Breaking News

ರಾಜ್ಯ

ಮನೆಯ ಕಿಟಕಿ ಅಥವಾ ಬಾಗಿಲು ಮುರಿದು ಒಳನುಗ್ಗಿದ್ದ ಚೋರರು ಮನೆಯಲ್ಲಿದ್ದ ಚಿನ್ನ, ಒಡವೆ ಹಣವನ್ನೆಲ್ಲಾ ಕದ್ದು ಪರಾರಿಯಾದರು ಅನ್ನೋ ಸುದ್ದಿನ ನಾವೆಲ್ಲರೂ ಸಾಮಾನ್ಯವಾಗಿ ಕೇಳಿರುತ್ತೇವೆ.

ಮುಂಬೈ: ಮನೆಯ ಕಿಟಕಿ ಅಥವಾ ಬಾಗಿಲು ಮುರಿದು ಒಳನುಗ್ಗಿದ್ದ ಚೋರರು ಮನೆಯಲ್ಲಿದ್ದ ಚಿನ್ನ, ಒಡವೆ ಹಣವನ್ನೆಲ್ಲಾ ಕದ್ದು ಪರಾರಿಯಾದರು ಅನ್ನೋ ಸುದ್ದಿನ ನಾವೆಲ್ಲರೂ ಸಾಮಾನ್ಯವಾಗಿ ಕೇಳಿರುತ್ತೇವೆ. ಆದರೆ, ಇತ್ತೀಚಿನ ದಿನಗಳಲ್ಲಿ ಗೃಹಬಳಕೆಯ ವಸ್ತುಗಳ ಬೆಲೆ ಗಗನಕ್ಕೇರುತ್ತಿದ್ದು ಅವುಗಳು ಸಹ ಕದಿಯಲು ಯೋಗ್ಯವೆಂಬಂತೆ ಭಾಸವಾಗುತ್ತಿದೆ. ಅಲ್ಲಿಗೂ ಸೈಕಲ್​ ಗ್ಯಾಪ್​ನಲ್ಲಿ 9 ಮೂಟೆ ಮಾರಿಬಿಟ್ಟಿದ್ದಾರೆ!   ಅಂತೆಯೇ, 100 ರೂಪಾಯಿಯ ಗಡಿ ಮುಟ್ಟಿರುವುದರಿಂದ ಈರುಳ್ಳಿ ಸಹ ಕದಿಯಲು ಸೂಕ್ತವಾದ, ಅತ್ಯಮೂಲ್ಯ ವಸ್ತುವಾಗಿ ಮಾರ್ಪಟ್ಟಂತಿದೆ. ಹೌದು, ಮಹಾರಾಷ್ಟ್ರದ …

Read More »

ಸಾರಾಯಿ ಸೇವಿಸಬೇಡ ಎಂದು ಪತ್ನಿ ಬುದ್ದಿವಾದ ಹೇಳಿದಕ್ಕೆ ಮನನೊಂದು ಪತಿ ಆತ್ಮಹತ್ಯೆ

ಬೆಳಗಾವಿ: ಸಾರಾಯಿ ಸೇವಿಸಬೇಡ ಎಂದು ಪತ್ನಿ ಬುದ್ದಿವಾದ ಹೇಳಿದಕ್ಕೆ ಮನನೊಂದು ಪತಿ ಆತ್ಮಹತ್ಯೆಗೆ ಶರಣಾದ ಘಟನೆ ಶಹಾಪೂರದಲ್ಲಿ ಇಂದು ನಡೆದಿದೆ. ರಾಹುಲ್ ಸಹದೇವ ಸೈನೊಚೆ(30) ಮೃತ ವ್ಯಕ್ತಿ. ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಈತ ಮದ್ಯ ವ್ಯಸನಿಗೆ ಅಂಟುಕೊಂಡಿದ್ದ.  ದಸರಾ ಹಬ್ಬ ಹಿನ್ನೆಲೆ ದಿನಸಿಗಾಗಿ  ಪತ್ನಿ  ಹಣ ಬೇಡಿದ್ದು,  ಸಾರಾಯಿ ಸೇವಿಸದಂತೆ ಪತ್ನಿ ಮನವಿ ಮಾಡಿದ್ದಾಳೆ. ಈ ವಿಚಾರವಾಗಿ ಇಬ್ಬರ ಮಧ್ಯೆ ಗಲಾಟೆ ನಡೆದು ಆತ ಎರಡು ದಿನದಿಂದ ಮನೆ …

