Breaking News

ರಾಜ್ಯ

ಒಂದು ಟ್ವೀಟ್ ಮತ್ತು ಟೂಲ್​ಕಿಟ್​ನಿಂದ ಹಲವು ಸಂಗತಿಗಳು ಬಯಲಾಗಲಿವೆ: ವಿದೇಶಾಂಗ ಸಚಿವ

ದೆಹಲಿ: ದೇಶದಲ್ಲಿ ನಡೆಯುತ್ತಿರುವ ರೈತ ಹೋರಾಟದ ಬಗ್ಗೆ ಅಂತಾರಾಷ್ಟ್ರೀಯ ಸೆಲೆಬ್ರಿಟಿಗಳು ಮಾಡಿದ್ದ ಟ್ವೀಟ್​ಗೆ, ಭಾರತೀಯ ವಿದೇಶಾಂಗ ಸಚಿವಾಲಯ ಪ್ರತಿಕ್ರಿಯಿಸಿದ್ದು ಸರಿ ಎಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ಸಮರ್ಥನೆ ಮಾಡಿಕೊಂಡಿದ್ದಾರೆ. ಸ್ವೀಡನ್​ನ ಯುವ ಪರಿಸರ ಹೋರಾಟಗಾರ್ತಿ ಗ್ರೆಟಾ ಥನ್​ಬರ್ಗ್ ಡಿಲೀಟ್ ಮಾಡಿರುವ ಟ್ವೀಟ್​ನಲ್ಲಿ ಟೂಲ್​ಕಿಟ್ ಡಾಕ್ಯುಮೆಂಟ್ ಹಂಚಿಕೊಂಡಿದ್ದಳು. ಅದಾದ ಬಳಿಕ ದೆಹಲಿ ಪೊಲೀಸರು, ಟೂಲ್​ಕಿಟ್​ಗೆ ಖಲಿಸ್ತಾನಿ ಸಂಬಂಧ ಇರುವುದನ್ನು ಪತ್ತೆಮಾಡಿದ್ದರು. ಈ ಘಟನೆಗಳು ನಡೆದು ಎರಡು ದಿನಗಳ ಬಳಿಕ (ಫೆ.6) …

Read More »

ಮತ್ತೆ ಕುಸಿತ ಕಂಡ ಬಂಗಾರದ ಬೆಲೆ

ನವದೆಹಲಿ : ಚಿನ್ನ ಖರೀದಿಸುವ ಬಗ್ಗೆ ಯೋಚಿಸುತ್ತಿದ್ದೀರಾ? ಹಾಗಾದರೆ ನಿಮಗೊಂದು ಶುಭ ಸುದ್ದಿ. ಇಲ್ಲಿಯವರೆಗೆ ಗಗನಕ್ಕೇರುತ್ತಿದ್ದ ಚಿನ್ನದ ಬೆಲೆ ಈಗ ಕ್ರಮೇಣವಾಗಿ ಕುಸಿಯುತ್ತಿದೆ. ಇದರಿಂದಾಗಿ ಬಂಗಾರ ಕೊಳ್ಳಬೇಕೆಂದುಕೊಂಡಿದ್ದ ಆಭರಣ ಪ್ರಿಯರಿಗೆ ಇದೊಂದು ಸಮಾಧಾನಕರ ಸಂಗತಿ. ಈ ಹಿಂದೆ ಗರಿಷ್ಠ 56,000 ರೂಗಳನ್ನು ತಲುಪಿದ್ದು, ಪ್ರಸ್ತುತ 10 ಗ್ರಾಂ ಬೆಲೆ ಈಗ 48,000 ರೂ.ಗೆ ಕುಸಿದಿದೆ. 24 ಕ್ಯಾರೆಟ್ ನ 10 ಗ್ರಾಂ ಚಿನ್ನದ ಬೆಲೆ 48,000 ರೂ. 22 ಕ್ಯಾರೆಟ್ …

Read More »

ಮೇಘಾಲಯ ಸರ್ಕಾರ ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಕಡಿತಗೊಳಿಸಿದೆ.

