ಮೈಸೂರು: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ಮನೆ ಹಾಳು ಮಾಡಿದ ಮಹಾನ್ ನಾಯಕ ಯಾರು ಎಂದು ತಿಳಿದುಕೊಳ್ಳುವ ಕುತೂಹಲ ರಾಜ್ಯಕ್ಕೆ ಇದೆ. ಅದರಲ್ಲಿ ನಾನು ಸಹಾ ಒಬ್ಬ. ಶೀಘ್ರದಲ್ಲಿ ಆ ಮಹಾನ್ ನಾಯಕ ಯಾರು ಎಂದು ಗೊತ್ತಾಗಲಿದೆ ಎಂದು ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕರಣದ ಬಗ್ಗೆ ಎಸ್ಐಟಿ ತನಿಖೆ ನಡೆಸುತ್ತಿದೆ. ಆದರೆ ಮಹಾನ್ ನಾಯಕ ಹೇಳಿಕೆ ಬಗ್ಗೆ ಡಿ.ಕೆ. ಶಿವಕುಮಾರ್ ತಮ್ಮನ್ನೇ ಏಕೆ ಮುಟ್ಟಿಕೊಳ್ಳುತ್ತಿದ್ದಾರೆ. ಎಲ್ಲಾ …
Read More »ಸಾಹುಕಾರ್ ಸಿಡಿ ಪ್ರಕರಣ; ಪತ್ರಕರ್ತನ ವಿಡಿಯೋ ಮೂಲ ಪತ್ತೆ ಹಚ್ಚಿದ ಎಸ್ಐಟಿ
ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಕಿಂಗ್ ಪಿನ್ ಎಂದೇ ಹೇಳಲಾಗುತ್ತಿರುವ ಮಾಜಿ ಪತ್ರಕರ್ತ ನರೇಶ್ ನಿನ್ನೆ ಬಿಡುಗಡೆ ಮಾಡಿದ್ದ ವಿಡಿಯೋ ಹೇಳಿಕೆಯ ಮೂಲ ಇದೀಗ ಪತ್ತೆಯಾಗಿದೆ. ನಿನ್ನೆ ನರೇಶ್, ಸಿಡಿ ಪ್ರಕರಣಕ್ಕೂ ತನಗೂ ಯಾವುದೇ ಸಂಬಂಧವಿಲ್ಲ. ಪ್ರಕರಣದಲ್ಲಿ ಅನಗತ್ಯವಾಗಿ ನನ್ನನ್ನು ಸಿಲುಕಿಸುವ ಯತ್ನ ನಡೆದಿದೆ ಎಂದು 8 ನಿಮಿಷಗಳ ವಿಡಿಯೋ ಬಿಡುಗಡೆ ಮಾಡಿದ್ದರು. ಅಲ್ಲದೇ ರಮೇಶ್ ಜಾರಕಿಹೊಳಿ ಮಾಡಬಾರದ ತಪ್ಪು ಮಾಡಿದ್ದಾರೆ. ಯುವತಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿದ್ದರು. ಇದೀಗ …
Read More »ಫೋನೂ ಇಲ್ಲ, ಮೆಸೇಜ್ ಇಲ್ಲ! ಎಲ್ಲಿರುವೆ?: S.I.T…
ಬೆಂಗಳೂರು: ಫೋನೂ ಇಲ್ಲ; ಮೆಸೇಜ್ ಇಲ್ಲ! ಎಲ್ಲಿರುವೆ? ಎಂಬಂತಾಗಿದೆ ರಾಜ್ಯ ಪೊಲೀಸರ ಅಸಹಾಯಕತೆ. ಏಕೆಂದರೆ ರಾಜ್ಯ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿರುವ ಮಾಜಿ ಸಚಿವರೊಬ್ಬರ ಲೈಂಗಿಕ ಸಿಡಿ ಪ್ರಕರಣದಲ್ಲಿ ಪ್ರಧಾನ ಪಾತ್ರಧಾರಿ ಎನ್ನಲಾಗಿರುವ ಯುವತಿಯ ಬೆನ್ನು ಹತ್ತಿದ ಎಸ್ಐಟಿ ಹೈರಾಣಗೊಂಡಿದೆ.. ನೋಟಿಸ್ ಮೇಲೆ ನೋಟಿಸ್ ನೀಡುತ್ತಲೇ ಆ ಕಡೆಯಿಂದ ಮಾತ್ರ ಫೋನೂ ಇಲ್ಲ; ಮೆಸೇಜ್ ಇಲ್ಲ- ಈ ಮೈಲ್ ಸಹ ಇಲ್ಲ! ಹಾಗಾಗಿ ಎಸ್ಐಟಿ ಪೊಲೀಸರು ಎಲ್ಲಿರುವೆ? ಎಂದು ಕುಂತ್ರೂ ನಿಂತ್ರೂ …
