ಬೆಳಗಾವಿ: ಲೋಕಸಭಾ ಉಪ ಚುನಾವಣಾ ಪ್ರಚಾರದ ಅಖಾಡಕ್ಕೆ ಧುಮುಕಿರುವ ಜಲಸಂಪನ್ಮೂಲ ಮತ್ತು ಬೆಳಗಾವಿ ಜಿಲ್ಲೆಯ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಅವರು, ಜಿಲ್ಲೆಯ ಮರಾಠಾ ಸಮುದಾಯದ ಪ್ರಮುಖ ಮುಖಂಡರ ಸಭೆ ನಡೆಸಿದರು. ಗೋಕಾಕ್ ನಗರದಲ್ಲಿರುವ ಕಚೇರಿಯಲ್ಲಿ ನಡೆದ ಸಭೆಯಲ್ಲಿ, ವಾಡಿಕೆಗಿಂತಾ ಹೆಚ್ಚಿನ ಮತದಾನ ಮಾಡಿ ಬಿಜೆಪಿ ಅಭ್ಯರ್ಥಿಯನ್ನು ಲೋಕಸಭೆಗೆ ಆಯ್ಕೆಮಾಡಬೇಕು. ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವವನ್ನು ಮತ್ತಷ್ಟು ಸುಭದ್ರ ಪಡಿಸಬೇಕು ಎಂದು ಸಚಿವರು ಕರೆ ನೀಡಿದರು. ಬೆಳಗಾವಿ ಜಿಲ್ಲೆಯಾದ್ಯಂತ ಬಿಜೆಪಿಯು …
Read More »ಗೋಕಾಕ: ನಗರದ ಹೊರವಲಯದಲ್ಲಿರುವ ಆಗ್ನಿಶಾಮಕ ಠಾಣೆಯಲ್ಲಿ ಸಕಾಲ ಸೇವಾ ಸಪ್ತಾಹದ ಅಂಗವಾಗಿ ಹಮ್ಮಿಕೊಂಡ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಠಾಣಾಧಿಕಾರಿ ಸದಾನಂದ ಮೆಳವಂಕಿ ಅವರು ಚಾಲನೆ ನೀಡುತ್ತಿರುವುದು.
ಗೋಕಾಕ: ಆಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆಯಲ್ಲಿ ಸಕಾಲ ವ್ಯಾಪ್ತಿಯಲ್ಲಿ 5 ಸೇವೆಗಳನ್ನು ಸಾರ್ವಜನಿಕರಿಗೆ ನೀಡಲಾಗುತ್ತಿದ್ದು ಇದರ ಸದುಪಯೋಗ ಪಡಿಸಿಕೊಳ್ಳುವಂತೆ ಇಲ್ಲಿಯ ಆಗ್ನಿ ಶಾಮಕ ಠಾಣಾಧಿಕಾರಿ ಸದಾನಂದ ಮೆಳವಂಕಿ ಹೇಳಿದರು. ಶುಕ್ರವಾರದಂದು ನಗರದ ಹೊರವಲಯದಲ್ಲಿರುವ ಆಗ್ನಿಶಾಮಕ ಠಾಣೆಯಲ್ಲಿ ಸಕಾಲ ಸೇವಾ ಸಪ್ತಾಹದ ಅಂಗವಾಗಿ ಹಮ್ಮಿಕೊಂಡ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಬಹುಮಹಡಿ ಕಟ್ಟಡಗಳಿಗೆ ನಿರ್ಮಾಣ ಪೂರ್ವದಲ್ಲಿ ಇಲಾಖೆಯಿಂದ ನೀಡಲಾಗುವ ನಿರಾಕ್ಷೇಪಣಾ ಪತ್ರ, ನಿರ್ಮಾಣದ ನಂತರ ಕ್ಲಿಯರೆನ್ಸ್ …
