Breaking News

ರಾಜ್ಯ

ಶ್ರೀ ಲಕ್ಷ್ಮಣರಾವ ಜಾರಕಿಹೊಳಿ ಪದವಿ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡ ರಾಷ್ಟ್ರೀಯ ವಿಜ್ಞಾನ ನಿರ್ದೇಶಕ ಸನತ ಜಾರಕಿಹೊಳಿ.

ಗೋಕಾಕ: ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವ ಬೆಳೆಸಿಕೊಂಡು ಸಂಶೋಧಕರಾಗಿ ಜಾಗತಿಕಮಟ್ಟದಲ್ಲಿ ದೇಶದ ಕೀರ್ತಿಯನ್ನು ಹೆಚ್ಚಿಸುವಂತೆ ಇಲ್ಲಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕಿ ಕಲ್ಪನಾ ಹೇಳಿದರು. ಶನಿವಾರದಂದು ನಗರದ ಶ್ರೀ ಲಕ್ಷ್ಮಣರಾವ ಜಾರಕಿಹೊಳಿ ಪದವಿ ಮಹಾವಿದ್ಯಾಲಯದ ರಾಷ್ಟ್ರೀಯ ಯೋಜನಾ ಘಟಕದಿಂದ ಹಮ್ಮಿಕೊಂಡ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು. ಮಾನವನ ಬದುಕಿನಲ್ಲಿ ವಿಜ್ಞಾನ ಮಹತ್ವದ ಪಾತ್ರ ವಹಿಸುತ್ತಿದ್ದು, ವಿದ್ಯಾರ್ಥಿಗಳು ಸಂಶೋಧಕರಾಗಿ ದೇಶಕ್ಕೆ ಏನಾದರೂ ಕೊಡುಗೆ ನೀಡಬೇಕು ಎಂದು …

Read More »

ಲೈಂಗಿಕ ಕಿರುಕುಳ ಪ್ರಕರಣವನ್ನು ಮುಚ್ಚಿಡಲು ಅವಕಾಶ ನೀಡಲಾಗದು: ಸುಪ್ರೀಂಕೋರ್ಟ್

ನವದೆಹಲಿ: ‘ಲೈಂಗಿಕ ಕಿರುಕುಳದ ಪ್ರಕರಣಗಳನ್ನು ಯಾವುದೇ ರೀತಿಯಲ್ಲೂ ಮುಚ್ಚಿಡಲು ಸಾಧ್ಯವಾಗದು’ ಎಂದು ಜಿಲ್ಲಾ ನಿವೃತ್ತ ನ್ಯಾಯಾಧೀಶರ ವಿರುದ್ಧ ಮಧ್ಯಪ್ರದೇಶ ಹೈಕೋರ್ಟ್ ಜಾರಿಗೊಳಿಸಿರುವ ಆಂತರಿಕ ಇಲಾಖಾ ತನಿಖೆಯನ್ನು ರದ್ದುಗೊಳಿಸಲು ಕೋರಿ ಸಲ್ಲಿಸಿದ್ದ ಮನವಿಯ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಈ ಅಭಿಪ್ರಾಯವನ್ನು ನೀಡಿದೆ. ಮಧ್ಯಪ್ರದೇಶದ ನಿವೃತ್ತ ನ್ಯಾಯಾಧೀಶ ಶಂಭೂ ಸಿಂಗ್ ರಘುವಂಶಿ ಅವರು ಕಿರಿಯ ಮಹಿಳಾ ನ್ಯಾಯಾಂಗ ಅಧಿಕಾರಿಯೊಬ್ಬರಿಗೆ ವ್ಯಾಟ್ಸ್‌ಆಯಪ್‌ನಲ್ಲಿ ಅನುಚಿತವಾದ ಸಂದೇಶಗಳನ್ನು ಕಳುಹಿಸಿದ್ದರು. ಈ ಸಂಬಂಧ ಅಧಿಕಾರಿಯು ದೂರು ಸಲ್ಲಿಸಿದ್ದು, …

Read More »

ಮಾರ್ಚ್​ 8 ರಂದು ಬಿಡುಗಡೆಯಾಗಲಿದೆ 108MP ಕ್ಯಾಮೆರಾದ Realme 8 Series ಸ್ಮಾರ್ಟ್​ಫೋನ್​?

