Breaking News

ರಾಜ್ಯ

ಮಹಾದಾಯಿ, ಮೇಕೆದಾಟು, ಗಟ್ಟಿ ಬಸವಣ್ಣದಂತಹ ಹಲವಾರು ಯೋಜನೆಗಳು ಡಿಪಿಆರ್ ಸಿದ್ಧಗೊಂಡಿದ್ದು

ಬೆಂಗಳೂರು, ನ.24- ಮೇಕೆದಾಟು, ಎತ್ತಿನಹೊಳೆ, ಗಟ್ಟಿ ಬಸವಣ್ಣ ಕುಡಿಯುವ ನೀರಿನ ಯೋಜನೆಗಳಿಗೆ ಕೇಂದ್ರ ಅರಣ್ಯ ಇಲಾಖೆಯ ಅನುಮತಿ ಪಡೆದುಕೊಳ್ಳಲು ಕ್ರಮ ಕೈಗೊಳ್ಳುವಂತೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಸೂಚನೆ ನೀಡಿದ್ದಾರೆ. ಇಂದು ಹಿರಿಯ ಅ ಧಿಕಾರಿಗಳ ಜತೆ ಮಹತ್ವದ ಸಭೆ ನಡೆಸಿದ ಅವರು, ನೀರಾವರಿ ಯೋಜನೆಗಳು ಹಾಗೂ ಏತ ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಅರಣ್ಯ ಇಲಾಖೆಯ ಅನುಮತಿ ಪತ್ರ ಪಡೆಯುವಲ್ಲಿ ವಿಳಂಬವಾಗುತ್ತಿದೆ. ಅರಣ್ಯ ಇಲಾಖೆ ಕೇಳುವ ಅಗತ್ಯ ದಾಖಲಾತಿಗಳನ್ನು ತುರ್ತಾಗಿ …

Read More »

43 ಆ್ಯಪ್ ಗಳನ್ನು ಕೇಂದ್ರ ಸರ್ಕಾರ ಹೊಸದಾಗಿ ನಿಷೇಧಿಸಿದೆ.

ನವದೆಹಲಿ: ಇತ್ತೀಚೆಗಷ್ಟೇ ಚೀನಾ ಮೂಲದ 118 ಆ್ಯಪ್ ಗಳನ್ನು ಬ್ಯಾನ್ ಮಾಡಿದ್ದ ಕೇಂದ್ರ ಸರ್ಕಾರ ಇದೀಗ ಮತ್ತೆ 43 ಆ್ಯಪ್ ಗಳನ್ನು ನಿಷೇಧಿಸಿದೆ. ಐಟಿ ಆ್ಯಕ್ಟ್ 69 ಎ ಅಡಿ ಚೀನಾ ಮೂಲದ 43 ಆ್ಯಪ್ ಗಳನ್ನು ಕೇಂದ್ರ ಸರ್ಕಾರ ಹೊಸದಾಗಿ ನಿಷೇಧಿಸಿದೆ. ಅಲಿಬಾಬ ವರ್ಕ್ ಬೆಂಚ್, ಕ್ಯಾಮ್ ಕಾರ್ಡ್, ಸ್ನ್ಯಾಕ್ ವಿಡಿಯೋ, ಅಲಿ ಎಕ್ಸ್ ಪ್ರೆಸ್, ಅಡೋರ್ ಆ್ಯಪ್, ಲಾಲಾ ಮೂವ್ ಇಂಡಿಯಾ, ಡೇಟ್ ಇನ್ ಏಷ್ಯಾ, ಅಲಿಪೇ …

Read More »

ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ವಿಳಂಬವಾಗುವುದು ಖಚಿತ

ಬೆಂಗಳೂರು,ನ.24- ಚಳಿಗಾಲದ ಅಧಿವೇಶನ ಮುಗಿಯುವವರೆಗೂ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ವಿಳಂಬವಾಗುವುದು ಖಚಿತವಾಗಿದ್ದು, ಆಕಾಂಕ್ಷಿಗಳಿಗೆ ಮತ್ತೆ ನಿರಾಸೆ ಎದುರಾಗಿದೆ. ಈ ತಿಂಗಳಾಂತ್ಯಕ್ಕೆ ಕೇಂದ್ರ ಚುನಾವಣಾ ಆಯೋಗ ಮಸ್ಕಿ, ಬಸವಕಲ್ಯಾಣ ವಿಧಾನಸಭೆ ಹಾಗೂ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ದಿನಾಂಕ ಘೋಷಣೆ ಮಾಡುವ ಸಾಧ್ಯತೆಯಿದೆ. ಇದರ ಜೊತೆಗೆ ರಾಜ್ಯ ಚುನಾವಣಾ ಆಯೋಗ ಗ್ರಾಮಪಂಚಯತ್ ಚುನಾವಣೆಗೆ ಮೂಹೂರ್ತ ನಿಗಧಿ ಮಾಡುವುದು ಖಚಿತವಾಗಿದೆ. ಒಂದು ವೇಳೆ ಚುನಾವಣೆ ಘೋಷಣೆಯಾದರೆ, ಅಂದಿನಿಂದಲೇ ನೀತಿ ಸಂಹಿತೆ ಜಾರಿಯಾಗಲಿದ್ದು, …

Read More »

ಶಿವಸೇನೆ ಶಾಸಕನ ಮನೆ ಮೇಲೆ ಇಡಿ ಅಧಿಕಾರಿಗಳ ದಾಳಿ

ನವದೆಹಲಿ, ನ.24- ಅಕ್ರಮ ಹಣ ವರ್ಗಾವಣೆ ಆರೋಪದ ಹಿನ್ನೆಲೆಯಲ್ಲಿ ಶಿವಸೇನೆ ಶಾಸಕರೊಬ್ಬರ ಮನೆ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಶಿವಸೇನೆ ಶಾಸಕ ಪ್ರತಾಪ್ ಸರ್ನಾಯಕ್ ಅವರ ವಿರುದ್ಧ ಅಕ್ರಮ ವಗಾರ್ವಣೆ ನಿರ್ಬಂಧಕ ಕಾಯ್ದೆಯನ್ವಯ ಇಡಿ ಅಧಿಕಾರಿಗಳು ಈ ದಾಳಿ ನಡೆಸಿದ್ದಾರೆ. ಸರ್ನಾಯಕ್ ಅವರಿಗೆ ಸೇರಿದ ಕಟ್ಟಡಗಳು , ವಾಣಿಜ್ಯ ಉದ್ಯಮಗಳು, ಬಿಲ್ಡರ್‍ಗಳು, ಅವರೊಂದಿಗೆ ಸಂಪರ್ಕವಿರಿಸಿಕೊಂಡಿರುವ ಪ್ರಮುಖರು ಹಾಗೂ ಕೆಲ ರಾಜಕೀಯ ಮುಖಂಡರುಗಳ ನಿವಾಸಗಳ ಮೇಲೂ ಇಡಿ ಅಧಿಕಾರಿಗಳು …

Read More »

ಕೊರೊನಾ ಪರೀಕ್ಷೆಗೆ 400 ರೂ. ದರ ನಿಗದಿ ಪಡಿಸಲು ಸುಪ್ರೀಂ ಸೂಚನೆ

ನವದೆಹಲಿ,ನ.24- ದೇಶಾದ್ಯಂತ ಕೊರೊನಾ ಪರೀಕ್ಷೆಗಾಗಿ ಕೇವಲ 400 ರೂ. ದರ ನಿಗದಿ ಮಾಡಬೇಕು ಎಂದು ಒತ್ತಾಯಿಸಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂಕೋರ್ಟ್ ಅಂಗೀಕರಿಸಿದ್ದು, ಕೇಂದ್ರ ಆರೋಗ್ಯ ಇಲಾಖೆಗೆ ನೋಟಿಸ್ ಜಾರಿ ಮಾಡಿದೆ. ವಕೀಲ ಅಜಯ್ ಅಗರ್‍ವಾಲ್‍ಎಂಬುವರು ಸುಪ್ರೀಂಕೋರ್ಟ್‍ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದು, ದೇಶಾದ್ಯಂತ ಕೊರೊನಾ ಪರೀಕ್ಷೆಗಾಗಿ ಏಕರೂಪದ ಕನಿಷ್ಟ ದರವನ್ನು ನಿಗದಿಮಾಡಬೇಕೆಂದು ಮನವಿ ಮಾಡಿದ್ದಾರೆ. ಅರ್ಜಿ ವಿಚಾರಣೆಗೆ ಅಂಗೀಕರಿಸುವುದಾಗಿ ಸುಪ್ರೀಂಕೋರ್ಟ್‍ನ ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೋಬ್ಡೆ, ಎ.ಎಸ್.ಬೋಪಣ್ಣ, ವಿ.ರಾಮಸುಬ್ರಹ್ಮಣ್ಯ …

