Breaking News

ರಾಜ್ಯ

ಕಟೀಲ್ ರಾಜ್ಯ ಬಿಜೆಪಿಯ ಕಾಮಿಡಿ ಆ್ಯಕ್ಟರ್: ಕಾಂಗ್ರೆಸ್ ಟ್ವೀಟ್

ಬೆಂಗಳೂರು: ಸಂಸದ ನಳಿನ್ ಕುಮಾರ್ ಕಟೀಲ್ ಅವರನ್ನು ರಾಜ್ಯ ಬಿಜೆಪಿಯ ಕಾಮಿಡಿ ಆ್ಯಕ್ಟರ್ ಎಂದು ವ್ಯಂಗ್ಯವಾಡಿ ಕಾಂಗ್ರೆಸ್ ಟ್ವೀಟ್ ಮಾಡಿತ್ತು. ಕಾಂಗ್ರೆಸ್ ಟ್ವೀಟ್‍ಗೆ ತಿರುಗೇಟು ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಕಾಮಿಡಿ ಮಾಡುವ ವ್ಯಕ್ತಿ ಯಾರು ಮತ್ತು ಕಾಮಿಡಿಯಾದ ಪಕ್ಷ ಯಾವುದು ಎಂದು ದೇಶದ ಜನತೆಗೆ ಗೊತ್ತು ಎಂದು ಟ್ವೀಟ್ ಮಾಡಿದ್ದಾರೆ. ಭೂ ಸುಧಾರಣಾ ಕಾಯ್ದೆ ಮತ್ತು ಎಪಿಎಂಸಿ ಕಾಯ್ದೆ ಬಗ್ಗೆ ಕಾಂಗ್ರೆಸ್ ರಾಜ್ಯದ ರೈತರನ್ನು ದಿಕ್ಕು …

Read More »

ರಸ್ತೆ ಬದಿಯ ಹಳ್ಳಕ್ಕೆ ಕಾರು ಪಲ್ಟಿ – ವಾರಕ್ಕೊಂದು ಗಾಡಿ ಪಲ್ಟಿಯಾದ್ರೂ ಸರ್ಕಾರ ಡೋಂಟ್ ಕೇರ್

ಚಿಕ್ಕಮಗಳೂರು: ರಸ್ತೆ ತಿರುವಿನಲ್ಲಿ ತಡೆಗೋಡೆಗಳಿಲ್ಲದ ಕಾರಣ ಚಾಲಕನ ನಿಯಂತ್ರಣ ತಪ್ಪಿ ಶಿಫ್ಟ್ ಕಾರೊಂದು ರಸ್ತೆ ಬದಿಯ ಹಳ್ಳಕ್ಕೆ ಪಲ್ಟಿಯಾಗಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಜಾವಳಿ ಸಮೀಪದ ಮೂಲೆಮನೆ ಗ್ರಾಮದಲ್ಲಿ ನಡೆದಿದೆ. ಶಿಫ್ಟ್ ಕಾರಿನಲ್ಲಿ ನಾಲ್ವರು ಬೆಂಗಳೂರಿನಿಂದ ಹೊರನಾಡು ಅನ್ನಪೂರ್ಣೇಶ್ವರಿ ದೇವಸ್ಥಾನಕ್ಕೆ ಹೋಗುತ್ತಿದ್ದರು. ಬೆಳಗಿನ ಜಾವ ಸುಮಾರು 4 ಗಂಟೆಗೆ ಮೂಲೆಮನೆ ಗ್ರಾಮದ ಬಳಿ ರಸ್ತೆ ತಿರುವಿನಲ್ಲಿ ಕಾರು ಹಳ್ಳಕ್ಕೆ ಪಲ್ಟಿಯಾಗಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ವಾರಕ್ಕೊಂದು ಅಪಘಾತ: …

Read More »

ರಾಗಿಣಿ, ಸಂಜನಾಗೆ ಬಿಗ್ ಶಾಕ್ – ಮೊಬೈಲ್‍ನಲ್ಲಿ ಸಿಕ್ಕಿದೆ ಸ್ಫೋಟಕ ಸಾಕ್ಷ್ಯ!

