Breaking News

ರಾಜ್ಯ

ಈಸ್ ಆಫ್ ಡೂಯಿಂಗ್ ಬ್ಯುಸಿನೆಸ್‍ನಲ್ಲಿ ಕರ್ನಾಟಕ ಬೆಸ್ಟ್ : ಶೆಟ್ಟರ್

ಬೆಂಗಳೂರು ಫೆ.23- ಕರ್ನಾಟಕ ರಾಜ್ಯ ಈಸ್ ಆಫ್ ಡೂಯಿಂಗ್ ಬ್ಯೂಸಿನೆಸ್ ಅನುಷ್ಠಾನದಲ್ಲಿ ದೇಶದ ಇತರ ರಾಜ್ಯಗಳಿಗೆ ಹೋಲಿಸಿದರೆ ಮುಂಚೂಣಿಯಲ್ಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ಹೇಳಿದರು. ಅಫೆಡವಿಟ್ ಬೇಸ್ಡ್ ಕ್ಲಿಯರೆನ್ಸ್ (ಎಬಿಸಿ) ಯೋಜನೆಯ ಅನುಷ್ಠಾನ, ಕೈಗಾರಿಕಾ ಸೌಲಭ್ಯ ಕಾಯ್ದೆಯ ತಿದ್ದುಪಡಿ ಮತ್ತು ಹೊಸ ಕೈಗಾರಿಕಾ ನೀತಿ ಘೋಷಣೆಯಿಂದಾಗಿ ರಾಜ್ಯದಲ್ಲಿ ಕೈಗಾರಿಕೆಗಳ ಸ್ಥಾಪನೆಯ ಕಾರ್ಯ ಸುಲಭವಾಗಿದೆ ಎಂದರು. ನಗರದಲ್ಲಿಂದು ಅಸೋಚಾಮ್ ಆಯೋಜಿಸಿದ್ದ ನವ ಕರ್ನಾಟಕ ಈಸ್ …

Read More »

ಬೆಂಗಳೂರಿಗರೇ ಮತ್ತೊಮ್ಮೆ ಕೊರೋನಾ ಸಂಕಷ್ಟ ಎದುರಿಸಲು ತಯಾರಾಗಿ..!?

ಬೆಂಗಳೂರು, ಜ.23- ನಗರದಲ್ಲಿ ಮತ್ತೆ ಕೊರೊನಾ ಸ್ಫೋಟ ಭೀತಿ ಎದುರಾಗಿದೆ. ಬೆಳ್ಳಂದೂರು ವಾರ್ಡ್‍ನ ಅಪಾರ್ಟ್‍ಮೆಂಟ್‍ನ 500 ಮಂದಿಯ ಕೋವಿಡ್-19 ವರದಿ ಇಂದು ಸಂಜೆ ಬರಲಿದ್ದು, ಹೆಚ್ಚು ಮಂದಿಗೆ ಪಾಸಿಟಿವ್ ಕಂಡುಬಂದರೆ ನಗರದಲ್ಲಿ ಮತ್ತೆ ಕೊರೊನಾ ಅಲರ್ಟ್ ಘೋಷಣೆಯಾಗುವ ಸಾಧ್ಯತೆ ಇದೆ. ಫೆಬ್ರವರಿ 15 ರಿಂದ 22ರ ಅವಧಿಯಲ್ಲಿ ಬೆಳ್ಳಂದೂರು ವಾರ್ಡ್, ಅಂಬಲಿಪುರದ ಎಸ್‍ಜೆಆರ್ ವಾಟರ್‍ಮಾರ್ಕ್ ಅಪಾರ್ಟ್‍ಮೆಂಟ್‍ನಲ್ಲಿ 100 ಮಂದಿಗೆ ಕೊರೊನಾ ಇರುವುದು ಪತ್ತೆಯಾದ ಹಿನ್ನೆಲೆಯಲ್ಲಿ ಇಡೀ ಪ್ರದೇಶವನ್ನು ಕಂಟೈನ್ಮೆಂಟ್ ಝೋನ್ …

Read More »

ಪಂಚಮಸಾಲಿ ಸಮುದಾಯವನ್ನು ವೋಟ್ ಬ್ಯಾಂಕ್ ಮಾಡಿಕೊಂಡಿದ್ದೀರಿ: ಮೀಸಲಾತಿ ನೀಡಿ, ಋಣ ಸಂದಾಯ ಮಾಡಿ’

