Breaking News

ರಾಜ್ಯ

SSLCಯಲ್ಲಿ‌ ಶೇ 60ಕ್ಕಿಂತ ಕಡಿಮೆ ಫಲಿತಾಂಶ ಪಡೆದ ಜಿಲ್ಲೆಗಳ DDPIಗಳಿಗೆ ಸಿಎಂ ಶಾಕ್

ಬೆಂಗಳೂರು, ಮೇ 31: ಈ ವರ್ಷದ ಎಸ್​ಎಸ್​ಎಲ್​​ಸಿ (SSLC) ಪರೀಕ್ಷೆಯಲ್ಲಿ 5 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಸಾಗುವ ಮೂಲಕ ಶೇ.62.34ರಷ್ಟು ಫಲಿತಾಂಶ ಬಂದಿದೆ. ಕಳೆದ ವರ್ಷಕ್ಕಿಂತ ಈ ವರ್ಷ ಫಲಿತಾಂಶ ಕಡಿಮೆ ಬಂದಿದೆ. ಈ ನಿಟ್ಟಿನಲ್ಲಿ ಇಂದು ಶಿಕ್ಷಣ ಇಲಾಖೆ ಪ್ರಗತಿ ಪರಿಶೀಲನೆ ಸಭೆ ಮಾಡಿದ ಸಿಎಂ ಸಿದ್ದರಾಮಯ್ಯ (Siddaramaiah), ಎಸ್​ಎಸ್​ಎಲ್​​ಸಿ ಫಲಿತಾಂಶ ವಿಚಾರವಾಗಿ ಮಹತ್ವದ ಚರ್ಚೆ ಮಾಡಿದ್ದಾರೆ. ಈ ವೇಳೆ ಫಲಿತಾಂಶ ಕಡಿಮೆ ಬರುವುದಕ್ಕೆ ಶಿಕ್ಷಕರ, ಸಿಬ್ಬಂದಿ ಕೊರತೆ ಎಂದು ಇಲ್ಲ ಸಲ್ಲಸ ನೆಪ …

Read More »

ಬೆಳಗಾವಿ ಜಿಲ್ಲೆಯ ಜನಪ್ರಿಯ ಜಿಲ್ಲಾಧಿಕಾರಿ ಸುಧೀರ್ಘ ಅವಧಿ ಸೇವೆ ಸಲ್ಲಿಸಿದ ಎನ್. ಜಯರಾಮ್ ಸರ್ ಇಂದು ಸೇವಾ ನಿವೃತ್ತಿ

ಬಹು ಸಂಸ್ಕೃತಿ ಹಾಗೂ ಗಡಿನಾಡು ಬೆಳಗಾವಿ ಜಿಲ್ಲೆಯ ಜನಪ್ರಿಯ ಜಿಲ್ಲಾಧಿಕಾರಿ ಸುಧೀರ್ಘ ಅವಧಿ ಸೇವೆ ಸಲ್ಲಿಸಿದ ಎನ್. ಜಯರಾಮ್ ಸರ್ ಇಂದು ಸೇವಾ ನಿವೃತ್ತಿ ಹೊಂದಲಿದ್ದಾರೆ. ಯಳ್ಳೂರು ಗ್ರಾಮ ಬೆಳಗಾವಿ ತಾಲೂಕಿನಲ್ಲಿದ್ದರೂ ಹಲವು ದಶಕಗಳಿಂದ ಬಾಹಿರವಾಗಿ ಸ್ಥಾಪಿಸಲಾಗಿದ್ದ ಮರಾಠಿ ನಾಮ ಫಲಕವನ್ನು ತೆರವುಗೊಳಿಸುವ ಸಾಹಸಕ್ಕೆ ಕೈಹಾಕಿ ನಾಡದ್ರೋಹಿಗಳಿಗೆ ತಮ್ಮದೇ ಕಾರ್ಯವೈಖರಿಯ ಮೂಲಕ ಚಾಟಿ ಬಿಸಿದ್ದರು. ಅಲ್ಲದೇ 2013 ಫೆಬ್ರವರಿಯಿಂದ 2017 ವರೆಗೆ ಬೆಳಗಾವಿ ಜಿಲ್ಲೆಯ ಜಿಲ್ಲಾಧಿಕಾರಿ ಸೇವೆ ಸಲ್ಲಿಸಿದ್ದಾರೆ. ತಮ್ಮ …

Read More »

ಮಾತು ಎತ್ತಿದರೆ ದೇಶಾಭಿಮಾನ ಮಾತನಾಡುವ ನಾಯಕರೇ… ಇತ್ತ ಕಡೆ ನೋಡಿ?…

ಮಾತು ಎತ್ತಿದರೆ ದೇಶಾಭಿಮಾನ ಮಾತನಾಡುವ ನಾಯಕರೇ… ಇತ್ತ ಕಡೆ ನೋಡಿ?… ರಾಷ್ಟ್ರಧ್ವಜ ಬಟ್ಟೆ ನೇಯುವ ನೇಕಾರ ಮಹಿಳೆಯರಿಗಿಲ್ಲ ಸಮರ್ಪಕ ಕೂಲಿ…ಗೋಳು ಕೇಳದ ಸರ್ಕಾರ…ಅತಂತ್ರ ಕುಟುಂಬಗಳು… ನಮ್ಮ ದೇಶದ ತ್ರಿವರ್ಣ ಧ್ವಜವನ್ನು ಕಂಡರೇ ಸಾಕು. ಅದರ ಹಿಂದಿನ ತ್ಯಾಗಬಲಿದಾನಗಳು ನೆನಪಾಗಿ, ತನ್ನಿಂದ ತಾನೇ ಗೌರವ ವಂದನೆ ಸಲ್ಲಿಸುತ್ತೇವೆ. ಇಷ್ಟೊಂದು ಅಮೂಲ್ಯವಾದದ್ದು ನಮ್ಮ ರಾಷ್ಟ್ರಧ್ವಜ ಆದರೇ ನೇಯುವ ಕಾರ್ಮಿಕರಿಗೆ ಮಾತ್ರ ಸರಿಯಾದ ಮೂಲ್ಯವಿಲ್ಲವೇನೋ ಎಂಬ ಪ್ರಶ್ನೆ ಮೂಡುತ್ತಿದೆ. ನಮ್ಮ ರಾಷ್ಟ್ರ ಎಲ್ಲದ್ದರಲೂ ಮುಂಚೂಣಿಯಲ್ಲಿದೆ. …

Read More »

ಮತ್ತೋರ್ವ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ

ಎರಡು ದಿನಗಳ ಹಿಂದಷ್ಟೇ ಕೊಡಗು ಜಿಲ್ಲೆಯ ಪೊನ್ನಂಪೇಟೆಯ ಹಳ್ಳಿಗಟ್ಟುವಿನ ಇಂಜಿನಿಯರಿಂಗ್ ವಿದ್ಯಾರ್ಥಿನಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಳು. ಈ ಘಟನೆ ಮಾಸುವ ಮುನ್ನವೇ ಅದೇ ಕಾಲೇಜಿನ ಮತ್ತೋರ್ವ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಯಶ್ವಂತ್ (20) ಆತ್ಮಹತ್ಯೆ ,ಮಾಡಿಕೊಂಡಿರುವ ವಿದ್ಯಾರ್ಥಿ. ಪೊನ್ನಂಪೇಟೆಯ ಹಳ್ಳಿಗಟ್ಟುವಿನ ಸಿಇಟಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಓದುತ್ತಿದ್ದ. ತನ್ನ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಯಶ್ವಂತ್ ಸಾವಿಗೆ ಶರಣಾಗಿದ್ದಾನೆ. ಆತ್ಮಹತ್ಯೆಗೆ ನಿಖರ ಕಾರಣ …

Read More »

