ಶಿವಮೊಗ್ಗ: ಮಾಜಿ ಸಚಿವ ವಿನಯ್ ಕುಲಕರ್ಣಿ ಬಂಧನಕ್ಕೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರ ಒತ್ತಡವೇ ಕಾರಣ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿನಯ್ ಕುಲಕರ್ಣಿ ಬಂಧನ ರಾಜಕೀಯ ಪ್ರೇರಿತ. ಅವರ ಬಂಧನದ ಹಿಂದೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಒತ್ತಡವಿದೆ. ವಿನಯ್ ಕುಲಕರ್ಣಿ ಪ್ರಹ್ಲಾದ್ ಜೋಶಿ ವಿರುದ್ಧ ಚುನಾವಣೆಗೆ ಸ್ಪರ್ಧೆ ಮಾಡಿದ್ದೆ ಬಂಧನಕ್ಕೆ ಕಾರಣ ಎಂದು ಆರೋಪಿಸಿದರು. …
Read More »ಸ್ಥಳ ಮಹಜರು ವೇಳೆ ಮಚ್ಚಿನಿಂದ್ಲೇ ಪೊಲೀಸರ ಮೇಲೆ ದಾಳಿಗೆ ಯತ್ನ!
ತುಮಕೂರು: ನಗರದಲ್ಲಿ ಪೊಲೀಸರ ಬಂದೂಕು ಸದ್ದು ಮಾಡಿದೆ. ರೌಡಿಶೀಟರ್ ರೋಹಿತ್ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ತುಮಕೂರು ತಾಲೂಕಿನ ಮಾರನಾಯಕಪಾಳ್ಯ ಬಳಿ ಶೂಟೌಟ್ ನಡೆದಿದೆ. ತಿಲಕ್ ಪಾರ್ಕ್ ಸಿಪಿಐ ಮುನಿರಾಜು ಆರೋಪಿ ಮೇಲೆ ಗುಂಡು ಹಾರಿಸಿದ್ದಾರೆ. ಡಕಾಯಿತಿ ಪ್ರಕರಣದಲ್ಲಿ ಆರೋಪಿ ರೋಹಿತ್ನನ್ನ ಪೊಲೀಸರು ಬಂಧಿಸಿದ್ದಾರೆ. ಡಕಾಯಿತಿಗೆ ಬಳಸಿದ್ದ ಮಚ್ಚು ಬಚ್ಚಿಟ್ಟಿದ್ದ ಜಾಗಕ್ಕೆ ಪೊಲೀಸರನ್ನ ರೋಹಿತ್ ಕರೆದೊಯ್ದಿದ್ದಾನೆ. ಇದೇ ವೇಳೆ ಮಚ್ಚು ತೋರಿಸಿ ಅದೇ ಮಚ್ಚಿನಿಂದ ಪೊಲೀಸರ ಮೇಲೆ ಅಟ್ಯಾಕ್ ಮಾಡಲು …
Read More »ಶ್ರೀ ಆನಂದರಾಮಾಯಣಂ ಎಂಬ ಹೊತ್ತಿಗೆಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬಿಡುಗಡೆ ಮಾಡಿದರು.
ಬೆಂಗಳೂರು: ಪಟ್ಟಣಗೆರೆ ರಂಗನಾಥ ಶಾಸ್ತ್ರಿ ಕೃಷ್ಣವೇಣಮ್ಮ ಮೆಮೋರಿಯಲ್ ಟ್ರಸ್ಟ್ (ರಿ) ವತಿಯಿಂದ ಪ್ರೇರಣೆಗೊಂಡಿರುವ ಬೇಲದಕೆರೆ ಸೂರ್ಯನಾರಾಯಣ ಶಾಸ್ತ್ರಿ ಅವರು ಕನ್ನಡಕ್ಕೆ ಅನುವಾದ ಮಾಡಿ ಬರೆದಿರುವ ಶ್ರೀಮದಾದಿಕವಿ ವಾಲ್ಮೀಕಿ ವಿರಚಿತಂ ಶ್ರೀ ಆನಂದರಾಮಾಯಣಂ ಎಂಬ ಹೊತ್ತಿಗೆಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಪುಸ್ತಕದ ಭಾರತೀಯ ಸಂಸ್ಕೃತಿಯಲ್ಲಿ ಇಂತಹ ಪುಸ್ತಕಗಳು ನಾಡಿಗೆ ಕನ್ನಡ ಅನುವಾದದಲ್ಲಿ ಬಂದಿರುವುದು ಸಂತಸ ನೀಡಿದೆ ಎಂದು ಹೇಳಿದರು.
