ಗೋಕಾಕ: ದೇಶದಾಧ್ಯಂತ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರ ಸಾರಥ್ಯದಲ್ಲಿ ಬಿಜೆಪಿಯ ಕಮಲ ಅರಳಿದ್ದು, ರಾಷ್ಟ್ರದ ಪ್ರಗತಿಯ ಹಿತದೃಷ್ಟಿಯಿಂದ ಹಾಗೂ ಬೆಳಗಾವಿ ಕ್ಷೇತ್ರದ ಸರ್ವತೋಮುಖ ಅಭಿವೃದ್ದಿಗಾಗಿ ಬಿಜೆಪಿ ಬೆಂಬಲಿಸಿ ಕೇಂದ್ರ ಸಚಿವರಾಗಿದ್ದ ದಿ. ಸುರೇಶ ಅಂಗಡಿ ಧರ್ಮಪತ್ನಿ ಮಂಗಳಾ ಅಂಗಡಿಯವರಿಗೆ ಆಶೀರ್ವಾದ ಮಾಡುವಂತೆ ಕೆಎಮ್ಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮತದಾರರಲ್ಲಿ ಕೋರಿದರು. ಮಂಗಳವಾರದಂದು ಸಂಜೆ ಇಲ್ಲಿಗೆ ಸಮೀಪದ ಮೆಳವಂಕಿ (ಗೌಡನ ಕ್ರಾಸ್) …
Read More »ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ಪರೀಕ್ಷೆಗಳನ್ನ ಮುಂದೂಡಿದೆ.
ಧಾರವಾಡ: ಕಳೆದ ಒಂದು ವಾರದಿಂದ ಸಾರಿಗೆ ನೌಕರರ ಮುಷ್ಕರ ನಡೆಯುತ್ತಿರುವ ಹಿನ್ನೆಲೆ, ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ಪರೀಕ್ಷೆಗಳನ್ನ ಮುಂದೂಡಿದೆ. ನಾಳೆಯಿಂದ ಏಪ್ರಿಲ್ 17ರವರೆಗೆ ನಡೆಯಬೇಕಿದ್ದ ಪದವಿ ಹಾಗೂ ಸ್ನಾತಕೋತ್ತರ ಪರೀಕ್ಷೆಗಳನ್ನ ಮುಂದೂಡಲಾಗಿದೆ. ಈ ಬಗ್ಗೆ ಕರ್ನಾಟಕ ವಿಶ್ವವಿದ್ಯಾಲಯ ಕುಲಪತಿ ಕೆ ಬಿ ಗುಡಸಿ ಮಾಹಿತಿ ನೀಡಿದ್ದಾರೆ. ಸಾರಿಗೆ ಮುಷ್ಕರ ಹಿನ್ನೆಲೆ ವಿದ್ಯಾರ್ಥಿಗಳಿಗೆ ಬಸ್ ಸೌಲಭ್ಯ ಇಲ್ಲದ ಕಾರಣ ಪರೀಕ್ಷೆ ಮುಂದೂಡಿದ್ದೇವೆ. ಮುಂದೂಡಲಾದ ಪರೀಕ್ಷೆಯ ದಿನಾಂಕವನ್ನ ಮುಂದಿನ ದಿನಗಳಲ್ಲಿ ತಿಳಿಸುವುದಾಗಿ ಗುಡಸಿ …
Read More »ಸತೀಶಣ್ಣನವರು ಲಕ್ಷಾಂತರ ಮತಗಳ ಅಂತರದಿಂದ ಗೆಲ್ಲುವುದರಲ್ಲಿ ಯಾವ ಸಂಶಯವಿಲ್ಲ
ಬೆಳಗಾವಿ ಗ್ರಾಮೀಣ ಕ್ಷೇತ್ರದ ಮೊದಗಾ ಗ್ರಾಮದಲ್ಲಿ ಲೋಕಸಭಾ ಉಪ ಚುಣಾವಣೆಯ ಅಂಗವಾಗಿ ಶ್ರೀ ಸತೀಶಣ್ಣನವರ ಜೊತೆ ಪ್ರಚಾರ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮತ ಯಾಚಿಸಿದೆ. ಅಭೂತಪೂರ್ವ ಜನ ಬೆಂಬಲ ದೊರೆಯುತ್ತಿರುವುದನ್ನು ನೋಡಿದರೆ ಸತೀಶಣ್ಣನವರು ಲಕ್ಷಾಂತರ ಮತಗಳ ಅಂತರದಿಂದ ಗೆಲ್ಲುವುದರಲ್ಲಿ ಯಾವ ಸಂಶಯವಿಲ್ಲ
