Breaking News

ರಾಜ್ಯ

ಆರೋಗ್ಯ ಸಿಬ್ಬಂದಿಗಳ ನಿರ್ಲಕ್ಷ್ಯ ಪೋಲಿಯೋ ಲಸಿಕೆ ಬದಲು 12 ಮಕ್ಕಳಿಗೆ ಹ್ಯಾಂಡ್ ಸ್ಯಾನಿಟೈಸರ್ ಬಾಯಿಗೆ ಹಾಕಿ ಬಿಟ್ಟಿದ್ದಾರೆ.

ಯಾವತ್ಮಲ್: ದೇಶಾದ್ಯಂತ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನ ಆರಂಭವಾಗಿದ್ದು, ಲಸಿಕೆ ಹಾಕುವ ವೇಳೆ ಆರೋಗ್ಯ ಸಿಬ್ಬಂದಿಯ ಎಡವಟ್ಟಿನಿಂದಾಗಿ ಮಕ್ಕಳಿಗೆ ಸ್ಯಾನಿಟೈಸರ್ ಹಾಕಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಇಲ್ಲಿನ ಯಾವತ್ಮಲ್ ನಲ್ಲಿ ಆರೋಗ್ಯ ಸಿಬ್ಬಂದಿಗಳ ನಿರ್ಲಕ್ಷ್ಯದಿಂದಾಗಿ ಪೋಲಿಯೋ ಲಸಿಕೆ ಬದಲು 12 ಮಕ್ಕಳಿಗೆ ಹ್ಯಾಂಡ್ ಸ್ಯಾನಿಟೈಸರ್ ಬಾಯಿಗೆ ಹಾಕಿ ಬಿಟ್ಟಿದ್ದಾರೆ. ತಕ್ಷಣ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮಕ್ಕಳಿಗೆ ಯಾವುದೇ ಅಪಾಯವಾಗಿಲ್ಲ. ಎಲ್ಲಾ ಮಕ್ಕಳೂ ಆರೋಗ್ಯದಿಂದ ಇದ್ದಾರೆ. ಆದರೆ ಸಿಬ್ಬಂದಿಗಳ ಬೇಜವಾಬ್ದಾರಿ ಹಾಗೂ …

Read More »

ಲೋಹದ ಹಕ್ಕಿಗಳ ಕಲರವಕ್ಕೆ ಕ್ಷಣಗಣನೆ

ಬೆಂಗಳೂರು,ಫೆ.3- ಕೋವಿಡ್ ಭೀತಿಯಲ್ಲೇ ಆರಂಭಗೊಳ್ಳುತ್ತಿರುವ ಅಂತಾರಾಷ್ಟ್ರೀಯ ಏರೋ ಇಂಡಿಯಾ ವೈಮಾನಿಕ ಪ್ರದರ್ಶನಕ್ಕೆ ಯಲಹಂಕ ವಾಯುನೆಲೆಯಲ್ಲಿ ಈಗಾಗಲೇ ಸಕಲ ಸಿದ್ದತೆಗಳು ಪೂರ್ಣಗೊಂಡಿವೆ. ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಏರೋ ಇಂಡಿಯಾಗೆ ಅಧಿಕೃತ ಚಾಲನೆ ನೀಡಲಿದ್ದು, ಈ ಬಾರಿ ಹಲವು ಬದಲಾವಣೆಗಳನ್ನು ಮಾಡಲಾಗಿದೆ. ಸುಮಾರು 600ಕ್ಕೂ ಹೆಚ್ಚು ಪ್ರದರ್ಶಕರಿದ್ದು, ಇದರಲ್ಲಿ 78 ವಿದೇಶಿ ಕಂಪನಿಗಳಿವೆ. ದೇಶದ ರಕ್ಷಣಾ ಸಂಸ್ಥೆಗಳಾದ ಡಿಆರ್‍ಡಿಒ, ಎಲ್‍ಆರ್‍ಡಿಇ ಇಸ್ರೋ, ಎನ್‍ಎಎಲ್, ಎಚ್‍ಎಎಲ್, ಬಿಎಚ್‍ಇಎಲ್, ಬಿಇಎಲ್ ಸೇರಿದಂತೆ …

Read More »

