ಕಲಬುರಗಿ: ಡೀಸೆಲ್ ಬೆಲೆ ಹೆಚ್ಚಳವಾಗಿದ್ದರೂ ಬಸ್ ಪ್ರಯಾಣ ದರ ಹೆಚ್ಚಳ ಮಾಡುವ ಪ್ರಸ್ತಾಪ ಸಂಸ್ಥೆ ಮುಂದಿಲ್ಲ ಎಂದು ಸಾರಿಗೆ ಸಚಿವರಾಗಿರುವ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದರು. ನಗರದಲ್ಲಿ ದಿ.ಚಂದ್ರಶೇಖರ ಪಾಟೀಲ ರೇವೂರ ಫೌಂಡೇಶನ್ ದ ಉಚಿತ ಡಯಾಲಿಸಿಸ್ ಕೇಂದ್ರದ ವೈದ್ಯಕೀಯ ಸೇವೆಗೆ ಚಾಲನೆ ನೀಡಿ ಮಾತನಾಡಿದ ಅವರು, ಡೀಸೆಲ್ ದರ ಹೆಚ್ಚಳ ಅವಲೋಕಿಸಿದರೆ ದರ ಹೆಚ್ಚಿಸಬೇಕು. ಆದರೆ ಸಂಸ್ಥೆಯ ಬಸ್ ಗಳಲ್ಲಿ ಸಂಚರಿಸುವರು ಬಡ ಹಾಗೂ ಮಧ್ಯಮ ವರ್ಗದವರಿರುತ್ತಾರೆ. ಕೊರೊನಾದಿಂದ …
Read More »ಐಪಿಎಲ್ ಹರಾಜು 2021: 14.25 ಕೋಟಿ ರೂಗಳಿಗೆ ಆರ್ ಸಿಬಿ ಪಾಲಾದ ಗ್ಲೇನ್ ಮ್ಯಾಕ್ಸ್ ವೆಲ್, ದೆಹಲಿ ಪಾಲಾದ ಸ್ಟೀವ್ ಸ್ಮಿತ್!
ಚೆನ್ನೈ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನ 2021 ರ ಆವೃತ್ತಿಯು ಹರಾಜು ಪ್ರಕ್ರಿಯೆಯಲ್ಲಿ ಆಸ್ಟ್ರೇಲಿಯಾದ ಸ್ಫೋಟಕ ಬ್ಯಾಟ್ಸ್ ಮನ್ ಗ್ಲೇನ್ ಮ್ಯಾಕ್ಸ್ ವೆಲ್ ಬರೊಬ್ಬರಿ 14.25 ಕೋಟಿ ರೂಗಳಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪಾಲಾಗಿದ್ದಾರೆ. ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನ 2021 ರ ಆವೃತ್ತಿಯು ಈ ವರ್ಷದ ಏಪ್ರಿಲ್ನಲ್ಲಿ ಪ್ರಾರಂಭವಾಗಲಿದ್ದು, ಈ ನಿಮಿತ್ತ ಇಂದು ಆಟಗಾರರ ಹರಾಜು ಪ್ರಕ್ರಿಯೆ ಭರದಿಂದ ಸಾಗಿದೆ. ಚೆನ್ನೈನಲ್ಲಿ ಆಟಗಾರರ ಮಿನಿ …
Read More »ಡಾ.ರಾಜ್ ಪ್ರತಿಮೆ ವಿಚಾರದಲ್ಲಿ ನಾಲಿಗೆ ಹರಿಬಿಟ್ಟಿದ್ದ ಶಾಸಕ ಹ್ಯಾರಿಸ್ ಕ್ಷಮೆ ಯಾಚನೆ
ಬೆಂಗಳೂರು, ಫೆ.18- ನಟಸಾರ್ವಭೌಮ ಡಾ.ರಾಜ್ಕುಮಾರ್ ಅವರ ಪ್ರತಿಮೆ ವಿಷಯದಲ್ಲಿ ಅವಹೇಳನಕಾರಿಯಾಗಿ ಮಾತನಾಡಿ ಸಾರ್ವಜನಿಕ ಆಕ್ರೋಶಕ್ಕೆ ಗುರಿಯಾಗಿದ್ದ ಶಾಂತಿನಗರ ಶಾಸಕ ಎನ್.ಎ.ಹ್ಯಾರಿಸ್ ಕ್ಷಮೆ ಯಾಚಿಸಿದ್ದಾರೆ. ಡಾ.