Breaking News

ರಾಜ್ಯ

ಸವದತ್ತಿ ಯಲ್ಲಮ್ಮ ದೇವಸ್ಥಾನದ ಹುಂಡಿಯಲ್ಲಿ 20 ದಿನದಲ್ಲಿ 53.80 ಲಕ್ಷ ರೂ. ಕಾಣಿಕೆಸಂಗ್ರಹ

ಸವದತ್ತಿ – ಕೇವಲ 20 ದಿನದಲ್ಲಿ ಸವದತ್ತಿ ಯಲ್ಲಮ್ಮ ದೇವಸ್ಥಾನದ ಹುಂಡಿಯಲ್ಲಿ 53.80 ಲಕ್ಷ ರೂ.ಕಾಣಿಕೆ ಸಂಗ್ರಹವಾಗಿದೆ. ಕೊರೋನಾ ಹಿನ್ನೆಲೆಯಲ್ಲಿ ಸಾಲಿನಲ್ಲಿ ಕೇವಲ 20 ದಿನ ದೇವಸ್ಥಾನದ ಬಾಗಿಲು ತೆರೆಯಲಾಗಿತ್ತು. ಈ ಅಲ್ಪ ಅವಧಿಯಲ್ಲಿ ಇಷ್ಟು ದೊಡ್ಡ ಮೊತ್ತದ ಕಾಣಿಕೆ ಬಂದಿದೆ. 85 ಜನರು ಸೇರಿ ಕಾಣಿಕೆಯನ್ನು ಎಣಿಸಿದ್ದಾರೆ ಎಂದು ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ರವಿ ಕೊಟಾರಗಸ್ತಿ ತಿಳಿಸಿದ್ದಾರೆ. ಕಳೆದ ಮಾರ್ಚ್ ತಿಂಗಳಲ್ಲಿ ಕೊರೋನಾ ಆರಂಭವಾದ ಹಿನ್ನೆಲೆಯಲ್ಲಿ ದೇವಸ್ಥಾನಕ್ಕೆ ಭಕ್ತರ …

Read More »

ಇಂದು ಮಧ್ಯಾಹ್ನ 2 ಗಂಟೆಗೆ ವಕೀಲರ ಮೂಲಕ ದೂರು ದಾಖಲು: ಸಿಡಿ ಲೇಡಿ

ಬೆಂಗಳೂರು – ಕಳೆದ 24 ದಿನಗಳಿಂದ ತೀವ್ರ ಸಂಚಲನ ಮೂಡಿಸಿರುವ ಮಾಜಿ ಸಚಿವ ರಮೇಶ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಇದೀಗ ಮತ್ತೊಂದು ಸ್ಪೋಟಕ ತಿರುವು ಸಿಕ್ಕಿದೆ. ರಮೇಶ ಜಾರಕಿಹೊಳಿ ವಿರುದ್ಧ ಇಂದೇ ಪ್ರಕರಣ ದಾಖಲಿಸಲು ಸಿಡಿಯಲ್ಲಿರುವ ಯುವತಿ ನಿರ್ಧರಿಸಿದ್ದು, ವಕೀಲ ಜಗದೀಶ್ ಎನ್ನುವವರ ಮೂಲಕ ಮಧ್ಯಾಹ್ನ 2 ಗಂಟೆಗೆ ದೂರು ದಾಖಲಾಗಲಿದೆ. ಯುವತಿಯ ಹಸ್ತಾಕ್ಷರದಲ್ಲೇ ದೂರು ದಾಖಲಿಸಲಾಗುವುದು ಎಂದು ಅವಳ ಪರ ವಕೀಲ ಜಗದೀಶ ಸುದ್ದಿಗಾರರಿಗೆ ತಿಳಿಸಿದ್ದಾರೆ. ಒಬ್ಬ ಪ್ರಭಾವಿ …

Read More »

