Breaking News

ರಾಜ್ಯ

ಸಿಂಘು ಗಡಿಯಲ್ಲಿ 72 ವರ್ಷದ ರೈತ ಹೃದಯಾಘಾತದಿಂದ ಸಾವು

ಹೊಸದಿಲ್ಲಿ, : ಮೂರು ಕೃಷಿ ಕಾಯ್ದೆಗಳ ವಿರುದ್ಧ ಸಿಂಘು ಗಡಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಪಾಲ್ಗೊಂಡ ಪಂಜಾಬ್‌ನ 72 ವರ್ಷದ ರೈತರೋರ್ವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮೃತಪಟ್ಟಿರುನ ರೈತ ಮೊಗ ಜಿಲ್ಲೆಯ ನಿವಾಸಿ ಹಂಸ ಸಿಂಗ್ ಎಂದು ಹರ್ಯಾಣದ ಸೋನಿಪತ್‌ನ ಕುಂಡ್ಲಿ ಪೊಲೀಸ್ ಠಾಣೆಯಲ್ಲಿ ನಿಯೋಜಿಸಲಾಗಿರುವ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಹಂಸ ಸಿಂಗ್ ಗುರುವಾರ ರಾತ್ರಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಅವರ ಮರಣೋತ್ತರ ಪರೀಕ್ಷೆ ಶುಕ್ರವಾರ ಪೂರ್ಣಗೊಂಡಿದೆ ಎಂದು ಅವರು ತಿಳಿಸಿದ್ದಾರೆ.

Read More »

ರೈತರು, ಮನೆ ನಿರ್ಮಿಸುವವರಿಗೆ ಸಿಎಂ ಯಡಿಯೂರಪ್ಪ ಗುಡ್ ನ್ಯೂಸ್

ಶಿವಮೊಗ್ಗ: ಈ ಹಣಕಾಸು ಸಾಲಿನಲ್ಲಿ ಅನುಮೋದನೆಗೊಂಡಿರುವ ಎಲ್ಲಾ ಕಾಮಗಾರಿಗಳು ಮಾರ್ಚ್ ಒಳಗಾಗಿ ಪೂರ್ಣಗೊಳಿಸಬೇಕು. ಗುಣಮಟ್ಟದಲ್ಲಿ ಯಾವುದೇ ರಾಜಿ ಮಾಡದೆ ಕಾಮಗಾರಿಗಳನ್ನು ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸೂಚಿಸಿದ್ದಾರೆ. ಶಿಕಾರಿಪುರದಲ್ಲಿ ಕೆಡಿಪಿ ಸಭೆಯಲ್ಲಿ ಮಾತನಾಡಿದ ಅವರು, ತೋಟಗಾರಿಕಾ ಬೆಳೆಗಳನ್ನು ಹೆಚ್ಚು ಬೆಳೆಯಲು ರೈತರಿಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕು. ಪ್ರತಿ ವರ್ಷ ತೋಟಗಾರಿಕಾ ಬೆಳೆಗಳ ಕ್ಷೇತ್ರ ಹೆಚ್ಚಳವಾಗಬೇಕು. ರೈತರು ಮಿಶ್ರ ಬೆಳೆ ಬೆಳೆಯುವುದರಿಂದ ಹೆಚ್ಚಿನ ಆರ್ಥಿಕ ಲಾಭ ಪಡೆಯಲು ಸಾಧ್ಯವಿದೆ …

Read More »

2021ʼರ ಸ್ವಚ್ಛ ಭಾರತ ಅಭಿಯಾನದಡಿ ʼಶೌಚಾಲಯಕ್ಕೆ ಆನ್ಲೈನ್ʼನಲ್ಲಿ ಅರ್ಜಿ ಸಲ್ಲಿಸುವುದು ಹೇಗೆ ಗೊತ್ತಾ?

