Breaking News

ರಾಜ್ಯ

ಸಿಐಡಿ DySP ಲಕ್ಷ್ಮೀ ಆತ್ಮಹತ್ಯೆ ಸುತ್ತ ಅನುಮಾನದ ಹುತ್ತ..!

ಬೆಂಗಳೂರು, ಡಿ.17- ಸಿಐಡಿ ಘಟಕದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಡಿವೈಎಸ್‍ಪಿ ಲಕ್ಷ್ಮಿ (33) ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಗರದ ಅನ್ನಪೂರ್ಣೇಶ್ವರಿ ನಗರದ ಪರಿಚಿತರ ಮನೆಯಲ್ಲಿ ಲಕ್ಷ್ಮಿ ಅವರು ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾರೆ. ಡಿವೈಎಸ್‍ಪಿ ಲಕ್ಷ್ಮಿ ಅವರ ಆತ್ಮಹತ್ಯೆಗೆ ನಿಖರ ಕಾರಣ ಸದ್ಯಕ್ಕೆ ತಿಳಿದುಬಂದಿಲ್ಲ. ಲಕ್ಷ್ಮಿ ಅವರು 2014ರ ಬ್ಯಾಚ್‍ನ ಕೆಎಸ್‍ಪಿಎಸ್ ಅಧಿಕಾರಿ, 2017ರಲ್ಲಿ ಸಿಐಡಿ ಘಟಕದಲ್ಲಿ ಡಿವೈಎಸ್‍ಪಿ ಆಗಿ ಅವರು ನೇಮಕಗೊಂಡು ಕರ್ತವ್ಯ ನಿರ್ವಹಿಸುತ್ತಿದ್ದರು. ಮೂಲತಃ ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನ …

Read More »

ಕಾಂಗ್ರೇಸ್ ಮುಖಂಡರ ಮೇಲೆ ಗುಂಡಿ ದಾಳಿ: ಗ್ರಾ,ಪಂ, ಚುನಾವಣೆ ಹಿನ್ನೆಲೆ ಶಂಕೆ,

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಯಮಕನಮರಡಿ ಗ್ರಾಮದಲ್ಲಿ ಅನಾಮಧೇಯ ವ್ಯಕ್ತಿಯೊಬ್ಬ ಶಾಸಕ ಸತೀಶ ಜಾರಕಿಹೋಳಿ ಆಪ್ತರಾದ ಕೀರಣ ರಜಪೂತ, ಬರಮಾ ದೂಪದಾಳೆ ಮೇಲೆ ಗುಂಡಿನ ದಾಳಿ ಗ ನಡೆಸಿ ಫರಾರಿಯಾಗಿರುವ ಘಟನೆ ನಡೆದಿದೆ. ಈ ದಾಳಿಯು ಕಂಟ್ರಿ ಪಿಸ್ತೋಲದಿಂದ ನಡೆಸಲಾಗಿದೆ. ಕಳೆದ ಬುಧವಾರ ರಾತ್ರಿ ಸುಮಾರು 11.30ಕ್ಕೆ ಈ ಘಟನೆ ನಡೆದಿದೆ. ಗುಂಡಿನ ದಾಳಿಯಲ್ಲಿ ಗಾಯಗೊಂಡಿರುವ ವ್ಯಕ್ತಿಯ ನ್ನು ಚಿಕಿತ್ಸೆಗಾಗಿ ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಬ್ಬರು ಪ್ರಾಣಾಪಾಯದಿಂದ …

Read More »

ತಿರುಪತಿ ತಿಮ್ಮಪ್ಪ ಕಲ್ಯಾಣ ಕರ್ನಾಟಕದ ಜನತೆಗೆ ಮತ್ತಷ್ಟು ಹತ್ತಿರವಾಗಿದ್ದಾನೆ. ಕೇವಲ 1 ಗಂಟೆ 5 ನಿಮಿಷದಲ್ಲಿ ಕಲಬುರ್ಗಿಯಿಂದ ತಿರುಪತಿಗೆ ಹೋಗೋ ಅವಕಾಶವನ್ನು ಜನ ಪಡೆದಿದ್ದಾರೆ.