Read More »ಸಚಿವರ ಮನೆ ಮುಂದೆ ಇಂದು ಮಾರಾಮಾರಿ
ಬೆಂಗಳೂರು: ಸದಾಶಿವನಗರದಲ್ಲಿ ಸಚಿವರೊಬ್ಬರ ಮನೆ ಮುಂದೆ ಇಂದು ಮಾರಾಮಾರಿ ನಡೆದಿದ್ದು, ವಿಡಿಯೋ ವೈರಲ್ ಆಗಿದೆ. ಆರೋಗ್ಯ ಮತ್ತು ವೈದ್ಯಕೀಯ ಸಚಿವ ಡಾ.ಕೆ. ಸುಧಾಕರ್ರ ನಿವಾಸದ ಬಳಿ ಶುಕ್ರವಾರ ಬೆಳಗ್ಗೆ ಸಿಬ್ಬಂದಿಗಳ ನಡುವೆ ಗಲಾಟೆ ಆಗಿದೆ. ಸಚಿವರ ಗನ್ಮಾನ್ ತಿಮ್ಮಯ್ಯರಿಂದ ಸೋಮಶೇಖರ್ ಮೇಲೆ ಹಲ್ಲೆ ನಡೆದಿದೆ. ಸೋಮಶೇಖರ್ ಸಚಿವರ ಮನೆಯ ಖಾಸಗಿ ಡ್ರೈವರ್. ಇವರಿಬ್ಬರು ಮನೆ ಮುಂದೆ ಉರುಳಾಡಿಕೊಂಡು, ಅಂಗಿ ಕಿತ್ತು ಬರುವಂತೆ ಕಿತ್ತಾಡಿಕೊಂಡಿದ್ದಾರೆ. ನಿನ್ನೆ ಚಹಾ ಮಾರುತ್ತಿದ್ದ ಅಂಗವಿಕಲನಿಗೆ ತಿಮ್ಮಯ್ಯ …
Read More »“ಕೊರೊನಾವೈರಸ್ಗೆ ಲಸಿಕೆ ಉಂಟು, ಬಿಜೆಪಿಯ ಭ್ರಷ್ಟಾಚಾರದ ವೈರಸ್ಗೆ ಲಸಿಕೆ ಇಲ್ಲ”
ಬೆಂಗಳೂರು, ಮಾರ್ಚ್ 19: ”ಕರ್ನಾಟಕದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿಗೆ ನಿಯಂತ್ರಣವೇ ತಪ್ಪಿ ಹೋಗಿದೆ. ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಸೋಂಕು ಹರಡುವಿಕೆಗೆ ಕಡಿವಾಣ ಹಾಕುವುದರಲ್ಲಿ ಸೋತಿದೆ” ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ. ರಾಜ್ಯದಲ್ಲಿ ಪ್ರತಿನಿತ್ಯ ಸೋಂಕಿತ ಪ್ರಕರಣಗಳ ಸಂಖ್ಯೆ ಸಾವಿರದ ಗಡಿ ದಾಟುತ್ತಿದೆ. ನಾಲ್ಕು ತಿಂಗಳಿನಲ್ಲೇ ಮೊದಲ ಬಾರಿಗೆ ರಾಜ್ಯದಲ್ಲಿ 1400ಕ್ಕೂ ಹೆಚ್ಚು ಹೊಸ ಪ್ರಕರಣಗಳು ಪತ್ತೆಯಾಗಿವೆ. ಕಳೆದ 24 ಗಂಟೆಗಳಲ್ಲಿ 1488 …
Read More »ಕೋವಿಡ್ ನಿಯಂತ್ರಣದ ಹೆಸರಿನಲ್ಲಿ ಭ್ರಷ್ಟಾಚಾರ: ಸಿದ್ದರಾಮಯ್ಯ
