ಗದಗ: ಈಗಾಗಲೇ ಅಧಿಕಾರ ಕಳೆದುಕೊಂಡು, ದೇಶಕ್ಕೆ ಬೆಂಕಿ ಇಡುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ. ಸಿಎನ್ಎ ಕಾನೂನು ತಂದಾಗ ದೇಶಕ್ಕೆ ಬೆಂಕಿ ಇಡುವ ಕೆಲಸ ಮಾಡಿದ್ದಾರೆ ಎಂದು ನಳಿನ್ ಕುಮಾರ್ ಕಟೀಲ್ ಆಕ್ರೋಶ ವ್ಯಕ್ತಪಡಿಸಿದರು. ಗದಗ ಜಿಲ್ಲಾ ಬಿಜೆಪಿ ಕಾರ್ಯಾಲಯ ಭವನ ಶಿಲಾನ್ಯಾಸದಲ್ಲಿ ಭಾಗಿಯಾಗಿ ಮಾತನಾಡಿದ ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ನಳೀನ ಕುಮಾರ್ ಕಟೀಲ್ ಅವರು ಕಾಂಗ್ರೇಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದರು. ಬೆಂಗಳೂರಿನ ಡಿಜೆ ಹಳ್ಳಿ- ಕೆಜಿ ಹಳ್ಳಿ ಗಲಭೆ …
Read More »ಸಾರ್ವಜನಿಕರ ಎದುರೇ ಉಜಿರೆಯ ಬಾಲಕನ ಕಿಡ್ನಾಪ್-
ಸಾರ್ವಜನಿಕರ ಎದುರೇ ಉಜಿರೆಯ ಬಾಲಕನ ಕಿಡ್ನಾಪ್- ಮಾಹಿತಿ ಕೊಡಲು ಸ್ಥಳೀಯರು ಕೋರಿಕೆಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ 8 ವರ್ಷದ ಬಾಲಕನನ್ನು ದುಷ್ಕರ್ಮಿಗಳು ಅಪಹರಿಸಿದ್ದಾರೆ.ಸಾರ್ವಜನಿಕರ ಎದುರೇ ದುಷ್ಕರ್ಮಿಗಳು ಉಜಿರೆಯಿಂದ ಬಿಳಿ ಬಣ್ಣದ ಹಾಗೂ ಯಲ್ಲೋ ಬೋರ್ಡ್ ಇದ್ದ ಇಂಡಿಕಾ ಕಾರಿನಲ್ಲಿ ಕಿಡ್ನಾಪ್ ಮಾಡಿದ್ದಾರೆ. ಈ ಘಟನೆ ನಿನ್ನೆ ಸಂಜೆ 6.30ರ ಸುಮಾರಿಗೆ ನಡೆದಿದೆ. ಕಾರು ಉಜಿರೆಯಿಂದ ಚಾರ್ಮಾಡಿ ಕಡೆ ಹೋಗಿದೆ ಕಿಡ್ನಾಪ್ ಬಳಿಕ ಬಾಲಕನ ತಂದೆ ಬಿಜೋಯ್ …
Read More »ಜನಪದ ಕಲಾವಿದರು ತಮ್ಮ ಕಲೆಯ ಬಗೆಗೆ ಸ್ವಾಭಿಮಾನಿಗಳಾಗಿದ್ದು,
ಗೋಕಾಕ: ಜನಪದ ಕಲಾವಿದರು ತಮ್ಮ ಕಲೆಯ ಬಗೆಗೆ ಸ್ವಾಭಿಮಾನಿಗಳಾಗಿದ್ದು, ಆತ್ಮಗೌರವವುಳ್ಳವರಾಗಿರಬೇಕೆಂದು ಜಾನಪದತಜ್ಞ, ಕರ್ನಾಟಕ ಜಾನಪದ ಪರಿಷತ್ತಿನ, ಬೆಳಗಾವಿ ಜಿಲ್ಲಾಧ್ಯಕ್ಷ ಡಾ| ಸಿ.ಕೆ.ನಾವಲಗಿ ಅಭಿಪ್ರಾಯಿಸಿದರು. ಅವರು ನಗರದ ಸಿದ್ಧಾರ್ಥ ಲಲಿತ ಕಲಾ ಮಹಾವಿದ್ಯಾಲಯದಲ್ಲಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತೆ, ಬಯಲಾಟ ಹಿರಿಯ ಕಲಾವಿದೆ ಕೆಂಪವ್ವ ಹರಿಜನ ಇವರನ್ನು ಕಜಾಪದ ಪರವಾಗಿ ಸನ್ಮಾನಿಸಿ, ಮಾತನಾಡಿದ ಅವರು, ಕಲಾವಿದರಿಂದಲೇ ಕಲೆಗಳ ಉಳಿವು-ಬೆಳವಣಿಗೆ, ಸರಕಾರ-ಸಾರ್ವಜನಿಕರು ಕಲಾವಿದರನ್ನು ಪೋಷಿಸಬೇಕಾದ ಅಗತ್ಯವಿದೆಯೆಂದು ಮಾತನಾಡಿದರು. ಕಲಾವಿದರ ಬದುಕು ಕುರಿತು ಪ್ರಾ. …
Read More »ಮತ್ತೆ ಹೆಲಿಕಾಪ್ಟರ್ ಹಾರಿಸುತ್ತಿರುವುದಕ್ಕೆ ಸತೀಶ ಜಾರಕಿಹೊಳಿ ಕೊಟ್ಟ ಉತ್ತರ ಏನು..?
