Breaking News

ರಾಜ್ಯ

ವಿಜಯಾನಂದ ಕಾಶಪ್ಪನವರ್ ದೊಡ್ಡವರು ಅವರಷ್ಟು ದೊಡ್ಡ ನಾಯಕ ನಾನಲ್ಲ : ನಿರಾಣಿ

ಕೊಪ್ಪಳ: ವಿಜಯಾನಂದ ಕಾಶಪ್ಪನವರ್ ಅವರು ದೊಡ್ಡವರು ಅವರಷ್ಟು ದೊಡ್ಡನಾಯಕ ನಾನಲ್ಲ ಎಂದು ಗಣಿ‌ ಮತ್ತು ಭೂ ವಿಜ್ಞಾನ ಇಲಾಖೆಯ ಸಚಿವ ಮುರಗೇಶ ನಿರಾಣಿ ಅವರು ಹೇಳಿದರು.‌ ಕೊಪ್ಪಳದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ಮೀಸಲಾತಿ ಹೋರಾಟಕ್ಕೆ ನಾವು ಲೀಡ್ ತೆಗೆದುಕೊಳ್ಳಲ್ಲ. ಕಾಶಪ್ಪನವರ್ ರಾಷ್ಟ್ರೀಯ ಅಧ್ಯಕ್ಷರು ಅವರೇ ಮೀಸಲಾತಿ ಹೋರಾಟಕ್ಕೆ‌ ಲೀಡ್ ತಗೆದುಕೊಳ್ಳಲಿ. ಅವರಷ್ಟು ನಾವು ದೊಡ್ಡವರಲ್ಲ. ಅವರು ಹೋರಾಟ ಏನು‌ ಮಾಡ್ತಾರೋ ದೇವರು ಕೊಟ್ಟಷ್ಟು ಅವರು ಮಾಡಲಿ. ಸರ್ಕಾರದ ಭಾಗವಾಗಿ ನಾವು …

Read More »

ವಸತಿ ಶಾಲೆಯೊಂದರಿಂದ 300ಕ್ಕೂ ಹೆಚ್ಚು ಬಾಲಕಿಯರನ್ನು ಬಂದೂಕುಧಾರಿಗಳು ಶುಕ್ರವಾರಅಪಹರಿಸಿದ್ದಾರೆ.

ಲಾಗೋಸ್‌: ಉತ್ತರ ನೈಜೀರಿಯಾದ ವಸತಿ ಶಾಲೆಯೊಂದರಿಂದ 300ಕ್ಕೂ ಹೆಚ್ಚು ಬಾಲಕಿಯರನ್ನು ಬಂದೂಕುಧಾರಿಗಳು ಶುಕ್ರವಾರಅಪಹರಿಸಿದ್ದಾರೆ. ಜಂಗೆಬೆ ಪಟ್ಟಣದಲ್ಲಿರುವ ಬಾಲಕಿಯರ ಸರ್ಕಾರಿ ಕಿರಿಯ ಮಾಧ್ಯಮಿಕ ಶಾಲೆಯ ವಿದ್ಯಾರ್ಥಿನಿಯರ ಸಾಮೂಹಿಕ ಅಪಹರಣ ಮಾಡಲಾಗಿದ್ದು, ಪೊಲೀಸ್‌ ಮತ್ತು ಮಿಲಿಟರಿ ಪಡೆ ವಿದ್ಯಾರ್ಥಿನಿಯರ ರಕ್ಷಣಾ ಕಾರ್ಯಾಚರಣೆಯನ್ನು ಆರಂಭಿಸಿದೆ. ನನ್ನ 10 ಮತ್ತು 13 ವರ್ಷದ ಮಕ್ಕಳಿಬ್ಬರನ್ನೂ ಅಪಹರಿಸಲಾಗಿದೆ. ಶಾಲೆಯ ಹತ್ತಿರದಲ್ಲಿ ದೊಡ್ಡ ಪ್ರಮಾಣದಲ್ಲಿ ಸೇನಾ ಪಡೆಯಿದ್ದರೂ, ಬಾಲಕಿಯರನ್ನು ರಕ್ಷಿಸಲು ಅವರಿಗೆ ಸಾಧ್ಯವಾಗಿಲ್ಲ ಎಂಬುದು ನಿರಾಶಾದಾಯಕವಾಗಿದೆ ಎಂದು ಪೋಷಕರೊಬ್ಬರು …

Read More »

