ಜನವರಿ 26ರಂದು ಗಣರಾಜ್ಯೋತ್ಸವ ನಿಮಿತ್ಯ ರಾಷ್ಟ್ರಧ್ವಜಕ್ಕೆ ಆಗುವ ಅವಮಾನ ತಡೆಗಟ್ಟುವ ನಿಟ್ಟಿನಲ್ಲಿ ಸುಪ್ರೀಂಕೋರ್ಟ ಆದೇಶದಂತೆ ಪ್ಲಾಸ್ಟಿಕ್ ಧ್ವಜವನ್ನು ಕಟ್ಟು ನಿಟ್ಟಾಗಿ ನಿರ್ಬಂಧಿಸಬೇಕು ಎಂದು ಆಗ್ರಹಿಸಿ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಗುರುವಾರ ಬೆಳಗಾವಿ ಡಿಸಿ ಕಚೇರಿಗೆ ಆಗಮಿಸಿದ ಹಿಂದೂ ಜನಜಾಗೃತಿ ಸಮಿತಿ ಪದಾಧಿಕಾರಿಗಳು ರಾಷ್ಟ್ರಧ್ವಜವು ರಾಷ್ಟ್ರದ ಗೌರವದ ಪ್ರತೀಕವಾಗಿದೆ. ಆದರೆ ದುರ್ದೈವದ ಸಂಗತಿ ಎಂದರೆ ಹೆಚ್ಚಿನ ಭಾರತೀಯರಿಗೆ ರಾಷ್ಟ್ರಧ್ವಜ ನೆನಪಾಗುವುದು ಆಗಸ್ಟ್ 15 ಹಾಗೂ ಜನವರಿ …
Read More »ಅಬಕಾರಿ ಖಾತೆ ನಂಗೆ ಬೇಕಿಲ್ಲ: M.T.B.
ಬೆಂಗಳೂರು, ಜ.21- ಖಾತೆ ಹಂಚಿಕೆ ಬೆನ್ನಲ್ಲೇ ಸಚಿವರಲ್ಲಿ ಅಸಮಾಧಾನ ಸ್ಫೋಟಗೊಂಡಿದ್ದು, ಅಬಕಾರಿ ಇಲಾಖೆ ನನಗೆ ಬೇಡ. ಅದರಲ್ಲಿ ಮಾಡುವ ಕೆಲಸ ಏನೂ ಇಲ್ಲ ಎಂದು ಎಂ.ಟಿ.ಬಿ.ನಾಗರಾಜ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ವಸತಿ ಖಾತೆಗೆ ರಾಜೀನಾಮೆ ನೀಡಿ ಬಂದಿದ್ದೇನೆ. ಸಿಎಂ ಉತ್ತಮ ಖಾತೆ ನೀಡುವ ಭರವಸೆ ನೀಡಿದ್ದರು. ಆದರೆ, ಈಗ ಅಬಕಾರಿ ಖಾತೆ ನೀಡಿದ್ದಾರೆ. ನನಗೆ ಈ ಖಾತೆ ಬೇಡ ಎಂದು ಹೇಳಿಬಂದಿದ್ದೇನೆ. ಅಬಕಾರಿಯಲ್ಲಿ ಮಾಡುವ ಕೆಲಸ ಏನಿದೆ? …
Read More »ಯುವತಿಯರು ಅರೆಸ್ಟ್.. ಮಾನವ ಹಕ್ಕು ಮತ್ತು ಮಾಧ್ಯಮದ ಹೆಸರಲ್ಲಿ ವೈದ್ಯರಿಗೆ ಬ್ಲ್ಯಾಕ್ಮೇಲ್!