ಡಿಡಿಪಿಐ ಗಳು ಜಿಲ್ಲೆಗಳಲ್ಲಿ ಕುಳಿತು ಕೆಲಸ ಮಾಡುವುದಲ್ಲ. ಇಡೀ ಜಿಲ್ಲೆ ಪ್ರಯಾಣ ಮಾಡಬೇಕು.:C.M

ಡಿಸಿಗಳು, ಸಿಇಒಗಳ ಸಭೆ ಮುಂದುವರೆಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಭೆಯ ಆರಂಭದಲ್ಲಿ ಶಾಲಾ ಶಿಕ್ಷಣ ಇಲಾಖೆ ಪ್ರಗತಿ ಪರಿಶೀಲನೆ ನಡೆಸಿದರು. ಈ ವೇಳೆ ಫಲಿತಾಂಶ ಕಡಿಮೆ ಇರುವ ಜಿಲ್ಲೆಗಳಲ್ಲಿ ಡಿಡಿಪಿಐ ಗಳನ್ನೇ ನೇರ ಹೊಣೆ ಮಾಡುವಂತೆ ಸೂಚಿಸಿದರು. SSLC ಯಲ್ಲಿ‌ ಶೇ 60 ಕ್ಕಿಂತ ಕಡಿಮೆ ಫಲಿತಾಂಶ ಪಡೆದಿರುವ ಜಿಲ್ಲೆಗಳ DDPI ಗಳಿಗೆ ನೋಟಿಸ್ ನೀಡಬೇಕು, ನೋಟಿಸ್ ಗೆ ಕೊಟ್ಟ ಉತ್ತರ ಸಮರ್ಪಕ‌ ಅನ್ನಿಸದಿದ್ದರೆ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು …

Read More »

ಗುಟ್ಕಾ, ತಂಬಾಕು ಹಾಕಿ ಎಲ್ಲೆಂದರಲ್ಲಿ ಉಗುಳುವವರು ಸಿಗರೇಟ್ ಸೇದುವವರೇ ಹುಷಾರ್

ಇನ್ಮುಂದೆ ಗುಟ್ಕಾ, ತಂಬಾಕು ಹಾಕಿ ಎಲ್ಲೆಂದರಲ್ಲಿ ಉಗುಳುವವರು, ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟ್ ಸೇದುವವರೇ ಹುಷಾರ್. ರಾಜ್ಯದಲ್ಲಿ ಕಟ್ಟುನಿಟ್ಟಿನ ಕಾಯ್ದೆ ಜಾರಿಯಾಗಿದ್ದು, ನಿಯಮ ಉಲ್ಲಂಘಿಸಿದರೆ ಭಾರಿ ದಂಡ ತೆರಬೇಕಾಗುತ್ತದೆ. ಸರವಜನಿಕ ಸ್ಥಳಗಳಲ್ಲಿ ಸಿಗರೇಟ್ ಸೇದುವುದು, ಗುಟ್ಕಾ, ತಂಬಾಕುಗಳನ್ನು ಹಾಕಿ ಉಗುಳಿದರೆ ಇನ್ಮುಂದೆ 1000 ರೂಪಾಯಿ ದಂಡ ಪಾವತಿಸಬೇಕಾಗುತ್ತದೆ. ಈ ಬಗ್ಗೆ ರಾಜ್ಯ ಸರ್ಕಾರ ಅಧಿಕ್ಋತ ಅಧಿಸೂಚನೆ ಹೊರಡಿಸಿದ್ದು, ಕಾಯ್ದೆ ಜಾರಿಗೆ ತಂದಿದೆ. 21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಗುಟ್ಕಾ, ತಂಬಾಕು ಉತ್ಪನ್ನ, …

Read More »