Read More »ಬಾಯಿಗೆ ಹಗ್ಗ ಕಟ್ಟಿ ಹೆಣ್ಣು ಶ್ವಾನದ ಮೇಲೆ ಅತ್ಯಾಚಾರ ಮಾಡಿದ್ದಾನೆ.
ಮುಂಬೈ: ಇತ್ತೀಚಿನ ದಿನಗಳಲ್ಲಿ ಪ್ರಾಣಿಗಳ ಮೇಲೆ ಅತ್ಯಾಚಾರ ನಡೆಯುತ್ತಿರುವ ಹಲವಾರು ಪ್ರಕರಣಗಳು ಬೆಳಕಿಗೆ ಬರುತ್ತಿದೆ. ಅದರಂತೆ ಇದೀಗ ಹೆಣ್ಣು ಶ್ವಾನದ ಮೇಲೆ ನೀಚ ಕಾಮುಕನೊಬ್ಬ ಅತ್ಯಾಚಾರವೆಸಗುವ ಮೂಲಕ ತನ್ನ ಕಾಮ ತೃಷೆ ತೀರಿಸಿಕೊಂಡ ಘಟನೆಯೊಂದು ನಡೆದಿದೆ. ಕಳೆದ ವಾರ 8 ವರ್ಷದ ಶ್ವಾನ ನೂರಿ ಮೇಲೆ ಮುಂಬೈನ ಪೊವಾರಿ ಪ್ರದೇಶದಲ್ಲಿರುವ ಶಾಪಿಂಗ್ ಕಾಂಪ್ಲೆಕ್ಸ್ ಮೇಲೆ ಲೈಂಗಿಕ ದೌರ್ಜನ್ಯ ನಡೆದಿತ್ತು. ಈ ಬೆನ್ನಲ್ಲೇ ಇದೀಗ ಮತ್ತೊಂದು ಘಟನೆ ನಡೆದಿದೆ. 30 ವರ್ಷದ …
Read More »ಯಕ್ಷಗಾನ ವಿದ್ವತ್ ಪರಂಪರೆಯ ಮತ್ತೊಂದು ಕೊಂಡಿ ಕಳಚಿದೆ.
ಉಡುಪಿ: ಯಕ್ಷಲೋಕದ ರತ್ನ ಹಿರಿಯ ಯಕ್ಷಗಾನ ಕಲಾವಿದ, ಅರ್ಥಧಾರಿ, ಸಂಘಟಕ, ಯಕ್ಷ ಕವಿ ಮಲ್ಪೆ ವಾಸುದೇವ ಸಾಮಗ ಕೊನೆಯುಸಿರೆಳೆದಿದ್ದಾರೆ. ಈ ಮೂಲಕ ಯಕ್ಷಗಾನ ವಿದ್ವತ್ ಪರಂಪರೆಯ ಮತ್ತೊಂದು ಕೊಂಡಿ ಕಳಚಿದೆ. ಸಾಮಗರಿಗೆ 71 ವರ್ಷ ವಯಸ್ಸಾಗಿತ್ತು. ಕೆಲವು ದಿನಗಳಿಂದ ಕೋವಿಡ್ ನಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಬೆಳಗ್ಗೆ ನಿಧನರಾಗಿದ್ದಾರೆ. ಯಕ್ಷಗಾನ ರಂಗದಲ್ಲಿ ತನ್ನ ವಾಕ್ಪಟುತ್ವದಿಂದ ಖ್ಯಾತಿಗಳಿಸಿದ್ದ ವಾಸುದೇವ ಸಾಮಗರು, ಕುಂದಾಪುರದ ಕೋಟೇಶ್ವರದಲ್ಲಿ ನೆಲೆಸಿದ್ದರು. ಅಮೃತೇಶ್ವರಿ ಮೇಳದ ಮೂಲಕ ಯಕ್ಷಗಾನ …
