ಮೂಡಲಗಿ: ಬಹುನಿರಕ್ಷಿತ ಕುತುಹಲಕ್ಕೆ ಕಾರಣವಾಗಿದ ಸ್ಥಳೀಯ ಪುರಸಭೆ ಅಧ್ಯಕ್ಷ-ಉಪಾಧ್ಯಕ್ಷ, ಹಣಮಂತ ಗುಡ್ಲಮನಿ ಹಾಗೂ ರೇಣುಖಾ ಹಾದಿಮನಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಡಿ.ಜೆ. ಮಹಾತ್ ಪ್ರಕಟಣೆಯಲ್ಲಿ ತಿಳಿಸಿದರು. ಶುಕ್ರವಾರ ಪಟ್ಟಣದ ಪುರಸಭೆಯ ಸಭಾಂಗಣದಲ್ಲಿ ಜರುಗಿದ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳ ಆಯ್ಕೆ ಕುರಿತು ಚುನಾವಣಾ ಪ್ರಕೀಯೇಗಳು ಜರುಗಿದವು. ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ತಲಾ ಒಂದರಂತೆ ಚುನಾವಣಾ ನಾಮಪತ್ರ ಸಲ್ಲಿಕೆಯಾಗಿದ್ದರಿಂದ ಅವಿರೋಧವಾಗಿ ಎರಡು ಸ್ಥಾನಗಳಿಗೆ ಚುನಾವಣಾ ಆಯ್ಕೆ ಪ್ರಕೀಯೇ ಜರುಗಿತು. ನೂತನ …
Read More »ನಾನೇನು ಬಂಡೆ, ಕನಕಪುರ ಬಂಡೆ ಅಂತ ಹೆಸರು ಇಟ್ಕೊಂಡಿಲ್ಲ. ಬಂಡೆ ಎಂಬುದು ಪ್ರಕೃತಿ. ಅದನ್ನು ಕಡೆದರೆ ಆಕೃತಿ, ಪೂಜಿಸುವುದು ಸಂಸ್ಕೃತಿ ಎಂದು ಬಿಜೆಪಿ ನಾಯಕರಿಗೆ ತಿರುಗೇಟು
ಬೆಂಗಳೂರು: ಬಿಜೆಪಿ ಅಧ್ಯಕ್ಷರು ಯಾರೋ ಬಂಡೆಯನ್ನ ಡೈನಾಮಿಟ್ ಇಟ್ಟು ಪುಡಿ ಪುಡಿ ಮಾಡುತ್ತೇನೆ ಎಂದಿದ್ದಾರೆ. ನಾನೇನು ಬಂಡೆ, ಕನಕಪುರ ಬಂಡೆ ಅಂತ ಹೆಸರು ಇಟ್ಕೊಂಡಿಲ್ಲ. ಬಂಡೆ ಎಂಬುದು ಪ್ರಕೃತಿ. ಅದನ್ನು ಕಡೆದರೆ ಆಕೃತಿ, ಪೂಜಿಸುವುದು ಸಂಸ್ಕೃತಿ ಎಂದು ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನ್ನ ಬಗ್ಗೆ ಮಾತನಾಡಿದರೆ, ಬಿಜೆಪಿ ನಾಕರುಗೆ ಪ್ರಮೋಷನ್ ಸಿಗುತ್ತದೆ ಎನ್ನಿಸುತ್ತದೆ. ಅದಕ್ಕಾಗಿ ಚುನಾವಣಾ ಸಮಯದಲ್ಲಿ ಅಶ್ವತ್ಥ ನಾರಾಯಣ್ ಸಾಹೇಬ್ರು, ಅಶೋಕಣ್ಣ ಮತ್ತು …
Read More »ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ಶಿಫಾರಸ್ಸಿನಂತೆ ವಾಲ್ಮೀಕಿ ಸಮುದಾಯಕ್ಕೆ ಸರ್ಕಾರಿ ಉದ್ಯೋಗ ಮತ್ತು ಶಿಕ್ಷಣದಲ್ಲಿ ಶೇ.7.5ರಷ್ಟು ಮೀಸಲಾತಿ ಹೆಚ್ಚಿಸಿ ಸರ್ಕಾರ ಅಸೂಚನೆ ಹೊರಡಿಸಲೇಬೇಕು. ಡಿಸೆಂಬರ್ 10ರೊಳಗೆ ನಮ್ಮ ಬೇಡಿಕೆ ಈಡೇರದಿದ್ದರೆ ವಾಲ್ಮೀಕಿ ಸಮುದಾಯದ ಸಚಿವರು ಮತ್ತು ಶಾಸಕರು ಹಾಲಿಯಿಂದ ಮಾಜಿಯಾಗಲು ಸಿದ್ದರಿದ್ದಾರೆ ಎಂದು ಸರ್ಕಾರಕ್ಕೆ ಎಚ್ಚರಿಕೆ ಸಂದೇಶ ರವಾನಿಸಿದರು.