ಕಲಬುರ್ಗಿ(ಡಿಸೆಂಬರ್​. 16): ಕಲ್ಯಾಣ ಕರ್ನಾಟಕಕ್ಕೂ ತಿರುಪತಿಗೂ ಅವಿನಾಭಾವ ಸಂಬಂಧ. ಒಂದು ಕಾಲಕ್ಕೆ ತಿರುಪತಿ ಮೇಲೆ ದಾಳಿ ನಡೆದಂತಹ ಸಂದರ್ಭದಲ್ಲಿ ಕ್ಷೇತ್ರದ ಸಂರಕ್ಷಣೆಗೆ ನಿಂತವರು ಸುರಪುರ ಸಂಸ್ಥಾನದ ದೊರೆಗಳು. ಅದೇ ಕಾರಣಕ್ಕೆ ವಿಜಯದಶಮಿ ಸಂದರ್ಭದಲ್ಲಿ ತಿರುಪತಿಯಲ್ಲಿ ನಡೆಯುವ ಬ್ರಹ್ಮತ್ಸವದಲ್ಲಿ ಮೊದಲ ಪೂಜೆ ನಡೆಯುವುದು ಸುರಪುರ ದೊರೆಗಳದ್ದು. ಈಗಲೂ ಸಹ ಸುರಪುರ ಸಂಸ್ಥಾನವನ್ನು ಪ್ರತಿನಿಧಿಸುವವರಿಗೆ ಅಗ್ರ ಪೂಜೆಯ ಭಾಗ್ಯ ಕಲ್ಪಿಸಲಾಗಿದೆ. ಹೀಗಾಗಿ ತಿರುಪತಿಯಲ್ಲಿ ಕಲ್ಯಾಣ ಕರ್ನಾಟಕದ ಜನತೆಯ ಬಗ್ಗೆ ಒಂದಷ್ಟು ಪ್ರೀತ್ಯಾದರಗಳಿವೆ. ಪ್ರತಿ ವರ್ಷವೂ …

Read More »

ಈ ವೇಳೆ ರಾಹುಲ್​ ಗಾಂಧಿಯವರಿಗೆ ಮಾತನಾಡದಲು ಸಮಿತಿ ಅಧ್ಯಕ್ಷರು ಅವಕಾಶ ನೀಡಲಿಲ್ಲ. ಈ ಹಿನ್ನಲೆ ಕಾಂಗ್ರೆಸ್​ ನಾಯಕರು ಸಭೆಯಿಂದ ಹೊರ ನಡೆಯಲು ನಿರ್ಧರಿಸಿದರು ಎಂದು ಅವರು ತಿಳಿಸಿದ್ದಾರೆ. ಈ ವೇಳೆ ಮತ್ತಿಬ್ಬರು ನಾಯಕರಾದ ಸತ್ವ ಹಾಗೂ ರೆಡ್ಡಿ ಕೂಡ ಅವರ ಹಾದಿ ಹಿಡಿದರು.

ರಕ್ಷಣಾ ಸಂಸದೀಯ ಸಮಿತಿ ಸಭೆಯಿಂದ ಮಧ್ಯಭಾಗದಲ್ಲಿಯೇ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಹೊರ ನಡೆದಿದ್ದಾರೆ. ಇವರ ಜೊತೆಗೆ ಕಾಂಗ್ರೆಸ್​ ಸಂಸದರಾದ ರಾಜೀವ್​ ಸತ್ವ ಹಾಗೂ ರೇವಂತ್​ ರೆಡ್ಡಿ ಕೂಡ ಹೊರ ನಡೆದಿದ್ದಾರೆ. ಸಭೆಯಲ್ಲಿ ರಾಷ್ಟ್ರೀಯ ಭದ್ರತಾ ಸಮಸ್ಯೆ ಕುರಿತು ಚರ್ಚೆ ನಡೆಸುವ ಬದಲು ಸಶಸ್ತ್ರ ಪಡೆಗಳ ಸಮವಸ್ತ್ರ ಕುರಿತು ಚರ್ಚಿಸುವ ಮೂಲಕ ಸಮಯ ವ್ಯರ್ಥ ಮಾಡಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸಭೆಯಲ್ಲಿ ಚೀನಾದ ಆಕ್ರಮಣಶೀಲತೆ ಮತ್ತು …

Read More »

ಕಬ್ಬು ಬೆಳೆಗಾರರಿಗೆ ವಿಶೇಷ ಪ್ಯಾಕೇಜ್ ಘೋಷಣೆ

ನವದೆಹಲಿ: ನೂತನ ಕೃಷಿ ಕಾಯ್ದೆ ವಿರೋಧಿಸಿ ರೈತರು ಪ್ರತಿಭಟನೆ ನಡೆಸುತ್ತಿರುವ ಬೆನ್ನಲ್ಲೇ ಕೇಂದ್ರ ಸರ್ಕಾರ ಕಬ್ಬು ಬೆಳೆಗಾರರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದೆ. ಕಬ್ಬು ಬೆಳೆಗಾರರಿಗೆ 3,500 ಕೋಟಿ ರೂಪಾಯಿ ವಿಶೇಷ ಪ್ಯಾಕೇಜ್ ಘೋಷಿಸಿದ್ದು, 60 ಲಕ್ಷ ಟನ್ ಸಕ್ಕರೆಯನ್ನು ರೈತರಿಂದ ಖರೀದಿಸಿ ವಿದೇಶಗಳಿಗೆ ರಫ್ತು ಮಾಡಲು ನಿರ್ಧರಿಸಲಾಗಿದೆ. ಹೀಗೆ ಬಂದ ಹಣವನ್ನು ರೈತರ ಖಾತೆಗೆ ಜಮಾವಣೆ ಮಾಡಲು ಕೇಂದ್ರ ಸಂಪುಟ ಸಭೆಯಲ್ಲಿ ಸಮ್ಮತಿ ನೀಡಲಾಗಿದೆ ಎಂದು ಕೇಂದ್ರ ಸಚಿವ …