Read More »ಅಪ್ರಾಪ್ತೆಯ ಮೇಲೆ ಹಲ್ಲೆ ನಡೆಸಿದ್ದ ಮೂವರು ಮಹಿಳಾ ಪೊಲೀಸರ ವಿರುದ್ಧ ಎಫ್ಐಆರ್
ಮಂಗಳೂರು: ಅಪ್ರಾಪ್ತೆಯ ಮೇಲೆ ಹಲ್ಲೆ ನಡೆಸಿದ್ದ ಮೂವರು ಮಹಿಳಾ ಪೊಲೀಸರ ವಿರುದ್ಧ ಎಫ್ಐಆರ್ ದಾಖಲಾದ ಘಟನೆ ಮಂಗಳೂರಿನ ಬಜ್ಪೆಯಲ್ಲಿ ನಡೆದಿದೆ. ಮಂಗಳೂರಿನ ಹೊರವಲಯದ ಗಂಜಿಮಠದ ಅಪ್ರಾಪ್ತೆ, ಮೂಡಬಿದಿರೆಯ ಯುವಕನೋರ್ವನನ್ನು ಪ್ರೀತಿಸುತ್ತಿದ್ದಳು. ಆದರೆ ಆತ ಪ್ರತಿದಿನ ಫೋನ್ ಮಾಡಿ ಟಾರ್ಚರ್ ಕೊಡುತ್ತಿದ್ದ ಹಿನ್ನೆಲೆಯಲ್ಲಿ ತನ್ನ ಹೆತ್ತವರೊಂದಿಗೆ ಬಂದು ಬಜ್ಪೆ ಪೊಲೀಸ್ ಠಾಣೆಯಲ್ಲಿ ಆತನ ವಿರುದ್ಧ ದೂರು ನೀಡಿದ್ದಳು. ಆದರೆ ಬಜ್ಪೆ ಪೊಲೀಸ್ ಠಾಣೆಯ ಪೊಲೀಸರು ದೂರು ದಾಖಲಿಸಿಕೊಳ್ಳದೆ, ದೂರು ನೀಡಲು ಬಂದಿದ್ದ …
Read More »ಸಿಂಹ ರೂಪ ತಾಳಿದ ಮಂಗಳೂರಿನ ಮಾಡೆಲ್
ಮಂಗಳೂರು: ವಿದೇಶಗಳಲ್ಲಿ ಹೆಚ್ಚಾಗಿ ಕಾಣ ಸಿಗುತ್ತಿದ್ದ ಫೇಸ್ ಪೈಂಟಿಂಗ್ ಇದೀಗ ನಮ್ಮ ರಾಜ್ಯದ ಕರಾವಳಿಯಲ್ಲೂ ಮೊದಲ ಬಾರಿಗೆ ಕಾಣ ಸಿಕ್ಕಿದೆ. ಮಂಗಳೂರಿನ ಬೆಂದೂರ್ ವೆಲ್ ನಲ್ಲಿರುವ ಬ್ಯೂಟಿ ಲಾಂಜ್ ಆ್ಯಂಡ್ ಅಕಾಡೆಮಿಯ ಮುಖ್ಯಸ್ಥೆ ಚೇತನಾ ಎಂಬ ಮಾಡೆಲ್, ಮುಖದ ಮೇಲೆ ಮಾಡಿರುವ ಫೇಸ್ ಪೈಂಟಿಂಗ್ ಈಗ ಮಂಗಳೂರಿನಲ್ಲಿ ಸಖತ್ ಫೇಮಸ್ ಆಗಿದೆ. ವಿದೇಶಗಳಲ್ಲಿ ಹೆಚ್ಚಾಗಿ ಮಾಡುವ ಫೇಸ್ ಪೈಂಟಿಂಗ್ ಅನ್ನು ಇವರು ಮಾಡಿ ಈಗ ಎಲ್ಲರ ಮೆಚ್ಚುಗೆ ಪಡೆದಿದ್ದಾರೆ. ಶಿವಮೊಗ್ಗ …
Read More »ಭೀಮಾತೀರದ ಶೂಟೌಟ್ ಪ್ರಕರಣದಲ್ಲಿ ಭಾಗಿಯಾಗಿದ್ದ ಐವರು ಅರೆಸ್ಟ್ ; ಬಂಧಿತರಿಂದ ಎರಡು ಕಂಟ್ರಿ ಪಿಸ್ತೂಲ್ ವಶಕ್ಕೆ..!