Read More »

ಈರುಳ್ಳಿ ಬೆಳೆಗಾರರು ಅಪಾರ ಮಳೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದು, ಇದೇ ಸಂದರ್ಭದಲ್ಲಿ ಈರುಳ್ಳಿ ಬೆಲೆಯಲ್ಲಿ ಏರಿಕೆ ಕಂಡಿರುವುದು ಸ್ವಲ್ಪ ಮಟ್ಟಿನ ಸಮಾಧಾನ

ರಾಯಚೂರು: ಜಿಲ್ಲೆಯ ಈರುಳ್ಳಿ ಬೆಳೆಗಾರರು ಅಪಾರ ಮಳೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದು, ಇದೇ ಸಂದರ್ಭದಲ್ಲಿ ಈರುಳ್ಳಿ ಬೆಲೆಯಲ್ಲಿ ಏರಿಕೆ ಕಂಡಿರುವುದು ಸ್ವಲ್ಪ ಮಟ್ಟಿನ ಸಮಾಧಾನವನ್ನುಂಟು ಮಾಡಿದೆ. ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ರೈತರ ಬೆಳೆಗೆ ಉತ್ತಮ ಬೆಲೆ ಸಿಗುತ್ತಿದ್ದು, 6 ಸಾವಿರ ರೂಪಾಯಿಗೆ ಒಂದು ಕ್ವಿಂಟಾಲ್ ಈರುಳ್ಳಿ ಖರೀದಿಯಾಗುತ್ತಿದೆ. ಭಾರೀ ಮಳೆಗೆ ರೈತರು ಅರ್ಧ ಬೆಳೆ ಕಳೆದುಕೊಂಡಿದ್ದಾರೆ. ಇದೀಗ ಉಳಿದ ಬೆಳೆಗೆ ಉತ್ತಮ ಬೆಲೆ ಸಿಗುತ್ತಿರುವುದರಿಂದ ಸಮಾಧಾನಪಟ್ಟುಕೊಂಡಿದ್ದಾರೆ. ಈ ಬಾರಿಯ ಮುಂಗಾರು ಮಳೆ …

Read More »

ಕಾಡೆಮ್ಮೆಯನ್ನ ಕೂಗಿ-ಕೂಗಿ ಕರೆದ ಗ್ರಾಮಸ್ಥರು

ಚಿಕ್ಕಮಗಳೂರು: ಕಾಡೆಮ್ಮೆಯನ್ನ ಕೂಗಿ-ಕೂಗಿ ಕರೆದ ಗ್ರಾಮಸ್ಥರು ಕಾಡೆಮ್ಮೆ ಗ್ರಾಮದೊಳಗೆ ಬರುತ್ತಿದ್ದಂತೆ ಭಯಗೊಂಡು ಅಂಗಡಿಯೊಳಗೆ ಹೋಗಿ ರೋಲಿಂಗ್ ಶಟರ್‌ ಎಳೆದುಕೊಂಡ ಘಟನೆ ಜಿಲ್ಲೆಯ ಕೊಪ್ಪ ತಾಲೂಕಿನ ಕೂಳೂರು ಗ್ರಾಮದಲ್ಲಿ ನಡೆದಿದೆ. ಜಯಪುರ ಸಮೀಪದ ಕೂಳುರು, ಧರೆಕೊಪ್ಪ ಭಾಗದಲ್ಲಿ ಕಳೆದ ಎರಡ್ಮೂರು ದಿನಗಳಿಂದ ಕಾಡೆಮ್ಮೆಯೊಂದು ಬೀಡು ಬಿಟ್ಟಿತ್ತು. ಆಗಾಗ ಗ್ರಾಮಸ್ಥರ ಕಣ್ಣಿಗೂ ಬೀಳುತ್ತಿತ್ತು.  ಗ್ರಾಮದ ಬಳಿ ಕಾಡೆಮ್ಮೆ ಆಗಾಗ ಕಂಡು ಕಾಡಂಚಿನಲ್ಲಿ ಮರೆಯಾಗುತ್ತಿತ್ತು. ಆದರೆ ಇಂದು ಕೂಳೂರು ಗ್ರಾಮದ ಗದ್ದೆ ಬದಿಯಲ್ಲಿ ನಿಂತಿದ್ದ …

