ರೈಲಿಗೆ ತಲೆಕೊಟ್ಟು ದಂಪತಿ ಆತ್ಮಹತ್ಯೆಗೆ ಯತ್ನ ಮಾಡಿದ್ದು ಘಟನೆಯಲ್ಲಿ ಪತಿ ಸಾವನ್ನಪ್ಪಿ, ಪತ್ನಿಗೆ ಗಾಯವಾಗಿರುವ ಘಟನೆ ಬೆಳಗಾವಿ ನಗರದ ಒಂದನೇ ರೇಲ್ವೆ ಗೇಟ್ ಬಳಿ ನಡೆದಿದೆ.ಬೆಳಗಾವಿ ತಾಲೂಕಿನ ಹಿಂಡಲಗಾ ನಿವಾಸಿ ರಾಕೇಶ್ ಪಾಟೀಲ್ ಮೃತ ದುರ್ದೈವಿ ಆಗಿದ್ದು, ಪತ್ನಿಗೆ ಗಂಭೀರ ಗಾಯವಾಗಿರುವ ಹಿನ್ನೆಲೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳಿಗ್ಗೆ ಗೂಡ್ಸ್ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಈ ದಂಪತಿ ಯತ್ನಿಸಿದೆ. ಸ್ಥಳಕ್ಕೆ ಬೆಳಗಾವಿ ರೇಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. …
Read More »ಪೊಲೀಸರ ಎದುರೇ ವಿದ್ಯಾರ್ಥಿ ತಾಯಿಗೆ ಕಪಾಳಮೋಕ್ಷ
ರಾಯಚೂರು: ವಿದ್ಯಾರ್ಥಿಗೆ 80,000 ರೂ ಪೀಸ್ ಡಿಮ್ಯಾಂಡ್ ಮಾಡಿ ಕಿರುಕುಳ ನೀಡುತ್ತಿದ್ದುದನ್ನು ಪ್ರಶ್ನಿಸಿದ್ದಕ್ಕೆ ವಿದ್ಯಾರ್ಥಿ ತಾಯಿಗೆ ಪೊಲೀಸರ ಎದುರೇ ಕಪಾಳಮೋಕ್ಷ ಮಾಡಿದ ಮೊಂಟೆಸರಿ ಶಾಲೆ ಮುಖ್ಯಸ್ಥ ಸತೀಶ್ ಕುಮಾರ್ ಹಾಗೂ ಆತನ ಪತ್ನಿ ಇಬ್ಬರನ್ನು ಬಂಧಿಸಲಾಗಿದೆ. 10ನೇ ತರಗತಿ ವಿದ್ಯಾರ್ಥಿ ಸಂಪತ್ ಗೆ ತಾವು ಹೇಳಿದಷ್ಟು ಹಣವನ್ನು ಕಟ್ಟಬೇಕು ಎಂದು ಶಾಲೆಯ ಮುಖ್ಯಸ್ಥರು ಪ್ರತಿದಿನ ಕಿರುಕುಳ ನೀಡಿತ್ತಿದ್ದರು. ಇದರಿಂದ ಬೇಸತ್ತ ಸಂಪತ್ ಪೋಷಕರು ಟಿಸಿ ಕೊಡುವಂತೆ ಕೇಳಿಕೊಂಡಿದ್ದರು. ಟಿಸಿ ಕೊಡಲು …
Read More »ಪ್ರಿಯಾಂಕಾ ಗಾಂಧಿ ಭದ್ರತಾ ವಾಹನಗಳು ಡಿಕ್ಕಿ
ಲಕ್ನೋ: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರ ಭದ್ರತಾ ವಾಹನಗಳು ಅಪಘಾತಕ್ಕೀಡಾಗಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಉತ್ತರ ಪ್ರದೇಶದ ಹಾಪುರದಲ್ಲಿ ಭದ್ರತಾ ವಾಹನಗಳು ಡಿಕ್ಕಿಯಾಗಿದ್ದು. ಅದೃಷ್ಟವಶಾತ್ ಭದ್ರತಾ ಸಿಬ್ಬಂದಿಗಳು ಅಪಾಯದಿಂದ ಪಾರಾಗಿದ್ದಾರೆ. ಉತ್ತರಪ್ರದೇಶದ ರಾಮ್ ಪುರಕ್ಕೆ ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ.
