Breaking News

ರಾಜ್ಯ

ಕೇಂದ್ರ ಬಜೆಟ್ : ಜ.30ರಂದು ಪ್ರಧಾನಿ ಮೋದಿ ಸರ್ವಪಕ್ಷ ಸಭೆ

ಹೊಸದಿಲ್ಲಿ : ಫೆಬ್ರವರಿ 1 ರಂದು 2021-2022ನೇ ಸಾಲಿನ ಕೇಂದ್ರ ಬಜೆಟ್ ಮಂಡನೆಯಾಗಲಿದ್ದು, ಈ ಹಿನ್ನೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಜನವರಿ 30 ರಂದು ಸರ್ವಪಕ್ಷ ಸಭೆ ಕರೆದಿದ್ದಾರೆ. ಕೊರೋನಾ ಸಾಂಕ್ರಾಮಿಕ ರೋಗ ಹಿನ್ನೆಲೆಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ಮೋದಿಯವರು ಸರ್ವಪಕ್ಷ ಸಭೆ ನಡೆಸಲಿದ್ದಾರೆಂದು ವರದಿಗಳು ತಿಳಿಸಿವೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 1 ರಂದು ಕೇಂದ್ರ ಬಜೆಟ್ 2021-22 ಅನ್ನು ಮಂಡಿಸಲಿದ್ದಾರೆ. ಬಜೆಟ್ ಅಧಿವೇಶನವು …

Read More »

ಆಸ್ತಿ ವಿವಾದ : ಬೆಳಗಾವಿಯಲ್ಲಿ 4 ವರ್ಷದ ಬಾಲಕನ ಕೊಲೆಗೈದ ಪಾಪಿ

    ಬೆಳಗಾವಿ : ಆಸ್ತಿ ವಿವಾದಕ್ಕೆ ಸಮಂಧಿಸಿದಂತೆ 4 ವರ್ಷದ ಬಾಲಕನನ್ನ ಕೊಲೆ ಮಾಡಿದ ಘಟನೆ ಸವದತ್ತಿ ತಾಲ್ಲೂಕಿನ ಹಾರುಗೊಪ್ಪ ಗ್ರಾಮದಲ್ಲಿ ನಡೆದಿದೆ. ಮಾರುತಿ ವಿರೇಶ್ ಸಂಕಣ್ಣವರ ಹತ್ಯೆಯಾದ ಬಾಲಕ. ಈರಪ್ಪ ಬಸಪ್ಪ ಸಂಕಣ್ಣ(35) ಕೊಲೆ ಆರೋಪಿಯಾಗಿದ್ದು, ಹೆಚ್ಚಿನ ಮಾಹಿತಿ ತನಿಖೆಯಿಂದ ತಿಳಿದು ಬರಬೇಕಿದೆ. ಸ್ಥಳಕ್ಕೆ ಮುರಗೋಡ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ, ತನಿಖೆ‌ ನಡೆಸಿದ್ದಾರೆ.

Read More »

ಇನ್ನು ಮುಂದೆ ಉಚಿತವಾಗಿ ಸಿಗಲ್ಲ ಅನ್ನಭಾಗ್ಯದ ಅಕ್ಕಿ

ಬೆಂಗಳೂರು : ಬಡತನ ರೇಖೆಗಿಂತ ಕೆಳಗಿರುವ(ಬಿಪಿಎಲ್) ಕುಟುಂಬಗಳಿಗೆ ಅನ್ನಭಾಗ್ಯ ಯೋಜನೆಯಡಿ ಈವರೆಗೂ ನೀಡಲಾಗುತ್ತಿದ್ದ ಉಚಿತ ಅಕ್ಕಿಗೆ ಇನ್ನು ಮುಂದೆ ಹಣ ಪಾವತಿಸಬೇಕಾಗುತ್ತದೆ. ಅನ್ನಭಾಗ್ಯ ಯೋಜನೆಯಿಂದ ಸರಕಾರಕ್ಕೆ ಪ್ರತಿ ತಿಂಗಳು 120 ಕೋಟಿ ರೂ. ವೆಚ್ಚವಾಗುತ್ತಿದೆ. ಆದರೆ ಇಷ್ಟೆಲ್ಲಾ ವೆಚ್ಚ ಮಾಡಿದರೂ ಯೋಜನೆ ದುರ್ಬಳಕೆ ಆಗುತ್ತಿದ್ದು, ಅಕ್ಕಿ ದರ ವಿಧಿಸಿ ಪ್ರಯೋಗಿಸಿದರೆ ಹೇಗೆ ಎಂಬ ಚಿಂತನೆಯಲ್ಲಿ ತೊಡಗಿದೆ. ಈಗಾಗಲೇ ಇಲಾಖೆ ಮಟ್ಟದಲ್ಲಿ ಚರ್ಚೆ ನಡೆಸಲಾಗಿದ್ದು, ಅಂತಿಮವಾಗಿ ಮುಖ್ಯ ಮಂತ್ರಿ ಯಡಿಯೂರಪ್ಪ ಅವರು …

