ದೆಹಲಿ : ಕೊರೊನಾ ಬಿಕ್ಕಟ್ಟಿನ ನಡುವೆ ಬಿಹಾರ ಮೊದಲ ಹಂತದ ಮತದಾನ ಯಶಸ್ವಿಯಾಗಿದೆ. 1066 ಅಭ್ಯರ್ಥಿಗಳ ಭವಿಷ್ಯ ಇವಿಎಂನಲ್ಲಿ ಭದ್ರವಾಗಿದೆ. ಮತ್ತೊಂದ್ಕಡೆ 2ನೇ ಹಂತದ ಚುನಾವಣೆಗೂ ರಾಜಕೀಯ ಪಕ್ಷಗಳ ನಾಯಕರು ಪ್ರಚಾರ ಆರಂಭಿಸಿದ್ದಾರೆ. ಚುನಾವಣಾ ಕಾವು ಮತ್ತಷ್ಟು ಏರಿದೆ. ರಾಷ್ಟ್ರ ರಾಜಕಾರಣದಲ್ಲಿ ಕುತೂಹಲ ಕೆರಳಿಸಿರುವ ಬಿಹಾರ ವಿಧಾನಸಭೆಯ ಮೊದಲ ಹಂತದ ಚುನಾವಣೆಗೆ ಬಿರುಸಿನ ಮತದಾನ ನಡೆದಿದೆ. ಕೆಲ ಮತಗಟ್ಟೆಗಳಲ್ಲಿ ಮತಯಂತ್ರಗಳಲ್ಲಿ ಕಂಡುಬಂದ ದೋಷದಿಂದಾಗಿ ವೋಟಿಂಗ್ ತಡವಾಗಿ ಆರಂಭವಾಗಿತ್ತು. ಇಂತಹ ಸಣ್ಣಪುಟ್ಟ ಘಟನೆಗಳನ್ನು …
Read More »ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಮೂವರು ರೌಡಿಶೀಟರ್ಗಳನ್ನು ಸೇರಿ 10 ಜನರನ್ನು ಬಂಧಿಸಿದ್ದಾರೆ.
ಬೆಂಗಳೂರು: ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಮೂವರು ರೌಡಿಶೀಟರ್ಗಳನ್ನು ಸೇರಿ 10 ಜನರನ್ನು ಬಂಧಿಸಿದ್ದಾರೆ. ರೌಡಿಶೀಟರ್ಗಳಾದ ಕಾರ್ತಿಕ್ ಅಲಿಯಾಸ್ ಚಪ್ಪರ್, ಹುಚ್ಚೆಗೌಡ ಅಲಿಯಾಸ್ ಹಂದಿ ಹುಚ್ಚ, ಹೇಮಂತ್ ಅಲಿಯಾಸ್ ಮಿಂಡ್ರಿ ಸೇರಿ 10 ಜನರು ಅರೆಸ್ಟ್ ಆಗಿದ್ದಾರೆ. ಅರೆಸ್ಟ್ ಆದ ಆರೋಪಿಗಳು ದರೋಡೆಗೆ ಸಂಚು ರೂಪಿಸಿದ್ದರು. ಮಾರಕಾಸ್ತ್ರಗಳೊಂದಿಗೆ ಅಟ್ಯಾಕ್ಗೆ ಸಜ್ಜಾಗಿದ್ರು. ಈ ಬಗ್ಗೆ ಖಚಿತ ಮಾಹಿತಿ ತಿಳಿಯುತ್ತಿದ್ದಂತೆ ಜ್ಞಾನ ಭಾರತಿ ಪೊಲೀಸ್ ಠಾಣೆ ಹಾಗೂ ವಿಜಯನಗರ ಠಾಣಾ ವ್ಯಾಪ್ತಿಯಲ್ಲಿ …
Read More »ಜನರೇ ಗಮನಿಸಿ, ಕೊರೊನಾ ಸೋಂಕಿತರ ಸಾವಿಗೆ ವಾಯುಮಾಲಿನ್ಯವೂ ಕಾರಣ
ನವದೆಹಲಿ: ಜನರೇ ವಾತಾವರಣವನ್ನು ಸ್ವಚ್ಛವಾಗಿರಿಸಿ. ಯಾಕೆಂದರೆ ಕೊರೋನಾ ಸಾವಿಗೆ ವಾಯುಮಾಲಿನ್ಯವೂ ಈಗ ಕಾರಣವಾಗಿರುವುದು ಅಧ್ಯಯನದಿಂದ ದೃಢಪಟ್ಟಿದೆ. ಮಾಲಿನ್ಯದ ಜೊತೆ ಸೇರಿ ಕೊರೋನಾ ಪ್ರಾಣಕ್ಕೆ ಕುತ್ತು ತರಬಹುದು ಹುಷಾರ್ ಅಂತ ಕೇಂದ್ರ ಆರೋಗ್ಯ ಇಲಾಖೆ ಹಾಗೂ ಐಸಿಎಂಆರ್ ಆತಂಕ ವ್ಯಕ್ತಪಡಿಸಿದೆ. ವಿದೇಶಗಳಲ್ಲಿ ನಡೆಸಿದ ಅಧ್ಯಯನದ ಮೇಲೆ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಮಾಹಿತಿಯನ್ನು ಹಂಚಿಕೊಂಡಿದೆ. ಏನಿದು ಅಧ್ಯಯನ? ಯುರೋಪ್, ಅಮೆರಿಕದ ಅಧ್ಯಯನದ ಪ್ರಕಾರ ಕಲುಷಿತ ಗಾಳಿಯೂ ಕೊರೊನಾ ರೋಗಿಗಳ ಸಾವಿಗೆ …
Read More »ಬಸ್ ಡಿಕ್ಕಿಯಲ್ಲಿದ್ದ 64 ಲಕ್ಷ ನಗದು ಸೀಜ್
ತುಮಕೂರು: ಖಾಸಗಿ ಬಸ್ಸಿನ ಡಿಕ್ಕಿಯಲ್ಲಿ 64,40,000 ನಗದು ಪತ್ತೆಯಾಗಿದೆ.ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಕಳ್ಳಂಬೆಳ್ಳ ಚುನಾವಣಾ ಚೆಕ್ ಪೋಸ್ಟ್ ನಲ್ಲಿ ಸಿಕ್ಕಿರುವ ಯಾವುದೇ ದಾಖಲೆ ಇಲ್ಲದ 64,40,000 ಹಣ ಸಿಕ್ಕಿದೆ. ರಾಷ್ಟ್ರೀಯ ಹೆದ್ದಾರಿ 48 ರಲ್ಲಿರೋ ಕಳ್ಳಂಬೆಳ್ಳ ಚೆಕ್ ಪೋಸ್ಟ್ ನಲ್ಲಿ ಈ ಹಣ ಖಾಸಗಿ ಬಸ್ಸಿನ ಡಿಕ್ಕಿಯಲ್ಲಿ ಸಿಕ್ಕಿದೆ. ಹಣವನ್ನು ಚುನಾವಣಾಧಿಕಾರಿ ನಂದಿನಿದೇವಿ ನೇತೃತ್ವದಲ್ಲಿ ವಶಕ್ಕೆ ಪಡೆದುಕೊಳ್ಳಲಾಗಿದೆ.
Read More »ಮುನಿರತ್ನ ಕೂಡ ದರ್ಶನ್ ಆಪ್ತರಲ್ಲಿ ಒಬ್ಬರಾಗಿದ್ದು ಚುನಾವಣಾ ಪ್ರಚಾರಕ್ಕೆ ಗಜ ಬರ್ತಾರೆ ಎನ್ನಲಾಗ್ತಿದೆ.
ಬೆಂಗಳೂರು: ಆರ್.ಆರ್ ನಗರ ಕ್ಚೇತ್ರದ ಉಪಚುನಾವಣೆ ಪ್ರಚಾರ ಕಣ ಕ್ಲೈಮಾಕ್ಸ್ ಗೆ ಬರ್ತಿದೆ. ಕ್ಲೈಮಾಕ್ಸ್ ನಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಪ್ರಚಾರ ಕಣಕ್ಕೆ ಧುಮುಕಲಿದ್ದಾರೆ. ಈ ಮೂಲಕ ಆರ್ ಆರ್ ನಗರದಲ್ಲಿ ಸಾರಥಿ ಧೂಳೆಬ್ಬಿಸ್ತಾರೆ ಎನ್ನಲಾಗ್ತಿದೆ. ಸ್ಯಾಂಡಲ್ವುಡ್ನ ಚಾಲೆಜಿಂಗ್ ಸ್ಟಾರ್ ದರ್ಶನ್, ಕನ್ನಡದ ಸೂಪರ್ ಸ್ಟಾರ್ ಹಾಗೂ ಅಪಾರ ಅಭಿಮಾನಿಗಳನ್ನು ಹೊಂದಿರೋ ಯಜಮಾನ ಎರಡು ವರ್ಷಗಳ ಹಿಂದೆ ಇದೇ ದಾಸ ಮಂಡ್ಯ ಎಲೆಕ್ಷನ್ನಲ್ಲಿ ಮಿಂಚಿದ್ದನ್ನು …
Read More »ಭಾರೀ ಸಂಚಲನ ಸೃಷ್ಟಿಸಿದ್ದ ಐಎಂಎ ಬಹುಕೋಟಿ ವಂಚನೆ,ಮನ್ಸೂರ್ ಖಾನ್ಗೆ ಹೈಕೋರ್ಟ್ ಜಾಮೀನು ನೀಡಿದೆ.
