Breaking News

ರಾಜ್ಯ

ಎಸ್ ಪಿ ಲಕ್ಷ್ಮಣ ನಿಂಬರಗಿಯವರಿಗೆ ಪುಸ್ತಕದ ಕಾಣಿಕೆ ನೀಡಿ ಅಭಿನಂದಿಸಿದ ಸಚಿವ ಎಂ.ಬಿ.ಪಾಟೀಲ

ಎಸ್ ಪಿ ಲಕ್ಷ್ಮಣ ನಿಂಬರಗಿಯವರಿಗೆ ಪುಸ್ತಕದ ಕಾಣಿಕೆ ನೀಡಿ ಅಭಿನಂದಿಸಿದ ಸಚಿವ ಎಂ.ಬಿ.ಪಾಟೀಲ ಕಳೆದ ತಿಂಗಳು ವಿಜಯಪುರ ಜಿಲ್ಲೆಯ ಮನಗೂಳಿ ಪಟ್ಟಣದಲ್ಲಿ ನಡೆದ ಕೆನರಾ ಬ್ಯಾಂಕ್ ದರೋಡೆ ಪ್ರಕರಣ, ರಾಜ್ಯದ ಇತಿಹಾಸದಲ್ಲಿಯೇ ಅತಿದೊಡ್ಡ ಡಕಾಯಿತಿ ಪ್ರಕರಣವಾಗಿ, ಸಾರ್ವಜನಿಕರಲ್ಲಿ ಆತಂಕ ಮೂಡಿಸಿತ್ತು. ಇದನ್ನು ಬೇಧಿಸುವಲ್ಲಿ ಯಶಸ್ವಿಯಾದ ವಿಜಯಪುರ ಪೊಲೀಸರ ಕಾರ್ಯಕ್ಕೆ ವಿಜಯಪುರ ಜಿಲ್ಲೆಯ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಶ್ಲಾಘಿಸಿದ್ದಾರೆ. ವಿಜಯಪುರ ಜಿಲ್ಲೆಯ ಪೋಲಿಸ್ ಅಧಿಕಾರಿಗಳು ತಮ್ಮ ಚುರುಕಿನ ಕಾರ್ಯಾಚರಣೆಯಿಂದ ರಾಜ್ಯದ ಜನತೆಯ …

Read More »

ಚಲಿಸುತ್ತಿರುವಾಗಲೇ ಕಳಚಿದ ಸರ್ಕಾರಿ ಬಸ್​​ ಚಕ್ರ

ಗದಗ, ಜೂನ್​ 27: ಜಿಲ್ಲೆಯ ಶಿರಹಟ್ಟಿಯ ಬಳಿ ಬೆಳ್ಳಟ್ಟಿಯಿಂದ ಶಿರಹಟ್ಟಿಗೆ ತೆರಳುತ್ತಿದ್ದ ಬಸ್‌ನ (Bus) ಮುಂಭಾಗದ ಚಕ್ರ ಚಲಿಸುದ್ದ ವೇಳೆಯೇ ಕಳಚಿಕೊಂಡಿರುವಂತಹ ಘಟನೆ ನಡೆದಿದೆ. ಅದೃಷ್ಟವಶಾತ್, ಚಾಲಕನ ಸಮಯಪ್ರಜ್ಞೆಯಿಂದ ಭಾರಿ ದುರಂತ ತಪ್ಪಿದ್ದು, ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಡಕೋಟಾ ಬಸ್‌ಗಳ ಬಳಕೆಯ ಬಗ್ಗೆ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜೊತೆಗೆ ಹೊಸ ಬಸ್‌ಗಳನ್ನು ಒದಗಿಸುವಂತೆ ಒತ್ತಾಯಿಸಿದ್ದಾರೆ.