ವಿಜಯಪುರ : ನವೆಂಬರ್ 2 ರಂದು ಭೀಮಾತೀರದ ಕುಖ್ಯಾತಿಯ ಮಹಾದೇವ ಭೈರಗೊಂಡ ಮೇಲೆ ನಡೆದಿದ್ದ ಶೂಟೌಟ್ ಪ್ರಕರಣಕ್ಕೆ ಸಂಭಂದಿಸಿದಂತೆ ವಿಜಯಪುರ. ಪೋಲೀಸರು ಮತ್ತೆ ಐವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹೌದು ನವೆಂಬರ್ 2 ರಂದು ನಡೆದಿದ್ದ ಗುಂಡಿನ ದಾಳಿಯಲ್ಲಿ ಭಾಗಿಯಾಗಿದ್ದ ಯಾಶೀನ್ ರಮಜಾನಸಾಬ್ ದಂದರಗಿ, ಕರೆಪ್ಪ ಸೊನ್ನದ , ಸಿದ್ದರಾಯ ಬೊಮ್ಮನಜೋಗಿ , ಸಚೀನ ಮಾನವರ್ , ಚಡಚಣ. ಮೂಲದ ರವಿ ಬಂಡಿ ಬಂಧಿತ ಆರೋಪಿಗಳು, ಬಂಧಿತ ಆರೋಪಿಗಳಿಂದ ಐದು …
Read More »ಬೆಂಗಳೂರಲ್ಲಿ6 ಕಡೆ ಎಸಿಬಿ ದಾಳಿ…………….
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಇಂದು ಎಸಿಬಿ ಅಧಿಕಾರಿಗಳು ಬೆಳ್ಳಂಬೆಳಗ್ಗೆ ಕೆಲ ಮನೆಗಳ ಮೇಲೆ ದಾಳಿ ಮಾಡಿದ್ದಾರೆ. ಕೆಎಎಸ್ ಅಧಿಕಾರಿ ಡಾ. ಸುಧಾ ಅವರ ಮನೆ ಹಾಗೂ ಕಚೇರಿ ಮೇಲೆ ದಾಳಿ ಮಾಡಿದ್ದಾರೆ. ಬೆಂಗಳೂರಿನ ಕೊಡಿಗೇಹಳ್ಳಿಯಲ್ಲಿ ಇರುವ ಮನೆ ಬೆಂಗಳೂರಿನ ಮನೆ, ಕಚೇರಿ ಸೇರಿದಂತೆ 6 ಕಡೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಜೊತೆಗೆ, ಉಡುಪಿ ಜಿಲ್ಲೆಯ ಹೆಬ್ರಿ ಬಳಿಯ ತೆಂಕಬಟ್ಟಿನ ಮನೆ ಮೇಲೂ ದಾಳಿ ನಡೆಸಲಾಗಿದೆ. ಈ ಹಿಂದೆ ಬಿಡಿಎನಲ್ಲಿ …
Read More »ಖಾನಾಪುರ ಸ್ಥಾನ ಕೊನೆ ಗಳಿಗೆಯಲ್ಲಿ ಸೋಲು : ಶಾಸಕ ಸತೀಶ್ ಜಾರಕಿಹೊಳಿ
ಬೆಳಗಾವಿ : ಡಿಸಿಸಿ ಬ್ಯಾಂಕ್ ಚುನಾವಣೆ ವ್ಯಕ್ತಿಗತ ಅವರ ಗೌರವ, ಸ್ಥಾನದ ಮೇಲೆ ನಡೆಯುತ್ತದೆ. ಖಾನಾಪುರ ನಿರ್ದೇಶಕರ ಸ್ಥಾನ ಗೆಲ್ಲುವ ಎಲ್ಲ ಅವಕಾಶಗಳು ಇತ್ತು. ಆದರೆ ಕೊನೆ ಗಳಿಗೆಯಲ್ಲಿ ಸಮಸ್ಯೆಯಾಗಿ, ಸೋತಿದ್ದೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ನಗರದ ನಿವಾಸದಲ್ಲಿ ಶನಿವಾರ ಮಾತನಾಡಿ, ಡಿಸಿಸಿ ಬ್ಯಾಂಕ್ ರೈತರು ಇರುವಂತಹ ಬ್ಯಾಂಕ್ ಆಗಿದೆ. ಇಲ್ಲಿ ಬಿಜೆಪಿ, ಜೆಡಿಎಸ್, ಕಾಂಗ್ರೆಸ್ ಅಂತ ಬರುವುದಿಲ್ಲ. ಇಡೀ ರಾಜ್ಯದಲ್ಲಿ ಡಿಸಿಸಿ ಬ್ಯಾಂಕ್, …
Read More »
Laxmi News 24×7