ಬೆಳಗಾವಿ ಲೋಕಸಭೆ ಬೈಎಲೆಕ್ಷನ್ಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ನನ್ನ ಹೆಸರನ್ನು ಯಾರೂ ಮುಂಚೂಣಿಗೆ ತರುತ್ತಿಲ್ಲ. ಸಭೆಯಲ್ಲಿ ನನ್ನ ಹೆಸರು ಚರ್ಚೆ ಆಗಿದೆ ಹೀಗಾಗಿ ಬರುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ. : ಬೆಳಗಾವಿ ಲೋಕಸಭೆಯಲ್ಲಿ ನಿಮ್ಮ ಹೆಸರು ಪದೇ ಪದೇ ಕೇಳಿ ಬರುತ್ತಿದೆ. ರಾಜ್ಯ ರಾಜ ರಾಜಕಾರಣದಿಂದ ನಿಮ್ಮನ್ನು ದೂರ ಮಾಡಲು ಏನಾದ್ರು ಷಡ್ಯಂತ್ರ ನಡೆದಿದೆಯಾ ಎಂಬ ಮಾಧ್ಯಮಗಳ ಪ್ರಶ್ನೆಗೆ ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಉತ್ತರಿಸಿದ …
Read More »ತಿಂಗಳಾಂತ್ಯದಲ್ಲಿ ಅಥವಾ ಜನವರಿ ಮೊದಲ ವಾರದಲ್ಲಿ ಸಂಪುಟ ವಿಸ್ತರಣೆ-ಸಚಿವ ರಮೇಶ ಜಾರಕಿಹೋಳಿ
ಗ್ರಾಮ ಪಂಚಾಯತಿ ಚುನಾವಣೆ ಹಿನ್ನೆಲೆ ಸಂಪುಟ ವಿಸ್ತರಣೆಯಾಗಿದ್ದು, ಈ ತಿಂಗಳ ಕೊನೆಯ ವಾರದಲ್ಲಿ ಇಲ್ಲವೇ ಜನವರಿ ಮೊದಲ ವಾರದಲ್ಲಿ ಸಂಪುಟ ವಿಸ್ತರಣೆಯಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಮತ್ತು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೋಳಿ ಹೇಳಿದರು. ಗುರುವಾರದಂದು ಬೆಳಗಾವಿಯಲ್ಲಿ ಮಾಧ್ಯಮಗಾರರೊಂದಿಗೆ ಮಾತನಾಡಿದ ಸಚಿವ ರಮೇಶ ಜಾರಕಿಹೊಳಿ ಪಂಚಾಯತ ಚುನಾವಣೆ ಹಿನ್ನೆಲೆ ಸಂಪುಟ ವಿಸ್ತರಣೆಗೆ ತಡವಾಗಿದೆ. ಈ ತಿಂಗಳ ಕೊನೆಯಲ್ಲಿ ಅಥವಾ ಜನವರಿ ಮೊದಲ ವಾರದಲ್ಲಿ ಆಗುವ ಸಾಧ್ಯತೆ ಇದೆ ಎಂದ್ರು. …
Read More »ಗಣರಾಜ್ಯೋತ್ಸವದಂದು ಹೊಸ ಬಾಬರಿ ಮಸೀದಿಗೆ ಶಂಕುಸ್ಥಾಪನೆ