Read More »ಕಾಯ್ದೆ ಹಿಂದೆ ವಿದೇಶಿ ಕೈವಾಡ ಆರೋಪ: ಪರಿಸರ ಸಂಸ್ಥೆಗೆ ದಂಡ ಪಾವತಿಸಲು ಹೈಕೋರ್ಟ್ ಸೂಚನೆ
ಬೆಂಗಳೂರು, ಫೆ.3: ಪರಿಸರ ಸಂರಕ್ಷಣೆ ಕಾಯ್ದೆಯನ್ನು ವಿದೇಶಿ ಪ್ರಭಾವಕ್ಕೆ ಒಳಗಾಗಿ ರೂಪಿಸಲಾಗಿದೆ ಎಂದು ಆಕ್ಷೇಪಾರ್ಹ ಹೇಳಿಕೆ ಸಲ್ಲಿಸಿದ್ದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ದಂಡ ವಿಧಿಸಲು ತೀರ್ಮಾನಿಸಿರುವ ಹೈಕೋರ್ಟ್ ದಂಡದ ಹಣವನ್ನು ಪರಿಸರ ಸಂರಕ್ಷಣೆಯಲ್ಲಿ ತೊಡಗಿಸಿಕೊಂಡಿರುವ ಸಂಸ್ಥೆಗೆ ಪಾವತಿಸುವಂತೆ ಸೂಚಿಸಿದೆ. ನೂರು ಕಿ.ಮೀ ವರೆಗಿನ ರಾಷ್ಟ್ರೀಯ ಹೆದ್ದಾರಿಗಳ ವಿಸ್ತರಣೆಗೆ ಪರಿಸರ ಪರಿಣಾಮ ಅಧ್ಯಯನ (ಇಐಎ) ಅನ್ವಯಿಸದಿರಲು ಮುಂದಾಗಿರುವ ಕೇಂದ್ರ ಸರಕಾರದ ನಿರ್ಧಾರ ಪ್ರಶ್ನಿಸಿ ಯುನೈಟೆಡ್ ಕನ್ಸರ್ವೇಷನ್ ಟ್ರಸ್ಟ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ …
Read More »ಕರ ವಸೂಲಿಗಾರ ಹಾಗೂ ಗುಮಾಸ್ತರಿಗೆ ಭಡ್ತಿ ನೀಡಲು ಕ್ರಮ: ಕೆ.ಎಸ್. ಈಶ್ವರಪ್ಪ
ಬೆಂಗಳೂರು: ಜಿಲ್ಲಾ ಪಂಚಾಯಿತಿ ವತಿಯಿಂದ ಅನುಮೋದನೆಗೊಂಡು ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕರ ವಸೂಲಿಗಾರ ಹಾಗೂ ಗುಮಾಸ್ತರಿಗೆ ಭಡ್ತಿ ನೀಡುವ ಕುರಿತಾಗಿ ಅಧಿಕಾರಿಗಳ ಜತೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದ್ದಾರೆ. ಪ್ರಶ್ನೋತ್ತರ ವೇಳೆಯಲ್ಲಿ ಕಾಂಗ್ರೆಸ್ನ ಕೆ.ವೈ.ನಂಜೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಕರವಸೂಲಿಗಾರ ಹಾಗೂ ಗುಮಾಸ್ತ ಹುದ್ದೆಯಲ್ಲಿ 20 ರಿಂದ 25 ವರ್ಷಗಳಿಂದ ಕೆಲಸ ಮಾಡುತ್ತಿರುವವರಿಗೆ ಮುಂಬಡ್ತಿ ಸಿಕ್ಕಿಲ್ಲ ಎಂಬ …
Read More »ರೈತರ ಪ್ರತಿಭಟನೆಯಿಂದ ದಿಲ್ಲಿ ನಿವಾಸಿಗಳಿಗೆ ಭಾರೀ ತೊಂದರೆಯಾಗಿದೆ: ಕೇಂದ್ರ ಸರಕಾರ