Read More »ಗ್ರಾಮೀಣ ಪ್ರದೇಶದ ಸಾಂಬ್ರಾ ಗ್ರಾಮಕ್ಕೆ ಶ್ರೀ ಸತೀಶಣ್ಣನವರ ಜೊತೆ ಪ್ರಚಾರ
ಬೆಳಗಾವಿ ಗ್ರಾಮೀಣ ಪ್ರದೇಶದ ಸಾಂಬ್ರಾ ಗ್ರಾಮದಕ್ಕೆ ಇವತ್ತು ಲೋಕಸಭಾ ಚುನಾವಣೆಯ ಪ್ರಚಾರಾರ್ಥ ಸಲುವಾಗಿ ತೆರಳಿ ಸಂವಿಧಾನ ಶಿಲ್ಪಿ, ಸಮಾನತೆಯ ಹರಿಕಾರ ಹಾಗೂ ಮಹಾನ್ ನಾಯಕರಾದ ಡಾ. ಬಿ. ಆರ್ ಅಂಬೇಡ್ಕರ್ ಜಯಂತಿಯ ನಿಮಿತ್ಯ ಅವರ ಪುತ್ಥಳಿಗೆ ಗೌರವಾರ್ಪಣೆಯನ್ನು ಸಲ್ಲಿಸಿ ಶ್ರೀ ಸತೀಶಣ್ಣನವರ ಜೊತೆ ಪ್ರಚಾರವನ್ನು ಕೈಗೊಂಡು ಮತ ಯಾಚಿಸಲಾಯಿತು. ಇದೇ ಸಂದರ್ಭದಲ್ಲಿ ಶ್ರೀ ಬೀರದೇವರ ಮಂದಿರಕ್ಕೆ ಸಹ ತೆರಳಿ ಆಶೀರ್ವಾದವನ್ನು ಪಡೆದು, ಬೆಳಗಾವಿ ಜಿಲ್ಲೆಯ ಅಭಿವೃದ್ಧಿಗಾಗಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವ …
Read More »ಅವ್ವ-ಅಜ್ಜಿ ಜತೆ ಮದುವೆ ಮಾತುಕತೆಗೆ ಬಂದವ ಅಕ್ಕ-ತಂಗಿ ಮೇಲೆ ಮಚ್ಚುಬೀಸಿದ! ಕಾರಣ ಕೇಳಿದ್ರೆ ಶಾಕ್ ಆಗ್ತೀರಿ
ಹಾಸನ: ತಮ್ಮನನ್ನು ಮದುವೆಯಾಗಲು ಒಪ್ಪದ ಯುವತಿಯರಿಬ್ಬರ ಮೇಲೆ ವ್ಯಕ್ತಿಯೊಬ್ಬ ಮಚ್ಚಿನಿಂದ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಹೊಳೆನರಸೀಪುರ ತಾಲೂಕಿನ ದೊಡ್ಡಕುಂಚಾವು ಗ್ರಾಮದಲ್ಲಿ ಸಂಭವಿಸಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸಹೋದರಿಯರಾದ ಯೋಗಿತಾ ಮತ್ತು ಪುಷ್ಪಿತಾ ಹಲ್ಲೆಗೊಳಗಾದವರು. ನಾಗರಾಜ್ ಹಲ್ಲೆ ಮಾಡಿದವ. ಈತನ ಸೋದರ ಮಾವನ ಮಕ್ಕಳು ಯೋಗಿತಾ ಮತ್ತು ಪುಷ್ಪಿತಾ. ಏ.12ರಂದು ಯೋಗಿತಾಳ ಜತೆ ತನ್ನ ತಮ್ಮನ ಮದುವೆ ಮಾತುಕತೆಗೆಂದು ತಾಯಿ ಹಾಗೂ ಅಜ್ಜಿ ಜತೆ ಸೋದರ ಮಾವನ ಮನೆಗೆ ನಾಗರಾಜ್ …
Read More »ಕೊಪ್ಪಳದ ಕಿಷ್ಕಿಂದೆಯೇ ಹನುಮ ಹುಟ್ಟಿದ ಸ್ಥಳ; ಇಲ್ಲಿವೆ ಖಚಿತ ದಾಖಲೆಗಳು