Read More »

65 ವರ್ಷದ ಹರೀಶ್ ಸಾಳ್ವೆ ಎರಡನೇ ಮದುವೆಗೆ ಸಿದ್ಧತೆ

ನವದೆಹಲಿ : ಪಾಕಿಸ್ತಾನದಲ್ಲಿ ಮರಣದಂಡನೆಗೆ ಗುರಿಯಾಗಿರುವ ಭಾರತದ ಕುಲಭೂಷಣ್ ಜಾಧವ್ ಪ್ರಕರಣದಲ್ಲಿ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ವಾದಿಸಲು ಕೇವಲ 1 ರೂ ಶುಲ್ಕ ಪಡೆಯುವ ಮೂಲಕ ಸುದ್ದಿಯಾಗಿದ್ದ ಹಿರಿಯ ವಕೀಲ ಹರೀಶ್ ಸಾಳ್ವೆ, ಲಂಡನ್ ಮೂಲದ ಕಲಾವಿದೆಯೊಂದಿಗೆ ಎರಡನೆಯ ಮದುವೆಗೆ ಸಿದ್ಧತೆ ನಡೆಸಿದ್ದಾರೆ. 65 ವರ್ಷದ ಹರೀಶ್ ಸಾಳ್ವೆ, 38 ವರ್ಷಗಳ ವೈವಾಹಿಕ ಜೀವನದ ಬಳಿಕ ಮೀನಾಕ್ಷಿ ಸಾಳ್ವೆ ಅವರಿಂದ ಜೂನ್ ತಿಂಗಳಲ್ಲಿ ವಿಚ್ಚೇದನ ಪಡೆದುಕೊಂಡಿದ್ದರು. ಭಾರತದ ಮಾಜಿ ಸಾಲಿಸಿಟರ್ ಜನರಲ್ …

Read More »

ಯಡಿಯೂರಪ್ಪ ಅವರು ಊಟ ಮಾಡಲು ಕಲಬುರಗಿಗೆ ಬಂದು ಹೋಗಿರಬಹುದು. ಇದು ಜನಪ್ರತಿನಿಧಿಗಳ ಸರ್ಕಾರವೇ ಅಲ್:ಸಿದ್ದರಾಮಯ್ಯಲ

ಕಲಬುರಗಿ: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ವೈಮಾನಿಕ ಸಮೀಕ್ಷೆ ಮಾಡಿದ್ದಾರೆ. ಆದರೆ ಜನಪ್ರತಿನಿಧಿಗಳ ಜೊತೆ ಚರ್ಚಿಸದೇ ಹೋಗಿದ್ದಾರೆ. ಯಡಿಯೂರಪ್ಪ ಅವರು ಊಟ ಮಾಡಲು ಕಲಬುರಗಿಗೆ ಬಂದು ಹೋಗಿರಬಹುದು. ಇದು ಜನಪ್ರತಿನಿಧಿಗಳ ಸರ್ಕಾರವೇ ಅಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಲಬುರಗಿ ಜಿಲ್ಲೆಯಲ್ಲಿ 1 ಲಕ್ಷ ಹೆಕ್ಟೇರ್ ಬೆಳೆ ನಾಶವಾಗಿ 100 ಕೋಟಿ ರೂಪಾಯಿ ನಷ್ಟವಾಗಿದೆ. ರಾಜ್ಯ ಸರ್ಕಾರದ ಪ್ರಕಾರ ಒಟ್ಟು 700 …

