Breaking News

ರಾಜ್ಯ

ಶೆಟ್ಟಿಹಳ್ಳಿಯ ವೇರ್‌ಹೌಸ್ ಬಳಿ ಯುವಕನ ಬರ್ಬರ ಕೊಲೆಯಾಗಿರುವ ಘಟನೆ ನಡೆದಿದೆ.

ಬೆಂಗಳೂರು: ಜಿಲ್ಲೆಯ ಆನೇಕಲ್ ತಾಲೂಕಿನ ಶೆಟ್ಟಿಹಳ್ಳಿಯ ವೇರ್‌ಹೌಸ್ ಬಳಿ ಯುವಕನ ಬರ್ಬರ ಕೊಲೆಯಾಗಿರುವ ಘಟನೆ ನಡೆದಿದೆ. ಮಾರಕಾಸ್ತ್ರಗಳಿಂದ ಕೊಚ್ಚಿ 25 ವರ್ಷದ V.Y. ವಿನುತ್ ಎಂಬಾತನನ್ನು ಹತ್ಯೆ ಮಾಡಲಾಗಿದೆ.         ಕೆಲಸಕ್ಕೆ ತೆರಳುತ್ತಿದ್ದ ವೇಳೆ ನಾಲ್ವರು ದುಷ್ಕರ್ಮಿಗಳಿಂದ ಕೃತ್ಯ ಎಸಗಲಾಗಿದ್ದು ಹಳೇ ದ್ವೇಷದ ಹಿನ್ನೆಲೆಯಲ್ಲಿ ವಿನುತ್ ಹತ್ಯೆಗೈದಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಅತ್ತಿಬೆಲೆ ಠಾಣೆ ಪೊಲೀಸರ ಭೇಟಿ ಕೊಟ್ಟು ಪರಿಶೀಲನೆ ನಡೆಸಿದರು. ವಿನುತ್ ಬೆಸ್ತಮಾನಹಳ್ಳಿ ನಿವಾಸಿ ಎಂದು …

Read More »

IPL ಕ್ರಿಕೆಟ್ ಬೆಟ್ಟಿಂಗ್​ನಲ್ಲಿ ಹಣ ಕಳೆದುಕೊಂಡಿರುವ ಶಂಕೆಯಡಿ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ

ಬೆಂಗಳೂರು: IPL ಕ್ರಿಕೆಟ್ ಬೆಟ್ಟಿಂಗ್​ನಲ್ಲಿ ಹಣ ಕಳೆದುಕೊಂಡಿರುವ ಶಂಕೆಯಡಿ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. 20 ವರ್ಷದ ಮಂಜುನಾಥ್ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿರುವ ಯುವಕ. ಕಳೆದ ಒಂದು ವಾರದ ಹಿಂದೆ ಆತ್ಮಹತ್ಯೆಗೆ ಯತ್ನಿಸಿದ್ದ ಮಂಜುನಾಥ್ ಇಂದು ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ವಿದ್ಯಾಭ್ಯಾಸಕ್ಕೆಂದು ಅಜ್ಜಿ ಮನೆಗೆ ಬಂದಿದ್ದ ಮಂಜುನಾಥ್ ಕಳೆದ ವಾರ ಇದ್ದಕ್ಕಿದ್ದಂತೆ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂದು ತಿಳಿದುಬಂದಿದೆ. ಆಗ, ಕಾರಣ ತಿಳಿದಯದೇ ಇದ್ದ ಕುಟುಂಬಸ್ಥರಿಗೆ …

Read More »

ಬ್ಯಾಂಕಿಂಗ್ ಸೇವೆಗಳಿಗೆ ಸಂಬಂಧಿಸಿದ ಎಲ್ಲ ನೇಮಕಾತಿ ಪರೀಕ್ಷೆಗಳನ್ನು ರಾಜ್ಯ ಭಾಷೆಗಳಲ್ಲಿ ನಡೆಸುವಂತೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ನಿರಂತರವಾಗಿ ಒತ್ತಾಯಿಸುತ್ತಾ ಬಂದಿದೆ.