ಬೆಂಗಳೂರು,ಅ.23- ಸರ್ಕಾರಿ ಉದ್ಯೋಗ ಹಾಗೂ ಶಿಕ್ಷಣದಲ್ಲಿ ವಾಲ್ಮೀಕಿ ಸಮುದಾಯಕ್ಕೆ ಶೇ.7.5ರಷ್ಟು ಮೀಸಲಾತಿ ಹೆಚ್ಚಿಸಿ ಡಿಸೆಂಬರ್ 10ರೊಳಗೆ ರಾಜ್ಯ ಸರ್ಕಾರ ಅಕೃತವಾಗಿ ಆದೇಶ ಹೊರಡಿಸದಿದ್ದರೆ ಸಮುದಾಯದ ಸಚಿವರು ಮತ್ತು ಶಾಸಕರು ರಾಜೀನಾಮೆ ನೀಡಲು ಹಿಂದೆಮುಂದೆ ನೋಡುವುದಿಲ್ಲ ಎಂದು ವಾಲ್ಮೀಕಿ ಸಮುದಾಯದ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ ಸರ್ಕಾರಕ್ಕೆ ಎಚ್ಚರಿಸಿದ್ದಾರೆ .ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ಶಿಫಾರಸ್ಸಿನಂತೆ ವಾಲ್ಮೀಕಿ ಸಮುದಾಯಕ್ಕೆ ಸರ್ಕಾರಿ ಉದ್ಯೋಗ ಮತ್ತು ಶಿಕ್ಷಣದಲ್ಲಿ ಶೇ.7.5ರಷ್ಟು ಮೀಸಲಾತಿ ಹೆಚ್ಚಿಸಿ ಸರ್ಕಾರ ಅಸೂಚನೆ …
Read More »ಡಿಕೆಶಿಯವ್ರಿಗೆ ನಾನು ಸರಿಸಾಟಿ ಆಗಲು ಸಾಧ್ಯವಿಲ್ಲ. ಡಿಕೆಶಿ ಎಂಥ ದೊಡ್ಡವರು, ಅವರ ಮುಂದೆ ನಾನು ಸಣ್ಣವನು”:ಮುನಿರತ್ನ ತಿರುಗೇಟು
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಸರಿಸಮನಾಗಲು ನನಗೆ ಸಾಧ್ಯವೇ ಇಲ್ಲ. ಇದೊಂದು ಜನ್ಮದಲ್ಲಿ ಮಾತ್ರ ಅಲ್ಲ, ಏಳೇಳು ಜನ್ಮದಲ್ಲೂ ಡಿಕೆಶಿಯವ್ರಿಗೆ ನಾನು ಸರಿಸಾಟಿ ಆಗಲು ಸಾಧ್ಯವಿಲ್ಲ ಎಂದು ಆರ್ಆರ್ ನಗರ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ಮುನಿರತ್ನ ತಿರುಗೇಟು ನೀಡಿದ್ದಾರೆ. ಇಂದು ಜಾಲಹಳ್ಳಿ ವಾರ್ಡ್ ನಲ್ಲಿ ಸ್ಕೂಟರ್ ನಲ್ಲಿ ಓಡಾಡ್ಕೊಂಡೇ ಮನೆ ಮನೆ ಪ್ರಚಾರ ಮಾಡುತ್ತಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಯುದ್ಧದಲ್ಲಿ ಎದುರಾಳಿ ಸರಿಸಮ ಇದ್ರೆ ಹೊರಾಡಬಹುದೆಂದು ಮುನಿರತ್ನ …