ಮೈಸೂರು: ಮಾನವ ಹಕ್ಕುಗಳು ಮತ್ತು ಮಾಧ್ಯಮದ ಹೆಸರಲ್ಲಿ ವೈದ್ಯರಿಗೆ ಬ್ಲ್ಯಾಕ್ಮೇಲ್ ಒಡ್ಡಿ ಕೆ.ಆರ್.ಆಸ್ಪತ್ರೆ ವೈದ್ಯರಿಂದ ಹಣ ವಸೂಲಿ ಮಾಡಲು ಹೊರಟ ಆರೋಪಿಗಳನ್ನು ಬಂಧಿಸಲಾಗಿದೆ. ಕೆ.ಆರ್ ಆಸ್ಪತ್ರೆಯ ವೈದ್ಯರಾದ ಡಾ.ರಾಜೇಶ್ ಎಂಬವರಿಗೆ ಮಾಧ್ಯಮದ ಹೆಸರಿನಲ್ಲಿ, ಸುವರ್ಣ ಕಾವೇರಿ ಎಕ್ಸ್ಪ್ರೆಸ್ ಸುದ್ದಿವಾಹಿನಿಯಲ್ಲಿ ರಾಜಕೀಯ ವರದಿಗಾರ್ತಿ ಆಯಿಷಾ ಬಾಯಿ ಮತ್ತು ಕ್ರೈಂ ವರದಿಗಾರ್ತಿ ಅಮ್ರೀನ್ ಹಾಗೂ ಶಹೀನಾ ನವೀದ್ಎಂದು ನಕಲಿ ಗುರುತಿನ ಚೀಟಿಯನ್ನು ಸಿದ್ಧಪಡಿಸಿಕೊಂಡು ಬೆದರಿಕೆ ಒಡ್ಡಿದ್ದಾರೆ. ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಲು ನೀವು …
Read More »ಬೆಳಗಾವಿಯಲ್ಲಿ ಪುಂಡಾಟ ಮೆರೆದ ‘ಶಿವಸೇನೆ ಪುಂಡ’ರನ್ನು ಬಂಧಿಸಿ – ವಾಟಾಳ್ ನಾಗರಾಜ್
ಬೆಂಗಳೂರು : ಬೆಳಗಾವಿಯಲ್ಲಿ ಭಗವಾ ಧ್ವಜ ಸ್ತಂಭ ನೆಡಲು ಶಿವಸೇನೆ ಯತ್ನಿಸಿದ್ದು ಖಂಡನೀಯ. ಇದಕ್ಕೆಲ್ಲಾ ಕಾರಣ ಬೆಳಗಾವಿ ಜಿಲ್ಲೆ ರಾಜಕಾರಣಿಗಳು. ಬೆಳಗಾವಿಯಲ್ಲಿ ಪುಂಡಾಟ ಮೆರೆದಂತ ಶಿವಸೇನೆ ಪುಂಡರನ್ನು ಬಂಧಿಸುವಂತೆ ನಾಳೆ ಮೈಸೂರು ಬ್ಯಾಂಕ್ ಸರ್ಕಲ್ ನಲ್ಲಿ ಪ್ರತಿಭಟನ ನಡೆಸುವುದಾಗಿ ಕನ್ನಡ ಚಳುವಳಿ ಪಕ್ಷದ ವಾಟಾಳ್ ನಾಗರಾಜ್ ಹೇಳಿದ್ದಾರೆ. ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿಯಲ್ಲಿ ಪುಂಡಾಟ ಮೆರೆದಂತ ಶಿವಸೇನೆ ಪುಂಡರನ್ನು ಬಂಧಿಸಬೇಕು. ಇದಕ್ಕೆಲ್ಲಾ ಬೆಳಗಾವಿ ಜಿಲ್ಲೆ ರಾಜಕಾರಣಿಗಳೇ ಕಾರಣ. …
Read More »ಕೋವಿಶೀಲ್ಡ್ ಲಸಿಕೆ ಬಗ್ಗೆ ಭಯ ಬೇಡ : ರಾಜೇಶ್ವರಿ ಹಿರೇಮಠ
ಬೆಟಗೇರಿ : ನಮ್ಮ ದೇಶದ ವಿಜ್ಞಾನಿಗಳು ತಯಾರಿಸಿದ ಕೋವಿಡ್-19 ಲಸಿಕೆ ಬಗ್ಗೆ ವಿಶ್ವವೇ ಹೆಮ್ಮೆಪಡುತ್ತಿದೆ. ಕೋವಿಶೀಲ್ಡ್ ಲಸಿಕೆಯಿಂದ ಅಡ್ಡ ಪರಿಣಾಮಗಳು ಆಗುವುದು ತುಂಬಾ ವಿರಳ, ಇದು ಸುರಕ್ಷಿತವಾಗಿದೆ ಎಂದು ಗೋಕಾಕ ತಾಲೂಕಿನ ಬೆಟಗೇರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ರಾಜೇಶ್ವರಿ ಹಿರೇಮಠ ತಿಳಿಸಿದರು. ಗೋಕಾಕ ತಾಲೂಕಿನ ಬೆಟಗೇರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬುಧವಾರದಂದು ನಡೆದ ಕೋವಿಶೀಲ್ಡ್ ಲಸಿಕೆ ಹಾಕುವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇಶದಲ್ಲಿ ಕರೊನಾ ಸೋಂಕಿತರ ಸಂಖ್ಯೆ …
Read More »ಕನ್ನಡ ಧ್ವಜದ ಬಗ್ಗೆ ಪ್ರಶ್ನಿಸಲು ನಾಡದ್ರೋಹಿ, ಎಂಇಎಸ್-ಶಿವಸೇನೆ ಯಾವೂರ ದೊಣ್ಣೆ ನಾಯಕರು..ಮಾಜಿ ಸಿಎಂ ಎಚ್ಡಿಕೆ ಗರಂ..!
