲಿ ಮಿತಿಮೀರಿದ, ಹಿಡಿಯಲಾರದಷ್ಟು ಕೊರೊನಾ ಸೋಂಕಿತರು ತುಂಬಲಿದ್ದಾರೆ. ಈಗಲೇ ಹಾಸಿಗೆಯೂ ಸೇರಿ ನಮ್ಮಲ್ಲಿರುವ …

Read More »

ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ : ವಿಜಯಪುರ ಪೊಲೀಸರಿಂದ ಮೂವರ ಬಂಧನ

ವಿಜಯಪುರ : ನಗರದ ಆಶ್ರಮ ರಸ್ತೆಯ ಪಾನ್‍ಶಾಪ್ ಮುಂದೆ ನಿಂತು ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಆಟದಲ್ಲಿ ತೊಡಗಿದ್ದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಮೂವರನ್ನು ಬಂಧಿಸಿ, ನಗದು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ನಗರದಲ್ಲಿ ಬುಧವಾರ ರಾತ್ರಿ 8 ಗಂಟೆ ಸುಮಾರಿಗೆ ಆರಮ ರಸ್ತೆಯಲ್ಲಿನ ರಾಜು ಪಾನ್‍ಶಾಪ್ ಎದುರು ಕ್ರಿಕೆಟ್ ಬಟ್ಟಿಂಗ್ ನಡೆಯುವ ಕುರಿತು ಖಚಿತ ಮಾಹಿತಿ ಆಧರಿಸಿ ಪೊಲೀಸರು ದಾಳಿ ನಡೆಸಿದ್ದರು. ದಾಳಿಯ ವೇಳೆ ಕಾಳಿಕಾ ನಗರ …

Read More »

ಸಾರಿಗೆ ನೌಕರರಿಗೆ ಸಿಹಿ ಹಂಚಿದ ವಿಜುಗೌಡ

ವಿಜಯಪುರ: ಕರ್ನಾಟಕ ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣನ ಸಂಸ್ಥೆ ಅಧ್ಯಕ್ಷ ವಿಜುಗೌಡ ಪಾಟೀಲ ಅವರು ಮುಷ್ಕರ ನಿರತ ಸಾರಿಗೆ ನೌಕರರನ್ನು ಭೇಟಿ, ಮುಷ್ಕರ ಕೈಬಿಟ್ಟು ಕರ್ತವ್ಯಕ್ಕೆ ಹಾಜರಾಗುವಂತೆ ಮನವಿ ಮಾಡಿದರು. ಉಪ ಚುನಾವಣೆ ಬಳಿಕ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರು ಸಾರಿಗೆ ನೌಕರರ ಬೇಡಿಕೆಗಳ ಈಡೇರಿಕೆಗೆ ಕ್ರಮಕೈಗೊಳ್ಳಲಿದ್ದಾರೆ ಎಂದು ವಿಜುಗೌಡ ಪಾಟೀಲ ಭರವಸೆ ನೀಡಿದರು. ಕರ್ತವ್ಯಕ್ಕೆ ಹಾಜರಾದ ಸಿಬ್ಬಂದಿಗಳಿಗೆ ಅಭಿನಂದನೆಗಳನ್ನು ಸಲ್ಲಿಸಿ, ಯುಗಾದಿ ಹಬ್ಬದ …

Read More »

ಬಿಜೆಪಿ ನಾಯಕನ ಮನೆಯಲ್ಲಿ ಪತ್ತೆಯಾಯ್ತಾ ರಾಶಿ ರಾಶಿ ಹಣ? ಫೋಟೋ ಹಿಂದಿನ ಸತ್ಯಾಂಶವೇ ಬೇರೆ!

ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಸದ್ಯ ಚುನಾವಣೆ ಭರಾಟೆ ಜೋರಾಗಿದೆ. ಇದರ ನಡುವೆ ಸಾಮಾಜಿಕ ಜಾಲತಾಣದಲ್ಲಿ ರಾಜಕೀಯ ಪಕ್ಷಗಳ ಆರೋಪ-ಪ್ರತ್ಯಾರೋಪ ಮತ್ತು ಪೋಸ್ಟ್​ ವಾರ್​ಗಳು ಸಹ ನಡೆಯುತ್ತಿವೆ. ಇದಕ್ಕೆ ತಾಜಾ ಉದಾಹರಣೆ ಎಂಬಂತೆ ರಾಶಿ ರಾಶಿ ಹಣದ ಕಂತೆಗಳಿರುವ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಈ ಹಣವನ್ನು ಬಂಗಾಳ ಬಿಜೆಪಿ ನಾಯಕರೊಬ್ಬರ ಮನೆಯಲ್ಲಿ ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಲಾಗಿದೆ. ಕೆಲವು ಪೊಲೀಸರು ಸುದ್ದಿಗೋಷ್ಠಿಯಲ್ಲಿ ಸ್ಪಷ್ಟನೆ ನೀಡುತ್ತಿರುವುದನ್ನು ಫೋಟೋದಲ್ಲಿ ಕಾಣಬಹುದಾಗಿದೆ.   ಅನೇಕ ಫೇಸ್​ಬುಕ್​ …

Read More »

ಬಿಜೆಪಿ ನಾಯಕರು ಜನರ ಜೀವನದೊಂದಿಗೆ ಚೆಲ್ಲಾಟವಾಡುತ್ತಿದ್ದಾರೆ :ಹೆಚ್ ​​​ಡಿಕೆ ಆರೋಪ

ಬೀದರ್: ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವಾಗ ಬಿಜೆಪಿ ನಾಯಕರಿಗೆ ಜನರ ಜೀವಕ್ಕಿಂತ ಚುನಾವಣೆಯಲ್ಲಿ ಮತ ಗಳಿಸುವುದೇ ಮುಖ್ಯವಾಗಿದೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ. ಈ ಕುರಿತು ನಗರದಲ್ಲಿ ಮಾತನಾಡಿದ ಅವರು, ಕೊರೊನಾ ವರದಿ ಸರ್ಕಾರದ ಮುಂದೆಯೇ ಇದೆ. ಹೀಗಿದ್ದರೂ ಬಿಜೆಪಿ ನಾಯಕರು ಕೇವಲ ಮತಗಳಿಕೆಯ ಉದ್ದೇಶದಿಂದ ರೋಡ್​ ಷೋ ನಡೆಸುವುದನ್ನು ನೋಡಿದರೆ ನಿಜವಾಗಲೂ ಆಶ್ಚರ್ಯವಾಗುತ್ತದೆ. ಈಗಲೂ ಸಾಮಾಜಿಕ ಅಂತರವನ್ನು ಮರೆತಿರುವ ನಾಯಕರು ಜನರ ಜೀವನದೊಂದಿಗೆ ಚೆಲ್ಲಾಟವಾಡುತ್ತಿದ್ದಾರೆ …

Read More »

ಪ್ರಿಯಂಕಾ ಜಾರಕಿಹೊಳಿ ಹಾಗೂ ಸಂತೋಷ್ ಜಾರಕಿಹೊಳಿ ಸೌಹಾರ್ದತೆ ಭೇಟಿ

ಗೋಕಾಕ: ಗೋಕಾಕ ತಾಲೂಕಿನ ತುಂಬಾ ಸುಮಾರು {4-5}  ನಾಲ್ಕೈದು ವಾರದಿಂದ ಪ್ರಚಾರ ನಡೆಸುತ್ತಿದ್ದ ಪ್ರಿಯಂಕಾ ಜಾರಕಿಹೊಳಿ ಅವರು ಇಂದು ಸಂತೋಷ್ ಜಾರಕಿಹೊಳಿ ಅವರ ಮನೆಗೆ ಭೇಟಿ ನೀಡಿದ್ದಾರೆ.   ಇಂದು ಬಹಿರಂಗ ಚುನಾವಣೆ ಪ್ರಚಾರ ಅಂತ್ಯ ವಾಗಿದ್ದು ಸಂತೋಷ್ ಜಾರಕಿಹೊಳಿ ಅವರನ್ನ ಭೇಟಿ ಮಾಡಿದ್ದಾರೆ ಪ್ರಿಯಂಕಾ ಜಾರಕಿಹೊಳಿ ಅವರು.   ಅಷ್ಟೆ ಅಲ್ಲದೆ ಗೋಕಾಕ ಹಾಗೂ ಅರಭಾವಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಿಗೆ ಭೇಟಿ ನೀಡಿ ತಂದೆಯ ಪರ ಪ್ರಚಾರ ನಡೆಸಿದ್ದು …

Read More »

ಪ್ರೀತಿಸಿ ಜೊತೆಯಾದವರು 6 ತಿಂಗಳಲ್ಲಿ ಹೆಣವಾದ್ರು – ಪತ್ನಿಯನ್ನ ಕೊಂದು ಪತಿ ಆತ್ಮಹತ್ಯೆ..!

