Breaking News

ರಾಜ್ಯ

ಕೋವಿಡ್ ಎಂದು ಆಸ್ಪತ್ರೆಗೆ ದಾಖಲಾದ ಒಂದೇ ದಿನಕ್ಕೆ ಕೊನೆಯುಸಿರೆಳೆದ ಮಹಿಳೆ: ಬಿಲ್ ಎಷ್ಟಾಗಿತ್ತು ಗೊತ್ತಾ..?

ಕೋವಿಡ್-19 ಸೋಂಕಿಗೆ ತುತ್ತಾದ 38 ವರ್ಷದ ಮಹಿಳೆಯೊಬ್ಬರು ಖಾಸಗಿ ಆಸ್ಪತ್ರೆಗೆ ದಾಖಲಾಗಿ ಮಾರನೇ ದಿನವೇ ಮೃತಪಟ್ಟಿದ್ದಾರೆ. ಆಕೆಯ ಅಗಲಿಕೆಯ ನೋವಿನಲ್ಲಿದ್ದ ಕುಟುಂಬಕ್ಕೆ ಮತ್ತೊಂದು ಬರೆಯ ರೂಪದಲ್ಲಿ ಮೂರು ಲಕ್ಷಗಳ ಆಸ್ಪತ್ರೆ ಬಿಲ್ ಬಂದಿದೆ. ಆರ್‌.ಟಿ. ನಗರದ ಮಹಿಳೆಗೆ ಕೆಮ್ಮು ಹಾಗೂ ಉಸಿರಾಟದ ತೊಂದರೆ ಕಾಣಿಸಿಕೊಂಡ ಬೆನ್ನಿಗೇ, ಸೋಮವಾರದಂದು ಆಕೆಯನ್ನು ಅಸ್ಟೆರ್‌ ಸಿಎಂಐ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚೇತರಿಕೆ ಕಾಣದ ಆಕೆ ಮಂಗಳವಾದ ನಿಧನರಾಗಿದ್ದಾರೆ. ಇಷ್ಟರಲ್ಲಾಗಲೇ ಮೂರು ಲಕ್ಷ ರೂ.ಗಳ ಬಿಲ್‌ …

Read More »

ಹಾಸ್ಯಪ್ರಜ್ಞೆ, ನೈತಿಕತೆ ಉಳಿಸಿಕೊಂಡು ರೋಗಿಗಳಿಗೆ ಸೇವೆ ನೀಡಿ: ಡಾ. ಎಂ.ಜಿ.ಆರ್. ವಿವಿ ಘಟಿಕೋತ್ಸವದಲ್ಲಿ ಪ್ರಧಾನಿ ಮೋದಿ ಕಿವಿ ಮಾತು

ನವದೆಹಲಿ: ಮಹಿಳೆಯರು ವಿಭಿನ್ನ ಕ್ಷೇತ್ರಗಳಲ್ಲಿ ದೇಶವನ್ನು ಮುನ್ನಡೆಸುವುದನ್ನು ನೋಡಲು ನಿಜಕ್ಕೂ ಸಂತೋಷವಾಗುತ್ತದೆ. ಇದು ನಡೆದಾಗ ದೇಶಕ್ಕೆ ಹೆಮ್ಮೆಯ, ಸಂತೋಷದ ಕ್ಷಣ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. ಅವರು ತಮಿಳು ನಾಡಿನ ಡಾ ಎಂಜಿಆರ್ ವೈದ್ಯಕೀಯ ವಿಶ್ವವಿದ್ಯಾಲಯದ 33ನೇ ಘಟಿಕೋತ್ಸವ ಸಮಾರಂಭವನ್ನುದ್ದೇಶಿಸಿ ವರ್ಚುವಲ್ ಕಾನ್ಫರೆನ್ಸ್ ಮೂಲಕ ಮಾತನಾಡಿದ ಪ್ರಧಾನ ಮಂತ್ರಿ ತಮಿಳು ನಾಡಿನ ಖ್ಯಾತ ಮಾಜಿ ಮುಖ್ಯಮಂತ್ರಿ ಎಂ.ಜಿ.ರಾಮಚಂದ್ರನ್ ಅವರನ್ನು ನೆನಪು ಮಾಡಿಕೊಂಡರು. ಇಂದು ಡಾ ರಾಮಚಂದ್ರನ್ ಅವರು ಇರುತ್ತಿದ್ದರೆ …