ಅಯೋಧ್ಯ,,ಡಿ.17-ಬಾಬರಿ ಮಸೀದಿ ಸ್ಥಳದಿಂದ ಸ್ಥಳಾಂತರಿಸಿರುವ ಮಸೀದಿ ನಿರ್ಮಾಣ ಕಾರ್ಯಕ್ಕೆ ಗಣರಾಜ್ಯೋತ್ಸವದಂದು ಶಂಕು ಸ್ಥಾಪನೆ ನೆರವೇರಿಸಲು ತೀರ್ಮಾನಿಸಲಾಗಿದೆ. ಮಸೀದಿ ನಿರ್ಮಾಣಕ್ಕಾಗಿ ನೀಡಲಾಗಿರುವ ಐದು ಎಕರೆ ಪ್ರದೇಶದಲ್ಲಿ ಹೊಸ ಮಸೀದಿ ನಿರ್ಮಾಣ ಮಾಡಲು ಟ್ರಸ್ಟ್ ಸದಸ್ಯರು ತೀರ್ಮಾನಿಸಿದ್ದಾರೆ. ದೇಶದಲ್ಲಿ ಪ್ರಜಾಪ್ರಭುತ್ವ ಜಾರಿಗೆ ಬಂದ ದಿನವಾದ ಗಣರಾಜ್ಯೋತ್ಸವದಂದು ಏಕತೆ ಸಂಕೇತವಾಗಿ ಅಂದು ಮಸೀದಿ ನಿರ್ಮಾಣಕ್ಕೆ ಶಂಕು ಸ್ಥಾಪನೆ ನೆರವೇರಿಸಲಿದ್ದೇವೆ ಎಂದು ಇಂಡೋ ಇಸ್ಲಾಮಿಕ್ ಕಲ್ಚರಲ್ ಫೌಂಡೇಶನ್ ಕಾರ್ಯದರ್ಶಿ ಅತ್ತಾರ್ ಹುಸೇನ್ ತಿಳಿಸಿದ್ದಾರೆ. ಮಸೀದಿ ನಿರ್ಮಾಣ …
Read More »ರಾಜ್ಯದಲ್ಲಿ ಈವರೆಗೆ ಮೂವರು ಡಿವೈಎಸ್ಪಿಗಳ ಆತ್ಮಹತ್ಯೆ
ಬೆಂಗಳೂರು, ಡಿ.17- ಕಳೆದ ರಾತ್ರಿ ಸಿಐಡಿ ಡಿವೈಎಸ್ಪಿ ವಿ.ಲಕ್ಷ್ಮೀ ಅವರು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣವೂ ಸೇರಿದಂತೆ ರಾಜ್ಯದಲ್ಲಿ ಈವರೆಗೂ ಮೂರು ಮಂದಿ ಡಿವೈಎಸ್ಪಿಗಳು ಆತ್ಮಹತ್ಯೆ ಮೂಲಕ ಜೀವ ಕಳೆದುಕೊಂಡಂತಾಗಿದೆ. ಲಕ್ಷ್ಮೀ ಅವರಿಗೂ ಮೊದಲು ಇಬ್ಬರು ಡಿವೈಎಸ್ಪಿಗಳು ಆತ್ಮಹತ್ಯೆ ಮಾಡಿಕೊಂಡಿದ್ದರು. ಆ ಎರಡು ಪ್ರಕರಣಗಳು ಭಾರೀ ಚರ್ಚೆಗೆ ಗ್ರಾಸವಾಗಿದ್ದವು. 2016 ಜುಲೈ 5ರಂದು ಚಿಕ್ಕಮಗಳೂರು ಗ್ರಾಮಾಂತರ ಉಪವಿಭಾಗದಲ್ಲಿ ಡಿವೈಎಸ್ಪಿ ಆಗಿದ್ದ ಕಲ್ಲಪ್ಪ ಹಂಡಿಬಾಗ್ ಬೆಳಗಾವಿ ಜಿಲ್ಲೆ ಸವದತ್ತಿ ತಾಲ್ಲೂಕಿನ ಮುರ್ಗೋಡು ಗ್ರಾಮದಲ್ಲಿರುವ …
Read More »ಯಮಕನಮರಡಿ ಫೈರಿಂಗ ಕೊಡಲೇ ತಪಿತಸ್ಥ ಆರೋಪಿಗಳನ್ನು ಬಂಧಿಸಬೇಕ: ಸತೀಶ್ ಜಾರಕಿಹೊಳಿ
ಬೆಳಗಾವಿ: ಹುಕ್ಕೆರಿ ತಾಲೂಕಿನ ಯಮಕನಮರಡಿ ಗ್ರಾಮದಲ್ಲಿ ಇಬ್ಬರು ಕಾಂಗ್ರೆಸ್ ಕಾರ್ಯಕರ್ತರ ಮೇಲೆ ನಡೆದಿರುವ ಗುಂಡಿನ ದಾಳಿಯನ್ನು ತೀವ್ರವಾಗಿ ಖಂಡಿಸಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಯಮಕನಮರಡಿ ಶಾಸಕ ಸತೀಶ್ ಜಾರಕಿಹೊಳಿ ಅವರು ಕೊಡಲೇ ತಪಿತಸ್ಥ ಆರೋಪಿಗಳನ್ನು ಬಂಧಿಸಬೇಕೆಂದು ಪೊಲೀಸರಿಗೆ ಒತ್ತಾಯಿಸಿದ್ದಾರೆ. ಈ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜು ತಳವಾರಗೆ ರಾಜಕೀಯ ರಕ್ಷಣೆ ಇದೆ. ಅಂಕಲಗಿ ಗ್ರಾಮದಲ್ಲಿ ಮತ್ತೆ ಗುಂಡಾಗಿರಿ ನಡೆದಿದೆ. ಕಳೆದ 6 ತಿಂಗಳಲ್ಲಿ ಮೂರು ಸಲ ಇಂತಹ ಘಟನೆ …