ಶಿಲ್ಲಾಂಗ್: ದೇಶದಲ್ಲಿ ತೈಲೋತ್ಪನ್ನಗಳ ದರಗಳು ಏರಿಕೆಯಾಗಿದ್ದು, ದೇಶಾದ್ಯಂತ ಜನರು ಈ ಬಗ್ಗೆ ಕಿಡಿ ಕಾರುತ್ತಿದ್ದಾರೆ. ಈ ನಡುವೆ ಮೇಘಾಲಯ ಸರ್ಕಾರ ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಕಡಿತಗೊಳಿಸಿದೆ. ಹೌದು ಈ ಬಗ್ಗೆ ಮೇಘಾಲಯ ಮುಖ್ಯಮಂತ್ರಿ ಕನ್ರಾಡ್ ಸಂಗ್ಮಾ ಮಾಹಿತಿ ನೀಡಿದ್ದು, ರಾಜ್ಯದ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಯನ್ನು ಸೋಮವಾರ ಮಧ್ಯರಾತ್ರಿಯಿಂದ 2 ರೂ.ಗೆ ಇಳಿಸಲು ಮೇಘಾಲಯ ಸರ್ಕಾರ ನಿರ್ಧರಿಸಿದೆ ಎಂದು ಹೇಳಿದ್ದಾರೆ. ‘ಮೇಘಾಲಯದಲ್ಲಿ ಇತ್ತೀಚೆಗೆ ಪೆಟ್ರೋಲ್ ಮತ್ತು ಡೀಸೆಲ್ …

Read More »

ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ ತಾಯಿ ಹಾಗೂ ಮಗಳು ಸ್ಥಳದಲ್ಲೇ ಮೃತ

ಚಿಕ್ಕೋಡಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರವಾಗಿ ಸಂಭವಿಸಿದ ಅಪಘಾತದಲ್ಲಿ ತಾಯಿ ಹಾಗೂ ಮಗಳು ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನು ಮೂವರಿಗೆ ಗಂಭೀರ ಗಾಯಗಳಾಗಿವೆ. ಲತಾ ರಾಜೇಂದ್ರ ಪಾಟೀಲ (38) ಹಾಗೂ ಆಕೆಯ ಪುತ್ರಿ ಅನಿಷಾ ರಾಜೇಂದ್ರ ಪಾಟೀಲ (16) ಮೃತ ದುರ್ದೈವಿಗಳು. ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 4ರ ಸೌಂದಲಗಾ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ. ಐದು ಜನರಿದ್ದ ಕಾರು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. …

Read More »

ಒಬ್ಬ ಅಪರಾಧಿಗೆ ಗಲ್ಲುಶಿಕ್ಷೆಯನ್ನು ಪ್ರಕಟಿಸಿದ ನಂತರ ಪೆನ್ ನಿಬ್ಬನ್ನು ಮುರಿಯುವುದೇಕೆ ಗೊತ್ತೇ

ನ್ಯಾಯಾಂಗದಲ್ಲಿ ನಮಗೆ ಗೊತ್ತಿರದ ಹಲವಾರು ವಿಷಯಗಳು ಅಡಕವಾಗಿರುತ್ತವೆ. ಅದರಲ್ಲಿ ಒಂದು ಈ ಪದ್ಧತಿಯು ಆಗಿದೆ ಕೋರ್ಟನಲ್ಲಿ ಅಪರಾಧಿಯ ವಿರುದ್ಧ ವಾದ ವಿವಾದ ಇದ್ದಮೇಲೆ ನ್ಯಾಯಾಧೀಶರು ಶಿಕ್ಷೆಯ ತೀರ್ಪನ್ನು ಪಟ್ಟಿ ಮಾಡುತ್ತಾರೆ. ಆದರೆ ಆ ಶಿಕ್ಷೆಯ ಗಲ್ಲುಶಿಕ್ಷೆ ಆಗಿದ್ದರೆ ಅಪರಾಧಿಯನ್ನು ಗಲ್ಲಿಗೇರಿಸಲು ಹೇಳಿದ ನ್ಯಾಯಾಧೀಶರು ವ್ಯಕ್ತಿಯನ್ನು ಗಲ್ಲಿಗೇರಿಸಲು ಹೇಳುವ ನ್ಯಾಯಾಧೀಶರು ವ್ಯಕ್ತಿಯ ಪೇಪರ್ ಗಳ ಮೇಲೆ ತಮ್ಮ ಸಹಿಯನ್ನು ಮಾಡಿ ಪೆನ್ನಿನ ನಿಬ್ಬನ್ನು ಮುರಿಯುತ್ತಾರೆ. ಅದು ಯಾಕೆ ಗೊತ್ತಾ? ಅದನ್ನ ಈ …

Read More »