ರಿಯಲ್​ಮಿ ಸಂಸ್ಥೆ Realme 8 ಸಿರೀಸ್​​ ಹೆಸರಿನ ಸ್ಮಾರ್ಟ್​ಫೋನನ್ನು ಸಿದ್ಧಪಡಿಸುತ್ತಿದೆ ಎನ್ನಲಾಗುತ್ತಿದೆ. ಮುಂದಿನ ದಿನಗಳಲ್ಲಿ ನೂತನ ಸ್ಮಾರ್ಟ್​ಫೋನ್​ ಮಾರುಕಟ್ಟೆಗೆ ಬರುವ ಲಕ್ಷಣ ಕಾಣುತ್ತಿದೆ. ಅದಕ್ಕೆ ಅನುಗುಣವಾಗಿ ಕಂಪೆನಿಯ ಸಿಇಒ ತಮ್ಮ ಟ್ವಿಟ್ಟರ್​​ ಖಾತೆಯಲ್ಲಿ ಮುಂಬರುವ ಸ್ಮಾರ್ಟ್​ಫೋನ್​ 108 ಮೆಗಾಫಿಕ್ಸೆಲ್​ ಕ್ಯಾಮೆರಾ ಮೂಲಕ ಬರಲಿದೆ ಎಂದು ಹೇಳಿಕೊಂಡಿದ್ದಾರೆ. ಹಾಗಾಗಿ ಸ್ಮಾರ್ಟ್​ಫೋನ್​ ಪ್ರಿಯರಲ್ಲಿ ನೂತನ ಫೋನಿನ ಬಗ್ಗೆ ಕುತೂಹಲ ಹೆಚ್ಚಾಗಿದೆ. ಕಳೆದ ವರ್ಷ ಸೆಪ್ಟೆಂಬರ್​ ತಿಂಗಳಿನಲ್ಲಿ ರಿಯಲ್​ಮಿ 7 ಸಿರೀಸ್​ ಸ್ಮಾರ್ಟ್​ಫೋನ್​ ಮಾರುಕಟ್ಟೆಗೆ …

Read More »

ಜಲ್ಲಿಕಟ್ಟು ಕ್ರೀಡೆ ವೇಳೆ ಸಂಭವಿಸಿದ ದುರಂತ: ನಾಲ್ವರ ಸಾವು

ಚೆನ್ನೈ : ತಮಿಳುನಾಡಿನ ಜನಪದ ಕ್ರೀಡೆಯಾಗಿರುವ ಜಲ್ಲಿಕಟ್ಟು ಸ್ಪರ್ಧೆ ವೇಳೆ ದುರಂತ ಸಂಭವಿಸಿದ್ದು, ನಾಲ್ಕು ಮಂದಿ ಸಾವನ್ನಪ್ಪಿದ್ದಾರೆ. ಶಿವಗಂಗಾ ಜಿಲ್ಲೆಯ ಅರಲಿಪಾರಯಿ ಗ್ರಾಮದಲ್ಲಿ ಹೋರಿ ಬೆದರಿಸುವ ವೇಳೆ ಈ ಘಟನೆ ಸಂಭವಿಸಿದೆ. ಸ್ಥಳೀಯ ದೇವಸ್ಥಾನದ ಉತ್ಸವದ ಅಂಗವಾಗಿ ಜಲ್ಲಿಕಟ್ಟು ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಈ ವೇಳೆ 30 ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿದ್ದು, ಅಜಿತ್ , ಮಾರುತು , ಸೇತು ಮತ್ತು ಮಹೇಶ್ ಎನ್ನುವವರು ಮೃತಪಟ್ಟಿದ್ದಾರೆ ಎಂದು ಗುರುತಿಸಲಾಗಿದೆ . ಇನ್ನು …