Read More »ವಿಧಾನ ಪರಿಷತ್ ಸಭಾಪತಿ ಕಾಂಗ್ರೆಸ್ ನಿಯಂತ್ರಣದಲ್ಲಿದ್ದಾರೆ
ಉಡುಪಿ: ವಿಧಾನ ಪರಿಷತ್ ಕಲಾಪದಲ್ಲಿ ನಡೆದ ಗದ್ದಲವನ್ನು ಕುರಿತು ಮಾತನಾಡಿರುವ ಉಡುಪಿ ಶಾಸಕ ಕೋಟ ಶ್ರಿನಿವಾಸ್ ಪೂಜಾರಿ ವಿಧಾನ ಪರಿಷತ್ ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿಯವರನ್ನು ಕಾಂಗ್ರೆಸ್ ನಿಯಂತ್ರಣ ಮಾಡುವುದು ಬಿಟ್ಟಿದ್ದರೆ ಗೊಂದಲ ಇರುತ್ತಿರಲಿಲ್ಲ ಎಂದು ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ. ಗದ್ದಲದ ಕುರಿತು ಪ್ರತಿಕ್ರಿಯಿಸಿರುವ ಸಚಿವರು ಕಾಂಗ್ರೆಸ್ ನಾಯಕರು ಸಭಾಪತಿ ತಾನು ಹೇಳಿದಂತೆ ಕೇಳಬೇಕು ಎಂದು ಸಿದ್ದರಾಮಯ್ಯ ಸಹಿತ ಎಲ್ಲರೂ ಕಾಂಗ್ರೆಸ್ಸೀಕರಣ ಮಾಡುತ್ತಿದ್ದಾರೆ. ಕಾಂಗ್ರೆಸ್ಸೀಕರಣ ಮಾಡಿದ್ದರ ಫಲವೇ ವಿಧಾನಪರಿಷತ್ ಗದ್ದಲಕ್ಕೆ …
Read More »ಹೆಸರಾಂತ ಉದ್ಯಮಿ ಆರ್.ಎನ್. ಶೆಟ್ಟಿ ವಿಧಿವಶ..!
ಬೆಂಗಳೂರು : ಆರ್.ಎನ್.ಎಸ್. ಶಿಕ್ಷಣ ಮತ್ತು ಉದ್ಯಮ ಸಮೂಹಗಳ ಸ್ಥಾಪಕರು ಹಾಗೂ ಸಮಾಜಮುಖಿ ಚಿಂತಕ ಮತ್ತು ದಾನಿ, ಶ್ರೀ ಆರ್.ಎನ್. ಶೆಟ್ಟಿ (92) ಗುರುವಾರ ಡಿ.17ರ ನಸುಕಿನ 2 ಗಂಟೆ ಸುಮಾರಿನಲ್ಲಿ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಪಾರ್ಥಿವ ಶರೀರವನ್ನು ಸಾರ್ವಜನಿಕರ ದರ್ಶನಕ್ಕಾಗಿ ಉತ್ತರ ಹಳ್ಳಿಯ ಆರ್.ಎನ್. ಎಸ್. ತಾಂತ್ರಿಕ ವಿದ್ಯಾಲಯ ಕಾಲೇಜು ಆವರಣದಲ್ಲಿ ಮಧ್ಯಾಹ್ನ 2 ಗಂಟೆಯ ನಂತರ ಇಡಲಾಗುವುದು, ಅಂತ್ಯಸಂಸ್ಕಾರ ಸಂಜೆ ನೆರವೇರಿಸಲಾಗುವುದು ಎಂದು ಅವರ ಕುಟುಂಬದ ಮೂಲಗಳು …
Read More »
Laxmi News 24×7