ಫೆ. 28ಕ್ಕೆ F.D.A. ಪರೀಕ್ಷೆ…

ಬೆಂಗಳೂರು: ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಮುಂದೂಡಲಾಗಿದ್ದ ಪ್ರಥಮ ದರ್ಜೆ ಸಹಾಯಕ (ಎಫ್‍ಡಿಎ) ಹುದ್ದೆಯ ಪರೀಕ್ಷೆಯನ್ನು ಫೆ. 28ಕ್ಕೆ ನಡೆಸಲು ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ತೀರ್ಮಾನಿಸಿದೆ. ಕೆಪಿಎಸ್‍ಸಿ ಕಚೇರಿಯಿಂದಲೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಕಾರಣ ಜ. 24ರಂದು ನಡೆಯಬೇಕಿದ್ದ ಪರೀಕ್ಷೆಯನ್ನು ಮುಂದೂಡಲಾಗಿತ್ತು. ಪರೀಕ್ಷೆಯ ಹಿಂದಿನ ದಿನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಮಾಹಿತಿ ಸಿಸಿಬಿ ಪೊಲೀಸರಿಗೆ ಸಿಕ್ಕಿತ್ತು. ಹೀಗಾಗಿ, ಪರೀಕ್ಷೆಯನ್ನು ದಿಢೀರ್ ಮುಂದೂಡಲಾಗಿತ್ತು.  ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಕೆಪಿಎಸ್‌ಸಿ ಪರೀಕ್ಷಾ ನಿಯಂತ್ರಕರ …

Read More »

ಕೇಂದ್ರ ಸರ್ಕಾರದ ವಿರುದ್ಧ ಪರೋಕ್ಷ ವಾಗ್ದಾಳಿ ಕೇಂದ್ರದ ವಿರುದ್ಧ ಕುಹಕವಾಡಿದ ಬಿಜೆಪಿ ಸಂಸದ

ನವದೆಹಲಿ: ದಿನದಿಂದ ದಿನಕ್ಕೆ ತೈಲ ಬೆಲೆ ಗಗನಮುಖಿಯಾಗುತ್ತಿದ್ದು, ಇದರ ಬೆನ್ನಲ್ಲೇ ಇದೀಗ ಕೇಂದ್ರ ಬಿಜೆಪಿ ಸರ್ಕಾರ ಸೆಸ್ ವಿಧಿಸಿ ಇನ್ನಷ್ಟು ಬೆಲೆ ಏರಿಕೆ ಮಾಡಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿರುವ ಬಿಜೆಪಿ ಸಂಸದ ಸುಬ್ರಹ್ಮಣ್ಯಂ ಸ್ವಾಮಿ, ರಾಮಾಯಣದ ಸಾದೃಶ ಉದಾಹರಣೆ ಮೂಲಕ ಕೇಂದ್ರದ ನಡೆಯನ್ನು ಟೀಕಿಸಿದ್ದಾರೆ. ರಾಮನ ಭಾರತದಲ್ಲಿ ಪೆಟ್ರೋಲ್ ದರ 93 ರೂ. ಸೀತೆಯ ನೇಪಾಳದಲ್ಲಿ ಪೆಟ್ರೋಲ್ ಬೆಲೆ 53 ರೂ. ಆದರೆ …

Read More »

ಬೆಳಗಾವಿಗೆ ರೈಲ್ವೆ ಸೌಲಭ್ಯಕ್ಕೆ ವಿಶೇಷ ಗಮನ ನೀಡಬೇಕೆಂದು ಮನವಿ

ಮೂಡಲಗಿ: ಕುಂದಾನಗರಿ ಬೆಳಗಾವಿ ಜಿಲ್ಲೆ ಹಾಗೂ ಸುತ್ತಲಿನ ವಿವಿಧ ಜಿಲ್ಲೆಗಳ ಸಾರ್ವಜನಿಕರ ಅನುಕೂಲಕ್ಕಾಗಿ ಗೋವಾ-ಮಂಗಳೂರ ಮತ್ತು ಮೈಸೂರ ಈ ಮೂರು ನಗರಗಳಿಗೆ ರೈಲು ಓಡಾಟ ಶೀಘ್ರ ಆರಂಭಿಸಬೇಕು ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರು ಕೇಂದ್ರ ರೈಲ್ವೆ ಸಚಿವ ಪಿಯೂಷ ಗೊಯಲ್ ಅವರಿಗೆ ಮನವಿ ಪತ್ರ ನೀಡಿ ಒತ್ತಾಯಿಸಿದರು. ಮಂಗಳವಾರ (ಫೆ.೨) ದಂದು ಕೇಂದ್ರ ರೈಲ್ವೆ ಸಚಿವ ಪಿಯೂಷ್ ಗೊಯಲ್ ಅವರ ನವದೆಹಲಿ ಕಛೇರಿಗೆ ಭೇಟಿ ನೀಡಿದ ಅವರು, …

Read More »