ಬೆಂಗಳೂರು: ರಾಜ್ಯದಲ್ಲಿ 8 ವಿವಿಧ ಸಮುದಾಯಗಳು ವಿವಿಧ ವರ್ಗಗಳ ಅಡಿಯಲ್ಲಿ ಮೀಸಲಾತಿಗಾಗಿ ಒತ್ತಾಯಿಸುತ್ತಿವೆ, ಅದರಲ್ಲೂ ಮುಖ್ಯವಾಗಿ ಪಂಚಮಸಾಲಿ ಲಿಂಗಾಯತರು ನಡೆಸುತ್ತಿರುವ ಪ್ರತಿಭಟನೆ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಇರಿಸುಮುರುಸು ಉಂಟು ಮಾಡುತ್ತಿದೆ. ತಮ್ಮ ಸಮುದಾಯವನ್ನು ಹಿಂದುಳಿದ ವರ್ಗಗಳ ಗುಂಪಿಗೆ ಸೇರಿಸಬೇಕೆಂದು ದಶಕಗಳ ಹಿಂದಿನಿಂದಲೂ ಪಂಚಮಸಾಲಿ ಸಮುದಾಯ ಒತ್ತಾಯ ಮಾಡುತ್ತಲೇ ಇದೆ, ಆದರೆ ಸಮಯ- ಸಂದರ್ಭ, ಅವಕಾಶವಾದಿ ರಾಜಕಾರಣದಿಂದಾಗಿ ಹೋರಾಟ ಇದ್ದಕ್ಕಿದ್ದಂತೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಸಿಎಂ ಯಡಿಯೂರಪ್ಪಅವರನ್ನು ವಿವಾದಾತ್ಮಕ ಲಿಂಗಾಯತ …

Read More »

ಪೆಟ್ರೋಲ್ ಮೇಲೆ ಕೇಂದ್ರ, ರಾಜ್ಯಗಳಿಗೆ ಕಟ್ಟುವ ತೆರಿಗೆ ಲೆಕ್ಕ ಇಲ್ಲಿದೆ

ಪೆಟ್ರೋಲ್-ಡೀಸೆಲ್ ದರ ಸಿಕ್ಕಾಪಟ್ಟೆ ಜಾಸ್ತಿಯಾಗಿದೆ. ದೇಶದ ನಾನಾ ಕಡೆ ಪ್ರತಿಭಟನೆಗಳು ನಡೆಯುತ್ತಿವೆ. ಸೋಷಿಯಲ್ ಮೀಡಿಯಾಗಳಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳೆರಡೂ ಈಗಿನ ಸನ್ನಿವೇಶಕ್ಕೆ ಹೊಣೆ ಎಂಬುದು ನಿಮಗೆ ಗೊತ್ತಿದೆಯಾ? ಅದು ಹೇಗೆ ಅಂತೀರಾ? ಪೆಟ್ರೋಲ್ ಮೂಲ ಬೆಲೆ ಎಷ್ಟು, ಅದಕ್ಕೆ ಏನೆಲ್ಲಾ ತೆರಿಗೆ- ವೆಚ್ಚ ಬಿದ್ದ ಮೇಲೆ ಇಷ್ಟು ದೊಡ್ಡ ಮೊತ್ತ ಬೀಳುತ್ತದೆ ಎಂಬ ಲೆಕ್ಕಾಚಾರ ನಿಮ್ಮ ಮುಂದಿದೆ. ಓದಿ, ನೋಡಿ… ಭಾರತದಲ್ಲಿ ತೈಲ ಮಾರ್ಕೆಟಿಂಗ್ ಕಂಪೆನಿಗಳು …

Read More »

ಬಜೆಟ್ ಅಧಿವೇಶನ ಮಾರ್ಚ್ 4ರಿಂದ ವಿಧಾನಸಭೆಯಲ್ಲಿ ಆರಂಭ

ಬೆಂಗಳೂರು: ರಾಜ್ಯ ವಿಧಾನಸಭೆಯಲ್ಲಿ ಬಜೆಟ್ ಅಧಿವೇಶನವು ಮಾರ್ಚ್ 4ರಿಂದ ಆರಂಭವಾಗಲಿದ್ದು, ಇದು ಮಾ.31ರ ತನಕ ಮುಂದುವರಿಯಲಿದೆ. ಮಾರ್ಚ್ 8ರಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಬಜೆಟ್ ಮಂಡಿಸಲಿರುವರು. ಈ ಬಗ್ಗೆ ಶಾಸಕಾಂಗದ ಕಾರ್ಯದರ್ಶಿ ಎಂ.ಕೆ. ವಿಜಯಲಕ್ಷ್ಮೀ ಅವರು ಅಧಿಸೂಚನೆ ಜಾರಿ ಮಾಡಿರುವರು. ಮಾ.4 ಮತ್ತು 5ರಂದು ಒಂದು ರಾಷ್ಟ್ರ ಒಂದು ಚುನಾವಣೆ ಬಗ್ಗೆ ವಿಶೇಷ ಚರ್ಚೆಯು ನಡೆಯಲಿದೆ. ಇದು ಈ ಬಜೆಟ್ ಅಧಿವೇಶನದ ಆಕರ್ಷಣೆಯಾಗಿರಲಿದೆ.

Read More »

ನಾನೀಗ BSY ಸ್ಥಾನದಲ್ಲಿದ್ದಿದ್ರೆ ನನ್ನ ರಕ್ತ ಹೀರೋರು, ಚರ್ಮ ಸುಲಿಯೋರು: ಕುಮಾರಸ್ವಾಮಿ

ತುಮಕೂರು: ಇತ್ತೀಚೆಗೆ ರಾಜ್ಯದಲ್ಲಿ ಸಾಕಷ್ಟು ಹೋರಾಟಗಳು ನಡೆಯುತ್ತಿವೆ. ಇಂದಿನ ಪರಿಸ್ಥಿತಿ ಬಗ್ಗೆ ಮಾತನಾಡಿರುವ ಮಾಜಿ ಸಿಎಂ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ನಾನು ಸಿಎಂ ಸ್ಥಾನದಿಂದ ಇಳಿಯುತ್ತಿದ್ದಂತೆ ಪ್ರವಾಹ ಬಂತು, ಕೊರೊನಾ ಬಂತು. ಇದೆಲ್ಲವನ್ನು ನಿಭಾಯಿಸುವಲ್ಲಿ ಸರ್ಕಾರ ವಿಫಲವಾಗಿದೆ. ಆದರೂ ಈ ಸರ್ಕಾರನೇ ಗ್ರೇಟ್ ಅಂತ ಸರ್ಟಿಫಿಕೇಟ್ ಕೊಡ್ತಾರೆ ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ನಾನು ಎಷ್ಟೇ ಒಳ್ಳೆ ಕೆಲಸ ಮಾಡಿದ್ರು ಯಾರು ನನ್ನ ಪರ ನಿಂತಿಲ್ಲ. ಕೆಟ್ಟ ಕೆಲಸ ಮಾಡಿದವರನ್ನೇ, …

Read More »

ಕೇಸರಿ ಪಾಳಯವು ಇದೀಗ ಒಲಿಂಪಿಯನ್ ಪಿ.ಟಿ. ಉಷಾರನ್ನು ತನ್ನತ್ತ ಒಲಿಸಿಕೊಳ್ಳುವ ಯತ್ನದಲ್ಲಿದೆ.

ಭಾರೀ ಸಂಖ್ಯೆಯಲ್ಲಿ ಮತದಾರರನ್ನು ತನ್ನತ್ತ ಸೆಳೆಯಲು ಯತ್ನಿಸುತ್ತಿರುವ ಕೇರಳ ಬಿಜೆಪಿ ದೇವರ ನಾಡಿನಲ್ಲಿ ತನ್ನದೊಂದು ಕೋಟೆ ಕಟ್ಟಲು ನೋಡುತ್ತಿದೆ. ಮೆಟ್ರೋ ಮಾನವ ಇ. ಶ್ರೀಧರನ್ ಬಿಜೆಪಿ ಸೇರಿದ ಬಳಿಕ, ಕೇಸರಿ ಪಾಳಯವು ಇದೀಗ ಒಲಿಂಪಿಯನ್ ಪಿ.ಟಿ. ಉಷಾರನ್ನು ತನ್ನತ್ತ ಒಲಿಸಿಕೊಳ್ಳುವ ಯತ್ನದಲ್ಲಿದೆ. ಕೃಷಿ ಸುಧಾರಣಾ ಕಾನೂನುಗಳ ವಿಚಾರದಲ್ಲಿ ಕೇಂದ್ರ ಸರ್ಕಾರಕ್ಕೆ ಬೆಂಬಲ ಕೊಟ್ಟ ಪಿ.ಟಿ. ಉಷಾರನ್ನು ತನ್ನ ಪಕ್ಷಕ್ಕೆ ಸೇರಿಸಿಕೊಳ್ಳಲು ಬಿಜೆಪಿ ಪ್ರಯತ್ನದಲ್ಲಿದೆ. ಉಷಾರ ಇತ್ತೀಚಿನ ಟ್ವೀಟ್‌ಗಳೂ ಸಹ ಆಕೆ …

Read More »