Read More »ದಿಗ್ಗಜ ಆಟಗಾರ ಕಪಿಲ್ ದೇವ್ ಅವರಿಗೆ ಹೃದಯಘಾತಆಸ್ಪತ್ರೆಗೆ ದಾಖಲು
ನವದೆಹಲಿ: ಟೀ ಇಂಡಿಯಾ ಚೊಚ್ಚಲ ವಿಶ್ವಕಪ್ ವಿಜೇತ ತಂಡದ ನಾಯಕರಾಗಿದ್ದ, ದಿಗ್ಗಜ ಆಟಗಾರ ಕಪಿಲ್ ದೇವ್ ಅವರಿಗೆ ಹೃದಯಘಾತವಾಗಿತ್ತು. ದೆಹಲಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಮಾಹಿತಿ ಲಭಿಸಿದೆ. 61 ವರ್ಷದ ಕಪಿಲ್ ದೇವ್ ಅವರಿಗೆ ಸದ್ಯ ಆಂಜಿಯೋ ಪ್ಲಾಸ್ಟಿ ಚಿಕಿತ್ಸೆ ನೀಡಲಾಗುತ್ತಿದೆ, ಕಪಿಲ್ ದೇವ್ ಅವರಿಗೆ ಹೃದಯಾಘಾತವಾಗಿರುವ ವಿಚಾರವನ್ನು ಖ್ಯಾತ ಪತ್ರಕರ್ತೆ ಟೀನಾ ಠಾಕೂರ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ. 2020ರ ಐಪಿಎಲ್ ಟೂರ್ನಿಯ …
Read More »ಕೆಜಿಎಫ್-2, ಯಶ್ ಅಭಿಮಾನಿಗಳ ಬೇಡಿಕೆಯೊಂದು ಟ್ವಿಟ್ಟರ್ ನಲ್ಲಿ ಭಾರೀ ಟ್ರೆಂಡ್ ಆಗಿದೆ.
ಬೆಂಗಳೂರು: ಕೆಜಿಎಫ್-2, ಯಶ್ ಅಭಿಮಾನಿಗಳು ಮಾತ್ರವಲ್ಲದೆ ಪ್ರತಿಯೊಬ್ಬ ಸಿನಿಮಾ ಅಭಿಮಾನಿಯೂ ಬಹುನೀರಿಕ್ಷೆಯಿಂದ ಕಾಯುತ್ತಿರುವ ಸಿನಿಮಾವಾಗಿದೆ. ಸದ್ಯ ಅಭಿಮಾನಿಗಳ ಬೇಡಿಕೆಯೊಂದು ಟ್ವಿಟ್ಟರ್ ನಲ್ಲಿ ಭಾರೀ ಟ್ರೆಂಡ್ ಆಗಿದೆ. ಹೌದು. ಕೆಜಿಎಫ್-2 ಸಿನಿಮಾದ ಟೀಸರ್ ಬಿಡುಗಡೆ ಮಾಡುವಂತೆ ಟ್ವಿಟ್ಟರ್ ಮೂಲಕವಾಗಿ ಅಭಿಮಾನಿಗಳು ಸಿನಿಮಾ ತಂಡದ ಮುಂದೆ ಬೇಡಿಕೆ ಇಡುತ್ತಿದ್ದಾರೆ. ‘ವೀನೀಡ್ ಕೆಜಿಎಫ್2 ಟೀಸರ್’ ಹ್ಯಾಶ್ಟ್ಯಾಗ್ನೊಂದಿಗೆ ಟ್ವೀಟ್ ನ ಸುರಿಮಳೆ ಗೈದಿದ್ದಾರೆ. ಬೆಳಗ್ಗಿನಿಂದಲೇ ಈ ವಿಚಾರ ಟ್ವಿಟರ್ನಲ್ಲಿ ಟ್ರೆಂಡಿಂಗ್ ಆಗಿದೆ. ಚಾಪ್ಟರ್-2 ಅಕ್ಟೋಬರ್ 23 …