ನಿವೃತ್ತಿ ಕಾರ್ಯಕ್ರಮದ ಮೂಡನಲ್ಲಿದ್ದ ಧಾರವಾಡ ಪಿಡಬ್ಲುಡಿ ಮುಖ್ಯ ಇಂಜಿನಿಯರಗೆ ಲೋಕಾ ಶಾಕ್

ನಿವೃತ್ತಿ ಕಾರ್ಯಕ್ರಮದ ಮೂಡನಲ್ಲಿದ್ದ ಧಾರವಾಡ ಪಿಡಬ್ಲುಡಿ ಮುಖ್ಯ ಇಂಜಿನಿಯರಗೆ ಲೋಕಾ ಶಾಕ್…ನಿವೃತ್ತಿ ಕಾರ್ಯಕ್ರಮದ ಅಂತಿಮ ಸಿದ್ಧತೆಯಲ್ಲಿದ್ದ ಮುಖ್ಯ ಇಂಜಿನಿಯರ ಮನೆಯ ಮೇಲೆ ದಾಳಿ.. ಎಲ್ಲವು ಅಂದುಕೊಂಡಂತೆ ನಡೆದಿದ್ದರೆ ಇಂದು ಧಾರವಾಡ ಪಿಡಬ್ಲುಡಿಯ ಮುಖ್ಯ ಇಂಜಿನಿಯರ್ ಎಚ್ ಸುರೇಶರವರು ತಮ್ಮ ನಿವೃತ್ತಿ ಕಾರ್ಯಕ್ರಮದ ಸಂಭ್ರಮದಲ್ಲಿ ಬ್ಯೂಸಿಯಾಗಬೇಕಿತ್ತು. ಆದರೆ ಆ ಸಂಭ್ರಮಕ್ಕೆ ಲೋಕಾಯುಕ್ತರು ದಾಳಿ ನಡೆಸುವ ಮೂಲಕ ಶಾಕ್ ನೀಡಿ ಸಂಭ್ರಮಕ್ಕೆ ಬ್ರೇಕ್ ಹಾಕಿದ್ದಾರೆ. ಹೌದು ಧಾರವಾಡ ಲೋಕೋಪಯೋಗಿ ಇಲಾಖೆಯ ಮುಖ್ಯ ಇಂಜಿನಿಯರ್ …

Read More »

ಬೆಳಂಬೆಳಗ್ಗೆ ಭ್ರಷ್ಟ ಅಧಿಕಾರಿಗೆ ಶಾಕ್ ಕೊಟ್ಟ ಲೋಕಾಯುಕ್ತ ಅಧಿಕಾರಿಗಳು

ಬೆಳಂಬೆಳಗ್ಗೆ ಭ್ರಷ್ಟ ಅಧಿಕಾರಿಗೆ ಶಾಕ್ ಕೊಟ್ಟ ಲೋಕಾಯುಕ್ತ ಅಧಿಕಾರಿಗಳು ಬೆಳಗಾವಿಯ ‌ಮೂರು ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳಿಂದ ದಾಳಿ ಬೆಳಗಾವಿ ಲೋಕಾಯುಕ್ತ ಎಸ್ಪಿ ಹನಮಂತರಾಯ್ ನೇತೃತ್ವದಲ್ಲಿ ದಾಳಿ ದೇವರಾಜ್ ಅರಸು ಅಭಿವೃದ್ಧಿ ‌ನಿಗಮದ ವ್ಯವಸ್ಥಾಪಕ ಸಿದ್ಧಲಿಂಗಪ್ಪ ಬಾನಸಿ ಮೇಲೆ ದಾಳಿ ಬೆಳಗಾವಿಯ ವಿದ್ಯಾನಗರದಲ್ಲಿರುವ ಸಿದ್ಧಲಿಂಗಪ್ಪ ಬಾನಸಿ ಮನೆ ರಾಯಭಾಗ ತಾಲೂಕಿನ ಬೆಕ್ಕೇರಿ ಗ್ರಾಮದಲ್ಲಿರು ಮನೆ ಹಾಗೂ ಕಚೇರಿ ಮೇಲೆ ದಾಳಿ — ಧಾರವಾಡದ PWD ಮುಖ್ಯ ಇಂಜಿನಿಯರ್ ಎಚ್‌ಸಿ ಸುರೇಶ ಮನೆ …

Read More »