ಜೀವನಾಂಶ ಕುರಿತಾಗಿ ಹೈಕೋರ್ಟ್ ಮಹತ್ವದ ಆದೇಶ: ವಿದ್ಯಾವಂತ ಪತ್ನಿಯೂ ಜೀವನಾಂಶಕ್ಕೆ ಅರ್ಹಳು

ಬೆಂಗಳೂರು: ಪತ್ನಿ ವಿದ್ಯಾವಂತಳಾಗಿದ್ದಾಳೆ ಎನ್ನುವ ಕಾರಣಕ್ಕೆ ಜೀವನಾಂಶ ನಿರಾಕರಿಸುವಂತಿಲ್ಲ. ವಿದ್ಯಾರ್ಹತೆ ಹೊಂದಿದವರಿಗೆ ಉದ್ಯೋಗ ಸಿಗುತ್ತದೆ ಎಂಬ ಖಾತ್ರಿಯಿಲ್ಲ. ಹಾಗಾಗಿ ವಿದ್ಯಾವಂತ ಪತ್ನಿಯೂ ಜೀವನಾಂಶಕ್ಕೆ ಅರ್ಹರಾಗಿರುತ್ತಾರೆ. ಅವರು ವಿದ್ಯಾರ್ಹತೆ ಹೊಂದಿದ ಮಾತ್ರಕ್ಕೆ ಜೀವನ ನಿರಾಕರಿಸುವಂತಿಲ್ಲ ಎಂದು ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಕೌಟುಂಬಿಕ ಪ್ರಕರಣವೊಂದರಲ್ಲಿ ಮೈಸೂರು ಕೌಟುಂಬಿಕ ನ್ಯಾಯಾಲಯ, ಪತಿ-ಪತ್ನಿಯ ವಿವಾಹವನ್ನು ಅನೂರ್ಜಿತಗೊಳಿಸಿದ್ದು, ಪತ್ನಿಗೆ ಪ್ರತಿ ತಿಂಗಳು ಮೂರು ಸಾವಿರ ರೂಪಾಯಿ ಜೀವನಾಂಶ ನೀಡುವಂತೆ ಸೂಚಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಪತಿ …

Read More »

ಫೇಸ್​ಬುಕ್​ ಸುಂದರಿಯಗಾಗಿ ಪತ್ನಿಯ ಚಿನ್ನವನ್ನೂ ಮಾರಿ ₹11 ಲಕ್ಷ ಪಂಗನಾಮ ಹಾಕಿಸಿಕೊಂಡ ಪತಿಮಹಾಶಯ!

ಮುಂಬೈ: ಸಾಮಾಜಿಕ ಜಾಲತಾಣದ ವಂಚನೆ ಕುರಿತಂತೆ ನಿತ್ಯವೂ ಹತ್ತಾರು ವರದಿಗಳು ಬರುತ್ತಲೇ ಇವೆ. ಬಹುತೇಕ ಎಲ್ಲಾ ಘಟನೆಗಳಲ್ಲಿಯೂ ಒಂದೇ ತೆರನಾಗಿ ಮೋಸದ ಜಾಲ ಮಾಡಿರುವ ಬಗ್ಗೆ ವರದಿಯಾಗುತ್ತಲೇ ಇವೆ. ಮೊದಲು ಹಣ ಕೇಳುವುದು ನಂತರ ಕಸ್ಟಮ್ಸ್​ ಅಧಿಕಾರಿಗಳ ಹೆಸರಿನಲ್ಲಿ ಕಾಲ್​ ಮಾಡುವುದು, ನಂತರ ಮೋಸ ಮಾಡಿ ಪಂಗನಾಮ ಹಾಕುವುದು… ಹೀಗೆ ವರದಿ ಬಂದರೂ ಯುವತಿಯರ ವಿಷಯ ಬಂದಾಗ ಗಂಡಸರಿಗೆ ಯಾಕೋ ಈ ಸುದ್ದಿಗಳು ನೆನಪಾಗುವುದೇ ಇಲ್ಲದಂತೆ ಕಾಣಿಸುತ್ತದೆ! ಅಂಥದ್ದೇ ಒಂದು …

Read More »

ಎಣ್ಣೆ ಪ್ರಿಯರಿಗೆ ಬಿಗ್ ಶಾಕ್..!

ನವದೆಹಲಿ : ಕೇಂದ್ರ ಸರ್ಕಾರವು ಮದ್ಯ ಪ್ರಿಯರಿಗೆ ಬಿಗ್ ಶಾಕ್ ನೀಡಿದ್ದು, ಈ ಬಾರಿಯ ಬಜೆಟ್ ನಲ್ಲಿ ಮದ್ಯ ದರ ಹೆಚ್ಚಿಸಲಾಗಿದೆ. ಬರೋಬ್ಬರಿ ಶೇ. 100 ರಷ್ಟು ತೆರಿಗೆ ವಿಧಿಸುವ ಮೂಲಕ ಕೇಂದ್ರ ಸರ್ಕಾರ ಎಣ್ಣೆ ಪ್ರಿಯರಿಗೆ ಶಾಕ್ ನೀಡಿದೆ. ಕೇಂದ್ರ ಸರ್ಕಾರ ಈ ಬಾರಿಯ ಬಜೆಟ್ ನಲ್ಲಿ ಮದ್ಯದ ಮೇಲೆ ಕೃಷಿ ಸೆಸ್ ವಿಧಿಸಿದ್ದು, ಮದ್ಯದ ಮೇಲೆ ಶೇ. 100 ರಷ್ಟು ತೆರಿಗೆ ವಿಧಿಸಿದೆ. ಸದ್ಯ ಪಾವತಿ ಮಾಡುತ್ತಿರುವ …