ಬೆಂಗಳೂರು: ಬ್ಯಾಂಕಿಂಗ್ ಸೇವೆಗಳಿಗೆ ಸಂಬಂಧಿಸಿದ ಎಲ್ಲ ನೇಮಕಾತಿ ಪರೀಕ್ಷೆಗಳನ್ನು ರಾಜ್ಯ ಭಾಷೆಗಳಲ್ಲಿ ನಡೆಸುವಂತೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ನಿರಂತರವಾಗಿ ಒತ್ತಾಯಿಸುತ್ತಾ ಬಂದಿದೆ. ಈ ಸಂಬಂಧ ಹಲವು ಭಾರಿ ಕೇಂದ್ರ ವಿತ್ತ ಸಚಿವರನ್ನು ಖುದ್ದು ಭೇಟಿ ಮಾಡಿ ಮನವಿ, ಮೊರೆಗಳನ್ನು ಸಲ್ಲಿಸಿದ್ದಾರೆ. ಆದರೂ ಸಹ ಹಳೆಯ ಮಾರ್ಗಸೂಚಿಗಳನ್ವಯ ಪರೀಕ್ಷೆ ನಡೆಸಲು ಸಿದ್ಧತೆ ಮಾಡಿಕೊಳ್ಳುತ್ತಿರುವ ಐಬಿಪಿಎಸ್​ ಕ್ರಮ ಖಂಡನಾರ್ಹವಾಗಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಟಿ.ಎಸ್.ನಾಗಾಭರಣ ಅವರು ಬೇಸರ ವ್ಯಕ್ತಪಡಿಸಿದ್ದಾರೆ. ಕನ್ನಡ …

Read More »

ಅಕ್ರಮವಾಗಿ ಮಣ್ಣುಮುಕ್ಕ ಹಾವು ಸಾಗಿಸುತ್ತಿದ್ದ ಐವರನ್ನು ಬಂಧಿಸಿ ಅರಣ್ಯಾಧಿಕಾರಿಗಳು ಅವರಿಂದ ಮೂರು ಅಡಿ ಉದ್ದದ ಎರಡು ತಲೆಯ

ಮೈಸೂರು: ಅಕ್ರಮವಾಗಿ ಮಣ್ಣುಮುಕ್ಕ ಹಾವು ಸಾಗಿಸುತ್ತಿದ್ದ ಐವರನ್ನು ಬಂಧಿಸಿ ಅರಣ್ಯಾಧಿಕಾರಿಗಳು ಅವರಿಂದ ಮೂರು ಅಡಿ ಉದ್ದದ ಎರಡು ತಲೆಯ ಹಾವನ್ನು ರಕ್ಷಿಸಿದ್ದಾರೆ. ದೊಡ್ಡಯ್ಯ (45), ಹೇಮಂತ್(19), ಯೋಗೇಶ್(24), ರವಿ(35), ಭರಮೇಗೌಡ(23) ಬಂಧಿತರು. ಆರ್‌ಎಫ್‌ಒ ವಿವೇಕ್ ನೇತ್ರತ್ವದಲ್ಲಿ ಕಾರ್ಯಾಚರಣೆ ನಡೆಸಿ ಬೆಂಗಳೂರಿನಿಂದ ಮೈಸೂರಿಗೆ ಅಕ್ರಮವಾಗಿ ಮಣ್ಣುಮುಕ್ಕ ಹಾವನ್ನು ಮಾರಾಟ ಮಾಡಲು ಕಾರಿನಲ್ಲಿ ಬರುತ್ತಿದ್ದವರನ್ನು ಮೈಸೂರಿನ ಸಿದ್ದಲಿಂಗಪುರ ಬಳಿ ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ. ಹಾಗೂ ಹಾವನ್ನು ರಕ್ಷಣೆ ಮಾಡಿದ್ದಾರೆ.

