ನೆಲಮಂಗಲ: ಇಲ್ಲಿನ ಬಸ್ ನಿಲ್ದಾಣದ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತ ಕಾರು ಚಾಲಕನನ್ನು ಸುನೀಲ್ ಎಂದು ಗುರುತಿಸಲಾಗಿದೆ. ಬೈಕ್ ಸವಾರನ ಬಗ್ಗೆ ಮಾಹಿತಿ ಸಿಕ್ಕಿಲ್ಲ. ಲಾರಿ ಚಾಲಕನ ಅವಘಡದಿಂದಾಗಿ ಲಾರಿ, ಬೈಕ್, ಕಾರು, ನಡುವೆ ಭೀಕರ ಅಪಘಾತ ಸಂಭವಿಸಿದೆ.ಸ್ತೆಯಲ್ಲಿ ವಿದ್ಯುತ್ ಕಂಬಕ್ಕೆ ಲಾರಿ ಡಿಕ್ಕಿಯಾಗಿ ಸರಣಿ ಅಪಘಾತವೆಸಗಿ ಚಾಲಕ ನಾಪತ್ತೆಯಾಗಿದ್ದಾನೆ. ಸ್ಥಳಕ್ಕೆ ನೆಲಮಂಗಲ ಟೌನ್ ಹಾಲ್ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Read More »ಯಡಿಯೂರಪ್ಪ ಮತ್ತು ದೆಹಲಿ ನಾಯಕರ ನಡುವಿನ ಸಂಬಂಧ ಅಷ್ಟೇಕಷ್ಟೇ……..?
ಬೆಂಗಳೂರು,ನ.19- ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಕೇಂದ್ರ ಬಿಜೆಪಿ ವರಿಷ್ಠರ ನಡುವೆ ಸಂಬಂಧ ಹಳಸಿದೆಯೇ? ಇತ್ತೀಚಿಗೆ ಪಕ್ಷ ಮತ್ತು ಸರ್ಕಾರದಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸಿದರೆ ದೆಹಲಿ ನಾಯಕರು ಮತ್ತು ಬಿಎಸ್ವೈ ಅವರ ನಡುವಿನ ಸಂಬಂಧ ಹಾವು-ಮುಂಗೂಸಿ ಎಂಬಂತಿದೆ. ಇದಕ್ಕೆ ಪುಷ್ಠಿ ನೀಡುವಂತೆ ನಿನ್ನೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡ ಅವರನ್ನು ಕೇವಲ 15 ನಿಮಿಷದಲ್ಲಿ ಭೇಟಿಯಾಗಿ ಹಿಂತಿರುಗಿರುವುದು. ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿಯಾಗಲು ಬಿಎಸ್ವೈ ಉತ್ಸುಕತೆ …
Read More »ಜಾಮೀನು ಅರ್ಜಿ ಹಿಂಪಡೆದ ವಿನಯ್ ಕುಲ್ಕರ್ಣಿ
ಜಾಮೀನು ಅರ್ಜಿ ಹಿಂಪಡೆದ ವಿನಯ್ ಕುಲ್ಕರ್ಣಿ ಯೋಗೀಶ್ ಗೌಡ ಹತ್ಯೆ ಪ್ರಕರಣ; ಜೈಲುವಾಸದಲ್ಲಿರುವ ಮಾಜಿ ಸಚಿವ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ್ ಕುಲ್ಕರ್ಣಿ ಜಾಮಿನು ಅರ್ಜಿಯನ್ನು ಹಿಂಪಡೆದಿದ್ದಾರೆ. ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಸಿಬಿಐ ನಿಂದ ಬಂಧಿಸಲ್ಪಟ್ಟಿರುವ ವಿನಯ್ ಕುಲ್ಕರ್ಣಿ ಬೆಳಗಾವಿ ಹಿಡಲಗಾ ಜೈಲಿನಲ್ಲಿದ್ದು, ಕೆಲ ದಿನಗಳ ಹಿಂದೆ ಬಿಡುಗಡೆ ಕೋರಿ ಧಾರವಾಡ 3ನೇ ಹೆಚ್ಚುವರಿ ನ್ಯಾಯಾಲಯಕ್ಕೆ ಜಾಮೀನು ಅರ್ಜಿ …