ಬೆಂಗಳೂರು: ಕೋವಿಡ್ ನಿಯಂತ್ರಣ ಹೆಸರಿನಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ‘ಕೊರೊನಾ ನಿಯಂತ್ರಣದ ಹೆಸರಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂಬ ನಮ್ಮ ಆರೋಪಕ್ಕೆ ಸಾಕ್ಷಿ ಹೇಳುವಂತಿದೆ ಮತ್ತೆ ಅವತರಿಸಿ ಕೇಕೆ ಹಾಕುತ್ತಿರುವ ಕೊರೊನಾ ವೈರಸ್. ಮುಖ್ಯಮಂತ್ರಿಯವರೇ, ಕೋವಿಡ್-19 ನಿಯಂತ್ರಣಕ್ಕೆ ಸರ್ಕಾರ ಖರ್ಚು ಮಾಡಿದ್ದರೆ ಮತ್ತೆ ಯಾಕೆ ಕೊರೊನಾ ಸೋಂಕು ಉಲ್ಬಣಗೊಳ್ಳುತ್ತಿದೆ’ ಎಂದು ಪ್ರಶ್ನಿಸಿದ್ದಾರೆ. ‘ಕೊರೊನಾ …
Read More »ಚೇಂಬರ್ ನಲ್ಲೇ ವಿದ್ಯಾರ್ಥಿನಿ ಮೇಲೆ ಅಧ್ಯಾಪಕನಿಂದ ಅತ್ಯಾಚಾರ: ಫೇಲ್ ಮಾಡುವುದಾಗಿ ಬೆದರಿಸಿ ಕೃತ್ಯ
ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಹನುಮನಮಟ್ಟಿ ಕೃಷಿ ಮಹಾವಿದ್ಯಾಲಯದಲ್ಲಿ ಅಧ್ಯಾಪಕನೊಬ್ಬ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಘಟನೆ ಬಗ್ಗೆ ದೂರು ದಾಖಲಾಗಿದೆ. ರಾಣೆಬೆನ್ನೂರು ಗ್ರಾಮಾಂತರ ಠಾಣೆ ಪೊಲೀಸರಿಗೆ ವಿದ್ಯಾರ್ಥಿನಿ ದೂರು ನೀಡಿದ್ದು, ಹನುಮನಮಟ್ಟಿ ಕೃಷಿ ಮಹಾವಿದ್ಯಾಲಯದಲ್ಲಿ ಸಹಾಯಕ ಅಧ್ಯಾಪಕ 2019 ರಿಂದ ನೀನು ನನಗೆ ಇಷ್ಟ, ನನಗೆ ಸಹಕರಿಸಿದರೆ ನನ್ನ ವಿಷಯದ ಪರೀಕ್ಷೆಯಲ್ಲಿ ಪಾಸ್ ಮಾಡುತ್ತೇನೆ. ಇಲ್ಲದಿದ್ದರೆ ಫೇಲ್ ಮಾಡುತ್ತೇನೆ ಎಂದು ಬೆದರಿಸಿ ಚೇಂಬರ್ ನಲ್ಲಿಯೇ ಅತ್ಯಾಚಾರ ಎಸಗಿರುವುದಾಗಿ ವಿದ್ಯಾರ್ಥಿನಿ …
Read More »ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕರಿಗೆ ಗುಡ್ ನ್ಯೂಸ್
ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಸೇವಾ ಹಿರಿತನದ ಮೇಲೆ ಗೌರವ ಧನ ನಿಗದಿ ಮಾಡುವ ಕುರಿತಾಗಿ ಕ್ರಮಕೈಗೊಳ್ಳಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ. ಜೆಡಿಎಸ್ ಸದಸ್ಯ ಶ್ರೀಕಂಠೇಗೌಡ ಅವರು ಅಂಗನವಾಡಿ ಕಾರ್ಯಕರ್ತೆಯರ ಹೋರಾಟದ ಬಗ್ಗೆ ಶೂನ್ಯವೇಳೆಯಲ್ಲಿ ಪ್ರಸ್ತಾಪಿಸಿದಾಗ ಸಚಿವರು ಈ ಬಗ್ಗೆ ಮಾಹಿತಿ ನೀಡಿ, ಸೇವಾ ಹಿರಿತನದ ಮೇಲೆ ಗೌರವ ಧನ ನಿಗದಿ ಮಾಡುವ ಪ್ರಸ್ತಾವನೆಯನ್ನು ಆರ್ಥಿಕ ಇಲಾಖೆಯೊಂದಿಗೆ ಸಮಾಲೋಚನೆ …