Read More »

ಮರಾಠ ಅಭಿವೃದ್ಧಿ ಪ್ರಾಧಿಕಾರ ಮಾಡಿದರೆ ನಿಮಗೇನು ಕಷ್ಟ ಹೋರಾಟಗಾರರನ್ನು ಶೂಟ್ ಮಾಡಿ ಬಿಸಾಕಿ:ಋಷಿಸ್ವಾಮಿ

ಡಿಸೆಂಬರ್: ಡಿ.5ರಂದು ಕನ್ನಡ ಹೋರಾಟಗಾರರು ಬಂದ್‍ಗೆ ಕರೆ ನೀಡಿರುವುದಕ್ಕೆ ಸಂಬಂಧಿಸಿದಂತೆ ಅರಸೀಕೆರೆ ಕಾಳಿ ಮಠದ ಋಷಿಕುಮಾರ ಎಂಬ ಸ್ವಾಮಿ ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಕನ್ನಡ ಹೋರಾಟಗಾರರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಮರಾಠ ಅಭಿವೃದ್ಧಿ ಪ್ರಾಧಿಕಾರ ಮಾಡಿದರೆ ನಿಮಗೇನು ಕಷ್ಟ. ಅವರು ರಾಜ್ಯದಲ್ಲಿ ಟ್ಯಾಕ್ಸ್ ಕಟ್ಟುತ್ತಿದ್ದಾರೆ ಎಂದು ಮರಾಠಿಗರ ಪರ ಬ್ಯಾಟ್ ಬೀಸಿದ್ದಾರೆ. ಇದರ ಜೊತೆಗೆ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿರುವ ಸ್ವಾಮಿ ಬಿಎಸ್‍ವೈ ಇಂತವರನ್ನೆಲ್ಲಾ ಶೂಟ್ ಮಾಡಿ ಬಿಸಾಕಬೇಕು. ಉತ್ತರಪ್ರದೇಶದಲ್ಲಿ …

Read More »

ಪ್ರಧಾನಿ ಮೋದಿ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಮಹತ್ವದ ಸಭೆ

ನವದೆಹಲಿ: ರಾಜ್ಯಗಳಲ್ಲಿ ಕೊರೊನಾ ಸ್ಥಿತಿಗತಿ ಹಾಗೂ ಕೋವಿಡ್ ಲಸಿಕೆ, ವಿತರಣೆ ಕುರಿತಾಗಿ ಸಮಗ್ರವಾಗಿ ಚರ್ಚಿಸುವ ನಿಟ್ಟಿನಲ್ಲಿ ಪ್ರಧಾನಿ ಮೋದಿ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಮಹತ್ವದ ಸಭೆ ನಡೆಸಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಮೂಲಕ ಸಿಎಂ ಗಳ ಜೊತೆ ಪ್ರಧಾನಿ ಮೋದಿ ಸಭೆ ಆರಂಭವಾಗಿದ್ದು, ಎರಡು ಹಂತಗಳಲ್ಲಿ ಸಭೆ ನಡೆಯುತ್ತಿದೆ. ಆರಂಭದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ರಾಜ್ಯಗಳಾದ ಪಶ್ಚಿಮ ಬಂಗಾಳ, ಮಹಾರಾಷ್ಟ್ರ, ಕೇರಳ, ರಾಜಸ್ಥಾನ ಸೇರಿದಂತೆ 8 ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ …

Read More »

