ನವದೆಹಲಿ: ಉಪ ಚುನಾವಣೆ ಬಳಿಕ ಸಂಪುಟ ಸರ್ಜರಿ ಮಾಡುತ್ತೇನೆ. ದೆಹಲಿಗೆ ಹೋಗಿ ಹೈಕಮಾಂಡ್ ಒಪ್ಪಿಗೆ ಪಡೆಯುತ್ತೇನೆ ಎಂದು ಸಿಎಂ ಯಡಯೂರಪ್ಪ ಘೋಷಿಸಿದ್ದೇ ತಡ ಸಚಿವ ಸ್ಥಾನದ ಆಕಾಂಕ್ಷಿಗಳ ಚಟುವಟಿಕೆ ತೀವ್ರಗೊಂಡಿದೆ. ಮಂತ್ರಿಗಿರಿಗಾಗಿ ಆಕಾಂಕ್ಷಿಗಳು ತಮ್ಮದೇ ಮೂಲಗಳ ಮೂಲಕ ಲಾಬಿ ಆರಂಭಿಸಿದ್ದಾರೆ. ವಿಶ್ವನಾಥ್ಗೆ ಮಂತ್ರಿಸ್ಥಾನ ಕೈತಪ್ಪಬಹುದು ಎಂಬ ಸುದ್ದಿ ಹರಡಿರುವ ಹಿನ್ನೆಲೆಯಲ್ಲಿ ಅವರು, ಇನ್ನೋರ್ವ ಆಕಾಂಕ್ಷಿ ಶಂಕರ್ ಜೊತೆ ಸಿಎಂಗೆ ಮುನ್ನವೇ ದೆಹಲಿಗೆ ದೌಡಾಯಿಸಿದ್ದಾರೆ. ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, …
Read More »ಅಭಿಮಾನಿಗಳು, ಕಾರ್ಯಕರ್ತರು ನನ್ನ ಮೇಲೆ ವಿಶೇಷ ಪ್ರೀತಿ, ಗೌರವ ಇಟ್ಟಿದ್ದಾರೆ. ನನ್ನ ಕೊನೆ ಉಸಿರಿನವರೆಗೂ ಅವರಿಗಾಗಿ ಹೋರಾಟ ಮಾಡ್ತೀನಿ:ನಿಖಿಲ್ ಕುಮಾರಸ್ವಾಮಿ
ಮಂಡ್ಯ: ಅಭಿಮಾನಿಗಳು, ಕಾರ್ಯಕರ್ತರು ನನ್ನ ಮೇಲೆ ವಿಶೇಷ ಪ್ರೀತಿ, ಗೌರವ ಇಟ್ಟಿದ್ದಾರೆ. ನನ್ನ ಕೊನೆ ಉಸಿರಿನವರೆಗೂ ಅವರಿಗಾಗಿ ಹೋರಾಟ ಮಾಡ್ತೀನಿ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. ಇಂದು ಮಂಡ್ಯ ಜಿಲ್ಲೆಯ ಕೆಆರ್ ಪೇಟೆ ತಾಲೂಕಿನ ಚೌಡೇನಹಳ್ಳಿ ಗ್ರಾಮದಲ್ಲಿ ಆತ್ಮಹತ್ಯೆ ಮಾಡಿಕೊಂಡ ರೈತನ ಮನೆಗೆ ಭೇಟಿ ನೀಡಿದ ನಿಖಿಲ್ ಬಳಿಕ ಸುದ್ದಿಗಾರೊಂದಿಗೆ ಮಾತನಾಡಿದರು. ಮತ್ತೊಮ್ಮೆ ರೈತರ ಆತ್ಮಹತ್ಯೆ ದಿನನಿತ್ಯ ನಡೆಯುತ್ತಿದೆ. ಇದು ನಿಲ್ಲಬೇಕು ಎಂದು ಹೇಳಿದರು. ಇಂದು ಮಂಡ್ಯ ಜಿಲ್ಲೆಯ ಕೆಆರ್ …
Read More »ಗಮನಿಸಿ, ಜನವರಿ 1 ರಿಂದ ಎಲ್ಲ 4 ಚಕ್ರದ ವಾಹನಗಳಿಗೆ ಫಾಸ್ಟ್ಟ್ಯಾಗ್ ಕಡ್ಡಾಯ
ನವದೆಹಲಿ: ಜನವರಿ 1, 2021ರಿಂದ ಎಲ್ಲ ನಾಲ್ಕು ಚಕ್ರದ ವಾಹನಗಳಿಗೆ ಫಾಸ್ಟ್ಟ್ಯಾಗ್ ಅಳವಡಿಕೆಯನ್ನು ಕಡ್ಡಾಯ ಮಾಡಲಾಗಿದೆ. ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಪ್ರಾಧಿಕಾರ ಮೋಟಾರು ವಾಹನ ಕಾಯ್ದೆಗೆ ತಿದ್ದುಪಡಿ ತಂದಿದ್ದು, 2017ಕ್ಕಿಂತ ಹಿಂದಿನ ಹಾಗೂ ನಂತರದ ಎಲ್ಲಾ ವಾಹನಗಳಿಗೆ ಫಾಸ್ಟ್ಟ್ಯಾಗ್ ಕಡ್ಡಾಯ ಮಾಡಲಾಗಿದೆ. 