ಕೋಲ್ಕತ್ತಾ: ಆಧಾರ್ ಕಾರ್ಡ್ ಪಡೆಯುವುದು ಅದರಲ್ಲಿನ ಮಾಹಿತಿ ತಿದ್ದುಪಡಿ ಮಾಡಿಸುವುದೆಂದರೆ ದೊಡ್ಡ ಸಾಹಸವೇ ಸರಿ. ಆಧಾರ್ ಕೇಂದ್ರಗಳ ಮುಂದೆ ಉದ್ದದ ಕ್ಯೂ ಇರುವುದನ್ನು ಕಾಯಂ ಕಾಣುತ್ತೇವೆ. ಆದರೆ, ಇವರ ಮದುವೆಗೆ ಬಂದವರಿಗೆಲ್ಲ ಸುಲಭವಾಗಿ ಆಧಾರ್ ಕಾರ್ಡ್ ಸಿಕ್ಕಿದೆ.!!!! ಹೌದು, ಕೊಲ್ಕತ್ತಾದ ಗೋಗೋಲ್ ಶಹಾ ಹಾಗೂ ಸುಬರ್ನಾ ದಾಸ್ ಈ ವಾರದ ಪ್ರಾರಂಭದಲ್ಲಿ ವಿವಾಹವಾದರು. ಅವರ ಮದುವೆಗೆ ಹೋದವರಿಗೆಲ್ಲ ಆಧಾರ್ ಕಾರ್ಡ್ ನೀಡಲಾಗಿತ್ತು. ಆದರೆ, ಕಾರ್ಡ್ ನಿಜವಾದುದಲ್ಲ. ಮದವೆಯ ಊಟದಲ್ಲಿದ್ದ ತಿಂಡಿಗಳ …
Read More »ಇಂದು ‘ಪೊಗರು’ ಚಿತ್ರದ ಖರಾಬು ಹಾಡು ತಮಿಳಿನಲ್ಲಿ ರಿಲೀಸ್
ನಂದಕಿಶೋರ್ ನಿರ್ದೇಶನದ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷೆಯ ‘ಪೊಗರು’ ಚಿತ್ರದ ಖರಾಬು ಹಾಡು ಕನ್ನಡದಲ್ಲಿ ಈಗಾಗಲೇ 200ಮಿಲಿಯನ್ ವೀಕ್ಷಣೆ ಪಡೆಯುವ ಮೂಲಕ ಯೂಟ್ಯೂಬ್ ನಲ್ಲಿ ಧೂಳೆಬ್ಬಿಸಿದೆ. ‘ಪೊಗರು’ ಸಿನಿಮಾ ತಮಿಳಿನಲ್ಲೂ ರಿಲೀಸ್ ಆಗುತ್ತಿದ್ದು, ಈ ಚಿತ್ರದ ಖರಾಬು ಹಾಡನ್ನು ತಮಿಳಿನಲ್ಲಿ ಇಂದು 12:12ಕ್ಕೆ ಬಿಡುಗಡೆ ಮಾಡುತ್ತಿದ್ದಾರೆ. ‘ಪೊಗರು’ ಸಿನಿಮಾ ಕನ್ನಡ ಸೇರಿದಂತೆ ತೆಲುಗು ಹಾಗೂ ತಮಿಳು ಭಾಷೆಯಲ್ಲಿ ರಿಲೀಸ್ ಆಗಲಿದೆ. ಬಿ ಕೆ ಗಂಗಾಧರ್ ಈ …
Read More »ಫೆಬ್ರವರಿ 13ಕ್ಕೆ ‘ಪ್ರೇಮಂ ಪೂಜ್ಯಂ’ ಚಿತ್ರದ ಟೀಸರ್ ರಿಲೀಸ್