Read More »

20ಕ್ಕೂ ಹೆಚ್ಚು ಮಕ್ಕಳ ಮೇಲೆ ಹುಚ್ಚುನಾಯಿ ದಾಳಿ

ಮೈಸೂರು: ಸುಮಾರು 20ಕ್ಕೂ ಹೆಚ್ಚು ಮಕ್ಕಳಿಗೆ ಹುಚ್ಚುನಾಯಿ ಕಚ್ಚಿರುವ ಘಟನೆ ನಂಜನಗೂಡು ತಾಲ್ಲೂಕಿನ ಹುಲ್ಲಹಳ್ಳಿ‌ಯಲ್ಲಿ ಗುರುವಾರ ನಡೆದಿದೆ. ಕೊಪಗೊಂಡ ಗ್ರಾಮಸ್ಥರು ಒಂದು ಹುಚ್ಚುನಾಯಿಯನ್ನು ಕೊಂದು ಹಾಕಿದ್ದಾರೆ. ಹುಲ್ಲಹಳ್ಳಿ ನಿವಾಸಿಗಳು ಹುಚ್ಚುನಾಯಿ ಹಾವಳಿಯಿಂದ ಬೇಸತ್ತಿದ್ದಾರೆ. ಇನ್ನೂ ಎರಡು ನಾಯಿಗಳು ಭೀತಿ ಹುಟ್ಟಿಸುತ್ತಿರುವುದಾಗಿ ತಿಳಿದು ಬಂದಿದೆ. ಹುಚ್ಚುನಾಯಿ ಕಚ್ಚಿ ಬಸವ ಸಾವು: ಇತ್ತೀಚೆಗೆ ಮೈಸೂರಿನ ಮೇಟಗಳ್ಳಿ ದೇವಾಲಯದ ಬಸವ ಹುಚ್ಚುನಾಯಿ ಕಚ್ಚಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿತ್ತು.ಕೆಲವು ದಿನಗಳ ಹಿಂದೆ ಬಸವನಿಗೆ ಹುಚ್ಚುನಾಯಿ ಕಚ್ಚಿದೆ. ಸ್ಥಳೀಯರು ಸೇರಿ …

Read More »

ಬಳ್ಳಾರಿ‌‌ ನಾಲಾ ಅವಾಂತರ, ಗೆಣಸು ಕೊಯ್ಲಿಗೆ ರೈತರ ಹರಸಾಹಸ

ಬೆಳಗಾವಿ: ಇಲ್ಲಿನ ಬಳ್ಳಾರಿ ನಾಲೆ ಉಕ್ಕಿ ಹರಿಯುತ್ತಿದ್ದು, ಜಮೀನುಗಳಿಗೆ ನೀರು ನುಗ್ಗಿ ಬೆಳೆಗಳನ್ನು ಆಹುತಿ ಪಡೆದುಕೊಳ್ಳುತ್ತಿದೆ. ಹಾಗಾಗಿ, ಗೆಣಸು ಕಟಾವು ಮಾಡಲು ರೈತರು ಹರಸಾಹಸಪಡುತ್ತಿದ್ದಾರೆ. ಇದನ್ನು ಹಾಗೇ ಬಿಟ್ಟರೆ ಹಾಕಿದ ಬಂಡವಾಳ ಕೂಡ ಕೈ ಸೇರುವುದಿಲ್ಲ ಎಂಬ ಆತಂಕ ವ್ಯಕ್ತಪಡಿಸಿದ್ದಾರೆ. ಬೆಳಗಾವಿ ನಗರದ ಹೊರ ವಲಯದಲ್ಲಿ ಹರಿಯುವ ಬಳ್ಳಾರಿ ನಾಲೆ ಇಲ್ಲಿನ ರೈತರಿಗೆ ಶಾಪವಾಗಿ ಪರಿಣಮಿಸಿದೆ. ಆರಂಭದಲ್ಲಿ ಈ ಭಾಗದ ರೈತರಿಗೆ ವರದಾನವಾಗಿತ್ತು. ಕಳೆದ ಹತ್ತು ವರ್ಷಗಳಿಂದ ಹೂಳು ತುಂಬಿಕೊಂಡು ಪ್ರತೀ …

Read More »