ಹೊಸದಿಲ್ಲಿ, ಫೆ.2: ದಿಲ್ಲಿ ಗಡಿಭಾಗದಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಯಿಂದ ದಿಲ್ಲಿ ಹಾಗೂ ನೆರೆಯ ರಾಜ್ಯಗಳ ನಿವಾಸಿಗಳಿಗೆ ಭಾರೀ ತೊಂದರೆಯಾಗಿದೆ ಎಂದು ಕೇಂದ್ರ ಸರಕಾರ ಬುಧವಾರ ಸಂಸತ್ತಿನಲ್ಲಿ ಹೇಳಿದೆ. ದಿಲ್ಲಿ ಗಡಿಭಾಗದಲ್ಲಿ ಬ್ಯಾರಿಕೇಡ್ ನಿರ್ಮಿಸಿರುವ ಬಗ್ಗೆ ಶಿವಸೇನೆಯ ಸದಸ್ಯ ಅನಿಲ್ ದೇಸಾಯಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಗೃಹ ಇಲಾಖೆಯ ಸಹಾಯಕ ಸಚಿವ ಜಿ ಕಿಶನ್ ರೆಡ್ಡಿ ‘ ರೈತರ ಪ್ರತಿಭಟನೆಯಿಂದಾಗಿ ರಾಷ್ಟ್ರೀಯ ರಾಜಧಾನಿಯ ಘಾಝಿಪುರ, ಚಿಲ್ಲ, ಟಿಕ್ರಿ ಮತ್ತು ಸಿಂಘು ಗಡಿಯಲ್ಲಿ …
Read More »ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ ಇಂದು ರಾಜೀನಾಮೆ ನೀಡುವ ಸಾಧ್ಯತೆ..?
ಬೆಂಗಳೂರು : ವಿಧಾನಪರಿಷತ್ ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ ಇಂದು ರಾಜೀನಾಮೆ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ. ಪ್ರತಾಪ್ ಚಂದ್ರ ಶೆಟ್ಟಿ ಅವರು ಕಳೆದ ಅಧಿವೇಶನದಲ್ಲೇ ರಾಜೀನಾಮೆ ನೀಡಲು ಮುಂದಾಗಿದ್ದರು. ಆದರೆ ಕಾಂಗ್ರೆಸ್ ನಾಯಕರು ರಾಜೀನಾಮೆ ನೀಡದಂತೆ ತಡೆದಿದ್ದರು. ಇದೀಗ ಬಿಜೆಪಿ ನಾಯಕರು ಕಾನೂನು ಹೋರಾಟಕ್ಕೆ ಮುಂದಾಗದ ಕಾರಣ ರಾಜೀನಾಮೆ ನೀಡುವುದು ಸೂಕ್ತ ಎಂಬ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ. ಇಂದು ಪ್ರತಾಪ್ ಚಂದ್ರ ಶೆಟ್ಟಿ ಅವರು ಮಾಜಿ ಸಿಎಂ ಸಿದ್ದರಾಮಯ್ಯ …
Read More »ನೀರಿನ ಬದಲಿಗೆ ಸ್ಯಾನಿಟೈಸರ್ ಕುಡಿದಬಿಎಂಸಿ ಅಧಿಕಾರಿ,
ಮುಂಬೈ: ಮಹಾರಾಷ್ಟ್ರದಲ್ಲಿ ಮಕ್ಕಳಿಗೆ ಪೋಲಿಯೋ ಹನಿ ಬದಲು ಸ್ಯಾನಿಟೈಸರ್ ಹಾಕಿದ್ದ ವಿಷಯ ಆತಂಕಕ್ಕೀಡು ಮಾಡಿತ್ತು. ಇದೀಗ ಬೃಹನ್ ಮುಂಬೈ ಮುನಿಸಿಪಲ್ ಕಾರ್ಪೋರೇಷನ್ ಅಧಿಕಾರಿಯೊಬ್ಬರು ನೀರಿನ ಬಾಟಲಿ ಅಂತ ತಿಳಿದು ಸ್ಯಾನಿಟೈಸರ್ ಕುಡಿದಿದ್ದಾರೆ. ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಶಿಕ್ಷಣ ಬಜೆಟ್ ಮಂಡಿಸುವಾಗ ಬೃಹನ್ಮುಂಬೈ ಮಹಾನಗರ ಪಾಲಿಕೆಯ ಹಿರಿಯ ಅಧಿಕಾರಿಯೊಬ್ಬರು ನೀರಿನ ಬದಲು ಸ್ಯಾನಿಟೈಸರ್ ಅನ್ನು ತಪ್ಪಾಗಿ ಸೇವಿಸಿದ್ದಾರೆ. ಕೂಡಲೇ ತಮ್ಮ ತಪ್ಪಿನ ಅರಿವಾಗಿ ಅಧಿಕಾರಿ ಸ್ಯಾನಿಟೈಸರ್ …