ಡಾ.ರಾಘವೇಂದ್ರ ಅವರ ಚೊಚ್ಚಲ ನಿರ್ದೇಶನದ ‘ಪ್ರೇಮಂ ಪೂಜ್ಯಂ’ ಸಿನಿಮಾ ಟೀಸರ್ ಅನ್ನು ಫೆಬ್ರವರಿ 13ರಂದು ಬಿಡುಗಡೆ ಮಾಡಲಿದ್ದಾರೆ. ಈ ಚಿತ್ರದಲ್ಲಿ ನೆನಪಿರಲಿ ಪ್ರೇಮ್ ನಾಯಕನಾಗಿ ಅಭಿನಯಿಸಿದ್ದು, ವಿಭಿನ್ನ ಗೆಟಪ್ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಇದು ಅವರ 25ನೇ ಸಿನಿಮಾವಾಗಿದೆ. ಈ ಸಿನಿಮಾದಲ್ಲಿ ಐಂದ್ರಿತಾ ರೇ ನಾಯಕಿಯಾಗಿ ನಟಿಸಿದ್ದು, ಇತ್ತೀಚೆಗಷ್ಟೇ ಈ ಚಿತ್ರದ ಪ್ರೋಮೋವೊಂದನ್ನು kedambadicreations ಯೂಟ್ಯೂಬ್ ಚಾನೆಲ್ ನಲ್ಲಿ ರಿಲೀಸ್ ಮಾಡಿದ್ದರು. ಇದೀಗ ಟೀಸರ್ ಬಿಡುಗಡೆ ಮಾಡಲು ಚಿತ್ರತಂಡ ಸಜ್ಜಾಗಿದೆ.
Read More »ಭಕ್ತರ ನಂಬಿಕೆಗೆ ಧಕ್ಕೆಯಾಗದಂತೆ ಶಬರಿಮಲೆ ನಿಯಮ
ಕೊಚ್ಚಿ: ಮುಂಬರುವ ಕೇರಳ ವಿಧಾನಸಭಾ ಚುನಾವಣೆಯಲ್ಲಿ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಜಯ ಗಳಿಸಿದರೆ, ಶಬರಿಮಲೆಯಲ್ಲಿ ಮಹಿಳಾ ಪ್ರವೇಶಾತಿಗೆ ಸಂಬಂಧಿಸಿದಂತೆ ಭಕ್ತರ ನಂಬಿಕೆಗಳಿಗೆ ಧಕ್ಕೆಯಾಗದಂತೆ ನಿಯಮ ರೂಪಿಸಲಾಗುವುದು ಎಂದು ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ (ಕೆಪಿಸಿಸಿ) ಮುಲ್ಲಪ್ಪಳ್ಳಿ ರಾಮಚಂದ್ರನ್ ಹೇಳಿಕೆ ನೀಡಿದ್ದಾರೆ. ಕೊಚ್ಚಿಯಲ್ಲಿ ಮಾಧ್ಯಮವನ್ನು ಉದ್ದೇಶಿಸಿ ಮಾತನಾಡಿದ ರಾಮಚಂದ್ರನ್, ಮುಂಬರುವ ಚುನಾವಣೆಯಲ್ಲಿ ಯುಡಿಎಫ್ ಪ್ರಣಾಳಿಕೆಯಲ್ಲಿ ಶಬರಿಮಲೆ ವಿಷಯ ಪ್ರಮುಖ ಅಂಶವಾಗಿರಲಿದೆ ಎಂದು ಹೇಳಿದರು. ಯುಡಿಎಫ್ ಚುನಾವಣಾ ಪ್ರಣಾಳಿಕೆಯಲ್ಲಿ ಶಬರಿಮಲೆ …
Read More »ವಿನಯ್ಗೆ ಜೋಡಿಯಾಗಿ ನಟಿ ಅದಿತಿ ಪ್ರಭುದೇವ