ಭಾರತ ಸರ್ಕಾರವು ಸ್ವಚ್ಛ ಭಾರತ್ ಅಭಿಯಾನದ ಅಡಿಯಲ್ಲಿ ಹಳ್ಳಿಗಳು ಮತ್ತು ನಗರಗಳಲ್ಲಿ ಶೌಚಾಲಯಗಳನ್ನ ನಿರ್ಮಿಸುತ್ತಿದೆ. ಈ ಯೋಜನೆಯಡಿ ಹೆಚ್ಚಿನ ಮನೆಗಳಲ್ಲಿ ಶೌಚಾಲಯಗಳನ್ನ ನಿರ್ಮಿಸಲಾಗಿದೆ. ಆದ್ರೆ, ನಿಮ್ಮ ಮನೆ ತಪ್ಪಿದಲ್ಲಿ ನೀವು ಆನ್‌ಲೈನ್‌ನಲ್ಲಿ ನೋಂದಾಯಿಸಿಕೊಳ್ಳಬಹುದು. ಶೌಚಾಲಯಗಳನ್ನ ನಿರ್ಮಿಸಲು ಸಾಧ್ಯವಾಗದ ಅನೇಕ ಬಡ ಕುಟುಂಬಗಳು ದೇಶದಲ್ಲಿದ್ದು, ಸರ್ಕಾರವು ಆ ಕುಟುಂಬಗಳಿಗೆ 12000 ರೂ. ಮೊತ್ತವನ್ನ ಫಲಾನುಭವಿಯ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗಿದೆ. ಯಾರು ಈ ಯೋಜನೆಯ ಫಲಾನುಭವ ಪಡೆಯಬೋದು..! * ಅರ್ಜಿದಾರನು ಭಾರತದ …

Read More »

ಡಿಜಿಟಲ್‌ ರೂಪದಲ್ಲಿ ವಿಮಾ ದಾಖಲೆ: ಐಆರ್‌ಡಿಎಐ

ನವದೆಹಲಿ: ವಿಮಾ ಪಾಲಿಸಿ ಹೊಂದಿರುವವರಿಗೆ ಪಾಲಿಸಿಯ ದಾಖಲೆಗಳನ್ನು ಡಿಜಿಟಲ್ ಸ್ವರೂಪದಲ್ಲಿ ನೀಡಬೇಕು ಎಂದು ವಿಮಾ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರವು (ಐಆರ್‌ಡಿಎಐ) ಕಂಪನಿಗಳಿಗೆ ಸೂಚನೆ ನೀಡಿದೆ. ಈ ದಾಖಲೆ ಬಳಸಿಕೊಳ್ಳುವುದು ಹೇಗೆ ಎಂಬುದನ್ನು ಪಾಲಿಸಿದಾರರಿಗೆ ತಿಳಿಸಿಕೊಡಬೇಕು ಎಂದು ಕೂಡ ಅದು ಸೂಚಿಸಿದೆ. ಈ ಕ್ರಮಗಳನ್ನು ಕೈಗೊಳ್ಳುವುದರಿಂದ ವಿಮಾ ಕ್ಲೇಮ್‌ ಪ್ರಕ್ರಿಯೆಗೆ ವೇಗ ಸಿಗುತ್ತದೆ ಎಂದು ಪ್ರಾಧಿಕಾರ ಹೇಳಿದೆ. ಪಾಲಿಸಿ ದಾಖಲೆಗಳನ್ನು ಡಿಜಿಟಲ್ ಸ್ವರೂಪದಲ್ಲಿ ನೀಡುವುದರಿಂದ ವೆಚ್ಚ ಕಡಿಮೆ ಆಗುತ್ತದೆ, ದಾಖಲೆಗಳು …

Read More »

ಒಂದು ವರ್ಷದೊಳಗೆ ರಾಜ್ಯದ ಎಲ್ಲಾ ಬಂಜಾರ ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿಸಲಾಗುವುದು: BSY

ದಾವಣಗೆರೆ: ಮುಂದಿನ ಒಂದು ವರ್ಷದೊಳಗೆ ರಾಜ್ಯದ ಎಲ್ಲಾ ಬಂಜಾರ ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡಲು ಕಂದಾಯ ಅಧಿಕಾರಿಗಳಿಗೆ ಆದೇಶಿಸಿದ್ದೇನೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. ನ್ಯಾಮತಿ ತಾಲೂಕಿನ ಸೂರಗೊಂಡನಕೊಪ್ಪದಲ್ಲಿ ಶ್ರೀ ಸಂತ ಸೇವಾಲಾಲ್ ಮಹಾರಾಜರ 282ನೇ ಜಯಂತ್ಯೋತ್ಸವ ಉದ್ಘಾಟಿಸಿ, ಮಾತನಾಡಿದ ಅವರು, ಮುಂದಿನ ಸೇವಾಲಾಲ್ ಜಯಂತಿ ವೇಳೆಗೆ ಸರ್ವೆ ಮುಗಿಸಿ ಕಂದಾಯ ಗ್ರಾಮಗಳನ್ನಾಗಿ ಮಾಡುವ ಕಾರ್ಯ ಪೂರ್ಣಗೊಳಿಸಲು ಸೂಚಿಸಿದ್ದೇನೆ ಎಂದರು. ಸೂರಗೊಂಡನಕೊಪ್ಪಕ್ಕೆ ಮಂಜೂರಾಗಿರುವ ರೇಲ್ವೆ ಸ್ಟೇಷನ್ ಗೆ ಸಂತ …