ಸರ್ಕಾರದಿಂದ ಪರಿಷ್ಕೃತ ಮಾರ್ಗಸೂಚಿ ಪ್ರಕಟ, ಕೊರೋನಾ 2 ನೇ ಅಲೆ ಆರ್ಭಟ ತಡೆಗೆ ಹಬ್ಬ ಆಚರಣೆಗೆ ನಿರ್ಬಂಧ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿನ ಎರಡನೇ ಅಲೆ ಆರ್ಭಟದ ಹಿನ್ನೆಲೆಯಲ್ಲಿ ಮುಂದಿನ ಹಬ್ಬ-ಹರಿದಿನ ಆಚರಣೆಗೆ ಮಾರ್ಗಸೂಚಿ ಪ್ರಕಟಿಸಲಾಗಿದೆ. ರಾಜ್ಯ ಸರ್ಕಾರದಿಂದ ಪರಿಷ್ಕೃತ ಮಾರ್ಗಸೂಚಿಯನ್ನು ಪ್ರಕಟಿಸಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಆಚರಣೆ ನಿರ್ಬಂಧಿಸಿ ಆದೇಶ ಹೊರಡಿಸಲಾಗಿದೆ. ಯುಗಾದಿ ಹಬ್ಬ, ಹೋಳಿ ಹಬ್ಬ, ಗುಡ್ ಫ್ರೈಡೇ, ಶಬ್ ಎ ಬರಾತ್ ಮೊದಲಾದ ಹಬ್ಬಗಳಂದು ಸಾರ್ವಜನಿಕ ಸ್ಥಳಗಳಲ್ಲಿ ಆಚರಣೆ ನಿರ್ಬಂಧಿಸಿ ಆದೇಶ ಹೊರಡಿಸಲಾಗಿದೆ. ಸಾರ್ವಜನಿಕ ಸ್ಥಳಗಳು, ಮೈದಾನ, ಮಾರ್ಕೆಟ್, ಪಾರ್ಕ್, ಪ್ರಾರ್ಥನಾ ಮಂದಿರಗಳಲ್ಲಿ ಆಚರಿಸುವುದಕ್ಕೆ ನಿಷೇಧ …

Read More »

ಬಿಪಿಎಲ್ ಕಾರ್ಡುದಾರರಿಗೆ ಉಚಿತವಾಗಿ ನೀಡುತ್ತಿರುವ ಅಕ್ಕಿಯ ಪ್ರಮಾಣ ಕಡಿತ

ಬೆಂಗಳೂರು: ಆರ್ಥಿಕ ಹೊರೆ ತಗ್ಗಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಕಾರ್ಡುದಾರರಿಗೆ ಉಚಿತವಾಗಿ ನೀಡುತ್ತಿರುವ ಅಕ್ಕಿಯ ಪ್ರಮಾಣವನ್ನು ಕಡಿತಗೊಳಿಸಿದೆ. ಇದಾದ ನಂತರದಲ್ಲಿ ಅಂತ್ಯೋದಯ ಕಾರ್ಡ್ ಅಕ್ಕಿಯನ್ನು ಕೂಡ ಕಡಿತ ಮಾಡಲು ನಿರ್ಧರಿಸಲಾಗಿದ್ದು 35 ಕೆಜಿ ಅಕ್ಕಿಯ ಬದಲು 15 ಕೆಜಿ ಅಕ್ಕಿ ಜೊತೆಗೆ 20 ಕೆಜಿ ರಾಗಿ ವಿತರಣೆ ಮಾಡಲಾಗುವುದು ಎಂದು ಹೇಳಲಾಗಿದೆ. ಅಂತ್ಯೋದಯ ಕಾರ್ಡ್ ಫಲಾನುಭವಿಗಳಿಗೆ ಪ್ರತಿ ತಿಂಗಳು 35 ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡಲಾಗುತ್ತದೆ. …

Read More »

ವಿದ್ಯಾರ್ಥಿಗಳೇ ಗಮನಿಸಿ: ರದ್ದಾಗಿದೆ ಈ 7 ಬಿ.ಇಡಿ ಕಾಲೇಜುಗಳ ಮಾನ್ಯತೆ

ಬಿ.ಇಡಿ ವ್ಯಾಸಂಗ ಮಾಡಬಯಸುವ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ರಾಷ್ಟ್ರೀಯ ಶಿಕ್ಷಕರ ಶಿಕ್ಷಣ ಮಂಡಳಿ ರಾಜ್ಯದ 7 ಬಿ.ಇಡಿ ಕಾಲೇಜುಗಳ ಮಾನ್ಯತೆಯನ್ನು ರದ್ದುಗೊಳಿಸಿದ್ದು, ಜೊತೆಗೆ ಎರಡು ಕಾಲೇಜುಗಳಲ್ಲಿ ಸೀಟುಗಳ ಸಂಖ್ಯೆಯನ್ನು ಕಡಿತಗೊಳಿಸಿದೆ. ಮಾನ್ಯತೆ ರದ್ದುಗೊಂಡಿರುವ ಕಾಲೇಜುಗಳ ಪಟ್ಟಿ ಇಂತಿದ್ದು, ಬೆಳಗಾವಿಯ ಕೆಎಸ್‌ಆರ್ ಕಾಲೇಜ್ ಆಫ್ ಎಜುಕೇಶನ್ ಹಾಗೂ ಶ್ರೀ ಸಿದ್ಧಿವಿನಾಯಕ ರೂರಲ್ ಕಾಲೇಜ್, ವಿಜಯಪುರದ ಎಸ್ ಎಂ ಆರ್ ಕೆ ಮಹಿಳಾ ವಿದ್ಯಾವರ್ಧಕ ಕಾಲೇಜ್ ಆಫ್ ಎಜುಕೇಶನ್, ಶ್ರೀ ಫುಲ್ಸಿಂಗ್ …

