Breaking News

ರಾಜ್ಯ

ಸಿಎಂಗೆ ಕಣ್ಣು, ಬಾಯಿ ಇಲ್ಲ ಅಂದ್ರು ಉಮಾಶ್ರೀ

ಬಾಗಲಕೋಟೆ: ಮಹಲಿಂಗಪುರ ಸದಸ್ಯೆ ತಳ್ಳಾಟ ನೂಕಾಟದಿಂದ ಮಾನಸಿಕ ಹಿಂಸೆ ಹಾಗೂ ದೈಹಿಕ ಹಿಂಸೆಯ ಪರಿಣಾಮ ಅವರಿಗೆ ಗರ್ಭಪಾತವಾಗಿದೆ. ಸಿಎಂಗೆ ಕಿವಿ, ಕಣ್ಣೂ, ಬಾಯಿಯೂ ಇಲ್ಲದಂತಾಗಿದೆ ಎಂದು ಮಾಜಿ ಸಚಿವೆ, ನಟಿ ಉಮಾಶ್ರೀ ಆಕ್ರೋಶ ವ್ಯಕ್ತಪಡಿಸಿದರು.ಬಿಜೆಪಿ ಶಾಸಕ ಮತ್ತು ಬೆಂಬಲಿಗರ ತಳ್ಳಾಟದಿಂದಾಗಿ ಪುರಸಭೆ ಸದಸ್ಯೆಗೆ ಗರ್ಭಪಾತ ವಿಚಾರವಾಗಿ ಮಾತನಾಡಿದ ಉಮಾಶ್ರೀ, ಗರ್ಭಪಾತ ಆಗಿರೋದು ಕೊಲೆಗೆ ಸಮಾನವಾಗಿದೆ. ಆದರೆ ಸರ್ಕಾರ ಮಾತ್ರ ಏನು ಕ್ರಮ ಕೈ ಗೊಳ್ಳುತ್ತಿಲ್ಲ. ಈ ಘಟನೆಯಲ್ಲಿ ಇದ್ದ ನೀಚ …

Read More »

ಚುನಾವಣೆ ಅಂದ್ರೆ ಏನು ಅಂತ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ತೋರಿಸುತ್ತೇವೆ: ಪ್ರಜ್ವಲ್ ರೇವಣ್

ಹಾಸನ: ಚುನಾವಣೆ ಅಂದ್ರೆ ಏನು ಅಂತ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ತೋರಿಸುತ್ತೇವೆ ಎಂದು ಸಂಸದ ಪ್ರಜ್ವಲ್ ರೇವಣ್ಣ ವಾಗ್ದಾಳಿ ನಡೆಸಿದ್ದಾರೆ.ಹಾಸನ ತಾಲೂಕಿನ ತೇಜೂರು ಗ್ರಾಮದಲ್ಲಿ ರಸ್ತೆ ಗುದ್ದಲಿಪೂಜೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾವು ತಂದಿರುವ ಅನುದಾನಕ್ಕೆ ಶಾಸಕ ಪ್ರೀತಂಗೌಡ ಗುದ್ದಲಿ ಪೂಜೆ ಮಾಡುತ್ತಿದ್ದಾರೆ. ಎಂಪಿ ಅನುದಾನದಲ್ಲಿ ಎಂಪಿಯವರ ಸಹಿ ಇಲ್ಲದೆ ರಸ್ತೆ ಮಂಜೂರಾತಿ ಆಗಲ್ಲ ಎಂಬುದು ಅವರಿಗೆ ಗೊತ್ತಿಲ್ಲ. ಅವರು ತಂದ ಅನುದಾನವನ್ನು ನಾವೇನು ಹೋಗಿ ಪೂಜೆ ಮಾಡಲ್ಲ. ನಾವು …

Read More »

BIG BREAKING ಕನ್ನಡ ಹೋರಾಟಗಾರರಿಗೆ ಸೆಡ್ಡು-ಮರಾಠ ಅಭಿವೃದ್ಧಿ ನಿಗಮ ಸ್ಥಾಪಿಸಿ ಸರ್ಕಾರ ಅಧಿಕೃತ ಆದೇಶ