Read More »

ಯತ್ನಾಳ್ ಇನ್ನು ಮುಂದೆ ಬಾಯಿ ಮುಚ್ಚದಿದ್ರೆ ಕೇಂದ್ರ ನಾಯಕರು ಸೂಕ್ತ ಕ್ರಮ ಕೈಗೊಳ್ಳುವುದು ನಿಶ್ಚಿತ: ಡಿ.ವಿ.ಸದಾನಂದ ಗೌಡ

ಮಂಗಳೂರು: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಇನ್ನು ಮುಂದೆ ಬಾಯಿ ಮುಚ್ಚದಿದ್ರೆ ಕೇಂದ್ರ ನಾಯಕರು ಸೂಕ್ತ ಕ್ರಮ ಕೈಗೊಳ್ಳುವುದು ನಿಶ್ಚಿತ ಎಂದು ಕೇಂದ್ರ ರಸಗೊಬ್ಬರ ಖಾತೆ ಸಚಿವ ಡಿ.ವಿ.ಸದಾನಂದ ಗೌಡ ಎಚ್ಚರಿಸಿದ್ದಾರೆ. ಪುತ್ತೂರಿನಲ್ಲಿ ಜನಸೇವಕ ಸಮಾವೇಶದಲ್ಲಿ ಭಾಗವಹಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿ, ನಾನು ಪಕ್ಷದ ರಾಜ್ಯಾಧ್ಯಕ್ಷನಾಗಿದ್ದ ಸಂದರ್ಭದಲ್ಲೂ ಯತ್ನಾಳ್ ಇದೇ ರೀತಿ ಹೇಳಿಕೆ ನೀಡುತ್ತಿದ್ದರು. ಹಲವು ಎಚ್ಚರಿಕೆಯ ಬಳಿಕವೂ ಅವರು ತಮ್ಮ ವರ್ತನೆ ಸರಿಪಡಿಸಿಕೊಳ್ಳದ ಕಾರಣ ನಾನೇ ಅವರನ್ನು 6 …

Read More »

ಸ್ಮಶಾನಕ್ಕಾಗಿ ತಹಶೀಲ್ದಾರ್ ಕಚೇರಿ ಎದುರು ಶವವಿಟ್ಟು ಪ್ರತಿಭಟನೆ

ಮಂಡ್ಯ: ಸ್ಮಶಾನಕ್ಕಾಗಿ ಆಗ್ರಹಿಸಿ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕಾರೇಕುರ ಗ್ರಾಮಸ್ಥರು ತಹಶೀಲ್ದಾರ್ ಕಚೇರಿ ಎದುರು ಶವವಿಟ್ಟು ಪ್ರತಿಭಟನೆ ನಡೆಸಿದ ಘಟನೆ ಜರುಗಿದೆ. ಕಾರೇಕುರ ಗ್ರಾಮದ ಪುಟ್ಟಮ್ಮ ಎಂಬವರು ಅನಾರೋಗ್ಯಕ್ಕೆ ತುತ್ತಾಗಿ ಸೋಮವಾರ ಮೃತಪಟ್ಟಿದ್ದರು. ಐದಾರು ದಶಕಗಳಿಂದ ಅಂತ್ಯಸಂಸ್ಕಾರ ನಡೆಸುತ್ತಿದ್ದ ಬೆಳಗೋಳ ಗ್ರಾಮ ವ್ಯಾಪ್ತಿಯ ಸರ್ವೆ ನಂ. 342ರ ಜಾಗದಲ್ಲಿ ಅಂತ್ಯಕ್ರಿಯೆ ನಡೆಸಲು ಮುಂದಾದಾಗ ಥಾಮಸ್ ಮ್ಯಾಥ್ಯೂ ಎಂಬವರು ತಡೆದಿದ್ದಾರೆ. ಇದರಿಂದ ಆಕ್ರೋಶಗೊಂಡ ಗ್ರಾಮಸ್ಥರು ಶವವನ್ನು ಶ್ರೀರಂಗಪಟ್ಟಣ ತಹಶೀಲ್ದಾರ್ ಕಚೇರಿ …

Read More »