Read More »

ಗಣಿಗಾರಿಕೆಗೆ ಸಂಬಂಧಿಸಿದ ಪ್ರಸ್ತಾವನೆಗಳಿಗೆ ಸುಲಭವಾಗಿ ಹಾಗೂ ಸರಳವಾಗಿ ಅನುಮೋದನೆ: ನಿರಾಣಿ

ಬೆಂಗಳೂರು: ಗಣಿಗಾರಿಕೆಗೆ ಸಂಬಂಧಿಸಿದ ಪ್ರಸ್ತಾವನೆಗಳಿಗೆ ಸುಲಭವಾಗಿ ಹಾಗೂ ಸರಳವಾಗಿ ಅನುಮೋದನೆ ನೀಡಲು ಸಾಧ್ಯವಾಗುವಂಥ ‘ಏಕಗವಾಕ್ಷಿ’ ಪದ್ಧತಿ ಅಳವಡಿಸಲು ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಮುಂದಾಗಿದ್ದಾರೆ. ಆ ಮೂಲಕ, ರಾಜ್ಯದಲ್ಲಿ ಬಂಡವಾಳ ಹೂಡಲು ಮುಂದೆ ಬರುವ ಉದ್ದಿಮೆದಾರರಿಗೆ ಸುಲಭವಾಗಿ ಹಾಗೂ ಸುಲಲಿತವಾಗಿ ವ್ಯಾಪಾರ, ವಹಿವಾಟು ನಡೆಸಲು ಅನುಕೂಲವಾಗುವಂತೆ ಈ ಪದ್ಧತಿ ಜಾರಿಗೊಳಿಸಲು ತೀರ್ಮಾನಿಸಿದ್ದಾರೆ. ಇಲಾಖೆಯ ಅಧಿಕಾರಿಗಳು, ಉದ್ಯಮಿಗಳ ಜೊತೆ ಸಭೆ ನಡೆಸಿದ ಸಚಿವರು, ಹೂಡಿಕೆದಾರರು ಎದುರಿಸುತ್ತಿರುವ ಸಮಸ್ಯೆಗಳ …

Read More »

‘ಅನ್ನಭಾಗ್ಯ’ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್: ‘ಅಂತ್ಯೋದಯ’ ಕಾರ್ಡ್ ದಾರರಿಗೆ 35 ಕೆಜಿ ಅಕ್ಕಿ

ಯಾದಗಿರಿ: ಸಾರ್ವಜನಿಕ ಪಡಿತರ ವಿತರಣಾ ವ್ಯವಸ್ಥೆಯಡಿ ಯಾದಗಿರಿ ಜಿಲ್ಲೆಯಲ್ಲಿ ಫೆಬ್ರವರಿ ತಿಂಗಳ ಅನ್ನಭಾಗ್ಯ ಯೋಜನೆ ಹಾಗೂ ರಾಜ್ಯ ಸರ್ಕಾರದ ಎನ್.ಎಫ್.ಎಸ್.ಎ ಯೋಜನೆಯಡಿ ಆಹಾರ ಧಾನ್ಯಗಳನ್ನು ವಿತರಿಸಲಾಗುತ್ತಿದೆ. ಅಂತ್ಯೋದಯ ಅನ್ನ ಯೋಜನೆಯ 29,353 ಪಡಿತರ ಚೀಟಿಗಳಿಗೆ ಮತ್ತು ಎನ್.ಎಫ್.ಎಸ್.ಎ ಅಡಿಯಲ್ಲಿ ಪ್ರತಿ ಪಡಿತರ ಚೀಟಿಗೆ 35 ಕೆ.ಜಿ ಅಕ್ಕಿ ಹಾಗೂ 2,35,356 ಬಿಪಿಎಲ್ ಪಡಿತರ ಚೀಟಿಗಳ 8,49,922 ಪ್ರತಿ ಸದಸ್ಯರಿಗೆ 5 ಕೆ.ಜಿ. ಅಕ್ಕಿ ಹಾಗೂ ಓ.ಎಮ್.ಎಸ್.ಎಸ್.(ಡಿ) ಅಡಿಯಲ್ಲಿ ಬಿ.ಪಿ.ಎಲ್. ಪಡಿತರ …

Read More »