Breaking News

ರಾಜ್ಯ

ದಿನಕ್ಕೆ 50 ಕೇಸ್​ನಂತೆ ಟಾರ್ಗೆಟ್: ಸಿಕ್ಕ ಸಿಕ್ಕವರ ಬಳಿ ದಂಡ ವಸೂಲಿ, ಪೊಲೀಸರ ನಡೆಗೆ ಸ್ಥಳೀಯರ ಕಿಡಿ

ನೆಲಮಂಗಲ: ಕೊರೊನಾ ಸೋಂಕು ಹರಡದಂತೆ ತಡೆಯಲು ಮಾಸ್ಕ್ ಧರಿಸದವರಿಂದ ದಂಡ ವಸೂಲಿ ಮಾಡಲು ಸರ್ಕಾರ ನಿರ್ಧರಿಸಿದ್ದು ನಗರ ಪ್ರದೇಶಗಳಲ್ಲಿ 250 ರುಪಾಯಿ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ 100 ರುಪಾಯಿ ದಂಡ ವಸೂಲಿ ಮಾಡಲು ಪೊಲೀಸರಿಗೂ ಸಹ ಸೂಚನೆ ನೀಡಲಾಗಿದೆ. ಆದ್ರೆ ಸೂಚನೆ ನೀಡಿದ ಬೆನ್ನಲ್ಲಿ ಪೊಲೀಸರಿಗೆ ಪ್ರತಿದಿನಕ್ಕೆ 50 ಕೇಸ್ ಮಾಡುವಂತೆ ಟಾರ್ಗೆಟ್ ಸಹ ನೀಡಲಾಗಿದೆ.     ಸರ್ಕಾರದ ದಂಡಕ್ಕೆ ಜನ ಭಯಭೀತರಾಗಿದ್ದು, ಮಾಸ್ಕ್ ಹಾಕಿಕೊಂಡು ಓಡಾಡುವವರ ಸಂಖ್ಯೆ …

Read More »

ಕಲಬುರಗಿ ಮಹಾಮಳೆ: ಪ್ರವಾಹದಲ್ಲಿ ಸಿಲುಕಿದ್ದ 6 ಶಾಲಾ ಸಿಬ್ಬಂದಿ ರಕ್ಷಣೆ..

ಕಲಬುರಗಿ: ಜಿಲ್ಲೆಯಲ್ಲಿ ಭಾರಿ ಮಳೆ ಸುರಿಯುತ್ತಿದೆ. ಇದರಿಂದ ಜನಜೀವನ ಕಷ್ಟ ಪಡುತ್ತಿದೆ. ಪ್ರವಾಹಕ್ಕೆ ಸಿಲುಕಿ ನರಳುತ್ತಿದೆ. ಕಾಗಿಣಾ ನದಿ ಪ್ರವಾಹದಲ್ಲಿ ಸಿಲುಕಿದ್ದ ಶಾಲೆ ಸಿಬ್ಬಂದಿಯನ್ನು ಯಶಸ್ವಿಯಾಗಿ ರಕ್ಷಣೆ ಮಾಡಲಾಗಿದೆ. ಸೇಡಂ ತಾಲೂಕಿನ ಮಳಖೇಡ್ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 6 ಜನ ಸಿಬ್ಬಂದಿ ಸಿಲುಕಿದ್ದರು. ಅವರನ್ನು NDRF ತಂಡ ರಕ್ಷಿಸಿದೆ. ನಿನ್ನೆ ಬೆಳಗ್ಗೆ ಶಾಲೆಗೆ ಕಾಗಿಣಾ ನದಿಯ ನೀರು ನುಗ್ಗಿ ಸಿಬ್ಬಂದಿ ಪ್ರವಾಹದಲ್ಲಿ ಸಿಲುಕಿ ಪರದಾಡುತ್ತಿದ್ದರು. ವಸತಿ ಶಾಲೆಯಿಂದ …

Read More »

