Breaking News

ರಾಜ್ಯ

ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದಕ್ಕೆ ಮಲತಂದೆ ಮಗುವನ್ನೇ ಕೊಲೆ

ಮಡಿಕೇರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದಕ್ಕೆ ಮಲತಂದೆ ಮಗುವನ್ನೇ ಕೊಲೆ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ. ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ವೆಸ್ಟ್ ನೆಮ್ಮಲೆ ಗ್ರಾಮದಲ್ಲಿ ಘಟನೆ ನಡೆದಿದ್ದು, ಆರೋಪಿ ರವಿ ಐದು ವರ್ಷದ ಮಗುವನ್ನು ಕೊಂದಿದ್ದಾನೆ. ಮೈಸೂರು ಜಿಲ್ಲೆಯ ಹುಣುಸೂರಿನ ಲಕ್ಷ್ಮಿ ಎಂಬುವರ ಮಗುವನ್ನು ರವಿ ಕೊಲೆ ಮಾಡಿದ್ದಾನೆ. ಪತಿಯನ್ನು ಬಿಟ್ಟು ಬಂದ ಲಕ್ಷ್ಮಿ ರವಿಯೊಂದಿಗೆ ವಾಸವಿದ್ದಳು. ಕಳೆದ ಆರು ತಿಂಗಳಿಂದ ರವಿ ಹಾಗೂ ಲಕ್ಷ್ಮಿ ಒಟ್ಟಿಗೆ ಇದ್ದರು. ನಮ್ಮಿಬ್ಬರ …

Read More »

ಲೋಕೋಪಯೋಗಿ ಇಲಾಖೆಯಲ್ಲಿ ಹೊರಗುತ್ತಿಗೆ ಮೂಲಕ 950 ಎಂಜಿನಿಯರ್ ಗಳ ನೇಮಕ: ಗೋವಿಂದ ಕಾರಜೋಳ

ಧಾರವಾಡ(ಡಿಸೆಂಬರ್​​.22): ಲೋಕೋಪಯೋಗಿ ಇಲಾಖೆಯಲ್ಲಿ ಇಂಜಿನಿಯರ್ ಗಳ ಕೊರತೆ ಇದೆ, ಹೊರಗುತ್ತಿಗೆ ಮೂಲಕ 950 ಇಂಜಿನಿಯರ್ ಗಳನ್ನ ತೆಗೆದುಕೊಳ್ಳಲು ಕ್ರಮ ವಹಿಸಲಾಗಿದೆ. ಏಜೆನ್ಸಿಯಿಂದ ತೆಗೆದುಕೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಲೋಕೋಪಯೋಗಿ ಸಚಿವ ಹಾಗೂ ಉಪಮುಖ್ಯ ಮಂತ್ರಿ ಗೋವಿಂದ ಕಾರಜೋಳ ಹೇಳಿದ್ದಾರೆ. ಧಾರವಾಡದಲ್ಲಿ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ‌ ಮಾತನಾಡಿ ಅವರು, ರಾಜ್ಯದಲ್ಲಿನ ಟೂರಿಸಂ ಪ್ರದೇಶಗಳಲ್ಲಿನ ಪ್ರವಾಸಿ ಮಂದಿರಗಳನ್ನು ಪ್ರವಾಸೋದ್ಯಮ ಇಲಾಖೆಗೆ ವಹಿಸಲಾಗುತ್ತದೆ. ಇದರಿಂದ ಪ್ರವಾಸಿಗರಿಗೆ ಅನುಕೂಲವಾಗಲಿದೆ. ಅಲ್ಲದೇ ಲೋಕೋಪಯೋಗಿ ಇಲಾಖೆಗೂ ಸಹ …

Read More »

ಬಿಜೆಪಿ-ಜೆಡಿಎಸ್ ವಿಲೀನ..? ರಾಜ್ಯದಲ್ಲಿ ಮತ್ತೊಮ್ಮೆ ರಾಜಕೀಯ ಧ್ರುವೀಕರಣ..!