ಮೂಕಜೀವಿಗಳ ಪ್ರಾಣ ಉಳಿಸುವ ಕರುಣಾಮಯಿ ಸರ್ಜನ್​​ಗಳು

ದಾವಣಗೆರೆ: ನಗರದಲ್ಲಿರುವ ಏಕೈಕ ಪಾಲಿಕ್ಲಿನಿಕ್ ಇಡೀ ರಾಜ್ಯದಲ್ಲಿ ಹೆಸರುವಾಸಿಯಾಗಿದೆ. ಪಶುಪಾಲನೆ ಹಾಗೂ ಪಶುವೈದ್ಯಕೀಯ ಸೇವಾ ಇಲಾಖೆಯ ಪಾಲಿಕ್ಲಿನಿಕ್ ಜಾನುವಾರುಗಳು ಹಾಗೂ ಪ್ರಾಣಿಗಳ ಜೀವ ಉಳಿಸಲು ಶ್ರಮಿಸುತ್ತಿದೆ. ಇಲ್ಲಿ ನೂರಾರು ಶಸ್ತ್ರಚಿಕಿತ್ಸೆಗಳು ಯಶಸ್ವಿಯಾಗಿವೆ. ಸಿ ಸೆಕ್ಷನ್‌ಗೂ ಈ ಆಸ್ಪತ್ರೆ ಹೆಸರುವಾಸಿ. ಇಲ್ಲಿನ ಕರುಣಾಮಯಿ ಸರ್ಜನ್​​ಗಳು ಆಪರೇಷನ್‌ಗಳನ್ನು ಮಾಡಿ ಇಂದಿಗೂ ಸಾವಿರಾರು ಮೂಕಜೀವಿಗಳ ಪ್ರಾಣ ಉಳಿಸಲು ಟೊಂಕ ಕಟ್ಟಿ ನಿಂತಿದ್ದಾರೆ. ಅಲ್ಲದೆ, ರಾಜ್ಯಾದ್ಯಂತ ವಿವಿಧ ಜಿಲ್ಲೆಗಳಿಂದ ಪ್ರಾಣಿಗಳು, ಜಾನುವಾರುಗಳನ್ನು ಹಿಡಿದು ಚಿಕಿತ್ಸೆ ಅರಸಿ ಮಾಲೀಕರು …

Read More »

ಪಂಢರಪುರಕ್ಕೆ ಪಾದಯಾತ್ರೆ ಬೆಳೆಸಿದ ಗೋವಾ ಉಸ್ತೆ ವಾರಕರಿಗಳು….

ಪಂಢರಪುರಕ್ಕೆ ಪಾದಯಾತ್ರೆ ಬೆಳೆಸಿದ ಗೋವಾ ಉಸ್ತೆ ವಾರಕರಿಗಳು…. ಪಾಂಡುರಂಗನ ಭಕ್ತಿ ಅಪಾರವಾಗಿದ್ದು, ಆತನ ಭಕ್ತರು ಕೇವಲ ಮಹಾರಾಷ್ಟ್ರವಲ್ಲದೇ, ಪಕ್ಕದ ಕರ್ನಾಟಕ, ಗೋವಾದಲ್ಲಿಯೂ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಗೋವಾದ ಉಸ್ತೆ ಗ್ರಾಮದಿಂದ ಪಾಯಿದಿಂಡಿ ಹೊರಟ ವಿಠ್ಠಲ ಭಕ್ತರ ವಾರಿ ಇದಕ್ಕೆ ಸಾಕ್ಷಿಯಾಗಿದೆ. ಆಷಾಢ ಏಕಾದಶಿ ಬಂತೆಂದರೇ ಸಾಕು ಬೆಳಗಾವಿ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ತಾಳ ಮೃದಂಗದ ನಿನಾದ ಮತ್ತು ಹರಿನಾಮ ಘೋಷಣೆ ಕೇಳಿ ಬರುತ್ತದೆ. ಜಗತ್ತಿನಾದ್ಯಂತ ಅಸಂಖ್ಯ ಭಕ್ತರನ್ನು ಹೊಂದಿದ ಪಾಂಡುರಂಗನ …

Read More »