ರಾಜ್ಕುಮಾರ್ ಅವರ ಪ್ರತಿಮೆ ವಿಷಯದಲ್ಲಿ ಶಾಸಕ ಹ್ಯಾರಿಸ್ ಹಗುರವಾಗಿ ಮಾತನಾಡಿರುವ ವಿಡಿಯೋ ಮಾಧ್ಯಮಗಳಲ್ಲಿ, ಸಾಮಾಜಿಕ ಜಾಲತಾಣಗಳಲ್ಲಿ ವೈ ರಲ್ ಆಗಿತ್ತು. ನಂತರ ಹ್ಯಾರಿಸ್ ವಿರುದ್ಧ ಸಾರ್ವಜನಿಕ ವಲಯದಲ್ಲಿ ಈ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡ ಅವರು ಕ್ಷಮೆ ಯಾಚಿಸಿದ್ದಾರೆ. ಹ್ಯಾರಿಸ್ ಅವರು ಈ …
Read More »ಬೆಳಗಾವಿ: ರೈಲು ತಡೆಯಲು ಬಂದ ರೈತರನ್ನು ವಶಕ್ಕೆ ಪಡೆದ ಪೊಲೀಸರು
ಬೆಳಗಾವಿ: ತಿದ್ದುಪಡಿ ಮಾಡಿರುವ ಕೃಷಿ ಕಾಯ್ದೆಗಳನ್ನು ಹಿಂಪಡೆಯಲು ಆಗ್ರಹಿಸಿ ಮತ್ತು ದೆಹಲಿಯ ಗಡಿಗಳಲ್ಲಿ ಹೋರಾಟನಿರತ ರೈತರಿಗೆ ಬೆಂಬಲ ವ್ಯಕ್ತಪಡಿಸಲು ದೆಹಲಿಯ ಸಂಯುಕ್ತ ಕಿಸಾನ್ ಮೋರ್ಚಾ ಕರೆಯ ಮೇರೆಗೆ ನಗರದ ರೈಲು ನಿಲ್ದಾಣದಲ್ಲಿ ರೈಲು ತಡೆ ಚಳವಳಿ ನಡೆಸಲು ಮುಂದಾದ ರೈತ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದರು. ಸರ್ಕಾರದ ವಿರುದ್ಧ ಧಿಕ್ಕಾರ ಕೂಗುತ್ತಾ ಬಂದ ರೈತರನ್ನು ಪೊಲೀಸರು ಗೇಟ್ನಲ್ಲೇ ತಡೆದರು. ಈ ವೇಳೆ ಪೊಲೀಸರು ಮತ್ತು ಮುಖಂಡರೊಂದಿಗೆ ಮಾತಿನ ಚಕಮಕಿ ನಡೆಯಿತು. …
Read More »ಚಲಿಸುತ್ತಿರುವ ರೈಲಿನಡಿ ಸಿಲುಕಿದ ಹರಿಯಾಣದ ಮಹಿಳೆ ಮುಂದೇನಾಯ್ತು..?
ನೋಡುಗರಿಗೆ ಎದೆ ಝಲ್ ಎನಿಸುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಮಹಿಳೆಯೊಬ್ಬರು ಚಲಿಸುತ್ತಿರುವ ರೈಲಿನ ಕೆಳಗಿದ್ದು, ಉಪಾಯದಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಲಿಸುತ್ತಿರುವ ರೈಲಿನ ಕೆಳಗೆ ಮಹಿಳೆ ಇರುವುದನ್ನು ನೋಡಿ ಸುತ್ತಲಿನ ಜನ ದಂಗಾಗಿದ್ದಾರೆ. ಹರಿಯಾಣದ ರಥಕ್ನಲ್ಲಿ ಈ ಘಟನೆ ಸಂಭವಿಸಿದೆ. ರೈಲು ಸಿಗ್ನಲ್ಗಾಗಿ ಕಾಯುತ್ತಿರುವಾಗ ಮಹಿಳೆ ಟ್ರೈನ್ ಕೆಳಗಿನಿಂದ ಪಕ್ಕದ ರಸ್ತೆಗೆ ಪಾಸಾಗಲು ಪ್ರಯತ್ನಿಸಿದ್ದಾರೆ ಎನ್ನಲಾಗಿದೆ. ಈ ವೇಳೆ ರೈಲು ಕೂಡಲೇ ಚಲಿಸಿದ್ದು, ಮಹಿಳೆ ಪ್ರಾಣ ರಕ್ಷಣೆಗಾಗಿ ರೈಲು ಹಳಿಯ …
Read More »ಡೆತ್ ನೋಟಲ್ಲಿ ಅಂತ್ಯಕ್ರಿಯೆಗೆ ಸಿದ್ದರಾಮಯ್ಯ ಬರಬೇಕು ಅಂತಾ ಬರೆದಿದ್ದಾನೆ. !