ಬೆಂಗಳೂರು,ಡಿ.22- ರಾಜ್ಯದಲ್ಲಿ ಮತ್ತೊಮ್ಮೆ ರಾಜಕೀಯ ಧ್ರುವೀಕರಣದ ಮಾತುಗಳು ಕೇಳಿ ಬರುತ್ತಿದೆ. ರಾಜ್ಯದ ಏಕೈಕ ಪ್ರಭಾವಿ ಪ್ರಾದೇಶಿಕ ಪಕ್ಷವಾದ ಜೆಡಿಎಸ್ ಆಡಳಿತಾರೂಢ ಬಿಜೆಪಿಯೊಂದಿಗೆ ವಿಲೀನವಾಗುತ್ತದೆ ಎನ್ನುವ ಚರ್ಚೆ ಆರಂಭಗೊಂಡಿದೆ. ಸ್ವತಃ ಉಭಯ ಪಕ್ಷಗಳ ಪ್ರಮುಖ ನಾಯಕರೇ ನೇರವಾಗಿ ಸ್ಪಷ್ಟೀಕರಣ ನೀಡುತ್ತಿರುವುದು ಎರಡೂ ಪಕ್ಷಗಳ ನಡುವೆ ಏನೋ ನಡೆಯುತ್ತಿದೆ ಎನ್ನುವ ಅನುಮಾನಕ್ಕೆ ಪುಷ್ಟಿ ನೀಡಿದೆ. ಮೈತ್ರಿ ಸರ್ಕಾರ ಪತನಗೊಂಡು ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಯಾದನಂತರ ಹಳೇ ದೋಸ್ತಿಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವಿನ …

Read More »

ಎಲ್ಲರನ್ನೂ ಏಕವಚನದಲ್ಲಿ ಮಾತನಾಡುವ ಸಿದ್ದರಾಮಯ್ಯನವರದ್ದು ದಪ್ಪ ಚರ್ಮ.:ಶ್ರೀನಿವಾಸ್ ಪ್ರಸಾದ್

ಮೈಸೂರು (ಡಿ. 22): ಎಲ್ಲರನ್ನೂ ಏಕವಚನದಲ್ಲಿ ಮಾತನಾಡುವ ಸಿದ್ದರಾಮಯ್ಯನವರದ್ದು ದಪ್ಪ ಚರ್ಮ. ನನ್ನನ್ನು ಮಂತ್ರಿಸ್ಥಾನದಿಂದ ಕೆಳಗಿಳಿಸಿ, ಬರೆ ಹಾಕಿದ್ದನ್ನು ನಾನು ಎಂದಿಗೂ ಮರೆಯುವುದಿಲ್ಲ. ಆ ಮಹದೇವಪ್ಪ ಸಿದ್ದರಾಮಯ್ಯನ ಚೇಲ. ಸಿದ್ದರಾಮಯ್ಯನ ದುರಹಂಕಾರದಿಂದಲೇ ಜನರು ಅವರನ್ನು ಸೋಲಿಸಿದರು. ಅವರು ಸರಿಯಾಗಿದ್ದರೆ ಅವರ ಪಕ್ಷದವರೇ ಅವರ ವಿರುದ್ಧ ಯಾಕೆ ಹೈಕಮಾಂಡ್​ಗೆ ದೂರು ಕೊಡುತ್ತಿದ್ದರು? ಎಂದು ಸಂಸದ ವಿ. ಶ್ರೀನಿವಾಸ್ ಪ್ರಸಾದ್ ಪ್ರಶ್ನಿಸಿದ್ದಾರೆ. ಸಿದ್ದರಾಮಯ್ಯ ದಪ್ಪ ಚರ್ಮದ ಮನುಷ್ಯ. ಆತನಿಗೆ ನಾಗರಿಕತೆ, ಸಂಸ್ಕೃತಿಯೇ ಇಲ್ಲ. …