Read More »

ಕುಟುಂಬಕ್ಕೆ ಮಣೆ ಹಾಕುವುದಿಲ್ಲ ಎನ್ನುವ ಮಾತನ್ನು ಮೀರಿ ಸುರೇಶ ಅಂಗಡಿ ಅವರ ಪತ್ನಿಗೇ ಟಿಕೆಟ್ ನೀಡಲಾಗಿದೆ.

ಬೆಳಗಾವಿ – ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ದಿ.ಸುರೇಶ ಅಂಗಡಿ ಅವರ ಪತ್ನಿ ಮಂಗಲಾ ಅಂಗಡಿಗೆ ಟಿಕೆಟ್ ನೀಡಲಾಗಿದೆ. ಕುಟುಂಬಕ್ಕೆ ಮಣೆ ಹಾಕುವುದಿಲ್ಲ ಎನ್ನುವ ಮಾತನ್ನು ಮೀರಿ ಸುರೇಶ ಅಂಗಡಿ ಅವರ ಪತ್ನಿಗೇ ಟಿಕೆಟ್ ನೀಡಲಾಗಿದೆ.

Read More »

ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಮಾರ್ಚ್ 29ರಂದು ನಾಮಪತ್ರ ಸಲ್ಲಿಸಲಿದ್ದಾರೆ.

ಬೆಳಗಾವಿ: ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ ಬೆನ್ನಲ್ಲೇ ಕೈ ನಾಯಕರ ಚುನಾವಣಾ ಸಿದ್ಧತೆ ಜೋರಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಮಾರ್ಚ್ 29ರಂದು ನಾಮಪತ್ರ ಸಲ್ಲಿಸಲಿದ್ದಾರೆ. ಬೆಳಗಾವಿ ಉಪಚುನಾವಣಾ ಅಖಾಡ ರಂಗೇರುತ್ತಿದ್ದು, ಭಾನುವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕುಂದಾನಗರಿ ಬೆಳಗಾವಿಗೆ ಆಗಮಿಸಲಿದ್ದಾರೆ. ಮರುದಿನ, ಸೋಮವಾರ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ನಾಮಪತ್ರ ಸಲ್ಲಿಸಲಿದ್ದಾರೆ. ಡಿ.ಕೆ.ಶಿವಕುಮಾರ್ ಮಾರ್ಚ್ 28ರಿಂದ ಉತ್ತರ ಕರ್ನಾಟ ಭಾಗದಲ್ಲಿ ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ರಾಯಚೂರು ಹಾಗೂ …

Read More »

ಕಲ್ಲು ಕ್ವಾರಿಗಳ ಮೇಲೆ ಗಣಿ ಇಲಾಖೆ, ಪರಿಸರ ಇಲಾಖೆ ಸರ್ಜಿಕಲ್ ಸ್ಟ್ರೈಕ್

ಗೋಕಾಕ: ಬೆಳಗಾವಿ ಜಿಲ್ಲೆಯ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಮತ್ತು ಚಿಕ್ಕೋಡಿ ಪರಿಸರ ಇಲಾಖೆಯ ಅಧಿಕಾರಿಗಳು ಉಪ ನಿರ್ದೇಶಕಿ ಶ್ರೀ ಬಿಂದನ ಪಾಟೀಲ್ ರವರ ಮಾರ್ಗದರ್ಶನದಲ್ಲಿ ಜಿಲ್ಲೆಯ ಗೋಕಾಕ್ ನ ಬಿಲಕುಂದಿ ಗ್ರಾಮದಲ್ಲಿರುವ ಕಲ್ಲು ಕ್ರಷರ್ ಗಳಿಗೆ ಭೇಟಿಕೊಟ್ಟು ನಿಯಮಗಳನ್ನು ಉಲ್ಲಂಘನೆ ಮಾಡಿರುವ 5 ಕಲ್ಲು ಕ್ವಾರಿ ಗಳನ್ನು ಸೀಜ್ ಮಾಡಲಾಯಿತು. ಶಿವಮೊಗ್ಗದಲ್ಲಿ ಆದ ಘಟನೆಯಿಂದ ಎಚ್ಚೆತ್ತುಕೊಂಡಿರುವ ಬೆಳಗಾವಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ಪರಿಸರ ಇಲಾಖೆ …