ಮಂಡ್ಯ : ಡೆತ್ ನೋಟಲ್ಲಿ ಅಂತ್ಯಕ್ರಿಯೆಗೆ ಸಿದ್ದರಾಮಯ್ಯ ಬರಬೇಕು ಅಂತಾ ಬರೆದಿದ್ದಾನೆ. ನನಗೆ ಅಷ್ಟೊಂದು ಪರಿಚಯವಿಲ್ಲ. ಅದರೂ ನನ್ನ ಅಭಿಮಾನಿಯಾಗಿದ್ದಾನೆ. ಎಲ್ಲಕ್ಕಿಂತ ಮುಖ್ಯವಾಗಿ ಮನುಷ್ಯತ್ವ ಮುಖ್ಯ. ನನಗೆ ಗೊತ್ತಿಲ್ಲದೆ ದೊಡ್ಡ ಅಭಿಮಾನಿಯಾಗಿ ಡೆತ್ ನೋಟ್ ನಲ್ಲಿ ಬರೆದುಕೊಂಡಿದ್ದಾನೆ. ಅಭಿಮಾನಿ ಆಗಲಿ, ಯಾರೇ ಆಗಲಿ ಅಂತ್ಯಕ್ರಿಯೆಗೆ ಬರಬೇಕು ಅಂತಾ ಬರೆದುಕೊಂಡಿದ್ದಾನೆ. ಅಂತ್ಯಕ್ರಿಯೆಗೆ ಬಂದಿದ್ದೇನೆ ಎಂಬುದಾಗಿ ವಿಪಕ್ಷ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮಂಡ್ಯ ತಾಲೂಕಿನ ಕೋಡಿದೊಡ್ಡಿಯಲ್ಲಿ ಅಭಿಮಾನಿ ರಾಮಕೃಷ್ಣ …
Read More »ಸಿದ್ದರಾಮಯ್ಯ, ಕುಮಾರಸ್ವಾಮಿ ಕೋತಿಗಳ ರೀತಿ ಹೇಳಿಕೆ ಕೊಡುತ್ತಿದ್ದಾರೆ: ಈಶ್ವರಪ್ಪ
ಶಿವಮೊಗ್ಗ, ಫೆ.17: ರಾಮಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹಿಸುವ ವಿಚಾರವಾಗಿ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ ಕುಮಾರಸ್ವಾಮಿ ಮತ್ತ ಸಿದ್ದರಾಮಯ್ಯ ಅವರು ಕೋತಿಗಳ ರೀತಿಯಲ್ಲಿ ಹೇಳಿಕೆ ನೀಡುವ ಮೂಲಕ ಜನಮಾನಸದಿಂದ ದೂರವಾಗುತ್ತಿದ್ದಾರೆ ಎಂದು ಸಚಿವ ಕೆ.ಎಸ್ ಈಶ್ವರಪ್ಪ ಲೇವಡಿ ಮಾಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಿಂದಿನ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಗೋ ಹತ್ಯೆಯಾಗುತ್ತಿವೆ, ಗೋವುಗಳ ಕಳ್ಳತನ ನಡೆಯುತ್ತಿದೆ ಎಂದು ದೂರು ನೀಡಿದರೆ ಗೋರಕ್ಷರ ಮೇಲೆಯೇ ಕ್ರಮ ಜರುಗಿಸಿದರು. ಇದರ ಪರಿಣಾಮವೇ ಕಾಂಗ್ರೆಸ್ ಸರ್ಕಾರ …
Read More »ಮೋದಿ ಶಕ್ತಿ ಕುಗ್ಗಿಸಲು RJD, ಕಾಂಗ್ರೆಸ್ ಗೆ ವಿಜಯೇಂದ್ರ ಹಣ ನೀಡಿದ್ದಾರೆ: ಯತ್ನಾಳ್ ಬಾಂಬ್
ಬೆಂಗಳೂರು: ಬಿಜೆಪಿ ವರಿಷ್ಠರು ನೀಡಿದ್ದ ಶೋಕಾಸ್ ನೋಟಿಸ್ ಗೆ 11 ಪುಟಗಳಷ್ಟು ಉತ್ತರ ನೀಡಿದ್ದೇನೆ. ಸಿಎಂ ಬಿಎಸ್ ಯಡಿಯೂರಪ್ಪ ಕುಟುಂಬದ ಬಗ್ಗೆ ಬರೆದಿದ್ದೇನೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಜಯೇಂದ್ರ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಶಕ್ತಿ ಕುಗ್ಗಿಸಲು ವಿಜಯೇಂದ್ರ ಬಿಹಾರ ಚುನಾವಣೆಗೆ ಫಂಡಿಂಗ್ ಮಾಡಿದ್ದಾರೆ. ಅಲ್ಲಿ ಬಿಜೆಪಿ ಸೋಲಿಸಲು ಆರ್ ಜೆಡಿ, ಕಾಂಗ್ರೆಸ್ ಗೆ …
Read More »ಪೆಟ್ರೋಲ್-ಡೀಸೆಲ್ ದರದಲ್ಲಿ ಹೆಚ್ಚಳ : ಮೌನ ಮುರಿದ ಪ್ರಧಾನಿ ಮೋದಿ ಹೇಳಿದ್ದೇನು ಗೊತ್ತಾ?