Read More »

ಲೋಕಸಭಾ ಉಪಚುನಾವಣೆಯಲ್ಲಿ ಮತ್ತೇ ಅರಳಲಿದೆ ಕಮಲ : ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಗೋಕಾಕ : ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ ಬೆಂಬಲಿತ ಅಭ್ಯರ್ಥಿಗಳು ಭರ್ಜರಿ ಜಯ ಸಾಧಿಸಿದ್ದು, ಎಲ್ಲ 33 ಗ್ರಾಮ ಪಂಚಾಯತಿಗಳಲ್ಲಿ ಬಿಜೆಪಿ ಅಧಿಕಾರ ಚುಕ್ಕಾಣಿ ಹಿಡಿದಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ರವಿವಾರದಂದು ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಜರುಗಿದ ನೂತನ ಅಧ್ಯಕ್ಷ-ಉಪಾಧ್ಯಕ್ಷರನ್ನು ಅಭಿನಂದಿಸಿ ಮಾತನಾಡಿದ ಅವರು, ಇದರಿಂದ ತಳಮಟ್ಟದಿಂದ ಪಕ್ಷ ಸಂಘಟಿಸಲು ಗ್ರಾಮ ಪಂಚಾಯತಿ ಚುನಾವಣೆ ಉತ್ತಮ ಅಡಿಪಾಯ ಎಂದು …

Read More »

ಗೋಕಾಕ : ಇಬ್ಬರು ಮಕ್ಕಳೊಂದಿಗೆ ಘಟಪ್ರಭಾ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ !

ಗೋಕಾಕ : ಮನೆಯಲ್ಲಿ ಜಗಳವಾಡಿ ಇಬ್ಬರು ಮಕ್ಕಳೊಂದಿಗೆ ಕಾಣೆಯಾಗಿದ್ದ ಮಹಿಳೆ ಘಟಪ್ರಭಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ. ಗೋಕಾಕ ತಾಲ್ಲೂಕಿನ ಅರಭಾಂವಿಯ ಸಾವಿತ್ರಿ ರಾಜು ಬನಾಜ(30), ಪೂಜಾ (4) ಲಕ್ಷ್ಮಿ (2), ಮೃತರು. ಮನೆಯಲ್ಲಿ ಜಗಳವಾಡಿ ತಮ್ಮಇಬ್ಬರು ಮಕ್ಕಳನ್ನು ಕರೆದುಕೊಂಡು ಆಸ್ಪತ್ರೆಗೆ ಹೋಗಿ ಬರುವುದಾಗಿ ಹೇಳಿ, ಕಾಣೆಯಾಗಿದ್ದರು. ಈ ಬಗ್ಗೆ ಗಂಡನ ಮನೆಯವರು ಪೊಲೀಸ್ ಠಾಣೆಗೆ ಶುಕ್ರವಾರ ದೂರು ನೀಡಿದ್ದರು. ಆದ್ರೆ ಭಾನುವಾರ ಬೆಳಿಗ್ಗೆ ಗೋಕಾಕ …

Read More »

ಗೋಕಾಕ: ಇಲ್ಲಿಯ ರೋಟರಿ ರಕ್ತ ಭಂಡಾರದಲ್ಲಿ ಜಿಎನ್‍ಎಸ್ ಶಾಲೆಯ 1998-99 ಸಾಲಿನ ಹಳೆಯ ವಿದ್ಯಾರ್ಥಿಗಳ ಸಂಘದ ಆಶ್ರಯದಲ್ಲಿ ಹಮ್ಮಿಕೊಂಡ ಬೃಹತ್ ರಕ್ತದಾನ ಶಿಬಿರಲ್ಲಿ ಪಾಲ್ಗೊಂಡ ಹಳೆಯ ವಿದ್ಯಾರ್ಥಿಗಳು.