Read More »

ತಮಿಳುನಾಡು ಸರ್ಕಾರದ ವಿರುದ್ಧ ವಾಟಾಳ್ ನಾಗರಾಜ್ ಪ್ರತಿಭಟ

ಬೆಂಗಳೂರು, ಫೆ.26- ಕಾವೇರಿ ನದಿ ಜೋಡಣೆ ಸಂಬಂಧ ಏಕಾಏಕಿ 115ಕಿಮೀ ಉದ್ದದ ಕಾಲುವೆ ತೋಡಲು ಹೊರಟಿರುವ ತಮಿಳುನಾಡು ಸರ್ಕಾರದ ಕ್ರಮ ಖಂಡಿಸಿ ಕನ್ನಡ ಒಕ್ಕೂಟ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ನಗರದ ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟನೆ ನಡೆಸಿತು. ತಮಿಳುನಾಡಿನಲ್ಲಿ ಬಿಜೆಪಿ ಚುನಾವಣೆ ಗೆಲ್ಲಲು ಕೇಂದ್ರ ಸರ್ಕಾರ ರಾಜ್ಯದ ಕಾವೇರಿ ನದಿಯನ್ನು ಬಲಿ ಕೊಡುತ್ತಿದೆ ಎಂದು ಆರೋಪಿಸಿದ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಈ ಕ್ರಮದಿಂದ ಹಿಂದೆ …

Read More »

6 ವರ್ಷದ ಬಾಲಕಿಯ ಮೇಲೆ 60 ವರ್ಷದ ವ್ಯಕ್ತಿಯಿಂದ ಅತ್ಯಾಚಾರ ಯತ್ನ :

ಕೋಲಾರ : ಜಿಲ್ಲೆಯಲ್ಲಿ ಆರು ವರ್ಷದ ಬಾಲಕಿಯ ಮೇಲೆ 60 ವರ್ಷಯ ವೃದ್ಧರೊಬ್ಬರು ಅತ್ಯಾಚಾರಕ್ಕೆ ಯತ್ನಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ಇಂತಹ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.   ಕೋಲಾರ ತಾಲೂಕಿನ ಛತ್ರಕೋಡಿಹಳ್ಳಿ ಗ್ರಾಮದಲ್ಲಿ ನಡೆದಲ್ಲಿ 6 ವರ್ಷದ ಬಾಲಕಿಗೆ ಚಾಕಲೇಟ್ ಕೊಡಿಸುವ ನೆಪದಲ್ಲಿ ನಿನ್ನೆ 60 ವರ್ಷದ ತಿಮ್ಮಪ್ಪ ಎಂಬುವರು ಅತ್ಯಾಚಾರ ಎಸಗಲು ಯತ್ನಿಸಿದ್ದಾಗಿ ತಿಳಿದು ಬಂದಿದೆ.   ಆರೋಪಿ ತಿಮ್ಮಪ್ಪ ಅವರ ಪುತ್ರ ಕುಮಾರ್ …

Read More »

ಭಾನುವಾರದಿಂದಲೇ ಶೋ ಶುರು -ಸ್ಪರ್ಧಿಗಳ್ಯಾರು ಗೊತ್ತಾ..?