ಯಲ್ಲಮ್ಮನಗುಡ್ಡದಲ್ಲಿ ಎರಡು ದಿನ ನಡೆದ ಯಲ್ಲಮ್ಮ ದೇವಸ್ಥಾನದ ಹುಂಡಿ ಎಣಿಕೆ ಕಾರ್ಯ ಗುರುವಾರ ಮುಕ್ತಾಯಗೊಂಡಿದ್ದು, ₹1.04 ಕೋಟಿ ಕಾಣಿಕೆ ಸಂಗ್ರಹ

ಸಮೀಪದ ಯಲ್ಲಮ್ಮನಗುಡ್ಡದಲ್ಲಿ ಎರಡು ದಿನ ನಡೆದ ಯಲ್ಲಮ್ಮ ದೇವಸ್ಥಾನದ ಹುಂಡಿ ಎಣಿಕೆ ಕಾರ್ಯ ಗುರುವಾರ ಮುಕ್ತಾಯಗೊಂಡಿದ್ದು, ₹1.04 ಕೋಟಿ ಕಾಣಿಕೆ ಸಂಗ್ರಹವಾಗಿದೆ. ಇದರಲ್ಲಿ ₹5.22 ಲಕ್ಷ ಮೌಲ್ಯದ 53 ಗ್ರಾಂ ಚಿನ್ನಾಭರಣ, ₹1.27 ಲಕ್ಷ ಮೌಲ್ಯದ 1,276 ಗ್ರಾಂ ಬೆಳ್ಳಿ ಆಭರಣ, ₹98.23 ಲಕ್ಷ ನಗದು ಸೇರಿದೆ ಎಂದು ಯಲ್ಲಮ್ಮ ದೇವಸ್ಥಾನ ಪ್ರಾಧಿಕಾರದ ಕಾರ್ಯದರ್ಶಿ ಅಶೋಕ ದುಡಗುಂಟಿ ತಿಳಿಸಿದರು. ಸಪ್ತಗುಡ್ಡ, ಸಪ್ತ ಕೊಳ್ಳಗಳ ನಡುವೆ ನೆಲೆ ನಿಂತ ಯಲ್ಲಮ್ಮನ ಸನ್ನಿಧಿಗೆ …

Read More »

ಮಾಟ ಮಂತ್ರ.. ಖಾರದ ಪುಡಿ ತಂತ್ರ: ಬ್ಯಾಂಕ್​ನಲ್ಲಿ 58 ಕೆಜೆ ಚಿನ್ನ ದರೋಡೆ ಕೇಸ್​; ಮ್ಯಾನೇಜರ್​ ಸೇರಿ ಮೂವರ ಬಂಧನ

ವಿಜಯಪುರ: ಕಳೆದ ತಿಂಗಳು ಮನಗೂಳಿ ಪಟ್ಟಣದ ಕೆನರಾ ಬ್ಯಾಂಕ್​ನಲ್ಲಿ ನಡೆದಿದ್ದ ಕೋಟ್ಯಾಂತರ ಮೌಲ್ಯದ ಬಂಗಾರ ಹಾಗೂ ನಗದು ದರೋಡೆ ಪ್ರಕರಣವನ್ನು ವಿಜಯಪುರ ಪೊಲೀಸರು ಭೇದಿಸಿದ್ದಾರೆ. ಮೇ 25 ರಂದು ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಪಟ್ಟಣದ ಕೆನರಾ ಬ್ಯಾಂಕ್​ನ ಲಾಕರ್​ನಲ್ಲಿದ್ದ ಅಂದಾಜು 53.26 ಕೋಟಿ ರೂ. ಮೌಲ್ಯದ 58.97 ಕೆ.ಜಿ (58,976.94 ಗ್ರಾಂ) ಬಂಗಾರದ ಆಭರಣಗಳು ಹಾಗೂ ರೂ. 5,20,450 ನಗದು ದರೋಡೆಯಾಗಿತ್ತು. ಪ್ರಕರಣವನ್ನು ಭೇದಿಸಿರುವ ಪೊಲೀಸರು, ಕೆನರಾ ಬ್ಯಾಂಕ್‌ನ ಸೀನಿಯರ್ ಮ್ಯಾನೇಜರ್ …