Read More »ಕೇಂದ್ರದ ಮಧ್ಯಸ್ಥಿಕೆ ಬೇಡ – ರಮೇಶ ಜಾರಕಿಹೊಳಿ
ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸಬೇಕು ಕೇಂದ್ರದ ಮಧ್ಯಸ್ಥಿಕೆ ಬೇಡ – ರಮೇಶ ಜಾರಕಿಹೊಳಿ ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸಬೇಕು ಗೋಕಾಕ: ಮೇಕೆದಾಟು ಸಮಾನಾಂತರ ಆಣೆಕಟ್ಟು ಯೋಜನೆಗೆ ಬೇಕಿರುವ ಕೇಂದ್ರದ ವಿವಿಧ ಅನುಮತಿಗಳನ್ನು ಶೀಘ್ರವಾಗಿ ಒದಗಿಸುವಂತೆ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರಸಿಂಗ್ ಶೇಖಾವತ್ ಅವರಿಗೆ ಮನವಿ ಮಾಡಿದ್ದಾರೆ. ಬುಧವಾರ ನವದೆಹಲಿಯ ಶ್ರಮಶಕ್ತಿ ಭವನದಲ್ಲಿರುವ ಕೇಂದ್ರ ಜಲಶಕ್ತಿ ಸಚಿವರ …
Read More »ಐಪಿಎಸ್ ಅಧಿಕಾರಿ ಡಿ.ರೂಪಾ ವಿರುದ್ಧ ನಟಿ ಕಂಗನಾ ಕಿಡಿ
ಡಿ.ರೂಪಾ-ಟ್ರೂ ಇಂಡಾಲಜಿ ಸಂಭಾಷಣೆ ನಡುವೆ ಹೊತ್ತಿದ ಪಟಾಕಿ ಕಿಡಿ ದೀಪಾವಳಿ ಮುಗಿದರೂ ಪಟಾಕಿ ವಿವಾದಗಳು ಮಾತ್ರ ಮುಗಿದಿಲ್ಲ. ದೀಪಾವಳಿಯಲ್ಲಿ ಪಟಾಕಿ ಸಿಡಿಸಬಾರದು. ಹಿಂದೂ ಮಹಾಕಾವ್ಯಗಳಲ್ಲಿ ಪಟಾಕಿ ಬಗ್ಗೆ ಉಲ್ಲೇಖವಿಲ್ಲ ಎಂದು ಟ್ವೀಟ್ ಮಾಡಿದ್ದ ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ವಿರುದ್ಧ ಇದೀಗ ಬಾಲಿವುಡ್ ನಟಿ ಕಂಗನಾ ರಣಾವತ್ ವಾಗ್ದಾಳಿ ನಡೆಸಿದ್ದಾರೆ. ಡಿ.ರೂಪಾ ಹಾಗೂ ಟ್ರೂ ಇಂಡಾಲಜಿ ನಡುವಿನ ವಾಗ್ವಾದದ ಬೆನ್ನಲ್ಲೇ ಟ್ರೂ ಇಂಡಾಲಜಿ ಟ್ವಿಟರ್ ಅಕೌಂಟ್ ನ್ನೇ ನಿಷ್ಕ್ರಿಯಗೊಳಿಸಲಾಗಿತ್ತು. …
Read More »ಕೆಲ ಸಚಿವರ ಪಾಲಿಗೆ ಇದೇ ಕೊನೆ ಕ್ಯಾಬಿನೆಟ್ ಆಗಬಹುದು ಯಾರನ್ನಾದ್ರೂ ಕೈಬಿಟ್ಟರೆ ಬೇಸರ ಮಾಡಿಕೊಳ್ಳಬೇಡಿ.:B.S.Y.