Read More »ಅಥಣಿ ತಾಲೂಕಿನಲ್ಲಿ ಹೆಚ್ಚಿದ ಕಳ್ಳತನ ಪ್ರಕರಣಗಳು: ಪೊಲೀಸ್ ಇಲಾಖೆ ವಿರುದ್ಧ ಜನರ ಅಸಮಾಧಾನ
ಅಥಣಿ: ತಾಲೂಕಿನಲ್ಲಿ ಕಳ್ಳತನ ಪ್ರಕರಣ ಹೆಚ್ಚುತ್ತಿವೆ. ಗುರುವಾರ ತಡರಾತ್ರಿ ನಂದಗಾವ್ ಗ್ರಾಮದಲ್ಲಿ ಕಳ್ಳರು ಕೈಚಳಕ ತೋರಿದ್ದು, ಎರಡು ದೇವಾಲಯ, ಆರು ಮನೆಗಳನ್ನು ದೋಚಿ ಪರಾರಿಯಾಗಿದ್ದಾರೆ. ಎರಡು ದೇವಾಲಯ ಹಾಗೂ ಆರೂ ಮನೆಗಳಿಗೆ ಕನ್ನ ಹಾಕಿರುವ ಖದೀಮರು ಬೆಲೆ ಬಾಳುವ ವಸ್ತುಗಳನ್ನು ದೋಚಿ ಪರಾರಿಯಾಗಿದ್ದಾರೆ. ಜೈನ ಬಸದಿ, ಯಲ್ಲಮ್ಮ ದೇವಸ್ಥಾನದ ಬೀಗ ಮುರಿದು ಅಟ್ಟಹಾಸ ಮೆರೆದಿದ್ದಾರೆ. ಇದರಿಂದ ಗ್ರಾಮದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಅಥಣಿ ತಾಲೂಕಿನಲ್ಲಿ ಹೆಚ್ಚಿದ ಕಳ್ಳತನ ಪ್ರಕರಣಗಳು ಅಲ್ಲದೆ …
Read More »ಸ್ಟಾರ್ ನಟರು ಇದ್ದಂತೆ, ವಿಜ್ಞಾನಿಗಳು ತಾರೆಯರಾಗಬೇಕಿದೆ: ನಿವೃತ್ತ ವಿಜ್ಞಾನಿ ಕೊಳ್ಳೇಗಾಲ ಶರ್ಮ
ಬೆಂಗಳೂರು: ವಿಜ್ಞಾನಿಯೊಬ್ಬನ ಕೂದಲ ವಿನ್ಯಾಸವನ್ನು ಕಾಲೇಜು ಯುವಕರು ಅನುಸರಿಸಿದ ದಿನ ನಮ್ಮಲ್ಲಿ ವಿಜ್ಞಾನ, ತಂತ್ರಜ್ಞಾನ ಅಭಿವೃದ್ಧಿ ಕಾಣಲಿದೆ. ಸ್ಟಾರ್ ನಟರು ಇದ್ದಂತೆ, ವಿಜ್ಞಾನಿಗಳು ತಾರೆಯರಾಗಬೇಕಿದೆ ಎಂದು ಸಿಎಫ್ಟಿಆರ್ಐನ ನಿವೃತ್ತ ವಿಜ್ಞಾನಿ ಹಾಗೂ ಹಿರಿಯ ವಿಜ್ಞಾನ ಬರಹಗಾರ ಕೊಳ್ಳೇಗಾಲ ಶರ್ಮ ಅಭಿಪ್ರಾಯಪಟ್ಟಿದ್ದಾರೆ. ಪ್ರೆಸ್ ಇನ್ಫರ್ಮೇಷನ್ ಬ್ಯುರೋ ಮತ್ತು ಕರ್ನಾಟಕ ಪತ್ರಕರ್ತೆಯರ ಸಂಘಗಳು ಶುಕ್ರವಾರ ಜಂಟಿಯಾಗಿ ಆಯೋಜಿಸಿದ್ದ `ಭಾರತದಲ್ಲಿ ವಿಜ್ಞಾನದ ಬೆಳವಣಿಗೆ’ ಕುರಿತ ವೆಬಿನಾರ್ನಲ್ಲಿ `ಅಭಿವೃದ್ಧಿಶೀಲ ಭಾರತದಲ್ಲಿ ವಿಜ್ಞಾನ’ ವಿಷಯದ ಕುರಿತು ಅವರು …
Read More »ಯಾವ ಮುಖ್ಯಮಂತ್ರಿಯೂ ಐದು ವರ್ಷ ಪೂರೈಸಿಲ್ಲ. ಆದರೆ, ನಾನು ಐದು ವರ್ಷ ಪೂರೈಸಿದ್ನಲ್ಲ ಅದು ಇವರಿಗೆಲ್ಲ ಹೊಟ್ಟೆ ಉರಿ.