Read More »

ಸೊರಬ ಪಟ್ಟಣದಲ್ಲಿ ದಿ.ಬಂಗಾರಪ್ಪ ಅವರ ಸ್ಮಾರಕ ನಿರ್ಮಿಸಲು ಈಗಾಗಲೇ 1 ಕೋಟಿ ರೂ. ಅನುದಾನ:B.S.Y.

ಶಿವಮೊಗ್ಗ: ಸಮಾಜಮುಖಿ ಚಿಂತನೆಯ ನಾಯಕರಾಗಿದ್ದ ಬಂಗಾರಪ್ಪ ಅವರು ಜಾರಿಗೊಳಿಸಿದ ಜನಪರ ಹಾಗೂ ದೂರದೃಷ್ಟಿಯ ಯೋಜನೆಗಳಿಂದಾಗಿ ಇಂದಿಗೂ ಅವರು ಜನಮಾನಸದಲ್ಲಿ ಚಿರಸ್ಥಾಯಿಯಾಗಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ದಿವಂಗತ ಎಸ್.ಬಂಗಾರಪ್ಪ ಅವರ 87ನೇ ಜನ್ಮಸ್ಮರಣೆ ಹಾಗೂ ಸೊರಬ ಪಟ್ಟಣದಲ್ಲಿ 21.15ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ಉದ್ಯಾನವನವನ್ನು ಆನ್‍ಲೈನ್ ಸಮಾರಂಭದ ಮೂಲಕ ಉದ್ಘಾಟಿಸಿ ಮಾತನಾಡಿದ ಸಿಎಂ, ಶಿಕ್ಷಣ, ಆರೋಗ್ಯ, ಕೃಷಿ ಕ್ಷೇತ್ರದಲ್ಲಿ ಬಂಗಾರಪ್ಪ ಅವರು ತಂದ ದೂರದೃಷ್ಟಿ ಯೋಜನೆಯಿಂದಾಗಿ ಅವರು …

Read More »

ಕೆಜಿಎಫ್ ರಾಕಿಗೆ ಡೆತ್ ನೋಟ್ ನೀಡಲು ಬಂದ ರಮಿಕಾ ಸೇನ್

ಬೆಂಗಳೂರು: ಕೆಜಿಎಫ್ ದುನಿಯಾದ ರಾಕಿಗೆ ಡೆತ್ ನೋಟ್ ನೀಡಲು ಬಂದ ರಾಜಕಾರಣಿ ರಮೀಕಾ ಸೇನ್ ಫಸ್ಟ್ ಲುಕ್ ಔಟ್ ಆಗಿದೆ. ರಮೀಕಾ ಸೇನ್ ಪಾತ್ರದಲ್ಲಿ ನಟಿಸುತ್ತಿರುವ ರವೀನಾ ಟಂಡನ್ ಹುಟ್ಟುಹಬ್ಬದ ಹಿನ್ನೆಲೆ ಚಿತ್ರತಂಡ ಫಸ್ಟ್ ಲುಕ್ ಬಿಡುಗಡೆಗೊಳಿಸುವ ಮೂಲಕ ಬರ್ತ್ ಡೇ ಗಿಫ್ಟ್ ನೀಡಿದೆ. ಕನ್ನಡಕ್ಕೆ ಮೊದಲ ಬಾರಿಗೆ ಬಂದಿರುವ ರವೀನಾ ಟಂಡನ್ ಕೆಜಿಎಫ್ ಚಿತ್ರದ ವಿಶೇಷ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಮೊದಲ ಭಾಗದಲ್ಲಿ ಕಾಣಿಸಿಕೊಂಡಿದ್ದ ಮಹಿಳಾ ರಾಜಕಾರಣಿಯಾಗಿ ರವೀನಾ ನಟಿಸುತ್ತಿದ್ದಾರೆ. …