ಗೋಕಾಕ : ಎಲ್ಲ ದಾನಗಳಲ್ಲಿ ಶ್ರೇಷ್ಠವಾದ ರಕ್ತದಾನ ಮಾಡುವ ಮೂಲಕ ಜೀವ ಉಳಿಸುವಂತೆ ಪುಣ್ಯ ಕಾರ್ಯದಲ್ಲಿ ಪಾಲ್ಗೊಂಡು ಅರ್ಥಪೂರ್ಣವಾದ ಸಾಮಾಜಿಕ ಕಳಿಕಳಿಯ ಮಾರ್ಗದಲ್ಲಿ ಜೀವನ ಸಾಗಿಸೋಣವೆಂದು ಇಲ್ಲಿಯ ಜಿಎನ್‍ಎಸ್ ಶಾಲೆಯ 1998-99 ಸಾಲಿನ ಹಳೆಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಅಶೋಕ ಕೌಜಲಗಿ ಹೇಳಿದರು. ರವಿವಾರದಂದು ಇಲ್ಲಿಯ ರೋಟರಿ ರಕ್ತ ಭಂಡಾರದಲ್ಲಿ ಜಿಎನ್‍ಎಸ್ ಶಾಲೆಯ 1998-99 ಸಾಲಿನ ಹಳೆಯ ವಿದ್ಯಾರ್ಥಿಗಳ ಸಂಘದ ಆಶ್ರಯದಲ್ಲಿ ರವಿವಾರ ದಿ. 21 ರಂದು ಇಲ್ಲಿಯ ಶುಭ …

Read More »

ಆರೋಗ್ಯ ಇಲಾಖೆಯಿಂದ ನೂತನವಾಗಿ ಪ್ರಾರಂಭಿಸಲಾದ ನಗರ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಚಿವ ರಮೇಶ ಜಾರಕಿಹೊಳಿ

ಗೋಕಾಕ: ಜನತೆ ಆರೋಗ್ಯ ರಕ್ಷಣೆಗೆ ಹೆಚ್ಚಿನ ಮಹತ್ವ ನೀಡಿ, ಎಲ್ಲ ರೀತಿಯ ಸೌಲಭ್ಯಗಳೊಂದಿಗೆ ವಿಶೇಷ ಆಧುನಿಕ ತಂತ್ರಜ್ಞಾನ ಸಹಕಾರದೊಂದಿಗೆ ಸರ್ಕಾರ ಕಾರ್ಯ ನಿರ್ವಹಿಸುತ್ತಿದೆ ಎಂದು ಜಲಸಂಪನ್ಮೂಲ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಹೇಳಿದರು.   ರವಿವಾರದಂದು ನಗರದ ಗುರುವಾರ ಪೇಠೆಯಲ್ಲಿ ಆರೋಗ್ಯ ಇಲಾಖೆಯಿಂದ ನೂತನವಾಗಿ ಪ್ರಾರಂಭಿಸಲಾದ ನಗರ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸರ್ಕಾರದ ಈ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ಆರೋಗ್ಯವಂತರಾಗಿರಿರೆಂದು ಕರೆ ನೀಡಿದರು. …

Read More »

ಹೈಕಮಾಂಡ್ ನೋಟೀಸ್ ಗೂ ಹೆದರದಯತ್ನಾಳ್BSY ವಿರುದ್ಧ ಮತ್ತೆ ಕಿಡಿ

ತುಮಕೂರು: ಹೈಕಮಾಂಡ್ ನೋಟೀಸ್ ಗೂ ಹೆದರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಕಿಡಿಕಾರಿದ್ದಾರೆ. ಯಡಿಯೂರಪ್ಪನವರಿಗೆ ಮೀಸಲಾತಿ ನೀಡಲು ಇಷ್ಟವಿಲ್ಲ. ಇಷ್ಟವಿದ್ದಿದ್ದರೆ ಹೀಗೆ ವಿಳಂಬ ಮಾಡುತ್ತಿರಲಿಲ್ಲ ಎಂದು ವಾಗ್ದಾಳಿ ನಡೆಸಿದರು. ತುಮಕೂರಿನಲ್ಲಿ ಮಾತನಾಡಿದ ಯತ್ನಾಳ್, ಇವತ್ತಿನವರೆಗೂ ಆಯೋಗಕ್ಕೆ ನೀಡಿರುವ ಪತ್ರ ನೋಟೀಫಿಕೇಷನ್ ಆಗಿಲ್ಲ. ಸಿಎಂ ಅವರಿಗೆ ಮನಸ್ಸಿದ್ದರೆ ಪಂಚಮಸಾಲಿ, ವೀರಶೈವ ಲಿಂಗಾಯತ ಮೀಸಲಾತಿ ನೀಡಬಹುದಿತ್ತು. ಈ ಅಧಿಕಾರ ಸಿಎಂ ಕೈಲೇ ಇರುತ್ತದೆ ಎಂಬುದು ಎಲ್ಲರಿಗೂ …

Read More »