ಕರ್ನಾಟಕದ ಕೆಲ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸುವುದಾಗಿ ಉದ್ಧ(ಟ)ವ ಠಾಕ್ರೆ ಹೇಳಿದ್ದರು. ಬೆಳಗಾವಿಯಲ್ಲಿ ಕಿಡಿಗೇಡಿಗಳು, ಸಮಾಜಘಾತುಕರು ನಡೆಸುತ್ತಿರುವ ಧ್ವಜವಿರೋಧಿ ಹೋರಾಟ ಬೆಂಬಲಿಸುವ ಮೂಲಕ ಶಿವಸೇನೆ ಠಾಕ್ರೆ ಇಚ್ಛೆಯನ್ನು ಜಾರಿಗೆ ತರಲು ಹೊರಟಿದೆ. ನ್ಯಾಯದ ಉದ್ದೇಶವಿಲ್ಲದ ಈ ಹೋರಾಟವನ್ನು ಸರ್ಕಾರ ಮುಲಾಜಿಲ್ಲದೇ ಹತ್ತಿಕ್ಕಬೇಕು. ಸರಣಿ ಟ್ವೀಟ್ ಮೂಲಕ ನಾಡದ್ರೋಹಿಗಳ ವಿರುದ್ಧ ಗರಂ ಆಗಿರುವ ಮಾಜಿ ಸಿಎಂ ಕುಮಾರಸ್ವಾಮಿ ನಮ್ಮ ನೆಲ, ನಮ್ಮ ಭಾಷಾ , ನಮ್ಮ ಧ್ವಜ. ಕನ್ನಡ ಮಾತಾಡುತ್ತೇವೆ, ಕನ್ನಡದ ಧ್ವಜ …
Read More »ಒಬ್ಬರನ್ನ ಬಲಿ ಪಡಿದು ಸತ್ತ ಶ್ವಾನ
ಚಲಿಸುತ್ತಿದ್ದ ಬೈಕ್ಗೆ ಶ್ವಾನವೊಂದು ಅಡ್ಡಬಂದ ಪರಿಣಾಮ ಡಿಕ್ಕಿ ಸಂಭವಿಸಿ ಬೈಕ್ ಹಿಂಬದಿ ಕುಳಿತಿದ್ದ ಮಹಿಳೆ ಸಾವನ್ನಪ್ಪಿರುವ ಘಟನೆ ಧಾರವಾಡ ತಾಲೂಕಿನ ಸಲಕಿನಕೊಪ್ಪ ಗ್ರಾಮದ ಬಳಿ ನಡೆದಿದೆ. ಧಾರವಾಡದ ಬೆನಕಟ್ಟಿ ಗ್ರಾಮದ ದಿಲ್ ಶಾದ್ ಬಿಸ್ಮಿಲ್ಲಾ ಚಪ್ಪರಬಂಧ್ (43) ಮೃತ ಮಹಿಳೆ. ನಿಗದಿ ಗ್ರಾಮದಿಂದ ಪ್ರಕಾಶ ಎಂಬುವರ ಬೈಕ್ನಲ್ಲಿ ಧಾರವಾಡಕ್ಕೆ ಮನೆಗೆಲಸಕ್ಕೆಂದು ಬರುತ್ತಿದ್ದ ವೇಳೆ ಅಪಘಾತ ಸಂಭವಿಸಿದ್ದು, ಬೈಕ್ ಚಾಲಕನಿಗೆ ಯಾವುದೇ ಗಾಯಗಳಾಗಿಲ್ಲ. ಆದರೆ, ಬೈಕ್ ಡಿಕ್ಕಿ ಹೊಡೆದ …
Read More »ಕಂಗನಾ ರಾಣಾವತ್ ಗೆ ಮುಂಬೈ ಪೊಲೀಸರು ವಿಚಾರಣೆ ಹಾಜರಾಗುವಂತೆ ನೋಟೀಸ್
ಮುಂಬೈ: ಬಾಲಿವುಡ್ ನಟಿ ಕಂಗನಾ ರಾಣಾವತ್ ಗೆ ಮುಂಬೈ ಪೊಲೀಸರು ವಿಚಾರಣೆ ಹಾಜರಾಗುವಂತೆ ನೋಟೀಸ್ ನೀಡಿದ್ದಾರೆ. ನಟ ಸುಶಾಂತ್ ಸಿಂಗ್ ರಜಪೂತ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಕಂಗನಾ, ಖ್ಯಾತ ಗೀತ ರಚನೆಕಾರ ಜಾವೇದ್ ಅಖ್ತರ್ ಕುಟುಂಬದ ವಿರುದ್ಧ ಹೇಳಿಕೆ ನಿಡಿದ್ದರು. ಈ ಹಿನ್ನೆಲೆಯಲ್ಲಿ ಅಖ್ತರ್ ಕಂಗನಾ ವಿರುದ್ಧ ಅಂಧೇರಿ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ನಲ್ಲಿ ಮಾನನಷ್ಟ ಮೊಕದ್ದಮೆ ಪ್ರಕರಣ ದಾಖಲಿಸಿದ್ದರು. ಈ ಪ್ರಕರಣ ಸಂಬಂಧ ಮುಂಬೈ ಪೊಲೀಸರು ಕಂಗನಾ ರಣಾವತ್ …