ಬೆಂಗಳೂರು: ಜನಪ್ರಿಯ ರಿಯಾಲಿಟಿ ಶೋ ‘ಬಿಗ್ ಬಾಸ್’ ಸೀಸನ್ 8 ಫೆಬ್ರವರಿ 28 ರಿಂದ ಆರಂಭವಾಗಲಿದೆ. ಅಂದು ಸಂಜೆ 6 ಗಂಟೆಗೆ ಶುರುವಾಗಲಿದ್ದು, ಪ್ರತಿದಿನ ರಾತ್ರಿ 9.30 ಕ್ಕೆ ಪ್ರಸಾರವಾಗಲಿದೆ ಎಂದು ಕಲರ್ಸ್ ಕನ್ನಡ ಕ್ಲಸ್ಟರ್ ಮುಖ್ಯಸ್ಥ ಪರಮೇಶ್ವರ ಗುಂಡ್ಕಲ್ ತಿಳಿಸಿದ್ದಾರೆ. ಈ ಬಾರಿಯೂ ಕಿಚ್ಚ ಸುದೀಪ್ ‘ಬಿಗ್ ಬಾಸ್’ ಹೋಸ್ಟ್ ಮಾಡಲಿದ್ದಾರೆ. ಕೊರೋನಾ ಕಾರಣದಿಂದಾಗಿ ಈ ಬಾರಿ ‘ಬಿಗ್ ಬಾಸ್’ ವಿಳಂಬವಾಗಿ ಆರಂಭವಾಗುತ್ತಿದೆ. 17 ಮಂದಿ ಸ್ಪರ್ಧಿಗಳು ಭಾಗವಹಿಸಲಿದ್ದು, ಸಂಪೂರ್ಣವಾಗಿ …

Read More »

ತೈಲ ಬೆಲೆ ಏರಿಕೆ ಖಂಡಿಸಿ ಇಂದು `ಭಾರತ್ ಬಂದ್’ : ಏನಿರುತ್ತೆ, ಏನಿರಲ್ಲ?

ನವದೆಹಲಿ: ಹೆಚ್ಚುತ್ತಿರುವ ಇಂಧನ ಬೆಲೆಗಳು, ಸರಕು ಮತ್ತು ಸೇವಾ ತೆರಿಗೆ, ಇ-ಬಿಲ್ ಇತ್ಯಾದಿಗಳನ್ನು ವಿರೋಧಿಸಿ ಅಖಿಲ ಭಾರತ ವ್ಯಾಪಾರಿಗಳ ಒಕ್ಕೂಟ ಶುಕ್ರವಾರ ಅಂದ್ರೆ ಇಂದು ಭಾರತ್ ಬಂದ್‌ಗೆ ಕರೆ ನೀಡಿದೆ. ಈ ನಡುವೆ ಅಖಿಲ ಭಾರತ ಸಾರಿಗೆ ಕಲ್ಯಾಣ ಸಂಘ ಕೂಡ (ಎಐಟಿಡಬ್ಲ್ಯೂಎ) ಭಾರತ್ ಕರೆಗೆ ಬೆಂಬಲ ನೀಡಿದ್ದು ಇಂದು ಚಕ್ಕಾ ಜಾಮ್ ನಡೆಸಲಿದ್ದಾರೆ. 8 ಕೋಟಿ ವರ್ತಕರನ್ನು ಪ್ರತಿನಿಧಿಸುವ 40 ಸಾವಿರ ವರ್ತಕರ ಸಂಘಟನೆಗಳು ಬಂದ್ ಬೆಂಬಲಿಸಿರುವ ಹಿನ್ನಲೆಯಲ್ಲಿ …

Read More »

ಕುತೂಹಲಕ್ಕೆ ಕಾರಣವಾಯ್ತು ಶಾಸಕ ಜಮೀರ್‌ ಮನೆಗೆ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್ ಭೇಟಿ