Read More »

ಸಂಜಯ್ ರಾವತ್ ನನ್ನನ್ನು ಹರಾಮ್‍ಕೋರ್ ಅಂದ, ಉದ್ಧವ್ ನನಗೆ ನಮಕ್ ಹರಾಮ್ ಅಂತ ಹೇಳಿದ್ದಾನೆ.ನಿಮ್ಮ ಕೊಳಕು ಭಾಷಣ, ಅಯೋಗ್ಯತನದ ಪ್ರತೀಕ

ಮುಂಬೈ: ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಮತ್ತು ಬಾಲಿವುಡ್ ನಟಿ ಕಂಗನಾ ರಣಾವತ್ ನಡುವಿನ ವಾಕ್ಸಮರ ಮತ್ತೆ ಮುನ್ನಲೆಗೆ ಬಂದಿದೆ. ಭಾನುವಾರ ದಸರಾ ಸಮಾವೇಶದಲ್ಲಿ ಸಿಎಂ ನೀಡಿದ ಹೇಳಿಕೆಯನ್ನ ಖಂಡಿಸಿರುವ ಮಣಿಕರ್ಣಿಕಾ ಸಾಲು ಸಾಲು ಟ್ವೀಟ್ ಗಳ ಮೂಲಕ ತಿರುಗೇಟು ನೀಡಿದ್ದಾರೆ. ಸಂಜಯ್ ರಾವತ್ ನನ್ನನ್ನು ಹರಾಮ್‍ಕೋರ್ ಅಂದ, ಉದ್ಧವ್ ನನಗೆ ನಮಕ್ ಹರಾಮ್ ಅಂತ ಹೇಳಿದ್ದಾನೆ. ಮುಂಬೈನಲ್ಲಿ ನನಗೆ ಆಶ್ರಯ ಸಿಗದಿದ್ರೆ ನನಗೆ ಊಟವೇ ಸಿಗುತ್ತಿರಲಿಲ್ಲ ಅಂತಾ ಹೇಳ್ತಿದ್ದಾರೆ. …

Read More »

ನಿಮ್ಮ ಆಡಳಿತವು ರೈತರಿಗೆ ಟಿಪ್ಪು ಆಡಳಿತದಂತಿತ್ತು ಎಂದು ರಾಜ್ಯ ಬಿಜೆಪಿ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದೆ.

      ಬೆಂಗಳೂರು : ನಿಮ್ಮ ಆಡಳಿತವು ರೈತರಿಗೆ ಟಿಪ್ಪು ಆಡಳಿತದಂತಿತ್ತು ಎಂದು ರಾಜ್ಯ ಬಿಜೆಪಿ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದೆ. ಸರಣಿ ಟ್ವೀಟ್ ಮೂಲಕ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ, ಸಿದ್ದರಾಮಯ್ಯನವರೇ ನಿಮ್ಮ ಆಡಳಿತವು ರೈತರಿಗೆ ಟಿಪ್ಪು ಆಡಳಿತದಂತಿತ್ತು. ರೈತರ ಪಾಲಿಗೆ ಮರಣಕೂಪದಂತಿದ್ದ ನಿಮ್ಮ ಅವಧಿಯಲ್ಲಿ 3000 ಕ್ಕೂ ಅಧಿಕ ರೈತರು ಆತ್ಮಹತ್ಯೆ ಮಾಡಿಕೊಂಡದ್ದು ದುರ್ದೈವ. ಅನ್ನದಾತರು ಸಾವಿಗೆ ಶರಣಾಗುತ್ತಿದ್ದರೆ ನೀವು ಮಾತ್ರ …

Read More »