ಅಸ್ಸಾಂನ ಡಿಎಸ್ಪಿ ಯಾಗಿ ಹುದ್ದೆ ಸ್ವೀಕರಿಸಿದ ಹಿಮಾ ದಾಸ್

2018ರಲ್ಲಿ ನಡೆದ ವಿಶ್ವ ಕಿರಿಯರ ಚಾಂಪಿಯನ್ ಶಿಪ್ ನಲ್ಲಿ 400 ಮೀಟರ್ ಓಟದಲ್ಲಿ ಹಿಮಾ ದಾಸ್ ಚಾಂಪಿಯನ್ ಆಗಿ ಹೊರಹೊಮ್ಮಿದ್ರು. ಇಡೀ ಭಾರತ ಆಗ ಆಕೆಯನ್ನ ಕೊಂಡಾಡಿತ್ತು. ಇದೀಗ ಮತ್ತೆ ಆಕೆಯನ್ನ ಕಂಡು ಭಾರತದ ಮಂದಿ ಹೆಮ್ಮೆ ಪಡುತ್ತಿದ್ದಾರೆ. ಸದ್ಯ ಅಸ್ಸಾಂನ ಡಿಎಸ್ಪಿ ಯಾಗಿ ಹುದ್ದೆ ಸ್ವೀಕರಿಸಿದ್ದು, ಸೋಷಿಯಲ್ ಮೀಡಿಯಾದಲ್ಲಿ ಸ್ಟಾರ್ ಆಗಿದ್ದಾರೆ. ಹಿಮಾದಾಸ್ ಡಿಎಸ್ಪಿಯಾಗಿರುವುದು ಎಲ್ಲರಿಗೂ ಖುಷಿ ತಂದಿದೆ. ಎಲ್ಲರ ಪ್ರೊಫೈಲ್ ನಲ್ಲೂ ಆ ಬಗ್ಗೆ ಬರೆದು, ಹಿಮಾದಾಸ್ …

Read More »

ಚಿನ್ನ-ಬೆಳ್ಳಿ ಬೆಲೆಯಲ್ಲಿ ಭಾರೀ ಇಳಿಕೆ

ಬೆಂಗಳೂರು : ಆಭರಣ ಪ್ರಿಯರಿಗೆ ಭರ್ಜರಿ ಸಿಹಿಸುದ್ದಿ ಸಿಕ್ಕಿದ್ದು, ಇಂದೂ ಸಹ ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆಯಾಗಿದ್ದು, 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ನಿನ್ನೆ 47,350 ರೂ. ಇದ್ದದ್ದು, ಇಂದು 47,170 ರೂ. ಆಗಿದೆ.   ಬೆಂಗಳೂರಿನಲ್ಲಿ 22 ಕ್ಯಾರೆಟ್ ನ 10 ಗ್ರಾಂ ಚಿನ್ನ ನಿನ್ನೆ 43,400 ರೂ. ಇದ್ದದ್ದು, ಇಂದು 43,240 ರೂ. ಆಗಿದೆ. ಬೆಳ್ಳಿ ಬೆಲೆಯಲ್ಲೂ ಇಳಿಕೆ ಕಂಡಿದ್ದು, ಇಂದು ಕೆಜಿ ಬೆಳ್ಳಿ …

Read More »

ತೈಲೋತ್ಪನ್ನಗಳ ದರಗಳು ಮತ್ತೆ ಏರಿಕೆ.. ಥೂ ಎಂದು ಸರ್ಕಾರಕ್ಕೆ ಉಗಿತಿರೋ ಜನ…

ನವದೆಹಲಿ: ತೈಲೋತ್ಪನ್ನಗಳ ದರಗಳು ಮತ್ತೆ ಏರಿಕೆ ಕಂಡಿದ್ದು ವಾಹನ ಸವಾರರಿಗೆ ಹೊರೆಯಾಗುತ್ತಿದೆ. ಮೂರು ದಿನಗಳ ಬಳಿಕ ಮತ್ತೆ ಪ್ರತೀ ಲೀಟರ್ ಪೆಟ್ರೋಲ್ ದರದಲ್ಲಿ 24 ಪೈಸೆ ಮತ್ತು ಡೀಸೆಲ್ ದರದಲ್ಲಿ 15 ಪೈಸೆ ಏರಿಕೆಯಾಗಿದೆ. ಹೌದು..ಭಾರತದಲ್ಲಿ ತೈಲೋತ್ಪನ್ನಗಳ ದರಗಳಲ್ಲಿ 24 ರಿಂದ 15 ಪೈಸೆಯಷ್ಟು ಏರಿಕೆಯಾಗಿದ್ದು, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ದರ 91.17 ರೂ. ಗೆ ಏರಿಕೆಯಾಗಿದ್ದು, ಡೀಸೆಲ್ ದರ ಕೂಡ 81.47 ರೂ. ಗೆ ಏರಿಕೆಯಾಗಿದೆ. ಇನ್ನು …

Read More »