ವೀರಮದಕರಿ ನಾಯಕನ ಪ್ರತಿಮೆಯನ್ನು ಸ್ಥಾಪನೆ ಮಾಡಬೇಕು:ಪ್ರಸನ್ನಾನಂದ ಸ್ವಾಮೀಜಿ

ಕಣಬರಗಿ : ಬೆಳಗಾವಿ ಆರ್.ಪಿ.ಡಿ ವೃತ್ತದಲ್ಲಿ ವೀರಮದಕರಿ ನಾಯಕನ ಪ್ರತಿಮೆಯನ್ನು ಸ್ಥಾಪನೆ ಮಾಡಬೇಕು ಎಂದು ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ ಸರ್ಕಾರ ಹಾಗೂ ಜಿಲ್ಲಾಡಳಿತಕ್ಕೆ ಆಗ್ರಹಿಸಿದ್ದಾರೆ. ಕಣಬರಗಿಯ ವಾಲ್ಮೀಕಿ    ನೌಕರರ ಭವನದಲ್ಲಿ ಇಂದು ಮಾತನಾಡಿದ ಅವರು, ದಕ್ಷಿಣ ಭಾರತದಲ್ಲಿ ಮೋಘಲರ ದಾಳಿಯನ್ನು ಸಮರ್ಥವಾಗಿ ನಿಭಾಯಿಸಿದ  ಮಹಾನ್ ನಾಯಕ ವೀರಮದಕರಿ. ಅಂತಹ ದಿಮಂತ ನಾಯಕನ ಪ್ರತಿಮೆ ಸ್ಥಾಪನೆ ಮಾಡಬೇಕಾಗಿದೆ ಎಂದರು. ಬೆಳಗಾವಿ ನಗರದಲ್ಲಿ ಈಗಾಗಲೇ ಪ್ರತಿಮೆ ಸ್ಥಾಪನೆಗೆ ಒತ್ತಾಯಿಸಿ ಕರ್ನಾಟಕ …

Read More »

ಕೊರೊನಾ ಸೋಂಕಿನಿಂದ  ಮೃತಪಟ್ಟ ಸಾರಿಗೆ ಇಲಾಖೆ ಸಿಬ್ಬಂದಿ ಕುಟುಂಬಕ್ಕೆ ತಲಾ 30 ಲಕ್ಷ ರೂಪಾಯಿ ಪರಿಹಾರ:ಲಕ್ಷ್ಮಣ ಸವದಿ

ಬೆಳಗಾವಿ : ಕೊರೊನಾ ಸೋಂಕಿನಿಂದ  ಮೃತಪಟ್ಟ ಸಾರಿಗೆ ಇಲಾಖೆ ಸಿಬ್ಬಂದಿ ಕುಟುಂಬಕ್ಕೆ ತಲಾ 30 ಲಕ್ಷ ರೂಪಾಯಿ ಪರಿಹಾರ ನೀಡಲಾಗುತ್ತದೆ ಎಂದು ಸಾರಿಗೆ ಸಚಿವ, ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಇಂದು ಮಾತನಾಡಿದ ಅವರು, ಕೊರೊನಾದಿಂದ ಸಾರಿಗೆ ಇಲಾಖೆ ಮೂರು ಸಾವಿರ ಕೋಟಿಗೂ ಅಧಿಕ ನಷ್ಟ ಅನುಭವಿಸುತ್ತಿದೆ. ಇದರಿಂದ ಸಾರಿಗೆ ಇಲಾಖೆಯ ಸಿಬ್ಬಂದಿಯ ವೇತನ ವಿಳಂಬವಾಗುತ್ತಿದೆ.  ಸದ್ಯ ಸಾರಿಗೆ ಇಲಾಖೆಯಲ್ಲಿ 1 ಲಕ್ಷ 30 ಸಾವಿರ ಸಿಬ್ಬಂದಿ …

Read More »

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಣಕ್ಕಿಳಿಯುತ್ತಾರಾ ಕೆ.ಎಚ್ ಮುನಿಯಪ್ಪ?

ಕೋಲಾರ: ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ರಾಜ್ಯ ರಾಜಕಾರಣದತ್ತ ಗಮನ ಹರಿಸುವಂತೆ ಕೆಪಿಸಿಸಿ ಅಧ್ಯಕ್ಷರು ಮತ್ತು ವಿರೋಧ ಪಕ್ಷದ ನಾಯಕರು ಅಭಿಮತ ವ್ಯಕ್ತಪಡಿಸಿದ್ದಾರೆ ಎಂದು ಮಾಜಿ ಸಂಸದ ಕೆ.ಎಚ್ ಮುನಿಯಪ್ಪ ಹೇಳಿದ್ರು. ಕೋಲಾರದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಮೇಶ್ ಬಾಬು ಜೊತೆಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ರಾಜಕಾರಣಕ್ಕೆ ಬರುವ ಬಗ್ಗೆ ಇನ್ನೂ ನಿರ್ಧಾರ ಮಾಡಿಲ್ಲವೆಂದು ಸ್ಪಷ್ಟಪಡಿಸಿದ್ರು. ಇತ್ತೀಚೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ …

Read More »

ಕೊರೊನಾ ನಡುವೆ ದೀಪಾವಳಿ ಹಬ್ಬ ಆಚರಿಸಲು ರಾಜ್ಯ ಸರ್ಕಾರ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ.

