Breaking News

ರಾಜ್ಯ

ಇಂದಿನಿಂದ ‘ಆಫ್‌ಲೈನ್‌’ನಲ್ಲಿ ಪುನರ್‌ಮನನ ತರಗತಿ: ಬೆಂ.ವಿ.ವಿ ಕ್ರಮ

ಬೆಂಗಳೂರು: ಪದವಿ ಮತ್ತು ಸ್ನಾತಕೋತ್ತರ ಪದವಿಯ ಅಂತಿಮ ಸೆಮಿಸ್ಟರ್‌ ವಿದ್ಯಾರ್ಥಿಗಳಿಗೆ ಪಠ್ಯದ ಪುನರ್‌ಮನನಕ್ಕಾಗಿ ‘ರೆಗ್ಯುಲರ್‌ ಆಫ್‌ಲೈನ್‌’ ತರಗತಿಗಳನ್ನು ಸೆಪ್ಟೆಂಬರ್‌ 1ರಿಂದಲೇ ತೆಗೆದುಕೊಳ್ಳುವಂತೆ ಬೆಂಗಳೂರು ವಿಶ್ವವಿದ್ಯಾಲಯ ತನ್ನ ವ್ಯಾಪ್ತಿಯ ಕಾಲೇಜುಗಳಿಗೆ ನಿರ್ದೇಶಿಸಿದೆ. ಸೆ. 12ರಿಂದ ಪದವಿಯ 6ನೇ ಸೆಮಿಸ್ಟರ್‌ ಹಾಗೂ 23ರಿಂದ ಸ್ನಾತಕೋತ್ತರ ಪದವಿಯ 4ನೇ ಸೆಮಿಸ್ಟರ್‌ನ ಪರೀಕ್ಷೆಗಳನ್ನು ನಡೆಸಲು ವಿ.ವಿ. ದಿನಾಂಕ ನಿಗದಿಪಡಿಸಿದೆ. ಪರೀಕ್ಷೆಗೂ ಮುನ್ನ ವಿದ್ಯಾರ್ಥಿಗಳಲ್ಲಿ ಪಾಠಕ್ಕೆ ಸಂಬಂಧಿಸಿದಂತೆ ಪ್ರಶ್ನೆ, ಗೊಂದಲ, ಸಮಸ್ಯೆಗಳಿದ್ದರೆ ಪರಿಹರಿಸಿಕೊಳ್ಳಲು ಹಾಗೂ ಪಾಠಗಳ ಪುನರಾವರ್ತನೆಗೆ ಅವಕಾಶ …

Read More »

ಶ್ರೀ ಸಂತೋಷ. ರ. ಜಾರಕಿಹೊಳಿಯವರಿಂದ ಪ್ರತಿಕಾ ಮಿತ್ರರಿಗೆ ಖಡಕ್ ವಾರ್ನಿಂಗ್

ಗೋಕಾಕ ನಗರದ ಎಲ್ಲಾ ಪತ್ರಿಕಾ ಮಾಧ್ಯಮದ ಮಿತ್ರ ರನ್ನ ಶ್ರೀ ಸಂತೋಷ್ ಜಾರಕಿಹೊಳಿ ಅವರು ತಮ್ಮ ಸೌಭಾಗ್ಯ ಲಕ್ಷ್ಮಿ ಶುಗರ್ಸ್ ನಲ್ಲಿ ಒಂದು ಔತಣ ಕೂಟಕ್ಕೆ ಕರೆದಿದ್ದರು ಇಲ್ಲಿ ಸುಮಾರು ಜನ ಕೂಡ ಭಾಗ ವಹಿಸಿದ್ದರು, ಗೋಕಾಕ ನಗರದ ಎಲ್ಲಾ ವಾರ ಪತ್ರಿಕೆ,ದಿನ ಪತ್ರಿಕೆ ,ಹಾಗೂ ಯೂಟ್ಯೂಬ್ ಚಾನಲ್ ಗಳ ವರದಿಗಾರರು ಈ ಸಭೆಯಲ್ಲಿ ಭಾಗ ವಹಿಸಿದ್ದರು, ಸಭೆಯ ಮುಖ್ಯ ಉದ್ದೇಶ ಏನಂದ್ರೆ ಎಲ್ಲರೂ ಒಂದಾಗಿ ಇರಿ ನಿಮ್ಮ , …

Read More »

