Breaking News

ರಾಜ್ಯ

ಕ್ರಿಸ್‍ಮಸ್ ಹಿನ್ನೆಲೆ ಕೇಕ್ ತಯಾರಿಕೆ ಜೋರಾಗೇ ನಡೆದಿದ್ದು, ಮೈಸೂರಿನ ಸಂದೇಶ್ ದಿ ಪ್ರಿನ್ಸ್ ಹೋಟೆಲ್ ನಲ್ಲಿ ನಟ ದರ್ಶನ್ ಕೇಕ್ ಮಿಕ್ಸಿಂಗ್

ಮೈಸೂರು: ಕ್ರಿಸ್‍ಮಸ್ ಹಿನ್ನೆಲೆ ಕೇಕ್ ತಯಾರಿಕೆ ಜೋರಾಗೇ ನಡೆದಿದ್ದು, ಮೈಸೂರಿನ ಸಂದೇಶ್ ದಿ ಪ್ರಿನ್ಸ್ ಹೋಟೆಲ್ ನಲ್ಲಿ ನಟ ದರ್ಶನ್ ಕೇಕ್ ಮಿಕ್ಸಿಂಗ್ ಮಾಡಿ ಗಮನ ಸೆಳೆದಿದ್ದಾರೆ.ದಾಸ ಶೆಫ್ ಆಗಿ ಕೇಕ್ ಮಿಕ್ಸ್ ಮಾಡಿದ್ದು, ವಿಡಿಯೋ ವೈರಲ್ ಆಗಿದೆ. ದರ್ಶನ್‍ಗೆ ನಿರ್ಮಾಪಕ ಸಂದೇಶ್ ಸಾಥ್ ನೀಡಿದ್ದು, ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಹಾಗೂ ನಿರ್ಮಾಪಕ ಸಂದೇಶ್ ನಾಗರಾಜು ಭಾಗಿಯಾಗಿ ಕ್ರಿಸ್‍ಮಸ್ ಅಂಗವಾಗಿ ತಯಾರಾಗುತ್ತಿರುವ ಕೇಕ್ ತಯಾರಿಕೆಗೆ ಕೈ ಜೋಡಿಸಿದ್ದಾರೆ. ಚಾಲೆಂಜಿಂಗ್ …

Read More »

ವೀರಶೈವ ಲಿಂಗಾಯತರಿಗೆ ಬಂಪರ್ ಮೇಲೆ ಬಂಪರ್ ಸಿಗುತ್ತಿದೆ.

ಬೆಂಗಳೂರು: ವೀರಶೈವ ಲಿಂಗಾಯತರಿಗೆ ಬಂಪರ್ ಮೇಲೆ ಬಂಪರ್ ಸಿಗುತ್ತಿದೆ. ಲಿಂಗಾಯತ ಸಮುದಾಯಕ್ಕೆ ಯಡಿಯೂರಪ್ಪ ಬಿಗ್ ಗಿಫ್ಟ್ ನೀಡಲಿದ್ದಾರೆ. ಮೊನ್ನೆಯಷ್ಟೇ ಲಿಂಗಾಯತ ನಿಗಮ ಸ್ಥಾಪನೆ ಆದೇಶ ನೀಡಿದ್ದ ಸಿಎಂ, ನಿಗಮಕ್ಕೆ 500 ಕೋಟಿ ಆರಂಭಿಕ ಅನುದಾನ ಘೋಷಿಸಿದ್ದರು. ಇದೀಗ ಲಿಂಗಾಯತ ಸಮುದಾಯಕ್ಕೆ ಮತ್ತಷ್ಟು ಬಂಪರ್ ಗಿಫ್ಟ್ ನೀಡಲಿದ್ದಾರೆ. ಲಿಂಗಾಯತ ಓಲೈಕೆಗೆ ಯಡಿಯೂರಪ್ಪ ಮಾಸ್ಟರ್ ಪ್ಲ್ಯಾನ್ ಮಾಡುತ್ತಿದ್ದಾರೆ. ಕೇಂದ್ರದ ಒಬಿಸಿ ಪಟ್ಟಿಗೆ ಲಿಂಗಾಯತ ಸಮುದಾಯ ಸೇರ್ಪಡೆಗೆ ಶಿಫಾರಸು ಮಾಡಲಿದ್ದಾರೆ. ತರಾತುರಿಯಲ್ಲಿ ಕ್ಯಾಬಿನೆಟ್ ಅಜೆಂಡಾಗೆ …

Read More »