ಬೆಂಗಳೂರು: ಕೊರೊನಾ ನಡುವೆ ದೀಪಾವಳಿ ಹಬ್ಬ ಆಚರಿಸಲು ರಾಜ್ಯ ಸರ್ಕಾರ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಈ ವರ್ಷದ ದೀಪಾವಳಿ ಹಬ್ಬಕ್ಕೆ ಕೊರೊನಾ ಕಾರ್ಮೋಡ ಕವಿದಿದೆ. ರಾಜ್ಯದಲ್ಲಿ ಕೊರೊನಾ ಅಬ್ಬರದ ನಡುವೆ ಸರಳವಾಗಿ ಹಬ್ಬ ಮಾಡಲು ರಾಜ್ಯ ಸರ್ಕಾರ 10 ನಿಯಮಗಳಿರುವ ಒಂದು ಮಾರ್ಗಸೂಚಿಯನ್ನು ಹೊರಡಿಸಿದೆ. 10 ನಿಯಮಗಳು 1. ಸಂಬಂಧಪಟ್ಟ ಇಲಾಖೆ, ಪ್ರಾಧಿಕಾರಗಳಿಂದ ಅಧಿಕೃತ ಪರವಾನಗಿಯನ್ನು ಪಡೆದ ಮಾರಾಟಗಾರರು ಮಾತ್ರ ಪಟಾಕಿಯನ್ನು ಮಾರಾಟ ಮಾಡತಕ್ಕದ್ದು. 2. ಪಟಾಕಿ ಮಾರಾಟದ ಮಳಿಗೆಗಳನ್ನು …

Read More »

ಬಿಜೆಪಿ,ಕಾಂಗ್ರೆಸ್ ವೈಫಲ್ಯಗಳೇ ನಮ್ಮ ಚುನಾವಣೆ ಅಸ್ತ್ರ : HDK

ಬೆಂಗಳೂರು, ಅ.14- ನಮ್ಮ ಪಕ್ಷ ಅಕಾರದಲ್ಲಿದ್ದಾಗ ಮಾಡಿರುವ ಸಾಧನೆಗಳು, ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್ ವೈಫಲ್ಯಗಳನ್ನು ಜನರ ಮುಂದಿಟ್ಟು ಚುನಾವಣೆ ಎದುರಿಸುವುದಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯಾಗಿ ವಿ.ಕೃಷ್ಣಮೂರ್ತಿ ನಾಮಪತ್ರ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಕ್ಷೇತ್ರದಲ್ಲಿ ನಿಷ್ಠಾವಂತ ಕಾರ್ಯಕರ್ತರಿಗೆ ಟಿಕೆಟ್ ನೀಡಿದ್ದೇವೆ ಎಂದರು. ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿ ಸರ್ಕಾರವಿದ್ದರೂ ಜನರು ಮಳೆಯಿಂದ ಮನೆ-ಮಠ ಕಳೆದುಕೊಂಡಿದ್ದಾರೆ. ಅಲ್ಲದೆ …

Read More »

ಡಿಜೆಹಳ್ಳಿ ಗಲಭೆ ಪ್ರಕರಣ : ಸಂಪತ್‍ರಾಜ್-ಜಾಕೀರ್ ವಿಚಾರಣೆಗೆ ಮುಂದಾದ ಎನ್‍ಐಎ

ಬೆಂಗಳೂರು,ಅ.14-ಡಿಜೆಹಳ್ಳಿ ಮತ್ತು ಕೆಜಿಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಗಳಲ್ಲಿ ನಡೆದ ಗಲಭೆಗೆ ಸಂಬಂಸಿದಂತೆ ತನಿಖೆ ನಡೆಸುತ್ತಿರುವ ಎನ್‍ಐಎ ಮಾಜಿ ಮೇಯರ್ ಸಂಪತ್‍ರಾಜ್ ಮತ್ತು ಅವರ ಆಪ್ತ, ಬಿಬಿಎಂಪಿ ಮಾಜಿ ಸದಸ್ಯ ಜಾಕೀರ್‍ನ್ನು ವಿಚಾರಣೆಗೊಳಪಡಿಸಲು ತೀರ್ಮಾನಿಸಿದೆ. ಪ್ರಕರಣದ ಹಿನ್ನೆಲೆಯಲ್ಲಿ ಈ ಇಬ್ಬರಿಗೂ ವಿಚಾರಣೆಗೆ ಹಾಜರಾಗು ವಂತೆ ಸದ್ಯದಲ್ಲೇ ಎನ್‍ಐಎ ನೋಟಿಸ್ ನೀಡಲಿದೆ ಎಂದು ತಿಳಿದುಬಂದಿದೆ. ಈಗಾಗಲೇ ಶಾಸಕರಾದ ಜಮೀರ್ ಅಹಮ್ಮದ್ ಖಾನ್ ಮತ್ತು ರಿಜ್ವಾನ್ ಅವರನ್ನು ಎನ್‍ಐಎ ವಿಚಾರಣೆಗೊಳಪಡಿಸಿ ಗಲಭೆಗೆ ಸಂಬಂಸಿದಂತೆ ಹಲವು …