ಮೈಸೂರು: ನಾನು ಕಳೆದ ಚುನಾವಣೆಯಲ್ಲಿ ಅಷ್ಟೊಂದು ಕೆಟ್ಟದಾಗಿ ಸೋಲ್ತಿನಿ ಅಂತ ಅಂದುಕೊಂಡಿರಲಿಲ್ಲ ಎಂದು ಮಾಜಿ ಸಿಎಂ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದರು. 2018ರಲ್ಲಿ ನಡೆದ ವಿಧಾನಸಭೆ ಚುನಾವಣೆ ಸೋಲಿನ ಕುರಿತು ಕಾಂಗ್ರೆಸ್ ಜನಾಧಿಕಾರ ಸಭೆಯಲ್ಲಿ ಮಾತನಾಡಿದ ಅವರು, ನಾನು ಹಳ್ಳಿಗಳಿಗೆ ಹೋದಾಗ ಜನರೆಲ್ಲ ಪ್ರೀತಿ ತೋರಿಸಿದರು. ಆದರೆ, ನನ್ನ ಸೋಲಿಗೆ ನಮ್ಮ ಪಕ್ಷದವರು ಕೂಡ ಕಾರಣರಾದರು ಎಂದು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಪಕ್ಷ ಅಂದರೆ ತಾಯಿ ಇದ್ದ …
Read More »ಲಕ್ಷ್ಮಿ ಹೆಬ್ಬಾಳಕರ್ ಅವರ ಸಹೋದರಿಯ ಪುತ್ರಿ ಸುಶ್ಮಿತಾ ಅವರ ವಿವಾಹ ಬೆಳಗಾವಿಯಲ್ಲಿ ನಡೆಯಿತು.
ಬೆಳಗಾವಿ – ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಅವರ ಸಹೋದರಿಯ ಪುತ್ರಿ ಸುಶ್ಮಿತಾ ಅವರ ವಿವಾಹವು ಹುಬ್ಬಳ್ಳಿಯ ದಿ.ವಿಶ್ವಪ್ರಕಾಶ ಉಳ್ಳಾಗಡ್ಡಿಮಠ ಅವರ ಪುತ್ರ ರಜತ್ ಜೊತೆ ಬೆಳಗಾವಿಯಲ್ಲಿ ನಡೆಯಿತು. ಇಲ್ಲಿಯ ಸಂಕಮ್ ಹೊಟೆಲ್ ಸಭಾಂಗಣದಲ್ಲಿ ವಿವಾಹ ಪೂರ್ವ ಕಾರ್ಯಕ್ರಮ ಹಾಗೂ ವಿವಾಹ ಕಾರ್ಯಕ್ರಮಗಳು ಒಟ್ಟೂ 3 ದಿನಗಳ ಕಾಲ ನಡೆಯಿತು. ಕೊರೋನಾ ಹಿನ್ನೆಲೆಯಲ್ಲಿ ಕಡಿಮೆ ಸಂಖ್ಯೆಯಲ್ಲಿ ಆಮಂತ್ರಣ ನೀಡಲಾಗಿತ್ತು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ, ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ, ಚಿತ್ರನಟ ವಿಜಯರಾಘವೇಂದ್ರ ಸೇರಿದಂತೆ …