Read More »ಪದವಿ ಕಾಲೇಜು ಆರಂಭಕ್ಕೆ ದಿನಾಂಕ ಫಿಕ್ಸ್ ಮಾಡಲಾಗಿದೆ. ಆದರೆ ಪಿಯು ಕಾಲೇಜು ಸದ್ಯಕ್ಕೆ ಆರಂಭ ಇಲ್ಲ
ಬೆಂಗಳೂರು: ಕೊರೊನಾ ವೈರಸ್ ಭೀತಿಯಿಂದ ಬಂದ್ ಮಾಡಲಾಗಿದ್ದ ಪದವಿ ಕಾಲೇಜು ಆರಂಭಕ್ಕೆ ದಿನಾಂಕ ಫಿಕ್ಸ್ ಮಾಡಲಾಗಿದೆ. ಆದರೆ ಪಿಯು ಕಾಲೇಜು ಸದ್ಯಕ್ಕೆ ಆರಂಭ ಇಲ್ಲ ಎಂದು ಹೇಳಲಾಗುತ್ತಿದೆ. ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಸಿಎಂ ನೇತೃತ್ವದಲ್ಲಿ ಸಭೆ ನಡೆದಿದ್ದು, ಈ ಸಭೆಯಲ್ಲಿ ನವೆಂಬರ್ 17ರಿಂದ ಎಲ್ಲಾ ಪದವಿ ಕಾಲೇಜುಗಳನ್ನು ಆರಂಭ ಮಾಡುವಂತೆ ತೀರ್ಮಾನಿಸಲಾಯಿತು. ಆದರೆ ಸಭೆಯಲ್ಲಿ ಪಿಯು ಕಾಲೇಜು ಆರಂಭದ ಬಗ್ಗೆ ಚರ್ಚೆಯಾಗಿಲ್ಲ. ಪೋಷಕರ ಅನುಮತಿ ಕಡ್ಡಾಯ, ಯಾರಿಗೂ ಒತ್ತಡ …
Read More »ವೀರರಾಣಿ ಕಿತ್ತೂರು ಚೆನ್ನಮ್ಮ ಜಯಂತೋತ್ಸವ ಆಚರಿಸಿದ ಪ್ರಿಯಾಂಕಾ, ರಾಹುಲ್ ಜಾರಕಿಹೊಳಿ
ಗೋಕಾಕ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಪುತ್ರ ರಾಹುಲ್, ಪುತ್ರಿ ಪ್ರಿಯಾಂಕಾ ಜಾರಕಿಹೊಳಿ ಅವರು ಇಲ್ಲಿನ ಹಿಲ್ ಗಾರ್ಡನ್ ನಲ್ಲಿ ಶುಕ್ರವಾರ ವೀರರಾಣಿ ಕಿತ್ತೂರು ಚೆನ್ನಮ್ಮ ದಿನಾಚರಣೆ ಆಚರಿಸಿದರು. ಕಿತ್ತೂರು ರಾಣಿ ಚನ್ನಮ್ಮ ಭಾವಚಿತ್ರಕ್ಕೆ ರಾಹುಲ್, ಪ್ರಿಯಾಂಕಾ ಅವರು ಪುಷ್ಪ ನಮನ ಸಲ್ಲಿಸಿ ಗೌರವ ಅರ್ಪಿಸಿದರು. ಬ್ರಿಟಿಷರ ವಿರುದ್ದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಧೀರ ಮಹಿಳೆ ರಾಣಿ ಚೆನ್ನಮ್ಮ, ಅವರ ಆದರ್ಶ ಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಇಂದಿನ ಆಧುನಿಕ …
Read More »ಭಾರತದ ಸಹಭಾಗಿಗಳೊಂದಿಗೆ ಭಾಗಿಯಾಗಲಿದ್ದಾರೆ.
ದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮೈಕಲ್ ಆರ್. ಪಾಂಪಿಯೋ ಅಕ್ಟೋಬರ್ 25 ರಿಂದ 30 ರವರೆಗೆ ಭಾರತದ ನವದೆಹಲಿ, ಶ್ರೀಲಂಕಾದ ಕೊಲೊಂಬೊ, ಮಾಲ್ಡೀವ್ಸ್ನ ಮಾಲೆ ಮತ್ತು ಇಂಡೋನೇಷ್ಯಾದ ಜಕಾರ್ತಕ್ಕೆ ಭೇಟಿ ನೀಡಲಿದ್ದಾರೆ. ಕಾರ್ಯದರ್ಶಿ ಪಾಂಪಿಯೋ ಮತ್ತು ಅಮೆರಿಕದ ರಕ್ಷಣಾ ಕಾರ್ಯದರ್ಶಿ ಮಾರ್ಕ್ ಟಿ. ಎಸ್ಪರ್ ನವದೆಹಲಿಯಲ್ಲಿ ನಡೆಯಲಿರುವ ಮೂರನೇ ವಾರ್ಷಿಕ ಅಮೆರಿಕ-ಭಾರತ 2+2 ಸಚಿವರ ಮಟ್ಟದ ಮಾತುಕತೆಯಲ್ಲಿ ಭಾರತದ ಸಹಭಾಗಿಗಳೊಂದಿಗೆ ಭಾಗಿಯಾಗಲಿದ್ದಾರೆ. ಈ ಸಂದರ್ಭದಲ್ಲಿ ಅಮೆರಿಕ- ಭಾರತದ ನಡುವಿನ ಸಮಗ್ರ ಜಾಗತಿಕ …
Read More »ಅನ್ನಭಾಗ್ಯದ ಅಕ್ಕಿ ಚೀಲಗಳು ಚರಂಡಿ ಮತ್ತು ರಸ್ತೆಯಲ್ಲೆಲ್ಲಾ ಸಿದ್ದರಾಮಯ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ.
ಬಾಗಲಕೋಟೆ: ಸಿದ್ದರಾಮಯ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ ಅನ್ನಭಾಗ್ಯದ ಅಕ್ಕಿ ಚೀಲಗಳು ಚರಂಡಿ ಮತ್ತು ರಸ್ತೆಯಲ್ಲೆಲ್ಲಾ ಪತ್ತೆಯಾಗಿರುವ ಘಟನೆ ಜಿಲ್ಲೆಯ ಜಮಖಂಡಿಯ ಜೋಳದ ಬಜಾರ್ನಲ್ಲಿ ನಡೆದಿದೆ. ಅನ್ನಭಾಗ್ಯ ಯೋಜನೆಯ 13 ಅಕ್ಕಿ ಮೂಟೆಗಳು ಜೋಳದ ಬಜಾರ್ನಲ್ಲಿ ಪತ್ತೆಯಾಗಿದೆ. ಹೀಗಾಗಿ, ಅಕ್ಕಿ ಮೂಟೆಗಳ ಕಳ್ಳ ಸಾಗಾಟಕ್ಕೆ ಯತ್ನಿಸಿ ಕೊನೆಗೆ ಅದನ್ನು ಅಲ್ಲೇ ಬಿಟ್ಟುಹೋಗಿರುವ ಶಂಕೆ ವ್ಯಕ್ತವಾಗಿದೆ. ಇನ್ನು ಘಟನೆ ಬಳಕಿಗೆ ಬರುತ್ತಿದ್ದಂತೆ ಸ್ಥಳಕ್ಕೆ ಆಹಾರ ಇಲಾಖೆ ಅಧಿಕಾರಿಗಳು ಭೇಟಿ ಕೊಟ್ಟು …
Read More »
Laxmi News 24×7