Read More »

ಬೆಳ್ಳಂದೂರು ಡಿನೋಟಿಫಿಕೇಷನ್ ಪ್ರಕರಣ ರದ್ದುಪಡಿಸಲು ಹೈಕೋರ್ಟ್​ ನಕಾರ; ಸಿಎಂ ಬಿಎಸ್​ವೈಗೆ ಸಂಕಷ್ಟ

ಬೆಂಗಳೂರು (ಡಿ. 22):  ಬೆಳ್ಳಂದೂರು ಭೂ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪಗೆ  ಸಂಕಷ್ಟ ಎದುರಾಗಿದೆ. ಪ್ರಕರಣ ರದ್ದುಪಡಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ಹೈ ಕೋರ್ಟ್​ ನಿರಾಕರಿಸಿದೆ. ಪ್ರಕರಣ ಕುರಿತು ವಿಚಾರಣೆ ನಡೆಸಿದ ನ್ಯಾ. ಜಾನ್ ಮೈಕೆಲ್ ಕುನ್ಹಾ ನೇತೃತ್ವದ  ಪೀಠ ಅರ್ಜಿ ವಜಾಗೊಳಿಸಿದೆ. ಅರ್ಜಿಯೊಂದಿಗೆ ಸಲ್ಲಿಸಿದ್ದ ಪೂರಕ ದಾಖಲೆಗಳು ಸೂಕ್ತವಾಗಿಲ್ಲ ಎಂದು ತಿಳಿಸಿ ಹೈಕೋರ್ಟ್​​ ಏಕ ಸದಸ್ಯ ನ್ಯಾಯಪೀಠ ಅರ್ಜಿಯನ್ನು ವಜಾಗೊಳಿಸಿದೆ‌. ಇದರಿಂದ ಮುಖ್ಯಮಂತ್ರಿಗಳು ಮತ್ತೊಮ್ಮೆ ತೊಂದರೆಗೆ ಸಿಲುಕಿದ್ದಾರೆ.  ಬೆಳ್ಳಂದೂರು …

Read More »

ಡೀಸೆಲ್ ಟ್ಯಾಂಕರ್ ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಬೆಂಕಿ

: ಡೀಸೆಲ್ ಟ್ಯಾಂಕರ್ ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಕಾಣಿಸಿಕೊಂಡಿದ್ದು, ಕಾರಿನಲ್ಲಿದ್ದ ಐವರು ಸಜೀವ ದಹನಗೊಂಡಿರುವ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ಸಂಭವಿಸಿದೆ. ಲಖನೌದಿಂದ ಆಗ್ರಾಗೆ ತೆರಳುತ್ತಿದ್ದ ಕಾರು, ಡೀಸೆಲ್ ಟ್ಯಾಂಕರ್ ಗೆ ಡಿಕ್ಕಿ ಹೊಡೆದಿದೆ. ವೇಗವಾಗಿ ಚಲಿಸುತ್ತಿದ್ದ ಟ್ರಕ್ ಏಕಾಏಕಿ ರಾಂಗ್ ಟರ್ನ್ ತೆಗೆದುಕೊಂಡ ಪರಿಣಾಮ ಈ ಅಪಘಾತ ಸಂಭವಿಸಿದೆ. ಅಪಘಾತದ ರಭಸಕ್ಕೆ ಬೆಂಕಿ ಹೊತ್ತಿಕೊಂಡಿದೆ. ಕಾರಿನ ಡೋರ್ ಲಾಕ್ ಆಗಿದ್ದ ಕಾರಣ ಹೊರಬರಲಾಗದೇ ಕಾರಿನಲ್ಲಿದ್ದ …

Read More »