Read More »ಹುಬ್ಬಳ್ಳಿ ತಾಲೂಕಿನ ಛಬ್ಬಿ ಗ್ರಾಮದಲ್ಲಿ ಕಂದಾಯ ಸಚಿವ ಆರ್. ಅಶೋಕ್ ವಾಸ್ತವ್ಯ
ಹುಬ್ಬಳ್ಳಿ: ಕಂದಾಯ ಸಚಿವ ಆರ್ ಅಶೋಕ್ ಮತ್ತೊಂದು ಗ್ರಾಮ ವಾಸ್ತವ್ಯಕ್ಕೆ ಮುಂದಾಗಿದ್ದಾರೆ. ‘ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ’ ಕಾರ್ಯಕ್ರಮ ಅಂಗವಾಗಿ ಮಾರ್ಚ್ 20ರಂದು ಕಂದಾಯ ಸಚಿವ ಅಶೋಕ್ ಹುಬ್ಬಳ್ಳಿ ತಾಲೂಕಿನ ಛಬ್ಬಿ ಗ್ರಾಮದಲ್ಲಿ ವಾಸ್ತವ್ಯ ಮಾಡಲಿದ್ದಾರೆ ಎಂದು ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. Grama Vastavya ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ: ಮೆರವಣಿಗೆ ಮುಖಾಂತರ ಕಂದಾಯ ಸಚಿವ ಅರ್. ಅಶೋಕ ಅವರಿಗೆ ಸ್ವಾಗತ ಮಾಡಿಕೊಳ್ಳಲು ಸಿದ್ದತೆ ನಡೆದಿದೆ. …
Read More »ವಿಜಯಪುರದಲ್ಲೂ ಕೋವಿಡ್ ಎರಡನೇ ಅಲೆ ಸ್ಫೋಟ; ಆತಂಕ
ವಿಜಯಪುರ: ಜಿಲ್ಲೆಯಲ್ಲಿ ಕೋವಿಡ್ -19 ಎರಡನೇ ಅಲೆ ಪ್ರಾರಂಭವಾಗಿರುವ ಲಕ್ಷಣಗಳು ಕಂಡು ಬಂದಿದೆ. ಗುರುವಾರ ಒಂದೇ ದಿನ 46 ಕೋವಿಡ್ ಪಾಸಿಟಿವ್ ಪ್ರಕರಣಗಳು ವರದಿಯಾಗಿರುವುದು ತೀವ್ರ ಆತಂಕಕ್ಕೆ ಕಾರಣವಾಗಿದೆ. ಜಿಲ್ಲೆಯಲ್ಲಿ ಇದುವರೆಗೆ 14,719 ಜನರಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, 14,403 ಜನ ಗುಣಮುಖವಾಗಿದ್ದಾರೆ. 206 ಜನ ಕೋವಿಡ್ನಿಂದ ಸಾವಿಗೀಡಾಗಿದ್ದಾರೆ. ಸದ್ಯ 110 ಸಕ್ರಿಯ ಪ್ರಕರಣಗಳು ಇವೆ. ಕಳೆದ ನಾಲ್ಕೈದು ತಿಂಗಳಿಂದ ಈಚೆಗೆ ಇಷ್ಟೊಂದು ದೊಡ್ಡ ಸಂಖ್ಯೆಯಲ್ಲಿ ಪಾಸಿಟಿವ್ ಪ್ರಕರಣಗಳು …
Read More »
Laxmi News 24×7