Read More »ಸರ್ಕಾರವು ಗ್ರಾಮೀಣಾಭಿವೃದ್ಧಿ ಯೋಜನೆಗಳಿಗೆ ಮೀಸಲಿಟ್ಟ ಹಣವನ್ನು ಸಂಪೂರ್ಣವಾಗಿ ಬಳಸಿಕೊಂಡು ಗ್ರಾಮೀಣ ಅಭಿವೃದ್ಧಿ ಮಾಡಲಾಗುತ್ತಿದೆ: ಅಣ್ಣಾ ಸಾಹೇಬ ಜೊಲ್ಲೆ
ನವದೆಹಲಿ – ಸರ್ಕಾರವು ಗ್ರಾಮೀಣಾಭಿವೃದ್ಧಿ ಯೋಜನೆಗಳಿಗೆ ಮೀಸಲಿಟ್ಟ ಹಣವನ್ನು ಸಂಪೂರ್ಣವಾಗಿ ಬಳಸಿಕೊಂಡು ಗ್ರಾಮೀಣ ಅಭಿವೃದ್ಧಿ ಮಾಡಲಾಗುತ್ತಿದೆ ಎಂದು ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ನರೇಂದ್ರ ಸಿಂಗ್ ತೋಮರ್ ತಿಳಿಸಿದ್ದಾರೆ. ಸಂಸಂದ ಅಣ್ಣಾ ಸಾಹೇಬ ಜೊಲ್ಲೆ ಲೋಕಸಭೆಯಲ್ಲಿ ಕೇಳಿದ ಪ್ರಶ್ನೆಗೆ ಅವರು ಲಿಖಿತ ಉತ್ತರ ನೀಡಿದ್ದಾರೆ. ಗ್ರಾಮಗಳಲ್ಲಿ ಉದ್ಯೋಗ ಅಭಿವೃದ್ಧಿ, ಜೀವನೋಪಾಯದ ಅವಕಾಶಗಳನ್ನು ಬಲಪಡಿಸುವುದು, ಸ್ವಯಂ ಉದ್ಯೋಗವನ್ನು ಉತ್ತೇಜಿಸುವುದು, ಗ್ರಾಮೀಣ ಯುವಕರ ಕೌಶಲ್ಯ, ಸಾಮಾಜಿಕ ನೆರವು, ಮೂಲ ಸೌಕರ್ಯಗಳನ್ನು ಅಭಿವೃದ್ಧಿ ಮಾಡುವುದು, ವಸತಿ …
Read More »ಗೋಕಾಕ : ಅರಭಾವಿ ಬಳಿ ಕ್ರೂಸರ್ ವಾಹನ ಪಲ್ಟಿ : 6 ಜನರಿಗೆ ಗಾಯ !
ಗೋಕಾಕ : ಚಾಲಕನ ನಿಯಂತ್ರಣ ತಪ್ಪಿ ಕ್ರೂಸರ್ ವಾಹನ ಪಲ್ಟಿಯಾಗಿ, 6 ಜನರು ಗಾಯಗೊಂಡಿರುವ ಘಟನೆ ಅರಭಾವಿ ಗ್ರಾಮದ ಬಳಿ ಬುಧವಾರ ನಡೆದಿದೆ. ಸಂಕೇಶ್ವರ -ಅರಬಾವಿ ರಾಜ್ಯ ಹೆದ್ದಾರಿಯಲ್ಲಿ ಘಟನೆ ನಡೆದಿದೆ. ಕ್ರೂಸರ್ ಚಾಲಕ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ತಕ್ಷಣ ಸ್ಥಳೀಯರು ಧಾವಿಸಿ, ಕಾರ್ ನಲ್ಲಿ ಸಿಲುಕಿಕೊಂಡವರನ್ನು ಹೊರ ತೆಗೆಯಲಾಗಿದೆ. ಅದೃಷ್ಟವಶಾತ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಗಾಯಾಳುಗಳನ್ನು ಗೋಕಾಕ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ. …
Read More »
Laxmi News 24×7