ಬೆಂಗಳೂರು: ಮರಾಠ ಅಭಿವೃದ್ಧಿ ನಿಗಮ ಸ್ಥಾಪಿಸಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದ್ದು, ಈ ಮೂಲಕ ಕನ್ನಡ ಹೋರಾಟಗಾರರಿಗೆ ಸೆಡ್ಡು ಹೊಡೆದಿದೆ.ಮರಾಠ ಪ್ರಾಧಿಕಾರಕ್ಕೆ 50 ಕೋಟಿ ಅನುದಾನ ಮಂಜೂರು ಮಾಡಿ ಹಿಂದುಳಿದ ವರ್ಗಗಳ ಇಲಾಖೆ ವ್ಯಾಪ್ತಿಯಲ್ಲಿ ಪ್ರಾಧಿಕಾರ ರಚನೆಗೆ ಸಿಎಂ ಬಿಎಸ್‍ವೈ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಮೂಲಕ ಕನ್ನಡ ಹೋರಾಟಗಾರರ ಬಂದ್ ಎಚ್ಚರಿಕೆಗೂ ಸರ್ಕಾರ ಕ್ಯಾರೇ ಎಂದಿಲ್ಲ. ಮರಾಠ ಸಮುದಾಯದ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ, ಧಾರ್ಮಿಕ ಅಭಿವೃದ್ಧಿಗಾಗಿ ನಿಗಮ …

Read More »

ಸಿನಿಮಾ ಸೀನ್ ಅಲ್ಲ- ವೈರಲ್ ಆಯ್ತು ಐಪಿಎಸ್ ಅಧಿಕಾರಿ ಹಂಚಿಕೊಂಡ ವೀಡಿಯೋ

ಚೆನ್ನೈ: ಐಪಿಎಸ್ ಅಧಿಕಾರಿ ಮಹೇಶ್ ಅಗರ್ವಾಲ್ ಹಂಚಿಕೊಂಡ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ನೆಟ್ಟಿಗರು ಪೊಲೀಸ್ ಅಧಿಕಾರಿಯ ಸಾಹಸಹಕ್ಕೆ ಮೆಚ್ಚುಗೆ ಸೂಚಿಸುತ್ತಿದ್ದಾರೆ. ಸಿನಿಮಾಗಳಲ್ಲಿ ಪೊಲೀಸರು ಕಳ್ಳರನ್ನ ಚೇಸ್ ಮಾಡಿ ಕಳ್ಳರನ್ನು ಹಿಡಿಯುವ ದೃಶ್ಯಗಳನ್ನ ನೋಡಿರುತ್ತೀರಿ. ಅಂತಹವುದೇ ಘಟನೆ ಚೆನ್ನೈನಲ್ಲಿ ನಡೆದಿದೆ. ಗ್ರೇಟರ್ ಚೆನ್ನೈನಲ್ಲಿ ಎಸ್‍ಐ ಅಂತ್ಲಿನ್ ರಮೇಶ್ ಮೊಬೈಲ್ ಕಳ್ಳರನ್ನ ಬೈಕಿನಲ್ಲಿ ಚೇಸ್ ಮಾಡಿ ಹಿಡಿದಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡ್ತಿದೆ. ಬೈಕ್ ಮೇಲೆ ಹೊರಟ ಇಬ್ಬರು …

Read More »

ಮಹಲಿಂಗಪುರ ಪುರಸಭೆ ಸದಸ್ಯೆಯರ ತಳ್ಳಾಟ ನೂಕಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸದಸ್ಯೆಗೆ ಗರ್ಭಪಾತವಾಗಿದೆ.

ಬಾಗಲಕೋಟೆ: ಮಹಲಿಂಗಪುರ ಪುರಸಭೆ ಸದಸ್ಯೆಯರ ತಳ್ಳಾಟ ನೂಕಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸದಸ್ಯೆಗೆ ಗರ್ಭಪಾತವಾಗಿದೆ. ಚಾಂದಿನಿ ನಾಯಕ್ ಗರ್ಭಪಾತವಾದ ಪುರಸಭೆ ಸದಸ್ಯೆ. ಈಕೆಗೆ ಬಾಗಲಕೋಟೆ ಜಿಲ್ಲೆ ರಬಕವಿಬನಹಟ್ಟಿ ತಾಲೂಕಿನ ಮಹಲಿಂಗಪುರ ಸರ್ಕಾರಿ ಆಸ್ಪತ್ರೆಯಲ್ಲಿ ಅಬಾರ್ಷನ್ ಆಗಿದೆ. ನವೆಂಬರ್ 9 ರಂದು ನಡೆದಿದ್ದ ಶಾಸಕರು ಬಿಜೆಪಿ ಕಾಂಗ್ರೆಸ್ ಕಾರ್ಯಕರ್ತರ ತಳ್ಳಾಟ ನೂಕಾಟದಿಂದ ಕೆಳಕ್ಕೆ ಬಿದ್ದಿದ್ದ ಚಾಂದಿನಿ ನಾಯಕ್ ಅವರ ಹೊಟ್ಟೆಗೆ ಏಟು ಬಿದ್ದಿತ್ತು. ಆಗ ಚಾಂದಿನಿ ಅವರು ಮೂರು ತಿಂಗಳು ಗರ್ಭಿಣಿಯಾಗಿದ್ದರು. …