Read More »

ಪೌರಕಾರ್ಮಿಕ ಆತ್ಮಹತ್ಯೆ: ₹10 ಲಕ್ಷ ಪರಿಹಾರ ನೀಡಲು ಆಗ್ರಹ

ಬೆಂಗಳೂರು: ಮಲ ಸ್ವಚ್ಛಗೊಳಿಸಲು ಪುರಸಭೆ ಅಧಿಕಾರಿಗಳು ನೀಡಿದ ಒತ್ತಡದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಮದ್ದೂರಿನ ಪೌರಕಾರ್ಮಿಕ ನಾರಾಯಣ ಅವರ ಕುಟುಂಬಕ್ಕೆ ಸರ್ಕಾರ ಪರಿಹಾರ ನೀಡಬೇಕು ಹಾಗೂ ಇದಕ್ಕೆ ಕಾರಣರಾದ ಅಧಿಕಾರಿಗಳನ್ನು ವಜಾಗೊಳಿಸುವಂತೆ ಆಗ್ರಹಿಸಿ ವಿವಿಧ ಸಂಘಟನೆಗಳ ಸದಸ್ಯರು ವಿಶ್ವೇಶ್ವರಯ್ಯ ಟವರ್‌ ಬಳಿಯ ಪೌರಾಡಳಿತ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು. ಇತ್ತೀಚೆಗಷ್ಟೇ ಮದ್ದೂರಿನ ಪೌರಕಾರ್ಮಿಕ ನಾರಾಯಣ (40) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ‘ಪುರಸಭೆ ಅಧಿಕಾರಿಗಳು ಬಲವಂತವಾಗಿ ಮಲಸ್ವಚ್ಛಗೊಳಿಸಲು ಒತ್ತಡ …

Read More »

ಆಕ್ಟಿವಾ ಸ್ಕೂಟರ್ ನಲ್ಲಿ ಬಂದು ಮರಳು ಲಾರಿ ಹಿಡಿದ ಕಮೀಷನರ್ – ಡಿಸಿಪಿ

ಮಂಗಳೂರು: ಕೇರಳಕ್ಕೆ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಲಾರಿಯನ್ನು ನಗರ ಪೊಲೀಸ್ ಕಮೀಷನರ್ ಶಶಿಕುಮಾರ್ ಮತ್ತು ಡಿಸಿಪಿ ಹರಿರಾಮ್ ಅವರು ಸ್ಕೂಟರ್ ನಲ್ಲಿ ಬಂದು ವಶಕ್ಕೆ ಪಡೆದಿದ್ದಾರೆ. ಮರಳು ಸಾಗಾಟದ ಲಾರಿಯನ್ನು ತಲಪಾಡಿ ಟೋಲ್ ಗೇಟಿನಲ್ಲಿ ಅಡ್ಡ ಹಾಕಿದ ಅಧಿಕಾರಿಗಳು, ಲಾರಿ ಚಾಲಕನನ್ನು ವಶಕ್ಕೆ ಪಡೆದರು. ಸೋಮೇಶ್ವರ ಸಮುದ್ರ ತೀರದಿಂದ ಮರಳು ಸಾಗಾಟ ನಡೆಸುತ್ತಿದ್ದ ಲಾರಿಗೆ ಎಸ್ಕಾರ್ಟ್ ನೀಡುತ್ತಿದ್ದ ವಾಹನಗಳನ್ನು ಜಪ್ತಿ ಮಾಡಿದ್ದು, ಎಸ್ಕಾರ್ಟ್ ನಡೆಸುತ್ತಿದ್ದ ಚಂದ್ರ ಎಂಬುವನನ್ನು ವಶಕ್ಕೆ ಪಡೆದಿದ್ದಾರೆ.