ಕೋಲಾರ: ಪ್ರೀತಿಸಿ ಮದುವೆಯಾದ ಯುವಕನೊಬ್ಬ ಪತ್ನಿಯನ್ನು ಕೊಂದು ಬಳಿಕ ತಾನೂ ಆತ್ಮಹತ್ಯೆಗೆ ಶರಣಾದ ಘಟನೆ ಕೋಲಾರ ಜಿಲ್ಲೆ ಕೆಜಿಎಫ್ ತಾಲೂಕು ಆಡಂಪಲ್ಲಿ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಶೈಲ ಹಾಗೂ ಮುರುಗೇಶ್ ಎಂದು ಗುರುತಿಸಲಾಗಿದೆ. ಕಳೆದ ಒಂದು ವರ್ಷದ ಹಿಂದೆ ಇದೇ ಆಡಂಪಲ್ಲಿ ಗ್ರಾಮದ ಶೈಲ ಹಾಗೂ ಮುರುಗೇಶ್ ಒಬ್ಬರನ್ನೊಬ್ಬರು ಪ್ರೀತಿಸಿದ್ದರು. ಶೈಲ ಆಗಿನ್ನು ಅಪ್ರಾಪ್ತಳಾಗಿದ್ದಳು. ಇದು ಶೈಲ ಕುಟುಂಬದವರಿಗೆ ತಿಳಿದು ಮುರುಗೇಶ್ ಮೇಲೆ ಅತ್ಯಾಚಾರ ಪ್ರಕರಣ ದೂರು ದಾಖಲಿಸಿದ್ದು, ಮುರುಗೇಶ್ …

Read More »

ಸ್ವಾತಂತ್ರ್ಯ ಹೋರಾಟಗಾರ, ಮಾಜಿ ಶಾಸಕ ಸದಾಶಿವರಾವ ಬಾಪುಸಾಹೇಬ ಭೋಸಲೆ ನಿಧನ

ಬೆಳಗಾವಿ: ಸ್ವಾತಂತ್ರ್ಯ ಹೋರಾಟಗಾರ, ಮಾಜಿ ಶಾಸಕ ಹಾಗೂ ಅಪ್ಪಟ ಗಾಂಧಿವಾದಿಯಾಗಿದ್ದ ಸದಾಶಿವರಾವ ಬಾಪುಸಾಹೇಬ ಭೋಸಲೆ(101) ಅವರು ವಯೋಸಹಜ ಅನಾರೋಗ್ಯದಿಂದ ತಾಲ್ಲೂಕಿನ ಕಡೋಲಿ ಗ್ರಾಮದ ಸ್ವಗೃಹದಲ್ಲಿ ಗುರುವಾರ ಮುಂಜಾನೆ ನಿಧನರಾದರು. ಮೃತರಿಗೆ ಪುತ್ರ, ಸೊಸೆ, ಮಗಳು, ಅಳಿಯ ಹಾಗೂ ಮೊಮ್ಮಕ್ಕಳು ಇದ್ದಾರೆ. ಸದಾಶಿವರಾವ ಬಾಪುಸಾಹೇಬ ಭೋಸಲೆ ಅವರು ಗಾಂಧೀಜಿ ಹಾಗೂ ವಿನೋಬಾ ಭಾವೆ ಅವರ ವಿಚಾರಧಾರೆಗಳನ್ನು ಪಾಲಿಸುತ್ತಿದ್ದರು. ಅವರಿಂದ ಪ್ರಭಾವಿತರಾಗಿ ಸ್ವಾತಂತ್ರ್ಯ ಚಳುವಳಿಯಲ್ಲಿ ಭಾಗವಹಿಸಿದ್ದರು. 1946ರಲ್ಲಿ ಬ್ರಿಟಿಷ್ ಸರ್ಕಾರವು ನಡೆಸಿದ ಚುನಾವಣೆಯಲ್ಲಿ …

Read More »