Read More »

ಸುಖಾ ಸುಮ್ಮನೆ ಬೈಕ್​ಗಳನ್ನು ಎಳೆದೊಯ್ದು, ಯಾಕೆ ಎಂದು ಕೇಳಿದವರ ಮೇಲೆ ದರ್ಪ: ಚಾಟಿ ಬೀಸಿದ್ದಾರೆ ಕಮಲ್​ ಪಂತ್​

ಬೆಂಗಳೂರು: ಸುಖಾ ಸುಮ್ಮನೆ ಬೈಕ್​ಗಳನ್ನು ಎಳೆದೊಯ್ದು, ಯಾಕೆ ಎಂದು ಕೇಳಿದವರ ಮೇಲೆ ದರ್ಪ ತೋರುತ್ತಿದ್ದ ಟೋಯಿಂಗ್​ ಸಿಬ್ಬಂದಿಗೆ ನಗರ ಪೊಲೀಸ್​ ಆಯುಕ್ತ ಕಮಲ್​ ಪಂತ್​ ಚಾಟಿ ಬೀಸಿದ್ದಾರೆ. ಈ ಹಿಂದಿನ ಕಮಿಷನರ್​ ಭಾಸ್ಕರ್​ ರಾವ್ ಟೋಯಿಂಗ್​ ಸಮಸ್ಯೆಗೆ ಮುಕ್ತಿ ನೀಡುವ ಸಲವಾಗಿ ಟೋಯಿಂಗ್​ ಮಾಡುವ ಸಿಬ್ಬಂದಿ ಗಾಡಿ ಎಳೆದೊಯ್ಯುವಾಗ ಅನೌನ್ಸ್​ ಮಾಡಬೇಕು ಎಂದು ಸುತ್ತೋಲೆ ಹೊರಡಿಸಿದ್ದರು. ಅದನ್ನ ಯಥಾಪ್ರಕಾರವಾಗಿ ಎರಡು ದಿನ ಫಾಲೋ ಮಾಡಿದ ಸಿಬ್ಬಂದಿ, ಮತ್ತೆ ತಮ್ಮ ಚಾಳಿ …

Read More »

ಬಸವಕಲ್ಯಾಣ ಅಭ್ಯರ್ಥಿಯಾಗಲು ಬಿಜೆಪಿಗೆ ಟಿಕೆಟ್ ಆಕಾಂಕ್ಷಿಯಿಂದ ದೊಡ್ಡ ಮಟ್ಟದ ಹಣ ಸಂದಾಯ: HDK

ಕಲಬುರಗಿ: ಬಸವಕಲ್ಯಾಣ ಉಪ ಚುನಾವಣೆಯಲ್ಲಿ ಅಭ್ಯರ್ಥಿಯಾಗಲು ಬಿಜೆಪಿ ಟಿಕೆಟ್ ಆಕಾಂಕ್ಷಿಯೋರ್ವ ನಾಯಕರಿಗೆ ದೊಡ್ಡ ಮಟ್ಟದ ಹಣ ಸಂದಾಯ ಮಾಡಿದ್ದಾರೆ‌. ಗಾಬರಿಯಾಗುವ ಮೊತ್ತವನ್ನು ಆ ಆಕಾಂಕ್ಷಿ ನೀಡಿದ್ದಾರೆ ಎಂದು ಜೆಡಿಎಸ್ ನಾಯಕ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಣ ಸಂದಾಯವಾದ ಹಿನ್ನೆಲೆಯಲ್ಲಿ ಬಿಜೆಪಿ ಇನ್ನೂ ಅಭ್ಯರ್ಥಿಯನ್ನು ಘೋಷಣೆ ಮಾಡಿಲ್ಲ. ರಾಜ್ಯದ ಹಣ ಲೂಟಿ ಮಾಡಿ ಬಿಜೆಪಿ ಚುನಾವಣೆ ಎದುರಿಸುತ್ತಿದೆ ಎಂದು ದೂರಿದರು. ಬಿಜೆಪಿಯವರು ಯಾರನ್ನ ನೆಮ್ಮದಿಯಿಂದ ಬದುಕಲು …

Read More »