ಇತರರು ತಲೆಹಾಕುವುದು ಸರಿಯಲ್ಲ’: ಅರ್ಚಕ ನಾರಾಯಣ ಆಚಾರ್‌ ಪುತ್ರಿಯರ ವಿವಾಹ ವಿಚಾರ

ಮಡಿಕೇರಿ: ‘ತಲಕಾವೇರಿಯಲ್ಲಿ, ಗುಡ್ಡ ಕುಸಿತದಿಂದ ಮೃತಪಟ್ಟ ಕ್ಷೇತ್ರದ ಪ್ರಧಾನ ಅರ್ಚಕ ನಾರಾಯಣ ಆಚಾರ್‌ ಅವರ ಪುತ್ರಿಯರು ಅನ್ಯಧರ್ಮದ ಯುವಕರನ್ನು ಮದುವೆ ಆಗಿದ್ದಾರೆ. ಆದರೆ, ಅವರ ವೈಯಕ್ತಿಕ ವಿಚಾರದಲ್ಲಿ ಬೇರೆಯವರು ತಲೆಹಾಕುವುದು ಸರಿಯಲ್ಲ’ ಎಂದು ಕುಟುಂಬದ ಹಿರಿಯ ಸದಸ್ಯ ಜಯಪ್ರಕಾಶ್‍ ರಾವ್‌ ಸೋಮವಾರ ಇಲ್ಲಿ ಅಭಿಪ್ರಾಯಪಟ್ಟರು. ‘ಅನ್ಯಧರ್ಮದ ಯುವಕರನ್ನು ಮದುವೆ ಆಗಿದ್ದರೂ, ಹಿಂದೂ ಧರ್ಮದ ಆಚಾರ- ವಿಚಾರ ಪಾಲಿಸುತ್ತಾ ಬಂದಿದ್ದಾರೆ. ಮದುವೆಯಾದ ಹೆಣ್ಣುಮಕ್ಕಳು, ಮದುವೆಯಾದ ಕುಟುಂಬಕ್ಕೆ ಸೇರುತ್ತಾರೆ. ಆ ಕುಟುಂಬದ ಹೆಸರನ್ನೂ ಹೊಂದುತ್ತಾರೆ. …

Read More »

ಅಕ್ಟೋಬರ್​ನಲ್ಲಿ ಗ್ರಾಪಂ ಚುನಾವಣೆ? ಮೀಸಲಾತಿ ಪಟ್ಟಿ ಸಿದ್ಧ; ಕರೊನಾ ಕಾಲದ ನಿಯಮ ಪಾಲನೆಗೂ ಬದ್ಧ

ಬೆಂಗಳೂರು: ಕರೊನಾ ಕಾರಣಕ್ಕೆ ಮುಂದೂಡಲ್ಪಟ್ಟಿದ್ದ ಗ್ರಾಮ ಪಂಚಾಯಿತಿ ಚುನಾವಣೆಗೆ ಕೊನೆಗೂ ಕಾಲ ಕೂಡಿ ಬಂದಿದೆ. ರಾಜ್ಯ ಚುನಾವಣಾ ಆಯೋಗ ಅಕ್ಟೋಬರ್ ಮೊದಲ ಇಲ್ಲವೇ ಎರಡನೇ ವಾರದಲ್ಲಿ ಚುನಾವಣೆ ನಡೆಸುವ ಸಾಧ್ಯತೆಗಳಿವೆ. ರಾಜ್ಯದ 6025 ಗ್ರಾಪಂಗಳ ಪೈಕಿ ಶೇ.90ರ ಅವಧಿ ಜೂನ್-ಜುಲೈನಲ್ಲಿ ಅಂತ್ಯಗೊಂಡಿತ್ತು. ಕರೊನಾ ಉಲ್ಬಣ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಸಂವಿಧಾನದತ್ತ ಅಧಿಕಾರ ಬಳಸಿ ‘ಅಸಾಧಾರಣ ಸಂದರ್ಭ’ವೆಂದು ಪರಿಗಣಿಸಿ ಚುನಾವಣೆ ಮುಂದೂಡಿತ್ತು. ರಾಜ್ಯ ಸರ್ಕಾರ ಕೂಡ ಚುನಾವಣೆ ಮುಂದೂಡುವಂತೆ ಆಯೋಗಕ್ಕೆ ಮನವಿ ಮಾಡಿತ್ತು. …

Read More »