ಬೆಂಗಳೂರು: ಭಾರೀ ಸಂಚಲನ ಸೃಷ್ಟಿಸಿದ್ದ ಐಎಂಎ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಮನ್ಸೂರ್ ಖಾನ್ಗೆ ಹೈಕೋರ್ಟ್ ಏಕಸದಸ್ಯ ಪೀಠ ಜಾಮೀನು ನೀಡಿದೆ. ಮನ್ಸೂರ್ ಖಾನ್ ವಿರುದ್ಧ ಇಡಿ ದಾಖಲಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾ.ಶ್ರೀನಿವಾಸ್ ಹರೀಶ್ ಕುಮಾರ್ ಅವರಿದ್ದ ಏಕಸದಸ್ಯ ಪೀಠ ಕೆಲ ಷರತ್ತುಗಳನ್ನು ವಿಧಿಸಿ ಜಾಮೀನು ಮಂಜೂರು ಮಾಡಿದೆ. ಅಧೀನ ನ್ಯಾಯಾಲಯ ಸೂಚಿಸಿದಾಗ ವಿಚಾರಣೆಗೆ ಹಾಜರಾಗಬೇಕು, ಯಾವುದೇ ಕಾರಣಕ್ಕೂ ಸಾಕ್ಷ್ಯ ನಾಶ ಹಾಗೂ ಸಾಕ್ಷಿಗಳಿಗೆ ಬೆದರಿಕೆ ಹಾಕಬಾರದು. …
Read More »ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹಾಗೂ ಜೇಮ್ಸ್ ಚಿತ್ರತಂಡ ಸರ್ಕಾರಿ ಶಾಲೆಗೆ 1 ಲಕ್ಷ ದೇಣಿಗೆ ನೀಡಿದೆ.
ಕೊಪ್ಪಳ: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹಾಗೂ ಜೇಮ್ಸ್ ಚಿತ್ರತಂಡ ಸರ್ಕಾರಿ ಶಾಲೆಗೆ 1 ಲಕ್ಷ ದೇಣಿಗೆ ನೀಡಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮಲ್ಲಾಪೂರ ಸರ್ಕಾರಿ ಶಾಲೆಗೆ ಜೇಮ್ಸ್ ಚಿತ್ರತಂಡ ಒಂದು ಲಕ್ಷ ಹಣ ದೇಣಿಗೆ ನೀಡಿದೆ. ಸರ್ಕಾರಿ ಶಾಲೆಯ ಮೂಲಭೂತ ಸೌಕರ್ಯಗಳ ಹೆಚ್ಚಿಸಲು ಹಾಗೂ ಸರ್ಕಾರಿ ಶಾಲೆಗಳ ಉತ್ತೇಜನಕ್ಕಾಗಿ ಈ ದೇಣಿಗೆ ನೀಡಲಾಗಿದೆ. ಸರ್ಕಾರಿ ಶಾಲೆಗೆ ಒಂದು ಲಕ್ಷ ಹಣ ನೀಡಿದ್ದಕ್ಕೆ ಗ್ರಾಮಸ್ಥರು, ಶಾಲಾ ಸಿಬ್ಬಂದಿ …
Read More »ಉಪಚುನಾವಣೆ ರಂಗೇರುತ್ತಿದ್ದು, ಸ್ಟಾರ್ ಪ್ರಚಾರಕ್ಕಾಗಿ ಯಮಕನಮರಡಿ ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ತೆರಳಲಿದ್ದಾರೆ.