Read More »ಉದ್ಧವ್ ಠಾಕ್ರೆ ವಿರುದ್ಧ ಹೋರಾಟ ತೀವ್ರಗೊಳಿಸಲು ನಿರ್ಧರಿಸಿರುವ ಕನ್ನಡ ಒಕ್ಕೂಟ
ಬೆಂಗಳೂರು, ಜ.20- ಮರಾಠಿ ಭಾಷಿಗರ ಬಾಹುಳ್ಯ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳಬೇಕೆಂಬ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರುದ್ಧ ಹೋರಾಟ ತೀವ್ರಗೊಳಿಸಲು ನಿರ್ಧರಿಸಿರುವ ಕನ್ನಡ ಒಕ್ಕೂಟ ಇಂದು ಮಹತ್ವದ ಸಭೆ ನಡೆಸಿತು. ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್, ಡಾ.ರಾಜ್ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸಾ.ರಾ.ಗೋವಿಂದು, ಕನ್ನಡ ಸೇನೆಯ ಕೆ.ಆರ್.ಕುಮಾರ್, ಕನ್ನಡ ಅಭಿವೃದ್ಧಿ ಪ್ರಾಕಾರದ ಮಾಜಿ ಅಧ್ಯಕ್ಷ ಮುಖ್ಯಮಂತ್ರಿಚಂದ್ರು, ಮಂಜುನಾಥ್ ದೇವು, ಗಿರೀಶ್ ಸೇರಿದಂತೆ ಹಲವು ಮುಖಂಡರು ಸಭೆ ನಡೆಸಿ ಮಹಾರಾಷ್ಟ್ರ ಮುಖ್ಯಮಂತ್ರಿ …
Read More »ಜನರ ಆಕ್ರೋಶಕ್ಕೆ ಮಣಿದ ‘ತಾಂಡವ್’ ತಂಡ: ವಿವಾದಿತ ದೃಶ್ಯಕ್ಕೆ ಕತ್ತರಿ ಪ್ರಯೋಗ
ನವದೆಹಲಿ: ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಅಧಿಕಾರಿಗಳೊಂದಿಗೆ ನಡೆದ 2ನೇ ಸುತ್ತಿನ ಮಾತುಕತೆಯ ನಂತರ ‘ತಾಂಡವ್’ ವೆಬ್ ಸೀರೀಸ್ ತಂಡ ಕೊನೆಗೂ ವಿವಾದದ ಕಿಡಿ ಹೊತ್ತಿಸಿದ ದೃಶ್ಯವನ್ನು ತೆಗೆದುಹಾಕಿದೆ. ಹಿಂದೂಗಳ ಭಾವನೆಗೆ ಧಕ್ಕೆ ಉಂಟುಮಾಡಿದ ಆರೋಪ ಎದುರಿಸಿ, ಬಾಲಿವುಡ್ ನಟ ಸೈಫ್ ಆಲಿಖಾನ್ ಅಭಿನಯದ ತಾಂಡವ್ ವೆಬ್ ಸೀರೀಸ್ ಭಾರೀ ವಿವಾದಕ್ಕೆ ಕಾರಣವಾಗಿತ್ತು. ಈ ಕುರಿತಾಗಿ ತಾಂಡವ್ ತಂಡ ಕೂಡ ಬಹಿರಂಗವಾಗಿ ಕ್ಷಮೆಯಾಚಿಸಿತ್ತು. ಇದೀಗ ವಿವಾದದ ಕಿಡಿ ಹೊತ್ತಿಸಿದ ದೃಶ್ಯವನ್ನು …
Read More »
Laxmi News 24×7