2021ರ ಜನವರಿಯಿಂದ ಇದು ಜಾರಿಗೆ ಬರಲಿದೆ ಎಂದು ಸರ್ಕಾರ ಹೇಳಿದೆ. 2017ರ ಡಿಸೆಂಬರ್ 1 ರಿಂದ ಮಾರಾಟವಾಗುವ ಎಲ್ಲ 4 ಚಕ್ರದ ವಾಹನಗಳಿಗೆ ಫಾಸ್ಟ್ಟ್ಯಾಗ್ …
Read More »ಪಟಾಕಿ ನಿಷೇಧ ವಿರೋಧಿಸಿ ಪಟಾಕಿ ಸುಡುವ ಮೂಲಕ ಪ್ರತಿಭಟಿಸಿದ ವಾಟಾಳ್
ಬೆಂಗಳೂರು, ನ.8- ದೀಪಾವಳಿ ಹಬ್ಬದಲ್ಲಿ ಪಟಾಕಿ ನಿಷೇಧ ಮಾಡಿರುವ ಕ್ರಮ ಸಂಪ್ರದಾಯಕ್ಕೆ ಮಾಡಿರುವ ಅಪಚಾರ ಎಂದು ಆರೋಪಿಸಿರುವ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರು, ಇಂದು ಪಟಾಕಿ ಸುಡುವ ಮೂಲಕ ಸರ್ಕಾರದ ಕ್ರಮ ವಿರೋಸಿ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪಟಾಕಿ ಹಚ್ಚುವುದರಿಂದ ಕೊರೊನಾ ಬರುತ್ತದೆ ಎಂಬ ಸರ್ಕಾರದ ಹೇಳಿಕೆ ಅತ್ಯಂತ ಅವೈಜ್ಞಾನಿಕವಾಗಿದೆ. ಕೊರೊನಾ ಸಾಂಕ್ರಾಮಿಕ ರೋಗ ಪಟಾಕಿಯಿಂದ ಬರುತ್ತದೆ ಎಂದು ಎಲ್ಲೂ …
Read More »ಸಿದ್ದರಾಮಯ್ಯನಾಯಕತ್ವಕ್ಕೆ ಕಾಂಗ್ರೆಸ್ಸಿನಲ್ಲಿಬೆಲೆಯಿಲ್ಲ: ನಳಿನ್ ಕುಮಾರ್
ತುಮಕೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಕಾಂಗ್ರೆಸ್ಸಿನಲ್ಲಿ ಕಳೆದುಹೋಗುವ ಭಯವಿದೆ. ಕಾಂಗ್ರೆಸ್ಸಿನಲ್ಲಿ ಅವರ ನಾಯಕತ್ವಕ್ಕೆ ಬೆಲೆಯಿಲ್ಲ ಅನ್ನಿಸಿದೆ. ಹೀಗಾಗಿ ಮೂಲೆ ಗುಂಪಾಗುವ ಭಯವಿದೆ. ಅದಕ್ಕೋಸ್ಕರ ಸಿಎಂ ಮೇಲೆ ದಿನಕ್ಕೊಂದು ಹೇಳಿಕೆ ನೀಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಾಗ್ದಾಳಿ ನಡೆಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತುಮಕೂರಿನಲ್ಲಿ 10 ಜಿಲ್ಲೆಗಳ ಮೂರು ವಿಭಾಗದ ತರಬೇತಿ ಶಿಬಿರ ನಡೆಯುತ್ತಿದೆ. ಶಿರಾ ಹಾಗೂ ಆರ್ಆರ್ನಗರ, ನಾಲ್ಕು ವಿಧಾನ ಪರಿಷತ್ ಕ್ಷೇತ್ರಗಳು ಬಿಜೆಪಿ …
Read More »ಅತ್ಯಾಚಾರ ಎಸಗಿ, ಕೊಲೆದೇಹವನ್ನು ಕಾಡಿನಲ್ಲಿ ಎಸೆದು ಪರಾರಿ