ಬೆಂಗಳೂರು : ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ರಂಗೇರುತ್ತಿದ್ದು, ಸ್ಟಾರ್ ಪ್ರಚಾರಕ್ಕಾಗಿ ಯಮಕನಮರಡಿ ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ತೆರಳಲಿದ್ದಾರೆ. ಈಗಾಗಲೇ ಮೂರು ದಿನಗಳ ಕಾಲ ಪ್ರಚಾರ ನಡೆಸಿದ ಶಾಸಕ ಸತೀಶ್ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷರ ಆದೇಶದ ಮೇರೆಗೆ ಮತ್ತೆ ಶಿರಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ.ಜಯಚಂದ್ರ ಪರ ಎರಡು ದಿನಗಳ ಕಾಲ ಪ್ರಚಾರ ನಡೆಸಲಿದ್ದಾರೆ. ನೂರಾರು ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ಇದೇ ದಿನಾಂಕ 30 ಹಾಗೂ 31 ರಂದು …
Read More »ರಾಜ್ಯ ಸರ್ಕಾರ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 65 ಜನರಿಗೆ ರಾಜ್ಯೋತ್ಸವ ಪ್ರಕಟಿಸಿದೆ.
ಬೆಳಗಾವಿ: ರಾಜ್ಯ ಸರ್ಕಾರ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 65 ಜನರಿಗೆ ರಾಜ್ಯೋತ್ಸವ ಪ್ರಕಟಿಸಿದೆ. ಅದರಲ್ಲಿ ಉತ್ತರ ಕರ್ನಾಟಕ 16 ಈ ಪ್ರಶಸ್ತಿ ಭಾಜನರಾಗಿದ್ದಾರೆ. ಕಲೆ, ಸಾಹಿತ್ಯ, ಹಾಗೂ ಸಂಗೀತ, ಮಾಧ್ಯಮ ಸೇರಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಹೆಸರು ಪ್ರಕಟಿಸಿದೆ. ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾದವರ ಹೆಸರು. ಸಾಹಿತ್ಯ ಕ್ಷೇತ್ರ ಪ್ರೊ. ಸಿ.ಪಿ ಸಿದ್ದರಾಮ್- ಧಾರವಾಡ ವಿ. ಮುನಿ ವೆಂಕಟಪ್ಪ- ಕೋಲಾರ ರಾಮಣ್ಣ ಬ್ಯಾಟಿ(ವಿಶೇಷ …
Read More »ಪಂಚಮಸಾಲಿ ಲಿಂಗಾಯತ ಸಮಾಜಕ್ಕೆ ಪ್ರವರ್ಗ ‘ 2ಎ’ ಮೀಸಲಾತಿ ನೀಡುವಂತೆ ಆಗ್ರಹಿಸಿ ಇಲ್ಲಿನ ಸುವರ್ಣ ವಿಧಾನಸೌಧದ ಎದುರು ಇಂದು ಬೃಹತ್ ಪ್ರತಿಭಟನೆ
ಬೆಳಗಾವಿ : ಪಂಚಮಸಾಲಿ ಲಿಂಗಾಯತ ಸಮಾಜಕ್ಕೆ ಪ್ರವರ್ಗ ‘ 2ಎ’ ಮೀಸಲಾತಿ ನೀಡುವಂತೆ ಆಗ್ರಹಿಸಿ ಇಲ್ಲಿನ ಸುವರ್ಣ ವಿಧಾನಸೌಧದ ಎದುರು ಇಂದು ಬೃಹತ್ ಪ್ರತಿಭಟನೆ ಆರಂಭವಾಗಿದೆ. ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಬುಧವಾರ ಹಮ್ಮಿಕೊಂಡಿರುವ ಉಪವಾಸ ಸತ್ಯಾಗ್ರಹ ಅಂಗವಾಗಿ ತಾಲ್ಲೂಕಿನ ಹಿರೇಬಾಗೇವಾಡಿಯಿಂದ ದ್ವಿಚಕ್ರ ವಾಹನ ಹಾಗೂ ಕಾರುಗಳಲ್ಲಿ ಸಮಾಜದವರು ಮೆರವಣಿಗೆ ಆರಂಭಿಸಿದ್ದರು. ಆ ಗ್ರಾಮದ ಬಸವೇಶ್ವರ ವೃತ್ತದಲ್ಲಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಸ್ವಾಮೀಜಿ, …
Read More »
Laxmi News 24×7