ಕಾರುಗಳು ‘ಆಪರೇಷನ್‌ ಸಿಂಧೂರ’ಮಯ

ಬೆಳಗಾವಿ: ದೇಶಾದ್ಯಂತ ಆಪರೇಷನ್‌ ಸಿಂಧೂರ ಕಾರ್ಯಾಚರಣೆಯ ಬಗ್ಗೆ ಇನ್ನೂ ಚರ್ಚೆ ನಡೆಯುತ್ತಿದೆ. ಹಲವೆಡೆ ತಮ್ಮ ಮಕ್ಕಳಿಗೆ ಸಿಂಧೂರ ಅಥವಾ ಸಿಂಧೂರಿ ಅಂತಾ ಹೆಸರಿಟ್ಟು ಸಂಭ್ರಮಿಸುತ್ತಿದ್ದರೆ, ಮತ್ತೊಂದಿಷ್ಟು ಕಡೆ ಭಾರತೀಯ ಸೈನಿಕರ ಪರಾಕ್ರಮ ಮೆಚ್ಚಿ ತಿರಂಗಾ ರ‍್ಯಾಲಿ ಸೇರಿ ದೇಶಾಭಿಮಾನ ಮೂಡಿಸುವ ಕಾರ್ಯಕ್ರಮಗಳು ನಡೆಯುತ್ತಿವೆ. ಬೆಳಗಾವಿಯಲ್ಲಿ ಇಬ್ಬರು ದೇಶಾಭಿಮಾನಿಗಳು ತಮ್ಮ ಕಾರುಗಳ ಮೇಲೆ ಆಪರೇಷನ್ ಸಿಂಧೂರ ಕಾರ್ಯಾಚರಣೆಯನ್ನು ಬಿಂಬಿಸುವ ಚಿತ್ರಗಳನ್ನು ಅಂಟಿಸಿ‌ದ್ದಾರೆ. ಬೆಳಗಾವಿಯ ಹೈಟೆಕ್ ಮೋಟರ್ಸ್ ಆ್ಯಂಡ್ ಆಟೋಮೊಬೈಲ್ಸ್ ಪ್ರೈವೇಟ್ ಲಿಮಿಟೆಡ್​ನ ಮ್ಯಾನೇಜಿಂಗ್ …

Read More »

ಲೋಕಾಯುಕ್ತ ಇನ್ಸ್​ಪೆಕ್ಟರ್​​ಗೆ ಲಂಚ ನೀಡಲು ಬಂದ ಕಾನೂನು ಮಾಪನ ಶಾಸ್ತ್ರ ಇಲಾಖೆಯ ಅಧಿಕಾರಿ ಅರೆಸ್ಟ್

ಮಂಗಳೂರು: ದಾಳಿ ಮಾಡದಂತೆ ಲೋಕಾಯುಕ್ತ ಇನ್ಸ್​ಪೆಕ್ಟರ್​ಗೆ ಲಂಚ ನೀಡಲು ಹೋದ ಆರೋಪದ ಮೇಲೆ ಕಾನೂನು ಮಾಪನ ಶಾಸ್ತ್ರ ಇಲಾಖೆಯ ಅಧಿಕಾರಿಯನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಇಂದು ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಲೋಕಾಯುಕ್ತ ಇನ್ಸ್​ಪೆಕ್ಟರ್ ಕರ್ತವ್ಯದಲ್ಲಿರುವಾಗ ಬೆಳಿಗ್ಗೆ 11.15 ಗಂಟೆಯ ಸುಮಾರಿಗೆ ಕೋಟೆಕಣಿ ಪ್ರಶಾಂತ್ ಆಯಿಲ್ ಇಂಡಸ್ಟ್ರೀಸ್ ಮಾಲೀಕ ಪ್ರವೀಣ್ ನಾಯ್ಕ್ ಮತ್ತು ಗಜೇಂದ್ರ, ಕಾನೂನು ಮಾಪನ ಶಾಸ್ತ್ರ ಇಲಾಖೆಯ ಸಹಾಯಕ ನಿಯಂತ್ರಕರು ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಗೆ ಬಂದಿದ್ದರು. ಪೊಲೀಸ್ …

Read More »