ಹಾವೇರಿ: ಮಹಿಳೆಯನ್ನು ಬೈಕ್ನಲ್ಲಿ ಕರೆ ತಂದು ನಿರ್ಜನ ಪ್ರದೇಶದಲ್ಲಿ ಅತ್ಯಾಚಾರ ಎಸಗಿ, ಕಾಡಿನಲ್ಲಿ ಎಸೆದು ಹೋಗಿರುವ ಅಮಾನವೀಯ ಘಟನೆ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಜಿಲ್ಲೆಯ ಹಾನಗಲ್ ತಾಲೂಕಿನ ಮಕರವಳ್ಳಿ ಅರಣ್ಯ ಪ್ರದೇಶದಲ್ಲಿ ಮಹಿಳೆಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಮಹಿಳೆಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇದೀಗ ಆರೋಪಿಯನ್ನು ಬಂಧಿಸಿದ್ದಾರೆ. ಬಳಿಕ ಆರೋಪಿಯನ್ನು ವಿಚಾರಣೆ ನಡೆಸಲಾಗಿದ್ದು, ಈ ವೇಳೆ ಅತ್ಯಾಚಾರವೆಸಗಿ ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ. …
Read More »ಜಾಮೀನು ಅರ್ಜಿ ತೀರ್ಪನ್ನು ಬಾಂಬೆ ಹೈಕೋರ್ಟ್ ಕಾಯ್ದಿರಿಸಿದ್ದು, ಅರ್ನಾಬ್ ಗೆ ಇನ್ನಷ್ಟು ದಿನಗಳ ಕಾಲ ಜೈಲುವಾಸ ಫಿಕ್ಸ್
ಮುಂಬೈ: ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೀಡಾಗಿರುವ ರಿಪಬ್ಲಿಕ್ ಟಿವಿ ಮುಖ್ಯಸಂಪಾದಕ ಅರ್ನಾಬ್ ಗೋಸ್ವಾಮಿ ಅವರ ಮಧ್ಯಂತರ ಜಾಮೀನು ಅರ್ಜಿ ತೀರ್ಪನ್ನು ಬಾಂಬೆ ಹೈಕೋರ್ಟ್ ಕಾಯ್ದಿರಿಸಿದ್ದು, ಅರ್ನಾಬ್ ಗೆ ಇನ್ನಷ್ಟು ದಿನಗಳ ಕಾಲ ಜೈಲುವಾಸ ಫಿಕ್ಸ್ ಆಗಿದೆ. ಈ ಹಿನ್ನೆಲೆಯಲ್ಲಿ ಅರ್ನಾಬ್ ರನ್ನು ನವಿ ಮುಂಬೈ ಬಳಿ ಇರುವ ತಲೋಜಾ ಜೈಲಿಗೆ ಕರೆದೊಯ್ಯಲಾಗಿದೆ. ಅಲಿಭಾಗ್ ನ್ಯಾಯಾಲಯ ಅರ್ನಾಬ್ ರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು. ಕೊರೊನಾ ಕಾರಣದಿಂದಾಗಿ ಅಲಿಭಾಗ್ ನಲ್ಲಿರುವ …
Read More »ಅಣ್ಣಾಮಲೈ ಬಳಿಕ ಇದೀಗ ಮತ್ತೊಬ್ಬ ಮಾಜಿ ಅಧಿಕಾರಿ ರಾಜಕೀಯಕ್ಕೆ ಎಂಟ್ರಿ