ಕುರುಬ ಸಮುದಾಯಕ್ಕೆ ಎಸ್‍ಟಿ ಮೀಸಲಾತಿಗೆ ಒತ್ತಾಯ ವಿಧಾನಸಭೆಯಲ್ಲಿ ಧರಣಿ

ಬೆಂಗಳೂರು,ಫೆ.2-ಪಂಚಮಸಾಲಿ ಸಮುದಾಯಕ್ಕೆ 2ಎ ಹಾಗೂ ಕುರುಬ ಸಮುದಾಯಕ್ಕೆ ಎಸ್ಟಿ ಮೀಸಲಾತಿ ಕಲ್ಪಿಸಬೇಕು ಎಂಬ ವಿಚಾರ ವಿಧಾನಸಭೆಯಲ್ಲಿಂದು ಪ್ರತಿಧ್ವನಿಸಿ ಪಕ್ಷ ಬೇಧ ಮರೆತು ಕೆಲ ಕಾಲ ಧರಣಿ ನಡೆಸಿದ ಘಟನೆ ಜರುಗಿತು. ಶೂನ್ಯವೇಳೆಯಲ್ಲಿ ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ಪ್ರಸ್ತಾಪಿಸಿದ ವಿಚಾರಕ್ಕೆ ಪಕ್ಷ ಬೇಧ ಮರೆತು ಶಾಸಕರು ಧ್ವನಿಗೂಡಿಸಿ ಸರ್ಕಾರದಿಂದ ಸ್ಪಷ್ಟ ಉತ್ತರಕ್ಕೆ ಆಗ್ರಹಿಸಿ ಸಭಾಧ್ಯಕ್ಷರ ಪೀಠದ ಮುಂದಿನ ಬಾವಿಗಿಳಿದು ಧರಣಿ ನಡೆಸಿದರು. ಇದಕ್ಕೂ ಮುನ್ನ ವಿಷಯ ಪ್ರಸ್ತಾಪಿಸಿದ ಬಸವನಗೌಡ ಪಾಟೀಲ್ …

Read More »

ಎಟಿಎಂ ನಲ್ಲಿ ಮಹಿಳೆ ಮೇಲೆ ಹಲ್ಲೆ ಮಾಡಿದ್ದ ಮಧುಕರ್ ರೆಡ್ಡಿಗೆ 12 ವರ್ಷ ಜೈಲು ಶಿಕ್ಷೆ 8 ವರ್ಷಗಳ ಹಿಂದಿನ ಪ್ರಕರಣಕ್ಕೆ ಇಂದು ತೀರ್ಪು

ಬೆಂಗಳೂರು: 2013ರಲ್ಲಿ ಜ್ಯೋತಿ ಉದಯ ಎಂಬುವರ ಮೇಲೆ ಎಟಿಎಂ ನಲ್ಲಿ ಭೀಕರವಾಗಿ ಹಲ್ಲೆ ಮಾಡಿದ್ದ ಮಧುಕರ್ ರೆಡ್ಡಿಗೆ ಒಟ್ಟು 12 ವರ್ಷ ಜೈಲು ಶಿಕ್ಷೆ ವಿಧಿಸಿ ಸಿಸಿಎಚ್ ಕೋರ್ಟ್‌ ಮಂಗಳವಾರ ತೀರ್ಪು ನೀಡಿದೆ.   ಅಪರಾಧಿ ಮಧುಕರ್ ಗೆ ದರೋಡೆ ಆರೋಪದಡಿ 10 ವರ್ಷ ಶಿಕ್ಷೆ ವಿಧಿಸಿದ ಕೋರ್ಟ್,​ ಸಾಕ್ಷ್ಯ ನಾಶ ಮಾಡಿದ್ದಕ್ಕೆ 2 ವರ್ಷ ಶಿಕ್ಷೆ ಸಹ ವಿಧಿಸಿದೆ. ಆದರೆ, ಎರಡೂ ಶಿಕ್ಷೆಯನ್ನು ಜೊತೆಯಲ್ಲೇ ಅನುಭವಿಸಬೇಕಾಗಿರುವುದರಿಂದ ಮಧುಕರ್​ ರೆಡ್ಡಿ …

Read More »

ಇಂಜಿನಿಯರ್ ಖಜಾನೆ‌ ಬಗೆದಷ್ಟು ಬಯಲು: ಕಂತೆ ಕಂತೆ ಹಣ ಕಂದು ದಂಗಾದ ಅಧಿಕಾರಿಗಳು!