ಬೆಂಗಳೂರು: ಸಂಪುಟ ವಿಸ್ತರಣೆ ಸಂಬಂಧ ಸಿಎಂ ಯಡಿಯೂರಪ್ಪ ಇಂದು ದೆಹಲಿಗೆ ತೆರಳುವ ಮೊದಲು ಕ್ಯಾಬಿನೆಟ್ ಸಭೆ ನಡೆಸಿದರು ಕೇವಲ 15 ನಿಮಿಷದಲ್ಲೇ ಮುಗಿದ ಸಭೆಯಲ್ಲಿ ಸಚಿವರ ಜೊತೆ ಹಲವು ವಿಚಾರಗಳ ಬಗ್ಗೆ ಮಾತನಾಡಿದ್ದಾರೆ. ಸಂಪುಟ ವಿಸ್ತರಣೆ ಬದಲು ಪುನಾರಚನೆ ಆಗಬಹುದು. 8 ರಿಂದ 9 ಮಂದಿ ಹೊಸಬರು ಸಂಪುಟ ಸೇರಬಹುದು ಎಂಬುದಾಗಿ ಹೇಳಿರುವುದಾಗಿ ಮೂಲಗಳು ತಿಳಿಸಿವೆ. ಸಿಎಂ ಹೇಳಿದ್ದೇನು? ಕೆಲ ಸಚಿವರ ಪಾಲಿಗೆ ಇದೇ ಕೊನೆ ಕ್ಯಾಬಿನೆಟ್ ಆಗಬಹುದು. ಯಾರಿಗೆ …
Read More »ಬಾಲಿವುಡ್ ನಟಿ ಕಂಗನಾ ರನಾವತ್ ಹಾಗೂ ಆಕೆಯ ಸಹೋದರಿ ರಂಗೋಲಿಗೆ ಮುಂಬೈ ಪೊಲೀಸರು ಸಮನ್ಸ್
ಮುಂಬೈ, ನ.18- ಸಮಾಜದ ಶಾಂತತೆಯನ್ನು ಕದಡುವಂತಹ ಫೋಸ್ಟ್ ಮಾಡಿದ್ದರ ಹಿನ್ನೆಲೆಯಲ್ಲಿ ಬಾಲಿವುಡ್ ನಟಿ ಕಂಗನಾ ರನಾವತ್ ಹಾಗೂ ಆಕೆಯ ಸಹೋದರಿ ರಂಗೋಲಿಗೆ ಮುಂಬೈ ಪೊಲೀಸರು ಸಮನ್ಸ್ ನೀಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನವೆಂಬರ್ 23 ರಂದು ನಟಿ ಕಂಗನ ರನಾವತ್ ಹಾಗೂ ಆಕೆಯ ಸಹೋದರಿ ಬಾಂದ್ರಾ ಪೊಲೀಸ್ ಠಾಣೆಯಲ್ಲಿ ವಿಚಾರಣೆಗೆ ಹಾಜರಾಗಲು ಸೂಚಿಸಿದೆ. ಸಾಮಾಜಿಕ ಜಾಲಗಳಲ್ಲಿ ದ್ವೇಷ ಹರಡುವಂತಹ ಟ್ವಿಟ್ ಮಾಡುವ ಸಂಬಂಧ ಕಂಗನಾಗೆ ಅಕ್ಟೋಬರ್ 21 ಹಾಗೂ ನವೆಂಬರ್ …
Read More »ಜಲಶಕ್ತಿ ಸಚಿವರನ್ನು ಭೇಟಿಯಾದ ಸಚಿವ ರಮೇಶ್ ಜಾರಕಿಹೊಳಿ
ರಾಜ್ಯದ ವಿವಿಧ ಯೋಜನೆಗಳ ಅನುಮತಿ ಕುರಿತು ಚರ್ಚೆ ನವದೆಹಲಿ: ಮೇಕೆದಾಟು ಸಮಾನಾಂತರ ಅಣೆಕಟ್ಟು ನಿರ್ಮಾಣ ಯೋಜನೆಗೆ ಬೇಕಾಗಿರುವ ಕೇಂದ್ರ ಸರ್ಕಾರದ ವಿವಿಧ ಅನುಮತಿಗಳನ್ನು ಶೀಘ್ರವಾಗಿ ಒದಗಿಸುವಂತೆ ರಾಜ್ಯದ ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು ಕೇಂದ್ರ ಜಲಶಕ್ತಿ ಸಚಿವರಾದ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಮನವಿ ಮಾಡಿದ್ದಾರೆ. ನವದೆಹಲಿಯ ಶ್ರಮಶಕ್ತಿ ಭವನದಲ್ಲಿರುವ ಕೇಂದ್ರ ಜಲಶಕ್ತಿ ಸಚಿವರ ಕಚೇರಿಯಲ್ಲಿ ಕೇಂದ್ರ ಜಲಶಕ್ತಿ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು …
Read More »ಸಹಕಾರಿ ಬ್ಯಾಂಕ್ಗಳ ಮೂಲಕ ರೈತರಿಗೆ ಹೆಚ್ಚು ಸಾಲ ವಿತರಣೆ: ಸಚಿವ ಎಸ್.ಟಿ.ಸೋಮಶೇಖರ್
ಬೆಳಗಾವಿ, ನ.18: ಪ್ರಸಕ್ತ ಸಾಲಿನಲ್ಲಿ ರಾಜ್ಯದ ಎಲ್ಲ ಡಿಸಿಸಿ ಬ್ಯಾಂಕ್ಗಳ ಮೂಲಕ ರೈತರಿಗೆ 15,300 ಕೋಟಿ ರೂಪಾಯಿ ಸಾಲವನ್ನು ನೀಡಲು ನಿರ್ಧರಿಸಲಾಗಿದೆ ಎಂದು ಸಹಕಾರ ಇಲಾಖೆಯ ಸಚಿವರಾದ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ. ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳದ ನೇತೃತ್ವದಲ್ಲಿ “ಕೋರೊನಾ ಸೋಂಕು-ಆತ್ಮ ನಿರ್ಭರ ಭಾರತ ಸಹಕಾರ ಸಂಸ್ಥೆಗಳ ಸಹಯೋಗದೊಂದಿಗೆ ಮಹಾಂತೇಶ ನಗರದಲ್ಲಿರುವ ಜಿಲ್ಲಾ ಹಾಲು ಒಕ್ಕೂಟದ ಡೇರಿ ಆವರಣದಲ್ಲಿ ಬುಧವಾರ ನಡೆದ 67ನೇ ಅಖಿಲ ಭಾರತ ಸಹಕಾರ ಸಪ್ತಾಹ ಸಮಾರಂಭವನ್ನು …
Read More »ಬಂಜಾರ ನಿಗಮ, ಅಂಬೇಡ್ಕರ್ ಇದೆ. ಅದರಂತೆ ಮರಾಠ ನಿಗಮ ಸ್ಥಾಪಿಸಲಾಗಿದೆ. ಇದಕ್ಕೆ ಭೆರೆ ಅರ್ಥ ಕಲ್ಪಿಸಬೇಕಿಲ್:ರೇಣುಕಾಚಾರ್ಯಲ
ದಾವಣಗೆರೆ: ರಾಜಕೀಯ, ಚುನಾವಣೆ ದೃಷ್ಟಿಯಿಂದ ಮರಾಠ ಅಭಿವೃದ್ದಿ ನಿಗಮ ಸ್ಥಾಪಿಸಿಲ್ಲ. ಸಮುದಾಯದ ಅಭಿವೃದ್ಧಿಯ ದೃಷ್ಟಿಯಿಂದ ನಿಗಮ ಸ್ಥಾಪಿಸಲಾಗಿದೆ ಎಂದು ಶಾಸಕ ರೇಣುಕಾಚಾರ್ಯ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಮರಾಠ ಭಾಷೆಗೆ ಆದ್ಯತೆ ಕೊಟ್ಟಿಲ್ಲ. ಸಮಾಜದವರ ಏಳಿಗೆಗೆ, ಅಭಿವೃದ್ದಿಗೆ ನಿಗಮ ಮಾಡಿದೆ. ನನ್ನ ಕ್ಷೇತ್ರದಲ್ಲಿ ಸಹ ಸಾಕಷ್ಟು ಜನ ಮರಾಠರು ಇದ್ದಾರೆ. ಬಂಜಾರ ನಿಗಮ, ಅಂಬೇಡ್ಕರ್ ಇದೆ. ಅದರಂತೆ ಮರಾಠ ನಿಗಮ ಸ್ಥಾಪಿಸಲಾಗಿದೆ. ಇದಕ್ಕೆ ಭೆರೆ ಅರ್ಥ ಕಲ್ಪಿಸಬೇಕಿಲ್ಲ …
Read More »
Laxmi News 24×7