ಡಾ ರಾಜ್ ಮೊಮ್ಮಗ ವಿನಯ್ ರಾಜ್ ಕುಮಾರ್ ನಟಿಸುತ್ತಿರುವ ಹೊಸ ಚಿತ್ರಕ್ಕೆ ‘ಅದೊಂದಿತ್ತು ಕಾಲ’ ಎಂದು ಹೆಸರಿಡಲಾಗಿದೆ. ಈ ಚಿತ್ರದಲ್ಲಿ ವಿನಯ್ಗೆ ಜೋಡಿಯಾಗಿ ನಟಿ ಅದಿತಿ ಪ್ರಭುದೇವ ನಟಿಸುತ್ತಿದ್ದಾರೆ ಎಂಬ ವಿಚಾರ ಹೊರಬಿದ್ದಿದೆ. ಈ ಚಿತ್ರಕ್ಕೆ ಕೀರ್ತಿ ನಿರ್ದೇಶನ ಮಾಡುತ್ತಿದ್ದು, ಇದು ಇವರ ಚೊಚ್ಚಲ ಸಿನಿಮಾ ಆಗಿದೆ. 90ರ ದಶಕದಲ್ಲಿ ನಡೆಯುವ ಕಥೆಯನ್ನು ಈ ಸಿನಿಮಾ ಹೊಂದಿದೆಯಂತೆ. ಚಿತ್ರದ ಫಸ್ಟ್ ಲುಕ್ ಬಿಡುಗಡೆಯಾಗಿದ್ದು, ಈ ಪೋಸ್ಟರ್ನಲ್ಲಿ ಪುಟ್ಟ ಹುಡುಗನೊಬ್ಬ ಗಾಳಿಪಟ …
Read More »ಆರು ವರ್ಷಗಳಲ್ಲಿ ಕರ್ನಾಟಕದಲ್ಲಿ ಸಂಭವಿಸಿದ ಆನೆಗಳ ಸಾವು
ಬೆಂಗಳೂರು :ಇತ್ತೀಚೆಗೆ ತಮಿಳುನಾಡಿನ ಮಡುಮಲೈನಲ್ಲಿ ಆನೆಗೆ ಬೆಂಕಿ ಹಚ್ಚಿದ ಘಟನೆ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ದೇಶಾದ್ಯಂತ, ಆನೆಗಳ ರಕ್ಷಣೆಯ ಬಗ್ಗೆ ಚರ್ಚೆ ನಡೆಯುತ್ತಿದೆ. ದೇಶದಲ್ಲಿ ಆನೆಗಳ ತವರೂರಾದ ಕರ್ನಾಟಕದಲ್ಲಿ ಕಳೆದ ಆರು ವರ್ಷಗಳ ಅವಧಿಯಲ್ಲಿ ಸುಮಾರು 78 ಆನೆಗಳು ಮಾನವನ ದುಷ್ಕೃತ್ಯಕ್ಕೆ ಬಲಿಯಾಗಿವೆ ಎಂದು ತಿಳಿದು ಬಂದಿದೆ. ಇವುಗಳಲ್ಲಿ ಕ್ರಿಮಿನಾಶಕ ಔಷಧ ಸೇವನೆಯಿಂದ, ವಿದ್ಯುತ್ ಶಾಕ್ ನಿಂದ, ರಸ್ತೆ ಆಘಾತಗಳಿಂದ ಮತ್ತು ಬಂದೂಕುಗಳಿಂದ ಕೊಲ್ಲಲ್ಪಟ್ಟ ಘಟನೆಗಳು ನಡೆದಿವೆ. ಆರು ವರ್ಷಗಳ …
Read More »ಮೊದಲ ಸಿಆರ್ಪಿಎಫ್ ಮಹಿಳಾ ತಂಡ ‘ಕೋಬ್ರಾ’ ಘಟಕಕ್ಕೆ ಸೇರ್ಪಡೆ