Read More »

ಮಹಿಳೆಯನ್ನು ಕಟ್ಟಿಹಾಕಿ ಹಾಡಹಗಲೇ ದರೋಡೆಗೆ ಯತ್ನ: ಸಿನಿಮೀಯಾ ರೀತಿಯಲ್ಲಿ ನಡೆಯಿತು ಚೇಸಿಂಗ್

ಚಿಕ್ಕಮಗಳೂರು: ಇಬ್ಬರು ದರೋಡೆಕೋರರಿಂದ ಹಾಡಹಗಲೇ ದರೋಡೆಗೆ ಯತ್ನಿಸಿದ ಘಟನೆ ಶನಿವಾರ ನಗರ ಎಐಟಿ ಸರ್ಕಲ್ ನಲ್ಲಿ ನಡೆದಿದೆ. ಎಐಟಿ ಸರ್ಕಲ್ ನಲ್ಲಿರುವ ಸಿಡಿಎ ಮಾಜಿ ಅಧ್ಯಕ್ಷ ಚಂದ್ರೇಗೌಡ ಎಂಬವರ ಮನೆ ಬಳಿ ಪಲ್ಸರ್ ಬೈಕ್ ನಲ್ಲಿ ಆಗಮಿಸಿದ ಇಬ್ಬರು ಯುವಕರು ತಲೆಗೆ ಹೆಲ್ಮೆಟ್ ಧರಿಸಿ ಕೈಯಲ್ಲಿ ಚಾಕು ಹಿಡಿದು ಮನೆಯೊಳಗೆ ಪ್ರವೇಶಿಸಿದ್ದಾರೆ. ಮನೆಯಲ್ಲಿ ಚಂದ್ರೇಗೌಡ ಪತ್ನಿ ಒಬ್ಬರೇ ಇದ್ದಿದ್ದು, ಅವರ ಕೈ ಬಾಯಿಗೆ ವೇಲ್ ನಿಂದ ಕಟ್ಟಿ ದರೋಡೆಗೆ ಯತ್ನಿಸಿದ್ದಾರೆ. …

Read More »

ಕಂಗನಾ-ಹೃತಿಕ್​ ಕೇಸ್​: ವಿಚಾರಣೆಗೆ ಹಾಜರಾದ ‘ಕ್ರಿಶ್’ ಹೀರೋ

ಮಹಾರಾಷ್ಟ್ರ: 5 ವರ್ಷ ಹಳೆಯ ಕೇಸ್​​ ಒಂದರಲ್ಲಿ ಹೃತಿಕ್ ರೋಷನ್ ಇಂದು ಮುಂಬೈ ಪೊಲೀಸ್ ಸ್ಟೇಷನ್​​ಗೆ ಬಂದು ಕ್ರೈಂ ಬ್ರಾಂಚ್ ಅಧಿಕಾರಿಗಳ ಮುಂದೆ ಹೇಳಿಕೆ ದಾಖಲಿಸಿದ್ಧಾರೆ. 2016ರಲ್ಲಿ ನಟ ಹೃತಿಕ್ ರೋಷನ್ ಮುಂಬೈ ಪೊಲೀಸ್ ಠಾಣೆಯಲ್ಲಿ ಒಂದು ದೂರು ದಾಖಲಿಸಿದ್ರು. 2013ರಿಂದ 2014ರವರೆಗೆ ನನ್ನ ಹೆಸರಲ್ಲಿ ನಕಲಿ ಇ-ಮೇಲ್ ಐಡಿ ರಚಿಸಿ, ಕಂಗನಾ ಜೊತೆ ಯಾರೋ ಮಾತನಾಡ್ತಿದ್ಧಾರೆ ಅಂತ ದೂರಿದ್ದರು. ಆದ್ರೆ ಕಂಗನಾ ಮಾತ್ರ ಹೃತಿಕ್ ನನ್ನ ಜೊತೆ ಪ್ರೀತಿಯ …