ಒಕ್ಕಲಿಗರ ಅಭಿವೃದ್ಧಿ ನಿಗಮಕ್ಕೆ ಡಿಸಿಎಂ ಅಶ್ವತ್ಥನಾರಾಯಣ ಒತ್ತಾಯ

ಬೆಳಗಾವಿ: ರಾಜ್ಯ ಸರ್ಕಾರ ಲಿಂಗಾಯತ ಅಭಿವೃದ್ಧಿ ನಿಗಮ ರಚಿಸಿ 500 ಕೋಟಿ ರೂ. ಅನುದಾನ ನೀಡಿದ ಬೆನ್ನಲ್ಲಿಯೇ ಒಕ್ಕಲಿಗರ ಅಭಿವೃದ್ಧಿ ನಿಗಮವೂ ರಚಿಸಲಿ ಎಂದು ಬೆಳಗಾವಿಯಲ್ಲಿ ಉಪ ಮುಖ್ಯಮಂತ್ರಿ ಅಶ್ವತ್ಥನಾರಾಯಣ ಒತ್ತಾಯಿಸಿದ್ದಾರೆ. ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಒಕ್ಕಲಿಗರ ಅಭಿವೃದ್ಧಿ ನಿಗಮ ಆಗಬೇಕು ಎನ್ನುವ ಒತ್ತಾಯಕ್ಕೆ ನನ್ನ ಬೆಂಬಲವೂ ಇದೆ ಎಂದು ಡಿಸಿಎಂ ಹೇಳಿದರು. ಕಾಲೇಜು ಆರಂಭಕ್ಕೆ ವಿದ್ಯಾರ್ಥಿಗಳು, ಪೆÇೀಷಕರ ಒತ್ತಾಯ ಇತ್ತು ಹೀಗಾಗಿ …

Read More »

ಕರಾವಳಿಯಲ್ಲಿ ಝಳಪಿಸಿದ ತಲ್ವಾರ್ ಬೈಕಿನಲ್ಲಿ ಹೋಗುತ್ತಿದ್ದ ಯುವಕನ ತಲ್ವಾರ್ ನಿಂದ ದಾಳಿ ನಡೆಸಿರುವ ಘಟನೆ

ಮಂಗಳೂರು: ರಾತ್ರಿ ಕುಟುಂಬದ ಜೊತೆ ಬೈಕಿನಲ್ಲಿ ಹೋಗುತ್ತಿದ್ದ ಯುವಕನ ತಲ್ವಾರ್ ನಿಂದ ದಾಳಿ ನಡೆಸಿರುವ ಘಟನೆ ಮಂಗಳೂರಿನ ಫಳ್ನೀರ್ ಬಳಿ ನಡೆದಿದೆ. 30 ವರ್ಷದ ನೌಷಾದ್ ಹಲ್ಲೆಗೊಳಗಾದ ಯುವಕ. ಗಂಭೀರವಾಗಿ ಗಾಯಗೊಂಡಿರುವ ಯುವಕನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಘಟನಾ ಸ್ಥಳಕ್ಕೆ ಕದ್ರಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ನವೆಂಬರ್ 15ರಂದು ಗುರುಪುರದ ಕೈಕಂಬ ಬಳಿಯ ಕಂದಾವರ ಮಸೀದಿ ಹತ್ತಿರ ಅಬ್ದುಲ್ ಅಜೀಜ್ ಎಂಬವರ ಕೊಲೆಗೆ …

Read More »

ಹಿಂಗೆ ಕದ್ದ ಒಯ್ದರು ಹಾಂಗೆ ಕೆಲವೇ ಗಂಟೆ ಗಳಲ್ಲಿ ಹಿಡ್ಕೊಂಡ್ ಬಂದ್ ವದ್ದು ಒಳಗಡೆ ಹಾಕಿದ್ರು..

ಚಾಮರಾಜನಗರ: ಸುಮಾರು 50 ಲಕ್ಷ ರೂಪಾಯಿ ಮೌಲ್ಯದ ಪಾನ್ ಮಸಾಲವನ್ನು ಆರೋಪಿಗಳು ದರೋಡೆ ಮಾಡಿದ್ದು, ಪ್ರಕರಣ ನಡೆದ ಕೆಲವೇ ಗಂಟೆಗಳಲ್ಲಿ ಪೊಲೀಸರು ಪ್ರಕರಣ ಬೇಧಿಸಿದ್ದಾರೆ. ಚಾಮರಾಜನಗರದ ಪೂರ್ವ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಜಿಲ್ಲೆಯ ಗಡಿಭಾಗದಲ್ಲಿರುವ ಕೋಳಿಪಾಳ್ಯ ಗ್ರಾಮದಲ್ಲಿ ಬವರಲಾಲ್ ಅವರಿಗೆ ಸೇರಿದ ಗೋದಾಮುಗಳಲ್ಲಿನ ಪಾನ್ ಮಸಾಲಾ ದರೋಡೆ ಮಾಡಲಾಗಿತ್ತು. ಸಿಬ್ಬಂದಿಯನ್ನು ಬೆದರಿಸಿ 12 ಮಂದಿ ಇದ್ದ ತಂಡ ಸುಮಾರು 50 ಲಕ್ಷ ರೂಪಾಯಿ ಮೌಲ್ಯದ ಪಾನ್ …

Read More »