ಗುರುಗ್ರಾಮ: 34ನೇ ಸಿಆರ್ಪಿಎಫ್ನ ಮೊದಲ ಮಹಿಳಾ ತಂಡವನ್ನು ಶನಿವಾರ ವಿಶೇಷ ಜಂಗಲ್ ವಾರ್ಫೇರ್ ಕಮಾಂಡೊ ಪಡೆ ‘ಕೋಬ್ರಾ’ಗೆ(ಕಮಾಂಡೊ ಬೆಟಾಲಿಯನ್ ಫಾರ್ ರೆಸೊಲ್ಯೂಟ್ ಆಕ್ಷನ್) ಸೇರಿಸಲಾಯಿತು. ಇಲ್ಲಿನ ಕಡರ್ಪುರದಲ್ಲಿರುವ ಸಿಆರ್ಪಿಎಫ್ ಶಿಬಿರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಈ ಸೇರ್ಪಡೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಮಹಿಳೆಯರು ನಡೆಸಿದ ಯುದ್ಧಸಮರ ಕಸರತ್ತನ್ನು ಸಿಆರ್ಪಿಎಫ್ ಮಹಾನಿರ್ದೇಶಕಿ ಎ ಪಿ ಮಹೇಶ್ವರಿ ವೀಕ್ಷಿಸಿದರು. ‘ಈಗಿರುವ ಆರು ಸಿಆರ್ಪಿಎಫ್ ಮಹಿಳಾ ಬೆಟಾಲಿಯನ್ಗಳಿಂದ ಮಹಿಳೆಯರನ್ನು ಕೋಬ್ರಾ ಪಡೆಗೆ ಆಯ್ಕೆ ಮಾಡಲಾಗಿದೆ. ಇವರೆಲ್ಲರೂ …
Read More »ಏಷ್ಯಾದ ಅತೀ ದೊಡ್ಡ ಏರ್ ಶೋಗೆ ವಿಶೇಷ ಭದ್ರತೆ ನೀಡಿದ್ದು ಗುರುಡ ಪಡೆ
ಬೆಂಗಳೂರು: ಫೆಬ್ರವರಿ 3 ರಿಂದ ಮೂರು ದಿನಗಳ ಕಾಲ ನಡೆದ ಏಷ್ಯಾದ ಅತೀ ದೊಡ್ಡ ಏರ್ ಶೋ ಶುಕ್ರವಾರ ಮುಕ್ತಾಯವಾಯಿತು. ಈ ಏರ್ ಶೋಗೆ ಭಯೋತ್ಪಾದನೆ ನಿಗ್ರಹದಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ಗರುಡ ಸೈನ್ಯ ಭದ್ರತೆಯನ್ನ ಒದಗಿಸಿತ್ತು. ರಾಷ್ಟ್ರಪತಿ ರಾಮನಾಥ್ ಕೋವಿಂದ್, ಚೀಫ್ ಆಫ್ ಡಿಫೆನ್ಸ್ ಸ್ಟಾಪ್ ಜನರಲ್ ಬಿಪಿನ್ ರಾವತ್ ಮತ್ತು ಮೂವರು ಸೇನಾ ಮುಖ್ಯಸ್ಥರು ಮತ್ತು ರಕ್ಷಣಾ ಮಂತ್ರಿಗಳು ಮತ್ತು ಇತರರು ಭಾಗವಹಿಸಿದ್ದ ಪ್ರದರ್ಶನದಲ್ಲಿ ಗರುಡ್ ಸೈನ್ಯವನ್ನ …
Read More »₹29 ಲಕ್ಷ ಪಡೆದು, ಬಳಿಕ ಕಾರ್ಯಕ್ರಮಗಳಿಗೆ ಹಾಜರಾಗದೇ ವಂಚಿಸಿದ್ದಾರೆ ಸನ್ನಿ ಲಿಯೋನ್