Read More »

ಉತ್ತರ ಕರ್ನಾಟಕದವರು ಬಹಳ ವರ್ಷಗಳಿಂದ ಮುಖ್ಯಮಂತ್ರಿಯಾಗಿಲ್ಲ. ಹೀಗಾಗಿ ಮುಂದಿನ ಸಿಎಂ ಈ ಭಾಗದವರೇ ಆಗಬೇಕು: ರಮೇಶ ಕತ್ತಿ

ಬೆಳಗಾವಿ : ಉತ್ತರ ಕರ್ನಾಟಕದವರು ಬಹಳ ವರ್ಷಗಳಿಂದ ಮುಖ್ಯಮಂತ್ರಿಯಾಗಿಲ್ಲ. ಹೀಗಾಗಿ ಮುಂದಿನ ಸಿಎಂ ಈ ಭಾಗದವರೇ ಆಗಬೇಕು ಎಂದು ಮಾಜಿ ಸಂಸದ ರಮೇಶ ಕತ್ತಿ ಹೇಳಿದರು. ಮಾಧ್ಯಮದವರೊಂದಿಗೆ ಗುರುವಾರ ಮಾತನಾಡಿದ ಅವರು, ಸಹೋದರ ಉಮೇಶ್ ಕತ್ತಿ ಮಂತ್ರಿನೇ ಆಗುತ್ತಿಲ್ಲ. ಇನ್ನು ಮುಖ್ಯಮಂತ್ರಿ ಹೇಗೆ ಆಗುತ್ತಾರೆ. ಸಹೋದರನಿಗೆ ಸಿಪಾಯಿ ಆಗಾಕ್ ಆಗವಲ್ದು, ಡಿಸಿ ಹೆಂಗ್ ಆಗ್ತಾನಾ ಎಂದು ಹಾಸ್ಯ ಚಟಾಕಿ ಹಾರಿಸಿದ್ದಾರೆ. ಉಮೇಶ ಕತ್ತಿ ಹಿರಿಯ ರಾಜಕಾರಣಿಯಾಗಿದ್ದು, ಅನುಭವ ಇದೆ. ಮೂವರು …

Read More »

ಕರಾವಳಿಯ 5 ಭಾಗಗಳಲ್ಲಿ ಎಂಕೆ-4 ಮಾದರಿಯ ಡೈರಕ್ಷನಲ್ ವೇವ್ ರೈಡರ್ ಬಾಯ್

ಕಾರವಾರ: ಕಳೆದ ಹಲವು ವರ್ಷಗಳಿಂದ ಹವಾಮಾನ ವೈಪರಿತ್ಯ ಸೇರಿದಂತೆ ದೇಶದ ಕಡಲಿನಲ್ಲಾಗುವ ಬದಲಾವಣೆಯನ್ನು ತಕ್ಷಣ ಗುರುತಿಸಿ ಮಾಹಿತಿ ರವಾನೆ ಮಾಡಲು ಹವಾಮಾನ ಇಲಾಖೆಗೆ ಕಷ್ಟಸಾಧ್ಯವಾಗುತಿತ್ತು. ಇದರಿಂದ ಮಳೆ, ಸಮುದ್ರದಲ್ಲಿ ವೈಪರಿತ್ಯ ಆಗುವ ಮೊದಲೇ ನಿಖರವಾಗಿ ಮಾಹಿತಿ ನೀಡಲಾಗುತ್ತಿರಲಿಲ್ಲ. ಆದರೆ ಕೇಂದ್ರ ಸರ್ಕಾರ ಈಗ ದೇಶದ ಕರಾವಳಿ ಭಾಗದಲ್ಲಿ ಹೊಸ ತಂತ್ರಜ್ಞಾನ ಹೊಂದಿದ ಎಂಕೆ-4 ಮಾದರಿಯ ಡೈರಕ್ಷನಲ್ ವೇವ್ ರೈಡರ್ ಬಾಯ್ ಅನ್ನು ಕರಾವಳಿಯ 5 ಭಾಗಗಳಲ್ಲಿ ಅಳವಡಿಸುತ್ತಿದೆ. ಕರ್ನಾಟಕ ರಾಜ್ಯದ …

Read More »

ನಕಲಿ ಸಹಿ ಬಳಸಿ ವಿದ್ಯಾರ್ಥಿಗಳಿಂದ ಹಣ ವಸೂಲಿ ಆರೋಪದಡಿ ಸುಧೀರ್ ಅಂಗೂರ್, ಶೈಲಜಾ ಸೇರಿ 10 ಜನರ ವಿರುದ್ಧ FIR ದಾಖಲಾಗಿದೆ.