ಬೆಂಗಳೂರು: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪರಪ್ಪನ ಅಗ್ರಹಾರ ಸೇರಿರುವ ಮಾದಕ ನಟಿಯರಾದ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಗಲ್ರಾನಿ ಅವರ ಬಿಗ್ ಶಾಕಿಂಗ್ ನ್ಯೂಸ್ ಒಂದು ಇದೀಗ ಹೊರಬಿದ್ದಿದೆ. ಡ್ರಗ್ಸ್ ಕೇಸ್ ಬೆನ್ನು ಹತ್ತಿರೋ ಪೊಲೀಸರಿಗೆ ಸಿನಿಲೋಕದ ಡ್ರಗ್ಸ್ ಕೇಸ್‍ಗೆ ಸ್ಫೋಟಕ ಟ್ವಿಸ್ಟ್ ಸಿಕ್ಕಿದೆ. ನಟಿ ರಾಗಿಣಿ, ಸಂಜನಾ ಮೊಬೈಲ್‍ನಲ್ಲಿ ಸ್ಫೋಟಕ ಸಾಕ್ಷ್ಯ ದೊರೆತಿದೆ. ಅದೇನೆಂದರೆ ಡ್ರಗ್ಸ್ ಕೇಸ್‍ನಲ್ಲಿ ಬಂಧಿತರಾಗಿರುವ ಆರೋಪಿಗಳಿಂದ ಸೆಕ್ಸ್ ದಂಧೆ ನಡೆಯುತ್ತಿರುವ ಶಂಕೆ ವ್ಯಕ್ತವಾಗಿದೆ. …

Read More »

ಬೈಲೂರು ಮಠದ ನಿಜಗುಣಾನಂದ ಸ್ವಾಮೀಜಿಗೆ ಜೀವ ಬೆದರಿಕೆ ಕರೆ

ಬೆಳಗಾವಿ: ಬೈಲೂರು ಮಠದ ನಿಜಗುಣಾನಂದ ಸ್ವಾಮೀಜಿಗೆ ಜೀವ ಬೆದರಿಕೆ ಕರೆ ಬಂದಿದೆ.  ಈ ಬಗ್ಗೆ ಖಾಸಗಿ ಮಾಧ್ಯಮದ ಜೊತೆ ಮಾತನಾಡಿದ ನಿಜಗುಣಾನಂದ ಸ್ವಾಮೀಜಿ ಜನರ ಜಾಗೃತಿ ಮಾಡುತ್ತಿರುವ ಹಿನ್ನೆಲೆಯಲ್ಲಿ ಯಾರೋ ಈ ರೀತಿ ಬೆದರಿಕೆಯೊಡ್ಡುತ್ತಿದ್ದಾರೆ ಅಂತಾ ಹೇಳಿದ್ದಾರೆ. ಯಾರು ಏನು ಎಂಬುದರ ಬಗ್ಗೆ ಯಾವುದೇ ಮಾಹಿತಿ ತಿಳಿಯುತ್ತಿಲ್ಲ. ಸಮಾಜದಲ್ಲಿ ನಿಜ ಹೇಳುವವರೆಗೆ ಈ ರೀತಿ ಸಮಸ್ಯೆ ಆಗುತ್ತದೆ. ಮೊದಲು ಆತ್ಮಸ್ಥೈರ್ಯ ಕುಗ್ಗಿಸಲು ಯತ್ನಿಸುತ್ತಾರೆ. ಕುಗ್ಗದಿದ್ದಾಗ ದೈಹಿಕವಾಗಿ ಕುಗ್ಗಿಸಲು ಯತ್ನಿಸುತ್ತಾರೆ. ಈ …

Read More »

ರಫೇಲ್‌ ಡೀಲ್‌ – ಆಫ್‌ಸೆಟ್‌ ನಿಯಮವನ್ನೇ ಕೈಬಿಟ್ಟ ಸರ್ಕಾರ

ನವದೆಹಲಿ: ರಕ್ಷಣಾ ವ್ಯವಹಾರದ ವೇಳೆ ಈಗ ಇದ್ದ ಆಫ್‌ಸೆಟ್‌ ನಿಯಮವನ್ನೇ ಕೈಬಿಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. 36 ರಫೇಲ್ ಯುದ್ಧ ವಿಮಾನ ಸಂಬಂಧ 59 ಸಾವಿರ ಕೋಟಿ ರೂ. ಒಪ್ಪಂದ ನಡೆದು 5 ವಿಮಾನ ಭಾರತಕ್ಕೆ ಬಂದರೂ ಡಸಾಲ್ಟ್ ಕಂಪನಿ ತನ್ನ ಆಫ್‍ಸೆಟ್ ನಿಯಮ ಪಾಲನೆ ಮಾಡಿಲ್ಲ ಎಂದು ಮಹಾಲೇಖಪಾಲರ(ಸಿಎಜಿ) ವರದಿ ಉಲ್ಲೇಖಿಸಿತ್ತು. ಸಂಸತ್ತಿನಲ್ಲಿ ಸಿಎಜಿ ವರದಿ ಮಂಡನೆಯ ಬೆನ್ನಲ್ಲೇ ಕೇಂದ್ರ ಸರ್ಕಾರ ಈಗ ರಕ್ಷಣಾ ಖರೀದಿ ನಿಯಮಗಳಿಗೆ ಬದಲಾವಣೆ …