ಕಾಳಸಂತೆಯಲ್ಲಿ ಅನ್ನಭಾಗ್ಯ ಅಕ್ಕಿ ಮಾರಾಟ; ತಲೆ ಕೆಡಿಸಿಕೊಳ್ಳದ ಅಧಿಕಾರಿಗಳು

ಸರ್ಕಾರ ಬಡವರು ತುತ್ತು ಅನ್ನಕ್ಕೂ ಪರದಾಡಬಾರದು ಎಂಬ ಉದ್ದೇಶದಿಂದ ಕೋಟ್ಯಾಂತರ ರೂಪಾಯಿ ಹಣ ಖರ್ಚು ಮಾಡಿ ಬಡವರ ಹೊಟ್ಟೆ ತುಂಬಿಸಲು ಅನ್ನಭಾಗ್ಯ ಯೋಜನೆ ಜಾರಿಗೆ ತಂದಿದೆ. ಯೋಜನೆಯಲ್ಲಿ ಬಡವರಿಗೆ ಉಚಿತ ಅಕ್ಕಿ ನೀಡುವ ಮೂಲಕ ಹೊಟ್ಟೆ ತುಂಬಿಸುವ ಕೆಲಸ ಮಾಡುತ್ತಿದೆ. ಆದರೆ, ಅದೇ ಅಕ್ಕಿ ಇಂದು ಕಾಳಸಂತೆಯಲ್ಲಿ ಹೆಚ್ಚಿನ ಬೆಲೆಗೆ ಮಾರಾಟವಾಗುತ್ತಿದ್ದು, ಹಾಡು ಹಗಲೇ ರೇಷನ್ ಅಂಗಡಿಯಿಂದ ಅಕ್ಕಿ ತಂದು ತಮ್ಮದೆ ಒಂದು ಬ್ರಾಂಡ್ ನ ಚಿಲಕ್ಕೆ ಹಾಕಿ ಅಕ್ಕಿ …

Read More »

ಕೊರೊನಾ ಹೊಸ ರೂಪಾಂತರ ವೈರಸ್ ಹರಡುತ್ತಿದೆ. ರಾಜ್ಯದ ಜನತೆ ಕಡ್ಡಾಯವಾಗಿ ಮಾಸ್ಕ್ ಧರಿಸಿ,

ಬೆಂಗಳೂರು: ರಾಜ್ಯದಲ್ಲೂ ಕೊರೊನಾ ಹೊಸ ಪ್ರಭೇದ ಬಗ್ಗೆ ಆತಂಕ ಮೂಡುತ್ತಿದ್ದು, ಈಗಾಗಲೇ ಇಂಗ್ಲೆಂಡ್ ನಲ್ಲಿ ಕೊರೊನಾ ಹೊಸ ರೂಪಾಂತರ ವೈರಸ್ ಹರಡುತ್ತಿದೆ. ಈ ನಿಟ್ಟಿನಲ್ಲಿ ಮುಂಜಾಗೃತಾ ಕ್ರಮ ಕೈಗೊಳ್ಲುವ ಅಗತ್ಯವಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ದಾ.ಸುಧಾಕರ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಸುಧಾಕರ್, ಹೊಸ ರೂಪಾಂತರ ವೈರಸ್ ಕೊರೊನಾ ವೈರಸ್ ಗಿಂತಲೂ ಹೆಚ್ಚು ವೇಗವಾಗಿ ಹರಡುತ್ತದೆ. ಹೀಗಾಗಿ ಈ ಬಗ್ಗೆ ಇರ್ಲಕ್ಷ್ಯ ಬೆಡ. ರಾಜ್ಯದ ಜನತೆ ಕಡ್ಡಾಯವಾಗಿ …

Read More »