ಸಾರಿಗೆ ಬಸ್ ಟಿಕೆಟ್ ದರ ಹೆಚ್ಚಳ ಇಲ್ಲವೇ ಇಲ್ಲ: ಡಿಸಿಎಂ ಲಕ್ಷ್ಮಣ್ ಸವದಿ

ಜಯಪುರ : ಬಿಎಟಿಸಿ ಬಸ್ ದರ ಹೆಚ್ಚಳದ ನಂತ್ರ, ಸಾರಿಗೆ ಬಸ್ ಪ್ರಯಾಣದ ದರ ಕೂಡ ಏರಿಕೆಯಾಗಲಿದೆ ಎಂದು ಹೇಳಲಾಗುತ್ತಿತ್ತು. ಆದ್ರೇ, ಸಾರಿಗೆ ಬಸ್ ಟಿಕೆಟ್ ದರ ಹೆಚ್ಚಳ ಇಲ್ಲವೇ ಇಲ್ಲ ಎಂಬುದಾಗಿ ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಸ್ಪಷ್ಟ ಪಡಿಸಿದ್ದಾರೆ. ಈ ಮೂಲಕ ಸಾರಿಗೆ ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್ ನೀಡಿದ್ದಾರೆ.   ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಈಗಾಗಲೇ ಕಳೆದ ವರ್ಷವೇ ಬಸ್ …

Read More »

ಕಾಂಗ್ರೆಸ್ ನಾಯಕರ ಹೆಸರು ಹೇಳಿ ಲೋನ್ ಕೊಡಿಸುವುದಾಗಿ ನಂಬಿಸಿ ಜನರಿಗೆ ಲಕ್ಷಾಂತರ ರೂಪಾಯಿಗಳನ್ನು ಕಾಂಗ್ರೆಸ್ ನಾಯಕಿಯೇ ವಂಚಿಸಿರುವ ಘಟನೆ ಹುಬ್ಬಳ್ಳಿಯಲ್ಲಿ ಬೆಳಕಿಗೆ ಬಂದಿದೆ.

ಹುಬ್ಬಳ್ಳಿ: ಕಾಂಗ್ರೆಸ್ ನಾಯಕರ ಹೆಸರು ಹೇಳಿ ಲೋನ್ ಕೊಡಿಸುವುದಾಗಿ ನಂಬಿಸಿ ಜನರಿಗೆ ಲಕ್ಷಾಂತರ ರೂಪಾಯಿಗಳನ್ನು ಕಾಂಗ್ರೆಸ್ ನಾಯಕಿಯೇ ವಂಚಿಸಿರುವ ಘಟನೆ ಹುಬ್ಬಳ್ಳಿಯಲ್ಲಿ ಬೆಳಕಿಗೆ ಬಂದಿದೆ. ಹುಬ್ಬಳ್ಳಿ-ಧಾರವಾಡ ಕಾಂಗ್ರೆಸ್ ಕಾರ್ಯಕರ್ತೆ ಪೂರ್ಣಿಮಾ ಸವದತ್ತಿ  ಜನರಿಗೆ ಲಕ್ಷಾಂತರ ರೂಪಾಯಿಗಳನ್ನು ದೋಚಿದ್ದಾಳೆ ಎನ್ನುವ ಆರೋಪ ಹೊರಿಸಲಾಗಿದೆ. ಈ ಕುರಿತು ಜನರು ಪೊಲೀಸ್ ದೂರು ನೀಡಿದ್ದಾರೆ. ಡಿ.ಕೆ.ಶಿವಕುಮಾರ್ ಅವರ ಕಪ್ಪುಹಣದಲ್ಲಿ ಲೋನ್ ಕೊಡಿಸುವುದಾಗಿ ಹೇಳಿ ಮಹಿಳೆ ವಂಚಿಸಿದ್ದಾಳೆ ಎನ್ನಲಾಗಿದೆ.  ವಿದ್ಯಾರ್ಥಿ ಲೋನ್, ಸೈಟ್ ಹೋಮ್, ಹೋಮ್ …

Read More »

ಸಾಲಬಾಧೆಯಿಂದ ಶಿಕ್ಷಣ ಸಂಸ್ಥೆ ಮಾಲೀಕ ಆತ್ಮಹತ್ಯೆ; ಪ್ರತಿಭಟನೆಗೆ ಬಂದ ಮತ್ತೋರ್ವ ಮಾಲೀಕನಿಂದ ಆತ್ಮಹತ್ಯೆಗೆ ಯತ್ನ