ಆನೇಕಲ್: ನಕಲಿ ಸಹಿ ಬಳಸಿ ವಿದ್ಯಾರ್ಥಿಗಳಿಂದ ಹಣ ವಸೂಲಿ ಆರೋಪದಡಿ ಸುಧೀರ್ ಅಂಗೂರ್, ಶೈಲಜಾ ಸೇರಿ 10 ಜನರ ವಿರುದ್ಧ FIR ದಾಖಲಾಗಿದೆ. ಕಾಲೇಜ್ ಶುಲ್ಕ, ಟ್ಯೂಷನ್ ಫೀ, ಹಾಸ್ಟೆಲ್ ಫೀ ಎಂದು ಮಧುಕರ್ ಅವರ ನಕಲಿ ಸಹಿ ಬಳಸಿಕೊಂಡು ವಿದ್ಯಾರ್ಥಿಗಳ ಬಳಿ ಹಣ ವಸೂಲಿ ಮಾಡಿ ದುರುಪಯೋಗ ಮಾಡಿದ್ದಾರೆ ಎಂದು ಅಲಯನ್ಸ್ ವಿವಿ ಸಂಸ್ಥಾಪಕ ಮಧುಕರ್ ಅಂಗೂರ್‌ ದೂರು ದಾಖಲಿಸಿದ್ದರು. ದೂರು ಆಧರಿಸಿ ಸುಧೀರ್ ಅಂಗೂರ್, ಶೈಲಜಾ ಸೇರಿ …

Read More »

ರಾತ್ರೋರಾತ್ರಿ ಎಡಿಜಿಪಿ ಶ್ರೇಣಿಯ IPS ಅಧಿಕಾರಿ ಡಾ.ಪಿ. ರವೀಂದ್ರನಾಥ್ ಕಂಟ್ರೋಲ್ ರೂಂಗೆ ತೆರಳಿ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.

ಬೆಂಗಳೂರು: ರಾತ್ರೋರಾತ್ರಿ ಎಡಿಜಿಪಿ ಶ್ರೇಣಿಯ IPS ಅಧಿಕಾರಿ ಡಾ.ಪಿ. ರವೀಂದ್ರನಾಥ್ ಕಂಟ್ರೋಲ್ ರೂಂಗೆ ತೆರಳಿ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ. ರಾತ್ರಿ 10.30ಕ್ಕೆ ಕಂಟ್ರೋಲ್ ರೂಂಗೆ ತೆರಳಿ ಅಲ್ಲಿದ್ದ ಸಿಬ್ಬಂದಿ ಕೈಗೆ ರವೀಂದ್ರನಾಥ್ ರಾಜಿನಾಮೆ ಪತ್ರ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅಸಮಾಧಾನ ಭುಗಿಲೆದ್ದಿರುವುದು ಗೋಚರವಾಗುತ್ತಿದೆ. ಸೀನಿಯಾರಿಟಿ ಇಲ್ಲದಿದ್ದರೂ ಸುನಿಲ್ ಕುಮಾರ್‌ಗೆ ಎಡಿಜಿಪಿ ಶ್ರೇಣಿಯಿಂದ ಡಿಜಿಪಿ ಶ್ರೇಣಿಗೆ ಬಡ್ತಿ ನೀಡಿರುವುದಕ್ಕೆ ರವೀಂದ್ರನಾಥ್ ಅಸಮಧಾನಗೊಂಡು ಈ ರೀತಿ ನಿರ್ಧಾರ …

Read More »

ಬಾಲ ಕಾರ್ಮಿಕರನ್ನು ರಕ್ಷಿಸಿದ್ದಾರೆ. ಮಲ್ಪೆ ಮೀನುಗಾರಿಕಾ ಬಂದರಲ್ಲಿ ಮೀನು ಹೆಕ್ಕುತ್ತಿದ್ದ 17 ಮಕ್ಕಳು ಇಲಾಖೆ ರಕ್ಷಿಸಿದೆ.

ಉಡುಪಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಮಕ್ಕಳ ರಕ್ಷಣಾ ಘಟಕ ಕಾರ್ಮಿಕ ಇಲಾಖೆ ಜಂಟಿ ಕಾರ್ಯಾಚರಣೆ ನಡೆಸಿ ಒಟ್ಟು 17 ಬಾಲ ಕಾರ್ಮಿಕರನ್ನು ರಕ್ಷಿಸಿದ್ದಾರೆ. ಮಲ್ಪೆ ಮೀನುಗಾರಿಕಾ ಬಂದರಲ್ಲಿ ಮೀನು ಹೆಕ್ಕುತ್ತಿದ್ದ 17 ಮಕ್ಕಳು ಇಲಾಖೆ ರಕ್ಷಿಸಿದೆ. ರಕ್ಷಿಸಲ್ಪಟ್ಟ ಬಾಲಕಾರ್ಮಿಕರೆಲ್ಲ ಕೊಪ್ಪಳ, ಬಳ್ಳಾರಿ ಮೂಲದವರು. ಈ ಜಂಟಿ ಕಾರ್ಯಾಚರಣೆಗೆ ಸಾರ್ವಜನಿಕ ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆ ಸಾಥ್ ನೀಡಿದೆ. ಹಾಗೂ ಮಕ್ಕಳ ಸಹಾಯವಾಣಿ ನಾಗರಿಕ ಸೇವಾ ಟ್ರಸ್ಟ್ ಕಾರ್ಯಕರ್ತರು ರಕ್ಷಣೆಗೆ …

Read More »

ವಿಶ್ವ ಸೇರಿದಂತೆ ಇಡೀ ಭಾರತದ ಗಮನ ಸೆಳೆದಿದ್ದ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್​ನನ್ನು ಬಿಡುಗಡೆ ಮಾಡುತ್ತಿರುವುದು

ದೆಹಲಿ: ವಿಶ್ವ ಸೇರಿದಂತೆ ಇಡೀ ಭಾರತದ ಗಮನ ಸೆಳೆದಿದ್ದ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್​ನನ್ನು ಬಿಡುಗಡೆ ಮಾಡುತ್ತಿರುವುದು ಶಾಂತಿಗಾಗಿ ಎಂದು ಹೇಳಿದ್ದ ಪಾಕಿಸ್ತಾನದ ನಿಜ ರೂಪ ಬಯಲಾಗಿದೆ. ಅಭಿನಂದನ್​ ಬಿಡುಗಡೆಗೆ ಕಾರಣ ಬಯಲಾಗಿದೆ. ಭಾರತದ ಆ ಬಂದು ಮಾತಿಗೆ ಹೆದರಿ ಪಾಪಿ ಪಾಕಿಸ್ತಾನ ಬಾಲು ಮುದುಡಿಕೊಂಡಿತ್ತು. ಅಭಿನಂದನ್​ ಬಿಡುಗಡೆ ಮಾಡದಿದ್ರೆ ಭಾರತದಿಂದ ದಾಳಿ ಆಗುವ ಆತಂಕಕ್ಕೆ ಪಾಕ್​ ಸೇನೆ ಮುಖ್ಯಸ್ಥ ಖಮರ್ ಬಜ್ವಾ ಕಾಲುಗಳು ನಡುಗುತ್ತಿತ್ತು. 2019ರ ಪಾಕ್​ ಸರ್ವಪಕ್ಷ …

Read More »