ನಮಗೆ ನೀರು ಕೊಡದಿದ್ರೆ ಪೈಪ್‍ಲೈನ್ ಒಡೆದು ಹಾಕ್ತೀನಿ: ಶಿವಲಿಂಗೇಗೌಡ

ಹಾಸನ: ನಮಗೆ ನೀರು ಕೊಡದೆ ಪೈಪ್ ಲೈನ್ ತೆಗೆದುಕೊಂಡು ಹೋದರೆ ಅದನ್ನು ಒಡೆದು ಹಾಕಿಸ್ತೀನಿ. ಏನಾಗುತ್ತೋ ಆಗಲಿ ಎಂದು ಶಾಸಕ ಶಿವಲಿಂಗೇಗೌಡ ಕೆಡಿಪಿ ಸಭೆಯಲ್ಲಿ ಆಕ್ರೋಶ ಹೊರಹಾಕಿದ್ದಾರೆ. ಹಾಸನದ ಜಿಲ್ಲಾಪಂಚಾಯಿತಿ ಸಭಾಂಗಣದಲ್ಲಿ ಸಚಿವ ಗೋಪಾಲಯ್ಯ ನೇತೃತ್ವದಲ್ಲಿ ಕೆಡಿಪಿ ಸಭೆ ನಡೆಯುತ್ತಿತ್ತು. ಈ ವೇಳೆ ಮಾತನಾಡಿದ ಶಾಸಕ ಶಿವಲಿಂಗೇಗೌಡ ಕೃಷ್ಣಾ ಬೇಸಿನ್ ನಲ್ಲಿ ನಮಗೂ ಹಕ್ಕಿದೆ ಎಂದು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.ಎರಡು ಹೋಬಳಿಗಳು ಕೃಷ್ಣಾ ಬೇಸಿನ್‍ಗೆ ಸೇರಿದೆ. ನಮಗೆ ನೀರು ಕೊಡ್ತೀವಿ …

Read More »

ಎಚ್.ಐ.ವಿ, ಏಡ್ಸ್ ಪೀಡಿತರಿಗೆ ಎಲ್ಲ ಸೌಲಭ್ಯಗಳನ್ನು ಸಮರ್ಪಕವಾಗಿ ತಲುಪಿಸಬೇಕು: ಜಿಲ್ಲಾಧಿಕಾರಿ ಹಿರೇಮಠ

ಬೆಳಗಾವಿ: ಎಚ್.ಐ.ವಿ, ಏಡ್ಸ್ ಪೀಡಿತರಿಗೆ ರೇಷನ್ ಕಾರ್ಡ್, ವೈದ್ಯಕೀಯ ಸೌಲಭ್ಯ, ಶಾಲಾ ಪ್ರವೇಶ, ವಿದ್ಯಾರ್ಥಿ ವೇತನ, ವಸತಿ ಯೋಜನೆಯಡಿ ವಸತಿ ಸೇರಿದಂತೆ ಸರ್ಕಾರದಿಂದ ನೀಡಲಾಗುತ್ತಿರುವ ಎಲ್ಲ ಸೌಲಭ್ಯಗಳನ್ನು ಸಮರ್ಪಕವಾಗಿ ತಲುಪಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಹಿರೇಮಠ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಗುರುವಾರ ನಡೆದ ಜಿಲ್ಲಾ ಮಟ್ಟದ ಎಚ್.ಐ.ವಿ., ಏಡ್ಸ್ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಎಚ್.ಐ.ವಿ. ಸೋಂಕಿತರಿಗೆ ಖಾಸಗಿ ಆಸ್ಪತ್ರೆಯವರು ಚಿಕಿತ್ಸೆ ನಿರಾಕರಿಸಿದರೆ …

Read More »

ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಈಗ ಇರುವ ಮೀಸಲಾತಿ ಪ್ರಮಾಣ, ಹೆಚ್ಚಿಸುವ ಅಗತ್ಯತೆ: ಶ್ರೀರಾಮುಲು

ಬೆಂಗಳೂರು,: ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಈಗ ಇರುವ ಮೀಸಲಾತಿ ಪ್ರಮಾಣ, ಹೆಚ್ಚಿಸುವ ಅಗತ್ಯತೆ ಬಗ್ಗೆ ಅಧ್ಯಯನ ನಡೆಸಿ ವರದಿಯನ್ನು ಸಲ್ಲಿಸಲು ಸಮಾಜ ಕಲ್ಯಾಣ ಇಲಾಖೆ ಸಚಿವ ಬಿ. ಶ್ರೀರಾಮುಲು ನೇತೃತ್ವದಲ್ಲಿ ನಾಲ್ಕು ಸದಸ್ಯರನ್ನು ಒಳಗೊಂಡ ಸಚಿವ ಸಂಪುಟ ಉಪ ಸಮಿತಿ ರಚಿಸಿ ಸರ್ಕಾರ ಬುಧವಾರ ಆದೇಶ ಹೊರಡಿಸಿದೆ. ಬಿ. ಶ್ರೀರಾಮುಲು ಅಧ್ಯಕ್ಷರಾಗಿದ್ದು, ಸದಸ್ಯರಾಗಿ ಸಚಿವರಾದ ಗೋವಿಂದ ಎಂ. ಕಾರಜೋಳ, ಆರ್. ಅಶೋಕ್, ಬಸವರಾಜ ಬೊಮ್ಮಾಯಿ, ಜೆ. ಮಾಧುಸ್ವಾಮಿ …