Read More »

ಭೀಕರ ಅಪಘಾತ : ಸ್ಥಳದಲ್ಲೇ ಬೈಕ್ ಸವಾರಿಬ್ಬರು ಸಾವು

ದಕ್ಷಿಣ ಕನ್ನಡ : ಪಿಕಪ್ ವಾಹನವೊಂದು ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಉಪ್ಪಿನಂಗಡಿಯಲ್ಲಿ ನಿನ್ನೆ ತಡರಾತ್ರಿ ನಡೆದಿದೆ. ಕೃಷ್ಣ ಪ್ರಸಾದ್ ಶೆಟ್ಟಿ, ಜಯರಾಮ್ ಗೌಡ ಮೃತ ದುರ್ದೈವಿಗಳು. ದ್ವಿಚಕ್ರ ವಾಹನದ ಮೇಲೆ ಇಬ್ಬರು ಮನೆಗೆ ತೆರಳುತ್ತಿದ್ದರು. ಹಿಂದಿನಿಂದ ಬಂದ ಪಿಕಪ್ ವಾಹನ ಡಿಕ್ಕಿ ಹೊಡೆದು ಪರಾರಿಯಾಗಿದ್ದರು, ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದರು. ಸ್ಥಳೀಯರು ಮಾಹಿತಿ ನೀಡಿದ ಆದಾರದ ಮೇಲೆ ಕಾರ್ಯಾಚರಣೆ ನಡೆಸಿ ಪೊಲೀಸರು …

Read More »

ಗ್ರಾಮ ಪಂಚಾಯಿತಿ ಚುನಾವಣೆ ದಿನಾಂಕ ಘೋಷಣೆಗೆ ಕ್ಷಣಗಣನೆ

  ಬೆಂಗಳೂರು: ರಾಜ್ಯ ಚುನಾವಣಾ ಆಯೋಗ ಮಧ್ಯಾಹ್ನ 11.30ಕ್ಕೆ ಗ್ರಾಮ ಪಂಚಾಯಿತಿ ಚುನಾವಣಾ ದಿನಾಂಕ ಪ್ರಕಟಿಸಲಿದೆ. ಬಿಜೆಪಿ , ಕಾಂಗ್ರೆಸ್ ಮತ್ತು ಜೆಡಿಎಸ್ ಗ್ರಾಮ ಪಂಚಾಯಿತಿ ಚುನಾವಣೆಗೆ ತಯಾರಿ ನಡೆಸಿವೆ. ಗ್ರಾಮ ಪಂಚಾಯಿತಿ ಗೆಲುವಿಗೆ ತಂತ್ರ ಪ್ರತಿತಂತ್ರಗಳನ್ನು ರೂಪಿಸುವ ಮೂಲಕ ಮತ್ತೊಂದು ಮತ ಸಮರಕ್ಕೆ ಇಳಿಯಲಿವೆ. ಬಿಜೆಪಿ ಈಗಾಗಲೇ ಗ್ರಾಮ ಸ್ವರಾಜ್ ಸಮಾವೇಶದ ಮೂಲಕ ಚುನಾವಣಾ ರಣಕಹಳೆ ಮೊಳಗಿಸಿದೆ. ಜೆಡಿಎಸ್ ಕೂಡ ಪ್ರಮುಖರ ಸಭೆ ನಡೆಸಿ ತೊಡೆ ತಟ್ಟಲು ರೆಡಿಯಾಗಿದೆ. …

Read More »