Read More »

ಅಂತಾರಾಷ್ಟ್ರೀಯ ಪ್ರಯಾಣಿಕ ವಿಮಾನಯಾನ ಸಂಚಾರ ನಿಷೇಧ

ನವದೆಹಲಿ: ಮಾರ್ಚ್ 31ರ ತನಕ ಅಂತಾರಾಷ್ಟ್ರೀಯ ಪ್ರಯಾಣಿಕ ವಿಮಾನಯಾನ ಸಂಚಾರ ನಿಷೇಧಿಸಿ ನಾಗರಿಕ ವಿಮಾನಯಾನ ನಿರ್ದೇಶನಾಲಯ(ಡಿಜಿಸಿಎ) ಆದೇಶಿಸಿದೆ. ಕಳೆದ ವರ್ಷ ಮಾರ್ಚ್ 23ರ ಬಳಿಕ ಅಂತಾರಾಷ್ಟ್ರೀಯ ವಿಮಾನಯಾನ ಸಂಚಾರವನ್ನು ಕೋವಿಡ್-19 ಹಿನ್ನೆಲೆಯಲ್ಲಿ ನಿಲ್ಲಿಸಲಾಗಿತ್ತು. ಇದನ್ನು ಈಗ ಮಾರ್ಚ್ 31ರ ತನಕ ಮುಂದುವರಿಸಿದೆ ಎಂದು ಡಿಜಿಸಿಎ ತಿಳಿಸಿದೆ. ವಿಶೇಷ ವಿಮಾನ ಹಾಗೂ ಸರಕು ಸಾಗಾಣೆಗೆ ಈ ನಿಷೇಧ ಅನ್ವಯ ಆಗಲ್ಲ. ನಿಗದಿತ ಅಂತಾರಾಷ್ಟ್ರೀಯ ಮಾರ್ಗಗಳಲ್ಲಿ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು ಎಂದು ಡಿಜಿಸಿಎ …

Read More »

ಗಮನ ಸೆಳೆದ ಬನಶಂಕರಿ ದೇವಿಯ ತರಕಾರಿ ಪೂಜೆ

ರಬಕವಿ-ಬನಹಟ್ಟಿ: ಬಾಗಲಕೋಟ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಬನಹಟ್ಟಿಯ ಹಳೆಯ ನೀರಿನ ಟ್ಯಾಂಕ್ ಹತ್ತಿರ ಇರುವ ಬನಶಂಕರಿ ದೇವಸ್ಥಾನದ ಜಾತ್ರೆಯ ನಿಮಿತ್ತವಾಗಿ ಬನಶಂಕರಿ ದೇವಿಗೆ ಶುಕ್ರವಾರ 108 ತರಕಾರಿ ಮತ್ತು ವಿವಿಧ ರೀತಿಯ ಹಣ್ಣು ಹಂಪಲುಗಳಿಂದ ಶೃಂಗಾರದ ಪೂಜೆಯನ್ನು ಕೈಗೊಳ್ಳಲಾಯಿತು. ತರಕಾರಿಗಳಿಂದ ಮಾಡಲಾದ ಶೃಂಗಾರದ ಪೂಜೆ ಭಕ್ತರ ಗಮನ ಸೆಳೆಯಿತು. ಅರ್ಚಕರಾದ ಬಸಪ್ಪ ಮಂಡಿ ಹಾಗೂ ಸಂಗಪ್ಪ ಕೊಳ್ಳಿ, ಬಸು ನುಚ್ಚಿ, ರಾಜು ಶೀಲವಂತ, ಕಾಡು ಬಬಲಾದಿ ಮಧ್ಯ ರಾತ್ರಿಯಿಂದ ತರಕಾರಿ …

Read More »