Read More »

ಶ್ರೀರಾಮುಲು ಅವರೇ ಖುದ್ದು ಯಡಿಯೂರಪ್ಪನವರ ಮುಂದೆಯೇ ತಮ್ಮ ಅಸಮಾನಧವನ್ನು ಹೊರಹಾಕಿದರು

ಬೆಂಗಳೂರು: ಸಚಿವ ಶ್ರೀರಾಮುಲು ಅವರಿಗೆ ಆರೋಗ್ಯ ಖಾತೆ ಕಿತ್ತುಕೊಂಡು ಸಮಾಜ ಕಲ್ಯಾಣ ಖಾತೆ ನೀಡಲಾಗಿದೆ. ಇದರಿಂದ ಅಸಮಾಧಾನಗೊಂಡಿರುವ ಶ್ರೀರಾಮುಲು ಅವರನ್ನು ಸಿಎಂ ಬಿಎಸ್ ಯಡಿಯೂರಪ್ಪ ಮಾತುಕತೆ ಮೂಲಕ ಬಗೆಹರಿಸಿದ್ದಾರೆ. ಆದ್ರೆ, ಶ್ರೀರಾಮುಲು ಅಸಮಾಧಾನ ಶಮನವಾಗಿಲ್ಲ. ತಮಗೆ ಒಂದು ಮಾತು ತಿಳಿಸದೇ ಏಕಾಏಕಿ ಖಾತೆ ಬದಲಾವಣೆ ಮಾಡಿರುವುದಕ್ಕೆ ಶ್ರೀರಾಮುಲು, ಯಡಿಯೂರಪ್ಪನವರ ಮುಂದೆಯೇ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂದು ಸಿಎಂ ಕಚೇರಿ ಮೂಲಗಳು ತಿಳಿಸಿವೆ. ಮಂಗಳವಾರ ಶ್ರೀರಾಮುಲು ಅವರೇ ಖುದ್ದು ಯಡಿಯೂರಪ್ಪನವರ ಮುಂದೆಯೇ ತಮ್ಮ …

Read More »

ನಂದಿ ಗಿರಿಧಾಮ ತೋಟಗಾರಿಕಾ ಇಲಾಖೆಯ ಕೈಜಾರುತ್ತದಾ? ಮುಂದೇನು?

ಚಿಕ್ಕಬಳ್ಳಾಪುರ ತಾಲೂಕಿನ ವಿಶ್ವವಿಖ್ಯಾತ ನಂದಿ ಗಿರಿಧಾಮದಲ್ಲಿ ಕುಟುಂಬ ಸಮೇತ ವಾಸ್ತ್ಯವ್ಯ ಹೂಡಿದ್ದ ತೋಟಗಾರಿಕೆ ಸಚಿವ ನಾರಾಯಣ ಗೌಡ, ನಂದಿ ಗಿರಿಧಾಮದ ಪ್ರಕೃತಿ ಸೌಂದರ್ಯಕ್ಕೆ ಮರುಳಾದ್ರು. ನಂದಿ ಗಿರಿಧಾಮದ ಪ್ರಕೃತಿ ಸೌಂದರ್ಯಕ್ಕೆ ಮರುಳಾದ ಸಚಿವ ನಾರಾಯಣ ಗೌಡ ರಾತ್ರಿಯೇ ನಂದಿ ಗಿರಿಧಾಮದಲ್ಲಿ ಕುಟುಂಬ ಸಮೇತ ವಾಸ್ತವ್ಯ ಹೂಡಿದ್ದ ಸಚಿವರು, ಬೆಳ್ಳಂ‌ಬೆಳಿಗ್ಗೆ ಎದ್ದು ನಂದಿ ಗಿರಿಧಾಮದ ರಸ್ತೆಗಳಲ್ಲಿ ರೌಂಡ್ಸ್ ಹಾಕಿದರು. ಇದೇ ಮೊದಲ‌ ಬಾರಿಗೆ ನಾನು ಸಚಿವನಾದ ನಂತರ ನಂದಿ ಗಿರಿಧಾಮಕ್ಕೆ ಆಗಮಿಸಿದ್ದೇನೆ. …

Read More »