ನವದೆಹಲಿ: ಪೆಟ್ರೋಲ್ 100 ರೂಪಾಯಿ ಗಡಿ ದಾಟಿದ ದಿನವೇ ಪ್ರಧಾನಿ ನರೇಂದ್ರ ಮೋದಿ ಅವರು, ಹಿಂದಿನ ಸರ್ಕಾರಗಳು ಭಾರತದ ಇಂಧನ ಆಮದು ಅವಲಂಬನೆಯನ್ನು ಕಡಿಮೆ ಮಾಡಲು ಗಮನ ಹರಿಸಿಲ್ಲ ಎಂದು ಬುಧವಾರ ಆರೋಪಿಸಿದ್ದಾರೆ. ತಮಿಳುನಾಡಿನ ತೈಲ ಮತ್ತು ಅನಿಲ ಯೋಜನೆಗಳ ಆನ್ ಲೈನ್ ಉದ್ಘಾಟನೆ ವೇಳೆಯಲ್ಲಿ ಮಾತನಾಡಿದ ಅವರು ಚಿಲ್ಲರೆ ಇಂಧನ ದರ ಏರಿಕೆ ಯನ್ನು ಉಲ್ಲೇಖಿಸದೆ, 2019-20ನೇ ಹಣಕಾಸು ವರ್ಷದಲ್ಲಿ ಭಾರತವು ತನ್ನ ತೈಲ ಅಗತ್ಯಗಳ ಪೈಕಿ ಶೇ.85ರಷ್ಟು …
Read More »ಸಿದ್ದು ಅಹಿಂದ ಆಟ ನಡೆಯಲ್ಲ : ಎಂ.ಪಿ.ರೇಣು ಕಾಚಾರ್ಯ
ಬೆಂಗಳೂರು,ಫೆ.17- ಬಿಜೆಪಿಯಲ್ಲಿ ಎಲ್ಲಾ ಸಮುದಾಯಗಳಿಗೆ ಆದ್ಯತೆ ನೀಡಿರುವುದರಿಂದ ವಿಧಾನಸಭೆಯ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯನವರ ಹಿಂದ ಅಥವಾ ಅಹಿಂದ ಯಾವುದೂ ನಡೆಯುವುದಿಲ್ಲ ಎಂದು ರಾಜ್ಯದ ಜನತೆ ಇದಕ್ಕೆ ಸೊಪ್ಪು ಹಾಕುವುದಿಲ್ಲ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣು ಕಾಚಾರ್ಯ ಟಾಂಗ್ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಮಾಜಿಕ ನ್ಯಾಯ ತತ್ವದಡಿ ಪ್ರಧಾನಿ ನರೇಂದ್ರಮೋದಿ ಹಾಗೂ ಸಿಎಂ ಯಡಿಯೂರಪ್ಪ ಅವರು ಕೆಲಸ ಮಾಡುತ್ತಿದ್ದಾರೆ. ಕಾಂಗ್ರೆಸ್ನ ಅಹಿಂದ ನಾಟಕವನ್ನು ಜನರು ನಂಬುವುದಿಲ್ಲ. ರಾಜ್ಯದ ಜನತೆ …
Read More »
Laxmi News 24×7