ಮುಡಾ ನಿವೇಶನಗಳ ಅಭಿವೃದ್ಧಿಗೆ ಒನ್ ಟೈಂ ಸೆಟ್ಲಮೆಂಟ್

ಮೈಸೂರು, ಜನವರಿ 19: “ಮೈಸೂರು ನಗರಾಭಿವೃದ್ಧಿಗೆ ನಮ್ಮ ಸರ್ಕಾರದಿಂದ ಏನಾಗಬೇಕು ಎಂಬುದನ್ನು ನೋಡಿಕೊಳ್ಳುತ್ತೇವೆ. ಮುಡಾಕ್ಕೆ ಇರುವ ಅಡೆತಡೆಯನ್ನು ತೊಡೆದುಹಾಕುವ ವಿಷಯದಲ್ಲಿ ನಾನು ಪರವಾಗಿರುತ್ತೇನೆ” ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್. ಟಿ. ಸೋಮಶೇಖರ್ ಹೇಳಿದರು. ಮಂಗಳವಾರ ವಿಜಯನಗರ ಬಡಾವಣೆ ಪರಿಶೀಲನೆ ಬಳಿಕ ಮಾತನಾಡಿದ ಸಚಿವರು, “ಒಂದು ವೇಳೆ ಈಗಿರುವ ಅಡೆತಡೆಗಳನ್ನು ತೆಗೆದರೆ ಬಹುತೇಕ ಎಲ್ಲ ಸಮಸ್ಯೆಗಳಿಗೆ ಶೀಘ್ರದಲ್ಲಿಯೇ ಪರಿಹಾರ ಸಿಗಲಿದೆ. ಅಲ್ಲದೆ, ವಿಜಯನಗರ ಬಡಾವಣೆಯನ್ನು ಕಾರ್ಪೋರೇಶನ್‌ಗೆ ಸೇರಿಸಬೇಕು ಎಂಬ …

Read More »

ನಿಧಿ ಸಮರ್ಪಣಾ ಅಭಿಯಾನಕ್ಕೆ ಚಾಲನೆ ನೀಡಿದ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ : ಬಹುನಿರೀಕ್ಷಿತ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನೂತನ ಕಟ್ಟಡಕ್ಕೆ ಅರಭಾವಿ ಮತಕ್ಷೇತ್ರದಿಂದ ಹೆಚ್ಚಿನ ಪ್ರಮಾಣದಲ್ಲಿ ದೇಣಿಗೆ ಸಂಗ್ರಹ ಮಾಡಿಸಿಕೊಡುವುದಾಗಿ ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಅಯೋಧ್ಯೆಯಲ್ಲಿ ಐತಿಹಾಸಿಕ ಶ್ರೀರಾಮ ಮಂದಿರ ನಿರ್ಮಾಣಕ್ಕಾಗಿ ಇಲ್ಲಿಯ ಶಿವಬೋಧರಂಗ ಮಠದಲ್ಲಿ ಸೋಮವಾರದಂದು ಮಹಾ ನಿಧಿ ಸಮರ್ಪಣಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ನೂರಾರು ವರ್ಷಗಳ ಭಾರತೀಯರ ಕನಸನ್ನು ಈಡೇರಿಸಿ ಅಯೋಧ್ಯೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಅಗಸ್ಟ್ …

Read More »

ಇದೇನಾದರೂ ಜಾರಿ ಆಯ್ತು ಅಂದ್ರೆ ನೀವು ಟ್ರಾಫಿಕ್​ ರೂಲ್ಸ್ ಬ್ರೇಕ್​ ಮಾಡೋಕೂ ಯೋಚ್ನೆ ಮಾಡ್ತೀರಿ!

ನವದೆಹಲಿ: ಕಾನೂನು ಹೇಗೇ ಇದ್ದರೂ, ದಂಡ ಎಷ್ಟೇ ಇದ್ದರೂ ವಾಹನ ಸವಾರರು ಒಮ್ಮೊಮ್ಮೆ ಸರಾಗವಾಗಿ ಸಂಚಾರ ನಿಯಮ ಉಲ್ಲಂಘಿಸಿ ಬಿಡುತ್ತಾರೆ. ಆದರೆ ಇದೀಗ ಟ್ರಾಫಿಕ್​ ರೂಲ್ಸ್​ ಪಾಲನೆ ಮಾಡಿಸುವ ನಿಟ್ಟಿನಲ್ಲಿ ಹೀಗೊಂದು ಚಿಂತನೆ ನಡೆದಿದ್ದು, ಒಂದು ವೇಳೆ ಇದೇನಾದರೂ ಜಾರಿಯಾದರೆ ಬಹಳಷ್ಟು ಮಂದಿ ಟ್ರಾಫಿಕ್​ ರೂಲ್ಸ್ ಬ್ರೇಕ್​ ಮಾಡುವುದು ಕಡಿಮೆಯಾಗುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ. ಭಾರತೀಯ ವಿಮಾ ನಿಯಂತ್ರಣ ಹಾಗೂ ಅಭಿವೃದ್ಧಿ ಪ್ರಾಧಿಕಾರ (ಐಆರ್​ಡಿಎಐ) ನೇಮಿಸಿರುವ ಸಮಿತಿಯೊಂದು ಇಂಥದ್ದೊಂದು ಪ್ರಸ್ತಾವ …