ಅರಬಿ ಸಮುದ್ರದಲ್ಲಿ ಪತನಗೊಂಡ ಮಿಗ್‌ ಅವಶೇಷ ಪತ್ತೆ : ಪೈಲಟ್ ಸುಳಿವು ಇನ್ನೂ ಸಿಕ್ಕಿಲ್ಲ

ಹೊಸದಿಲ್ಲಿ: ಅರಬಿ ಸಮುದ್ರದಲ್ಲಿ ಗುರುವಾರ ಪತನಗೊಂಡಿದ್ದ ಭಾರತೀಯ ವಾಯುಸೇನೆಯ ಮಿಗ್‌-29 ಕೆ ಯುದ್ಧವಿಮಾನದ ಕೆಲವು ಭಾಗಗಳು ಪತ್ತೆಯಾಗಿವೆ. ಆದರೆ ನಾಪತ್ತೆಯಾಗಿರುವ ಪೈಲಟ್‌ನ ಸುಳಿವು ಸಿಕ್ಕಿಲ್ಲ. ಗುರುವಾರ ಸಂಜೆ ಐಎನ್‌ಎಸ್‌ ವಿಕ್ರಮಾದಿತ್ಯ ಸಮರ ನೌಕೆಯಿಂದ ಹಾರಾಟ ನಡೆಸುವ ವೇಳೆ ಈ ಮಿಗ್‌ ವಿಮಾನ ಪತನಗೊಂಡಿತ್ತು. ರವಿವಾರ ಅದರ ಟರ್ಬೋ ಚಾರ್ಜರ್‌, ಇಂಧನ ಟ್ಯಾಂಕ್‌ ಮತ್ತು ಕೆಲವು ಭಾಗಗಳನ್ನು ನೌಕಾಪಡೆಯ ಶೋಧ ತಂಡ ಪತ್ತೆ ಹಚ್ಚಿದೆ. ಇಬ್ಬರು ಪೈಲಟ್‌ಗಳ ಪೈಕಿ ಓರ್ವರನ್ನು ಗುರುವಾರವೇ …

Read More »

ಸರ್ಕಾರದಿಂದ ರೈತರ ಮಕ್ಕಳಿಗೆ ಭರ್ಜರಿ ಸಿಹಿಸುದ್ದಿ

ತುಮಕೂರು : ರಾಜ್ಯ ಸರ್ಕಾರವು ರೈತರ ಮಕ್ಕಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಕೃಷಿ ವಿವಿಗಳಲ್ಲಿ ಪದವಿ ವ್ಯಾಸಾಂಗ ಮಾಡುವ ರೈತರ ಮಕ್ಕಳಿಗೆ ಮೀಸಲಾತಿಯನ್ನು ಶೇ. 50 ಕ್ಕೆ ಹೆಚ್ಚಿಸುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ. ರಾಜ್ಯ ಸರ್ಕಾರವು ಕೃಷಿ, ತೋಟಗಾರಿಕೆ, ಪಶುಪಾಲನಾ ಪದವಿಯಲ್ಲಿ ಮೀಸಲಾತಿ ಹೆಚ್ಚಳವಾಗಲಿದ್ದು, ಇದರಲ್ಲಿ ದೊಡ್ಡ ಮತ್ತು ಸಣ್ಣ ರೈತರ ಮಕ್ಕಳು ಎಂಬ ಬೇಧ ಮಾಡದೇ ಎಲ್ಲರಿಗೂ ಸೌಲಭ್ಯ ಕಲ್ಪಿಸಲು …

Read More »

ರಾಜ್ಯ ಸರ್ಕಾರದಿಂದ ಗ್ರಾಮೀಣಾ ಜನತೆಗೆ ಭರ್ಜರಿ ಸಿಹಿಸುದ್ದಿ

ಚಿಕ್ಕಬಳ್ಳಾಪುರ : ರಾಜ್ಯ ಸರ್ಕಾರವು ಗ್ರಾಮೀಣಾ ಜನತೆಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಮುಂದಿನ ಆರ್ಥಿಕ ವರ್ಷದಲ್ಲಿ ಗ್ರಾಮಗಳ ಸಶಕ್ತಿಕರಣಕ್ಕೆ ರಾಜ್ಯದ ಪ್ರತಿ ಗ್ರಾಮ ಪಂಚಾಯಿತಿಗೂ 1.5 ಕೋಟಿ ರೂ. ಹಣ ನೀಡಲು ಯೋಜನೆ ಹಾಕಿಕೊಳ್ಳಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ. ರಾಜ್ಯದ ಪ್ರತಿ ಗ್ರಾಮಪಂಚಾಯಿತಿಗೂ 1.5 ಕೋಟಿ ಹಣ ನೀಡಲು ಯೋಜನೆ ಹಾಕಿಕೊಳ್ಳಲಾಗಿದ್ದು, ಅದರ ಜೊತೆಗೆ ಗ್ರಾಮಪಂಚಾಯಿತಳ ಅಭಿವೃದ್ಧಿಗೆ 31 ಸಾವಿರ ಕೋಟಿ ರೂ. ಹಣ …

Read More »