ಆಪಾರ ಅಭಿಮಾನಿ ಬಳಗವನ್ನು ಹೊಂದಿರುವ ಚಾಲೆಂಜಿಂಗ್ ಸ್ಟಾರ್‌ ದರ್ಶನ್‌ ಇತ್ತೀಚೆಗೆ ನವರಸ ನಾಯಕ ಜಗ್ಗೇಶ್‌ ಕೊಟ್ಟಿದ್ದಾರೆ ಎನ್ನಲಾದ ವಿವಾದಾತ್ಮಕ ಹೇಳಿಕೆಯಿಂದ ಸುದ್ದಿಯಾಗಿದ್ದರು. ಬಳಿಕ ಈ ವಿವಾದ ಈಗ ಅಂತ್ಯಗೊಂಡಿದೆ. ಪ್ರಸ್ತುತ ದರ್ಶನ್‌ ತಮ್ಮ ಮುಂಬರುವ ಚಿತ್ರ ‘ರಾಬರ್ಟ್’ ಪ್ರಮೋಟ್ ಮಾಡುವಲ್ಲಿ ಬ್ಯುಸಿ ಆಗಿದ್ದಾರೆ. ಇದರ ನಡುವೆ ಶಾಸಕ ಜಮೀರ್‌ ಅಹ್ಮದ್‌ ಮನೆಗೆ ನಟ ದರ್ಶನ್‌ ಭೇಟಿ ನೀಡಿದ್ದಾರೆ. ಯಾವ ಕಾರಣಕ್ಕೆ ಜಮೀರ್‌ ಅಹ್ಮದ್‌ ಮನೆಗೆ ಚಾಲೆಂಜಿಂಗ್‌ ಸ್ಟಾರ್‌ ಭೇಟಿ ನೀಡಿದ್ದರು …

Read More »

ಎಂ.ಎಸ್.ಧೋನಿ ಟೆಸ್ಟ್ ದಾಖಲೆ ಮುರಿದ ವಿರಾಟ್ ಕೊಹ್ಲಿ

ನವದೆಹಲಿ: ಮೂರನೇ ಟೆಸ್ಟ್ ಪಂದ್ಯದಲ್ಲಿ ಭಾರತ ಇಂಗ್ಲೆಂಡ್ ತಂಡವನ್ನು ಸೋಲಿಸಿದ ನಂತರ, ವಿರಾಟ್ ಕೊಹ್ಲಿ ಎಂ.ಎಸ್.ಧೋನಿ ಅವರನ್ನು ಹಿಂದಿಕ್ಕಿ ತವರು ನೆಲದಲ್ಲಿ ಹೆಚ್ಚು ಟೆಸ್ಟ್ ಗೆಲುವು ಸಾಧಿಸಿ ಭಾರತದ ನಾಯಕರಾದರು. ನಾಯಕನಾಗಿ 29 ಟೆಸ್ಟ್ ಪಂದ್ಯಗಳಲ್ಲಿ ಕೊಹ್ಲಿ ಈಗ 22 ಜಯಗಳಿಸಿದ್ದಾರೆ.   ಸ್ವದೇಶದಲ್ಲಿ 30 ಟೆಸ್ಟ್ ಪಂದ್ಯಗಳಲ್ಲಿ 21 ಜಯಗಳಿಸಿ ಧೋನಿ ತಮ್ಮ ವೃತ್ತಿಜೀವನವನ್ನು ಮುಗಿಸಿದರು. ಅಹಮದಾಬಾದ್‌ನಲ್ಲಿ ನಡೆದ ಮೂರನೇ ಟೆಸ್ಟ್‌ನ 2 ನೇ ದಿನದಂದು ಭಾರತ 10 ವಿಕೆಟ್‌ಗಳಿಂದ …

Read More »