Read More »

ಬ್ರೇಕ್ ಫೇಲ್ ಆದ ಸರಕು ತುಂಬಿದ ಟ್ರಕ್ ನ್ನು 3 ಕಿ.ಮೀ ರಿವರ್ಸ್ ಓಡಿಸಿದ ಚಾಲಕ

ಮಹಾರಾಷ್ಟ್ರ: ಬ್ರೇಕ್ ಫೇಲ್ ಆದ ಟ್ರಕ್ ಒಂದನ್ನು ಚಾಲಕ 3 ಕಿಲೋಮೀಟರ್ ದೂರದವರೆಗೆ ರಿವರ್ಸ್ ನಲ್ಲಿ ಓಡಿಸಿದ್ದು, ಆಕ್ಸಿಡೆಂಟ್ ಅಪಾಯದಿಂದ ತಪ್ಪಿಸಿ ಸಮರ್ಪಕವಾಗಿ ನಿಲ್ಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸರಕು ತುಂಬಿದ ಟ್ರಕ್ ಇದಕ್ಕಿದ್ದಂತೆ ಬ್ರೇಕ್ ಫೇಲ್ ಆಗಿದೆ. ಆ ವಾಹನ ರಿವರ್ಸ್ ಗೇರ್‌ನಲ್ಲಿದ್ದ ಕರಣ ನಿಲ್ಲಿಸುವುದು ಇನ್ನು ಕಷ್ಟವಾಗಿ ಪರಿವರ್ತನೆಯಾಗಿತ್ತು. ಅದು ಕೂಡ ಕಿರಿದಾದ ರಸ್ತೆ, ಜೊತೆಗೆ ವಾಹನ ಸಂಚಾರ ಇರುವ ರಸ್ತೆಯಲ್ಲಿ ವಾಹನಗಳು ಎಂದಿನಂತೆ ಓಡಾಡುತ್ತಲೇ ಇದೆ. ಇಂತಹ ರಸ್ತೆಯಲ್ಲಿ …

Read More »

“ಸಿದ್ದರಾಮಯ್ಯಗೆ ಕೆಲಸ ಇಲ್ಲದೆ ಜ್ಯೋತಿಷ್ಯ ಕಲಿಯುತ್ತಿರಬೇಕು”

ಮೈಸೂರು,ಜ.19- ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯಾವಾಗ ಜ್ಯೋತಿಷ್ಯ ಹೇಳುತ್ತಿದ್ದರೋ ಗೊತ್ತಿಲ್ಲ. ಈಗ ವಿರೋಧ ಪಕ್ಷದ ನಾಯಕರಾಗಿದ್ದರೂ ಕೆಲಸ ಇಲ್ಲದೆ ಜ್ಯೋತಿಷ್ಯ ಕಲಿಯುತ್ತಿರಬೇಕು. ಅದಕ್ಕೆ ಮುಖ್ಯಮಂತ್ರಿಗಳ ಬದಲಾವಣೆ ಬಗ್ಗೆ ಮಾತನಾಡುತ್ತಿರಬೇಕು ಎಂದು ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಹೇಳಿದರು. ಸಿದ್ದರಾಮಯ್ಯ ಅವರಿಗೆ ಈಗ ಪುರುಸೊತ್ತು ಇರಬೇಕು. ವಿರೋಧ ಪಕ್ಷದ ನಾಯಕರಾಗಿ ಮಾಡಬೇಕಾದ ಕೆಲಸವನ್ನು ಮಾಡುವುದು ಬಿಟ್ಟು ಇಲ್ಲಸಲ್ಲದ ಹೇಳಿಕೆ ನೀಡುತ್ತಿದ್ದಾರೆ. ಮೊದಲಿಗೆ ಅವರ ಪಕ್ಷದಲ್ಲಾಗುತ್ತಿರುವುದನ್ನು …

Read More »