ಕೊರೋನಾಗೆ ಬಲಿಯಾದರೆ 30 ಲಕ್ಷ ರು. ವಿಮೆ

ಬೆಂಗಳೂರು  : ಕೊರೋನಾ ಸೋಂಕು ನಿಯಂತ್ರಣ ಸಂಬಂಧ ಕರ್ತವ್ಯದಲ್ಲಿ ತೊಡಗಿದ ರಾಜ್ಯದ ಗ್ರಾಮ ಪಂಚಾಯಿತಿ ನೌಕರರು ಸೋಂಕಿನಿಂದ ಸಾವನ್ನಪ್ಪಿದರೆ 30 ಲಕ್ಷ ರು. ವಿಮಾ ಪರಿಹಾರ ನೀಡಲಿದೆ ಮತ್ತು ಸೋಂಕಿಗೊಳಗಾದರೆ ಸಂಪೂರ್ಣ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿದೆ ಎಂದು ಗ್ರಾಮೀಣಾಭಿವೃದ್ಧಿ ಇಲಾಖೆ ತಿಳಿಸಿದೆ. ಗ್ರಾಮಪಂಚಾಯತ್‌ ಬಿಲ್‌ ಕಲೆಕ್ಟರ್‌, ಕ್ಲರ್ಕ್, ಕ್ಲರ್ಕ್ ಕಮ್‌ ಡಾಟಾ ಎಂಟ್ರಿ ಆಪರೇಟರ್‌, ವಾಟರ್‌ಮೆನ್‌, ಜವಾನ ಮತ್ತು ಸ್ವಚ್ಛತಾಗಾರರು ಕೋವಿಡ್‌-19 ನಿಯಂತ್ರಣದಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಸಾರ್ವಜನಿಕರಲ್ಲಿ ರೋಗದ ಬಗ್ಗೆ ಅರಿವು …

Read More »

KPCC ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕೊರೊನಾದಿಂದ ಗುಣಮುಖ : ಆಸ್ಪತ್ರೆಯಿಂದ ಡಿಸ್ಚಾರ್ಜ್

ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಕೊರೋನಾ ಸೋಂಕಿನಿಂದಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಇಂತಹ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಕೊರೋನಾ ಸೋಂಕಿನಿಂದ ಸಂಪೂರ್ಣವಾಗಿ ಗುಣಮುಖರಾಗಿದ್ದು, ಇದೀಗ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕಳೆದ ಆಗಸ್ಟ್ 25ರಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿತ್ತು. ಹೀಗಾಗಿ ನಗರದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದರು. ಇಂತಹ ಕೆಪಿಸಿಸಿ ಅಧ್ಯಕ್ಷ ಡಿಕೆ …

Read More »

ಸ್ಥಳೀಯ ಉದ್ಯಮಿಗಳೇ ಹೂಡಿಕೆಗೆ ಮುಂದಾಗಿ: ಸಚಿವ ಶೆಟ್ಟರ

ಕಲಬುರ್ಗಿ: ‘ಕಲ್ಯಾಣ ಕರ್ನಾಟಕ ಭಾಗದಲ್ಲಿ ಉದ್ಯಮ ವಲಯ ಅಭಿವೃದ್ಧಿಗಾಗಿ ಹೂಡಿಕೆದಾರರನ್ನು ಆಕರ್ಷಿಸಬೇಕು ಎಂಬ ಬೇಡಿಕೆ ಬಹುದಿನಗಳಿಂದ ಇದೆ. ಆದರೆ, ಹೊರಗಿನವರು ಬಂದು ಹೂಡಿಕೆ ಮಾಡಲಿ ಎಂದು ಕಾಯುವುದಕ್ಕಿಂತ ಸ್ಥಳೀಯರೇ ಮುಂದೆ ಬಂದರೆ ಹೆಚ್ಚು ಪ್ರಯೋಜನವಾಗಲಿದೆ. ಯಾವುದೇ ಪ್ರದೇಶದ ಅಭಿವೃದ್ಧಿಗೆ ಸ್ಥಳೀಯ ಹೂಡಿಕೆಯ ಪಾತ್ರ ದೊಡ್ಡದು’ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಜಗದೀಶ ಶೆಟ್ಟರ ಸಲಹೆ ನೀಡಿದರು. ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ …

Read More »

ಸಚಿವೆ ಶಶಿಕಲಾ ಜೊಲ್ಲೆಗೆ ಕೊರೊನಾ ಸೋಂಕು ದೃಢ

ಬೆಳಗಾವಿ : ರಾಜ್ಯದಲ್ಲಿ ಕೊರೊನಾ ವೈರಸ್ ಅಟ್ಟಹಾಸ ಮುಂದುವರೆದಿದ್ದು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಕುರಿತು ಟ್ವೀಟರ್ ನಲ್ಲಿ ಮಾಹಿತಿ ನೀಡಿರುವ ಸಚಿವೆ ಶಶಿಕಲಾ ಜೊಲ್ಲೆ, ನನಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದ್ದು, ವೈದ್ಯರ ಸಲಹೆ ಮೇರೆಗೆ 14 ದಿನ ಮನೆಯಲ್ಲಿಯೇ ಕ್ವಾರೆಂಟೇನ್ ಆಗಲಿದ್ದೇನೆ. ನನ್ನ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕದಲ್ಲಿದ್ದವರು. ಕೋವಿಡ್ ಪರೀಕ್ಷೆ ಮಾಡಿಸಿಕೊಂಡು ಕ್ವಾರಂಟೇನ್ ಆಗಬೇಕಾಗಿ ವಿನಂತಿ. ಸದ್ಯಕ್ಕೆ …