Read More »

ಹಾಡ ಹಗಲೇ ಪೊಲೀಸರ ಮೇಲೆ ದುಷ್ಕರ್ಮಿಗಳು ತಲ್ವಾರ್ ನಿಂದ ದಾಳಿ

ಮಂಗಳೂರು: ಹಾಡ ಹಗಲೇ ಪೊಲೀಸರ ಮೇಲೆ ದುಷ್ಕರ್ಮಿಗಳು ತಲ್ವಾರ್ ನಿಂದ ದಾಳಿ ನಡೆಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಕರ್ತವ್ಯ ನಿರತ ಹೆಡ್ ಕಾನ್ಸ್ ಟೇಬಲ್, ಮಹಿಳಾ ಪೊಲೀಸರ ಮೇಲೆ ದುಷ್ಕರ್ಮಿಗಳು ತಲ್ವಾರ್ ನಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಬಂದರು ಠಾಣಾ ಹೆಡ್ ಕಾನ್ಸ್ ಟೇಬಲ್ ಗಣೇಶ್ ಕಾಮತ್ ಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಂದರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ಶಿಂದಿಕುರಬೇಟ ಗ್ರಾಪಂ ಗೆ ಅವಿರೋಧ ಆಯ್ಕೆ: ಸದಸ್ಯರಿಂದ ಸಚಿವ ರಮೇಶ ಜಾರಕಿಹೊಳಿಗೆ ಸತ್ಕಾರ

ಗೋಕಾಕ: ತಾಲೂಕಿನ ಶಿಂದಿಕುರಬೇಟ ಗ್ರಾಮ ಪಂಚಾಯತಿಗೆ ವಾರ್ಡ್ ನಂಬರ್ 8ರ ಸದಸ್ಯರಾದ ಭೀಮಶಿ ಯಲ್ಲಪ್ಪ ಬಿರನಾಳಿ ಮತ್ತು ಮಂಜುಳಾ ವಿಠ್ಠಲ ಕರೋಶಿ ಅವರು ಅವಿರೋಧ ಆಯ್ಕೆಯಾದ ಹಿನ್ನೆಲೆಯಲ್ಲಿ ಸದಸ್ಯರು ಹಾಗೂ ಗ್ರಾಮದ ಮುಖಂಡರು ಸಚಿವ ರಮೇಶ ಜಾರಕಿಹೊಳಿ ಅವರನ್ನು ಬುಧವಾರದಂದು ನಗರದ ಅವರ ಕಾರ್ಯಾಲಯದಲ್ಲಿ ಸತ್ಕರಿಸಿದರು. ಈ ಸಂದರ್ಭದಲ್ಲಿ ಜಿ.ಪಂ ಸದಸ್ಯರಾದ ಟಿ. ಆರ್. ಕಾಗಲ, ಮಡೆಪ್ಪ ತೋಳಿನವರ, ಶ್ರೀಕಾಂತ ಯತ್ತಿನಮನಿ,ರಾಮಯ್ಯ ಆಲೋಶಿ,ಅಡಿವೆಪ್ಪ ಬೆಳಗಲಿ, ಸಿದ್ದಪ್ಪ ಸಂಸುದ್ದಿ, ಮುಸಾ ಸರಕಾವಸ, …

Read More »