ಹುಬ್ಬಳ್ಳಿ: ಸಣ್ಣ ನೀರಾವರಿ ಇಲಾಖೆಯ ಇಇ ದೇವರಾಜ ಕೆ. ಶಿಗ್ಗಾಂವಿ ನಿವಾಸದ ಮೇಲೆ ದಾಳಿ ನಡೆಸಿದ ಅಧಿಕಾರಿಗಳೇ ಒಂದು ದಂಗಾಗಿದ್ದಾರೆ. ಅಧಿಕಾರಿಯ ಖಜಾನೆ‌ ಬಗೆದಷ್ಟು ಬಯಲಾಗಯತ್ತಿದ್ದು, ಬ್ಯಾಂಕ್ ಲಾಕರ್​ನಲ್ಲಿ ಲಕ್ಷಾಂತರ ಮೌಲ್ಯದ ಗರಿ ಗರಿ ನೋಟುಗಳು ಪತ್ತೆ‌ಯಾಗಿವೆ. ಎಇಇ ದೇವರಾಜ ಕೆ. ಶಿಗ್ಗಾಂವಿ ಮನೆ ಮತ್ತು ತಾಯಿ ಹಾಗೂ ಮಾವನ ಮನೆಗಳ ಮೇಲೂ ಎಸಿಬಿ ದಾಳಿ ಮಾಡಿದೆ. ಈ ವೇಳೆ 27 ಎಕರೆ ಆಸ್ತಿ ಖರೀದಿ ಮಾಡಿದ ದಾಖಲೆ ಪತ್ತೆ‌ಯಾಗಿದೆ. …

Read More »

ಗೋಕಾಕ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಶಾಸಕ ಸತೀಶ್ ಜಾರಕಿಹೊಳಿ ಭೇಟಿ

ಗೋಕಾಕ : ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ  ಸುಧಾರಣ ಸಮಿತಿ ಅಧ್ಯಕ್ಷ, ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಮಂಗಳವಾರ ಭೇಟಿ ನೀಡಿ, ಪರಿಶೀಲಿಸಿದರು. ಕಾಲೇಜು ಪ್ರಾಂಶುಪಾಲರು, ಸಿಬ್ಬಂದಿಯೊಂದಿಗೆ ವಿದ್ಯಾರ್ಥಿಗಳ ವಿದ್ಯಾಭ್ಯಾಸ ಹಾಗೂ ಪ್ರವೇಶ ಪಡೆದಿರುವ ಕುರಿತು ಮಾಹಿತಿ ಪಡೆದರು. ಬಳಿಕ ನೂತನ ಕಟ್ಟಡದ ಗುಣಮಟ್ಟವನ್ನು ಪರಿಶೀಲನೆ ಮಾಡಿದರು. ತದನಂತರ ಕಾಲೇಜು ಅಭಿವೃದ್ಧಿಗೆ ಮಾಡಬೇಕಾದ ಯೋಜನೆಗಳ ಕುರಿತು ಪ್ರಾಂಶುಪಾಲರೊಂದಿಗೆ ಚರ್ಚಿಸಿ, ಹಲವು ಸಲಹೆಗಳನ್ನು ನೀಡಿದರು. ಇದೇ ವೇಳೆ ಕಾಲೇಜ್ ಸಿಬ್ಬಂದಿ …

Read More »

ಸೈನಿಕನ ಕುಟುಂಬಸ್ಥರ ಮೇಲೆ ಬೆಳಗಾವಿ ಬಿಜೆಪಿ ಮುಖಂಡನ ದರ್ಪ : ಕಬ್ಬಿಣ ರಾಡ್ ನಿಂದ ಹಲ್ಲೆ !

  ಬೆಳಗಾವಿ : ಆಸ್ತಿ ವಿಚಾರವಾಗಿ ಬೆಳಗಾವಿ ಮಹಾನಗರ ಘಟಕದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮುರುಘೇಂದ್ರಗೌಡ ಪಾಟೀಲ ನಮ್ಮ ಕುಟುಂಬದ ಮೇಲೆ ಹಲ್ಲೆ ಮಾಡಿದ್ದಾನೆ. ಪೊಲೀಸ್ ಠಾಣೆಗೆ ದೂರು ನೀಡಲು ಹೋದರೆ ಅಧಿಕಾರಿಗಳು ಕೇಸ್ ತೆಗೆದುಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ ಎಂದು ಸೈನಿಕ ಭೀಮ್ಮಪ್ಪಾ ನರಸಗೌಡ ಕುಟುಂಬಸ್ಥರು ಆರೋಪಿಸಿದ್ದಾರೆ. ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮಾಧ್ಯಮದವರ ಮುಂದೆ ಅಳಲು ತೊಡಿಕೊಂಡ ಸೈನಿಕ ಕುಟುಂಬ ನ್ಯಾಯಕ್ಕಾಗಿ ಅಂಗಲಾಚಿದ್ದಾರೆ. ಅತ್ತ ಸೇನೆಯಲ್ಲಿ ಸೈನಿಕ ಸೇವೆ …

Read More »