Read More »

ಮೀನು ಲೋಡ್ ಮಾಡಲು ಬಂದರಿಗೆ ಬಂದ ಗೂಡ್ಸ್ ಟೆಂಪೋ ನೀರಿನೊಳಗೆ

ಉಡುಪಿ: ಮೀನು ಲೋಡ್ ಮಾಡಲು ಬಂದರಿಗೆ ಬಂದ ಗೂಡ್ಸ್ ಟೆಂಪೋ ನೀರಿನೊಳಗೆ ಬಿದ್ದ ಘಟನೆ ಉಡುಪಿಯ ಮಲ್ಪೆಯಲ್ಲಿ ನಡೆದಿದೆ. ಅರಬ್ಬಿ ಸಮುದ್ರದಲ್ಲಿ ಹಿಡಿದ ಮೀನನ್ನು ಮಲ್ಪೆ ಬಂದರಿನಲ್ಲಿ ಖಾಲಿ ಮಾಡಲಾಗುತ್ತದೆ. ಬೋಟ್‍ಗಳು ಲಂಗರು ಹಾಕುವ ಪಕ್ಕದಲ್ಲೇ ಗೂಡ್ಸ್ ಟೆಂಪೋ ತಂದು ನಿಲ್ಲಿಸಿ ಮೀನು ಖಾಲಿ ಮಾಡಲಾಗುತ್ತದೆ. ಎಂದಿನಂತೆ ಈ ಪ್ರಕ್ರಿಯೆ ನಡೆಯುತ್ತಿದ್ದಾಗ ನೀರಿನಲ್ಲಿ ಇದ್ದ ಬೋಟು ನಿಧಾನಕ್ಕೆ ಹಿಂದಕ್ಕೆ ಬಂದಿದೆ. ಮೀನು ಖಾಲಿ ಮಾಡುವ ಸಂದರ್ಭ ಗೂಡ್ಸ್ ಟೆಂಪೋವನ್ನು ಬೋಟಿಗೆ …

Read More »

ಇಂದಿನಿಂದ ಅನ್‍ಲಾಕ್ 4.0 ಜಾರಿ – ವ್ಯಾಪಾರಕ್ಕೆ ಮುಕ್ತವಾಯ್ತು ಕೆ.ಆರ್ ಮಾರ್ಕೆಟ್

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿರುವ ಕೆ.ಆರ್ ಮಾರ್ಕೆಟ್ ನಲ್ಲಿ ವ್ಯಾಪಾರ ಮತ್ತೆ ಆರಂಭವಾಗಿದೆ. ಮಹಾಮಾರಿ ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಕೆ.ಆರ್ ಮಾರ್ಕೆಟ್ ನಲ್ಲಿ ವ್ಯಾಪಾರ- ವ್ಯವಹಾರ ಕಳೆದ ಐದು ತಿಂಗಳಿನಿಂದ ಸ್ಥಗಿತಗೊಂಡಿತ್ತು. ಮಾರ್ಕೆಟ್ ನ ಮಳಿಗೆಗಳಲ್ಲಿ ಮಾತ್ರ ವ್ಯಾಪಾರಕ್ಕೆ ಅವಕಾಶ ನೀಡಿಲಾಗಿತ್ತು. ಬೀದಿ ಬದಿಯ ವ್ಯಾಪಾರಕ್ಕೆ ಅವಕಾಶವಿರಲಿಲ್ಲ. ಇದೀಗ ಇಂದಿನಿಂದ ಅನ್‍ಲಾಕ್ 4.0 ಜಾರಿಯಾಗುತ್ತಿದ್ದು, ಕೆ.ಆರ್ ಮಾರ್ಕೆಟ್ ಬೀದಿ ಬದಿಯ ವ್ಯಾಪರ ಬಲು ಜೋರಾಗಿದೆ. ಮಾರ್ಕೆಟ್ ಹೊರಗಡೆ ಸಾಮಾಜಿಕ ಅಂತರ ಮರೆತು …

Read More »