ಗೋಕಾಕ: ಸರ್ಕಾರಿ ಗೌರವದೊಂದಿಗೆ ಯೋಧನ ಅಂತ್ಯಕ್ರಿಯೆ

ಗೋಕಾಕ: ರಾಜಸ್ಥಾನದಲ್ಲಿ ಕರ್ತವ್ಯ ನಿರ್ವಹಿಸುವಾಗ ಅನಾರೋಗ್ಯದಿಂದ ಸಾವನ್ನಪ್ಪಿದ್ದ ತಾಲೂಕಿನ ಲೋಳಸೂರ ಗ್ರಾಮದ ಹುತಾತ್ಮ ಯೋಧ ಕಲ್ಲಪ್ಪ ಸಿದ್ದಪ್ಪ ಬಾಂವಚಿ (45) ಅವರ ಅಂತ್ಯಕ್ರಿಯೆಯನ್ನು ಸ್ವಗ್ರಾಮದಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ಮಧ್ಯಾಹ್ನ 12.30ಕ್ಕೆ ನೆರವೇರಿಸಲಾಯಿತು.ಬುಧವಾರದಂದು ಬೆಳಿಗ್ಗೆ 11.00ಕ್ಕೆ ಯೋಧ ಕಲ್ಲಪ್ಪ ಅವರ ಪಾರ್ಥಿವ ಶರೀರ ಗೋವಾ ಮಾರ್ಗವಾಗಿ ಲೋಳಸೂರ ಗ್ರಾಮಕ್ಕೆ ತಲುಪಿತು.  ಅವರ ಜಮೀನಿನಲ್ಲಿ ಸಾರ್ವಜನಿಕರ ದರ್ಶನಕ್ಕಾಗಿ ಇಡಲಾಯಿತು.  ನೂರಾರು ಜನ   ಆಗಮಿಸಿ ಅಂತಿಮ ದರ್ಶನ ಪಡೆದರು. ಯೋಧ ಕಲ್ಲಪ್ಪ ಬಾಂವಚಿ …

Read More »

ಗೋಕಾಕ: ಡಿ. 19 ರಂದು ಎಸ್ಎಸ್ಎಲ್ ಸಿ, ಪಿಯುಸಿ ಟಾಪರ್ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ

ಗೋಕಾಕ: ಅಖಿಲ ಭಾರತ ವೀರಶೈವ ಮಹಾಸಭಾ ಗೋಕಾಕ ತಾಲೂಕು ಘಟಕದ ವತಿಯಿಂದ ಡಿ. 19 ರಂದು ಮುಂಜಾನೆ 10 ಘಂಟೆಗೆ ನಗರದ ಕೆ.ಎಲ್.ಇ ಆಂಗ್ಲ ಮಾಧ್ಯಮ ಶಾಲಾ ಆವರಣದಲ್ಲಿ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಹಾಸಭಾದ ತಾಲೂಕು ಘಟಕದ ಅಧ್ಯಕ್ಷ ಸೋಮಶೇಖರ್ ಮಗದುಮ್ಮ ಹೇಳಿದರು. ನಗರದ ಕೆಎಲ್ಇ ಶಾಲಾ ಆವರಣದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಎಸ್ ಎಸ್ ಎಲ್ …

Read More »

ಮನೆ ಪಾಠಕ್ಕೆ ಹೋಗಿದ್ದ ಅಪ್ರಾಪ್ತ ಬಾಲಕಿ ಮೇಲೆ ಶಿಕ್ಷಕಿಯ ಪತಿಯೇ ಅತ್ಯಾಚಾರ

ಬೆಂಗಳೂರು: ಮನೆ ಪಾಠಕ್ಕೆ ಹೋಗಿದ್ದ ಅಪ್ರಾಪ್ತ ಬಾಲಕಿ ಮೇಲೆ ಶಿಕ್ಷಕಿಯ ಪತಿಯೇ ಅತ್ಯಾಚಾರ ನಡೆಸಿರುವ ಘಟನೆಯೊಂದು ಮಾಚೋಹಳ್ಳಿಯಲ್ಲಿ ನಡೆದಿದೆ. ರವಿ ಕಿರಣ್ ಅಲಿಯಾಸ್ ಕಿರಣ್ (26) ಅತ್ಯಾಚಾರ ನಡೆಸಿದ ಆರೋಪಿಯಾಗಿದ್ದಾನೆ. ಆರೋಪಿಯ ಪತ್ನಿ ಟ್ಯೂಷನ್ ನಡೆಸುತ್ತಿದ್ದರು. ಆರೋಪಿ ಕ್ಯಾಬ್ ಚಾಲಕನಾಗಿದ್ದನೆಂದು ವರದಿಯಾಗಿದೆ. ವರ್ಷದ ಹಿಂದೆ ಘಟನೆ ನಡೆದಿದ್ದು, ಇದೀಗ ಘಟನೆ ಬೆಳಕಿಗೆ ಬಂದಿದೆ. 10ನೇ ತರಗತಿ ಓದುತ್ತಿದ್ದ ಬಾಲಕಿ ಮನೆಪಾಠಕ್ಕೆಂದು ಶಿಕ್ಷಕಿಯ ಮನೆಗೆ ಬಂದಿದ್ದಾಳೆ. ಈ ವೇಳೆ ಶಿಕ್ಷಕಿ ಮನೆಯಲ್ಲಿರಲಿಲ್ಲ …

Read More »