ಮಹದಾಯಿ ನದಿ ನೀರು ಹಂಚಿಕೆಯ ಮೇಲುಸ್ತುವಾರಿಗೆ ಸಮಿತಿ ರಚಿಸಲು ಸುಪ್ರೀಂಕೋರ್ಟ್ ಸೂಚನೆ

ನವದೆಹಲಿ: ಮಹದಾಯಿ ನದಿ ನೀರು ಹಂಚಿಕೆಯ ಮೇಲುಸ್ತುವಾರಿಗೆ ಸಮಿತಿ ರಚಿಸಲು ಸುಪ್ರೀಂಕೋರ್ಟ್ ಸೂಚನೆ ನೀಡಿದೆ. ಕರ್ನಾಟಕ ಸರ್ಕಾರ ಮಲಪ್ರಭಾದ ನೀರಿನ ಹರಿವನ್ನು ತಿರುಗಿಸುತ್ತಿದೆ ಎಂದು ಗೋವಾ ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ನೇತೃತ್ವದ ನ್ಯಾಯಪೀಠ, ನಾಲ್ಕು ವಾರಗಳಲ್ಲಿ ಈ ಸಂಬಂಧ ವರದಿ ನೀಡುವಂತೆ ಸಮಿತಿಗೆ ಸೂಚನೆ ನೀಡಿದೆ. ಆದರೆ, ಮಹದಾಯಿ ನೀರಿನ ಹರಿವನ್ನು ತಿರುಗಿಸುತ್ತಿಲ್ಲ ಎಂದು ನ್ಯಾಯಪೀಠಕ್ಕೆ ಮನವರಿಕೆ ಮಾಡಿಕೊಡಲು ರಾಜ್ಯ ಸರ್ಕಾರ …

Read More »

ಕರ್ನಾಟಕ ಕೇಸರಿ ಪುರಸ್ಕೃತ, ಹಿರಿಯ ಪೈಲ್ವಾನ್ ಚಂದ್ರು ಕುರವಿನಕೊಪ್ಪ ನಿಧನ

ಬೆಳಗಾವಿ –  ಬೆಳಗಾವಿ ತಾಲೂಕಿನ ಕೆ.ಕೆ.ಕೊಪ್ಪ ಗ್ರಾಮದ, ಮೂರು ಸಲ ಕರ್ನಾಟಕ ಕೇಸರಿ ಪುರಸ್ಕೃತ, ಹಿರಿಯ ಪೈಲ್ವಾನ್ ಚಂದ್ರು ಕುರವಿನಕೊಪ್ಪ ನಿಧನರಾಗಿದ್ದಾರೆ. ಅವರಿಗೆ 65 ವರ್ಷ ವಯಸ್ಸಾಗಿತ್ತು. ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದರು. ಮೃತರು ಇಬ್ಬರು ಪುತ್ರ, ಓರ್ವ ಪುತ್ರಿ ಹಾಗೂ ಅಪಾರ ಬಂಧುಬಳಗ ಅಗಲಿದ್ದಾರೆ. ಪೈಲವಾನ್ ಚಂದ್ರು ಅವರ ನಿಧನಕ್ಕೆ ಗ್ರಾಮೀಣ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಸಂತಾಪ ಸೂಚಿಸಿದ್ದಾರೆ. ಸುದ್ದಿ ತಿಳಿದ ತಕ್ಷಣ ಮೃತರ …

Read More »

ಯತ್ನಾಳ್ ಕಾಂಗ್ರೆಸ್ ನ `ಬಿ’ ಟೀಂ : ನಿರಾಣಿ, ಪಾಟೀಲ್ ವಾಗ್ದಾಳಿ

ಬೆಂಗಳೂರು,ಫೆ.22- ಪಂಚಮಸಾಲಿ ಹೋರಾಟ ವನ್ನು ಕೆಲವರು ಸ್ವಾರ್ಥಕ್ಕೆ ಬಳಸಿಕೊಳ್ಳುತ್ತಿದ್ದಾರೆ. ಸಮಾಜದ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್, ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್ ವಿರುದ್ಧ ಸಚಿವರಾದ ಮುರುಗೇಶ್ ನಿರಾಣಿ, ಸಿ.ಸಿ.ಪಾಟೀಲ್, ಮುಗಿಬಿದ್ದರು. ಪಂಚಮಸಾಲಿ ಐತಿಹಾಸಿಕ ಹೋರಾಟ, ಸ್ವಾರ್ಥಕ್ಕೆ ಬಳಕೆಯಾಗುತ್ತಿದ್ದು, ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಕಾಂಗ್ರೆಸ್‍ನ ಬಿ ಟೀಮ್‍ನಂತೆ ವರ್ತಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪತ್ರಿಕಾಗೋಷ್ಟಿಯಲ್ಲಿಂದು ಮಾತನಾಡಿದ ಸಚಿವರುಗಳು, 2ಎ ಮೀಸಲಾತಿಗಾಗಿ ಆಗ್ರಹಿಸಿ ಶ್ರೀ …

Read More »