ತಿರುವನಂತಪುರಂ: ಕಾರ್ಯಕ್ರಮಗಳಿಗೆ ಭಾಗವಹಿಸುದಾಗಿ ಬರೋಬ್ಬರಿ ₹29 ಲಕ್ಷ ಪಡೆದು ವಂಚನೆ ಮಾಡಿರುವ ಆರೋಪದ ಮೇಲೆ ಬಾಲಿವುಡ್ ನಟಿ ಸನ್ನಿ ಲಿಯೋನ್ನ್ನ ಕೇರಳ ಪೊಲೀಸರು ಇಂದು ವಿಚಾರಣೆ ನಡೆಸಿದ್ದಾರೆ. ಕೊಚ್ಚಿಯಲ್ಲಿ ಏರ್ಪಡಿಸಲಾದ ಎರಡು ಕಾರ್ಯಕ್ರಮಗಳಿಗೆ ಭಾಗವಹಿಸುವುದಾಗಿ ಹೇಳಿ ಸನ್ನಿ ಲಿಯೋನ್ ₹29 ಲಕ್ಷ ಪಡೆದು, ಬಳಿಕ ಕಾರ್ಯಕ್ರಮಗಳಿಗೆ ಹಾಜರಾಗದೇ ವಂಚಿಸಿದ್ದಾರೆ ಎಂದು ಆಯೋಜಕರು ದೂರು ನೀಡಿದ್ದಾರೆ ಅಂತಾ ವರದಿಯಾಗಿದೆ. ದೂರಿನ ಅನ್ವಯ ಕೇರಳ ಪೊಲೀಸರು ಸನ್ನಿ ಲಿಯೋನ್ ಚಿತ್ರೀಕರಣ ನಡೆಯುತ್ತಿದ್ದ ಸ್ಥಳಕ್ಕೆ …
Read More »ಉತ್ತರ ಕನ್ನಡ ಜಿಲ್ಲೆಯಲ್ಲಿ ಹೆಚ್ಚಾದ ಕಳ್ಳತನ ಕೆಲವು ಪ್ರಕರಣದಲ್ಲಿ ಆರೋಪಿ ಸುಳಿವು ಸಿಕ್ಕಿಲ್ಲ.
ಕಾರವಾರ: ಕೊರೋನಾ ಮಹಾಮಾರಿ ತಂದಿಟ್ಟ ಸಂಕಷ್ಟ ಒಂದೆರಡಲ್ಲ ಹತ್ತಾರು ಮಾರ್ಗದಲ್ಲಿ ಜನರನ್ನ ಸಂಕಷ್ಟದ ಗುಹೆಗೆ ನೂಕಿಸಿದೆ. ಇದರ ಬಾಗವಾಗಿ ಲಾಕ್ಡೌನ್ ನಂತರ ಉತ್ತರ ಕನ್ನಡ ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಮತ್ತು ರಾಷ್ಟ್ರೀಯ ಹೆದ್ದಾರಿ ಪಕ್ಕದ ಮನೆಗಳಲ್ಲಿ ಕಳ್ಳತನ ಪ್ರಕರಣಗಳು ಅಧಿಕವಾಗಿದೆ. ಲಾಕ್ಡೌನ್ ಬಳಿಕ ನಾಲ್ವತ್ತಕ್ಕೂ ಹೆಚ್ಚು ಕಳ್ಳತನ ಪ್ರಕರಣಗಳು ಉತ್ತರ ಕನ್ನಡ ಜಿಲ್ಲೆಯಲ್ಲಿ ದಾಖಲಾಗಿವೆ ಇದಕ್ಕೆಲ್ಲ ಕಾರಣ ಲಾಕ್ಡೌನ್ ನಲ್ಲಿ ಕೆಲಸ ಇಲ್ಲದವರ ಕೃತ್ಯ ಎನ್ನಲಾಗಿದೆ. ಈ ಪೈಕಿ ರಾಷ್ಟ್ರೀಯ …
Read More »
Laxmi News 24×7