Read More »ಆರೋಗ್ಯಯುತ ಸಮಾಜ ನಿರ್ಮಾಣಕ್ಕೆ ಪಣ ತೊಡೋಣ’’:
ಇಂದು ಸಿ.ಎಫ್.ಟಿ.ಎಫ್.ಕೆ ಸಂಸ್ಥೆ ವತಿಯಿಂದ ಆಯೋಜಿಸಿದ್ದ, ಡ್ರಗ್ಸ್, ಮದ್ಯಪಾನ ಮುಕ್ತ ಕರ್ನಾಟಕ ಜನಜಾಗೃತಿ ಕಾರ್ಯಕ್ರಮದಲ್ಲಿ, ಗೂಗಲ್ ಮೀಟ್ ಮೂಲಕ ಭಾಗವಹಿಸಿ, ಮಾತನಾಡಲಾಯಿತು. ಇತ್ತೀಚಿನ ದಿನಮಾನಗಳಲ್ಲಿ ಮಕ್ಕಳು ಡ್ರಗ್ಸ್ , ಮದ್ಯಪಾನ ಹೀಗೆ ಹಲವು ದುಶ್ಚಟಗಳಿಗೆ ಬಲಿಯಾಗುತ್ತಿರುವ ನಡುವೆ ಸಮಾಜದಲ್ಲಿ ಜಾಗೃತಿ ಅಭಿಯಾನ ನಡೆಸುತ್ತಿರುವ ಸಿ.ಎಫ್.ಟಿ.ಎಫ್.ಕೆ ಸಂಸ್ಥೆಯ ಕಾರ್ಯ ಶ್ಲಾಘನೀಯ. ನಮ್ಮ ಇಲಾಖೆಯ ರೀತಿ ಸಿ.ಎಫ್.ಟಿ.ಎಫ್.ಕೆ ಸಂಸ್ಥೆ ಕೂಡ ಸಮಾಜದಲ್ಲಿ ಧೂಮಪಾನ, ಡ್ರಗ್ಸ್, ಮದ್ಯಪಾನದಂತಹ ಕೆಟ್ಟ ಚಟಗಳಿಂದ ಜನರನ್ನು ದೂರವಿರಿಸಲು ಶ್ರಮವಹಿಸುತ್ತಿದೆ. …
Read More »ಬಂಡೀಪುರದಲ್ಲಿ ಮೋಜು ಮಸ್ತಿಗೆ ಬ್ರೇಕ್
ಮೈಸೂರು, ಡಿ. 18- ಬಂಡೀಪುರ, ಬಿಆರ್ ಹಿಲ್ಸ್ನಲ್ಲಿ ಹೊಸ ವರ್ಷದ ಮೋಜು ಮಸ್ತಿಗೆ ಬ್ರೇಕ್ ಹಾಕಲಾಗಿದೆ. ಕೊರೊನಾ ಹಿನ್ನೆಲೆಯಲ್ಲಿ ಮೋಜು, ಮಸ್ತಿಗೆ ಕಡಿವಾಣ ಹಾಕಿರುವ ಅರಣ್ಯ ಇಲಾಖೆ ಎರಡು ದಿನಗಳ ಕಾಲ ಪ್ರವಾಸಿಗರ ವಾಸ್ತವ್ಯಕ್ಕೆ ಸಂಪೂರ್ಣ ನಿಷೇಧ ಹೇರಿದೆ. ಡಿ.31 ಹಾಗೂ ಜ.1ರಂದು ಪ್ರವಾಸಿಗರ ವಾಸ್ತವ್ಯ ನಿಷೇಧಿಸಲಾಗಿದೆ. ಪ್ರವಾಸಿಗರು ಪ್ರತಿ ವರ್ಷ ಬಂಡೀಪುರ ಹಾಗೂ ಬಿಳಿಗಿರಿ ರಂಗನ ಬೆಟ್ಟದ ಹುಲಿ ಸಂರಕ್ಷಿತಾರಣ್ಯದಲ್ಲಿ ಹೊಸ ವರ್ಷಾಚರಣೆಯನ್ನು ಸಂಭ್ರಮದಿಂದ ಆಚರಿಸುತ್ತಿದ್ದರು. ಆದರೆ, ಈ …
Read More »ಕೊಲೆ ಮಾಡಿದ್ದ 6 ಆರೋಪಿಗಳನ್ನು 24 ಗಂಟೆಯಲ್ಲಿ ಬಂಧಿಸುವಲ್ಲಿ ಶಹಾಪುರ ಠಾಣೆ ಪೊಲೀಸರು ಯಶಸ್ವಿ