Read More »

ತಾನು ಕೆಲಸ ನಿರ್ವಹಿಸಿದ್ದ ಬ್ಯಾಂಕ್​​ನಲ್ಲೇ ನಿವೃತ್ತ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆಗೆ ಶರಣು

ತಾನು ಕೆಲಸ ನಿರ್ವಹಿಸಿದ್ದ ಬ್ಯಾಂಕ್​​ನಲ್ಲೇ ನಿವೃತ್ತ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆಗೆ ಶರಣು ಮಂಗಳೂರು (ದಕ್ಷಿಣ ಕನ್ನಡ) : ನಿವೃತ್ತರಾದ ಬ್ಯಾಂಕ್ ಉದ್ಯೋಗಿಯೊಬ್ಬರು ತಾನು ಕರ್ತವ್ಯ ನಿರ್ವಹಿಸಿದ್ದ ಬ್ಯಾಂಕ್ ನಲ್ಲೇ ಆತ್ಮಹತ್ಯೆಗೆ ಶರಣಾದ ಘಟನೆ ಮಂಗಳೂರಿನ ಕೊಡಿಯಾಲ್ ಬೈಲ್​ನಲ್ಲಿರುವ ಕೆನರಾ ಬ್ಯಾಂಕ್​​ನಲ್ಲಿ ನಡೆದಿದೆ. ಮೃತರನ್ನು ಅಳಕೆ ನಿವಾಸಿ ಗಿರಿಧರ್ ಯಾದವ್ (61) ಎಂದು ಗುರುತಿಸಲಾಗಿದೆ. ಇವರು ಕೊಡಿಯಾಲ್ ಬೈಲ್ ಕೆನರಾ ಬ್ಯಾಂಕ್​​ನಲ್ಲಿ ಸುಮಾರು 40 ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದರು. ಇತ್ತೀಚೆಗೆ ಇವರು ನಿವೃತ್ತಿ …

Read More »

ಕಟ್ಟಡ ನಕ್ಷೆ ಮಂಜೂರಾತಿ ಕೋರಿ ಅರ್ಜಿ ಸಲ್ಲಿಸಲು ಜು. 1 ರಿಂದ ಇ- ಖಾತಾ ಕಡ್ಡಾಯ: ಇ- ಖಾತಾ ಪಡೆಯಲು ಬೇಕಿರುವ ದಾಖಲೆಗಳೇನು?

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ ) ವ್ಯಾಪ್ತಿಯಲ್ಲಿ ಕಟ್ಟಡ ನಕ್ಷೆ ಮಂಜೂರಾತಿ ಕೋರಿ ಅರ್ಜಿ ಸಲ್ಲಿಸುವವರಿಗೆ ಜುಲೈ 1 ರಿಂದ ‘ಇ-ಖಾತಾ’ ಕಡ್ಡಾಯಗೊಳಿಸಲು ರಾಜ್ಯ ಸರ್ಕಾರ ಮುಂದಾಗಿದೆ. ನಗರ ಹಾಗೂ ಗ್ರಾಮೀಣ ಭಾಗದ ಜನರ ಆಸ್ತಿ ಮಾಲೀಕತ್ವಕ್ಕೆ ಬಲ ತುಂಬುವ ಹಾಗೂ ಆಸ್ತಿ ನಿರ್ವಹಣೆಯನ್ನು ಡಿಜಿಟಲೀಕರಣಗೊಳಿಸಿ, ಪ್ರಕ್ರಿಯೆಯನ್ನು ಸರಳಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕಳೆದ ವರ್ಷದ ಅಂತ್ಯದಲ್ಲಿ ಇ-ಖಾತಾ ವ್ಯವಸ್ಥೆಯ ಮೂಲಕ ಮಹತ್ವದ ಹೆಜ್ಜೆ ಇಟ್ಟಿತ್ತು. ಇ-ಖಾತಾ …

Read More »