Read More »

ಶಿರಾ ಮತ್ತು ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಲಿದೆ:ಶ್ರೀರಾಮುಲು

ಚಿತ್ರದುರ್ಗ: ನಾಡಿನ ಜನರು ಶ್ರೀರಾಮುಲುಗೆ ಒಳ್ಳೆಯದಾಗಬೇಕೆಂದು ಬಯಸುತ್ತಾರೆ. ಏನೇ ಸ್ಥಾನ ಕೊಟ್ಟರು ನಿಭಾಯಿಸುವ ಶಕ್ತಿ ಭಗವಂತ ನನಗೆ ನೀಡಿದ್ದಾನೆ. ಪಕ್ಷ ಯಾವ ತಿರ್ಮಾನ ಕೈಗೊಳ್ಳಲಿದೆ ಕಾದು ನೋಡುತ್ತೇನೆ ಅಂತ ಹೇಳುವ ಮೂಲಕ ಪರೋಕ್ಷವಾಗಿ ತಾವು ಡಿಸಿಎಂ ಸ್ಥಾನದ ಆಕಾಂಕ್ಷಿ ಎಂಬ ಸಂದೇಶದವನ್ನು ಸಚಿವ ಶ್ರೀರಾಮಲು ಪಕ್ಷಕ್ಕೆ ರವಾನಿಸಿದ್ದಾರೆ. ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮುರು ಪಟ್ಟಣದಲ್ಲಿ ವಿವಿಧ ಸರ್ಕಾರಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ಕುರಿತು ಸಿಎಂ ದೆಹಲಿಗೆ …

Read More »

ಅಂಗಡಿ ಕುಟುಂಬ ಹೊರತುಪಡಿಸಿ ಟಿಕೆಟ್ ನೀಡೋದಾದ್ರೆ ಕತ್ತಿಗೆ ನೀಡಿ – ಅಭಿಮಾನಿಗಳ ಆಗ್ರಹ

ಚಿಕ್ಕೋಡಿ(ಬೆಳಗಾವಿ): ಇತ್ತಿಚೆಗೆ ನಿಧನರಾದ ಬೆಳಗಾವಿ ಸಂಸದ ಹಾಗೂ ರಾಜ್ಯ ರೇಲ್ವೆ ಸಚಿವರಾಗಿದ್ದ ದಿ. ಸುರೇಶ್ ಅಂಗಡಿ ನಿಧನದ ಬೆನ್ನಲ್ಲೇ ಬೆಳಗಾವಿಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಈಗಾಗಲೇ ಸುರೇಶ್ ಅಂಗಡಿ ಕುಟುಂಬಕ್ಕೆ ಸಾಂತ್ವನ ಹೇಳಲು ನಳಿನ್ ಕುಮಾರ್ ಭೇಟಿ ನೀಡಿ ಟಿಕೆಟ್ ಸಂಬಂಧಿಸಿದಂತೆ ಅನೌಪಚಾರಿಕ ಸಭೆ ಕೂಡ ನಡೆಸಿದ್ದಾರೆ ಎನ್ನಲಾಗುತ್ತಿದೆ. ಈಗಾಗಲೇ ಮುಂಬರುವ ಉಪ ಚುನಾವಣೆಗೆ ಬಿಜೆಪಿ ಟಿಕೆಟ್ ಗಾಗಿ ಕಮಲ ನಾಯಕರಲ್ಲಿ ಪೈಪೋಟಿ ಶುರುವಾಗಿದ್ದು, ಈ ಪೈಕಿ ಹಲವು ನಾಯಕರು …

Read More »

ಬೆಂಗಳೂರು ಉಗ್ರರ ಕೇಂದ್ರವಾಗಿದೆ’ ಎಂಬ ಬಿಜೆಪಿಯೊಳಗಿನ ಕೆಲ ಅಪ್ರಬುದ್ಧರ ಹೇಳಿಕೆ

ಬೆಂಗಳೂರು, ಸೆ. 29: `ಬೆಂಗಳೂರು ಉಗ್ರರ ಕೇಂದ್ರವಾಗಿದೆ’ ಎಂಬ ಬಿಜೆಪಿಯೊಳಗಿನ ಕೆಲ ಅಪ್ರಬುದ್ಧರ ಹೇಳಿಕೆ ಬೆಂಗಳೂರಿಗೆ ಮಾಡಿದ ಅಪಮಾನ. ಇಂಥ ಹೇಳಿಕೆಯನ್ನು ಸಮರ್ಥಿಸಲಾಗದೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಸಂಕಟ ಅನುಭವಿಸಿದ್ದನ್ನು ನಾನು ಮಾಧ್ಯಮದ ಮೂಲಕ ನೋಡಿದೆ. ಈ ಅಪ್ರಬುದ್ಧ ಹೇಳಿಕೆ ಬಿಜೆಪಿಯ ಹಿರಿಯರಿಗೆ ಮಾಡಿದ ಅಪಮಾನವೂ ಹೌದು’ ಎಂದು ಸಂಸದ ತೇಜಸ್ವಿ ಸೂರ್ಯ ವಿರುದ್ಧ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ …

Read More »

ಜೀವ ಜಲವಿಲ್ಲದೆ ಬೇಸತ್ತ ಸೋಂಕಿತರ ಬಗ್ಗೆ ಯಾಕಿಷ್ಟು ತಾತ್ಸಾರ?

ಬೆಳಗಾವಿ: ಕೊರೊನಾ.. ಆರಂಭದಲ್ಲೇ ಹೊಸ ವರ್ಷದ ಹರುಷವನ್ನೇ ಹಾಳು ಮಾಡಿ ದಾರಿದ್ರ್ಯ ತುಂಬಿದ ಮಹಾಮಾರಿ ಕೊರೊನಾ ದೇಶಕ್ಕೆ ಕಂಟಕವಾಗಿ ಕಾಡುತ್ತಿದೆ. ಜೀವನವನ್ನೇ ನರಕ ಮಾಡಿರುವ ಕೊರೊನಾ ಇನ್ನೂ ಕಡಿಮೆಯಾಗಿಲ್ಲ. ದಿನೇ ದಿನೇ ತನ್ನ ಪ್ರತಾಪ ತೋರಿಸುತ್ತಲೇ ಸಾಗಿದೆ. ಈ ನಡುವೆ ರಾಜ್ಯದಲ್ಲಿ ಕೊರೊನಾ ಸೋಂಕಿಗೆ ಚಿಕಿತ್ಸೆ ನೀಡುವಲ್ಲಿ ವೈದ್ಯರು ಸಹ ಎಡವುತ್ತಿದ್ದಾರೆ. ಜಿಲ್ಲೆಯ ಬಿಮ್ಸ್‌ನಲ್ಲಿ ನೀರಿಗಾಗಿ ಕೊರೊನಾ ಸೋಂಕಿತರು ಪರದಾಡುತ್ತಿರುವಂತ ಪರಿಸ್ಥಿತಿ ಎದುರಾಗಿದೆ. ಕುಡಿಯುವುದಕ್ಕೂ ನೀರಿಲ್ಲ, ಶೌಚಾಲಯಕ್ಕೂ ನೀರಿಲ್ಲ. ಕೊವಿಡ್ ವಾರ್ಡ್‌ನಲ್ಲಿ …

Read More »

IPS ಅಧಿಕಾರಿ ಮಾಡ್ತೀನಿ ಅಂತಾ TV ನಟಿ ಮತ್ತು ಪತಿಯಿಂದ 3.5 ಕೋಟಿ ರೂ ವಂಚನೆ, ಎಲ್ಲಿ?

ಮುಂಬೈ: ಐಪಿಎಸ್ ಅಧಿಕಾರಿಯಾಗಿ ನೇಮಕಗೊಳಿಸುವುದಾಗಿ ಭರವಸೆ ನೀಡಿ 3.5 ಕೋಟಿ ರೂ.ಗೆ ವಂಚನೆ ಮಾಡಿದ್ದ ಟಿವಿ ನಟಿ ಸಪ್ನಾ ರಹಾನ್ (28) ಮತ್ತು ಅವರ ಪತಿ ಪುನೀತ್ ಕುಮಾರ್ ರಹಾನ್ (26) ದಂಪತಿಯನ್ನು ಬಂಧಿಸಲಾಗಿದೆ. ಮುಂಬೈ ಕ್ರೈಂ ಬ್ರ್ಯಾಂಚ್ ಪೊಲೀಸರು ಭಾನುವಾರ ದಂಪತಿಯನ್ನು ಅರೆಸ್ಟ್ ಮಾಡಿದ್ದಾರೆ. ಸಪ್ನಾ ರಹಾನ್ ಟಿವಿ ಕಾರ್ಯಕ್ರಮಗಳನ್ನು ಮಾಡುತ್ತಿದ್ದರು. ಹೀಗಾಗಿ ಅವರಿಗೆ ಅನೇಕ ಪ್ರಭಾವಿಗಳ ಪರಿಚಯವಿರುತ್ತೆ ಎಂದು ವ್ಯಕ್ತಿಯೊಬ್ಬ ಇವರನ್ನು ನಂಬಿದ್ದ. ಈ ನಂಬಿಕೆಯನ್ನೇ ಅದಾಯ ಮಾಡಿಕೊಳ್ಳಲು …

Read More »