Read More »

ಸಾಲ ತೀರಿಸಲು ಹಣವಿಲ್ಲದೆ 6 ತಿಂಗಳ ಮಗುವನ್ನು ತಂದೆ 1 ಲಕ್ಷ ರೂಪಾಯಿಗೆ ಮಾರಾಟ

ಚೆನ್ನೈ: ಸಾಲ ತೀರಿಸಲು ಹಣವಿಲ್ಲದೆ 6 ತಿಂಗಳ ಮಗುವನ್ನು ತಂದೆ 1 ಲಕ್ಷ ರೂಪಾಯಿಗೆ ಮಾರಾಟ ಮಾಡಿರುವ ಘಟನೆ ಸೇಲಂನ ಲಿನೆಮೇಡನಲ್ಲಿ ನಡೆದಿದೆ. ಸಾಲ ತೀರಿಸಲು ಹಣವಿಲ್ಲದೆ ಇರುವಾಗ ತಂದೆಯೇ ತನ್ನ 6 ತಿಂಗಳ ಮಗುವನ್ನು ಒಂದು ಲಕ್ಷರೂಪಾಯಿಗೆ ಮಾರಿದ್ದಾನೆ. ಆರೋಪಿ ತಂದೆಯನ್ನು ಸೌಕತ್ ಆಲಿ ಎಂದು ಗುರುತಿಸಲಾಗಿದೆ. ಈತನನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾರೆ. ಸೌಕತ್‍ನ ಗೆಳೆಯ ಸೆಡ್ಡು ಹಾಗೂ ಮಗುವನ್ನು ಖರೀದಿಸಿದ ಸುಂದರಮ್ ಮಗು ಮಾರಾಟದಲ್ಲಿ ಶಾಮಿಲಾಗಿದ್ದಾರೆ. ಮಗುವನ್ನು …

Read More »

ಕೊರೊನಾ ಎರಡನೇ ಅಲೆ ಭೀತಿ ಡಿಸೆಂಬರ್ 31ರವರೆಗೆ ಅಂತಾರಾಷ್ಟ್ರೀಯ ವಿಮಾನ ಸಂಚಾರವನ್ನು ನಿಷೇಧ

ನವದೆಹಲಿ: ಕೊರೊನಾ ಎರಡನೇ ಅಲೆ ಭೀತಿ ಹಿನ್ನೆಲೆಯಲ್ಲಿ ಕೇಂದ್ರ ವಿಮಾನಯಾನ ನಿರ್ದೇಶನಾಲಯ ಡಿಸೆಂಬರ್ 31ರವರೆಗೆ ಅಂತಾರಾಷ್ಟ್ರೀಯ ವಿಮಾನ ಸಂಚಾರವನ್ನು ನಿಷೇಧಿಸಿ ಆದೇಶ ಹೊರಡಿಸಿದೆ. ಜಾಗತಿಕ ಮಟ್ಟದಲ್ಲಿ ಕೊರೊನಾ ವೈರಸ್ ಅಬ್ಬರ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಯಾಣಿಕರ ವಿದೇಶ ಸಂಚಾರವನ್ನು ನಿರ್ಬಂಧಿಸಲು ವಿಮಾನಯಾನ ನಿರ್ದೇಶನಾಲಯ ಗುರುವಾರ ಈ ಆದೇಶ ಹೊರಡಿಸಿದೆ. ಪ್ರಯಾಣಿಕರ ವಿಮಾನ ಸಂಚಾರವನ್ನು ನಿಬರ್ಂಧಿಸಲಾಗಿದ್ದರೂ ಸರಕು ಸಾಗಾಣೆ ವಿಮಾನಗಳ ಹಾರಾಟದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Read More »

ಲೋಕಸಭಾ ಉಪಚುನಾವಣೆಗೆ ಸ್ಪರ್ಧಿಸಲು ನನಗೆ ಆಸಕ್ತಿ ಇಲ್ಲ : ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ

ಬೆಳಗಾವಿ : ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಸ್ಪರ್ಧಿಸಲು ನನಗೆ ಆಸಕ್ತಿ ಇಲ್ಲ ಅಂತಾ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು. ನಗರದ ಕಾಂಗ್ರೆಸ್ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು , ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಕುರಿತು ಮುಂದಿನ ತಿಂಗಳಿನ ಮೊದಲ ವಾರದಲ್ಲಿ ಎರಡನೇ ಸುತ್ತಿನ ಸಭೆ ನಡೆಸಲಾಗುತ್ತದೆ. ಈ ವೇಳೆ ಅಭ್ಯರ್ಥಿ ಆಯ್ಕೆ ಮಾಡಲಾಗುವುದು ಎಂದರು. ಕಾಂಗ್ರೆಸ್ ಪಕ್ಷದಲ್ಲಿ ಅಭ್ಯರ್ಥಿಗಳ ಕೊರತೆ ಇಲ್ಲ. ಮುಂದಿನ …

Read More »

ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅಭಿಮತ… ಬೆಳಗಾವಿ ಜಿಲ್ಲೆ ವಿಭಜನೆಯಾಗಿ ಚಿಕ್ಕೋಡಿ, ಗೋಕಾಕ ಹೊಸ ಜಿಲ್ಲೆ ಅಸ್ತಿತ್ವಕ್ಕೆ ಬರಲಿ…

ಚಿಕ್ಕೋಡಿ ಹಾಗೂ ಗೋಕಾಕ ಹೊಸ ಜಿಲ್ಲೆ ರಚನೆಯಾಗಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಯಮಕನಮರಡಿ ಕಾಂಗ್ರೆಸ್ ಶಾಸಕ ಸತೀಶ ಜಾರಕಿಹೊಳಿ ಅಭಿಮತ ವ್ಯಕ್ತಪಡಿಸಿದ್ದಾರೆ. ಇಲ್ಲಿನ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಅಭಿವೃದ್ದಿ ನಿಟ್ಟಿನಲ್ಲಿ 18 ಶಾಸಕರನ್ನು ಹೊಂದಿರುವ ದೊಡ್ಡ ಜಿಲ್ಲೆ ಬೆಳಗಾವಿ ವಿಭಜನೆಯಾಗುವುದು ಅನಿವಾರ್ಯ. ಜಿಲ್ಲೆ ವಿಭಜನೆ ಬಗ್ಗೆ ಮೊದಲಿನಿಂದಲೂ ನಾವು ಆ ಕುರಿತು ಪ್ರತಿಪಾದಿಸುತ್ತ ಬಂದಿರುವುದಾಗಿ ಹೇಳಿದರು. ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ಕುರಿತು ತಮ್ಮ ಹೆಸರು ಕೇಳಿ …

Read More »

ಸೋಯಾಬಿನ್ ಫಸಲಿನ ಬಣವೆಗೆ ಬೆಂಕಿ ಹೊತ್ತಿಕೊಂಡು ಸಂಪೂರ್ಣ ಸುಟ್ಟು ಕರಕಲಾದ ಘಟನೆ

ಹಾವೇರಿ: ಸೋಯಾಬಿನ್ ಫಸಲಿನ ಬಣವೆಗೆ ಬೆಂಕಿ ಹೊತ್ತಿಕೊಂಡು ಸಂಪೂರ್ಣ ಸುಟ್ಟು ಕರಕಲಾದ ಘಟನೆ ಹಾವೇಯ ಹಾನಗಲ್ ತಾಲೂಕಿನ ಅಲ್ಲಾಪುರ ಗ್ರಾಮದಲ್ಲಿ ನಡೆದಿದೆ. ರೈತ ಶಂಕ್ರಪ್ಪ ಶೆಟ್ಟರ ಬೆಳೆದಿದ್ದ ಸೋಯಾಬಿನ್ ರಾಶಿ ಮಾಡಲು ಹಾಕಲಾಗಿತ್ತು. ಆದರೆ ರಾತ್ರೋರಾತ್ರಿ ಯಾರೋ ದುಷ್ಕರ್ಮಿಗಳು ಬೆಂಕಿ ಹಚ್ಚಿ ಫಸಲನ್ನು ಸುಟ್ಟು ಹಾಕಿದ್ದರೆ. ಆಡೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.ಮೂರು ಎಕರೆ ಜಮೀನಿನಲ್ಲಿ ಬೆಳೆದಿದ್ದ ಸೋಯಾಬಿನ್ ಫಸಲನ್ನು ಕೊಯ್ಲು ಮಾಡಿ ಜಮೀನಿನಲ್ಲಿ ರಾಶಿ ಹಾಕಲಾಗಿತ್ತು. …

Read More »