ಚೆನ್ನೈ: ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಬಳಿಕ ಇದೀಗ ಮತ್ತೊಬ್ಬ ಮಾಜಿ ಅಧಿಕಾರಿ ರಾಜಕೀಯಕ್ಕೆ ಎಂಟ್ರಿ ಕೊಡಲಿದ್ದು, ಮಾಜಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ಕಾಂಗ್ರೆಸ್ ಗೆ ಸೇರ್ಪಡೆಯಾಗಲಿದ್ದಾರೆ. ಸೆಂಥಿಲ್ ಮೂಲತ: ತಮಿಳುನಾಡಿನವರಾಗಿದ್ದು, ಈ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು. ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದು ಸೇರಿದಂತೆ ಕೇಂದ್ರ ಸರ್ಕಾರದ ಹಲವು ನೀತಿಗಳ ವಿರುದ್ಧ ಸಿಡಿದೆದ್ದು ಸೆಂಥಿಲ್ 2019ರ ಸೆಪ್ಟೆಂಬರ್ ನಲ್ಲಿ ರಾಜೀನಾಮೆ ನೀಡಿದ್ದರು. ಸಿಎಎ ಹಾಗೂ …
Read More »ವಿನಯ್ ಕುಲಕರ್ಣಿ ಬಂಧನಕ್ಕೆ ಪ್ರಹ್ಲಾದ್ ಜೋಶಿ ಒತ್ತಡವೇ ಕಾರಣ: ಸಿದ್ದು
ಶಿವಮೊಗ್ಗ: ಮಾಜಿ ಸಚಿವ ವಿನಯ್ ಕುಲಕರ್ಣಿ ಬಂಧನಕ್ಕೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರ ಒತ್ತಡವೇ ಕಾರಣ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿನಯ್ ಕುಲಕರ್ಣಿ ಬಂಧನ ರಾಜಕೀಯ ಪ್ರೇರಿತ. ಅವರ ಬಂಧನದ ಹಿಂದೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಒತ್ತಡವಿದೆ. ವಿನಯ್ ಕುಲಕರ್ಣಿ ಪ್ರಹ್ಲಾದ್ ಜೋಶಿ ವಿರುದ್ಧ ಚುನಾವಣೆಗೆ ಸ್ಪರ್ಧೆ ಮಾಡಿದ್ದೆ ಬಂಧನಕ್ಕೆ ಕಾರಣ ಎಂದು ಆರೋಪಿಸಿದರು. …
Read More »ಸ್ಥಳ ಮಹಜರು ವೇಳೆ ಮಚ್ಚಿನಿಂದ್ಲೇ ಪೊಲೀಸರ ಮೇಲೆ ದಾಳಿಗೆ ಯತ್ನ!
ತುಮಕೂರು: ನಗರದಲ್ಲಿ ಪೊಲೀಸರ ಬಂದೂಕು ಸದ್ದು ಮಾಡಿದೆ. ರೌಡಿಶೀಟರ್ ರೋಹಿತ್ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ತುಮಕೂರು ತಾಲೂಕಿನ ಮಾರನಾಯಕಪಾಳ್ಯ ಬಳಿ ಶೂಟೌಟ್ ನಡೆದಿದೆ. ತಿಲಕ್ ಪಾರ್ಕ್ ಸಿಪಿಐ ಮುನಿರಾಜು ಆರೋಪಿ ಮೇಲೆ ಗುಂಡು ಹಾರಿಸಿದ್ದಾರೆ. ಡಕಾಯಿತಿ ಪ್ರಕರಣದಲ್ಲಿ ಆರೋಪಿ ರೋಹಿತ್ನನ್ನ ಪೊಲೀಸರು ಬಂಧಿಸಿದ್ದಾರೆ. ಡಕಾಯಿತಿಗೆ ಬಳಸಿದ್ದ ಮಚ್ಚು ಬಚ್ಚಿಟ್ಟಿದ್ದ ಜಾಗಕ್ಕೆ ಪೊಲೀಸರನ್ನ ರೋಹಿತ್ ಕರೆದೊಯ್ದಿದ್ದಾನೆ. ಇದೇ ವೇಳೆ ಮಚ್ಚು ತೋರಿಸಿ ಅದೇ ಮಚ್ಚಿನಿಂದ ಪೊಲೀಸರ ಮೇಲೆ ಅಟ್ಯಾಕ್ ಮಾಡಲು …
Read More »
Laxmi News 24×7