ರಾಜ್ಯಾದ್ಯಂತ ಲಾರಿ ಮುಷ್ಕರ; ಡಿಸೇಲ್​ ಸೆಸ್ ದ​ರ ಕಡಿಮೆ ಮಾಡುವಂತೆ ಸರ್ಕಾರಕ್ಕೆ ಆಗ್ರಹ

ದಿನದಿಂದ ದಿನಕ್ಕೆ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗುತ್ತಿರುವುದನ್ನು ಖಂಡಿಸಿ ರಾಜ್ಯಾದ್ಯಂತ ಲಾರಿ ಮುಷ್ಕರಕ್ಕೆ ಕರೆ ನೀಡಲಾಗಿದೆ. ಈ ಕುರಿತು ಮಾತನಾಡಿದ ಕರ್ನಾಟಕ ರಾಜ್ಯ ಲಾರಿ ಮಾಲೀಕರ ಸಂಘಗಳ ಒಕ್ಕೂಟದ ಅಧ್ಯಕ್ಷ ಷಣ್ಮುಗಪ್ಪ,  ಒಂದು ಕಿಲೋಮೀಟರ್ ಗೆ ಲಾರಿ ಓಡಿಸಲು ಮಾಲೀಕರಿಗೆ 36 ರೂ. ವೆಚ್ಚವಾಗುತ್ತಿದೆ. ರಾಜ್ಯದಿಂದ 40 ಸಾವಿರ ಲಾರಿಗಳು ಬೇರೆ ರಾಜ್ಯಗಳಿಗೆ ಹೋಗುತ್ತಿವೆ. ಹೊರ ರಾಜ್ಯದಲ್ಲಿ ಡಿಸೇಲ್ ಕಡಿಮೆ ಇದೆ. ಕಡಿಮೆ ಇರುವ ರಾಜ್ಯಗಳಿಂದ ಮಾಲೀಕರು ಡಿಸೇಲ್ ಹಾಕಿಸಿಕೊಂಡು ಬರುತ್ತಿದ್ದಾರೆ. …

Read More »

ಮೂಲಭೂತ ಸೌಲಭ್ಯಗಳನ್ನು ನೀಡದ ತಹಸೀಲ್ದಾರ್ ಕ್ರಮವನ್ನು ಖಂಡಿಸಿ ಪಟ್ಟಣದ ತಹಸೀಲ್ದಾರ್ ಕಚೇರಿ ಎದುರು ಪ್ರತಿಭಟನೆ ಅಲ್ಲೇ ಅಡುಗೆ, ಅಲ್ಲೇ ಊಟ,

ಖಾನಾಪುರ: ೨೦೧೯ರ ಅಗಸ್ಟ್ ತಿಂಗಳ ಮೊದಲ ವಾರದಲ್ಲಿ ಸುರಿದ ಭಾರೀ ಮಳೆಯಿಂದ ಮಲಪ್ರಭಾ ನದಿಗೆ ಉಂಟಾದ ಪ್ರವಾಹದಲ್ಲಿ ತಮ್ಮ ಮನೆ ಮತ್ತು ಆಸ್ತಿ-ಪಾಸ್ತಿ ಕಳೆದುಕೊಂಡಿರುವ ತಾಲೂಕಿನ ಹಿರೇಹಟ್ಟಿಹೊಳಿ ಗ್ರಾಮದ ೭೦ಕ್ಕೂ ಹೆಚ್ಚು ನೆರೆ ಸಂತ್ರಸ್ತರು ಗುರುವಾರ ತಮಗೆ ನಿವೇಶನ, ತಾತ್ಕಾಲಿಕ ವಸತಿ ವ್ಯವಸ್ಥೆ ಮತ್ತು ಇತರೆ ಮೂಲಭೂತ ಸೌಲಭ್ಯಗಳನ್ನು ನೀಡದ ತಹಸೀಲ್ದಾರ್ ಕ್ರಮವನ್ನು ಖಂಡಿಸಿ ಪಟ್ಟಣದ ತಹಸೀಲ್ದಾರ್ ಕಚೇರಿ ಎದುರು ಪ್ರತಿಭಟನೆಯನ್ನು ಕೈಗೊಂಡಿದ್ದಾರೆ. ಪ್ರತಿಭಟನೆಯ ಅಂಗವಾಗಿ ಪ್ರವಾಹ ಸಂತ್ರಸ್ತರು ತಹಸೀಲ್ದಾರ್ ಕಚೇರಿಯ …

Read More »