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹನುಮ ಹುಟ್ಟಿದ ಸ್ಥಳ ಎಂದು ಹೆಸರಾದ ಅಂಜನಾದ್ರಿ ಪರ್ವತ ಇದೀಗ ಸುದ್ದಿಯಲ್ಲಿದೆ. ಟಿಟಿಡಿ ಹನುಮ ಹುಟ್ಟಿದ್ದು ನಮ್ಮಲ್ಲಿ ಎಂದು ಹೇಳ್ತಿದೆ. ಇತ್ತ ಕೊಪ್ಪಳ ಇತಿಹಾಸಕಾರರು, ಹನುಮ ಹುಟ್ಟಿದ್ದು ನಮ್ಮಲ್ಲಿ ಎನ್ನುತ್ತಿದ್ದಾರೆ. ಅಷ್ಕಕ್ಕೂ ಹನುಮ ಹುಟ್ಟಿದ ವಿವಾದ ಏನು ಎಂಬ ಈ ಆಸಕ್ತಿಕರ ಸ್ಟೋರಿ ಇಲ್ಲಿದೆ. ಕೊಪ್ಪಳ ಜಿಲ್ಲೆ ಕಿಷ್ಕಿಂದೆ ಹನುಮ ಹುಟ್ಟಿದ ಸ್ಥಳ ಎಂದು ಹೆಸರುವಾಸಿಯಾದ ಪ್ರದೇಶ. ಕಿಷ್ಕಿಂದೆ ಎಂದರೆ ಸಂಸ್ಕೃತದಲ್ಲಿ ಇಕ್ಕಟ್ಟಿನ ಪ್ರದೇಶ …
Read More »ನೀವು ಬಸ್ ಡ್ರೈವರ್ ಮಗನೇ, ನಮ್ಮ ಮುಷ್ಕರ ಬೆಂಬಲಿಸಿ’: ಯಶ್ಗೆ ಪತ್ರ ಬರೆದ ಸಾರಿಗೆ ನೌಕರರು?
ಕಳೆದ ಒಂದು ವಾರದಿಂದ ಕರ್ನಾಟಕ ರಾಜ್ಯದಲ್ಲಿ ಬಿಎಂಟಿಸಿ ಮತ್ತು ಕೆಎಸ್ಆರ್ಟಿಸಿ ಬಸ್ ಚಾಲಕರು ಮತ್ತು ನಿರ್ವಾಹಕರು ಸರ್ಕಾರದ ಮುಂದೆ ಹಲವು ಬೇಡಿಕೆಗಳನ್ನು ಮುಂದಿಟ್ಟು ಅನಿರ್ದಿಷ್ಟಾವಧಿ ಮುಷ್ಕರ ಕೈಗೊಂಡಿದ್ದಾರೆ. ಈ ಪ್ರತಿಭಟನೆಗೆ ನಟ ಯಶ್ ಅವರು ಬೆಂಬಲ ಕೊಡಬೇಕಾಗಿ ಸಾರಿಗೆ ನೌಕರರು ಒಕ್ಕೂಟ ಬರೆದಿದೆ ಎನ್ನಲಾದ ಪತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಪತ್ರದಲ್ಲಿ ಯಾವುದೇ ಸಂಘಟನೆಯ ಅಧಿಕೃತ ಮುದ್ರೆ, ಸಹಿ, ದಿನಾಂಕ ಇಲ್ಲ. ಆದರೆ, ಯಶ್ ಅವರ ತಂದೆ …
Read More »ಕಾಂಗ್ರೆಸ್ನವರು ಬೆಲೆ ಏರಿಕೆಯನ್ನ ಇಶ್ಯೂ ಮಾಡುತ್ತಿದ್ದಾರೆ
ಬೆಳಗಾವಿ: ಪ್ರಧಾನಮಂತ್ರಿ ನರೇಂದ್ರ ಮೋದಿ ನಾಯಕತ್ವಕ್ಕೆ ಜನ ಬೆಂಬಲಿಸುತ್ತಿದ್ದಾರೆ ಯಾರೇ ಡಿಸ್ಟರ್ಬ್ ಮಾಡಿದರೂ ಜನ ಡಿಸ್ಟರ್ಬ್ ಆಗಲ್ಲ ಎಂದು ಸಚಿವ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ. ಬೆಳಗಾವಿ ಲೋಕಸಭಾ ಬೈ ಎಲೆಕ್ಷನ್ ಹಿನ್ನೆಲೆಯಲ್ಲಿ ಎಂಇಎಸ್ ಅಭ್ಯರ್ಥಿ ಪರ ಶಿವಸೇನೆಯ ಸಂಜಯ್ ರಾವುತ್ ಪ್ರಚಾರ ವಿಚಾರವಾಗಿ ಮಾತನಾಡಿದ್ದಾರೆ. ಎಂಇಎಸ್ಆಗಲಿ, ಬೇರೆ ಯಾರೇ ಏನೇ ಮಾಡಿದರೂ ಆ ಪ್ರಯತ್ನ ಫಲಿಸೋದಿಲ್ಲ. ಯಾಕೆಂದರೆ ಜನ ತುಂಬು ಹೃದಯದಿಂದ ಮೋದಿಯವರನ್ನ ಬೆಂಬಲಿಸುತ್ತಿದ್ದಾರೆ. ಇವತ್ತು ಅದೇ ಟ್ರೆಂಡ್ಆಗಿದೆ, ಅದು …
Read More »ಕೋವಿಡ್ ನಿಯಂತ್ರಣಕ್ಕೆ ರಾಜ್ಯದಲ್ಲಿ ಮತ್ತಷ್ಟು ಬಿಗಿ ಕ್ರಮ: ಸಿಎಂ ಯಡಿಯೂರಪ್ಪ
ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಸೋಂಕು ನಿಯಂತ್ರಣಕ್ಕೆ ಮತ್ತಷ್ಟು ಬಿಗಿ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಾಕ್ ಡೌನ್ ಜಾರಿ ಮಾಡದೆ ಬಿಗಿ ಕ್ರಮ ತೆಗೆದು ಕೊಳ್ಳಲಾಗುವುದು. ರಾಜ್ಯದ ಎಂಟು ಜಿಲ್ಲೆಗಳಲ್ಲಿ ಈಗಾಗಲೇ ನೈಟ್ ಕರ್ಪ್ಯೂ ಜಾರಿಗೊಳಿಸಲಾಗಿದೆ. ಅಗತ್ಯಬಿದ್ದರೆ ಒಂದೆರಡು ಜಿಲ್ಲೆಗಳಿಗೆ ನೈಟ್ ಕರ್ಪ್ಯೂ ವಿಸ್ತರಿಸುವ ಕುರಿತು ಚಿಂತನೆ ನಡೆಸಲಾಗುವುದು ಎಂದರು. ಇದೇ ತಿಂಗಳ 18 ರಂದು ಪ್ರತಿಪಕ್ಷ ನಾಯಕರ ಸಭೆ …
Read More »ಮೊದಲ ಬಾರಿ ಕೋರ್ಟ್ ಒಳಗೆ ಕಾಲಿಟ್ಟ ರಕ್ಷಿತ್ ಶೆಟ್ಟಿಗೆ ಇಂಥ ಅನುಭವ! ಇನ್ನೂ ಮುಗಿದಿಲ್ಲ ಕಿರಿಕ್ ಪಾರ್ಟಿ ಕಿರಿಕ್
ಕಿರಿಕ್ ಪಾರ್ಟಿ’ ಸಿನಿಮಾದ ಹಾಡೊಂದರ ಕಾಪಿರೈಟ್ ಕೇಸ್ಗೆ ಸಂಬಂಧಿಸಿದ ಕಿರಿಕ್ ಇನ್ನೂ ಬಗೆಹರಿದಿಲ್ಲ. ಲಹರಿ ಮ್ಯೂಸಿಕ್ ಆಡಿಯೋ ಕಂಪನಿ ಮತ್ತು ರಕ್ಷಿತ್ ಶೆಟ್ಟಿ ಅವರ ಪರಮ್ವಾ ಸ್ಟುಡಿಯೋ ನಡುವೆ ಇನ್ನೂ ಜಟಾಪಟಿ ಮುಂದುವರಿದಿದೆ. ಈ ಪ್ರಕರಣದ ವಿಚಾರಣೆ ಸಲುವಾಗಿ ಸೋಮವಾರ (ಏ.12) ರಕ್ಷಿತ್ ಶೆಟ್ಟಿ ಕೋರ್ಟ್ಗೆ ಹಾಜರಾಗಿದ್ದರು. ವಿಚಾರಣೆ ಮುಗಿಸಿ ಹೊರಬಂದ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ‘ಸಿನಿಮಾ ರಿಲೀಸ್ ಆಗುವಾಗ ಬೇಕಂತಲೇ ಈ ರೀತಿ ಮಾಡುತ್ತಾರೆ. ತುಂಬ ಸಿನಿಮಾಗಳಿಗೆ …
Read More »
Laxmi News 24×7