ಗ್ರಾ.ಪಂ ಚುನಾವಣೆ ಮತದಾನಕ್ಕೂ ಮುನ್ನವೇ ಬ್ಯಾಲೆಟ್ ಪತ್ರಿಕೆ ಲೀಕ್ ಪೇಪರ್ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಗ್ರಾ.ಪಂ ಚುನಾವಣೆ ಮತದಾನಕ್ಕೂ ಮುನ್ನವೇ ಲೀಕ್​​ ಆಯ್ತು ಬ್ಯಾಲೆಟ್ ಪೇಪರ್ ಬೆಳಗಾವಿ: ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಲೀಕ್ ಆಗುವ ಬಗ್ಗೆ ಕೇಳಿದ್ದೇವೆ. ಆದರೆ ರಾಜ್ಯದಲ್ಲಿ ನಡೆಯುತ್ತಿರುವ ಗ್ರಾಮ ಪಂಚಾಯಿತಿ ಚುನಾವಣಾ ಬ್ಯಾಲೆಟ್ ಪತ್ರಿಕೆ ಲೀಕ್ ಆಗಿರುವ ಘಟನೆ ಜಿಲ್ಲೆಯ ದೇಸೂರ ಗ್ರಾಮ ಪಂಚಾಯತಿಯಲ್ಲಿ ನಡೆದಿದೆ. ಚುನಾವಣಾ ಮತದಾನಕ್ಕೂ ಮುನ್ನವೇ ಚುನಾವಣಾ ಬ್ಯಾಲೆಟ್ ಪತ್ರಿಕೆ ಲೀಕ್ ಆಗಿದ್ದು, ದೇಸೂರ ಗ್ರಾಮ ಪಂಚಾಯತಿಯ ಅಭ್ಯರ್ಥಿಗಳು ತಮಗೆ ನೀಡಿರೋ ಚಿನ್ನೆ ತೋರಿಸಿ ಮತ ಹಾಕುವಂತೆ …

Read More »

ಲಂಡನ್ ಹಾಗೂ ಆಗ್ನೇಯ ಇಂಗ್ಲೆಂಡ್‍ನಲ್ಲಿ ಕಠಿಣ ಲಾಕ್‍ಡೌನ್

ಕೊರೊನಾ ವೈರಸ್ ರೂಪಾಂತರದಿಂದ ಇಂಗ್ಲೆಂಡ್ ತತ್ತರಿಸಿ ಹೋಗಿದ್ದು, ಲಂಡನ್ ಹಾಗೂ ಆಗ್ನೇಯ ಇಂಗ್ಲೆಂಡ್‍ನಲ್ಲಿ ಕಠಿಣ ಲಾಕ್‍ಡೌನ್ ವಿಧಿಸಲಾಗಿದೆ. ಸುದ್ದಿಗೋಷ್ಠಿ ನಡೆಸಿ ಬೋರಿಸ್ ಜಾನ್ಸಸ್ ಕಠಿಣವಾದ ‘ಟಯರ್ 4’ ಲಾಕ್‍ಡೌನ್ ವಿಧಿಸಿರುವ ಬಗ್ಗೆ ಮಾಹಿತಿ ನಿಡಿದ್ದಾರೆ. ಸೋಮವಾರ ಕೊರೊನಾ ರೂಪಾಂತರದ ಬಗ್ಗೆ ಆರೋಗ್ಯ ಕಾರ್ಯದರ್ಶಿ ಮಾಹಿತಿ ನೀಡಿದ್ದಾರೆ. ಅಲ್ಲದೆ ಮುಖ್ಯ ವೈದ್ಯಕೀಯ ಅಧಿಕಾರಿ ಪ್ರೊ.ಕ್ರಿಸ್ ವಿಟ್ಟಿ ಈ ಕುರಿತು ಮಾಹಿತಿ ನೀಡಿದ್ದು, ರೂಪಾಂತರಗೊಂಡಿರುವ ವೈರಸ್ ಬಹುಬೇಗ ಹರಡುತ್ತದೆ ಎಂದು ಎಚ್ಚರಿಸಿದ್ದಾರೆ.ಈ ಕುರಿತು …

Read More »