ಬೆಳಗಾವಿ – ನಿನ್ನೆ ಬೆಳಗಾವಿಯ ಅಂಬೇಡ್ಕರ್ ಗಲ್ಲಿಯಲ್ಲಿ ಯುವಕನೋರ್ವನನ್ನು ಕೊಚ್ಚಿ ಕೊಲೆ ಮಾಡಿದ್ದ 6 ಆರೋಪಿಗಳನ್ನು 24 ಗಂಟೆಯಲ್ಲಿ ಬಂಧಿಸುವಲ್ಲಿ ಶಹಾಪುರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಎಲ್ಲ 6 ಜನರೂ ಅಂಬೇಡ್ಕರ್ ಗಲ್ಲಿಯವರೇ ಆಗಿದ್ದಾರೆ. ಜ್ಯೋತಿರಾಜ ಸಿದ್ರಾಯಿ ದೊಡ್ಮನಿ(24), ಅಕ್ಷಯ ಕೃಷ್ಣ ಕೋಲ್ಕಾರ್ (24), ಪ್ರಶಾಂತ ಯಲ್ಲಪ್ಪ ಕಳ್ಳಿಮನಿ (30), ಪ್ರಶಾಂತ ಬಸವಂತ ಗರಾಣಿ (28), ರೋಹಿತ್ ರಾಜೇಂದ್ರ ದೊಡ್ಮನಿ (23), ಶಿವರಾಜ ಸೋನ್ಯಾ ತಂದೆ ನಾಗೇಶ ದೊಡ್ಮನಿ (21) ಆರೋಪಿಗಳು. …
Read More »ಬೆಳಗಾವಿ ಲೋಕಸಭೆಗೆ ಇಬ್ಬರ ಹೆಸರು:ಡಿ.ಕೆ.ಶಿವಕುಮಾರ
ಶುಕ್ರವಾರ ಬೆಳಗ್ಗೆ ಹಾವೇರಿ ಜಿಲ್ಲೆಯ ಮೈಲಾರಕ್ಕೆ ತೆರಳಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಮೈಲಾರ ಲಿಂಗೇಶ್ವರನಲ್ಲಿ ಕ್ಷಮೆ ಯಾಚಿಸಿದ್ದಾರೆ. ಜೊತೆಗೆ ಮೈಲಾರಲಿಂಗೇಶ್ವರನಿಗೆ ಬೆಳ್ಳಿಯ ಹೆಲಿಕಾಪ್ಟರ್ ಒಪ್ಪಿಸಿದ್ದಾರೆ. ಮೈಲಾರದಿಂದ ನೇರವಾಗಿ ಬೆಳಗಾವಿಗೆ ಆಗಮಿಸಿದ್ದ ಶಿವಕುಮಾರ ಸುದ್ದಿಗಾರರಿಗೆ ಈ ಕುರಿತು ಮಾಹಿತಿ ನೀಡಿದರು. ಈ ಹಿಂದೆ ಮೈಲಾರಕ್ಕೆ ಹೆಲಿಕಾಪ್ಟರ್ ನಲ್ಲಿ ತೆರಳಿದ್ದೆ. ಆದರೆ ಅಲ್ಲಿಗೆ ಹೆಲಿಕಾಪ್ಟರ್ ನಲ್ಲಿ ಹೋಗುವುದು ತಪ್ಪು ಎಂದು ಕಾರ್ಯಕರ್ತರು ತಿಳಿಸಿದರು. ಜೊತೆಗೆ ಅವರು ಅದಕ್ಕಾಗಿ ಹರಕೆಯನ್ನೂ ಹೊತ್ತಿದ್ದರು. ಹಾಗಾಗಿ ನಾನು …
Read More »
Laxmi News 24×7