ಕಲಬುರ್ಗಿ: ಕೊರೋನಾದಿಂದಾಗಿ ಜನಸಾಮಾನ್ಯರ ಬದುಕೇ ದುರ್ಭರ ಎನ್ನುವಂತಾಗಿದೆ. ಅದರಲ್ಲಿಯೂ ಖಾಸಗಿ ಶಾಲೆಗಳ ಪರಿಸ್ಥಿತಿ ಅಧೋಗತಿಗೆ ತಳ್ಳಲ್ಪಟ್ಟಿದೆ. ಕೊರೋನಾ ಕಾರಣದಿಂದಾಗಿ ಕೆಲ ತರಗತಿಗಳ ಆರಂಭಕ್ಕೆ ಮಾತ್ರ ಅನುಮತಿ ಸಿಕ್ಕಿದೆ. ಆದರೆ ಎಲ್.ಕೆ.ಜಿ., ಯುಕೆಜಿ, ಒಂದನೇ ತರಗತಿಯಿಂದ ತರಗತಿಗಳು ಆರಂಭಗೊಂಡಿಲ್ಲ. ಹೀಗಾಗಿ ಖಾಸಗಿ ಶಿಕ್ಷಣ ಸಂಸ್ಥೆಗಳು ಆರ್ಥಿಕ ಮುಗ್ಗಟ್ಟು ಎದುರಿಸುವಂತಾಗಿದೆ. ಸಾಲಬಾಧೆ ತಾಳಲಾರದೆ ಖಾಸಗಿ ಶಿಕ್ಷಣ ಸಂಸ್ಥೆಯ ಮಾಲೀಕನೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರ್ಗಿ ಜಿಲ್ಲೆಯಲ್ಲಿ ನಡೆದಿದೆ. ಘಟನೆಗೆ ಸರ್ಕಾರದ …

Read More »

ಜಾನುವಾರು ಹತ್ಯೆ: ಸದ್ಯಕ್ಕೆ ಕಠಿಣ ಕ್ರಮ ಇಲ್ಲ

ಬೆಂಗಳೂರು: ‘ಜಾನುವಾರು ಸಾಗಣೆ ಮಾಡುವವರ ವಿರುದ್ಧ ಕರ್ನಾಟಕ ಜಾನುವಾರು ಹತ್ಯೆ ನಿಷೇಧ ಕಾಯ್ದೆ-2020 ಅನ್ನು ಸದ್ಯಕ್ಕೆ ಕಠಿಣವಾಗಿ ಅನ್ವಯ ಮಾಡುವುದಿಲ್ಲ’ ಎಂದು ಹೈಕೋರ್ಟ್‌ಗೆ ರಾಜ್ಯ ಸರ್ಕಾರ ನೀಡಿರುವ ತನ್ನ ಭರವಸೆ ಮುಂದುವರಿಸಿದೆ. ಈ ಕಾಯ್ದೆಗೆ ರಾಜ್ಯಪಾಲರು ಅಂಕಿತ ಹಾಕಿರುವುದನ್ನು ಗಮನದಲ್ಲಿ ಇಟ್ಟುಕೊಂಡು ತಿದ್ದುಪಡಿ ಅರ್ಜಿ ಸಲ್ಲಿಸಲು ಅರ್ಜಿದಾರರಿಗೆ ಮುಖ್ಯ ನ್ಯಾಯಮುರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ಸಮಯ ನೀಡಿತು. ಇದೇ ವೇಳೆ ಆಕ್ಷೇಪಣೆ ಸಲ್ಲಿಸಲು ಹೆಚ್ಚಿನ ಸಮಯ ಬೇಕು …

Read More »

ಜಲ ವಿವಾದ ಇತ್ಯರ್ಥ. 26 ರಂದು ಉನ್ನತ ಮಟ್ಟದ ಸಭೆ

ಬೆಂಗಳೂರು. ಕರ್ನಾಟಕ ರಾಜ್ಯದ ನೀರಾವರಿ ಯೋಜನೆಗಳ ಕಾಮಗಾರಿಗಳ ಪ್ರಗತಿ ಪರಿಶೀಲನೆ, ಅಂತರ ರಾಜ್ಯ ಜಲವಿವಾದಗಳು, ಸರ್ವೋಚ್ಚ ನ್ಯಾಯಾಲಯದಲ್ಲಿರುವ ದಾವೆಗಳ ಕುರಿತಂತೆ ಉನ್ನತ ಮಟ್ಟದ ಸಭೆ ನಾಳೆ (ಫೆ.26) ಬೆಳಿಗ್ಗೆ ೧೧ ಕ್ಕೆ ವಿಧಾನ ಸೌಧದ ಸಮಿತಿ ಕೊಠಡಿಯಲ್ಲಿ ನಡೆಯಲಿದೆ. ಈ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆಯನ್ನು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌ ವಹಿಸವರು. ಗೃಹ ಮತ್ತು ಕಾನೂನು, ಸಂಸದೀಯ ವ್ಯವಹಾರಗಳ ಸಚಿವ ಬಸವರಾಜ ಬೊಮ್ಮಾಯಿ  ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ. ರಾಜ್ಯದ …

Read More »